LIVE NOW
Published : Jul 22, 2026, 07:08 AM ISTUpdated : Jul 22, 2026, 01:36 PM IST

Karnataka News Live: Viral News - ಭವ್ಯಾ ಗೌಡ-ಚೇತನ್ ಗೌಡ ಫೋಟೋಶೂಟ್ ಭಾರೀ ವೈರಲ್.. 'ಮೋಸದ ಮೇಲೆ ಮೋಸ' ಎಂದಿದ್ದ ರೈತ ಈಗ ನಾಯಕ!

ಸಾರಾಂಶ

ಹಾಸನ: ಕೆಲವು ಬಾರಿ ಕೆಲ ಸಮಸ್ಯೆಗಳನ್ನು ಹಣದ ಆಸೆಯಿಂದ ಉದ್ಭವ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ವಿದ್ಯಾರ್ಥಿಗಳ ದಂಗೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಸಂದರ್ಭಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ, ಆದರೆ ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಈ ಮಟ್ಟದಲ್ಲಿ ಅಸಮಾಧಾನ ವ್ಯಕ್ತಪಡಿಸಿ, ದುರುಪಯೋಗ ಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾವುದೋ ಕಾಣದ ಶಕ್ತಿಗಳು ಇದರಲ್ಲಿ ಸೇರಿವೆ. ನಮ್ಮ ದೇಶದ ಅಭಿವೃದ್ಧಿ ಸಹಿಸಲಾರದೆ ಈ ತರಹ ಅವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.

ನಮ್ಮ ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳಲ್ಲಿ ದೇಶದ ಭದ್ರತೆಯನ್ನು ಅಸ್ಥಿರಗೊಳಿಸಲು ಹಲವಾರು ಕಾಣದ ಕೈಗಳು ಪ್ರಯತ್ನಪಡುತ್ತಿವೆ. ಆದ್ದರಿಂದ ಯುವ ಜನತೆ ತಾಳ್ಮೆಯಿಂದ ವರ್ತಿಸಬೇಕಿದೆ ಎಂದರು.

01:36 PM (IST) Jul 22

Viral News - ಭವ್ಯಾ ಗೌಡ-ಚೇತನ್ ಗೌಡ ಫೋಟೋಶೂಟ್ ಭಾರೀ ವೈರಲ್.. 'ಮೋಸದ ಮೇಲೆ ಮೋಸ' ಎಂದಿದ್ದ ರೈತ ಈಗ ನಾಯಕ!

ಯುವ ರೈತ ಚೇತನ್‌ ಗೌಡ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ದೇವಿ ಚಿತ್ರದಲ್ಲಿ ಭವ್ಯಾ ಗೌಡ ಅವರು ನಾಯಕ ಚೇತನ್‌ ಗೌಡ ಅವರಿಗೆ ನಾಯಕಿ ಆಗಿದ್ದಾರೆ. ಈ ಹೊಸ ಜೋಡಿ ಸ್ಯಾಂಡಲ್‌ವುಡ್‌ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Read Full Story

01:28 PM (IST) Jul 22

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಒತ್ತುವರಿ ಆರೋಪ, ರಾಜ್ಯ ಸರ್ಕಾರದಿಂದ ತನಿಖೆಗೆ SIT ರಚನೆ, ಸ್ವಾಗತಿಸಿದ ಸಂಸ್ಥೆ

ಬೆಂಗಳೂರಿನ ಕಗ್ಗಲಿಪುರ ಬಳಿ 'ದಿ ಆರ್ಟ್ ಆಫ್ ಲಿವಿಂಗ್' ಸಂಸ್ಥೆಯು ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದೆ ಎಂಬ ಗಂಭೀರ ಆರೋಪದ ಮೇಲೆ ರಾಜ್ಯ ಸರ್ಕಾರ 11 ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಗುತ್ತಿಗೆ ನಿಯಮ ಉಲ್ಲಂಘನೆ, ದಲಿತರ ಭೂಮಿ ಒತ್ತುವರಿ ಮತ್ತು ಸಾರ್ವಜನಿಕ ಆಸ್ತಿ ದುರ್ಬಳಕೆ ಸೇರಿದಂತೆ ಹಲವು ಆರೋಪಗಳ ಕುರಿತು ಈ ತಂಡವು ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ.
Read Full Story

12:03 PM (IST) Jul 22

Ra Ra RX - ಬೈಕ್‌ ಬೆನ್ನುಬಿದ್ದ ಯತಿರಾಜ್.. ಮದ್ದೂರಿನಲ್ಲಿ "ರಾ ರಾ ಆರೆಕ್ಸ್‌‌' ಜರ್ನಿ ಶುರು!

ಆರೆಕ್ಸ್‌ ಬೈಕಿನ ಸುತ್ತ ನಡೆಯುವ ಕಥೆಯ ಜೊತೆಗೆ ಹಾರರ್‌ ಕಥಾಹಂದರ ಕೂಡಾ ಇದರೊಟ್ಟಿಗೆ ಬೆಸೆದುಕೊಂಡಿದೆ. ಹಾಗಂತ ಬೆನ್ನುಬೀಳುವ ದೆವ್ವ, ಪ್ರೇತಕಾಟ, ರೆಗ್ಯುಲರ್‌ ಎನ್ನಿಸುವ ಭಯಾನಕ ದೃಶ್ಯಗಳು ಯಾವುವೂ ಇಲ್ಲಿರೋದಿಲ್ಲ. ಬದಲಿಗೆ, ಬದುಕಿನ ತಳಮಳಗಳು, ಹೆತ್ತವಳ ಸಂಕಟ, ಪ್ರೀತಿಯ ಉತ್ಕಟತೆಗಳೆಲ್ಲಾ ಇಲ್ಲಿ ಪಾತ್ರಗಳಾಗಿ ಹೊರಹೊಮ್ಮಲಿವೆ.

Read Full Story

11:02 AM (IST) Jul 22

ಇತಿಹಾಸ ಪುಟಗಳಲ್ಲಿ ಹೊಸ ದಾಖಲೆ - ಮಂಡ್ಯದಲ್ಲಿ ಪತ್ತೆಯಾಯ್ತು ಹೊಯ್ಸಳರ ಕಾಲದ ದೇಶದ ಮೊದಲ '3D' ವೀರಗಲ್ಲು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ಭಾರತೀಯ ಪುರಾತತ್ತ್ವ ಸರ್ವೇಕ್ಷಣಾ ಇಲಾಖೆಯು ಅಪರೂಪದ 3ಡಿ ಸ್ವರೂಪದ ವೀರಗಲ್ಲನ್ನು ಪತ್ತೆಹಚ್ಚಿದೆ. ಸುಮಾರು ಸಾವಿರ ವರ್ಷಗಳಷ್ಟು ಹಳೆಯದಾದ, ಹೊಯ್ಸಳರ ಕಾಲದ್ದೆಂದು ಅಂದಾಜಿಸಲಾದ ಈ ಶಿಲ್ಪವು, ವಿಭಿನ್ನ ಕೋನಗಳಿಂದ ನೋಡಿದಾಗ ಬೇರೆ ಬೇರೆ ದೃಶ್ಯಗಳನ್ನು ಪ್ರದರ್ಶಿಸುವ ವಿಶಿಷ್ಟ ತಂತ್ರಜ್ಞಾನವನ್ನು ಹೊಂದಿದೆ.
Read Full Story

10:35 AM (IST) Jul 22

ಫಿಫಾ ವಿಶ್ವ ವಿಜೇತ ಸ್ಪೇನ್‌ ಟೀಂಗೆ ತವರಿನಲ್ಲಿ 20 ಲಕ್ಷ ಜನರ ಸ್ವಾಗತ! ಮ್ಯಾಡ್ರಿಡ್‌ನಲ್ಲಿ ಸಂಭ್ರಮದ ಮಹಾಪೂರ

ಫುಟ್ಬಾಲ್‌ ವಿಶ್ವ ಚಾಂಪಿಯನ್‌ ಆದ ಸ್ಪೇನ್‌ ತಂಡಕ್ಕೆ ತವರಿನ ಮ್ಯಾಡ್ರಿಡ್‌ನಲ್ಲಿ ಲಕ್ಷಾಂತರ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಇನ್ನೊಂದೆಡೆ, ಫೈನಲ್‌ನಲ್ಲಿ ಸ್ಪೇನ್‌ ವಿರುದ್ಧ ಸೋತ ಅರ್ಜೆಂಟೀನಾ ತಂಡದ ಆಟಗಾರರ ದುರ್ವರ್ತನೆಗೆ ಸಂಬಂಧಿಸಿದಂತೆ ಫಿಫಾ ತನಿಖೆ ಆರಂಭಿಸಿದೆ.
Read Full Story

10:17 AM (IST) Jul 22

Bengaluru - 2ನೇ ಏರ್‌ಪೋರ್ಟ್ ಸರ್ವೇಗೆ ಬಂದ ಅಧಿಕಾರಿಗಳನ್ನು ವಾಪಸ್ ಕಳುಹಿಸಿದ ರೈತರು

ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯಲ್ಲಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕಾಗಿ ನಡೆಸಲು ಬಂದಿದ್ದ ಭೂ ಸರ್ವೇ ಕಾರ್ಯವನ್ನು ಸ್ಥಳೀಯ ರೈತರು ತಡೆದು ನಿಲ್ಲಿಸಿದ್ದಾರೆ. ಯಾವುದೇ ಪೂರ್ವ ಮಾಹಿತಿ ನೀಡದೆ ರಹಸ್ಯವಾಗಿ ಸರ್ವೇ ನಡೆಸಲು ಬಂದ ಸಿಬ್ಬಂದಿಯನ್ನು ಮುತ್ತಿಗೆ ಹಾಕಿ, ತೀವ್ರ ವಿರೋಧ ವ್ಯಕ್ತಪಡಿಸಿ ವಾಪಸ್ ಕಳುಹಿಸಿದ್ದಾರೆ.

Read Full Story

09:01 AM (IST) Jul 22

ಆಲಮಟ್ಟಿ-ಇಳಕಲ್ಲ-ಕುಷ್ಟಗಿ ನೂತನ ರೈಲು ಮಾರ್ಗ ಮಂಜೂರಾತಿಗೆ ಸಚಿವ ವಿ ಸೋಮಣ್ಣ ಭರವಸೆ

ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆಲಮಟ್ಟಿ-ಇಳಕಲ್ಲ-ಕುಷ್ಟಗಿ ನೂತನ ರೈಲು ಮಾರ್ಗದ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಶಾಸಕ ದೊಡ್ಡನಗೌಡ ಪಾಟೀಲರ ನೇತೃತ್ವದಲ್ಲಿ ಹೋರಾಟ ಸಮಿತಿಯು ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಿದ್ದು, ಸಚಿವರು ಶೀಘ್ರ ಮಂಜೂರಾತಿಗೆ ಭರವಸೆ ನೀಡಿದ್ದಾರೆ.
Read Full Story

08:20 AM (IST) Jul 22

Alamatti Dam - ನೀರಾವರಿಗೆ ಹರಿಯುತ್ತಾ ಕೃಷ್ಣಾ ನೀರು? ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್‌ಗೆ ಹೆಚ್ಚಿಸಲು ಭೂಸ್ವಾಧೀನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹80 ಸಾವಿರ ಕೋಟಿ ಅಗತ್ಯವಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದಕ್ಕಾಗಿ 1.33 ಲಕ್ಷ ಎಕರೆ ಜಮೀನು ವಶಪಡಿಸಿಕೊಳ್ಳಬೇಕಿದ್ದು, ಮುಂದಿನ ಮೂರು ವರ್ಷಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
Read Full Story

08:01 AM (IST) Jul 22

ಸಂಗಾತಿಯಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಡಿವೋರ್ಸ್ ಕೊಡಿ ಎಂದವನಿಗೆ ಕೋರ್ಟ್ ಹೇಳಿದ್ದೇನು?

ಸಂಗಾತಿಯಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಎಂಬ ಕಾರಣ ನೀಡಿ ವಿಚ್ಛೇದನ ಕೋರಿದ್ದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹಿಂದೂ ಕಾನೂನಿನಡಿಯಲ್ಲಿ ಮದುವೆಯು ಒಂದು ಸಂಸ್ಕಾರವೇ ಹೊರತು ಒಪ್ಪಂದವಲ್ಲ, ಹಾಗಾಗಿ ಈ ಕಾರಣಕ್ಕೆ ವಿಚ್ಛೇದನ ನೀಡಲಾಗದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story

08:00 AM (IST) Jul 22

TS Nagabharana - ರಾಜ್ಯದಲ್ಲಿ ಯಾವ ಸರ್ಕಾರವೂ ಕನ್ನಡದ ಪರವಿಲ್ಲ - ಟಿ.ಎಸ್. ನಾಗಾಭರಣ ಬೇಸರ

ಯಾವ ಪಕ್ಷದ ಸರ್ಕಾರ ಬಂದರೂ ಕನ್ನಡದ ಪರ ನಿಲ್ಲುವುದಿಲ್ಲ ಎಂದು ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ 'ಕನ್ನಡ ಚಂದ್ರ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡದ ಕೆಲಸಗಳು ತಾರ್ಕಿಕ ಅಂತ್ಯ ಕಾಣುತ್ತಿಲ್ಲ ಎಂದು ಬೇಸರ.

Read Full Story

07:47 AM (IST) Jul 22

ಕಲಬುರಗಿ ದಾಹಕ್ಕೆ ಮುಕ್ತಿ - ನಾರಾಯಣಪುರ ಜಲಾಶಯದಿಂದ ಭೀಮೆಗೆ ಹರಿದ 1.20 TMC ಜೀವಜಲ

ಕಲಬುರಗಿ ಜಿಲ್ಲೆಯ ಮಳೆ ಕೊರತೆ ಪೀಡಿತ ತಾಲೂಕುಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು, ಸರ್ಕಾರವು ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1.20 ಟಿ.ಎಂ.ಸಿ ನೀರು ಬಿಡುಗಡೆಗೆ ಆದೇಶಿಸಿದೆ. ಈ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಬಳಸಲು, ಪೊಲೀಸ್ ಭದ್ರತೆಯೊಂದಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
Read Full Story

07:38 AM (IST) Jul 22

2ನೇ ಏರ್‌ಪೋರ್ಟ್ ತುಮಕೂರು ಜಿಲ್ಲೆಯಲ್ಲಾಗಲಿ - 3 ತಾಲೂಕುಗಳಲ್ಲಿ ನಿರ್ಮಾಣಕ್ಕೆ ಪ್ರಸ್ತಾವನೆ

ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಮಾಜಿ ಸಂಸದ ಜಿ.ಎಸ್. ಬಸವರಾಜು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಯೋಜನೆಯು ಕೈಗಾರಿಕೆಗಳು ಮತ್ತು ಉತ್ತರ ಕರ್ನಾಟಕಕ್ಕೆ ಅನುಕೂಲಕರವಾಗಿದ್ದು, ಇದಕ್ಕೆ ಹಲವು ರಾಜಕೀಯ ನಾಯಕರು ಮತ್ತು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ ಎಂದು ಅವರು ತಿಳಿಸಿದ್ದಾರೆ.
Read Full Story

07:28 AM (IST) Jul 22

ವಿಕ್ರಮ್‌ 1 ಉಡಾವಣೆ - ಬೀದರ್‌ನ ಎಂಜಿನಿಯರಿಂಗ್‌ ವಿದ್ಯಾರ್ಥಿ ನರಸಿಂಗ್‌ ಶಿಂಧೆ ಸಾಧನೆ

ಬೀದರ್‌ನ ಗುರುನಾನಕ ದೇವ್‌ ಎಂಜಿನಿಯರಿಂಗ್‌ ಕಾಲೇಜಿನ ಹಳೆಯ ವಿದ್ಯಾರ್ಥಿ ನರಸಿಂಗ್‌ ಮಾಧವ್‌ ಶಿಂಧೆ, ಸ್ಕೈರೂಟ್‌ ಏರೋಸ್ಪೇಸ್‌ ಅಭಿವೃದ್ಧಿಪಡಿಸಿದ 'ವಿಕ್ರಮ್-1' ಉಡಾವಣಾ ವಾಹಕ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಉಡಾವಣಾ ವಾಹಕದ ನಾಲ್ಕನೇ ಹಂತದ ವಿನ್ಯಾಸ ಮತ್ತು ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.

Read Full Story

More Trending News