ಬೆಂಗಳೂರು: ಮುಂಗಾರು ಹಂಗಾಮಿಗೆ ರಾಜ್ಯದಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯವಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿವರಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 8960 ಕ್ವಿಂಟಲ್ ಸೋಯಾಬೀನ್, 1344 ಕ್ವಿಂಟಲ್ ಶೇಂಗಾ ಬೀಜಕ್ಕೆ ಅಂದಾಜು ಬೇಡಿಕೆ ಇದೆ. ಈಗಾಗಲೇ 2733 ಕ್ವಿಂಟಲ್ ಸೋಯಾಬೀನ್, 305 ಕ್ವಿಂಟಲ್ ಶೇಂಗಾ ಬೀಜ ದಾಸ್ತಾನು ಮಾಡಲಾಗಿದೆ. ಉಳಿದ ಬೇಡಿಕೆಯನ್ನು ಅಗತ್ಯದ ಆಧಾರದಲ್ಲಿ ಪೂರೈಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿಯೂ ಸೋಯಾಬೀನ್ ಬೀಜಕ್ಕೆ 1.80 ಲಕ್ಷ ಕ್ವಿಂಟಲ್ ಬೇಡಿಕೆ ಅಂದಾಜಿದ್ದು, 2.09 ಲಕ್ಷ ಕ್ವಿಂಟಲ್ ದಾಸ್ತಾನಿದೆ. 70 ಸಾವಿರ ಕ್ವಿಂಟಲ್ ಶೇಂಗಾ ಬೀಜಕ್ಕೆ ಬೇಡಿಕೆ ಇದ್ದು, 74 ಸಾವಿರ ಕ್ವಿಂಟಲ್ ದಾಸ್ತಾನಿದೆ. ಒಟ್ಟಾರೆ ರಾಜ್ಯದಲ್ಲಿ ಎಲ್ಲಾ ಬೆಳೆಗಳ 4.71 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 5.46 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯವಿದೆ ಎಂದು ಹೇಳಿದ್ದಾರೆ.
09:59 PM (IST) May 23
ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗದಂತೆ ತಡೆದು, ಸರ್ಕಾರಿ ಶಾಲೆಗಳತ್ತ ಸೆಳೆಯಲು ಶಿಕ್ಷಕರೊಬ್ಬರು ಸರ್ಕಾರಿ ಶಾಲೆಯಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯುವ ಎಲ್ಲ ಮಕ್ಕಳಿಗೂ ತಲಾ 2 ಸಾವಿರ ಠೇವಣಿ ಮಾಡಿಸಲು ಮುಂದಾಗಿದ್ದಾರೆ.
09:46 PM (IST) May 23
ಗ್ರಾಮಗಳಲ್ಲೇ ಹಾಜರಿದ್ದು, ಸಮಸ್ಯೆಗಳ ಬಗೆಹರಿಸುವಿಕೆಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವುದಾಗಿ ಸುಳ್ಳು ಹೇಳುತ್ತ, ಬಯೋಮೆಟ್ರಿಕ್ ಹಾಜರಿಯನ್ನು ಬೇರೊಬ್ಬರಿಗೆ ನೀಡಿ, ದಿನನಿತ್ಯದ..
09:43 PM (IST) May 23
ರಾಜ್ಯದ ಹಲೆವೆಡೆ ಇಂದು ಭಾರಿ ಮಳೆಯಾಗಿದೆ. ಹಲವೆಡೆ ಮರಗಳು ಉರುಳಿ ಬಿದ್ದಿದೆ. ಇತ್ತ ಸಿಡಿಲಿನ ಅಬ್ಬರಕ್ಕೆ ತೆಂಗಿನ ಮರ ಹೊತ್ತಿ ಉರಿದ ಘಟನೆಯೂ ನಡೆದಿದೆ. ರಸ್ತೆಗಳು ನೀರಿನೀಂದ ತುಂಬಿ ಹೋಗಿದ್ದು ವಾಹನ ಸವಾರರು ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ.
09:13 PM (IST) May 23
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 5 ನಗರ ಪಾಲಿಕೆಗಳಿಗೆ 2026ರ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸೋ ಚುನಾವಣೆಗೆ ತಯಾರಿ ಶುರುವಾಗಿದೆ. ಈ ನಡುವೆ ತಮಿಳು ಮತದಾರರು ಹೆಚ್ಚು ಇರುವ ವಾರ್ಡ್ಗಳಲ್ಲಿ ಟಿವಿಕೆ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಅನ್ನುವ ಸುದ್ದಿ ಹರಿದಾಡ್ತಾ ಇದೆ..!
07:53 PM (IST) May 23
ಸಮಾಜದ ಪರವಾದ ನನ್ನ ಗಟ್ಟಿಧ್ವನಿ ಅಡಗಿಸಲು ದುಷ್ಟಶಕ್ತಿಗಳು ಪ್ಯಾಕೇಜ್ ಮಾಡಿಕೊಂಡು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ನೋವಿನಿಂದ ಹೇಳಿಕೊಂಡರು.
07:36 PM (IST) May 23
ಭಾರತೀಯ ಜನತಾ ಪಕ್ಷ ಎನ್ನುವುದು ಕೇವಲ ಒಂದು ರಾಜಕೀಯ ಪಕ್ಷವಲ್ಲ. ಅದು ಒಂದು ಸೈದ್ದಾಂತಿಕ ಆಂದೋಲನ. ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಹರಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
07:16 PM (IST) May 23
ಇವರೇನು ಮಕ್ಕಳೂ ಅಂತ ತಿಳ್ಕೊಂಡಿದೀರಾ ಅಥವಾ ಪ್ರಾಣಿಗಳಂತ ತಿಳ್ಕೊಂಡಿದಿರಾ. ನೀವೆಲ್ಲಾ ಮನುಷ್ಯರೇನ್ರೀ. ನಿಮಗೆ ಮನುಷ್ಯತ್ವ ಇದೆಯಾ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
07:14 PM (IST) May 23
06:57 PM (IST) May 23
ಮುಸ್ಲಿಮರ ಮೇಲಿನ ಕೇಸ್ಗಳನ್ನು ವಾಪಸ್ ತೆಗೆದುಕೊಂಡಂತೆ ಹಿಂದೂಗಳ ಮೇಲಿನ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳಲಿ. ಈ ಮೂಲಕ ಜಾತ್ಯಾತೀತ ಎಂದು ಎಲ್ಲರನ್ನೂ ನೋಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
06:40 PM (IST) May 23
06:37 PM (IST) May 23
ಕಾಶೀನಾಥ್ ಗರಡಿಯಲ್ಲಿ ಪಳಗಿದ ನಟ, ನಿರ್ದೇಶಕ ಪ್ರಸಾದ್ ಪುತ್ತೂರು ನಿರ್ದೇಶನದ ಚಿತ್ರ ‘ಮಂಗಮಾಯ’ ಇದೀಗ ಥಿಯೇಟರ್ನಲ್ಲಿದೆ. ಸಿನಿಮಾ ಬಗ್ಗೆ ನಿರ್ದೇಶಕ ಪ್ರಸಾದ್ ಪುತ್ತೂರು, ಶ್ರೀಸಾಮಾನ್ಯನೊಬ್ಬನ ಶಕ್ತಿಯನ್ನು ಹೇಳುವ ಸಸ್ಪೆನ್ಸ್ ಥ್ರಿಲ್ಲರ್.
05:35 PM (IST) May 23
ನಿಮ್ಮ ಎಥ್ನಿಕ್ ಅಥವಾ ಫ್ಯೂಷನ್ ಲುಕ್ಗೆ ಒಂದು ಸ್ಟೈಲಿಶ್ ಮತ್ತು ರಾಯಲ್ ಟಚ್ ನೀಡಬೇಕಾ? ಹಾಗಿದ್ರೆ, ಈ ಮಾಡರ್ನ್ ಸಿಲ್ವರ್ ಕಮರ್ಬಂದ್ ಡಿಸೈನ್ಗಳು ನಿಮ್ಮ ಸೊಂಟದ ಅಂದವನ್ನು ಹೆಚ್ಚಿಸಿ, ನಿಮ್ಮ ಇಡೀ ಲುಕ್ಗೆ ಗ್ಲಾಮರ್ ತುಂಬಲಿವೆ.
05:12 PM (IST) May 23
ಸಾಮಾನ್ಯವಾಗಿ ಬಿಸಾಕೋ ಖರ್ಜೂರದ ಬೀಜಗಳಿಂದ್ಲೇ ಸಖತ್ ಟೇಸ್ಟಿ ಮತ್ತು ಹೆಲ್ದೀ ಕಾಫಿ ಮಾಡ್ಬಹುದು ಗೊತ್ತಾ? ಕೆಫೀನ್ ಇಲ್ಲದ ಈ ಡ್ರಿಂಕ್ ಕುಡಿಯೋಕೆ ರುಚಿಯಾಗಿರೋದು ಮಾತ್ರವಲ್ಲ, ಶಕ್ತಿ ಕೂಡ ಕೊಡುತ್ತೆ.
04:36 PM (IST) May 23
19ನೇ ಐಪಿಎಲ್ ಪ್ಲೇಆಫ್ನ ಕೊನೆಯ ಸ್ಥಾನಕ್ಕಾಗಿ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನಕ್ಕೆ ಹೆಚ್ಚಿನ ಅವಕಾಶಗಳಿದ್ದರೆ, ಉಳಿದ ತಂಡಗಳ ಭವಿಷ್ಯವು ನೆಟ್ ರನ್ರೇಟ್ ಮತ್ತು ಇತರ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.
01:48 PM (IST) May 23
ಬೆಂಗಳೂರು: ತಾಳಗುಪ್ಪ-ಬೆಂಗಳೂರು ನಡುವಿನ ರೈಲುಗಳು ಕೆಲವೊಮ್ಮೆ ತಾಳಗುಪ್ಪ ತಲುಪುವುದು ತುಂಬಾ ತಡವಾಗುತ್ತಿದೆ ಎನ್ನುವ ಮಾತುಗಳು ಪ್ರಯಾಣಿಕರಿಂದ ಕೇಳಿ ಬಂದಿದ್ದವು. ಇದೀಗ ಮಲೆನಾಡಿನ ರೈಲ್ವೇ ಪ್ರಯಾಣಿಕರಿಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಗುಡ್ ನ್ಯೂಸ್ ಕೊಟ್ಟಿದ್ದಾರೆ.
01:28 PM (IST) May 23
ರೇಣುಕಾಸ್ವಾಮಿ ಕೊಲೆ ಪ್ರಕರಣವು ನಿರ್ಣಾಯಕ ಹಂತ ತಲುಪಿದ್ದು, ಸುಪ್ರೀಂ ಕೋರ್ಟ್ ತ್ವರಿತ ವಿಚಾರಣೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದ್ದು, ಐವರು ಆರೋಪಿಗಳ ಜಾಮೀನು ರದ್ದತಿ ಕುರಿತ ಹೈಕೋರ್ಟ್ ತೀರ್ಪು ಕಾಯ್ದಿರಿಸಲಾಗಿದೆ.
12:35 PM (IST) May 23
ಪ್ರಸಕ್ತ 19ನೇ ವಾರದ ಕನ್ನಡ ಕಿರುತೆರೆ ಟಿಆರ್ಪಿ ರೇಟಿಂಗ್ಸ್ ಬಿಡುಗಡೆಯಾಗಿದ್ದು, ಧಾರಾವಾಹಿಗಳ ನಡುವೆ ತೀವ್ರ ಪೈಪೋಟಿ ಕಂಡುಬಂದಿದೆ. 'ಕರ್ಣ' ಧಾರಾವಾಹಿ ಅಗ್ರಸ್ಥಾನದಲ್ಲಿದ್ದರೆ, 'ಅಣ್ಣಯ್ಯ', 'ಲಕ್ಷ್ಮಿ ನಿವಾಸ', 'ನಂದಗೋಕುಲ' ಮತ್ತು 'ಅಮೃತಧಾರೆ' ಕ್ರಮವಾಗಿ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
12:22 PM (IST) May 23
ಕಾಂಗ್ರೆಸ್ ಯುವ ನಾಯಕಿ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಡಾ.ಹಕೀಮ್ ತೀರ್ಥಹಳ್ಳಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಅದ್ಧೂರಿ ವಿವಾಹ ಸಮಾರಂಭದಲ್ಲಿ ರಾಜಕೀಯ ಗಣ್ಯರು ಮತ್ತು ಚಂದನವನದ ಕಲಾವಿದರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.
11:56 AM (IST) May 23
ಜೂನ್ನಲ್ಲಿ ಜನಿಸಿದವರ ಮೇಲೆ ಶುಕ್ರ ಗ್ರಹ ಮತ್ತು ಭಗವಾನ್ ವಿಷ್ಣುವಿನ ವಿಶೇಷ ಕೃಪೆ ಇರುತ್ತದೆ. ಇವರು ಆಕರ್ಷಕ ವ್ಯಕ್ತಿತ್ವದವರಾಗಿದ್ದು, ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತಾರೆ ಮತ್ತು ಶಾಂತಿಪ್ರಿಯರಾಗಿರುತ್ತಾರೆ.
11:09 AM (IST) May 23
Bigg Boss Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅವರು ಒಂದಿಲ್ಲೊಂದು ವಿಚಾರಕ್ಕೆ ಸದ್ದು ಮಾಡುತ್ತಾರೆ. ಆಗಾಗ ವಿದೇಶಕ್ಕೆ ಟ್ರಿಪ್ ಹೋಗುವ ಸೋನು ಈ ಬಾರಿ ಇನ್ಸ್ಟಾಗ್ರಾಮ್ ಆದಾಯದಿಂದ ಅಚ್ಚರಿಗೊಳಿಸಿದ್ದಾರೆ. ಡಬಲ್ ಡಿಗ್ರಿ ಮಾಡಿದವರಿಗೂ ಇಷ್ಟು ಹಣ ಸಿಗೋದಿಲ್ಲ.
11:02 AM (IST) May 23
ಇನ್ಸ್ಟಾಗ್ರಾಮ್ನಲ್ಲಿ ಅನಿಲ್ ಕುಮಾರ್ ಎಂಬ ಹೆಸರಿನ ಈ ವ್ಯಕ್ತಿ, ಆರಂಭದಲ್ಲಿ ತಾನೊಬ್ಬ ಸಭ್ಯ "ಸ್ಟ್ರೀಟ್ ಫೋಟೋಗ್ರಾಫರ್" ಎಂದು ಪೋಸ್ ಕೊಟ್ಟಿದ್ದಾನೆ. ತನಿಷಾ ಅವರ ಇನ್ಬಾಕ್ಸ್ ಪ್ರವೇಶಿಸಿದ ಈತ, ಮೊದಲಿಗೆ ಫೋಟೋಗ್ರಫಿ ಬಗ್ಗೆ ಮಾತನಾಡುತ್ತಲೇ ತನ್ನ ಅಸಲಿ ಬಣ್ಣ ಬಯಲು ಮಾಡಿದ್ದಾನೆ. ಏನಿದು ಸ್ಟೋರಿ?
10:38 AM (IST) May 23
10:07 AM (IST) May 23
09:19 AM (IST) May 23
09:17 AM (IST) May 23
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ, ತೂಕ ನಿಯಂತ್ರಣಕ್ಕೆ ಸಹಾಯವಾಗುತ್ತದೆ ಮತ್ತು ಮಧುಮೇಹವನ್ನು ನಿರ್ವಹಿಸಲು ನೆರವಾಗುತ್ತದೆ.
08:05 AM (IST) May 23
07:25 AM (IST) May 23
06:53 AM (IST) May 23
06:34 AM (IST) May 23
ಹಾವೇರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚಿದೆ. ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯಲ್ಲಿ ಸೋಯಾಬೀನ್, ಶೇಂಗಾ ಬೀಜಗಳಿಗಾಗಿ ರೈತರು ಕೃಷಿ ಕೇಂದ್ರದ ಮುಂದೆ ರಾತ್ರಿಯಿಡೀ ಸರದಿ ಸಾಲಿನಲ್ಲಿ ಕಾಯುತ್ತಿದ್ದು, ಅಧಿಕಾರಿಗಳ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
06:25 AM (IST) May 23
06:18 AM (IST) May 23
05:58 AM (IST) May 23
05:44 AM (IST) May 23
ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದ್ದು, ಎಸ್ಐಟಿ ಮತ್ತು ವಿಧಿವಿಜ್ಞಾನ ತಂಡವು ಬಂಗ್ಲೆಗುಡ್ಡೆಗೆ ಭೇಟಿ ನೀಡಿದೆ. 8 ತಿಂಗಳ ಹಿಂದೆ ಅಸ್ಥಿಪಂಜರಗಳು ಪತ್ತೆಯಾಗಿದ್ದ ಸ್ಥಳದಲ್ಲಿ, ತಲೆಬುರುಡೆಯ ವಿಡಿಯೋ ಮಾಡಿದ ಘಟನೆಯನ್ನು ಮರುಸೃಷ್ಟಿಸಿ, ಹೊಸದಾಗಿ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.
05:28 AM (IST) May 23
ಬೆಂಗಳೂರು ಜಲಮಂಡಳಿಯು ಸ್ಪೇನ್ನಲ್ಲಿ ನಡೆದ 'ಗ್ಲೋಬಲ್ ವಾಟರ್ ಸಮಿಟ್'ನಲ್ಲಿ ಜಾಗತಿಕ ಮನ್ನಣೆ ಗಳಿಸಿದೆ. ನೀರು ಪೂರೈಕೆ, ನೈರ್ಮಲ್ಯ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿನ ಸಾಧನೆಗಾಗಿ 'ಯುಟಿಲಿಟಿ ಆಫ್ ದಿ ಇಯರ್' ಸೇರಿದಂತೆ ಮೂರು ವಿಭಾಗಗಳಲ್ಲಿ ವಿಶ್ವದ ಟಾಪ್ 5 ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ.
05:23 AM (IST) May 23
05:14 AM (IST) May 23
05:08 AM (IST) May 23
ಇಂಡಿ ತಾಲೂಕಿನ ಲಚ್ಯಾಣ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಸಿಂದಗಿ-ಇಂಡಿ-ಲಚ್ಯಾಣ ಮೂಲಕ ಸೋಲಾಪುರಕ್ಕೆ ಹೋಗುವ ಹೊಸ ಬಸ್ ಸೇವೆಗೆ ಶಾಸಕ ಯಶವಂತಗೌಡ ಪಾಟೀಲರು ಚಾಲನೆ ನೀಡಿದರು. ಈ ಬಸ್ಸು ಸಿದ್ದಲಿಂಗೇಶ್ವರ ಭಕ್ತರಿಗೆ, ವ್ಯಾಪಾರಸ್ಥರಿಗೆ ಮತ್ತು ನೌಕರರಿಗೆ ಅನುಕೂಲವಾಗಲಿದೆ.
05:00 AM (IST) May 23
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಅಂತಿಮ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಡಿಜಿಟಲ್ ಮೌಲ್ಯಮಾಪನ ಪದ್ಧತಿಯಿಂದಾಗಿ ಈ ತ್ವರಿತ ಪ್ರಕ್ರಿಯೆ ಸಾಧ್ಯವಾಗಿದ್ದು, 56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
04:55 AM (IST) May 23
ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ 157ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಿಂದಾಗಿ ನೂರಾರು ವಾಹನಗಳು ಜಖಂಗೊಂಡಿದ್ದು, ಬಿದ್ದ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.
04:50 AM (IST) May 23
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಲೋಕಾಯುಕ್ತ ತನಿಖಾ ವರದಿಯು ಹಲವು ಆಘಾತಕಾರಿ ಅಂಶಗಳನ್ನು ಬಹಿರಂಗಪಡಿಸಿದೆ. 2008-09ರಲ್ಲಿ ಲಾರಿ ಕಾಂಪೌಂಡ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ನ ಕೆಲ ಭಾಗ ಒಡೆದಿತ್ತು. ಈ ಭಾಗವನ್ನು ಸಿಮೆಂಟ್ ಬ್ಲಾಕ್ ಬಳಸಿ ಮರು ನಿರ್ಮಿಸಲಾಗಿತ್ತು.