ಬೆಂಗಳೂರು: ನಾನು ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಆ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೋ ನೋಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಇನ್ನೊಂದು ಡಿಸಿಎಂ ಹುದ್ದೆ ಸೃಷ್ಟಿಸುವುದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ. ಆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ನಾನು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ನಾಯಕರು ನೀಟ್ ವಿರುದ್ಧದ ಪ್ರತಿಭಟನೆಯಲ್ಲಿದ್ದಾರೆ. ಆ ಪ್ರತಿಭಟನೆ ಕೂಡ ದೇಶಕ್ಕೆ ಮುಖ್ಯವಾಗಿದೆ. ಹಾಗಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ ಎಂದರು. ಶನಿವಾರ ಅಥವಾ ಭಾನುವಾರ ನಾಯಕರು ನಮ್ಮನ್ನು ಮಾತುಕತೆಗೆ ಕರೆಯಬಹುದು ಎಂದು ಹೇಳಿದರು.

11:01 PM (IST) Jul 23
ಜಿಂಬಾಬ್ವೆ ವಿರುದ್ಧ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಇತಿಹಾಸ ಬರೆದ ಯುವ ತಾರೆ ವೈಭವ್ ಸೂರ್ಯವಂಶಿ, ಟಿ20 ಕ್ರಿಕೆಟ್ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಭಾರತೀಯರ ಎಲೈಟ್ ಕ್ಲಬ್ಗೆ ಸೇರಿದ್ದಾರೆ. ಆದರೆ 12 ಎಸೆತಗಳ ಅಜೇಯ ವಿಶ್ವ ದಾಖಲೆಯನ್ನು ಯಾರಿಂದಲೂ ಮುರಿಯಲಾಗಿಲ್ಲ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
10:47 PM (IST) Jul 23
10:37 PM (IST) Jul 23
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಕೊನೆಗೂ ಮೌನ ಮುರಿದಿದ್ದಾರೆ. ತಮ್ಮ ತಂದೆಯವರ ಪಾಠವನ್ನು ಸ್ಮರಿಸುತ್ತಾ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯ ಮಹತ್ವದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
07:41 PM (IST) Jul 23
ಕೆಎಂಎಫ್ ಅಂಗಸಂಸ್ಥೆಯಾದ ಬಮೂಲ್, ನಂದಿನಿ ತುಪ್ಪ ಮತ್ತು ಬೆಣ್ಣೆಯ ದರವನ್ನು ದಿಢೀರ್ ಏರಿಕೆ ಮಾಡಿದೆ. ಪ್ರತಿ ಕೆಜಿಗೆ ತುಪ್ಪದ ಮೇಲೆ ₹15 ಮತ್ತು ಬೆಣ್ಣೆಯ ಮೇಲೆ ₹25 ಹೆಚ್ಚಳವಾಗಿದ್ದು, ಈ ಹೊಸ ದರಗಳು ಜುಲೈ 24 ರಿಂದ ಜಾರಿಗೆ ಬರಲಿವೆ.
07:04 PM (IST) Jul 23
06:46 PM (IST) Jul 23
06:28 PM (IST) Jul 23
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯ ಕರ್ನಾಟಕ ಭಾಗ, ಬೆಂಗಳೂರು-ನೆಲಮಂಗಲ ಹೆದ್ದಾರಿ ಮತ್ತು ಮುಳಬಾಗಿಲು-ಆಂಧ್ರ ಗಡಿ ವಿಭಾಗದ ಟೋಲ್ ದರಗಳನ್ನು ಹೆಚ್ಚಿಸಿದೆ.
05:58 PM (IST) Jul 23
ಬೆಂಗಳೂರಿನ ಬ್ರಂಟನ್ ರಸ್ತೆಯನ್ನು ಪ್ರೆಸ್ಟೀಜ್ ಗ್ರೂಪ್ 3 ಕೋಟಿ ರೂ. ವೆಚ್ಚದಲ್ಲಿ ಪುನರಭಿವೃದ್ಧಿಪಡಿಸುತ್ತಿದೆ. ಈ ಯೋಜನೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರಸ್ತೆ ನಿರ್ಮಿಸಲಾಗುತ್ತಿದ್ದು, ಪಾದಚಾರಿ ಮಾರ್ಗ ಮತ್ತು ಬೀದಿ ದೀಪಗಳನ್ನೂ ಮೇಲ್ದರ್ಜೆಗೇರಿಸಲಾಗುತ್ತಿದೆ.
05:42 PM (IST) Jul 23
ಮಳೆಗಾಲದಲ್ಲಿ ಹೆಚ್ಚಾಗುವ ತೇವಾಂಶದಿಂದಾಗಿ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ತರಕಾರಿಗಳ ಮೇಲೆ ವೇಗವಾಗಿ ಬೆಳೆಯುತ್ತವೆ. ಈ ಸಮಯದಲ್ಲಿ ಕೆಲವು ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಹೊಟ್ಟೆಯ ಸೋಂಕಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಆ ತರಕಾರಿ ಯಾವವು ಎನ್ನುವುದನ್ನು ನೋಡೋಣ ಬನ್ನಿ.
04:13 PM (IST) Jul 23
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಆ ವಿಡಿಯೋದಿಂದಾಗಿ ಎದ್ದ ಯುವಜನರ ಆಕ್ರೋಶಕ್ಕೆ ಮಣಿದು ಸರ್ಕಾರ ಈ ಕ್ರಮ ಕೈಗೊಂಡಿದ್ದು, ಇದು ಹೋರಾಟಗಾರರ ಮೊದಲ ಗೆಲುವು ಎಂದು ಬಣ್ಣಿಸಲಾಗಿದೆ. ಈ ಪ್ರಕರಣ ಇದೀಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
03:46 PM (IST) Jul 23
ಟೀಂ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಇಂಗ್ಲೆಂಡ್ ಸೀರಿಸ್ ವಿರುದ್ಧ ಹೀನಾಯ ಸೋಲು ಬೆನ್ನಲ್ಲೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಅವರು ಯಾರು ಎಂದು ತಿಳಿದುಕೊಳ್ಳಲು ಈ ಮೇಲಿನ ಲಿಂಕ್ ಕ್ಲಿಕ್ ಮಾಡಿ..
03:15 PM (IST) Jul 23
03:07 PM (IST) Jul 23
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ದಂಪತಿ ನಡುವಿನ ಸಣ್ಣ ಜಗಳವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಜಾತ್ರೆಗೆ ಹೋಗುವ ವಿಚಾರವಾಗಿ ಗಂಡನೊಂದಿಗೆ ಜಗಳವಾಡಿದ ಪತ್ನಿಯೊಬ್ಬಳು ಮನನೊಂದು ನದಿಗೆ ಹಾರಿದ್ದಾಳೆ. ಅಷ್ಟಕ್ಕೂ ಆಗಿದ್ದೇನು? ಸ್ಟೋರಿ ಓದಿ..
02:53 PM (IST) Jul 23
02:41 PM (IST) Jul 23
02:32 PM (IST) Jul 23
ಕಾಕ್ರೋಚ್ ಎನ್ನುವುದು ಉತ್ತರ ಭಾರತದ, ಹಿಂದಿಯನ್ ಮನುವಾದಿಗಳ ಚಳವಳಿಯಾಗಿದೆ ಎಂದು ನಟ ಚೇತನ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಹಿಂದೆ ಹಿಂದಿ ಹೇರಿಕೆ ಮತ್ತು ಉತ್ತರ ಭಾರತದ ಮೇಲ್ವರ್ಗದ ಸಿದ್ಧಾಂತಗಳ ಪ್ರಭಾವವಿದೆ ಎಂಬರ್ಥದಲ್ಲಿ ಚೇತನ್ ಮಾತುಗಳನ್ನಾಡಿದ್ದಾರೆ.
01:33 PM (IST) Jul 23
ಸಚಿವ ಸಂಪುಟ ವಿಸ್ತರಣೆ ಆದಷ್ಟು ಬೇಗ ನಡೆಯಲಿದೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಜನ ಸಮರ್ಥರಿದ್ದಾರೆ. ಅದರಲ್ಲೂ ಬಹಳಷ್ಟು ಮಂದಿ ಯುವಕರಿದ್ದು, ಅವರೆಲ್ಲರಿಗೂ ಸಚಿವರಾಗುವ ಅರ್ಹತೆ ಇದೆ. ಅದೇ ರೀತಿ ನನಗೂ ಕೂಡ ಸಚಿವನಾಗಬೇಕು ಎನ್ನುವ ಬಯಕೆ ಮತ್ತು ಆಸೆ ಎರಡೂ ಇದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
01:11 PM (IST) Jul 23
12:17 PM (IST) Jul 23
Goddess Chowdi: ಏನಾದರೂ ವಸ್ತು ಆಗ ಇತ್ತು, ಈಗ ಕಾಣಿಸಿಲ್ಲ ಅಂದ್ರೆ ಕೆಲವರು ಚೌಡಿ ಕಾಟ ಎನ್ನೋದುಂಟು. ಹಳ್ಳಿಗಳಲ್ಲಿ, ಜನಪದ ಸಂಸ್ಕೃತಿಯಲ್ಲಿ 'ಚೌಡಿ ಕಾಟ' ಅಥವಾ 'ಚೌಡಿ ಮುಚ್ಚಿದ್ದಾಳೆ' ಎಂಬ ಮಾತು ತುಂಬಾ ಕೇಳಿ ಬರುತ್ತಲಿರುತ್ತದೆ. ಯಾವುದಾದರೂ ವಸ್ತು ಕಣ್ಣೆದುರಲ್ಲೇ ಇದ್ದರೂ ತಕ್ಷಣಕ್ಕೆ ಕಾಣಿಸದೇ ಹೋದಾಗ ಈ ರೀತಿ ಹೇಳಲು ಕಾರಣ ಇದೆ.
12:13 PM (IST) Jul 23
ಹೊಟ್ಟೆ ನೋವಿನಿಂದ ಮಗ ಹೋದರೆ, ಮಗನ ಅಗಲಿಕೆಯ ನೋವಿನಿಂದ ತಾಯಿ ಹೋದರು. ಸಾವಿನಲ್ಲೂ ಈ ಕರುಳ ಬಳ್ಳಿ ಬೇರ್ಪಡಲಿಲ್ಲ ಎಂಬುದು ಮಾತ್ರ ಈ ಘಟನೆಯ ಅತ್ಯಂತ ಕರುಣಾಜನಕ ಸತ್ಯ.
11:57 AM (IST) Jul 23
11:40 AM (IST) Jul 23
Thalapathy Vijay Jana Nayagan Movie Review: ನಟ ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾದ 'ಜನ ನಾಯಗನ್' ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಟ್ವಿಟರ್ನಲ್ಲಿ ಏನಂತಿದ್ದಾರೆ? ಇಲ್ಲಿದೆ ನೋಡಿ ವಿಮರ್ಶೆ.
11:22 AM (IST) Jul 23
11:12 AM (IST) Jul 23
10:14 AM (IST) Jul 23
ಮಂಗಳೂರಿನಿಂದ ಗೋವಾ, ಮಹಾರಾಷ್ಟ್ರವನ್ನು ಸಂಪರ್ಕಿಸುವ ಕೊಂಕಣ ರೈಲು ಮಾರ್ಗದಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಪ್ರಯಾಣಿಕರ ಸುರಕ್ಷತೆ ಸಂಪೂರ್ಣವಾಗಿ ಹದಗೆಟ್ಟಿದೆ. ಮತ್ಸ್ಯಗಂಧ ಮತ್ತು ಮಂಗಳೂರು ಎಕ್ಸ್ಪ್ರೆಸ್ಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದ್ದು, ಟಿಟಿಇ ಮೇಲೆಯೂ ಹಲ್ಲೆ ನಡೆದಿದೆ. ಇದರಿಂದ ಆತಂಕಗೊಂಡ ಪ್ರಯಾಣಿಕರು ಸಿಸಿಟಿವಿ ಅಳವಡಿಕೆ ಮತ್ತು ಗಸ್ತು ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ.
08:58 AM (IST) Jul 23
07:21 AM (IST) Jul 23
ಅಕಾಲಿಕವಾಗಿ ನಿಧನರಾದ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್ಐ) ಮಂಜುನಾಥ್ ಅವರ ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ 82 ಲಕ್ಷ ರೂಪಾಯಿ ವಿಮಾ ಪರಿಹಾರ ನೀಡಿದೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅವರ ವೇತನ ಖಾತೆಯ ಪ್ಯಾಕೇಜ್ ಅಡಿಯಲ್ಲಿ ಈ ಚೆಕ್ ಅನ್ನು ಅವರ ಪತ್ನಿ ವೃಂದಮ್ಮ ಅವರಿಗೆ ಹಸ್ತಾಂತರಿಸಲಾಯಿತು.
07:08 AM (IST) Jul 23
ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ವೇಳೆ ನಡೆದ ಗಲಾಟೆಯ ನಂತರವೂ ಹೆಚ್ಚಿನ ಕಡೆಗಳಲ್ಲಿ ಬೀದಿ ವ್ಯಾಪಾರ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಈ ಹಲ್ಲೆ ಘಟನೆಯಿಂದಾಗಿ, ಸೂಕ್ತ ಪೊಲೀಸ್ ರಕ್ಷಣೆ ಇಲ್ಲದೆ ಇನ್ನು ಮುಂದೆ ತೆರವು ಕಾರ್ಯಾಚರಣೆ ನಡೆಸುವುದಿಲ್ಲವೆಂದು ಜಿಬಿಎ ನೌಕರರು ಪಟ್ಟುಹಿಡಿದು ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
06:52 AM (IST) Jul 23
ಬಿಎಂಟಿಸಿಯು ಟಿಕೆಟೇತರ ಆದಾಯ ಹೆಚ್ಚಿಸಲು ಹೊಸ ಪ್ಲಾನ್ ಮಾಡಿಕೊಂಡಿದೆ. ಇನ್ಮುಂದೆ ಪ್ರಯಾಣಿಕರಿಗೆ ಹೊಸ ಕ್ಯೂಆರ್ ಕೋಡ್ ಲಭ್ಯವಾಗಲಿದೆ. ಏನಿದು ಹೊಸ ಪ್ಲಾನ್? ಈ ಕೋಡ್ನಿಂದ ಆದಾಯ ಹೇಗೆ ಬರುತ್ತೆ ಎಂಬುದರ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.
06:38 AM (IST) Jul 23
06:30 AM (IST) Jul 23
ಹೂವಿನಹಡಗಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಾನ್ವೆಜ್ ಊಟ ಬಡಿಸುವಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಬಡಿದಾಡಿಕೊಂಡಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಿರಿಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಈ ಘರ್ಷಣೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
06:20 AM (IST) Jul 23
06:05 AM (IST) Jul 23
05:54 AM (IST) Jul 23
₹16.16 ಲಕ್ಷ ಸಾಲಕ್ಕೆ ಪ್ರತಿಯಾಗಿ ₹36.77 ಲಕ್ಷ ವಸೂಲಿ ಮಾಡಿ, ಇನ್ನೂ ಹೆಚ್ಚಿನ ಹಣಕ್ಕಾಗಿ ಜೀವ ಬೆದರಿಕೆ ಹಾಕುತ್ತಿದ್ದ ಚಕ್ರಬಡ್ಡಿ ದಂಧೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. ದೂರುದಾರರ ದೂರಿನ ಮೇರೆಗೆ, ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
05:44 AM (IST) Jul 23
05:38 AM (IST) Jul 23