LIVE NOW
Published : Jun 23, 2026, 06:50 AM ISTUpdated : Jun 23, 2026, 10:54 AM IST

Karnataka News Live: ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕಕ್ಕೆ ಕರಾವಳಿ ಕಾಂಗ್ರೆಸ್ಸಿಗರ ವಿರೋಧ; ಸಚಿವ ಖಾದರ್ ಖಡಕ್ ತಿರುಗೇಟು!

ಸಾರಾಂಶ

ಬೆಂಗಳೂರು: ನಾಗರಬಾವಿಯ ಬಾಡಿಗೆ ಮನೆಯಲ್ಲಿ ಬಿಡದಿ ಟೌನ್‌ಶಿಪ್‌ ದಂಧೆ ಮಾಡುತ್ತಿದ್ದಾರೆ. ಕೆಲವು ಪುಢಾರಿಗಳು, ಟೌನ್‌ಶಿಪ್ ಕಿಂಗ್‌ಪಿನ್ ಚೇಲಾಗಳು ಸೇರಿಕೊಂಡು ಆ ಮನೆಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸೌಧ ಅಥವಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆದರೆ ಎಲ್ಲರಿಗೂ ಸುಲಭವಾಗಿ ಗೊತ್ತಾಗುತ್ತದೆ. ಕುಮಾರಸ್ವಾಮಿಗೆ ಮಾಹಿತಿ ಹೋಗುತ್ತದೆ ಎಂಬ ಉದ್ದೇಶದಿಂದ ಬಾಡಿಗೆ ಮನೆಯಲ್ಲಿ ರಹಸ್ಯವಾಗಿ ಬಿಡದಿ ಟೌನ್‌ಶಿಪ್‌ ದಂಧೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಏನಪ್ಪಾ ಹರಿದಾ ಎನ್ನುವ ವ್ಯಕ್ತಿ ಈಗ ಹರಿಯುತ್ತಿರುವುದು ಏನು? ನಿಮ್ಮ ಪಾಪದ ಕೂಡ ತುಂಬಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ನಿಮಗೆ ಶಾಸ್ತಿಯಾಗುವ ಕಾಲ ಸನಿಹದಲ್ಲಿದೆ ಎಂದು ಗುಡುಗಿದರು.

10:54 AM (IST) Jun 23

ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕಕ್ಕೆ ಕರಾವಳಿ ಕಾಂಗ್ರೆಸ್ಸಿಗರ ವಿರೋಧ; ಸಚಿವ ಖಾದರ್ ಖಡಕ್ ತಿರುಗೇಟು!

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಬಿಡದಿ ಟೌನ್‌ಶಿಪ್ ವಿವಾದ ಮತ್ತು ಮುಸ್ಲಿಂ ಸಚಿವ ಸ್ಥಾನದ ಬೇಡಿಕೆ ಕುರಿತು ಏನು ಹೇಳಿದ್ರು?

 

Read Full Story

10:54 AM (IST) Jun 23

ಕೊಡಗು ನ್ಯಾಯಾಲಯಕ್ಕೆ ಸಹನಾಳ ಈ ಮೇಲ್ ಬಾಂಬ್ ಬೆದರಿಕೆ - ಐಸಿಸ್ ದಾಳಿ ಎಚ್ಚರಿಕೆ, ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ!

ಮಡಿಕೇರಿ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ 'ಸಹನಾ' ಎಂಬ ಹೆಸರಿನಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಐಸಿಸ್ ಉಗ್ರರು ಸೈನೈಡ್ ಬಾಂಬ್ ಬಳಸಿ ದಾಳಿ ನಡೆಸುವುದಾಗಿ ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
Read Full Story

10:43 AM (IST) Jun 23

Bengaluru - 5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯಲ್ಲಿಯೇ ಫ್ಲೈಒವರ್?

5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು ಫ್ಲೈಓವರ್ ನಿರ್ಮಿಸಲು ಟೆಂಡರ್ ಕರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.

Read Full Story

10:01 AM (IST) Jun 23

ಚಿಕ್ಕಮಗಳೂರು - ಆಶ್ರಮ ಶಾಲೆಯ ಸಿಬ್ಬಂದಿ ನಿರ್ಲಕ್ಷ್ಯ, ತಡರಾತ್ರಿ ಗಲಾಟೆಗೆ ಹೆದರಿ ಓಡಿಹೋದ 4 ಪುಟ್ಟ ಮಕ್ಕಳು!

ಚಿಕ್ಕಮಗಳೂರು ತಾಲೂಕಿನ ವಾಲ್ಮೀಕಿ ಆಶ್ರಮ ವಸತಿ ಶಾಲೆಯಲ್ಲಿ, ಹಾಸ್ಟೆಲ್ ಗಲಾಟೆಯಿಂದ ಭಯಭೀತರಾದ ನಾಲ್ವರು ಮಕ್ಕಳು ತಡರಾತ್ರಿ ಪಲಾಯನ ಮಾಡಲು ಯತ್ನಿಸಿದ್ದಾರೆ. ಸುಮಾರು 2 ಕಿ.ಮೀ ನಡೆದ ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಮರಳಿ ಶಾಲೆಗೆ ಒಪ್ಪಿಸಿದ್ದು, ಈ ಘಟನೆಯು ಶಾಲಾ ಸಿಬ್ಬಂದಿಯ ಘೋರ ನಿರ್ಲಕ್ಷ್ಯವನ್ನು ಬಯಲು ಮಾಡಿದೆ.
Read Full Story

09:52 AM (IST) Jun 23

ಸರ್ಕಾರದ ಕಿಕ್ ಏರಿಸಿದ ಮದ್ಯಪ್ರಿಯರು; ಹೊಸ ಅಬಕಾರಿ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹರಿದು ಬಂತು ಕೋಟಿ ಕೋಟಿ ಆದಾಯ

ರಾಜ್ಯದ ಹೊಸ ಅಬಕಾರಿ ನೀತಿಯು ಸರ್ಕಾರದ ಬೊಕ್ಕಸಕ್ಕೆ ಭಾರಿ ಲಾಭ ತಂದುಕೊಟ್ಟಿದೆ. ಬಿಯರ್ ದರ ಇಳಿಕೆಯಿಂದಾಗಿ ಅದರ ಮಾರಾಟ ಗಣನೀಯವಾಗಿ ಏರಿಕೆಯಾಗಿದ್ದರೆ, ಐಎಂಎಲ್ ದರ ಹೆಚ್ಚಳದ ನಡುವೆಯೂ ಅದರ ವಹಿವಾಟು ಕುಗ್ಗಿಲ್ಲ.

Read Full Story

09:14 AM (IST) Jun 23

ಇಂದಿನಿಂದ 3 ದಿನ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ; ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಈ ನಡುವೆ, ಹವಾಮಾನ ಇಲಾಖೆಯು ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.
Read Full Story

08:51 AM (IST) Jun 23

ಕುಮಟಾದಲ್ಲಿ ಅಮಾನವೀಯ ಕೃತ್ಯ - ಊಟ ಕೇಳಿದ್ದಕ್ಕೆ ಭಿಕ್ಷುಕ ದಂಪತಿಗಳ ಮೇಲೆ ಹೋಟೆಲ್ ಮಾಲೀಕ ಹಲ್ಲೆ! 'ದುಡ್ಡು ಕೊಡ್ತಿವಪ್ಪ' ಬಿಡದೆ ಥಳಿಸಿದ ಪಾಪಿ!

ಹಸಿವು ಆಗಿದೆ ಊಟ ಕೊಡಪ್ಪ ಎಂದ ವೃದ್ಧ ಭಿಕ್ಷುಕ ದಂಪತಿಗಳ ಮೇಲೆ ಕುಮಟಾದ ಗೋವರ್ಧನ್ ಹೋಟೆಲ್ ಮಾಲೀಕನೋರ್ವ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ದಂಪತಿಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

Read Full Story

08:50 AM (IST) Jun 23

ವರ್ಷಧಾರೆ ಕೊರತೆಗೆ ಸೊರಗಿದ ಲಿಂಗನಮಕ್ಕಿ ಜಲಾಶಯ; ಶರಾವತಿ ಜಲಾನಯನದಲ್ಲಿ ಮಳೆ ಅಭಾವ

ಶರಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ, ರಾಜ್ಯದ ಪ್ರಮುಖ ವಿದ್ಯುತ್ ಮೂಲವಾದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಳಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಇದು ವಿದ್ಯುತ್ ಉತ್ಪಾದನೆಯ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಬಾರದೆ ಹೋದರೆ ರಾಜ್ಯವು ಗಂಭೀರ ವಿದ್ಯುತ್ ಸಂಕಷ್ಟವನ್ನು ಎದುರಿಸುವ ಸಾಧ್ಯತೆಯಿದೆ.
Read Full Story

08:20 AM (IST) Jun 23

ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕದಂತೆ ಮನವಿ; ರೈತ ಸಂಘದ ಆತಂಕ ಏನು?

ಮುಂಬರಲಿರುವ ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದವು ದೇಶದ ಕೃಷಿ ವಲಯಕ್ಕೆ ಮಾರಕವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆತಂಕ ವ್ಯಕ್ತಪಡಿಸಿದೆ. ಆಮದು ಸುಂಕ ಕಡಿತ ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಧಕ್ಕೆಯಾಗುವ ಸಾಧ್ಯತೆಯಿಂದಾಗಿ, ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ರೈತ ಮುಖಂಡರು ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
Read Full Story

08:11 AM (IST) Jun 23

17 ಲಕ್ಷಕ್ಕೆ ಕೋಟ್ಯಂತರ ಮೌಲ್ಯದ 5 ಎಕರೆ ಕೃಷಿಭೂಮಿ ಕಬಳಿಕೆ? ದೂರು ದಾಖಲಿಸಿದ ನೊಂದ ರೈತ

17 ಲಕ್ಷ ಸಾಲ ಪಡೆದ ರೈತನಿಗೆ ವಂಚಿಸಿ ಕೋಟ್ಯಂತರ ಮೌಲ್ಯದ 5 ಎಕರೆ ಜಮೀನನ್ನು ಬಡ್ಡಿ ದಂಧೆಕೋರರು ಕಬಳಿಸಿದ್ದಾರೆ. ಅಡಮಾನ ಪತ್ರದ ಬದಲು ಖರೀದಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಈ ಮೋಸ ಎಸಗಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

Read Full Story

07:56 AM (IST) Jun 23

ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 1600 ಕಾನ್ಸ್‌ಟಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ, ಅರ್ಹತೆ, ವಯೋಮಿತಿ ಎಷ್ಟಿರಬೇಕು?

ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

 

Read Full Story

07:53 AM (IST) Jun 23

Hubballi To Dharwad - ದಣಿದ ಚಿಗರಿಗಳಿಗೆ ಪ್ರತ್ಯೇಕ ಬಿಆರ್‌ಟಿಎಸ್‌ ಕಾರಿಡಾರ್‌ ಏಕೆ?

ಹುಬ್ಬಳ್ಳಿ-ಧಾರವಾಡದ ಬಿಆರ್‌ಟಿಎಸ್‌ ಪ್ರತ್ಯೇಕ ಕಾರಿಡಾರ್‌ನಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಹದಗೆಟ್ಟಿರುವ ಚಿಗರಿ ಬಸ್‌ಗಳು ಮತ್ತು ಕೆಲವು ಭಾಗಗಳಲ್ಲಿ ಈಗಾಗಲೇ ಮಿಶ್ರಪಥದಲ್ಲಿ ಸಂಚರಿಸುತ್ತಿರುವುದರಿಂದ, ಕಾರಿಡಾರ್ ರದ್ದುಪಡಿಸಿ ಸಂಚಾರ ದಟ್ಟಣೆ ನಿವಾರಿಸಬೇಕೆಂಬುದು ಸಾರ್ವಜನಿಕರ ಪ್ರಬಲ ಒತ್ತಾಯವಾಗಿದೆ.
Read Full Story

07:27 AM (IST) Jun 23

ಕೈಕೊಟ್ಟ ಮಳೆ - 11 ಎಕ್ರೆ ಗೋವಿನಜೋಳದ ಬೆಳೆ ಟ್ರ‍್ಯಾಕ್ಟರ್‌ನಿಂದ ನಾಶ ಮಾಡಿದ ಹಾವೇರಿ ರೈತ

ರೈತರೊಬ್ಬರು, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹತಾಶರಾಗಿ, ತಾವು ಬೆಳೆದಿದ್ದ 11 ಎಕರೆ ಗೋವಿನಜೋಳದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ನಷ್ಟ ಅನುಭವಿಸಿರುವ ಅವರು, ಸರ್ಕಾರದ ನೆರವಿಗಾಗಿ ಒತ್ತಾಯಿಸುತ್ತಿದ್ದಾರೆ.

Read Full Story

07:12 AM (IST) Jun 23

ಹೊನ್ನಾಳಿ-ದಾವಣಗೆರೆಗೆ ಬಸವಾಪಟ್ಟಣ ಮೂಲಕ ಹೊಸ ಬಸ್ ಆರಂಭ; ಮಾರ್ಗ, ಸಮಯ ಈ ರೀತಿಯಾಗಿದೆ

ಶಾಸಕ ಡಿ.ಜಿ. ಶಾಂತನಗೌಡಅವರು ಹೊನ್ನಾಳಿಯಿಂದ ದಾವಣಗೆರೆಗೆ ಬಸವಾಪಟ್ಟಣ ಮಾರ್ಗವಾಗಿ ನೂತನ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ಹೊಸ ಸೇವೆಯು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸಂಪರ್ಕ ಕೊಂಡಿಯಾಗಿರುವ ಹೊನ್ನಾಳಿಯ ಜನತೆಗೆ ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆಯುವಂತೆ ಜನತೆಗೆ ಕರೆ ನೀಡಿದರು.

Read Full Story

More Trending News