ಬೆಂಗಳೂರು: ನಾಗರಬಾವಿಯ ಬಾಡಿಗೆ ಮನೆಯಲ್ಲಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕೆಲವು ಪುಢಾರಿಗಳು, ಟೌನ್ಶಿಪ್ ಕಿಂಗ್ಪಿನ್ ಚೇಲಾಗಳು ಸೇರಿಕೊಂಡು ಆ ಮನೆಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸೌಧ ಅಥವಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆದರೆ ಎಲ್ಲರಿಗೂ ಸುಲಭವಾಗಿ ಗೊತ್ತಾಗುತ್ತದೆ. ಕುಮಾರಸ್ವಾಮಿಗೆ ಮಾಹಿತಿ ಹೋಗುತ್ತದೆ ಎಂಬ ಉದ್ದೇಶದಿಂದ ಬಾಡಿಗೆ ಮನೆಯಲ್ಲಿ ರಹಸ್ಯವಾಗಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಏನಪ್ಪಾ ಹರಿದಾ ಎನ್ನುವ ವ್ಯಕ್ತಿ ಈಗ ಹರಿಯುತ್ತಿರುವುದು ಏನು? ನಿಮ್ಮ ಪಾಪದ ಕೂಡ ತುಂಬಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ನಿಮಗೆ ಶಾಸ್ತಿಯಾಗುವ ಕಾಲ ಸನಿಹದಲ್ಲಿದೆ ಎಂದು ಗುಡುಗಿದರು.
10:54 AM (IST) Jun 23
ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಕಾಂಗ್ರೆಸ್ನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಬಿಡದಿ ಟೌನ್ಶಿಪ್ ವಿವಾದ ಮತ್ತು ಮುಸ್ಲಿಂ ಸಚಿವ ಸ್ಥಾನದ ಬೇಡಿಕೆ ಕುರಿತು ಏನು ಹೇಳಿದ್ರು?
10:54 AM (IST) Jun 23
10:43 AM (IST) Jun 23
5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು ಫ್ಲೈಓವರ್ ನಿರ್ಮಿಸಲು ಟೆಂಡರ್ ಕರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.
10:01 AM (IST) Jun 23
09:52 AM (IST) Jun 23
ರಾಜ್ಯದ ಹೊಸ ಅಬಕಾರಿ ನೀತಿಯು ಸರ್ಕಾರದ ಬೊಕ್ಕಸಕ್ಕೆ ಭಾರಿ ಲಾಭ ತಂದುಕೊಟ್ಟಿದೆ. ಬಿಯರ್ ದರ ಇಳಿಕೆಯಿಂದಾಗಿ ಅದರ ಮಾರಾಟ ಗಣನೀಯವಾಗಿ ಏರಿಕೆಯಾಗಿದ್ದರೆ, ಐಎಂಎಲ್ ದರ ಹೆಚ್ಚಳದ ನಡುವೆಯೂ ಅದರ ವಹಿವಾಟು ಕುಗ್ಗಿಲ್ಲ.
09:14 AM (IST) Jun 23
08:51 AM (IST) Jun 23
ಹಸಿವು ಆಗಿದೆ ಊಟ ಕೊಡಪ್ಪ ಎಂದ ವೃದ್ಧ ಭಿಕ್ಷುಕ ದಂಪತಿಗಳ ಮೇಲೆ ಕುಮಟಾದ ಗೋವರ್ಧನ್ ಹೋಟೆಲ್ ಮಾಲೀಕನೋರ್ವ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ದಂಪತಿಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
08:50 AM (IST) Jun 23
08:20 AM (IST) Jun 23
08:11 AM (IST) Jun 23
17 ಲಕ್ಷ ಸಾಲ ಪಡೆದ ರೈತನಿಗೆ ವಂಚಿಸಿ ಕೋಟ್ಯಂತರ ಮೌಲ್ಯದ 5 ಎಕರೆ ಜಮೀನನ್ನು ಬಡ್ಡಿ ದಂಧೆಕೋರರು ಕಬಳಿಸಿದ್ದಾರೆ. ಅಡಮಾನ ಪತ್ರದ ಬದಲು ಖರೀದಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಈ ಮೋಸ ಎಸಗಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
07:56 AM (IST) Jun 23
ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
07:53 AM (IST) Jun 23
07:27 AM (IST) Jun 23
ರೈತರೊಬ್ಬರು, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹತಾಶರಾಗಿ, ತಾವು ಬೆಳೆದಿದ್ದ 11 ಎಕರೆ ಗೋವಿನಜೋಳದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ನಷ್ಟ ಅನುಭವಿಸಿರುವ ಅವರು, ಸರ್ಕಾರದ ನೆರವಿಗಾಗಿ ಒತ್ತಾಯಿಸುತ್ತಿದ್ದಾರೆ.
07:12 AM (IST) Jun 23
ಶಾಸಕ ಡಿ.ಜಿ. ಶಾಂತನಗೌಡಅವರು ಹೊನ್ನಾಳಿಯಿಂದ ದಾವಣಗೆರೆಗೆ ಬಸವಾಪಟ್ಟಣ ಮಾರ್ಗವಾಗಿ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ಹೊಸ ಸೇವೆಯು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸಂಪರ್ಕ ಕೊಂಡಿಯಾಗಿರುವ ಹೊನ್ನಾಳಿಯ ಜನತೆಗೆ ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆಯುವಂತೆ ಜನತೆಗೆ ಕರೆ ನೀಡಿದರು.