ಉರುಸು ಮೆರವಣಿಗೆ ವೇಳೆ ಹಿಂದೂ ಯುವತಿ ಬುರುಕಾ ಧರಿಸಿದ ವಿಚಾರಕ್ಕೆ ಹಿಂದೂ ಯುವಕರ ಮೇಲೆ ಮುಸ್ಲಿಂ ಹುಡುಗರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಬು ಸುಲ್ತಾನ್, ನೂರ್ ಅಹ್ಮದ್, ಮೊಹಮದ್ ನೈದ್, ಅಭಿದ್ ಅಹಮದ್ ಸೇರಿದಂತೆ 10 ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಟ್ಟಣದ ದರ್ಗಾದ ಮೈದಾನದಲ್ಲಿ ನಡೆಯುತ್ತಿರುವ ಉರುಸ್ನಲ್ಲಿ ಸುತ್ತಾಡಿಕೊಂಡು ಬರಲೆಂದು ಪಟ್ಟಣದ ದಿರೀಡ್ ನಗರದ ಹಿಂದೂ ಸಮುದಾಯದ ಮೂವರು ಹುಡುಗರು, ಒಬ್ಬ ಹುಡುಗಿ ಮತ್ತು ಮುಸ್ಲಿಂ ಸಮುದಾಯದ ಇಬ್ಬರು ಹುಡುಗ, ಹುಡುಗಿ ಒಟ್ಟಾಗಿ ಬಂದಿದ್ದರು. ಈ ವೇಳೆ 20 ಮುಸ್ಲಿಂ ಹುಡುಗರು ಏಕಾಏಕಿ ಬಂದು ಹಿಂದೂ ಹುಡುಗಿ ಹಾಕಿಕೊಂಡಿದ್ದ ಬುರುಕಾ ತೆಗೆಸಿ ನೀನು ಯಾವ ಜಾತಿ? ನಿನ್ನ ಆಧಾರ್ ಕಾರ್ಡ್ ತೋರಿಸು? ಎಂದು ಗಲಾಟೆ ಮಾಡಿದ್ದಾರೆ. ಆಗ ಜತೆಗಿದ್ದ ಹಿಂದೂ ಹುಡುಗರ ಮೇಲೆಯೂ ಈ ಪುಂಡರು ಹಲ್ಲೆ ಮಾಡಿದ್ದರಿಂದ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದರು.
ಹಿಂದೂ ಜಾರಗಣೆ ವೇದಿಕೆಯ ಮುಖಂಡರು, ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿತ್ತು. ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಕೆಜಿಎಫ್ ಎಸ್ಪಿ ಪರಿಸ್ಥಿತಿ ತಿಳಿಗೊಳಿಸಿದರು.
09:30 AM (IST) Jan 22
ಇನ್ನು ಮುಂದೆ ನಗರದಲ್ಲಿ ಬೇಕಾಬಿಟ್ಟಿ ಬೈಕ್, ಕಾರು ಪಾರ್ಕಿಂಗ್ ಮಾಡಲು ಅವಕಾಶವಿರಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲ ನಗರ ಪಾಲಿಕೆಗಳು ತಮ್ಮ ವ್ಯಾಪ್ತಿಯಲ್ಲಿ ಎರಡು ರೀತಿಯ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಿ ಪೇ ಆ್ಯಂಡ್ ಪಾರ್ಕ್ ಜೊತೆಗೆ ಟೋಯಿಂಗ್ಗೂ ಮುಂದಾಗಿದ್ದು, ಶೀಘ್ರ ಜಾರಿಗೆ ಬರಲಿದೆ.
09:21 AM (IST) Jan 22
ಕಲಬುರಗಿಯಲ್ಲಿ ರೀಲ್ಸ್ ಮಾಡುವಾಗ ಯುವ ರೈತ ಟ್ರ್ಯಾಕ್ಟರ್ಗೆ ಸಿಲುಕಿ ಮೃತಪಟ್ಟರೆ, ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.
09:02 AM (IST) Jan 22
ನಾಪತ್ತೆಯಾಗಿದ್ದ ವಿನೋದ್ ಎಂಬ ಯುವಕನ ಶವ ಬಾವಿಯಲ್ಲಿ ಪತ್ತೆಯಾಗಿದೆ. ಹೊಸ ವರ್ಷದ ಪಾರ್ಟಿ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದ ವಿನೋದ್ನನ್ನು, ಆಸ್ಪತ್ರೆಗೆ ಸೇರಿಸುವ ಭಯದಿಂದ ಆತನ ಸ್ನೇಹಿತರಾದ ಸುದೀಪ್ ಮತ್ತು ಪ್ರಜ್ವಲ್ ಕಲ್ಲಿಗೆ ಕಟ್ಟಿ ಬಾವಿಗೆ ಎಸೆದು ಕೊ*ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
08:56 AM (IST) Jan 22
ಉಡುಪಿ ಪರ್ಯಾಯ ಉತ್ಸವದ ವೇಳೆ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ಕೇಸರಿ ಧ್ವಜ ಹಿಡಿದಿದ್ದಾರೆ ಎಂದು ಉಡುಪಿ ಕಾಂಗ್ರೆಸ್ ಘಟಕವು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ತಮ್ಮ ಭಾಗವಹಿಸುವಿಕೆ ಅಧಿಕೃತವಾಗಿದ್ದು, ರಾಜಕೀಯ ಪ್ರೇರಿತವಲ್ಲ ಎಂದಿದ್ದಾರೆ.
08:43 AM (IST) Jan 22
KSRTC bus fare hike Mangaluru: ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳೆಯಲ್ಲಿ ಅಧಿಕೃತ ಟೋಲ್ ವಸೂಲಿ ಆರಂಭವಾಗುವ ಮುನ್ನವೇ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.
08:25 AM (IST) Jan 22
08:12 AM (IST) Jan 22
07:38 AM (IST) Jan 22
ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಇಲಾಖೆಯ ಉತ್ಖನನದಲ್ಲಿ ಪ್ರಾಚೀನ ಎಲುಬಿನ ಚೂರುಗಳು ಮತ್ತು ಮಣ್ಣಿನ ಬಿಲ್ಲೆ ಪತ್ತೆಯಾಗಿವೆ. ಈ ಐತಿಹಾಸಿಕ ಸ್ಥಳವು ಶೈಕ್ಷಣಿಕ ಅಧ್ಯಯನ ಕೇಂದ್ರವಾಗಿ ಮಾರ್ಪಟ್ಟಿದ್ದು, ನಿಧಿ ಕುರಿತ ಮೂಢನಂಬಿಕೆಗಳು ಮತ್ತು ಸ್ಥಳೀಯರ ಹಕ್ಕುಗಳ ಬಗ್ಗೆ ಸಾಮಾಜಿಕ ಚರ್ಚೆಗೂ ಕಾರಣವಾಗಿದೆ.
07:25 AM (IST) Jan 22
ರಕ್ಷಣೆ ಮತ್ತು ಸಂಪನ್ಮೂಲದ ವಿಷಯದಲ್ಲಿ ಅತ್ಯಂತ ಮಹತ್ವವಿರುವ ಗ್ರೀನ್ಲ್ಯಾಂಡ್ ದ್ವೀಪ ವಶದ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಲೇ ಇರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಣ್ಣು ಇದೀಗ ಹಿಂದೂ ಮಹಾಸಾಗರದಲ್ಲಿ ಪುಟ್ಟ ದ್ವೀಪದ ಡಿಯಾಗೋ ಗಾರ್ಸಿಯೋದ ಮೇಲೆ ಬಿದ್ದಿದೆ.
07:25 AM (IST) Jan 22
ಅಲ್ಪಸಂಖ್ಯಾತ ಹೆಣ್ಣುಮಕ್ಕಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಸಚಿವ ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಡಿಜಿಟಲ್ ಕ್ಲಾಸ್ ರೂಮ್ ಸೌಲಭ್ಯ ಹಾಗೂ 100 ಹೊಸ ಶಾಲೆಗಳ ಸ್ಥಾಪನೆಯನ್ನು ಘೋಷಿಸಿದರು.
07:18 AM (IST) Jan 22
ಗ್ರೀನ್ಲ್ಯಾಂಡ್ ವಶ ಕುರಿತು ದಾವೋಸ್ ಶೃಂಗದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಪುನರುಚ್ಚಾರ ಮಾಡಿದ ಬೆನ್ನಲ್ಲೇ, ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಮಾತುಕತೆ ಸ್ಥಗಿತಗೊಳಿಸಲು ಯುರೋಪಿಯನ್ ಸಂಸತ್ ನಿರ್ಧರಿಸಿದೆ.
07:11 AM (IST) Jan 22
ಲಿಂಕ್ಡ್ಇನ್ನ ‘ಜಾಬ್ಸ್ ಆನ್ ದಿ ರೈಸ್ 2026’ ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಎಐ ಇಂಜಿನಿಯರ್ ಹುದ್ದೆಯು ಅತಿ ವೇಗವಾಗಿ ಬೆಳೆಯುತ್ತಿರುವ ಉದ್ಯೋಗವಾಗಿದೆ. ತಂತ್ರಜ್ಞಾನದ ಬದಲಾವಣೆಗೆ ಬೇಕಾದ ಕೌಶಲ್ಯಗಳ ಕೊರತೆ ಮತ್ತು ಹೆಚ್ಚುತ್ತಿರುವ ಪೈಪೋಟಿಯ ಬಗ್ಗೆ ಅನೇಕ ವೃತ್ತಿಪರರು ಆತಂಕ ವ್ಯಕ್ತಪಡಿಸಿದ್ದಾರೆ.