ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಂದರ್ಭ ಬಂದರೆ ಮಾನವೀಯ ದೃಷ್ಟಿಯಿಂದ ದಲಿತರಿಗೆ ಅವಕಾಶ ನೀಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ. ಅಧಿಕಾರ ಹಂಚಿಕೆ ವಿಷಯದ ಬಗ್ಗೆ ನಾನೇನೂ ಮಾತನಾಡುವುದಕ್ಕೆ ಹೋಗುವುದಿಲ್ಲ. ಅದೆಲ್ಲವೂ ನಮ್ಮ ಹೈಕಮಾಂಡ್ಗೆ ಬಿಟ್ಟ ವಿಚಾರ. ಆದರೆ, ಸಿಎಂ ಬದಲಾವಣೆ ಸಂದರ್ಭ ಬಂದಲ್ಲಿ ದಲಿತರಿಗೆ ಒಂದು ಅವಕಾಶ ನೀಡಬೇಕು. ದಲಿತ ಸಮುದಾಯಗಳ ಪರವಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದರು. ಬೆಳಗಾವಿ ಅಧಿವೇಶನದ ವೇಳೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸ್ವಾಭಾವಿಕವಾಗಿ ಊಟಕ್ಕೆ ಕರೆದಿದ್ದರು ಅಷ್ಟೇ. ರಾಜಕೀಯ ವಿಚಾರಗಳೇನೂ ಅಲ್ಲಿ ಚರ್ಚೆಯಾಗಿಲ್ಲ ಎಂದು ಹೇಳಿದರು.

09:07 PM (IST) Dec 23
08:38 PM (IST) Dec 23
07:47 PM (IST) Dec 23
ಹೂವಿನಹಡಗಲಿಯ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರು, ಮಧ್ಯ ಏಷ್ಯಾ ಮತ್ತು ಯುರೋಪ್ನಿಂದ ವಲಸೆ ಬರುವ ಬ್ರಾಹ್ಮಣಿ ಬಾತುಕೋಳಿಗಳಂತಹ ವಿದೇಶಿ ಹಕ್ಕಿಗಳಿಗೆ ಚಳಿಗಾಲದ ಆಶ್ರಯತಾಣವಾಗಿದೆ. ಹಿಮಾಲಯವನ್ನು ದಾಟಿ ಬರುವ ಈ ಹಕ್ಕಿಗಳು ಸಂತಾನೋತ್ಪತ್ತಿ ಮುಗಿಸಿ ಹಿಂದಿರುಗುತ್ತವೆ.
07:20 PM (IST) Dec 23
ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC, ಮತ್ತು KKRTCಯ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರವು ಋತುಚಕ್ರ ರಜೆಯನ್ನು ಮಂಜೂರು ಮಾಡಿದೆ. ಜನವರಿ 1 ರಿಂದ ಜಾರಿಗೆ ಬರುವ ಈ ಆದೇಶದ ಅಡಿಯಲ್ಲಿ, ಅರ್ಹ ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು ಪಡೆಯಬಹುದು.
07:07 PM (IST) Dec 23
ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ನಿರಂತರವಾಗಿ ಕುಸಿದ ಹಿನ್ನೆಲೆಯಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯವು ತನ್ನೊಂದಿಗೆ ಸಂಯೋಜಿತವಾಗಿರುವ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಿದೆ. ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಕೋರ್ಸ್ಗಳನ್ನು ಪೂರ್ಣಗೊಳಿಸಲು ಅವಕಾಶವಿದೆ.
06:57 PM (IST) Dec 23
ಜನವರಿ 1ರಿಂದ ಬೆಂಗಳೂರು ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆ, ನಿರ್ಗಮನ ಸಮಯ, ಮಾರ್ಗ ಸೇರಿದಂತೆ ಕೆಲ ಮಹತ್ತರ ಬದಲಾವಣೆ ಮಾಡಲಾಗಿದೆ. ರೈಲು ಬದಲಾವಣೆ ವಿವರವನ್ನು ಸಚಿವಾಲಯ ಪ್ರಕಟಿಸಿದೆ.
06:56 PM (IST) Dec 23
06:47 PM (IST) Dec 23
06:18 PM (IST) Dec 23
ಭಾರತೀನಗರದ ರೌಡಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರಿಗೆ ಮತ್ತೆ ಹಿನ್ನಡೆಯಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
06:12 PM (IST) Dec 23
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಿಸಲಾಗಿದೆ. ಜನವರಿ 29 ರಿಂದ ಫೆಬ್ರವರಿ 6ರವರೆಗೆ ನಡೆಯಲಿರುವ ಈ ಚಿತ್ರೋತ್ಸವವು 'ಮಹಿಳಾ ಸಬಲೀಕರಣ' ಥೀಮ್ ಹೊಂದಿದ್ದು, 60ಕ್ಕೂ ಹೆಚ್ಚು ದೇಶಗಳ 200 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.
06:06 PM (IST) Dec 23
ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ನಟಿ ರಾಗಿಣಿ ದ್ವಿವೇದಿ, ದರ್ಶನ್ ಅಭಿನಯದ 'ದಿ ಡೆವಿಲ್' ಚಿತ್ರದ ಪಾತ್ರವನ್ನು ತಿರಸ್ಕರಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ಬಗ್ಗೆಯೂ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
05:55 PM (IST) Dec 23
ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಿಸಿ! ಜ್ಞಾನಭಾರತಿ, ಕೆ.ಆರ್. ಪುರ, ಬೆನ್ನಿಗಾನಹಳ್ಳಿ ನಿಲ್ದಾಣಗಳಿಂದ ಹೊಸ ಬಿಎಂಟಿಸಿ ಫೀಡರ್ ಬಸ್ ಸೇವೆ ಆರಂಭ. ಮಾರ್ಗ, ಸಮಯ ತಿಳಿಯಲು ಕ್ಲಿಕ್ ಮಾಡಿ.
05:43 PM (IST) Dec 23
ಅಂಡರ್ 19 ಏಷ್ಯಾಕಪ್ ಫೈನಲ್ನಲ್ಲಿ ಭಾರತೀಯ ಆಟಗಾರರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಐಸಿಸಿಗೆ ಅಧಿಕೃತ ದೂರು ನೀಡಲು ನಿರ್ಧರಿಸಿದೆ. ಪಾಕ್ ತಂಡದ ಕೋಚ್ ಸರ್ಫರಾಜ್ ಅಹ್ಮದ್ ಅವರ ಆರೋಪದ ಬೆನ್ನಲ್ಲೇ ನಖ್ವಿ ಈ ಕ್ರಮವನ್ನು ಖಚಿತಪಡಿಸಿದ್ದಾರೆ.
05:37 PM (IST) Dec 23
ಹೊಸಕೋಟೆಗೆ ಬಿರಿಯಾನಿ ತಿನ್ನಲು ತೆರಳಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿಗಳನ್ನು ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಸುಲಿಗೆ ಮಾಡಿದೆ. ವಿದ್ಯಾರ್ಥಿಗಳನ್ನು ಒಂದು ಗಂಟೆ ಕಾಲ ಒತ್ತೆಯಾಳಾಗಿರಿಸಿ, ಯುಪಿಐ ಮೂಲಕ ಹಣ ವರ್ಗಾಯಿಸಿಕೊಂಡು, ದೈಹಿಕ ಹಿಂಸೆ ನೀಡಿ ಪರಾರಿಯಾಗಿದ್ದಾರೆ.
05:30 PM (IST) Dec 23
Bigg Boss Kannada Season 12 Winner: ದಿನದಿಂದ ದಿನಕ್ಕೆ ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಕುತೂಹಲದಿಂದ ಕೂಡಿದೆ. ಇನ್ನು ಫಿನಾಲೆಯಲ್ಲಿ ಯಾರು ಗೆಲ್ಲಲಿದ್ದಾರೆ? ಯಾರು ಟ್ರೋಫಿ ಪಡೆಯಲಿದ್ದಾರೆ ಎಂಬ ಕುತೂಹಲವಿದೆ. ಈ ಬಗ್ಗೆ ಮಂತ್ರಾಲಯ ಗಿಣಿ ಹೇಳಿದ್ದೇನು?
05:12 PM (IST) Dec 23
ವಿವಾದಗಳಿಂದಲೇ ಖ್ಯಾತರಾಗಿದ್ದ ಡ್ರೋನ್ ಪ್ರತಾಪ್, ಬಿಗ್ ಬಾಸ್ ಮೂಲಕ ಮತ್ತೆ ಜನಪ್ರಿಯತೆ ಗಳಿಸಿದ್ದರು. ಇದೀಗ ಚೀನಾಕ್ಕೆ ಹಾರಿದ್ದು, ಅಲ್ಲಿ ಚೀನಿ ಯುವತಿಯೊಂದಿಗೆ ಕಾಣಿಸಿಕೊಂಡು ಡ್ರೋನ್ ಬಗ್ಗೆ ಪಾಠ ಮಾಡುತ್ತಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
05:07 PM (IST) Dec 23
Bigg Boss Shrutika Arjun: ಇಂದು ಅನೇಕರು ಉದ್ಯಮ ಮಾಡಿ ಗೆದ್ದ ಉದಾಹರಣೆಯೂ ಇದೆ, ಕೆಲವರು ಉದ್ಯಮ ಮಾಡಿ ಕೈ ಸುಟ್ಟುಕೊಂಡ ಉದಾಹರಣೆಯೂ ಇದೆ. ಕೆಲವೊಮ್ಮೆ ನಾವು ಏನೂ ಪ್ಲ್ಯಾನ್ ಮಾಡದೆ, ಏನೇನೋ ಆಗುವುದುಂಟು. ಅಂತೆಯೇ ಈ ನಟಿ ಕೂಡ ಉದ್ಯಮ ಆರಂಭಿಸಿ, ಇಂದು ದೊಡ್ಡ ಮಟ್ಟದದಲ್ಲಿ ಯಶಸ್ಸು ಪಡೆದಿದ್ದಾರೆ.
04:43 PM (IST) Dec 23
ಕಿಚ್ಚ ಸುದೀಪ್-ದರ್ಶನ್ ಅಭಿಮಾನಿಗಳ ವಾರ್ಗೆ ರಾಜಕೀಯದ ಎಂಟ್ರಿ! ಜೆಡಿಎಸ್ ಮುಖಂಡನ ಪ್ರವೀಣ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಸುದೀಪ್ 'ಯುದ್ಧ'ದ ಹೇಳಿಕೆ, ವಿಜಯಲಕ್ಷ್ಮಿ ಕೌಂಟರ್ ವಿವರ ತಿಳಿಯಲು ಓದಿ.
04:26 PM (IST) Dec 23
ಭಾರತೀಯರು ಆಯುರ್ವೇದವನ್ನು ಕಡೆಗಣಿಸುತ್ತಿದ್ದರೆ, ಚೀನಿಯರು ಆರೋಗ್ಯಕ್ಕಾಗಿ ವಿಶೇಷ ಕಷಾಯವನ್ನು ಅವಲಂಬಿಸಿದ್ದಾರೆ. ನಮ್ಮ ಅಡುಗೆಮನೆಯಲ್ಲಿಯೇ ಪದಾರ್ಥಗಳಿಂದ ಚೀನಿಯರು ವೈದ್ಯರಿಂದ ದೂರ ಇರುವುದು ಹೇಗೆ? ಇಲ್ಲಿದೆ ಅವರ ರೆಸಿಪಿ.
04:21 PM (IST) Dec 23
ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಫಾಕ್ಸ್ಕಾನ್ ದೇವನಹಳ್ಳಿಯಲ್ಲಿ ಐಫೋನ್ ಉತ್ಪಾದನೆಯನ್ನು ಪ್ರಾರಂಭಿಸಿತು. ಇದು ಐಫೋನ್ 16 ಉತ್ಪಾದನೆಯೊಂದಿಗೆ ಪ್ರಾರಂಭವಾಯಿತು ಮತ್ತು ಈಗ ಐಫೋನ್ 17 ಪ್ರೊ ಮ್ಯಾಕ್ಸ್ ಮಾದರಿಗಳನ್ನು ಉತ್ಪಾದಿಸುತ್ತಿದೆ.
04:01 PM (IST) Dec 23
ರಿಯಲ್ ಎಸ್ಟೇಟ್ ಉದ್ಯಮಿ ಕೆ. ರಘುನಾಥ್ 2019ರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಹತ್ವದ ಕ್ರಮ ಕೈಗೊಂಡಿದೆ. 6 ವರ್ಷಗಳ ಬಳಿಕ, ಮಾಜಿ ಸಂಸದ ಡಿ.ಕೆ.ಆದಿಕೇಶವುಲು ನಾಯ್ಡು ಅವರ ಪುತ್ರ ಡಿ.ಎ.ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ ಹಾಗೂ ಡಿವೈಎಸ್ಪಿ ಎಸ್.ವೈ. ಮೋಹನ್ ಅವರನ್ನು ಬಂಧಿಸಲಾಗಿದೆ.
03:38 PM (IST) Dec 23
ಬೆಂಗಳೂರಿನ ನಾಲ್ಕನೇ ರೈಲ್ವೆ ಟರ್ಮಿನಲ್ ಮತ್ತು ಭಾರತದ ಮೊದಲ ಸಂಪೂರ್ಣ ಎತ್ತರದ ಕೋಚಿಂಗ್ ಟರ್ಮಿನಲ್ ಯಲಹಂಕದಲ್ಲಿರುವ ರೈಲ್ ವೀಲ್ ಫ್ಯಾಕ್ಟರಿ ಭೂಮಿಯಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ.
03:17 PM (IST) Dec 23
03:00 PM (IST) Dec 23
Bigg Boss Kannada Season 12 Rashika Shetty: ಬಿಗ್ ಬಾಸ್ ಮನೆಯಲ್ಲಿ ಈ ವಾರ ಪೇರೆಂಟ್ಸ್ ವೀಕ್ ಇದೆ. ಕಳೆದ ಎರಡು ವಾರಗಳಿಂದಲೂ ರಾಶಿಕಾ ಶೆಟ್ಟಿ ಅವರು ಮನೆಯವರು ಬರುತ್ತಾರೆ ಎಂದು ಕಾಯುತ್ತಲಿದ್ದರು. ಇದನ್ನು ಅವರು ಬಾಯಿ ಬಿಟ್ಟು ಕೂಡ ಹೇಳಿದ್ದರು. ಈಗ ತಾಯಿ, ತಮ್ಮ ಬಂದಿದ್ದಾರೆ.
02:58 PM (IST) Dec 23
ಕೆಲವರಿಗೆ ಯಶಸ್ಸು ತಡವಾಗಿ, ಅಂದರೆ 35 ವರ್ಷಗಳ ನಂತರ ಸಿಗುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಜನ್ಮದಿನ ಹೊಂದಿದವರು ತಮ್ಮ ಕಠಿಣ ಪರಿಶ್ರಮದಿಂದಾಗಿ ಈ ವಯಸ್ಸಿನ ನಂತರ ಜೀವನದಲ್ಲಿ ದೊಡ್ಡ ಯಶಸ್ಸನ್ನು ಸಾಧಿಸುತ್ತಾರೆ. ಯಾವುದು ಆ ಸಂಖ್ಯೆ?
02:29 PM (IST) Dec 23
Bigg Boss Kannada Season 12 Episode: ರಮೇಶ್ ಅರವಿಂದ್, ಪ್ರೇಮಾ ಅವರ ‘ತುತ್ತಾ ಮುತ್ತಾ’ ಎನ್ನುವ ಸಿನಿಮಾವನ್ನು ನೋಡಿರಬಹುದು. ಅಲ್ಲಿ ರಮೇಶ್ ಅರವಿಂದ್ ಅವರು ಒದ್ದಾಡಿದಂತೆ, ಬಿಗ್ ಬಾಸ್ ಶೋನಲ್ಲಿ ಧನುಷ್ ಅವರು ಪರದಾಡುವ ಪರಿಸ್ಥಿತಿ ಬಂದಿದೆ. ಹಾಗಾದರೆ ಏನಾಯ್ತು?
02:11 PM (IST) Dec 23
01:56 PM (IST) Dec 23
ಏನು! ಟೈಟಲ್ ನೋಡಿ ಶಾಕ್ ಆದ್ರಾ? ಸಮಂತಾ ಮತ್ತೆ ನಾಗಚೈತನ್ಯರನ್ನು ಭೇಟಿಯಾಗಿದ್ದೇಕೆ ಅಂತ ಯೋಚಿಸ್ತಿದ್ದೀರಾ? ಸ್ವಲ್ಪ ನಿಮ್ಮ ಯೋಚನೆ ನಿಲ್ಲಿಸಿ.. ಈ ಸ್ಟೋರಿ ಓದಿದ್ರೆ ಎಲ್ಲವೂ ನಿಮಗೇ ಅರ್ಥವಾಗುತ್ತೆ. ತಡ ಯಾಕೆ, ಒಮ್ಮೆ ನೋಡಿ.
01:31 PM (IST) Dec 23
ಇರುಳು ಕುರುಡು ಎಂದು ನಾಟಕವಾಡಿ ಹಗಲಲ್ಲೇ ಮನೆ ದೋಚುತ್ತಿದ್ದ ಅಂತರರಾಜ್ಯ ಖದೀಮನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಟನ ಮನೆ ಕಳ್ಳತನದ ಬೆನ್ನತ್ತಿದ ಪೊಲೀಸರಿಗೆ ಸಿಕ್ಕಿಬಿದ್ದ ಈತನ ಕಥೆ ತಿಳಿಯಿರಿ. ಆರೋಪಿಯಿಂದ 65.28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ವಶ.
01:30 PM (IST) Dec 23
ಟೀಂ ಇಂಡಿಯಾ ಲೆಗ್ಸ್ಪಿನ್ನರ್ ಅಮಿತ್ ಮಿಶ್ರಾ, ಎಂ.ಎಸ್. ಧೋನಿ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ಬದಲಾಗಿ, ಧೋನಿಯ ನಾಯಕತ್ವದಲ್ಲೇ ತಮಗೆ ತಂಡದಲ್ಲಿ ಅವಕಾಶ ಸಿಕ್ಕಿದ್ದು ಎಂದು ಮಿಶ್ರಾ ಸ್ಪಷ್ಟಪಡಿಸಿದ್ದಾರೆ.
01:15 PM (IST) Dec 23
ಪ್ರೀತಿ ಎಂದರೆ ಶಕ್ತಿ. ಪ್ರೀತಿ ಮಾಡುವವರು ಜೊತೆಯಾಗಿ ಬೆಳೆದು ಗೆದ್ದ ಉದಾಹರಣೆ ಸಾಕಷ್ಟಿವೆ. ಈಗ ಮಂಗಳೂರಿನ ಕನ್ನಡತಿ, ನಟಿ ಶ್ರೇಯಾ ಅಂಚನ್ ಅವರು ಲವ್ ಮ್ಯಾರೇಜ್ ಮಾಡಿಕೊಂಡಿದ್ದಲ್ಲದೆ, ಹೊಸ ಮನೆಗೆ ಕಾಲಿಟ್ಟಿದ್ದಾರೆ. ಶ್ರೇಯಾ ಅಂಚನ್ ಅವರ ಸುಂದರ ಮನೆಯ ಫೋಟೋಗಳು ಇಲ್ಲಿವೆ.
01:09 PM (IST) Dec 23
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆಗೆ ಅಪ್ಪನೇ ಗರ್ಭಿಣಿ ಮಗಳನ್ನು ಕೊಂದ ಪ್ರಕರಣ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಯುವತಿ ಜಾತಿ ದ್ವೇಷಕ್ಕೆ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.
01:04 PM (IST) Dec 23
ಬಿಗ್ಬಾಸ್ ಸ್ಪರ್ಧಿ ಕಾವ್ಯಾ ಶೈವ ಅವರು ತಮ್ಮ ಆಟದ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದು, ಅವರ ಜನಪ್ರಿಯತೆ ಇದೀಗ ದುಬೈವರೆಗೂ ತಲುಪಿದೆ. ದುಬೈನಲ್ಲಿರುವ ಅವರ ಅಭಿಮಾನಿಗಳು 'ವೋಟ್ ಫಾರ್ ಕಾವ್ಯಾ' ಎಂದು ಪ್ರಚಾರ ಮಾಡುತ್ತಿದ್ದಾರೆ.
12:53 PM (IST) Dec 23
ಸ್ಯಾಂಡಲ್ವುಡ್ನಲ್ಲಿ ಈಗ ಯುದ್ಧದ ಕಾರ್ಮೋಡ ಕವಿದಿದೆ.. ಈ ಯುದ್ಧ ಯಾರ ಮೇಲೆ..? ಯಾಕೆ..? ಆದ್ರೆ ಯುದ್ಧ ಮಾಡೋರು ಮಾಡಿಕೊಳ್ಳಲಿ. ನಾವು ಸಿನಿಮಾ ಮಾಡಿ ಗೆಲ್ಲೋಣ ಅಂತ 45 ಸ್ಟಾರ್ಸ್ ಸೈಲೆಂಟ್ ಆಗಿ ಮುನ್ನುಗ್ಗುತ್ತಿದ್ದಾರೆ.
12:50 PM (IST) Dec 23
ಕಲಬುರಗಿಯ ಉಡಚಣ ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ಶಾಂತಲಿಂಗ ಸ್ವಾಮೀಜಿ ಬಂಧನವಾಗಿದೆ. ವಿವಾದಿತ ಸ್ವಾಮೀಜಿಯ ಬಂಧನದ ಹಿಂದಿನ ಕಾರಣ, ವೈರಲ್ ವಿಡಿಯೋ ಬಗ್ಗೆ ಪೂರ್ಣ ಮಾಹಿತಿ ತಿಳಿಯಿರಿ.
12:31 PM (IST) Dec 23
ಸ್ಯಾಂಡಲ್ವುಡ್ನಲ್ಲಿ ಮತ್ತೊಮ್ಮೆ ಸ್ಟಾರ್ ವಾರ್.. ಫ್ಯಾನ್ಸ್ ವಾರ್.. ಪರ್ವ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ಮಾರ್ಕ್ ಸಿನಿಮಾ ರಿಲೀಸ್ ಇವೆಂಟ್ ನಲ್ಲಿ ಸುದೀಪ್ ಯುದ್ಧಕ್ಕೆ ಸಿದ್ದ ಮಾತಿಗೆ ಬದ್ಧ ಅಂತ ಹೇಳಿದ್ರು. ಅದಕ್ಕೆ ಟಾಂಗ್ ಕೊಡುವಂತೆ ವಿಜಯಲಕ್ಷ್ಮೀ ಮಾತನಾಡಿದ್ರು.
12:29 PM (IST) Dec 23
ಸಚಿವ ಸ್ಥಾನ ಕಳೆದುಕೊಂಡ ಕೆ.ಎನ್. ರಾಜಣ್ಣ ರಾಹುಲ್ ಗಾಂಧಿಗೆ ಬರೆದ ಪತ್ರದ ಸಂಪೂರ್ಣ ವಿವರ. ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನಕ್ಕೆ ಕಾರಣವೇನು? ಪತ್ರದ ಸ್ಫೋಟಕ ಅಂಶಗಳನ್ನು ತಿಳಿಯಲು ಓದಿ.
12:18 PM (IST) Dec 23
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಮಾತು, ಡೈಲಾಗ್, ಕಿಲಾಡಿ ಬುದ್ಧಿಯಿಂದಲೇ ವೀಕ್ಷಕರ ಮನಸ್ಸು ಗೆದ್ದಿರುವ ಮಂಡ್ಯದ ಹುಡುಗ ಗಿಲ್ಲಿ ನಟನ ಬಗ್ಗೆ ಮನೆಯವರಿಗೆ ಒಂದೆರಡು ದೂರಿದೆ. ಈ ಬಗ್ಗೆ ರಜತ್ ಅವರು ಎಷಿಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
12:14 PM (IST) Dec 23
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕೃಷಿ ಅಧಿಕಾರಿ, ಸಹಕಾರ ಸಂಘದ ಸಿಇಒ, ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿಗಳ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳು ಪತ್ತೆಯಾಗಿವೆ.
12:00 PM (IST) Dec 23