LIVE NOW
Published : Mar 22, 2026, 06:54 AM ISTUpdated : Mar 22, 2026, 09:19 AM IST

Karnataka News Live: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮತ್ತೊಂದು ಕಾಮಕಾಂಡ, ಶಿಕ್ಷಕಿ ಮನೆಗೆ ಹೋಗಿ ಅತ್ಯಾ*ರ ಕೇಸ್ ಬೆಳಕಿಗೆ

ಸಾರಾಂಶ

ಕರ್ನಾಟಕ ವಿಧಾನಸಭೆ ಉಪ ಚುನಾವಣೆ ಸಮರ ಕಾವೇರಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದರ ನಡುವೆ ಹಣ, ಮದ್ಯ, ಆಮಿಷಗಳು ಜೋರಾಗುತ್ತಿದೆ. ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ಹಣ ಸೀಝ್ ಮಾಡಲಾಗಿದೆ. ಮಾರುತಿ ಎರ್ಟಿಗಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ. ಚುನಾವಣೆ ಕದನ ಸೇರಿದಂತೆ ರಾಜ್ಯದ ಇಂದಿನ ಕ್ಷಣ ಕ್ಷಣ ದ ಸುದ್ದಿ ಅಪ್‌ಡೇಟ್ ಇಲ್ಲಿದೆ.

Moodabidri Inspector Sandesh FIR

09:19 AM (IST) Mar 22

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮತ್ತೊಂದು ಕಾಮಕಾಂಡ, ಶಿಕ್ಷಕಿ ಮನೆಗೆ ಹೋಗಿ ಅತ್ಯಾ*ರ ಕೇಸ್ ಬೆಳಕಿಗೆ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮತ್ತೊಂದು ಕಾಮಕಾಂಡ, ಶಿಕ್ಷಕಿ ಮನೆಗೆ ಹೋಗಿ ಅತ್ಯಾ*ರ ಕೇಸ್ ಬೆಳಕಿಗೆ ಬಂದಿದೆ. 2018 ರಿಂದ 2023ರ ವರೆಗೆ ಶಿಕ್ಷಕಿ ಮನೆಗೆ ಹೋಗಿ ಅತ್ಯಾ*ರ ಎಸಗಿದ್ದಾರೆ ಎಂದು ಸ್ವತಃ ಶಿಕ್ಷಕಿ ದೂರು ದಾಖಲಿಸಿದ್ದಾರೆ.

Read Full Story

09:11 AM (IST) Mar 22

Jackfruit Tree - ಶಿವಗಿರಿ ಮಠದಲ್ಲಿರುವ 122 ವರ್ಷದ ಹಲಸಿನ ಮರಕ್ಕೆ ಚಿಕಿತ್ಸೆ, ಗುರುವಿನ ಸ್ಪರ್ಶ ಕ್ಕೆ ಮತ್ತೆ ಚಿಗುರಿದೆ!

ivagiri Mutt Jackfruit Tree: ತಿರುವನಂತಪುರಂನ ಶಿವಗಿರಿ ಮಠದಲ್ಲಿರುವ 122 ವರ್ಷದ ಹಳೆಯ ಹಲಸಿನ ಮರಕ್ಕೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀ ನಾರಾಯಣ ಗುರುಗಳ ಸ್ಪರ್ಶ ಪಡೆದ ಈ ಮರವು 50 ದಿನಗಳ ಚಿಕಿತ್ಸೆಯ ನಂತರ ಮತ್ತೆ ಆರೋಗ್ಯದಿಂದ ಕಂಗೊಳಿಸುತ್ತಿದೆ.

Read Full Story

08:56 AM (IST) Mar 22

ನ್ಯಾಯಾಂಗದ ತೀರ್ಪು ಮನುಷ್ಯನ ಬುದ್ಧಿಯೇ ನಿರ್ಧರಿಸಬೇಕು - ಎಐ ಬಳಕೆ ಬಗ್ಗೆ ಸಿಜೆಐ ಎಚ್ಚರಿಕೆ

ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಅಳವಡಿಕೆಯು ವ್ಯವಸ್ಥೆಯನ್ನು ಸದೃಢಗೊಳಿಸಬೇಕೇ ಹೊರತು, ತೀರ್ಪು ನೀಡುವ ಪ್ರಕ್ರಿಯೆಯನ್ನು ಅತಿಕ್ರಮಿಸಬಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ್‌ ಎಚ್ಚರಿಸಿದರು. 

Read Full Story

08:47 AM (IST) Mar 22

ಮಾಗಡಿ ರಸ್ತೆ ಟೋಟಲ್ ಎನರ್ಜಿ ಗ್ಯಾಸ್ ಸ್ಟೇಷನ್ ಬಂದ್, ಕಂಗಾಲಾದ ಆಟೋ ಚಾಲಕರು

ಮಾಗಡಿ ರಸ್ತೆ ಟೋಟಲ್ ಎನರ್ಜಿ ಗ್ಯಾಸ್ ಸ್ಟೇಷನ್ ಬಂದ್, ಕಂಗಾಲಾದ ಆಟೋ ಚಾಲಕರು, ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಪೂರೈಕೆ ಕೊರತೆಯಿಂದ ಇದೀಗ ಆಟೋ ಚಾಲಕರು, ವಾಹನ ಸವಾರರು ಸಿಎನ್‌ಜಿ ಸಗದೇ ಕಂಗಾಲಾಗಿದ್ದಾರೆ.

Read Full Story

08:11 AM (IST) Mar 22

ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ

ದೇಶದಲ್ಲಿ ಬೇಸಿಗೆ ನಿಧಾನಕ್ಕೆ ಕಾಲಿಟ್ಟಿರುವ ನಡುವೆ ಹಲವು ರಾಜ್ಯಗಳಲ್ಲಿ ಮಾ.24ರ ತನಕ ಗುಡುಗು, ಆಲಿಕಲ್ಲು ಸಹಿತ ಮಹಿಳೆ ಸಂಭವಿಸಬಹುದು. ಜತೆಗೆ ಪ್ರಬಲ ಬಿರುಗಾಳಿಯೂ ಬೀಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read Full Story

07:59 AM (IST) Mar 22

ಮುಧೋಳ - ಫಸಲ್ ಬಿಮಾ ಯೋಜನೆಯಡಿ ₹30 ಕೋಟಿ ವಂಚಿಸಿದ್ದ ಗ್ಯಾಂಗ್ ಅರೆಸ್ಟ್!

ಬಾಗಲಕೋಟೆಯ ಮುಧೋಳ ತಾಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಸುಮಾರು ₹30 ಕೋಟಿಗೂ ಅಧಿಕ ವಂಚನೆ ನಡೆದಿದೆ. ಏಜೆಂಟರು, ವಿಮಾ ಕಂಪನಿ ಹಾಗೂ ಇಲಾಖೆ ನೌಕರರು ಸೇರಿ ಖೊಟ್ಟಿ ದಾಖಲೆ ಸೃಷ್ಟಿಸಿ ಈ ಹಣ ಪಡೆದಿದ್ದು, ವಿಶೇಷ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.

Read Full Story

07:39 AM (IST) Mar 22

ಡಿಕೆಶಿ, ಪ್ರಿಯಾಂಕ್ ಖರ್ಗೆ ರೀತಿ ನಮಗೂ ಮಂತ್ರಿ ಪದವಿ ಕೊಡಿ - ಮಂತ್ರಿಗಿರಿಗಾಗಿ ಇಕ್ಬಾಲ್ ಪಟ್ಟು!

ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರು, ಮೊದಲ ಹಾಗೂ ಎರಡನೇ ಬಾರಿ ಗೆದ್ದ ಸುಮಾರು 55 ಶಾಸಕರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.

Read Full Story

07:39 AM (IST) Mar 22

ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಎಸ್‌ ಡಿಕ್ಕಿಯಾಗಿ ಮೂವರು ಸಾವು

ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಎಸ್‌ ಡಿಕ್ಕಿಯಾಗಿ ಮೂವರು ಸಾವು, ಬೆಂಗಳೂರಿನ ಹೊರವಲಯದ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಪಂಚರ್ ಆಗಿ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

 

Read Full Story

07:21 AM (IST) Mar 22

ಯುಗಾದಿ ಹಬ್ಬಕ್ಕೆ ಊರಿಗೆ ಹೋಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕಾರಣ ಯುಗಾದಿ ಹಬ್ಬಕ್ಕೆ ಮನೆಗೆ ಹೋಗಲಾಗದ ವಸತಿ ಶಾಲೆಯ ವಿದ್ಯಾರ್ಥಿಗಳ ಬೇಸರವನ್ನು ಶಿಕ್ಷಕರು ದೂರಾಗಿಸಿದ್ದಾರೆ. ಕಡೂರಿನ ಜೋಡಿಹೋಚಿಹಳ್ಳಿ ಮೊರಾರ್ಜಿ ಶಾಲೆಯ ಶಿಕ್ಷಕರು  ತಾವೇ ಅಭ್ಯಂಜನ ಸ್ನಾನ ಮಾಡಿಸಿ, ಹಬ್ಬದೂಟ ಬಡಿಸಿ ಮನೆಯ ವಾತಾವರಣ ನಿರ್ಮಿಸಿ ಮಾದರಿಯಾಗಿದ್ದಾರೆ.

Read Full Story

06:56 AM (IST) Mar 22

ತೀವ್ರಗೊಂಡ ತಪಾಸಣೆ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಪೊಲೀಸರ ಕಾರ್ಯಾಚರಣೆ ತೀವ್ರಗೊಂಡಿದೆ. ಪ್ರತಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ KA36 P 3991 ನಂಬರ್ ಪ್ಲೇಟ್ ಹೊಂದಿರುವ ಎರ್ಟಿಗಾ ಕಾರಿನಲ್ಲಿ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆಯಲಾಗಿದೆ.


More Trending News