ಮೈಸೂರು: ರಾಜ್ಯ ಸರ್ಕಾರದಿಂದ ಆಚರಿಸಲ್ಪಡುವ ನಾಡಹಬ್ಬವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಸರಾ ಹಿನ್ನೆಲೆಯಲ್ಲಿ ಇಡೀ ಸಾಂಸ್ಕೃತಿಕ ನಗರಿ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಗಳಿಂದ ಜಗಮಗಿಸುತ್ತಿದೆ. ಸಾಮಾನ್ಯವಾಗಿ ಹತ್ತು ದಿನ ನಡೆಯುವ ದಸರಾ, ಈ ಬಾರಿ ಹನ್ನೊಂದು ದಿನಗಳು ನಡೆಯುತ್ತಿರುವುದು ವಿಶೇಷ. ಮೈಸೂರು ಜಿಲ್ಲೆಯವರೇ ಆದ ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ. ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ. ದಸರಾ ಆಚರಣೆಗಾಗಿ ಸಿಎಂ 40 ಕೋಟಿ ರು.ಅನುದಾನ ನೀಡಿದ್ದಾರೆ.
10:13 PM (IST) Sep 22
ಯೂಟ್ಯೂಬರ್ ಮುಕಳೆಪ್ಪ ಮತ್ತೊಂದು ಸಂಕಷ್ಟ, ಸುಳ್ಳು ದಾಖಲೆ ನೀಡಿ ಮದುವೆ ಆರೋಪ, ಸಬ್ ರಿಜಿಸ್ಟರ್ ಕಚೇರಿಗೆ ಹಿಂದೂಪರ ಸಂಘಟನೆಗಳು ಮುತ್ತಿಗೆ ಹಾಕಿದೆ. ಯುವತಿ ತಾಯಿ ಗಂಭೀರ ಆರೋಪ ಮಾಡಿದ್ದಾರೆ.
09:39 PM (IST) Sep 22
ಯೂಟ್ಯೂಬರ್ ಮುಕುಳೆಪ್ಪ ಅವರ ವಿವಾಹ ವಿವಾದವು ಹೊಸ ತಿರುವು ಪಡೆದಿದೆ. ನಿಯಮಬಾಹಿರ ವಿವಾಹ ನೋಂದಣಿ ಆರೋಪದ ಮೇಲೆ ಮುಂಡಗೋಡ ಸಬ್ ರಿಜಿಸ್ಟರ್ ಕಚೇರಿಗೆ ಮುತ್ತಿಗೆ ಹಾಕಲಾಗಿದ್ದು, ಇದೀಗ ಪತ್ನಿ ಗಾಯತ್ರಿ ಠಾಣೆಗೆ ಹಾಜರಾಗಿ ತಾನು ಸ್ವಇಚ್ಛೆಯಿಂದ ಮದುವೆಯಾಗಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.
09:22 PM (IST) Sep 22
ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕದೋಷ, ರೈಲು ಇಲ್ಲದೆ ಪ್ರಯಾಣಿಕರ ಪರದಾಟ, ಸಂಜೆ 7 ಗಂಟೆಯಿಂದ ಸಮಸ್ಯೆ ಎದುರಾಗಿದೆ. ಬಿಎಂಆರ್ಸಿಎಲ್ ಸಮಸ್ಯೆ ಖಚಿತಪಡಿಸಿದ್ದು, ಪ್ರಯಾಣಿಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿದೆ.
07:59 PM (IST) Sep 22
ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ತನಿಖೆ ಕುರಿತು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಡಿಜಿಸಿಎಗೆ ನೋಟಿಸ್ ಜಾರಿ ಮಾಡಿದೆ. ಪೈಲಟ್ಗಳ ದೋಷವೇ ಕಾರಣ ಎಂದು ಹೇಳಿದ್ದ AAIBಯ ಪ್ರಾಥಮಿಕ ವರದಿಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ನ್ಯಾಯಯುತ ತನಿಖೆಯ ಅಗತ್ಯವನ್ನು ಒತ್ತಿಹೇಳಿದೆ.
07:49 PM (IST) Sep 22
ದೃಷ್ಟಿಬೊಟ್ಟು ಧಾರಾವಾಹಿಯಲ್ಲಿ ನಾಯಕಿ ದೃಷ್ಟಿಯ ನಿಜಬಣ್ಣ ಬಯಲಾಗಿದ್ದು, ಸೀರಿಯಲ್ ಅಂತ್ಯದ ವದಂತಿಗಳಿವೆ. ಈ ನಡುವೆ, ನಟಿ ಅರ್ಪಿತಾ ಮೋಹಿತೆ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಕಾಣಿಸಿಕೊಂಡು ಕೆಲವೊಂದು ವಿಷಯದ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿದ್ದೇನು?
07:15 PM (IST) Sep 22
ಫೋನ್ ಡಿಸ್ಕನೆಕ್ಟ್ ಮಾಡ್ತೇನೆ, ಸಂಸದೆ ಸುಧಾಮೂರ್ತಿಗೆ ಸೈಬರ್ ವಂಚಕನ ಬೆದರಿಕೆ, ಘಟನೆ ನಡೆದಿದೆ. ನಿಮ್ಮ ಫೋನ್ ನಂಬರ್ ಮೂಲಕ ಇತರರಿಗೆ ವಿಡಿಯೋಗಳು ಕಳುಹಿಸುತ್ತೇನೆ. ತಕ್ಷಣವೇ ನಿಮ್ಮ ಫೋನ್ ಡಿಸ್ಕನೆಕ್ಟ್ ಮಾಡುತ್ತೇವೆ ಎಂದು ಬೆದೆರಿಕೆ ಹಾಕಲಾಗಿದೆ
06:45 PM (IST) Sep 22
06:43 PM (IST) Sep 22
ಬಿಗ್ ಬಾಸ್ ಕಾರ್ಯಕ್ರಮದ ಒಂದು ಸೀಸನ್ಗೆ ಕೋಟಿಗಟ್ಟಲೆ ವೆಚ್ಚವಾಗುತ್ತದೆ. ಮನೆ ನಿರ್ಮಾಣಕ್ಕೆ ₹3-3.5 ಕೋಟಿ, ನಿರೂಪಕರ ಸಂಭಾವನೆಗೆ ₹1-5 ಕೋಟಿ ಖರ್ಚಾದರೆ, ವಿಜೇತರಿಗೆ ನೀಡುವ ₹50 ಲಕ್ಷ ಬಹುಮಾನವು ಈ ಒಟ್ಟು ವೆಚ್ಚಕ್ಕೆ ಹೋಲಿಸಿದರೆ ಅತ್ಯಲ್ಪ. ತೆರಿಗೆ ಕಡಿತದ ನಂತರ ವಿಜೇತರ ಕೈ ಸೇರುವುದು ಕಡಿಮೆ ಮೊತ್ತ.
06:40 PM (IST) Sep 22
06:31 PM (IST) Sep 22
06:00 PM (IST) Sep 22
ಬೆಳಗಾವಿಯ ಸದಾಶಿವ ನಗರದ ಸರ್ಕಾರಿ ವಸತಿ ನಿಲಯದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಸಮಿತ್ರಾ ಗೋಕಾಕ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ವಿದ್ಯಾರ್ಥಿನಿ ನಿರಂತರವಾಗಿ ಫೋನ್ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.
05:25 PM (IST) Sep 22
ಜೀ ಕನ್ನಡದ ಜನಪ್ರಿಯ 'ಕರ್ಣ' ಧಾರಾವಾಹಿ ತಂಡವು ನಟ ಕಿರಣ್ ರಾಜ್ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಕಿಟ್ ವಿತರಿಸಿದೆ. ಈ ಧಾರಾವಾಹಿಯಲ್ಲಿ ವೈದ್ಯನ ಪಾತ್ರಕ್ಕಾಗಿ ಕಿರಣ್ ರಾಜ್ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ, ಪ್ರಸವದ ಕುರಿತು ಅಧ್ಯಯನ ನಡೆಸಿದ್ದರು.
05:03 PM (IST) Sep 22
ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್ ನವೆಂಬರ್ನಲ್ಲಿ ಸಂಪುಟ ಪುನರ್ ರಚನೆಯಾಗುವ ಸುಳಿವು ನೀಡಿದ್ದು, ಶೇ.50ರಷ್ಟು ಸಚಿವರು ಬದಲಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಇದೇ ವೇಳೆ, ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮಿತ್ ಶಾ ಭೇಟಿಯ ವದಂತಿಯನ್ನು ತಳ್ಳಿಹಾಕಿದ್ದಾರೆ.
05:02 PM (IST) Sep 22
04:45 PM (IST) Sep 22
Husband Kills Wife in Front of Daughter ಬೆಂಗಳೂರಿನ ಸುಂಕದಕಟ್ಟೆಯಲ್ಲಿ, ಪತ್ನಿಯ ಮೂರನೇ ಅಕ್ರಮ ಸಂಬಂಧದ ಮೇಲೆ ಶಂಕೆಗೊಂಡ ಎರಡನೇ ಪತಿ, ಆಕೆಯ ಮಗಳ ಮುಂದೆಯೇ 11 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.
04:04 PM (IST) Sep 22
ನಟ ವಿನೋದ್ ರಾಜ್ ಅವರು ತಮ್ಮ ತಾಯಿ, ಖ್ಯಾತ ನಟಿ ಡಾ. ಎಂ. ಲೀಲಾವತಿ ಅವರ ಸ್ಮರಣಾರ್ಥವಾಗಿ ಬಾಗಲಕೋಟೆಯ ಬನಹಟ್ಟಿಯ ಮಹಾಂತ ಮಂದಾರ ಮಠಕ್ಕೆ ಕಾರೊಂದನ್ನು ದಾನ ಮಾಡಿದ್ದಾರೆ. ಇದನ್ನು ಮಕ್ಕಳಿಗೆ ದಾಸೋಹಕ್ಕೆ ಬಳಸುವುದಕ್ಕೆ ಮನವಿ ಮಾಡಿದ್ದಾರೆ.
03:51 PM (IST) Sep 22
Dadasaheb Phalke Winner Mohanlals 5 Classic Films Remade Successfully in Kannada ಮಲಯಾಳಂ ನಟ ಮೋಹನ್ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಅವರ ಅನೇಕ ಕ್ಲಾಸಿಕ್ ಚಿತ್ರಗಳು ಕನ್ನಡದಲ್ಲಿ ರಿಮೇಕ್ ಆಗಿ ಭಾರಿ ಯಶಸ್ಸು ಕಂಡಿವೆ.
03:18 PM (IST) Sep 22
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪಾಟ್ನಾದಲ್ಲಿ ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಇಬ್ಬರೂ ನಾಯಕರು ಭಾಗವಹಿಸಲಿದ್ದು, ಈ ಪ್ರವಾಸವು ರಾಷ್ಟ್ರೀಯ ರಾಜಕೀಯದಲ್ಲಿ ಕರ್ನಾಟಕದ ನಾಯಕರ ಪಾತ್ರ ಸೂಚಿಸುತ್ತಿದೆ.
03:00 PM (IST) Sep 22
Suraj Chavan Marriage: ಬಿಗ್ಬಾಸ್ ಮರಾಠಿ ಸೀಸನ್ 5ರ ವಿನ್ನರ್ ಸೂರಜ್ ಚವಾಣ್ ಅವರ ಮದುವೆ ವಿಚಾರವು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಲ್ಲಿದೆ. ಅವರ ಬಿಗ್ಬಾಸ್ ಸೋದರಿ ಅಂಕಿತಾ ವಾಲಾವಾಲ್ಕರ್ ಅವರ ಪೋಸ್ಟ್ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದೆ.
02:43 PM (IST) Sep 22
ಕಾಂತಾರ: ಚಾಪ್ಟರ್ 1 ಟ್ರೇಲರ್, ದಂತಕಥೆಯ ಮೂಲ ಅನಾವರಣಗೊಳಿಸುತ್ತದೆ. ಕಾಡಿನ ನಾಯಕ ಮತ್ತು ರಾಣಿಯ ಪ್ರೀತಿಯಿಂದ ರಾಜನ ವಿರುದ್ಧ ಯುದ್ಧ ಪ್ರಾರಂಭ. ಕಾಂತಾರ ಚಾಪ್ಟರ್ 1 ಟ್ರೇಲರ್ ನೋಡಿದವರಿಗೆ ಈಗಲೇ ಟಿಕೆಟ್ ಬುಕಿಂಗ್ ಮಾಡಬೇಕು ಎನ್ನುವಷ್ಟು ಕುತೂಹಲ ಸೃಷ್ಟಿಸಿದೆ.
02:33 PM (IST) Sep 22
02:21 PM (IST) Sep 22
01:03 PM (IST) Sep 22
ಬಹುನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಇದು ಏಳು ಭಾಷೆಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿದ್ದಾರೆ.
12:47 PM (IST) Sep 22
ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಮಹಿಳೆ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರು. ಬಾನು ಮುಷ್ತಾಕ್ ಅವರ ಸಾಧನೆ ಮತ್ತು ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.
12:40 PM (IST) Sep 22
Hijack Attempt on Bengaluru-Varanasi Air India ಬೆಂಗಳೂರಿನಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ, ಪ್ರಯಾಣಿಕನೊಬ್ಬ ಕಾಕ್ಪಿಟ್ ಬಾಗಿಲು ತೆರೆಯಲು ಯತ್ನಿಸಿ ಭದ್ರತಾ ಆತಂಕ ಸೃಷ್ಟಿಸಿದ್ದಾನೆ. ಹೈಜಾಕ್ ಭಯದಿಂದ ಕ್ಯಾಪ್ಟನ್ ಬಾಗಿಲು ತೆರೆಯಲು ನಿರಾಕರಿಸಿದ್ದಾನೆ.
12:22 PM (IST) Sep 22
ದಸರಾ ಕಾರ್ಯಕ್ರಮದಿಂದ ಎದ್ದು ಹೋಗುತ್ತಿದ್ದ ಜನರ ಮೇಲೆ ಸಿಎಂ ಸಿದ್ದರಾಮಯ್ಯ ಸಿಟ್ಟು ಪ್ರದರ್ಶಿಸಿದ್ದು, ಮನೆಯಲ್ಲಿ ಇರಬೇಕಿತ್ತು. ಯಾಕೆ ಬರ್ತಿರಾ ಇಲ್ಲಿಗೆ. ಸ್ವಲ್ಪ ಹೊತ್ತು ಕುಳಿತುಕೊಳ್ಳಲು ಆಗಲ್ವಾ ಎಂದು ರೇಗಿದ್ದಾರೆ.
12:00 PM (IST) Sep 22
ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ, ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಮುಖ ಆರೋಪಿ ಚಿನ್ನಯ್ಯನ ಬ್ಯಾಂಕ್ ಖಾತೆಗೆ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ₹3 ಲಕ್ಷ ಹಣ ವರ್ಗಾಯಿಸಿದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಹಣದ ಮೂಲವನ್ನು ಪತ್ತೆಹಚ್ಚಲು ವಿಚಾರಣೆಗೆ ಕರೆಯಲಾಗಿದೆ.
11:50 AM (IST) Sep 22
25 ವರ್ಷ ನಾನು ಸಿದ್ದರಾಮಯ್ಯ ಜೊತೆ ಇದ್ದೆ. 40 ವರ್ಷವಾದರೂ ಸಿದ್ದರಾಮಯ್ಯ ಜೊತೆ ಮಹದೇವಪ್ಪ, ವೆಂಕಟೇಶ್ ಇದ್ದಾರೆ. ಮನುಷ್ಯನಲ್ಲಿನ ರಾಕ್ಷಸಿ ಗುಣವನ್ನು ಚಾಮುಂಡಿ ತಾಯಿ ನಾಶ ಮಾಡಲಿ ಎಂದು ದಸರಾ ಉದ್ಘಾಟನೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
11:40 AM (IST) Sep 22
ನಟ ಯಶ್ ಅವರ ತಾಯಿ ನಿರ್ಮಾಣದ 'ಕೊತ್ತಲವಾಡಿ' ಚಿತ್ರದ ಸಂಭಾವನೆ ವಿವಾದ ತಾರಕಕ್ಕೇರಿದೆ. ನಟ ಮಹೇಶ್ ಗುರು ಬಳಿಕ, ಇದೀಗ ನಟಿ ಸ್ವರ್ಣ ತಮಗೆ ಪೇಮೆಂಟ್ ನೀಡಿಲ್ಲ ಮತ್ತು ತಮ್ಮ ಭವಿಷ್ಯವನ್ನೇ ಹಾಳುಮಾಡಿದ್ದಾರೆ ಎಂದು ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ವಿಡಿಯೋ ವೈರಲ್ ಆಗಿದೆ.
11:30 AM (IST) Sep 22
Minister Krishna Byre Gowda on GST Cut ದೇಶಾದ್ಯಂತ ಜಿಎಸ್ಟಿ ದರ ಇಳಿಕೆಯಾಗಿದ್ದು, ಇದು ನಾಗರಿಕರಿಗೆ ಲಾಭದಾಯಕವಾಗಿದೆ. ಆದರೆ, ಈ ಕ್ರಮದಿಂದ ಕರ್ನಾಟಕಕ್ಕೆ ವಾರ್ಷಿಕ ₹15 ಸಾವಿರ ಕೋಟಿ ಆದಾಯ ನಷ್ಟವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
11:29 AM (IST) Sep 22
ಚಪ್ಪಲಿ ಹಾರ ಹಾಕಿರುವ ಪ್ರಕರಣ ಬರೀ ಗಣಪತಿಗೆ ಆಗಿರುವ ಅವಮಾನವಲ್ಲ, ಇಡೀ ಹಿಂದೂ ಸಮಾಜಕ್ಕೆ ಆಗಿರುವ ಅನ್ಯಾಯವಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಿ.ಟಿ.ರವಿ ಹೇಳಿದರು.
11:25 AM (IST) Sep 22
10:58 AM (IST) Sep 22
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
10:51 AM (IST) Sep 22
MP K Sudhakar's Wife Preethi Sudhakar Loses ₹14 Lakhs in Digital Arrest Scam ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರೀತಿ ಸುಧಾಕರ್ ಅವರು 'ಡಿಜಿಟಲ್ ಅರೆಸ್ಟ್' ಎಂಬ ಹೊಸ ಮಾದರಿಯ ಸೈಬರ್ ವಂಚನೆಗೆ ಒಳಗಾಗಿದ್ದಾರೆ.
10:51 AM (IST) Sep 22
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ರೋಜರ್ ಬಿನ್ನಿ ಅವರ ರಾಜೀನಾಮೆ ನಂತರ, ಈ ಅಚ್ಚರಿಯ ನಿರ್ಧಾರ ಕೈಗೊಳ್ಳಲಾಗಿದೆ.
10:46 AM (IST) Sep 22
ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ ವೀಸಾ ಶುಲ್ಕ ಹೆಚ್ಚಳ ಭಾರತೀಯರಲ್ಲಿ ಕಳವಳ ಉಂಟುಮಾಡಿದೆ. ಭಾರತದಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಿವೆ. ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ. ಹಾಗಾಗಿ ಭಾರತ ಆತಂಕಪಡುವ ಅಗತ್ಯವಿಲ್ಲವೆಂಬುದು ಸ್ಪಷ್ಟ.
10:18 AM (IST) Sep 22
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ತುಮಕೂರು ದಸರಾ ಹಬ್ಬವನ್ನು ನಂದಿ ಧ್ವಜ ಪೂಜೆ ಮಾಡುವ ಮೂಲಕ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಹಾಗೂ ಧಾರ್ಮಿಕ ಮಂಟಪದ ಉದ್ಘಾಟನೆಯನ್ನು ಮಾಡಿದರು.
09:58 AM (IST) Sep 22
ವಾಜಪೇಯಿ ಸರ್ಕಾರ ಬೀಳಿಸಿದ್ದು ಯಾರು? ಪ್ರೇಕ್ಷಕನೊಬ್ಬ, ಹೌದು ಸಾರ್... ಹೊಂದಾಣಿಕೆ ರಾಜಕಾರಣ ಭಾಳ ಆಗೈತಿ. 1998ರಲ್ಲೂ ವಾಜಪೇಯಿ ಅವರ ಅಧಿಕಾರ ಹೋಗಿದ್ದೂ ಒಂದೇ ಮತದಿಂದ, ಇದೇ ಹೊಂದಾಣಿಕೆ ರಾಜಕಾರಣದಿಂದ ಅಲ್ವಾ ಸರ್... ಎಂದು ಜೋರಾಗಿ ಕೂಗಿದಾಗ ಸಭೆಯಲ್ಲಿ ನಗೆಬುಗ್ಗೆ.
09:54 AM (IST) Sep 22
ಹವಾಮಾನ ಇಲಾಖೆಯು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈಶಾನ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದ್ದು, ಭೂಕುಸಿತ ಮತ್ತು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
09:40 AM (IST) Sep 22
ರಾಜ್ಯದಲ್ಲಿ ಆಸ್ಪತ್ರೆ ತೆರೆಯಲು ಈಗಿರುವ ಕ್ಲಿಷ್ಟಕರ ನೀತಿಯನ್ನು ತೊಡೆದುಹಾಕಲು ತಮ್ಮ ಸರ್ಕಾರ ಏಕಗವಾಕ್ಷಿ ಪದ್ಧತಿ ತರುವ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.