LIVE NOW
Published : May 23, 2026, 04:18 AM ISTUpdated : May 23, 2026, 06:34 AM IST

Karnataka News Live: Haveri - ಬಿತ್ತನೆ ಬೀಜಕ್ಕೆ ಕೃಷಿ ಕೇಂದ್ರ ಮುಂದೆ ಮಲಗಿದ ರೈತರು; ವಿಳಂಬ ಧೋರಣೆಗೆ ಆಕ್ರೋಶ

ಸಾರಾಂಶ

ಬೆಂಗಳೂರು: ಮುಂಗಾರು ಹಂಗಾಮಿಗೆ ರಾಜ್ಯದಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯವಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿವರಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 8960 ಕ್ವಿಂಟಲ್‌ ಸೋಯಾಬೀನ್‌, 1344 ಕ್ವಿಂಟಲ್ ಶೇಂಗಾ ಬೀಜಕ್ಕೆ ಅಂದಾಜು ಬೇಡಿಕೆ ಇದೆ. ಈಗಾಗಲೇ 2733 ಕ್ವಿಂಟಲ್ ಸೋಯಾಬೀನ್, 305 ಕ್ವಿಂಟಲ್ ಶೇಂಗಾ ಬೀಜ ದಾಸ್ತಾನು ಮಾಡಲಾಗಿದೆ. ಉಳಿದ ಬೇಡಿಕೆಯನ್ನು ಅಗತ್ಯದ ಆಧಾರದಲ್ಲಿ ಪೂರೈಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿಯೂ ಸೋಯಾಬೀನ್‌ ಬೀಜಕ್ಕೆ 1.80 ಲಕ್ಷ ಕ್ವಿಂಟಲ್ ಬೇಡಿಕೆ ಅಂದಾಜಿದ್ದು, 2.09 ಲಕ್ಷ ಕ್ವಿಂಟಲ್ ದಾಸ್ತಾನಿದೆ. 70 ಸಾವಿರ ಕ್ವಿಂಟಲ್‌ ಶೇಂಗಾ ಬೀಜಕ್ಕೆ ಬೇಡಿಕೆ ಇದ್ದು, 74 ಸಾವಿರ ಕ್ವಿಂಟಲ್ ದಾಸ್ತಾನಿದೆ. ಒಟ್ಟಾರೆ ರಾಜ್ಯದಲ್ಲಿ ಎಲ್ಲಾ ಬೆಳೆಗಳ 4.71 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 5.46 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯವಿದೆ ಎಂದು ಹೇಳಿದ್ದಾರೆ.

06:34 AM (IST) May 23

Haveri - ಬಿತ್ತನೆ ಬೀಜಕ್ಕೆ ಕೃಷಿ ಕೇಂದ್ರ ಮುಂದೆ ಮಲಗಿದ ರೈತರು; ವಿಳಂಬ ಧೋರಣೆಗೆ ಆಕ್ರೋಶ

ಹಾವೇರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚಿದೆ. ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯಲ್ಲಿ ಸೋಯಾಬೀನ್, ಶೇಂಗಾ ಬೀಜಗಳಿಗಾಗಿ ರೈತರು ಕೃಷಿ ಕೇಂದ್ರದ ಮುಂದೆ ರಾತ್ರಿಯಿಡೀ ಸರದಿ ಸಾಲಿನಲ್ಲಿ ಕಾಯುತ್ತಿದ್ದು, ಅಧಿಕಾರಿಗಳ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

06:25 AM (IST) May 23

ಎಸ್‌ಐಆರ್‌ನಿಂದ ಹೆಸ್ರು ಹೋದ್ರೆ ಗೃಹಲಕ್ಷ್ಮಿ, ಪಿಂಚಣಿ ಸೌಲಭ್ಯ ಸಿಗಲ್ಲ - ಡಿಕೆ ಶಿವಕುಮಾರ್

ಬಡವರ ಮತಗಳನ್ನು ತೆಗೆದುಹಾಕಲು 'ಎಸ್‌ಐಆರ್‌' ಮೂಲಕ ಸಂಚು ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಮತದಾನದ ಹಕ್ಕು ಕಳೆದುಕೊಂಡರೆ ಗೃಹಲಕ್ಷ್ಮಿ, ಪಿಂಚಣಿ ಸೌಲಭ್ಯಗಳು ಸಿಗುವುದಿಲ್ಲವಾದ್ದರಿಂದ, ಪ್ರತಿಯೊಬ್ಬರೂ ಈ ಬಗ್ಗೆ ಜಾಗೃತರಾಗಿರಬೇಕು ಎಂದು ಅವರು ಕರೆ ನೀಡಿದ್ದಾರೆ.
Read Full Story

06:18 AM (IST) May 23

Bengaluru - ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗಿಂದು ಶಂಕುಸ್ಥಾಪನೆ; 80 ಸಾವಿರ ಆಸನ

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ 76,000 ಆಸನ ಸಾಮರ್ಥ್ಯದ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯು ಪೂರ್ಣಗೊಂಡರೆ, ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದು, ಇದರೊಂದಿಗೆ ವಸತಿ ಯೋಜನೆಗಳಿಗೂ ಚಾಲನೆ ನೀಡಲಾಗುತ್ತಿದೆ.
Read Full Story

05:58 AM (IST) May 23

Bengaluru - ಕಾಕ್ರೋಚ್‌ ಜನತಾ ಪಕ್ಷದ ಮೊದಲ ಬಹಿರಂಗ ಸಭೆಗೆ ಬೆಂಗಳೂರು ಪೊಲೀಸರ ನಿರ್ಬಂಧ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ 'ಕಾಕ್ರೋಚ್ ಜನತಾ ಪಾರ್ಟಿ'ಯು ಬೆಂಗಳೂರಿನ ಪುರಭವನದ ಮುಂದೆ ಮಾನವ ಸರಪಳಿ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ, ಈ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ನೀಡಿಲ್ಲ ಮತ್ತು ಅಕ್ರಮವಾಗಿ ಗುಂಪು ಸೇರಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Read Full Story

05:44 AM (IST) May 23

ಧರ್ಮಸ್ಥಳದ ಬಂಗ್ಲೆಗುಡ್ಡೆ ರಹಸ್ಯ - ಬುರುಡೆ ಬೇಟೆಗೆ ಮತ್ತೆ ಇಳಿದ SIT? ಘಟನೆ ಮರುಸೃಷ್ಟಿ

ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದ್ದು, ಎಸ್‌ಐಟಿ ಮತ್ತು ವಿಧಿವಿಜ್ಞಾನ ತಂಡವು ಬಂಗ್ಲೆಗುಡ್ಡೆಗೆ ಭೇಟಿ ನೀಡಿದೆ. 8 ತಿಂಗಳ ಹಿಂದೆ ಅಸ್ಥಿಪಂಜರಗಳು ಪತ್ತೆಯಾಗಿದ್ದ ಸ್ಥಳದಲ್ಲಿ, ತಲೆಬುರುಡೆಯ ವಿಡಿಯೋ ಮಾಡಿದ ಘಟನೆಯನ್ನು ಮರುಸೃಷ್ಟಿಸಿ, ಹೊಸದಾಗಿ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.

Read Full Story

05:28 AM (IST) May 23

ಗ್ಲೋಬಲ್ ವಾಟರ್ ಸಮಿಟ್‌ನಲ್ಲಿ ವಿಶ್ವದ ಗಮನ ಸೆಳೆದ ಬೆಂಗಳೂರಿನ ಜಲಮಂಡಳಿಯ ಪಂಚಸೂತ್ರ

ಬೆಂಗಳೂರು ಜಲಮಂಡಳಿಯು ಸ್ಪೇನ್‌ನಲ್ಲಿ ನಡೆದ 'ಗ್ಲೋಬಲ್ ವಾಟರ್ ಸಮಿಟ್'ನಲ್ಲಿ ಜಾಗತಿಕ ಮನ್ನಣೆ ಗಳಿಸಿದೆ. ನೀರು ಪೂರೈಕೆ, ನೈರ್ಮಲ್ಯ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿನ ಸಾಧನೆಗಾಗಿ 'ಯುಟಿಲಿಟಿ ಆಫ್ ದಿ ಇಯರ್' ಸೇರಿದಂತೆ ಮೂರು ವಿಭಾಗಗಳಲ್ಲಿ ವಿಶ್ವದ ಟಾಪ್ 5 ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

Read Full Story

05:23 AM (IST) May 23

ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ದೀಪ್ಕೆ ಪೋಷಕರಿಗೆ ಆತಂಕ; ತಂದೆ ಹೇಳಿದ್ದೇನು?

ಸಾಮಾಜಿಕ ಮಾಧ್ಯಮದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಹುಟ್ಟುಹಾಕಿ ಜನಪ್ರಿಯರಾದ ಅಭಿಜೀತ್ ದೀಪ್ಕೆ, ಭಾರತಕ್ಕೆ ಮರಳಿದರೆ ಬಂಧನವಾಗುವ ಭಯದಲ್ಲಿ ಅವರ ಪೋಷಕರು ಆತಂಕಗೊಂಡಿದ್ದಾರೆ. ಮಗನ ಸುರಕ್ಷತೆಯ ಬಗ್ಗೆ ಚಿಂತಿತರಾಗಿರುವ ಅವರು, ಆತನನ್ನು ರಾಜಕೀಯಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ, ದೀಪ್ಕೆ ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲಾಗಿದೆ.
Read Full Story

05:14 AM (IST) May 23

ಜೂನ್‌ನಿಂದ ಬೀದರ್‌-ಕಲಬುರಗಿಗೆ ಬೆಂಗ್ಳೂರಿಂದ ವಿಮಾನ ಸೇವೆ ಪುನರಾರಂಭ; ಮುಂಗಡ ಬುಕ್ಕಿಂಗ್ ಶುರು

ಕಲ್ಯಾಣ ಕರ್ನಾಟಕ ಭಾಗದ ಬೀದರ್‌ ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನರಾರಂಭಗೊಳ್ಳಲಿದೆ. ಸ್ಟಾರ್‌ ಏರ್‌ಲೈನ್ಸ್‌ ಈ ಸೇವೆಯನ್ನು ಒದಗಿಸಲಿದ್ದು, ಪ್ರಾದೇಶಿಕ ಸಂಪರ್ಕ ವೃದ್ಧಿಸುವ ಉದ್ದೇಶದಿಂದ ಸರ್ಕಾರವು ವಯಾಬಲಿಟಿ ಗ್ಯಾಪ್‌ ಫಂಡಿಂಗ್‌ ಮೂಲಕ ಆರ್ಥಿಕ ಬೆಂಬಲ ನೀಡುತ್ತಿದೆ.
Read Full Story

05:08 AM (IST) May 23

ಸಿಂದಗಿ-ಇಂಡಿ-ಲಚ್ಯಾಣ-ಸೋಲಾಪುರಕ್ಕೆ ಕೊನೆಗೂ ಆರಂಭವಾದ ಬಸ್; ಯಶವಂತಗೌಡ ಪಾಟೀಲರು ಚಾಲನೆ

ಇಂಡಿ ತಾಲೂಕಿನ ಲಚ್ಯಾಣ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಸಿಂದಗಿ-ಇಂಡಿ-ಲಚ್ಯಾಣ ಮೂಲಕ ಸೋಲಾಪುರಕ್ಕೆ ಹೋಗುವ ಹೊಸ ಬಸ್ ಸೇವೆಗೆ ಶಾಸಕ ಯಶವಂತಗೌಡ ಪಾಟೀಲರು ಚಾಲನೆ ನೀಡಿದರು. ಈ ಬಸ್ಸು ಸಿದ್ದಲಿಂಗೇಶ್ವರ ಭಕ್ತರಿಗೆ, ವ್ಯಾಪಾರಸ್ಥರಿಗೆ ಮತ್ತು ನೌಕರರಿಗೆ ಅನುಕೂಲವಾಗಲಿದೆ.

Read Full Story

05:00 AM (IST) May 23

ಸಂಜೆ 5.30ಕ್ಕೆ ಬೆಳಗಾವಿ ವಿಟಿಯು ಪರೀಕ್ಷೆ ಅಂತ್ಯ, ಸಂಜೆ 5.40ಕ್ಕೆ ರಿಸಲ್ಟ್‌ ; ಹತ್ತೇ ನಿಮಿಷಕ್ಕೆ ಫಲಿತಾಂಶ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಅಂತಿಮ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಡಿಜಿಟಲ್ ಮೌಲ್ಯಮಾಪನ ಪದ್ಧತಿಯಿಂದಾಗಿ ಈ ತ್ವರಿತ ಪ್ರಕ್ರಿಯೆ ಸಾಧ್ಯವಾಗಿದ್ದು, 56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 

Read Full Story

04:55 AM (IST) May 23

Rain - ರಾಜಧಾನಿ ಬೆಂಗಳೂರಿನಲ್ಲಿ ಸುರಿದ 1 ಗಂಟೆಯ ಮಳೆಗೆ 150ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ 157ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಿಂದಾಗಿ ನೂರಾರು ವಾಹನಗಳು ಜಖಂಗೊಂಡಿದ್ದು, ಬಿದ್ದ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.

Read Full Story

04:50 AM (IST) May 23

ಬೌರಿಂಗ್‌ ಕಾಂಪೌಂಡ ಕುಸಿತ ದುರಂತಕ್ಕೆ ಕಾರಣ ಏನು? ಲೋಕಾಯುಕ್ತ ತನಿಖಾ ವರದಿಯಲ್ಲಿ ಬಹಿರಂಗ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಲೋಕಾಯುಕ್ತ ತನಿಖಾ ವರದಿಯು ಹಲವು ಆಘಾತಕಾರಿ ಅಂಶಗಳನ್ನು ಬಹಿರಂಗಪಡಿಸಿದೆ. 2008-09ರಲ್ಲಿ ಲಾರಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಕಾಂಪೌಂಡ್‌ನ ಕೆಲ ಭಾಗ ಒಡೆದಿತ್ತು. ಈ ಭಾಗವನ್ನು ಸಿಮೆಂಟ್ ಬ್ಲಾಕ್‌ ಬಳಸಿ ಮರು ನಿರ್ಮಿಸಲಾಗಿತ್ತು.

Read Full Story

04:42 AM (IST) May 23

ಸಂಪುಟ ಪುನಾರಚನೆ ಕೂಗು - ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ದೆಹಲಿಯತ್ತ ಕೈ ಶಾಸಕರ ದಂಡು

ರಾಜ್ಯ ಸರ್ಕಾರದ ಸಚಿವ ಸಂಪುಟ ಪುನಾರಚನೆಗೆ ಒತ್ತಡ ಹೆಚ್ಚಾಗಿದ್ದು, ಕೃಷ್ಣಬೈರೇಗೌಡ ನೇತೃತ್ವದಲ್ಲಿ ಹಲವು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿದ್ದಾರೆ. ಮತ್ತೊಂದೆಡೆ, ಬೇಳೂರು ಗೋಪಾಲಕೃಷ್ಣ ಕೂಡ 30 ಶಾಸಕರೊಂದಿಗೆ ದೆಹಲಿಗೆ ತೆರಳುವುದಾಗಿ ಹೇಳಿದ್ದು, ಸಚಿವ ಸ್ಥಾನಕ್ಕಾಗಿ ತಮ್ಮ ಹಕ್ಕನ್ನು ಮಂಡಿಸಲಿದ್ದಾರೆ. ಈ ಬೆಳವಣಿಗೆಯು ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆಯ ಚರ್ಚೆಯನ್ನು ತೀವ್ರಗೊಳಿಸಿದೆ.
Read Full Story

04:32 AM (IST) May 23

HDD, ಖರ್ಗೆ ನಿವೃತ್ತಿಯಿಂದ ತೆರವು ಜೂ.18ಕ್ಕೆ ರಾಜ್ಯಸಭೆ ಚದುರಂಗ ; 4 ಸ್ಥಾನಕ್ಕೆ ಮತದಾನ

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗವು ಚುನಾವಣೆ ಘೋಷಿಸಿದೆ. ಹಾಲಿ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಎಚ್‌.ಡಿ.ದೇವೇಗೌಡ ಸೇರಿದಂತೆ ನಾಲ್ವರ ಅವಧಿ ಅಂತ್ಯಗೊಳ್ಳಲಿದ್ದು, ವಿಧಾನಸಭೆಯ ಸಂಖ್ಯಾಬಲದ ಪ್ರಕಾರ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಲಭಿಸುವ ಸಾಧ್ಯತೆಯಿದೆ.
Read Full Story

More Trending News