LIVE NOW
Published : Jan 22, 2026, 06:45 AM ISTUpdated : Jan 23, 2026, 12:13 AM IST

Karnataka News Live: ಲಷ್ಕರೆ-ಎ-ತಯ್ಯಬಾ ಸೇರಲು ಸಂಚು; ಶಿರಸಿ ಮೂಲದ ಉಗ್ರನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ; ಎನ್‌ಐಎ ಮಹತ್ವದ ತೀರ್ಪು

ಸಾರಾಂಶ

ಉರುಸು ಮೆರವಣಿಗೆ ವೇಳೆ ಹಿಂದೂ ಯುವತಿ ಬುರುಕಾ ಧರಿಸಿದ ವಿಚಾರಕ್ಕೆ ಹಿಂದೂ ಯುವಕರ ಮೇಲೆ ಮುಸ್ಲಿಂ ಹುಡುಗರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಬು ಸುಲ್ತಾನ್, ನೂರ್ ಅಹ್ಮದ್, ಮೊಹಮದ್ ನೈದ್, ಅಭಿದ್ ಅಹಮದ್ ಸೇರಿದಂತೆ 10 ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪಟ್ಟಣದ ದರ್ಗಾದ ಮೈದಾನದಲ್ಲಿ ನಡೆಯುತ್ತಿರುವ ಉರುಸ್‌ನಲ್ಲಿ ಸುತ್ತಾಡಿಕೊಂಡು ಬರಲೆಂದು ಪಟ್ಟಣದ ದಿರೀಡ್‌ ನಗರದ ಹಿಂದೂ ಸಮುದಾಯದ ಮೂವರು ಹುಡುಗರು, ಒಬ್ಬ ಹುಡುಗಿ ಮತ್ತು ಮುಸ್ಲಿಂ ಸಮುದಾಯದ ಇಬ್ಬರು ಹುಡುಗ, ಹುಡುಗಿ ಒಟ್ಟಾಗಿ ಬಂದಿದ್ದರು. ಈ ವೇಳೆ 20 ಮುಸ್ಲಿಂ ಹುಡುಗರು ಏಕಾಏಕಿ ಬಂದು ಹಿಂದೂ ಹುಡುಗಿ ಹಾಕಿಕೊಂಡಿದ್ದ ಬುರುಕಾ ತೆಗೆಸಿ ನೀನು ಯಾವ ಜಾತಿ? ನಿನ್ನ ಆಧಾರ್ ಕಾರ್ಡ್ ತೋರಿಸು? ಎಂದು ಗಲಾಟೆ ಮಾಡಿದ್ದಾರೆ. ಆಗ ಜತೆಗಿದ್ದ ಹಿಂದೂ ಹುಡುಗರ ಮೇಲೆಯೂ ಈ ಪುಂಡರು ಹಲ್ಲೆ ಮಾಡಿದ್ದರಿಂದ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದರು. 

ಹಿಂದೂ ಜಾರಗಣೆ ವೇದಿಕೆಯ ಮುಖಂಡರು, ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿತ್ತು. ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಕೆಜಿಎಫ್ ಎಸ್‌ಪಿ ಪರಿಸ್ಥಿತಿ ತಿಳಿಗೊಳಿಸಿದರು.

12:13 AM (IST) Jan 23

ಲಷ್ಕರೆ-ಎ-ತಯ್ಯಬಾ ಸೇರಲು ಸಂಚು; ಶಿರಸಿ ಮೂಲದ ಉಗ್ರನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ; ಎನ್‌ಐಎ ಮಹತ್ವದ ತೀರ್ಪು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಸಯ್ಯದ್ ಮಹಮ್ಮದ್ ಇದ್ರಿಸ್ ಎಂಬ ಯುವಕನಿಗೆ ಲಷ್ಕರೆ-ಎ-ತಯ್ಯಬಾ ಉಗ್ರ ಸಂಘಟನೆಗೆ ಯುವಕರನ್ನು ನೇಮಿಸುತ್ತಿದ್ದ ಆರೋಪದ ಮೇಲೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪಶ್ಚಿಮ ಬಂಗಾಳದಲ್ಲಿ ದಾಖಲಾಗಿದ್ದ ಈ ಪ್ರಕರಣದ ತನಿಖೆ ನಡೆಸಿದ ಎನ್‌ಐಎ.

Read Full Story

11:34 PM (IST) Jan 22

KRS ಪಕ್ಷದ ಕಾರ್ಯಕರ್ತರಿಗೆ ಡಿಜಿ-ಐಜಿಪಿ ಶಾಕ್; ರಾಜ್ಯಾದ್ಯಂತ ಕೇಸ್ ದಾಖಲಿಸಲು ಆದೇಶ!

ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪದ ಮೇಲೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಚನ್ನಪಟ್ಟಣದ ಘಟನೆಯ ನಂತರ, ರಾಜ್ಯಾದ್ಯಂತ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ 

Read Full Story

10:55 PM (IST) Jan 22

ಕೊಪ್ಪಳದ ಜಮೀನಿನಲ್ಲಿ ಅಚ್ಚರಿ ಘಟನೆ - ಹುತ್ತದೊಳಗೆ ಅಲಾಯಿ ದೇವರು ಪತ್ತೆ!

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಾದಿಮನಾಳ ಗ್ರಾಮದ ಜಮೀನೊಂದರಲ್ಲಿ ಹುತ್ತವನ್ನು ಅಗೆದಾಗ, ಮೊಹರಂ ಹಬ್ಬದ ಸಂದರ್ಭದಲ್ಲಿ ಬಳಸುವ ಪವಿತ್ರ ಅಲಾಯಿ ದೇವರುಗಳು ಪತ್ತೆಯಾಗಿವೆ. ಆರಂಭದಲ್ಲಿ ಇದನ್ನು ಮೂಢನಂಬಿಕೆ ಎಂದು ನಿರ್ಲಕ್ಷಿಸಿದ್ದ ಗ್ರಾಮಸ್ಥರು, ಈ ಪವಾಡವನ್ನು ಕಣ್ಣಾರೆ ಕಂಡು ಇದೀಗ ಅಚ್ಚರಿಗೊಂಡಿದ್ದಾರೆ

Read Full Story

10:23 PM (IST) Jan 22

ಐಷಾರಾಮಿ ಕಾರಿನ ಎರಡು ಡೋರ್ ಓಪನ್ ಮಾಡಿ ಸ್ಟಂಟ್; ಇನ್‌ಸ್ಟಾ ವಿಡಿಯೋ ನೋಡಿ ಕೇಸ್ ಜಡಿದ ಕಬ್ಬನ್ ಪಾರ್ಕ್ ಪೊಲೀಸರು!

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಐಷಾರಾಮಿ ಕಾರಿನ ಎರಡೂ ಬಾಗಿಲುಗಳನ್ನು ತೆರೆದು ಅಪಾಯಕಾರಿ ಸ್ಟಂಟ್ ಮಾಡಿದ ಚಾಲಕನ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು, ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿ ದಂಡ ವಿಧಿಸಿ, ಎಚ್ಚರಿಕೆ ನೀಡಿದ್ದಾರೆ.
Read Full Story

10:00 PM (IST) Jan 22

ಇದು ಸಂವಿಧಾನಕ್ಕೆ ಮಾಡಿದ ಅಪಚಾರ - ರಾಜ್ಯಪಾಲರ ನಡೆಗೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ!

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣವನ್ನು ಮೊಟಕುಗೊಳಿಸಿದ ಘಟನೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದು ಸಾಂವಿಧಾನಿಕ ಕರ್ತವ್ಯ ಲೋಪ ಮತ್ತು ರಾಷ್ಟ್ರಗೀತೆಗೆ ಮಾಡಿದ ಅವಮಾನ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. 

Read Full Story

09:02 PM (IST) Jan 22

ಮುಡಾ ಹಗರಣದಲ್ಲಿ ಮರಿಗೌಡಗೆ ಬಿಗ್ ಶಾಕ್; ಕೋಟ್ಯಂತರ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು!

ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮುಡಾ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅವರಿಗೆ ಸೇರಿದ ₹20.85 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. 

Read Full Story

08:28 PM (IST) Jan 22

88ರ ಇಳಿವಯಸ್ಸಲ್ಲಿ ಒಬ್ಬನೇ ಮಗ ಮುರಳಿ ಕೃಷ್ಣನನ್ನು ಕಳೆದುಕೊಂಡ ಗಾನಕೋಗಿಲೆ ಎಸ್‌.ಜಾನಕಿ!

ಪ್ರಖ್ಯಾತ ಹಿರಿಯ ಗಾಯಕಿ ಎಸ್. ಜಾನಕಿ ಅವರ ಏಕೈಕ ಪುತ್ರ ಮುರಳಿ ಕೃಷ್ಣ ಅವರು 65ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಾಯಿಯಂತೆಯೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಮುರಳಿ ಕೃಷ್ಣ ಅವರ ಹಠಾತ್ ನಿಧನವು ಚಿತ್ರರಂಗ ಮತ್ತು ಅವರ ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.
Read Full Story

08:07 PM (IST) Jan 22

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಎಫೆಕ್ಟ್ - ಭೂಮಿಗೂ ಬಂತು ಬಂಗಾರದ ಬೆಲೆ, ರಿಯಲ್ ಎಸ್ಟೇಟ್‌ನಲ್ಲೂ ಹೊಸ ಇತಿಹಾಸ!

ಗದಗ ಜಿಲ್ಲೆ ಲಕ್ಕುಂಡಿಯಲ್ಲಿ ಬಂಗಾರದ ನಿಧಿ ಸಿಕ್ಕ ನಂತರ ನಡೆಯುತ್ತಿರುವ ಪುರಾತತ್ವ ಉತ್ಖನನದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲದ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಇದರಿಂದ ಭೂಮಿಯ ಬೆಲೆ ದುಪ್ಪಟ್ಟಾಗಿದೆ. ಸ್ಥಳೀಯ ನಿವಾಸಿಗಳು, ರೈತರು ಪುನರ್ವಸತಿ ಹಾಗೂ ಕೃಷಿ ಭೂಮಿ ನಷ್ಟದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Read Full Story

08:03 PM (IST) Jan 22

ಹುಡುಗಿಯ ಮುಖದ ಬದ್ಲು ಚಪ್ಪಲಿ ನೋಡಿ ಮದ್ವೆಗೆ ಒಪ್ಕೊಂಡೆ - ಲೇಖಕ ಗಣೇಶ್ ಕಾಸರಗೋಡು ಕುತೂಹಲದ ಸ್ಟೋರಿ

ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ತಮ್ಮ ಮದುವೆಯ ರೋಚಕ ಕಥೆಯನ್ನು ಹಂಚಿಕೊಂಡಿದ್ದಾರೆ. ಹುಡುಗಿ ನೋಡುವ ಶಾಸ್ತ್ರದ ವೇಳೆ, ಆಕೆಯ ಮುಖದ ಬದಲು ಪಾದಕ್ಕಿಂತ ಉದ್ದವಿದ್ದ ಹವಾಯಿ ಚಪ್ಪಲಿಯನ್ನು ನೋಡಿ ಮದುವೆಗೆ ಒಪ್ಪಿಕೊಂಡಿದ್ದರಂತೆ. ಇದರ ರೋಚಕ ಸ್ಟೋರಿ ಹೇಳಿದ್ದಾರೆ.

Read Full Story

07:59 PM (IST) Jan 22

ಹುಲಿ ಸತ್ತರೆ ಓಡಿ ಬರ್ತೀರಿ, ರೈತ ಸತ್ತರೆ ಬೆಲೆ ಇಲ್ವಾ? ಕೋಟಿ ಪರಿಹಾರ ಕೊಡ್ತೀವಿ.. ನಿಮ್ಮವ್ರು ಸಾಯ್ತಾರಾ ಕೇಳಿ, ಸಚಿವರಿಗೆ ಬೆವರಿಳಿಸಿದ ರೈತರು!

ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ, ಅರಣ್ಯ ಇಲಾಖೆಯ ದ್ವಂದ್ವ ನೀತಿಯನ್ನು ಪ್ರಶ್ನಿಸಿದ ರೈತರು ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ವನ್ಯಜೀವಿ ದಾಳಿಯಿಂದ ರೈತರು ಸತ್ತರೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ.

Read Full Story

07:37 PM (IST) Jan 22

ಪ್ರಯಾಣಿಕರ ಬೇಡಿಕೆಯ ಮೇರೆಗೆ 3 ಪ್ರಮುಖ ರೈಲುಗಳಿಗೆ ನಿಲುಗಡೆ ಘೋಷಣೆ; ಮಂಗಳೂರು, ಹುಬ್ಬಳ್ಳಿ, ಬೆಂಗಳೂರಿಗರಿಗೆ ಅನುಕೂಲ!

ರೈಲ್ವೆ ಇಲಾಖೆಯು ಕರ್ನಾಟಕದ ಮೂರು ಪ್ರಮುಖ ರೈಲುಗಳಿಗೆ ಹೊಸ ನಿಲುಗಡೆಗಳನ್ನು ಘೋಷಿಸಿದೆ. ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್‌ಗೆ ಗೋಕಾಕ್ ರೋಡ್, ಮಂಗಳೂರು-ಸುಬ್ರಮಣ್ಯ ಪ್ಯಾಸೆಂಜರ್‌ಗೆ ನೇರಳಕಟ್ಟೆ, ಮತ್ತು ಲೋಕಮಾನ್ಯ ತಿಲಕ್-ಕೊಯಮತ್ತೂರು ಎಕ್ಸ್‌ಪ್ರೆಸ್‌ಗೆ ಯಲಹಂಕದಲ್ಲಿ ಹೊಸ ನಿಲುಗಡೆ ಕಲ್ಪಿಸಲಾಗಿದೆ. 

Read Full Story

07:30 PM (IST) Jan 22

ಭದ್ರಾವತಿಯಲ್ಲಿ ಅಪ್ಪು, ಅಣ್ಣಾವ್ರಿಗೆ ದೇಗುಲ ನಿರ್ಮಿಸಿದ ಅಭಿಮಾನಿಗಳು; ಅಶ್ವಿನಿ ಪುನೀತ್ ರಾಜ್‌ ಕುಮಾರ್ ಲೋಕಾರ್ಪಣೆ!

ಭದ್ರಾವತಿಯಲ್ಲಿ ಅಭಿಮಾನಿಗಳು ನಿರ್ಮಿಸಿದ ಡಾ. ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಗಳಿರುವ ದೇಗುಲವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿದರು. ಈ ದೇಗುಲದಲ್ಲಿ, ಇಬ್ಬರು ನಟರಿಗೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಅಭಿಮಾನಿಗಳು ಸಂಕಲ್ಪ ಮಾಡಿದ್ದಾರೆ.

Read Full Story

07:11 PM (IST) Jan 22

ಭಾರತೀಯ ರೈಲ್ವೆ ಇಲಾಖೆಯ ಭರ್ಜರಿ ಉದ್ಯೋಗ, ಬರೋಬ್ಬರಿ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಭಾರತೀಯ ರೈಲ್ವೆ ಇಲಾಖೆಯು ದೇಶಾದ್ಯಂತ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಥವಾ BE/B.Tech ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದೆ.

Read Full Story

06:52 PM (IST) Jan 22

ದಾಂಡೇಲಿ - ಬೈಕ್‌ನಲ್ಲಿ ಕಾಡುಪ್ರಾಣಿಯ ಮಾಂಸ ಸಾಗಾಟ; ಆರೋಪಿಯ ಬಂಧನ

ದಾಂಡೇಲಿಯಲ್ಲಿ ಕಾಡುಪ್ರಾಣಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬರ್ಚಿ ರಸ್ತೆಯಲ್ಲಿ ತಪಾಸಣೆ ವೇಳೆ ಆರೋಪಿ ರಾಜು ಮಂಜು ಪೋತದಾರ ಸಿಕ್ಕಿಬಿದ್ದಿದ್ದು,  ಮಾಂಸ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Read Full Story

06:40 PM (IST) Jan 22

Karna Serialನಲ್ಲಿ ಇಬ್ರನ್ನು ನಿಭಾಯಿಸ್ತಿರೋ ನಟನ ರಿಯಲ್​ ಲೈಫ್​ ಚೆಲುವೆ ಯಾರು? ಮದ್ವೆ ಯಾವಾಗ?

'ಕರ್ಣ' ಸೀರಿಯಲ್ ಮೂಲಕ ಜನಪ್ರಿಯರಾಗಿರುವ ನಟ ಕಿರಣ್ ರಾಜ್ ಅವರ ನಿಜ ಜೀವನದ ಬಗ್ಗೆ ಈ ಲೇಖನ ಬೆಳಕು ಚೆಲ್ಲುತ್ತದೆ. 32ರ ಹರೆಯದ ಈ ಬ್ಯಾಚುಲರ್ ನಟನ ಸಮಾಜ ಸೇವೆ, ವೃತ್ತಿ ಬದುಕು ಮತ್ತು ಮದುವೆಯ ಕುರಿತಾದ ಅವರ ಯೋಚನೆಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.
Read Full Story

06:34 PM (IST) Jan 22

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ - ಸರ್ಕಾರಿ ನೌಕರಿಗೆ ಸೇರಲು 5 ವರ್ಷ ವಯೋಮಿತಿ ಸಡಿಲಿಕೆ!

ಕರ್ನಾಟಕ ಸಚಿವ ಸಂಪುಟವು ಸರ್ಕಾರಿ ಉದ್ಯೋಗ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ಸಡಿಲಿಸಲು ಅನುಮೋದಿಸಿದೆ. ಈ ಸಡಿಲಿಕೆಯು 31/12/2027 ರವರೆಗಿನ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಹೊಸ ವಯೋಮಿತಿ ತಿಳಿಯಲು ಕ್ಲಿಕ್ ಮಾಡಿ.

Read Full Story

06:19 PM (IST) Jan 22

ಸರ್ಕಾರವೇ ಆರಂಭಿಸಿದ ಗೋವಿನ ಜೋಳ ಖರೀದಿ ಕೇಂದ್ರದಿಂದಲೇ ರೈತರಿಗೆ ಮೋಸ!

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮೆಗಾ ಮಾರ್ಕೆಟ್‌ನಲ್ಲಿರುವ ಗೋವಿನಜೋಳ ಖರೀದಿ ಕೇಂದ್ರದಲ್ಲಿ ರೈತರಿಗೆ ವಂಚನೆ ಆರೋಪ. ಉತ್ತಮ ಗುಣಮಟ್ಟದ ಫಸಲನ್ನು ಸಿಬ್ಬಂದಿ ತಿರಸ್ಕರಿಸುತ್ತಿದ್ದು, ಪ್ರಭಾವಿಗಳಿಗೆ ಮಾತ್ರ ಮಣೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ರೈತರು ಗೇಟ್ ಬಂದ್ ಮಾಡಿ ಬೃಹತ್ ಪ್ರತಿಭಟನೆ

Read Full Story

06:17 PM (IST) Jan 22

ಕ್ಯಾನ್ಸರ್‌ ಆರೈಕೆಯಲ್ಲಿ ದೇಶದ ನಂ.3 ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆದ ಬೆಂಗಳೂರಿನ ಕಿದ್ವಾಯಿ ಸರ್ಕಾರಿ ಹಾಸ್ಪಿಟಲ್

ಸಂಶೋಧನಾ ಸಮೀಕ್ಷೆ 2025ರ ಪ್ರಕಾರ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ಯಾನ್ಸರ್‌ ಆರೈಕೆಯಲ್ಲಿ ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ 3ನೇ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ವಿಶ್ವದರ್ಜೆಯ ಚಿಕಿತ್ಸೆಯಿಂದಾಗಿ ಈ ಗೌರವ ಲಭಿಸಿದೆ.

Read Full Story

06:12 PM (IST) Jan 22

ಬೆಂಗಳೂರಲ್ಲಿ ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ, ಕೇರಳ ರೀತಿ ಲೈಕ್ಸ್‌ಗಾಗಿ ಮಾಡಿದ್ರಾ ವಿಡಿಯೋ?

ಬೆಂಗಳೂರಲ್ಲಿ ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ, ಅವಲಹಳ್ಳಿ ಫಾರೆಸ್ಟ್‌ನಲ್ಲಿ ವಾಕಿಂಗ್ ಹೋದ ಯುವತಿಗೆ ಕಿರುಕುಳ ನೀಡಿರುವುದಾಗಿ ವಿಡಿಯೋ ಮೂಲಕ ಆರೋಪ ಮಾಡಿದ್ದಾಳೆ. ಆದರೆ ಇದು ಕೇರಳ ರೀತಿ ಮಾಡಿದ ಲೈಕ್ಸ್ ವಿಡಿಯೋನಾ ಅನ್ನೋ ಅನುಮಾನ ಕಾಡಿದೆ.

Read Full Story

05:56 PM (IST) Jan 22

ಮದರ್‌ ತೆರೆಸಾ ಹೆಸರಿನಲ್ಲಿ 2 ಶಾಲೆ ನಡೆಸುತ್ತಿರುವ Aase Serial ನಟಿ ಸ್ನೇಹಾ ಈಶ್ವರ್;‌ ಭೇಷ್‌ ಎಂದ ಸರ್ಕಾರ

Aase Serial: ಶ್ರಾವಣಿ ಸುಬ್ರಹ್ಮಣ್ಯ ಧಾರಾವಾಹಿಯಲ್ಲಿ ವಿಜಯಾಂಬಿಕಾ, 'ಆಸೆ' ಯಲ್ಲಿ ಸಕ್ರೆಬೈಲು ಶಾಂತಿ ಪಾತ್ರದಲ್ಲಿ ನಟಿಸುತ್ತಿರುವ ಸ್ನೇಹಾ ಈಶ್ವರ್‌ ಅವರು ರಿಯಲ್‌ ಲೈಫ್‌ನಲ್ಲಿ 2 ಶಾಲೆಯನ್ನು ನಡೆಸುತ್ತಿದ್ದಾರಂತೆ. ಸಹನಟಿ ಪ್ರಿಯಾಂಕಾ ಡಿಎಸ್‌ ತಮ್ಮ ಯುಟ್ಯೂಬ್‌ ಚಾನೆಲ್‌ನಲ್ಲಿ ಮಾಹಿತಿ ನೀಡಿದ್ದಾರೆ.

 

Read Full Story

05:44 PM (IST) Jan 22

ನಿಧಿ ಹಿಂದಿರುಗಿಸಿದ ರಿತ್ತಿ ಕುಟುಂಬಕ್ಕೆ ಲಕ್ಕುಂಡಿ ಗ್ರಾಮ ಪಂಚಾಯತ್‌ನಿಂದ ಬಂಪರ್ ಕೊಡುಗೆ ಘೋಷಣೆ

ಲಕ್ಕುಂಡಿ ಗ್ರಾಮ ಪಂಚಾಯ್ತಿಯು ರಿತ್ತಿ ಕುಟುಂಬದ ಪ್ರಾಮಾಣಿಕತೆಯನ್ನು ಗೌರವಿಸಿ, 30x40 ಅಳತೆಯ ನಿವೇಶನ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ. ಇದರೊಂದಿಗೆ, ಬಾಲಕ ಪ್ರಜ್ವಲ್‌ನನ್ನು ಮಾದರಿಯಾಗಿಟ್ಟು ಶಾಲೆಗಳಲ್ಲಿ ಅವನ ಭಾವಚಿತ್ರ ಅಳವಡಿಸಲು, ಮನೆ ನಿರ್ಮಾಣಕ್ಕೆ ಅನುದಾನ ಒದಗಿಸಲು ತೀರ್ಮಾನಿಸಿದೆ.

Read Full Story

05:44 PM (IST) Jan 22

ರಾಜ್ಯಪಾಲರ ಭಾಷಣ ವಿವಾದ - ಸಿಎಂ, ಕಾಂಗ್ರೆಸ್ ಶಾಸಕರ ನಡೆ ಸಂವಿಧಾನ ವಿರೋಧಿ - ಕಾರಜೊಳ ವಾಗ್ದಳಿ

ರಾಜ್ಯಪಾಲರ ಭಾಷಣ ವಿವಾದದ ಹಿನ್ನೆಲೆಯಲ್ಲಿ, ಮಾಜಿ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಸರ್ಕಾರದ ನಡೆಯನ್ನು ಖಂಡಿಸಿದ ಅವರು, ರಾಜ್ಯಪಾಲರಿಗೆ ಅಗೌರವ ತೋರಿದ ಶಾಸಕರ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
Read Full Story

05:29 PM (IST) Jan 22

ತಮ್ಮನನ್ನು ಪ್ರೀತಿಸಿ, ಅಣ್ಣನನ್ನು ಮದುವೆ ಆದಳು;‌ ಸೂರಜ್‌ ಸಿಂಗ್ Pavithra Bandhana Serial

Pavithra Bandhana Kannada Serial: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಸೂರಜ್‌ ಸಿಂಗ್‌, ಅಮೂಲ್ಯಾ ಭಾರದ್ವಾಜ್‌, ಅನುಷಾ ರಾವ್‌, ರುಹಾನಿ ಶೆಟ್ಟಿ ನಟನೆಯ ‘ಪವಿತ್ರ ಬಂಧನ’ ಧಾರಾವಾಹಿ ತಂಡವು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

05:12 PM (IST) Jan 22

ಶ್ರೀಮಂತರ ಮನೆಗೆ ಹೆಣ್ಣು ಮಕ್ಕಳನ್ನು ಸೊಸೆಯಾಗಿ ಕಳಿಸೋದೇ ಈ ತಾಯಿ ಗುರಿ; Gowri Kalyana Serial

Gowri Kalyana Kannada Tv Serial Timing: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಹೊಸದಾಗಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿಯಲ್ಲಿ ದೊಡ್ಡ ತಾರಾಬಳಗವಿದೆ. ಕೆ ಎಸ್‌ ರಾಮ್‌ಜೀ ಅವರು ಈ ಸೀರಿಯಲ್‌ ನಿರ್ಮಾಣ ಮಾಡುತ್ತಿದ್ದಾರೆ.

 

Read Full Story

05:08 PM (IST) Jan 22

ಹಾಸನ - ತಹಸಿಲ್ದಾರ್ ಕಿರುಕುಳ ಆರೋಪ; ಕಚೇರಿ ಆವರಣದಲ್ಲೇ ಉಪತಹಸಿಲ್ದಾರ್ ಆತ್ಮ೧ಹತ್ಯೆ ಯತ್ನ!

ಹಾಸನ ಜಿಲ್ಲೆಯ ಬೇಲೂರಿನಲ್ಲಿ, ಉಪತಹಸಿಲ್ದಾರ್ ತನ್ವಿರ್ ಅಹಮ್ಮದ್ ಅವರು ಮೇಲಧಿಕಾರಿಯ ಕಿರುಕುಳದಿಂದ ನೊಂದು ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಸರ್ಕಾರಿ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read Full Story

05:03 PM (IST) Jan 22

ವಿಜಯಲಕ್ಷ್ಮಿ ಊದಿದ್ದ ಆ ರಣ ಕಹಳೆಯಲ್ಲಿ ವಿಜಯ! ಜೂನ್​​ 2026ರ ಒಳಗೆ ದರ್ಶನ್‌ಗೆ ಸಿಗುತ್ತಂತೆ ಬೇಲ್!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿದ್ದ 8 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದ್ದು, ಇದು ಅವರಿಗೆ ಸಿಕ್ಕ ಮೊದಲ ಗೆಲುವಾಗಿದೆ. ಮತ್ತೊಂದೆಡೆ, ಜ್ಯೋತಿಷಿಯೊಬ್ಬರು 2026ರೊಳಗೆ ದರ್ಶನ್‌ಗೆ ಜಾಮೀನು ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Read Full Story

04:51 PM (IST) Jan 22

24ನೇ ವಯಸ್ಸಿಗೆ ಮುಂಬೈನಲ್ಲಿ ಮನೆ ತಗೊಂಡಿದ್ದು ಹೇಗೆ? Bigg Boss ರಕ್ಷಿತಾ ಬಿಚ್ಚಿಟ್ಟ ರಹಸ್ಯವೇನು?

Bigg Boss Kannada Season 12 Rakshita Shetty: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಮೂಲಕ ಹೆಸರು ಮಾಡಿರುವ ರಕ್ಷಿತಾ ಶೆಟ್ಟಿ ಅವರು ಈ ಹಿಂದೆ ಯುಟ್ಯೂಬರ್‌ ಆಗಿ ಗುರುತಿಸಿಕೊಂಡಿದ್ದರು. 24ನೇ ವಯಸ್ಸಿಗೆ ಅವರು ಮುಂಬೈನಲ್ಲಿ ಮನೆ ಖರೀದಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದಾರೆ.

 

Read Full Story

04:40 PM (IST) Jan 22

ಬಿಗ್‌ ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ - ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಕಾವೇರಿ!

'ಬಿಗ್‌ಬಾಸ್ ಕನ್ನಡ' ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ 'ಕಾವೇರಿ' ನಿವಾಸದಲ್ಲಿ ಭೇಟಿಯಾದರು. ಗಿಲ್ಲಿಯವರ ಸಹಜ ವ್ಯಕ್ತಿತ್ವ ಮತ್ತು ಗೆಲುವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು ಅವರಿಗೆ ಸಿಹಿ ತಿನ್ನಿಸಿ ಅಭಿನಂದಿಸಿದರು.

Read Full Story

04:39 PM (IST) Jan 22

ಡ್ರೈವಿಂಗ್ ಲೈಸನ್ಸ್ ಪಡೆಯೋಕೆ ಕಳ್ಳಾಟ ಆಡೋರಿಗೆ ಬ್ರೇಕ್, ಇನ್ಮುಂದೆ ಸೆನ್ಸಾರ್ ಆಧಾರಿತ ಚಾಲನಾ ಪರೀಕ್ಷೆ ಕಡ್ಡಾಯ!

ರಾಜ್ಯದಲ್ಲಿ ಇನ್ನು ಮುಂದೆ ಚಾಲನಾ ಪರವಾನಗಿ ಪರೀಕ್ಷೆಗಳು ಸಂಪೂರ್ಣವಾಗಿ ಸೆನ್ಸಾರ್ ಆಧಾರಿತವಾಗಿರಲಿವೆ.   ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಂತ್ರಜ್ಞಾನ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಪರವಾನಗಿ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

04:38 PM (IST) Jan 22

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್ - 'ಬಲವಂತದ ಕ್ರಮ'ಕ್ಕೆ ಹೈಕೋರ್ಟ್ ಬ್ರೇಕ್! ಏನಿದು ಪ್ರಕರಣ?

ಪುತ್ತೂರಿನಲ್ಲಿ ನಡೆದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಭಟ್ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಏನಿದು ಪ್ರಕರಣ?

Read Full Story

04:32 PM (IST) Jan 22

ಕೋಲಾರದಲ್ಲಿ ನೈತಿಕ ಪೊಲೀಸ್‌ಗಿರಿ - ಮುಸ್ಲಿಂ ಯುವತಿ ಜೊತೆಗಿದ್ದ ಹಿಂದೂ ಹುಡುಗರ ಮೇಲೆ ಹಲ್ಲೆ

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು 10 ಜನರನ್ನು ಬಂಧಿಸಲಾಗಿದೆ.

Read Full Story

04:25 PM (IST) Jan 22

ಲಕ್ಕುಂಡಿ - ಬಂಗಾರದ ನಿಧಿಗೆ ಸರ್ಪಗಳು ಕಾವಲಿರೋದೇಕೆ? ವೈಜ್ಞಾನಿಕ ಸತ್ಯ ಬಿಚ್ಚಿಟ್ಟ ಸ್ನೇಕ್ ಶ್ಯಾಮ್!

Snake Shyam of Bigg Boss Lakkundi Excavation ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಉತ್ಖನನವು ಹಾವುಗಳ ಪ್ರತ್ಯಕ್ಷದಿಂದ ನಿಗೂಢ ತಿರುವು ಪಡೆದಿದೆ. ನಿಧಿಯನ್ನು ಹಾವು ಕಾಯುತ್ತವೆ ಎಂಬ ಸ್ಥಳೀಯರ ನಂಬಿಕೆ ಕುರಿತು ಮೈಸೂರಿನಲ್ಲಿ ಉರಗ ತಜ್ಞ ಸ್ನೇಕ್ ಶ್ಯಾಮ್ ಹೇಳಿಕೆನಿಡಿದ್ದಾರೆ.

Read Full Story

04:17 PM (IST) Jan 22

ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ Kantara chapter 1 Movie ಟಿವಿಯಲ್ಲಿ ಪ್ರಸಾರ, ಯಾವಾಗ?

Kantara Chapter 1 Movie: ರಿಷಬ್‌ ಶೆಟ್ಟಿ, ರುಕ್ಮಿಣಿ ವಸಂತ್‌, ಪ್ರಮೋದ್‌ ಶೆಟ್ಟಿ, ಜಯರಾಮ್‌, ಗುಲ್ಶನ್‌ ದೇವಯ್ಯ ನಟನೆಯ ‘ಕಾಂತಾರ ಚಾಪ್ಟರ್‌ 1ʼ ಸಿನಿಮಾವು ಟಿವಿಯಲ್ಲಿ ಪ್ರಸಾರ ಆಗಲಿದೆ. ಹಾಗಾದರೆ ಯಾವಾಗ? ಎಲ್ಲಿ ನೋಡಬಹುದು?

 

Read Full Story

04:04 PM (IST) Jan 22

ವಿಶ್ವದ ಟ್ರಾಫಿಕ್ ಕಿರಿಕಿರಿ ನಗರಗಳ ಪಟ್ಟಿ ಪ್ರಕಟ, ಬೆಂಗಳೂರಿಗೆ ಎಷ್ಟನೇ ಸ್ಥಾನ?

ವಿಶ್ವದ ಟ್ರಾಫಿಕ್ ಕಿರಿಕಿರಿ ನಗರಗಳ ಪಟ್ಟಿ ಪ್ರಕಟ, ಬ್ರ್ಯಾಂಡ್ ಬೆಂಗಳೂರು ಎಂದು ಸರ್ಕಾರ ಸಿಲಿಕಾನ್ ಸಿಟಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ನೀಡುತ್ತಿದೆ. ಆದರೆ ಟ್ರಾಫಿಕ್ ಸಮಸ್ಯೆಯಿಂದ ಬೆಂಗಳೂರು ಅಂತಾರಾಷ್ಟ್ರೀಯ ಮಟದಲ್ಲಿ ಕುಖ್ಯಾತಿ ಪಡೆದಿದೆ.

 

Read Full Story

04:04 PM (IST) Jan 22

ಚಿಗವ್ವ, ದೊಡ್ಡವ್ವ‌ ಅನ್ಕಂಡ್ ಮಾತಾಡೋರ್ ಗೆದ್ಬುಟ್ರೆ ಬೇಜಾರಾಗಲ್ವ? ಕುಸುಮ ಹೀಗಂದಿದ್ದು ಯಾರಿಗೆ ಗೊತ್ತಾಯ್ತಾ?

ಶ್ರೀಮಂತಿಕೆ ಮತ್ತು ಅಹಂಕಾರದ ಪ್ರತೀಕವಾಗಿದ್ದ ಸ್ಪರ್ಧಿಗಳ ವಿರುದ್ಧ, ಬಡತನ ಹಾಗೂ ಸಹಜತೆಯಿಂದ ಬಂದ ಸ್ಪರ್ಧಿಗಳು ಜನಮನ ಗೆದ್ದರು. ಈ ಗೆಲುವು ಕೇವಲ ಷೋನದ್ದಲ್ಲ, ಬದಲಿಗೆ ಪಾಳೇಗಾರಿಕೆಯ ಮನಸ್ಥಿತಿಗೆ ಜನ ನೀಡಿದ ತಕ್ಕ ಉತ್ತರವಾಗಿದೆ.
Read Full Story

03:56 PM (IST) Jan 22

ಗಲ್ಫ್ ದೇಶದ ಅಕ್ರಮ ಡೀಸೆಲ್ ಕಳ್ಳಸಾಗಣೆ ಜಾಲ ಬೆಳಗಾವಿಯಲ್ಲಿ ಪತ್ತೆ, ಕರ್ನಾಟಕಕ್ಕೆ ಕೋಟ್ಯಂತರ ರೂ ತೆರಿಗೆ ನಷ್ಟ!

ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಅಕ್ರಮವಾಗಿ ಡೀಸೆಲ್ ಕಳ್ಳಸಾಗಣೆ ಮಾಡುತ್ತಿದ್ದ ದೊಡ್ಡ ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ₹17 ಲಕ್ಷ ಮೌಲ್ಯದ 17 ಸಾವಿರ ಲೀಟರ್ ಡೀಸೆಲ್ ಜಪ್ತಿ ಮಾಡಲಾಗಿದೆ.

Read Full Story

03:45 PM (IST) Jan 22

ಬಿಗ್ ಬಾಸ್ ಗೆಲ್ಲುತ್ತಿದ್ದಂತೆಯೇ ಶಿವಣ್ಣ ಭೇಟಿಯಾದ ಗಿಲ್ಲಿ ನಟ; ಸಿನಿಮಾದಲ್ಲಿ ಗಿಲ್ಲಿಗೆ ಸಿಕ್ತಾ ಚಾನ್ಸ್..?

ಬಿಗ್ ಬಾಸ್ ಸೀಸನ್ 12ರ ವಿಜೇತ ಗಿಲ್ಲಿ ನಟ, ಮನೆಯಿಂದ ಹೊರಬಂದ ತಕ್ಷಣ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಹಿಂದೆ ಗಿಲ್ಲಿಯ ಗೆಲುವನ್ನು ಭವಿಷ್ಯ ನುಡಿದಿದ್ದ ಶಿವಣ್ಣ, ಈಗ ಅವರಿಗೆ ಸಿನಿಮಾ ಹಾಗೂ ಮುಂದಿನ ಭವಿಷ್ಯದ ಬಗ್ಗೆ ಸಲಹೆ ನೀಡಿದ್ದಾರೆ.
Read Full Story

03:29 PM (IST) Jan 22

Photos - ಹುಡುಗಿಗೋಸ್ಕರ 'ಭರ್ಜರಿ ಬ್ಯಾಚುಲರ್ಸ್‌'ಗೆ ಬಂದಿದ್ದ 'ಗಾಬರಿ ಸಿಂಗ್‌'ಗೆ ಕಂಕಣಭಾಗ್ಯ ಕೂಡಿ ಬಂತು!

Comedy Khiladigalu Show Bhuvanesh: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಾರ್ಯಕ್ರಮ 'ಕಾಮಿಡಿ ಕಿಲಾಡಿಗಳು' ಮೂಲಕ ಮನೆಮಾತಾಗಿದ್ದ ಹಾಸ್ಯ ನಟ ಭುವನೇಶ್ ಹೊಳೇನರಸೀಪುರ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬುಲೆಟ್‌ ರಕ್ಷಕ್‌ ಕೂಡ ಈ ಮದುವೆಗೆ ಹೋಗಿ ಶುಭ ಹಾರೈಸಿದ್ದಾರೆ.

 

Read Full Story

03:26 PM (IST) Jan 22

ಡ್ಯೂಟಿಯಲ್ಲೇ ಕಾಮಕೇಳಿ; ರಾಸಲೀಲೆ ರಾಮಚಂದ್ರ ರಾವ್‌ ಈ ಕ್ವಾಲಿಟಿಗೆ ನೆಟಿಜನ್ಸ್ ಫಿದಾ

ಡ್ಯೂಟಿಯಲ್ಲೇ ಕಾಮಕೇಳಿ; ಡಿಜಿಪಿ ರಾಮಚಂದ್ರ ರಾವ್ ಪ್ರಕರಣ ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದೆ. ಕಾಮಕೇಳಿಯ ವಿಡಿಯೋ, ಆಡಿಯೋ ಸೋಶಿಯಲ್ ಮೀಡಿಯಾ, ವ್ಯಾಟ್ಸಾಪ್ ಮೂಲಕ ಹರಿದಾಡುತ್ತಿದೆ. ಇದ್ರ ನಡುವೆ ಜನರು ರಾಚಂದ್ರ ರಾವ್ ಈ ಕ್ವಾಲಿಟಿ ಮೆಚ್ಚಿಕೊಂಡಿದ್ದಾರೆ.

Read Full Story

03:21 PM (IST) Jan 22

BMTC ಬಸ್‌ ಟಿಕೆಟ್ ಹಣ ಆನ್‌ಲೈನ್ ಪಾವತಿ ವೇಳೆ ಎಡವಟ್ಟು - 6 ರೂ. ಬದಲು 60 ಸಾವಿರ ರೂ ಪೇ ಮಾಡಿದ ಪ್ರಯಾಣಿಕ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಪ್ರಯಾಣಿಕರೊಬ್ಬರು 6 ರೂಪಾಯಿ ಟಿಕೆಟ್‌ಗೆ ಆನ್‌ಲೈನ್ ಮೂಲಕ 60 ಸಾವಿರ ರೂಪಾಯಿ ಪಾವತಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ಹಣ ನೇರವಾಗಿ ನಿಗಮದ ಖಾತೆಗೆ ಜಮೆಯಾಗಿದ್ದು, ಅದನ್ನು ಮರಳಿ ಪಡೆಯಲು ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ.
Read Full Story

More Trending News