ಉರುಸು ಮೆರವಣಿಗೆ ವೇಳೆ ಹಿಂದೂ ಯುವತಿ ಬುರುಕಾ ಧರಿಸಿದ ವಿಚಾರಕ್ಕೆ ಹಿಂದೂ ಯುವಕರ ಮೇಲೆ ಮುಸ್ಲಿಂ ಹುಡುಗರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಬು ಸುಲ್ತಾನ್, ನೂರ್ ಅಹ್ಮದ್, ಮೊಹಮದ್ ನೈದ್, ಅಭಿದ್ ಅಹಮದ್ ಸೇರಿದಂತೆ 10 ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಟ್ಟಣದ ದರ್ಗಾದ ಮೈದಾನದಲ್ಲಿ ನಡೆಯುತ್ತಿರುವ ಉರುಸ್ನಲ್ಲಿ ಸುತ್ತಾಡಿಕೊಂಡು ಬರಲೆಂದು ಪಟ್ಟಣದ ದಿರೀಡ್ ನಗರದ ಹಿಂದೂ ಸಮುದಾಯದ ಮೂವರು ಹುಡುಗರು, ಒಬ್ಬ ಹುಡುಗಿ ಮತ್ತು ಮುಸ್ಲಿಂ ಸಮುದಾಯದ ಇಬ್ಬರು ಹುಡುಗ, ಹುಡುಗಿ ಒಟ್ಟಾಗಿ ಬಂದಿದ್ದರು. ಈ ವೇಳೆ 20 ಮುಸ್ಲಿಂ ಹುಡುಗರು ಏಕಾಏಕಿ ಬಂದು ಹಿಂದೂ ಹುಡುಗಿ ಹಾಕಿಕೊಂಡಿದ್ದ ಬುರುಕಾ ತೆಗೆಸಿ ನೀನು ಯಾವ ಜಾತಿ? ನಿನ್ನ ಆಧಾರ್ ಕಾರ್ಡ್ ತೋರಿಸು? ಎಂದು ಗಲಾಟೆ ಮಾಡಿದ್ದಾರೆ. ಆಗ ಜತೆಗಿದ್ದ ಹಿಂದೂ ಹುಡುಗರ ಮೇಲೆಯೂ ಈ ಪುಂಡರು ಹಲ್ಲೆ ಮಾಡಿದ್ದರಿಂದ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದರು.
ಹಿಂದೂ ಜಾರಗಣೆ ವೇದಿಕೆಯ ಮುಖಂಡರು, ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿತ್ತು. ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಕೆಜಿಎಫ್ ಎಸ್ಪಿ ಪರಿಸ್ಥಿತಿ ತಿಳಿಗೊಳಿಸಿದರು.
12:13 AM (IST) Jan 23
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಸಯ್ಯದ್ ಮಹಮ್ಮದ್ ಇದ್ರಿಸ್ ಎಂಬ ಯುವಕನಿಗೆ ಲಷ್ಕರೆ-ಎ-ತಯ್ಯಬಾ ಉಗ್ರ ಸಂಘಟನೆಗೆ ಯುವಕರನ್ನು ನೇಮಿಸುತ್ತಿದ್ದ ಆರೋಪದ ಮೇಲೆ ವಿಶೇಷ ಎನ್ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪಶ್ಚಿಮ ಬಂಗಾಳದಲ್ಲಿ ದಾಖಲಾಗಿದ್ದ ಈ ಪ್ರಕರಣದ ತನಿಖೆ ನಡೆಸಿದ ಎನ್ಐಎ.
11:34 PM (IST) Jan 22
ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪದ ಮೇಲೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಚನ್ನಪಟ್ಟಣದ ಘಟನೆಯ ನಂತರ, ರಾಜ್ಯಾದ್ಯಂತ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ
10:55 PM (IST) Jan 22
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಾದಿಮನಾಳ ಗ್ರಾಮದ ಜಮೀನೊಂದರಲ್ಲಿ ಹುತ್ತವನ್ನು ಅಗೆದಾಗ, ಮೊಹರಂ ಹಬ್ಬದ ಸಂದರ್ಭದಲ್ಲಿ ಬಳಸುವ ಪವಿತ್ರ ಅಲಾಯಿ ದೇವರುಗಳು ಪತ್ತೆಯಾಗಿವೆ. ಆರಂಭದಲ್ಲಿ ಇದನ್ನು ಮೂಢನಂಬಿಕೆ ಎಂದು ನಿರ್ಲಕ್ಷಿಸಿದ್ದ ಗ್ರಾಮಸ್ಥರು, ಈ ಪವಾಡವನ್ನು ಕಣ್ಣಾರೆ ಕಂಡು ಇದೀಗ ಅಚ್ಚರಿಗೊಂಡಿದ್ದಾರೆ
10:23 PM (IST) Jan 22
10:00 PM (IST) Jan 22
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣವನ್ನು ಮೊಟಕುಗೊಳಿಸಿದ ಘಟನೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದು ಸಾಂವಿಧಾನಿಕ ಕರ್ತವ್ಯ ಲೋಪ ಮತ್ತು ರಾಷ್ಟ್ರಗೀತೆಗೆ ಮಾಡಿದ ಅವಮಾನ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ.
09:02 PM (IST) Jan 22
ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮುಡಾ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅವರಿಗೆ ಸೇರಿದ ₹20.85 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.
08:28 PM (IST) Jan 22
08:07 PM (IST) Jan 22
ಗದಗ ಜಿಲ್ಲೆ ಲಕ್ಕುಂಡಿಯಲ್ಲಿ ಬಂಗಾರದ ನಿಧಿ ಸಿಕ್ಕ ನಂತರ ನಡೆಯುತ್ತಿರುವ ಪುರಾತತ್ವ ಉತ್ಖನನದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲದ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಇದರಿಂದ ಭೂಮಿಯ ಬೆಲೆ ದುಪ್ಪಟ್ಟಾಗಿದೆ. ಸ್ಥಳೀಯ ನಿವಾಸಿಗಳು, ರೈತರು ಪುನರ್ವಸತಿ ಹಾಗೂ ಕೃಷಿ ಭೂಮಿ ನಷ್ಟದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
08:03 PM (IST) Jan 22
ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ತಮ್ಮ ಮದುವೆಯ ರೋಚಕ ಕಥೆಯನ್ನು ಹಂಚಿಕೊಂಡಿದ್ದಾರೆ. ಹುಡುಗಿ ನೋಡುವ ಶಾಸ್ತ್ರದ ವೇಳೆ, ಆಕೆಯ ಮುಖದ ಬದಲು ಪಾದಕ್ಕಿಂತ ಉದ್ದವಿದ್ದ ಹವಾಯಿ ಚಪ್ಪಲಿಯನ್ನು ನೋಡಿ ಮದುವೆಗೆ ಒಪ್ಪಿಕೊಂಡಿದ್ದರಂತೆ. ಇದರ ರೋಚಕ ಸ್ಟೋರಿ ಹೇಳಿದ್ದಾರೆ.
07:59 PM (IST) Jan 22
ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ, ಅರಣ್ಯ ಇಲಾಖೆಯ ದ್ವಂದ್ವ ನೀತಿಯನ್ನು ಪ್ರಶ್ನಿಸಿದ ರೈತರು ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ವನ್ಯಜೀವಿ ದಾಳಿಯಿಂದ ರೈತರು ಸತ್ತರೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ.
07:37 PM (IST) Jan 22
ರೈಲ್ವೆ ಇಲಾಖೆಯು ಕರ್ನಾಟಕದ ಮೂರು ಪ್ರಮುಖ ರೈಲುಗಳಿಗೆ ಹೊಸ ನಿಲುಗಡೆಗಳನ್ನು ಘೋಷಿಸಿದೆ. ಹುಬ್ಬಳ್ಳಿ-ದಾದರ್ ಎಕ್ಸ್ಪ್ರೆಸ್ಗೆ ಗೋಕಾಕ್ ರೋಡ್, ಮಂಗಳೂರು-ಸುಬ್ರಮಣ್ಯ ಪ್ಯಾಸೆಂಜರ್ಗೆ ನೇರಳಕಟ್ಟೆ, ಮತ್ತು ಲೋಕಮಾನ್ಯ ತಿಲಕ್-ಕೊಯಮತ್ತೂರು ಎಕ್ಸ್ಪ್ರೆಸ್ಗೆ ಯಲಹಂಕದಲ್ಲಿ ಹೊಸ ನಿಲುಗಡೆ ಕಲ್ಪಿಸಲಾಗಿದೆ.
07:30 PM (IST) Jan 22
ಭದ್ರಾವತಿಯಲ್ಲಿ ಅಭಿಮಾನಿಗಳು ನಿರ್ಮಿಸಿದ ಡಾ. ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಗಳಿರುವ ದೇಗುಲವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿದರು. ಈ ದೇಗುಲದಲ್ಲಿ, ಇಬ್ಬರು ನಟರಿಗೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಅಭಿಮಾನಿಗಳು ಸಂಕಲ್ಪ ಮಾಡಿದ್ದಾರೆ.
07:11 PM (IST) Jan 22
ಭಾರತೀಯ ರೈಲ್ವೆ ಇಲಾಖೆಯು ದೇಶಾದ್ಯಂತ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಥವಾ BE/B.Tech ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದೆ.
06:52 PM (IST) Jan 22
ದಾಂಡೇಲಿಯಲ್ಲಿ ಕಾಡುಪ್ರಾಣಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಬೈಕ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬರ್ಚಿ ರಸ್ತೆಯಲ್ಲಿ ತಪಾಸಣೆ ವೇಳೆ ಆರೋಪಿ ರಾಜು ಮಂಜು ಪೋತದಾರ ಸಿಕ್ಕಿಬಿದ್ದಿದ್ದು, ಮಾಂಸ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
06:40 PM (IST) Jan 22
06:34 PM (IST) Jan 22
ಕರ್ನಾಟಕ ಸಚಿವ ಸಂಪುಟವು ಸರ್ಕಾರಿ ಉದ್ಯೋಗ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ಸಡಿಲಿಸಲು ಅನುಮೋದಿಸಿದೆ. ಈ ಸಡಿಲಿಕೆಯು 31/12/2027 ರವರೆಗಿನ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಹೊಸ ವಯೋಮಿತಿ ತಿಳಿಯಲು ಕ್ಲಿಕ್ ಮಾಡಿ.
06:19 PM (IST) Jan 22
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮೆಗಾ ಮಾರ್ಕೆಟ್ನಲ್ಲಿರುವ ಗೋವಿನಜೋಳ ಖರೀದಿ ಕೇಂದ್ರದಲ್ಲಿ ರೈತರಿಗೆ ವಂಚನೆ ಆರೋಪ. ಉತ್ತಮ ಗುಣಮಟ್ಟದ ಫಸಲನ್ನು ಸಿಬ್ಬಂದಿ ತಿರಸ್ಕರಿಸುತ್ತಿದ್ದು, ಪ್ರಭಾವಿಗಳಿಗೆ ಮಾತ್ರ ಮಣೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ರೈತರು ಗೇಟ್ ಬಂದ್ ಮಾಡಿ ಬೃಹತ್ ಪ್ರತಿಭಟನೆ
06:17 PM (IST) Jan 22
ಸಂಶೋಧನಾ ಸಮೀಕ್ಷೆ 2025ರ ಪ್ರಕಾರ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ಯಾನ್ಸರ್ ಆರೈಕೆಯಲ್ಲಿ ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ 3ನೇ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ವಿಶ್ವದರ್ಜೆಯ ಚಿಕಿತ್ಸೆಯಿಂದಾಗಿ ಈ ಗೌರವ ಲಭಿಸಿದೆ.
06:12 PM (IST) Jan 22
ಬೆಂಗಳೂರಲ್ಲಿ ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ, ಅವಲಹಳ್ಳಿ ಫಾರೆಸ್ಟ್ನಲ್ಲಿ ವಾಕಿಂಗ್ ಹೋದ ಯುವತಿಗೆ ಕಿರುಕುಳ ನೀಡಿರುವುದಾಗಿ ವಿಡಿಯೋ ಮೂಲಕ ಆರೋಪ ಮಾಡಿದ್ದಾಳೆ. ಆದರೆ ಇದು ಕೇರಳ ರೀತಿ ಮಾಡಿದ ಲೈಕ್ಸ್ ವಿಡಿಯೋನಾ ಅನ್ನೋ ಅನುಮಾನ ಕಾಡಿದೆ.
05:56 PM (IST) Jan 22
Aase Serial: ಶ್ರಾವಣಿ ಸುಬ್ರಹ್ಮಣ್ಯ ಧಾರಾವಾಹಿಯಲ್ಲಿ ವಿಜಯಾಂಬಿಕಾ, 'ಆಸೆ' ಯಲ್ಲಿ ಸಕ್ರೆಬೈಲು ಶಾಂತಿ ಪಾತ್ರದಲ್ಲಿ ನಟಿಸುತ್ತಿರುವ ಸ್ನೇಹಾ ಈಶ್ವರ್ ಅವರು ರಿಯಲ್ ಲೈಫ್ನಲ್ಲಿ 2 ಶಾಲೆಯನ್ನು ನಡೆಸುತ್ತಿದ್ದಾರಂತೆ. ಸಹನಟಿ ಪ್ರಿಯಾಂಕಾ ಡಿಎಸ್ ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಮಾಹಿತಿ ನೀಡಿದ್ದಾರೆ.
05:44 PM (IST) Jan 22
ಲಕ್ಕುಂಡಿ ಗ್ರಾಮ ಪಂಚಾಯ್ತಿಯು ರಿತ್ತಿ ಕುಟುಂಬದ ಪ್ರಾಮಾಣಿಕತೆಯನ್ನು ಗೌರವಿಸಿ, 30x40 ಅಳತೆಯ ನಿವೇಶನ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ. ಇದರೊಂದಿಗೆ, ಬಾಲಕ ಪ್ರಜ್ವಲ್ನನ್ನು ಮಾದರಿಯಾಗಿಟ್ಟು ಶಾಲೆಗಳಲ್ಲಿ ಅವನ ಭಾವಚಿತ್ರ ಅಳವಡಿಸಲು, ಮನೆ ನಿರ್ಮಾಣಕ್ಕೆ ಅನುದಾನ ಒದಗಿಸಲು ತೀರ್ಮಾನಿಸಿದೆ.
05:44 PM (IST) Jan 22
05:29 PM (IST) Jan 22
Pavithra Bandhana Kannada Serial: ಬಿಗ್ ಬಾಸ್ ಕನ್ನಡ ಸೀಸನ್ 12 ಸೂರಜ್ ಸಿಂಗ್, ಅಮೂಲ್ಯಾ ಭಾರದ್ವಾಜ್, ಅನುಷಾ ರಾವ್, ರುಹಾನಿ ಶೆಟ್ಟಿ ನಟನೆಯ ‘ಪವಿತ್ರ ಬಂಧನ’ ಧಾರಾವಾಹಿ ತಂಡವು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
05:12 PM (IST) Jan 22
Gowri Kalyana Kannada Tv Serial Timing: ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸದಾಗಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿಯಲ್ಲಿ ದೊಡ್ಡ ತಾರಾಬಳಗವಿದೆ. ಕೆ ಎಸ್ ರಾಮ್ಜೀ ಅವರು ಈ ಸೀರಿಯಲ್ ನಿರ್ಮಾಣ ಮಾಡುತ್ತಿದ್ದಾರೆ.
05:08 PM (IST) Jan 22
ಹಾಸನ ಜಿಲ್ಲೆಯ ಬೇಲೂರಿನಲ್ಲಿ, ಉಪತಹಸಿಲ್ದಾರ್ ತನ್ವಿರ್ ಅಹಮ್ಮದ್ ಅವರು ಮೇಲಧಿಕಾರಿಯ ಕಿರುಕುಳದಿಂದ ನೊಂದು ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಸರ್ಕಾರಿ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
05:03 PM (IST) Jan 22
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿದ್ದ 8 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದ್ದು, ಇದು ಅವರಿಗೆ ಸಿಕ್ಕ ಮೊದಲ ಗೆಲುವಾಗಿದೆ. ಮತ್ತೊಂದೆಡೆ, ಜ್ಯೋತಿಷಿಯೊಬ್ಬರು 2026ರೊಳಗೆ ದರ್ಶನ್ಗೆ ಜಾಮೀನು ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
04:51 PM (IST) Jan 22
Bigg Boss Kannada Season 12 Rakshita Shetty: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಮೂಲಕ ಹೆಸರು ಮಾಡಿರುವ ರಕ್ಷಿತಾ ಶೆಟ್ಟಿ ಅವರು ಈ ಹಿಂದೆ ಯುಟ್ಯೂಬರ್ ಆಗಿ ಗುರುತಿಸಿಕೊಂಡಿದ್ದರು. 24ನೇ ವಯಸ್ಸಿಗೆ ಅವರು ಮುಂಬೈನಲ್ಲಿ ಮನೆ ಖರೀದಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದಾರೆ.
04:40 PM (IST) Jan 22
'ಬಿಗ್ಬಾಸ್ ಕನ್ನಡ' ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ 'ಕಾವೇರಿ' ನಿವಾಸದಲ್ಲಿ ಭೇಟಿಯಾದರು. ಗಿಲ್ಲಿಯವರ ಸಹಜ ವ್ಯಕ್ತಿತ್ವ ಮತ್ತು ಗೆಲುವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು ಅವರಿಗೆ ಸಿಹಿ ತಿನ್ನಿಸಿ ಅಭಿನಂದಿಸಿದರು.
04:39 PM (IST) Jan 22
ರಾಜ್ಯದಲ್ಲಿ ಇನ್ನು ಮುಂದೆ ಚಾಲನಾ ಪರವಾನಗಿ ಪರೀಕ್ಷೆಗಳು ಸಂಪೂರ್ಣವಾಗಿ ಸೆನ್ಸಾರ್ ಆಧಾರಿತವಾಗಿರಲಿವೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಂತ್ರಜ್ಞಾನ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಪರವಾನಗಿ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
04:38 PM (IST) Jan 22
ಪುತ್ತೂರಿನಲ್ಲಿ ನಡೆದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಭಟ್ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಏನಿದು ಪ್ರಕರಣ?
04:32 PM (IST) Jan 22
ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು 10 ಜನರನ್ನು ಬಂಧಿಸಲಾಗಿದೆ.
04:25 PM (IST) Jan 22
Snake Shyam of Bigg Boss Lakkundi Excavation ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಉತ್ಖನನವು ಹಾವುಗಳ ಪ್ರತ್ಯಕ್ಷದಿಂದ ನಿಗೂಢ ತಿರುವು ಪಡೆದಿದೆ. ನಿಧಿಯನ್ನು ಹಾವು ಕಾಯುತ್ತವೆ ಎಂಬ ಸ್ಥಳೀಯರ ನಂಬಿಕೆ ಕುರಿತು ಮೈಸೂರಿನಲ್ಲಿ ಉರಗ ತಜ್ಞ ಸ್ನೇಕ್ ಶ್ಯಾಮ್ ಹೇಳಿಕೆನಿಡಿದ್ದಾರೆ.
04:17 PM (IST) Jan 22
Kantara Chapter 1 Movie: ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಪ್ರಮೋದ್ ಶೆಟ್ಟಿ, ಜಯರಾಮ್, ಗುಲ್ಶನ್ ದೇವಯ್ಯ ನಟನೆಯ ‘ಕಾಂತಾರ ಚಾಪ್ಟರ್ 1ʼ ಸಿನಿಮಾವು ಟಿವಿಯಲ್ಲಿ ಪ್ರಸಾರ ಆಗಲಿದೆ. ಹಾಗಾದರೆ ಯಾವಾಗ? ಎಲ್ಲಿ ನೋಡಬಹುದು?
04:04 PM (IST) Jan 22
ವಿಶ್ವದ ಟ್ರಾಫಿಕ್ ಕಿರಿಕಿರಿ ನಗರಗಳ ಪಟ್ಟಿ ಪ್ರಕಟ, ಬ್ರ್ಯಾಂಡ್ ಬೆಂಗಳೂರು ಎಂದು ಸರ್ಕಾರ ಸಿಲಿಕಾನ್ ಸಿಟಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ನೀಡುತ್ತಿದೆ. ಆದರೆ ಟ್ರಾಫಿಕ್ ಸಮಸ್ಯೆಯಿಂದ ಬೆಂಗಳೂರು ಅಂತಾರಾಷ್ಟ್ರೀಯ ಮಟದಲ್ಲಿ ಕುಖ್ಯಾತಿ ಪಡೆದಿದೆ.
04:04 PM (IST) Jan 22
03:56 PM (IST) Jan 22
ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಅಕ್ರಮವಾಗಿ ಡೀಸೆಲ್ ಕಳ್ಳಸಾಗಣೆ ಮಾಡುತ್ತಿದ್ದ ದೊಡ್ಡ ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ₹17 ಲಕ್ಷ ಮೌಲ್ಯದ 17 ಸಾವಿರ ಲೀಟರ್ ಡೀಸೆಲ್ ಜಪ್ತಿ ಮಾಡಲಾಗಿದೆ.
03:45 PM (IST) Jan 22
03:29 PM (IST) Jan 22
Comedy Khiladigalu Show Bhuvanesh: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಾರ್ಯಕ್ರಮ 'ಕಾಮಿಡಿ ಕಿಲಾಡಿಗಳು' ಮೂಲಕ ಮನೆಮಾತಾಗಿದ್ದ ಹಾಸ್ಯ ನಟ ಭುವನೇಶ್ ಹೊಳೇನರಸೀಪುರ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬುಲೆಟ್ ರಕ್ಷಕ್ ಕೂಡ ಈ ಮದುವೆಗೆ ಹೋಗಿ ಶುಭ ಹಾರೈಸಿದ್ದಾರೆ.
03:26 PM (IST) Jan 22
ಡ್ಯೂಟಿಯಲ್ಲೇ ಕಾಮಕೇಳಿ; ಡಿಜಿಪಿ ರಾಮಚಂದ್ರ ರಾವ್ ಪ್ರಕರಣ ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದೆ. ಕಾಮಕೇಳಿಯ ವಿಡಿಯೋ, ಆಡಿಯೋ ಸೋಶಿಯಲ್ ಮೀಡಿಯಾ, ವ್ಯಾಟ್ಸಾಪ್ ಮೂಲಕ ಹರಿದಾಡುತ್ತಿದೆ. ಇದ್ರ ನಡುವೆ ಜನರು ರಾಚಂದ್ರ ರಾವ್ ಈ ಕ್ವಾಲಿಟಿ ಮೆಚ್ಚಿಕೊಂಡಿದ್ದಾರೆ.
03:21 PM (IST) Jan 22