ಬೆಂಗಳೂರು: ನಾಗರಬಾವಿಯ ಬಾಡಿಗೆ ಮನೆಯಲ್ಲಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕೆಲವು ಪುಢಾರಿಗಳು, ಟೌನ್ಶಿಪ್ ಕಿಂಗ್ಪಿನ್ ಚೇಲಾಗಳು ಸೇರಿಕೊಂಡು ಆ ಮನೆಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸೌಧ ಅಥವಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆದರೆ ಎಲ್ಲರಿಗೂ ಸುಲಭವಾಗಿ ಗೊತ್ತಾಗುತ್ತದೆ. ಕುಮಾರಸ್ವಾಮಿಗೆ ಮಾಹಿತಿ ಹೋಗುತ್ತದೆ ಎಂಬ ಉದ್ದೇಶದಿಂದ ಬಾಡಿಗೆ ಮನೆಯಲ್ಲಿ ರಹಸ್ಯವಾಗಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಏನಪ್ಪಾ ಹರಿದಾ ಎನ್ನುವ ವ್ಯಕ್ತಿ ಈಗ ಹರಿಯುತ್ತಿರುವುದು ಏನು? ನಿಮ್ಮ ಪಾಪದ ಕೂಡ ತುಂಬಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ನಿಮಗೆ ಶಾಸ್ತಿಯಾಗುವ ಕಾಲ ಸನಿಹದಲ್ಲಿದೆ ಎಂದು ಗುಡುಗಿದರು.
10:52 PM (IST) Jun 23
RSS Registration Controversy: ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ಥಾಪಿತವಾದ ಆರ್ಎಸ್ಎಸ್ ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಇಷ್ಟು ವರ್ಷ ಏಕೆ ಸುಮ್ಮನಿದ್ದರು ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದರು.
09:31 PM (IST) Jun 23
Graveyard Dating: ಕಾಫಿ ಶಾಪ್, ಪಾರ್ಕ್ಗಳೆಲ್ಲಾ ಹಳೆಯದಾಯ್ತು. ಈಗಿನ ಹೊಸ ಟ್ರೆಂಡ್ ಗ್ರೇವ್ಯಾರ್ಡ್ ಡೇಟಿಂಗ್. ಯುವ ಜೋಡಿಗಳು ಸ್ಮಶಾನಗಳಲ್ಲಿ ಯಾಕೆ ಡೇಟಿಂಗ್ ಮಾಡ್ತಿದ್ದಾರೆ? ಇದರ ಹಿಂದಿನ ಅಸಲಿ ಕಾರಣಗಳೇನು? ಈ ಕುತೂಹಲಕಾರಿ ವಿವರ ಇಲ್ಲಿದೆ.
07:33 PM (IST) Jun 23
ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಒಂದೇ ಹೆಸರಿನಲ್ಲಿ ನಾಲ್ಕು ವೋಟರ್ ಐಡಿ ಕಾರ್ಡ್ಗಳನ್ನು ಹೊಂದಿರುವ ಆರೋಪದ ಮೇಲೆ ಬೆಂಗಳೂರು ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದಾರೆ. ಈ ಕುರಿತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವ್ಯಂಗ್ಯವಾಡಿದ್ದಾರೆ.
07:22 PM (IST) Jun 23
Cross Voting: ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇರ ಹೊಣೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
06:56 PM (IST) Jun 23
Bidadi Township ಯೋಜನೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006ರಲ್ಲಿ ಯೋಜನೆ ಆರಂಭಿಸಿದ್ದು ನೀವೇ ಎಂದು ಪ್ರಶ್ನಿಸಿದರು.
06:50 PM (IST) Jun 23
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ವರ್ಣರಂಜಿತ ವೇದಿಕೆಯಲ್ಲಿ ಭಾರತದ ಈ ಪ್ರಖ್ಯಾತ ಹಿನ್ನೆಲೆ ಗಾಯಕಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮಭೂಷಣ' ಪ್ರಶಸ್ತಿ ನೀಡಿ ಗೌರವಿಸಿದರು. ಯಾರು ಈ ಗಾಯಕಿ? ಸ್ಟೋರಿ ನೋಡಿ..
06:45 PM (IST) Jun 23
Gangavathi ಕಿಲ್ಲಾ ಏರಿಯಾದಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಹಾಕುವಂತೆ ಸೂಚಿಸಿದ ನಗರಸಭೆ ಸಿಬ್ಬಂದಿ ಅಬ್ದುಲ್ ನಬಿಸಾಬ್ ಮೇಲೆ ಹಲ್ಲೆ ನಡೆದಿದೆ. ಘಟನೆಯನ್ನು ಖಂಡಿಸಿ ನಗರಸಭೆ ಸಿಬ್ಬಂದಿಗಳು ಆರೋಪಿಯ ಮನೆ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದಾರೆ.
06:07 PM (IST) Jun 23
05:39 PM (IST) Jun 23
Nagamale Darshan: ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ದರ್ಶನಕ್ಕೆ ಚಿರತೆ ದಾಳಿಯ ಬಳಿಕ ವಿಧಿಸಲಾದ ನಿರ್ಬಂಧ ಇನ್ನೂ ತೆರವಾಗಿಲ್ಲ. ಎರಡು ಚಿರತೆಗಳು ಸೆರೆ ಸಿಕ್ಕಿದ್ದರೂ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನೆಲೆ ಭಕ್ತರು ಪ್ರಶ್ನೆ ಎತ್ತಿದ್ದಾರೆ.
05:23 PM (IST) Jun 23
04:55 PM (IST) Jun 23
Bidadi Township ಯೋಜನೆ ವಿಚಾರವಾಗಿ ಡಿ.ಕೆ.ಶಿವಕುಮಾರ್ಗೆ ನಿಖಿಲ್ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ರೈತರ ಸಮ್ಮುಖದಲ್ಲೇ ಚರ್ಚೆ ನಡೆಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
04:36 PM (IST) Jun 23
Bengaluru ಅಂಜನಾನಗರದಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವಿವಾಹಿತೆ ತನುಜಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
04:33 PM (IST) Jun 23
02:34 PM (IST) Jun 23
02:32 PM (IST) Jun 23
02:09 PM (IST) Jun 23
01:20 PM (IST) Jun 23
01:06 PM (IST) Jun 23
ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯಲ್ಲಿ ಗಂಭೀರ ತಾಂತ್ರಿಕ ಲೋಪಗಳನ್ನು 'ಇಂಡಿಯನ್ ಕಾಂಕ್ರೀಟ್ ಇನ್ಸ್ಟಿಟ್ಯೂಟ್' ತಜ್ಞರು ಪತ್ತೆಹಚ್ಚಿದ್ದಾರೆ.
01:02 PM (IST) Jun 23
12:28 PM (IST) Jun 23
'ಸ್ಪುರದ್ರೂಪಿ' ನಟ ಚಂದನ್ ಕುಮಾರ್ ನಟನಾಗಿ ಮಾತ್ರವಲ್ಲದೆ ಒಬ್ಬ ಸಮರ್ಥ ನಿರ್ದೇಶಕನಾಗಿಯೂ ಅಬ್ಬರಿಸಲು ಸಜ್ಜಾಗಿದ್ದಾರೆ. ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಚಿತ್ರ ‘ಫ್ಲರ್ಟ್’ (Flirt) ಚಿತ್ರ ಪ್ರೇಕ್ಷಕರು , ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದಿತ್ತು. ಆದರೆ, ಇಲ್ಲೊಂದು ಟ್ವಿಸ್ಟ್ ಇದೆ!
12:23 PM (IST) Jun 23
12:18 PM (IST) Jun 23
ನಟ ವಿಜಯ್ ರಾಘವೇಂದ್ರ ಅವರ ಪುತ್ರ ಶೌರ್ಯ, ಇತ್ತೀಚೆಗೆ ನಿಧನರಾದ ಅಜ್ಜಿ ಜಯಮ್ಮ ಹಾಗೂ ಹಿಂದೆ ನಿಧನರಾದ ತಾಯಿ ಸ್ಪಂದನಾ ಅವರನ್ನು ನೆನೆದು ಇನ್ಸ್ಟಾಗ್ರಾಮ್ನಲ್ಲಿ ಭಾವುಕ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. 'ನನ್ನ ಹೃದಯದಿಂದ ಎಂದೂ ಹೋಗೋದಿಲ್ಲ' ಎಂದು ಬರೆದುಕೊಂಡಿದ್ದಾರೆ.
11:50 AM (IST) Jun 23
:2025 ರ ಆಗಸ್ಟ್ ನಿಂದ ಅಕ್ಟೋಬರ್ ಅವಧಿಯಲ್ಲ 73.35 ಲಕ್ಷ ರೂ. ಆದಾಯ ಗಳಿಸಿರುವ 20632 ತಿರುವನಂತಪುರಂ-ಮಂಗಳೂರು ವಂದೇ ಭಾರತ್ (ವಿಬಿ) ಎಕ್ಸ್ಪ್ರೆಸ್ ದಕ್ಷಿಣ ರೈಲ್ವೆ ನಡೆಸುತ್ತಿರುವ ವಂದೇ ಭಾರತ್ ಸೇವೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಯಾಣಿಕರು ಹೆಚ್ಚಳ ಮತ್ತು ಆದಾಯ ಗಳಿಕೆಯಲ್ಲೂ ಮುಂದಿದೆ.
11:42 AM (IST) Jun 23
11:21 AM (IST) Jun 23
10:54 AM (IST) Jun 23
ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಕಾಂಗ್ರೆಸ್ನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಬಿಡದಿ ಟೌನ್ಶಿಪ್ ವಿವಾದ ಮತ್ತು ಮುಸ್ಲಿಂ ಸಚಿವ ಸ್ಥಾನದ ಬೇಡಿಕೆ ಕುರಿತು ಏನು ಹೇಳಿದ್ರು?
10:54 AM (IST) Jun 23
10:43 AM (IST) Jun 23
5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು ಫ್ಲೈಓವರ್ ನಿರ್ಮಿಸಲು ಟೆಂಡರ್ ಕರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.
10:01 AM (IST) Jun 23
09:52 AM (IST) Jun 23
ರಾಜ್ಯದ ಹೊಸ ಅಬಕಾರಿ ನೀತಿಯು ಸರ್ಕಾರದ ಬೊಕ್ಕಸಕ್ಕೆ ಭಾರಿ ಲಾಭ ತಂದುಕೊಟ್ಟಿದೆ. ಬಿಯರ್ ದರ ಇಳಿಕೆಯಿಂದಾಗಿ ಅದರ ಮಾರಾಟ ಗಣನೀಯವಾಗಿ ಏರಿಕೆಯಾಗಿದ್ದರೆ, ಐಎಂಎಲ್ ದರ ಹೆಚ್ಚಳದ ನಡುವೆಯೂ ಅದರ ವಹಿವಾಟು ಕುಗ್ಗಿಲ್ಲ.
09:14 AM (IST) Jun 23
08:51 AM (IST) Jun 23
ಹಸಿವು ಆಗಿದೆ ಊಟ ಕೊಡಪ್ಪ ಎಂದ ವೃದ್ಧ ಭಿಕ್ಷುಕ ದಂಪತಿಗಳ ಮೇಲೆ ಕುಮಟಾದ ಗೋವರ್ಧನ್ ಹೋಟೆಲ್ ಮಾಲೀಕನೋರ್ವ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ದಂಪತಿಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
08:50 AM (IST) Jun 23
08:20 AM (IST) Jun 23
08:11 AM (IST) Jun 23
17 ಲಕ್ಷ ಸಾಲ ಪಡೆದ ರೈತನಿಗೆ ವಂಚಿಸಿ ಕೋಟ್ಯಂತರ ಮೌಲ್ಯದ 5 ಎಕರೆ ಜಮೀನನ್ನು ಬಡ್ಡಿ ದಂಧೆಕೋರರು ಕಬಳಿಸಿದ್ದಾರೆ. ಅಡಮಾನ ಪತ್ರದ ಬದಲು ಖರೀದಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಈ ಮೋಸ ಎಸಗಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
07:56 AM (IST) Jun 23
ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
07:53 AM (IST) Jun 23
07:27 AM (IST) Jun 23
ರೈತರೊಬ್ಬರು, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹತಾಶರಾಗಿ, ತಾವು ಬೆಳೆದಿದ್ದ 11 ಎಕರೆ ಗೋವಿನಜೋಳದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ನಷ್ಟ ಅನುಭವಿಸಿರುವ ಅವರು, ಸರ್ಕಾರದ ನೆರವಿಗಾಗಿ ಒತ್ತಾಯಿಸುತ್ತಿದ್ದಾರೆ.
07:12 AM (IST) Jun 23
ಶಾಸಕ ಡಿ.ಜಿ. ಶಾಂತನಗೌಡಅವರು ಹೊನ್ನಾಳಿಯಿಂದ ದಾವಣಗೆರೆಗೆ ಬಸವಾಪಟ್ಟಣ ಮಾರ್ಗವಾಗಿ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ಹೊಸ ಸೇವೆಯು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸಂಪರ್ಕ ಕೊಂಡಿಯಾಗಿರುವ ಹೊನ್ನಾಳಿಯ ಜನತೆಗೆ ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆಯುವಂತೆ ಜನತೆಗೆ ಕರೆ ನೀಡಿದರು.