ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿರುವುದನ್ನು ನೋಡಿದರೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಹೊಟ್ಟೆಯೊಳಗೆ ಬೆಂಕಿ ಇಟ್ಟಂತೆ ಆಗಿದೆ ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಹೆಲ್ತ್ ಸಿಟಿ ವಸತಿ ಬಡಾವಣೆಯ ಮರು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಿಎಂ ಡಿ.ಕೆ.ಶಿವಕುಮಾರ್ ಅವರು ನಿಂತರು ತಪ್ಪು, ಕುಂತರು ತಪ್ಪು ಎನ್ನುವಂತಾಗಿದೆ.
ನಮ್ಮ ನಡವಳಿಕೆಗಳು ಹೇಗಿರಬೇಕೆಂದು ಕೇಂದ್ರ ಸಚಿವರು ಲಿಸ್ಟ್ ಕೊಟ್ಟರೆ ಅದನ್ನು ಪಾಲಿಸುತ್ತೇವೆ ಎಂದು ಟೀಕಿಸಿದರು. ನಾವು ಈ ಜಿಲ್ಲೆಯ ಮಕ್ಕಳು. ಇಲ್ಲಿ ಹುಟ್ಟಿ, ಇಲ್ಲಿ ಬೆಳೆದಿರುವ ನಾವು ಇಲ್ಲೇ ಸಾಯುವವರು. ನಮ್ಮ ಬದುಕನ್ನು ಇಲ್ಲಿಯೇ ಕಟ್ಟಿಕೊಂಡಿದ್ದೇವೆ. ನಮ್ಮ ಮೇಲೆ ವಿಶ್ವಾಸವಿಡಿ. ಬೇರೆ ಕಡೆ ಹುಟ್ಟಿ ಬಂದವರು ಇಲ್ಲಿ ಸಾಯಬಹುದು. ಬೆಳಗ್ಗೆ ಎದ್ದು ಬಯ್ಯುವವರ ಢೋಂಗಿ ಮಾತುಗಳನ್ನು ನಂಬಬೇಡಿ ಎಂದು ಹೇಳಿದರು.
10:52 PM (IST) Aug 23
ಬೆಂಗಳೂರಿನಲ್ಲಿ ಉದ್ಯಮಿ ಗೌತಮ್ ಅದಾನಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ನಡೆದ ಗೌಪ್ಯ ಸಭೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಪ್ರಕ್ರಿಯೆಯ ನಿರ್ಣಾಯಕ ಹಂತದಲ್ಲಿ ಈ ಭೇಟಿ ನಡೆದಿದ್ದು, ಇದು ಕಾಂಗ್ರೆಸ್ನ ದ್ವಂದ್ವ ನೀತಿ ಎಂದು ಬಿಜೆಪಿ ತೀವ್ರವಾಗಿ ಟೀಕಿಸಿದೆ.
10:29 PM (IST) Aug 23
Gangavathi: ತೆಂಬಾ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯವರು ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿರುವುದು ಇದೀಗ ದೃಢಪಟ್ಟಿದೆ.
10:24 PM (IST) Aug 23
10:22 PM (IST) Aug 23
ಭದ್ರಾ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ನಾಳೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ದಾವಣಗೆರೆ ನಗರ ಬಂದ್ಗೆ ಭಾರತೀಯ ರೈತ ಒಕ್ಕೂಟ ಕರೆ ನೀಡಿದೆ. ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು, ಖಾಸಗಿ ಬಸ್, ಆಟೋ ಮತ್ತು ವರ್ತಕರ ಸಂಘ ಬೆಂಬಲ ಸೂಚಿಸಿವೆ.
10:05 PM (IST) Aug 23
Madhusudana Sai: ಜಿಲ್ಲೆಯ ಹಲವು ವಿದ್ಯಾರ್ಥಿಗಳು ನಮ್ಮ ಸಂಸ್ಥೆಗಳಲ್ಲಿ ವೈದ್ಯಕೀಯ ಶಿಕ್ಷಣ ಸೇರಿದಂತೆ ಹಲವು ವಿಭಾಗಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಅವರು ವೈದ್ಯರಾಗಿ ಸೇವೆ ಸಲ್ಲಿಸಲು ಸಿದ್ಧರಿರುತ್ತಾರೆ.
09:31 PM (IST) Aug 23
09:06 PM (IST) Aug 23
ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್ಕುಮಾರ್ ಅವರ ಮೊಮ್ಮಗಳು, ನಟಿ ಧನ್ಯಾ ರಾಮ್ಕುಮಾರ್ ಇದೀಗ ಕನ್ನಡ ಸಿನಿಮಾವನ್ನು ಮೀರಿ ತಮ್ಮದೇ ಆದ ಗುರುತನ್ನು ಕಟ್ಟಿಕೊಳ್ಳುವತ್ತ ಗಮನ ಹರಿಸಿದ್ದಾರೆ.
07:56 PM (IST) Aug 23
ಛತ್ರಪತಿ ಸಂಭಾಜಿನಗರದಲ್ಲಿ ಐಫೋನ್ ಇಎಂಐ ವಿಚಾರವಾಗಿ ನಡೆದ ಜಗಳವು ಭೀಕರ ದುರಂತಕ್ಕೆ ಕಾರಣವಾಗಿದೆ. ಖವಾಡ್ಯಾ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಉಳಿಸಲು ಹೋಗಿ, ತಂದೆ, ತಾಯಿ ಹಾಗೂ ಮಗ ಮೂವರೂ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯು ಇಡೀ ಕುಟುಂಬದ ನಾಶಕ್ಕೆ ಕಾರಣವಾಯಿತು.
07:34 PM (IST) Aug 23
ರಾಧಿಕಾ ಪಂಡಿತ್ ಅವರ ಜನಪ್ರಿಯತೆ ಕೇವಲ ಕನ್ನಡ ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ನಟ ಯಶ್ ಅವರ ಪತ್ನಿ ಎಂಬ ಕಾರಣಕ್ಕೂ ಉತ್ತರ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ.
07:09 PM (IST) Aug 23
06:54 PM (IST) Aug 23
ಹೊಸ ಫೋಟೋಶೂಟ್ನಲ್ಲಿ ಅನುಶ್ರೀ ರಾಯಲ್ ಬ್ಲೂ ಬಣ್ಣದ ಕಂಗೊಳಿಸುವ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸರಳತೆ ಹಾಗೂ ಗ್ಲಾಮರ್ ಎರಡನ್ನೂ ಮೇಳೈಸಿರುವ ಅವರ ಈ ಲುಕ್, ಫೋಟೋಗಳಿಗೆ ಮತ್ತಷ್ಟು ಮೆರುಗು ನೀಡಿದೆ.
06:15 PM (IST) Aug 23
Yash Toxic Dialogue: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಲವು ಕಾರಣಗಳಿಗೆ ಸುದ್ದಿಯಲ್ಲಿದೆ.
05:41 PM (IST) Aug 23
"ಕಳೆದ ವರ್ಷ ಪ್ರೇಕ್ಷಕರಿಂದ ವ್ಯಕ್ತವಾದ ಅಭೂತಪೂರ್ವ ಬೆಂಬಲ ನಮಗೆ ಹೊಸ ಉತ್ಸಾಹ ತುಂಬಿದೆ. 'ಕಾರ್ಪೊರೇಟ್ ಲವ್ ಸ್ಟೋರಿ'ಯಂತಹ ಲಾಂಗ್-ಫಾರ್ಮ್ಯಾಟ್ ಸರಣಿ ಹಾಗೂ 'ಕರಾವಳಿ'ಯಂತಹ ಮಹತ್ವದ ಸಿನಿಮಾಗಳ ಮೂಲಕ ಕನ್ನಡದಲ್ಲೇ ಅತ್ಯಂತ ವೈವಿಧ್ಯಮಯ ಮನರಂಜನೆ ನೀಡುವ ಮುಂಚೂಣಿ ಒಟಿಟಿ ತಾಣವಾಗಿ Zee5 ಬೆಳೆಯುತ್ತಿದೆ"
05:40 PM (IST) Aug 23
ದೇಶದಲ್ಲಿ ಸಕ್ಕರೆ ಬೆಲೆ ಕೆಜಿಗೆ ₹60 ದಾಟಿ ಏರಿಕೆಯಾಗುತ್ತಿದ್ದು, ಗ್ರಾಹಕರ ಬಜೆಟ್ ಮೇಲೆ ಪರಿಣಾಮ ಬೀರಿದೆ. ಈ ಹಿಂದೆ ಇದೇ ರೀತಿ ಬೆಲೆ ಏರಿಕೆ ಖಂಡಿಸಿದ್ದ ವಾಜಪೇಯಿಯವರ ಹಳೆಯ ಭಾಷಣ ವೈರಲ್ ಆಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ
05:40 PM (IST) Aug 23
Toxic Women Controversy: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಚರ್ಚೆ ಹುಟ್ಟುಹಾಕಿದೆ.
05:21 PM (IST) Aug 23
ಕೆಪಿಎಸ್ಸಿ ಪಶು ವೈದ್ಯಕೀಯ ಪರೀಕ್ಷೆ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಅಧಿಕಾರಿಗಳು ಬರುವಷ್ಟರಲ್ಲಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದನು. ಆದರೆ, ದಾಳಿಗೆ ಬಂದ ಇಡಿ ಅಧಿಕಾರಿಗಳು ಪಟ್ಟು ಬಿಡದೇ ಮಾಡಿದ್ದೇನು ನೋಡಿ.
05:14 PM (IST) Aug 23
ಆಗಸ್ಟ್ 26ರಂದು 'ಟಾಕ್ಸಿಕ್' ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಇದೇ ವೇಳೆ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಯಶ್, ತಮ್ಮ ಸಹನಟಿ ಕಿಯಾರಾ ಅಡ್ವಾಣಿ ಬಗ್ಗೆ ಆಡಿರುವ ಮಾತುಗಳು ಇದೀಗ ಸಖತ್ ಗಮನ ಸೆಳೆಯುತ್ತಿವೆ.
05:01 PM (IST) Aug 23
ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲಿಂಗ್ನಲ್ಲಿ ಕೇವಲ ₹2000 ಸಂಪಾದಿಸುತ್ತಿದ್ದ ನಟಿ, ಒಂದು ಮ್ಯಾಗಜೀನ್ ಫೋಟೋಶೂಟ್ನಿಂದಾಗಿ 'ಮನಸ್ಸಿನಕ್ಕರೆ' ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಲೇಡಿ ಸೂಪರ್ಸ್ಟಾರ್' ಆಗಿ ಬೆಳೆದ ಅವರ ಯಶಸ್ಸಿನ ಪಯಣ, ವಿವಾದಗಳು ಮತ್ತು ಮುಂಬರುವ 'ಟಾಕ್ಸಿಕ್' ಚಿತ್ರದ ಕುರಿತಾದ ಮಾಹಿತಿಯನ್ನು ಈ ಸ್ಟೋರಿಯಲ್ಲಿದೆ.
04:36 PM (IST) Aug 23
ಜೊತೆಗೆ ದರ್ಶನ್ ಅವರು ಜೈಲಿನಲ್ಲಿ ಕೆಲವು ವ್ಯವಸ್ಥೆಗಳನ್ನ ಕೇಳಿದ್ದರು. ಜೈಲಿನ ಕಠಿಣ ನಿಯಮಗಳ ಪ್ರಕಾರ ಅದೂ ಕೂಡ ಅವರಿಗೆ ಸಿಕ್ಕಿಲ್ಲ. ಇದರ ಮಧ್ಯೆ ಸೊಳ್ಳೆ ಕಾಟದಿಂದ ನಿದ್ದೆ ಕೂಡ ಬರುತ್ತಿಲ್ಲ. ಇದರಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂಬ ವರದಿಗಳಿವೆ. ಇದೀಗ ಈ ಬೆಳವಣಿಗೆ ನಡೆದಿದೆ.
04:36 PM (IST) Aug 23
‘ಕ್ರೇಜಿ ಸ್ಟಾರ್’ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಇದುವರೆಗೆ ಹೀರೋ ಆಗಿ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೀಗ ಇದೇ ಮೊದಲ ಬಾರಿಗೆ ನೆಗೆಟಿವ್ ಶೇಡ್ ಇರುವ ಪಾತ್ರದ ಮೂಲಕ..
04:04 PM (IST) Aug 23
ಕನ್ನಡ ಕಿರುತೆರೆಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ನ ಮಹಾ ಫಿನಾಲೆಗೆ ಅದ್ದೂರಿ ತೆರೆ ಬಿದ್ದಿದೆ. ಹಲವು ವಾರಗಳ ಕಾಲ ತಮ್ಮ ಗಾಯನದ ಮೂಲಕ ಸಂಗೀತಪ್ರಿಯರ ಮನ ಗೆದ್ದಿದ್ದ..
03:50 PM (IST) Aug 23
01:41 PM (IST) Aug 23
01:35 PM (IST) Aug 23
ನಟ ಡಾಲಿ ಧನಂಜಯ್ ಅವರು ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದು ಇಂದು ಬಹುಭಾಷಾ ನಟರಾಗಿ ಬೆಳೆದಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ತಮ್ಮ ನಟನಾಜರ್ನಿಯನ್ನು ಮಾಡುತ್ತಿರುವ ನಟ ಧನಂಜಯ್ ಅವರು, ಸಿನಿಮಾ ನಿರ್ಮಾಣದ ಕೆಲಸದಲ್ಲೂ ಸಕ್ರಿಯರಾಗಿದ್ದಾರೆ.
12:42 PM (IST) Aug 23
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಲ್ಲಿಕಾರ್ಜುನ್ ಬಸಪ್ಪ ವಗ್ಗರ್ ಎಂಬ ರೈತ, ತಮ್ಮ ಗ್ರಾಮದಲ್ಲಿಯೇ ಹೈನುಗಾರಿಕೆಯನ್ನು ಬಳಸಿ ಖೋವಾ ತಯಾರಿಸುವ ಉದ್ಯಮವನ್ನು ಆರಂಭಿಸಿದ್ದಾರೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಶುರುವಾದ ಈ ಉದ್ಯಮವು ಇಂದು ಉತ್ತರ ಕರ್ನಾಟಕದಾದ್ಯಂತ ಜನಪ್ರಿಯವಾಗಿದೆ.
12:23 PM (IST) Aug 23
ವಂದೇ ಮಾತರಂ ಹಾಡದವರನ್ನು ದೇಶ ಬಿಟ್ಟು ಹೋಗಿ ಎನ್ನುವ ಬಿಜೆಪಿಗೆ, ನೋಂದಣಿ ಮಾಡಿಸದ ಆರ್ಎಸ್ಎಸ್ ಪಾಕಿಸ್ತಾನಕ್ಕೆ ಹೋಗಬೇಕೇ ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದ್ದಾರೆ. ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೆ ತಿರುಗೇಟು, ಹೇಳಿದ್ದೇನು?
11:16 AM (IST) Aug 23
Yasukuni Enoki: ಇಂದು ಜಪಾನ್ನಲ್ಲಿ ಪೂಜಿಸಲ್ಪಡುವ ಶೇ.80ಕ್ಕೂ ಹೆಚ್ಚು ದೇವತೆಗಳ ಮೂಲ ಭಾರತದ್ದು. ಬೌದ್ಧ ಧರ್ಮದ ಪ್ರಸಾರದ ಮೂಲಕ ಭಾರತೀಯ ಪರಂಪರೆಯೊಂದಿಗೆ ಸಂಪರ್ಕ ಹೊಂದಿದೆ ಎಂದು ಭಾರತದ್ದು; ಮಾಜಿ ರಾಯಭಾರಿ ಯಸುಕುನಿ ಹೇಳಿಕೆ ವೈರಲ್ ಆಗಿದೆ. ಪೂರ್ಣ ಓದಿ.
11:03 AM (IST) Aug 23
10:30 AM (IST) Aug 23
Karnataka Weather Update: ಬಂಗಾಳ ಕೊಲ್ಲಿಯಲ್ಲಿ ಸಮುದ್ರ ನೀರು ಬೀಸಿಯಾಗುತ್ತಿದೆ. ಇದರಿಂದ ಪದೇ ಪದೇ ವಾಯುಭಾರ ಕುಸಿತ ಕಂಡು ಬರುತ್ತಿದೆ. ಸದ್ಯ ಮತ್ತೊಂದು ವಾಯುಭಾರ ಕುಸಿತ ನಿರ್ಮಾಣವಾಗಿದೆ. ಆದರೆ ಇದಕ್ಕೆ ಒಂದು ಸಮಸ್ಯೆ ಇದೆ. ಈ ನಡುವೆ ಕರ್ನಾಟಕದ ಹವಾಮಾನ ವರದಿ ಹೇಗಿದೆ ತಿಳಿದುಕೊಳ್ಳಿ.
09:31 AM (IST) Aug 23
08:43 AM (IST) Aug 23
ಮಂಡ್ಯದಲ್ಲಿ ಬೆಲ್ಲದ ಬೆಲೆ ಕ್ವಿಂಟಾಲ್ಗೆ ₹6740 ತಲುಪಿ ಐತಿಹಾಸಿಕ ದಾಖಲೆ ಬರೆದಿದೆ. ಕಬ್ಬಿನ ಪೂರೈಕೆ ಕೊರತೆ, ಕೂಲಿಯಾಳುಗಳ ಅಭಾವ, ಮತ್ತು ಸಕ್ಕರೆ ಬೆಲೆ ಏರಿಕೆಯಂತಹ ಕಾರಣಗಳಿಂದ ಉತ್ಪಾದನೆ ಕುಸಿದಿದ್ದು, ಇದು ಬೆಲ್ಲದ ದರದಲ್ಲಿ ಏರಿಕೆಗೆ ಕಾರಣವಾಗಿದೆ.
08:29 AM (IST) Aug 23
ರಾಜ್ಯದ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸುವ ಸರ್ಕಾರದ ತೀರ್ಮಾನವನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದಾರೆ. ಈ ಕಳವಳಕಾರಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
08:05 AM (IST) Aug 23
07:48 AM (IST) Aug 23
ಬುಕ್ ಬ್ರಹ್ಮ ಲಿಟರೇಚರ್ ಫೆಸ್ಟಿವಲ್ನಲ್ಲಿ ಮಾತನಾಡಿದ ನಿರ್ದೇಶಕ ಟಿ.ಎನ್.ಸೀತಾರಾಮ, ಕಲಾವಿದರು ಕೇವಲ ಚಪ್ಪಾಳೆ, ಖ್ಯಾತಿ ಮತ್ತು ಹಣಕ್ಕಾಗಿ ಕಲೆಯನ್ನು ಸೃಷ್ಟಿಸಬಾರದು ಎಂದು ಅಭಿಪ್ರಾಯಪಟ್ಟರು. ಕಲಾವಿದನ ಆಂತರಿಕ ಸಂಘರ್ಷ ಮತ್ತು ಕಲೆಯೊಂದಿಗಿನ ಪ್ರಾಮಾಣಿಕತೆಯೇ ಮುಖ್ಯವೇ ಹೊರತು, ಕ್ಷಣಿಕ ಮೆಚ್ಚುಗೆಯಲ್ಲ.
07:30 AM (IST) Aug 23
07:13 AM (IST) Aug 23
ಆನೇಕಲ್ ತಾಲೂಕಿನ ಮರಸೂರು ಪಂಚಾಯ್ತಿಗೆ ಸೇರಿದ ಎಂಟು ಗ್ರಾಮಗಳ ಕಂದಾಯ ದಾಖಲೆಗಳು 1956ರಿಂದ ತಮಿಳುನಾಡಿನ ಹೊಸೂರು ಕಡತಗಳಲ್ಲಿದ್ದವು. ಒಂದು ವರ್ಷದ ಸತತ ಪ್ರಯತ್ನದ ನಂತರ, ಈ ದಾಖಲೆಗಳನ್ನು ಅಧಿಕೃತವಾಗಿ ಕರ್ನಾಟಕದ ದಾಖಲೆಗಳಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಸುಮಾರು 3000 ರೈತರಿಗೆ ಅನುಕೂಲವಾಗಿದೆ.