ಹಾಸನ: ಕೆಲವು ಬಾರಿ ಕೆಲ ಸಮಸ್ಯೆಗಳನ್ನು ಹಣದ ಆಸೆಯಿಂದ ಉದ್ಭವ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ವಿದ್ಯಾರ್ಥಿಗಳ ದಂಗೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಸಂದರ್ಭಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ, ಆದರೆ ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಈ ಮಟ್ಟದಲ್ಲಿ ಅಸಮಾಧಾನ ವ್ಯಕ್ತಪಡಿಸಿ, ದುರುಪಯೋಗ ಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾವುದೋ ಕಾಣದ ಶಕ್ತಿಗಳು ಇದರಲ್ಲಿ ಸೇರಿವೆ. ನಮ್ಮ ದೇಶದ ಅಭಿವೃದ್ಧಿ ಸಹಿಸಲಾರದೆ ಈ ತರಹ ಅವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.
ನಮ್ಮ ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳಲ್ಲಿ ದೇಶದ ಭದ್ರತೆಯನ್ನು ಅಸ್ಥಿರಗೊಳಿಸಲು ಹಲವಾರು ಕಾಣದ ಕೈಗಳು ಪ್ರಯತ್ನಪಡುತ್ತಿವೆ. ಆದ್ದರಿಂದ ಯುವ ಜನತೆ ತಾಳ್ಮೆಯಿಂದ ವರ್ತಿಸಬೇಕಿದೆ ಎಂದರು.
11:35 PM (IST) Jul 22
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಜುಲೈ 23 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ಆದೇಶವು ಅಂಗನವಾಡಿಯಿಂದ ಪಿಯುಸಿ ವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದೆ.
10:41 PM (IST) Jul 22
ಕೇವಲ 100 ದಿನಗಳು ಕಳೆಯುವುದರೊಳಗೆ ಕಠ್ಮಂಡುವಿನ ಅರಮನೆಯಲ್ಲಿ ಭಾರಿ ಸಸ್ಪೆನ್ಸ್ ಒಂದಕ್ಕೆ ತೆರೆಬಿದ್ದಿದೆ. ತಾನು ವಿಧಿಸಿಕೊಂಡಿದ್ದ ನಿಯಮವನ್ನು ತಾನೇ ಗಾಳಿಗೆ ತೂರಿ, ಬಾಲೆನ್ ಶಾ ಏಕಾಏಕಿ ದೊಡ್ಡ ಯು-ಟರ್ನ್ ಹೊಡೆದಿದ್ದಾರೆ. ಅದೇನು ಎಂದು ನೋಡೋಣ ಬನ್ನಿ!
09:51 PM (IST) Jul 22
ಭಟ್ಕಳದ ಆನಂದ ಆಶ್ರಮ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಉದ್ಯಮಶೀಲತೆ ಮತ್ತು ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು 'ಬಿಸಿನೆಸ್ ಡೇ 2026' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
09:18 PM (IST) Jul 22
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ಶಾಲಾ ಬಸ್ಸಿನ ಮೇಲೆ ಉರುಳಿಬಿದ್ದಿದೆ. ಈ ಭೀಕರ ದುರಂತದಲ್ಲಿ 6 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.
08:19 PM (IST) Jul 22
ಇತ್ತೀಚೆಗೆ ಸಂಸತ್ತಿನಲ್ಲಿ ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ವಿಪಕ್ಷಗಳು 'ನಿಯಮ 267' ಅಡಿ ಚರ್ಚೆಗೆ ಪಟ್ಟುಹಿಡಿದು ಗದ್ದಲ ಸೃಷ್ಟಿಸಿದವು. ಏನಿದು ನಿಯಮ ಎನ್ನುವುದನ್ನು ನೋಡೋಣ ಬನ್ನಿ.
08:16 PM (IST) Jul 22
'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.
07:43 PM (IST) Jul 22
ಮಂಗಳೂರು ಪೋರ್ಟ್ ಅಥಾರಿಟಿ (NMPA) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹತೆ, ವೇತನ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.
06:41 PM (IST) Jul 22
ಕೆಲ ದತ್ತಾಂಶದ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಎಲ್ಪಿಜಿ ಗ್ರಾಹಕರನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ? ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ನಂತರದ ಸ್ಥಾನಗಳಲ್ಲಿವೆ. 'ಪ್ರಧಾನ ಮಂತ್ರಿ ಉಜ್ವಲ ಯೋಜನೆ'ಯು ಉತ್ತರ ಪ್ರದೇಶದ ಈ ಅಗ್ರಸ್ಥಾನಕ್ಕೆ ಪ್ರಮುಖ ಕಾರಣವಾಗಿದೆ.
06:38 PM (IST) Jul 22
ಬೆಂಗಳೂರಿನ ಬೈಯಪ್ಪನಹಳ್ಳಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ಸ್ಥಾಪಿಸಲಾಗಿದ್ದ ಫ್ಯಾಬ್ರಿಕೇಷನ್ ಯಾರ್ಡ್ ಅನ್ನು ನೈಋತ್ಯ ರೈಲ್ವೆ ಇಲಾಖೆ ಧ್ವಂಸಗೊಳಿಸಿದೆ. ಈ ಕ್ರಮದಿಂದಾಗಿ ರಾಜ್ಯ ಸರ್ಕಾರಿ ಸಂಸ್ಥೆ ಬಿ-ಸ್ಮೈಲ್ ಮತ್ತು ರೈಲ್ವೆ ಇಲಾಖೆಯ ನಡುವೆ ಹೊಸ ಸಂಘರ್ಷ ಆರಂಭವಾಗಿದೆ.
05:59 PM (IST) Jul 22
05:42 PM (IST) Jul 22
05:32 PM (IST) Jul 22
ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.
05:04 PM (IST) Jul 22
03:48 PM (IST) Jul 22
02:48 PM (IST) Jul 22
02:44 PM (IST) Jul 22
ನೀಟ್ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ, ಸತ್ಯಾಂಶಗಳನ್ನು ತಿಳಿದು, ಹೊಣೆಗಾರಿಕೆಯನ್ನು ಪ್ರಶ್ನಿಸಬೇಕು ಎಂದು ಕರೆ ನೀಡಿದ್ದಾರೆ.
01:36 PM (IST) Jul 22
ಯುವ ರೈತ ಚೇತನ್ ಗೌಡ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ದೇವಿ ಚಿತ್ರದಲ್ಲಿ ಭವ್ಯಾ ಗೌಡ ಅವರು ನಾಯಕ ಚೇತನ್ ಗೌಡ ಅವರಿಗೆ ನಾಯಕಿ ಆಗಿದ್ದಾರೆ. ಈ ಹೊಸ ಜೋಡಿ ಸ್ಯಾಂಡಲ್ವುಡ್ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
01:28 PM (IST) Jul 22
12:03 PM (IST) Jul 22
ಆರೆಕ್ಸ್ ಬೈಕಿನ ಸುತ್ತ ನಡೆಯುವ ಕಥೆಯ ಜೊತೆಗೆ ಹಾರರ್ ಕಥಾಹಂದರ ಕೂಡಾ ಇದರೊಟ್ಟಿಗೆ ಬೆಸೆದುಕೊಂಡಿದೆ. ಹಾಗಂತ ಬೆನ್ನುಬೀಳುವ ದೆವ್ವ, ಪ್ರೇತಕಾಟ, ರೆಗ್ಯುಲರ್ ಎನ್ನಿಸುವ ಭಯಾನಕ ದೃಶ್ಯಗಳು ಯಾವುವೂ ಇಲ್ಲಿರೋದಿಲ್ಲ. ಬದಲಿಗೆ, ಬದುಕಿನ ತಳಮಳಗಳು, ಹೆತ್ತವಳ ಸಂಕಟ, ಪ್ರೀತಿಯ ಉತ್ಕಟತೆಗಳೆಲ್ಲಾ ಇಲ್ಲಿ ಪಾತ್ರಗಳಾಗಿ ಹೊರಹೊಮ್ಮಲಿವೆ.
11:02 AM (IST) Jul 22
10:35 AM (IST) Jul 22
10:17 AM (IST) Jul 22
ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯಲ್ಲಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕಾಗಿ ನಡೆಸಲು ಬಂದಿದ್ದ ಭೂ ಸರ್ವೇ ಕಾರ್ಯವನ್ನು ಸ್ಥಳೀಯ ರೈತರು ತಡೆದು ನಿಲ್ಲಿಸಿದ್ದಾರೆ. ಯಾವುದೇ ಪೂರ್ವ ಮಾಹಿತಿ ನೀಡದೆ ರಹಸ್ಯವಾಗಿ ಸರ್ವೇ ನಡೆಸಲು ಬಂದ ಸಿಬ್ಬಂದಿಯನ್ನು ಮುತ್ತಿಗೆ ಹಾಕಿ, ತೀವ್ರ ವಿರೋಧ ವ್ಯಕ್ತಪಡಿಸಿ ವಾಪಸ್ ಕಳುಹಿಸಿದ್ದಾರೆ.
09:01 AM (IST) Jul 22
08:20 AM (IST) Jul 22
08:01 AM (IST) Jul 22
08:00 AM (IST) Jul 22
ಯಾವ ಪಕ್ಷದ ಸರ್ಕಾರ ಬಂದರೂ ಕನ್ನಡದ ಪರ ನಿಲ್ಲುವುದಿಲ್ಲ ಎಂದು ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ 'ಕನ್ನಡ ಚಂದ್ರ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡದ ಕೆಲಸಗಳು ತಾರ್ಕಿಕ ಅಂತ್ಯ ಕಾಣುತ್ತಿಲ್ಲ ಎಂದು ಬೇಸರ.
07:47 AM (IST) Jul 22
07:38 AM (IST) Jul 22
07:28 AM (IST) Jul 22
ಬೀದರ್ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿ ನರಸಿಂಗ್ ಮಾಧವ್ ಶಿಂಧೆ, ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ 'ವಿಕ್ರಮ್-1' ಉಡಾವಣಾ ವಾಹಕ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಉಡಾವಣಾ ವಾಹಕದ ನಾಲ್ಕನೇ ಹಂತದ ವಿನ್ಯಾಸ ಮತ್ತು ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.