LIVE NOW
Published : Apr 24, 2026, 06:39 AM ISTUpdated : Apr 24, 2026, 10:11 AM IST

Karnataka News Live: Kalpakkam Fast Breeder Reactor - ಕಲ್ಪಕಂ ಯೋಜನೆ ಮುಗಿಸಲು ನಡೆದಿತ್ತು ವಿದೇಶಿ ಷಡ್ಯಂತ್ರ!

ಸಾರಾಂಶ

ಬೆಂಗಳೂರು: ಪಂಚ ರಾಜ್ಯ ಹಾಗೂ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗಳ ಫಲಿತಾಂಶ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳವಣಿಗೆಯ ನಿರೀಕ್ಷೆ ಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಉಭಯ ಬಣಗಳಲ್ಲಿ ಮುಗುಂ ಆಗಿ ಚಟುವಟಿಕೆ ಆರಂಭಗೊಂಡಿದೆ. ಮುಖ್ಯವಾಗಿ ಬುಧವಾರ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಗೆ ಭೇಟಿ ನೀಡಿದ್ದಾರೆ. 'ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಅವರು ಯಾರು ಎಂದು ಹೇಳುವುದಿಲ್ಲ. ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಕುರಿತು ವರಿಷ್ಠರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಬೇಕಾಗಿದೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳ ಎದುರು ಮಾತನಾಡುವುದಿಲ್ಲ ಎಂದರು.

ಮತ್ತೊಂದೆಡೆ ಈ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಸಂಜೆ ನಡೆದ ಸಚಿವರ ಸಭೆಯಲ್ಲಿ ಅಷ್ಟೇನೂ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಿಲ್ಲ. ಅದು ಸರ್ಜರಿ ಅಲ್ಲ ಜನರಲ್ ಚೆಕಪ್ ಅಷ್ಟೇ ಎಂದರು.

10:11 AM (IST) Apr 24

Kalpakkam Fast Breeder Reactor - ಕಲ್ಪಕಂ ಯೋಜನೆ ಮುಗಿಸಲು ನಡೆದಿತ್ತು ವಿದೇಶಿ ಷಡ್ಯಂತ್ರ!

ಭಾರತದ ಇಂಧನ ಭದ್ರತೆಯ ಕನಸಾದ ಕಲ್ಪಕಂ ರಿಯಾಕ್ಟರ್ ಯೋಜನೆಗೆ ಅಡ್ಡಿಯಾದ ವಿದೇಶಿ ಷಡ್ಯಂತ್ರ ಮತ್ತು 'ಆರ್ಥಿಕ ಉಗ್ರವಾದ'ದ ಕರಾಳ ಸತ್ಯವನ್ನು ತಿಳಿಯಿರಿ. ಈ ಸವಾಲುಗಳನ್ನು ಭಾರತ ಮೆಟ್ಟಿನಿಂತದ್ದು ಹೇಗೆ? ಪೂರ್ತಿ ಓದಿ.

Read Full Story

10:07 AM (IST) Apr 24

ವಿಜಯಪುರ - ಸಂಬಂಧಿಕರಿಂದಲೇ ಗ್ರಾ.ಪಂ ಮಾಜಿ ಸದಸ್ಯನ ಭೀಕರ ಹತ್ಯೆ - ಆರು ಹಂತಕರ ಬಂಧನ

ವಿಜಯಪುರದಲ್ಲಿ ನಡೆದ ಗ್ರಾ.ಪಂ ಮಾಜಿ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
Read Full Story

10:02 AM (IST) Apr 24

ಜಿಯೋ, ಏರ್‌ಟೆಲ್‌ಗೆ ಬಿಗ್ ಶಾಕ್! BSNLನಿಂದ ಬಂತು ಬೊಂಬಾಟ್ ಆಫರ್, ದಿನಕ್ಕೆ 3GB ಡೇಟಾ!

ಖಾಸಗಿ ಟೆಲಿಕಾಂ ಕಂಪನಿಗಳಾದ ಜಿಯೋ ಮತ್ತು ಏರ್‌ಟೆಲ್‌ಗೆ ಶಾಕ್ ನೀಡಲು ಸರ್ಕಾರಿ ಸ್ವಾಮ್ಯದ BSNL ಹೊಸ ಪ್ಲ್ಯಾನ್ ಒಂದನ್ನು ಪರಿಚಯಿಸಿದೆ. ಕೇವಲ ₹599 ಕ್ಕೆ 70 ದಿನಗಳ ವ್ಯಾಲಿಡಿಟಿಯೊಂದಿಗೆ ಪ್ರತಿದಿನ 3GB ಡೇಟಾ ಮತ್ತು ಅನಿಯಮಿತ ಕರೆಗಳನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ.
Read Full Story

09:36 AM (IST) Apr 24

ಏ.27ಕ್ಕೆ ಲೆಕ್ಕ ಕೊಡುತ್ತೇವೆ ಬನ್ನಿ - ವಚನಶ್ರೀಗೆ ಮಠದ ಟ್ರಸ್ಟ್‌ ಆಹ್ವಾನ!

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠವು ಏಪ್ರಿಲ್ 27 ರಂದು 2008 ರಿಂದ 2025 ರವರೆಗಿನ ಎಲ್ಲಾ ಲೆಕ್ಕಪತ್ರಗಳನ್ನು ಬಹಿರಂಗಪಡಿಸುವುದಾಗಿ ಘೋಷಿಸಿದೆ. ಉಚ್ಚಾಟಿತ ವಚನಾನಂದ ಸ್ವಾಮೀಜಿ ಮತ್ತು ಲೆಕ್ಕ ಕೇಳಿದವರು ಹಾಜರಿರಬೇಕೆಂದು ತಿಳಿಸಿರುವ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ.

Read Full Story

09:27 AM (IST) Apr 24

ಬಿಎಂಟಿಸಿ ಸ್ಮಾರ್ಟ್‌ ಟಿಕೆಟಿಂಗ್‌ ವ್ಯವಸ್ಥೆ ನಿಗಾಕ್ಕೆ ಸ್ವತಂತ್ರ ಸಂಸ್ಥೆಯ ನೇಮಕ

ಬಿಎಂಟಿಸಿ ತನ್ನ ಹೊಸ ಡಿಜಿಟಲ್‌ ಟಿಕೆಟಿಂಗ್‌ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಮುಂದಾಗಿದೆ. ಈ ವ್ಯವಸ್ಥೆಯ ಮೇಲೆ ನಿಗಾ ಇಡಲು, ದತ್ತಾಂಶ ಸುರಕ್ಷತೆ ಖಚಿತಪಡಿಸಲು ಮತ್ತು ಆದಾಯ ಸೋರಿಕೆ ತಡೆಯಲು ಸ್ವತಂತ್ರ ಬಾಹ್ಯ ಮೇಲ್ವಿಚಾರಣಾ ಸಂಸ್ಥೆಯನ್ನು ನೇಮಿಸಲು ನಿಗಮ ನಿರ್ಧರಿಸಿದೆ.
Read Full Story

08:52 AM (IST) Apr 24

ಇಂಡಿಯನ್ ಬ್ಯಾಂಕ್‌ನಲ್ಲಿದ್ದ ₹4 ಕೋಟಿ ಚಿನ್ನ ಕಳವು! ಅಸಿಸ್ಟೆಂಟ್ ಮ್ಯಾನೇಜರ್‌ನ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಗ್ರಾಹಕರು ಕಂಗಾಲು!

ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಸುಮಾರು ನಾಲ್ಕು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ತನಿಖೆ ವಿಳಂಬವಾಗಿದ್ದಕ್ಕೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್, ಗ್ರಾಹಕರ ಚಿನ್ನವನ್ನು ಕದ್ದು ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿದ್ದ ಭೂಪ.

Read Full Story

08:12 AM (IST) Apr 24

ತಮಿಳುನಾಡಲ್ಲಿ ತ್ರಿಕೋನ ಸಮರ - ದಾಖಲೆಯ ಶೇ.85ರಷ್ಟು ಮತದಾನ

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.85ರಷ್ಟು ದಾಖಲೆಯ ಮತದಾನವಾಗಿದೆ. ಆಡಳಿತಾರೂಢ ಡಿಎಂಕೆ, ಎಐಎಡಿಎಂಕೆ-ಬಿಜೆಪಿ ಮತ್ತು ನಟ ವಿಜಯ್ ಅವರ ಟಿವಿಕೆ ನಡುವಿನ ತ್ರಿಕೋನ ಸ್ಪರ್ಧೆಯ ಫಲಿತಾಂಶವು ಇವಿಎಂನಲ್ಲಿ ಭದ್ರವಾಗಿದೆ.

Read Full Story

07:53 AM (IST) Apr 24

SSLC Results 2026 - ಆ್ಯಂಬುಲೆನ್ಸ್‌ನಲ್ಲಿ ಬಂದು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಫಸ್ಟ್‌ಕ್ಲಾಸ್ ಪಾಸ್

ಅಪಘಾತದಿಂದ ಗಾಯಗೊಂಡಿದ್ದರೂ, ಕೋಲಾರದ ವಿದ್ಯಾರ್ಥಿನಿ ಕುಸುಮಾ ಆ್ಯಂಬುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ನಲ್ಲಿ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಳು. ಇದೀಗ ಆಕೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದು, ಚಿಕಿತ್ಸೆ ಪಡೆಯುತ್ತಲೇ ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾಳೆ.
Read Full Story

07:33 AM (IST) Apr 24

ಯುವಕನೊಂದಿಗೆ ಸುತ್ತಾಡಿ ಗರ್ಭಿಣಿ, ಫಾಕ್ಸ್‌ಕಾನ್ ಕಂಪನಿಯ ಟಾಯ್ಲೆಟ್‌ನಲ್ಲೇ ಮಗು ಹಡೆದು ಭಯದಿಂದ ಶಿಶುವಿನ ಕತ್ತು ಕುಯ್ದು ಎಸೆದು ಹೋದ ತಾಯಿ!

ದೇವನಹಳ್ಳಿಯ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಯುವತಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಭಯದಿಂದ ನವಜಾತ ಶಿಶುವಿನ ಕತ್ತು ಸೀಳಿ ಹತ್ಯೆಗೈದು ಎಸೆದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದ್ದು, ವಿಶ್ವನಾಥಪುರ ಪೊಲೀಸರು ಯುವತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Read Full Story

07:00 AM (IST) Apr 24

SSLC Results 2026 - ಶೇ.94.1ರಷ್ಟು ಮಕ್ಕಳು ಪಾಸ್, ದಕ್ಷಿಣ ಕನ್ನಡ ಪ್ರಥಮ, ಕಲಬುರಗಿ ಲಾಸ್ಟ್!

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ರಾಜ್ಯವು ಶೇ.88.73ರಷ್ಟು ಐತಿಹಾಸಿಕ ಫಲಿತಾಂಶ ದಾಖಲಿಸಿದೆ. ಈ ಬಾರಿ ಯಾವುದೇ ಗ್ರೇಸ್ ಅಂಕಗಳನ್ನು ನೀಡದೆ, ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದು, ಸರ್ಕಾರಿ ಶಾಲೆಗಳ ಪ್ರದರ್ಶನದಲ್ಲಿಯೂ ಭಾರೀ ಸುಧಾರಣೆ ಕಂಡುಬಂದಿದೆ.
Read Full Story

More Trending News