ಬೆಂಗಳೂರು: ಪಂಚ ರಾಜ್ಯ ಹಾಗೂ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗಳ ಫಲಿತಾಂಶ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳವಣಿಗೆಯ ನಿರೀಕ್ಷೆ ಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಉಭಯ ಬಣಗಳಲ್ಲಿ ಮುಗುಂ ಆಗಿ ಚಟುವಟಿಕೆ ಆರಂಭಗೊಂಡಿದೆ. ಮುಖ್ಯವಾಗಿ ಬುಧವಾರ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಗೆ ಭೇಟಿ ನೀಡಿದ್ದಾರೆ. 'ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಅವರು ಯಾರು ಎಂದು ಹೇಳುವುದಿಲ್ಲ. ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಕುರಿತು ವರಿಷ್ಠರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಬೇಕಾಗಿದೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳ ಎದುರು ಮಾತನಾಡುವುದಿಲ್ಲ ಎಂದರು.
ಮತ್ತೊಂದೆಡೆ ಈ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಸಂಜೆ ನಡೆದ ಸಚಿವರ ಸಭೆಯಲ್ಲಿ ಅಷ್ಟೇನೂ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಿಲ್ಲ. ಅದು ಸರ್ಜರಿ ಅಲ್ಲ ಜನರಲ್ ಚೆಕಪ್ ಅಷ್ಟೇ ಎಂದರು.
08:12 PM (IST) Apr 24
ಬಿಜೆಪಿ ಶುದ್ಧೀಕರಣ ಆಗಬೇಕು ಎಂದು ಪಕ್ಷದಿಂದ ಹೊರಗೆ ಬಂದೆ. ಆದರೆ, ಇನ್ನೂ ಶುದ್ಧೀಕರಣವಾಗಿಲ್ಲ. ನಾನು ಯಾವ ಪಕ್ಷಕ್ಕೂ ಹೋಗಲ್ಲ. ಹೊಸ ಪಕ್ಷ ಕಟ್ಟಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
08:00 PM (IST) Apr 24
07:46 PM (IST) Apr 24
ಕರ್ನಾಟಕ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ವಿಪಕ್ಷ ನಾಯಕ ವ್ಯಕ್ತಪಡಿಸಿದ್ದಾರೆ. ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಮಾಡಿದ ಅವಮಾನ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
07:39 PM (IST) Apr 24
ಬೇಸಿಗೆಯಲ್ಲಿ ಬಳಸಿದ ಕೋಲ್ಡ್ ಡ್ರಿಂಕ್ ಕ್ಯಾನ್ಗಳನ್ನು ಎಸೆಯುವ ಬದಲು, ಮನೆಯಲ್ಲಿಯೇ 4 ಉಪಯುಕ್ತ ವಸ್ತುಗಳನ್ನು ತಯಾರಿಸಿ. ಪ್ಲಾಸ್ಟಿಕ್ ಮತ್ತು ಮೆಟಲ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಸುಲಭವಾದ DIY ಐಡಿಯಾಗಳನ್ನು ತಿಳಿಯಿರಿ.
07:27 PM (IST) Apr 24
ಯಶ್ ನಟನೆಯ 'ಟಾಕ್ಸಿಕ್' ಚಿತ್ರತಂಡಕ್ಕೆ ಸೇರ್ಪಡೆಯಾಗಿರುವ ಹಾಲಿವುಡ್ ಆ್ಯಕ್ಷನ್ ಡೈರೆಕ್ಟರ್ ಜೆಜೆ ಪೆರ್ರಿ, ಇಡೀ ತಂಡದ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
07:14 PM (IST) Apr 24
ಭಾರತದಲ್ಲಿ ಯುಪಿಐ ಬಳಕೆ ಗಣನೀಯವಾಗಿ ಹೆಚ್ಚಾಗಿದ್ದರೂ, ಜನರು ಕೈಯಲ್ಲಿ ನಗದು ಇಟ್ಟುಕೊಳ್ಳುವುದು ಕೂಡ ಹೆಚ್ಚಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಿಡುಗಡೆ ಮಾಡಿದ ಇತ್ತೀಚಿನ ವರದಿ ಹೇಳಿದೆ.SBI Report Reveals Why Indians Prefer Cash Despite UPI Boom to know here.
07:12 PM (IST) Apr 24
07:06 PM (IST) Apr 24
06:53 PM (IST) Apr 24
06:43 PM (IST) Apr 24
ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಆಗ ಸಕಾರಾತ್ಮವಾಗಿ ಸ್ಪಂದನೆ ಮಾಡಿದ್ದ ಅವರು, ಬಜೆಟ್ನಲ್ಲಿ ಘೋಷಣೆ ಮಾಡದ್ದಕ್ಕೆ ನಿರಾಸೆಯಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
06:04 PM (IST) Apr 24
05:38 PM (IST) Apr 24
ಝಿರೋಧಾ ನಿರ್ಧಾರಕ್ಕೆ ಬೆಚ್ಚಿಬಿದ್ದ ಜನ, ಝಿರೋ1 ಕಂಪನಿ ಮುಚ್ಚಿದ ಕಾಮತ್ ಬ್ರದರ್ಸ್, ಷೇರುಮಾರುಕಟ್ಟೆಯ ಬ್ರೋಕರೇಜ್ ಕಂಪನಿ ಮೂಲಕ ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಕಾಮತ್ ಸಹೋದರರು ಇದೀಗ ಝೀರೋ1 ಕಂಪನಿ ಸ್ಥಗಿತಗೊಳಿಸಿದ್ದಾರೆ.
05:23 PM (IST) Apr 24
ಪ್ರತಿಯೊಬ್ಬ ನಿರ್ಮಾಪಕರು ಸಿನಿಮಾ ಮಾಡುವಾಗ ಇಂತಿಷ್ಟು ಸಮಯ, ಬಜೆಟ್ ಇಟ್ಟಿರುತ್ತಾರೆ. ಆದರೆ ಈ ಚಿತ್ರಕ್ಕೆ ಎಲ್ಲವೂ ಮೀರಿ ಹೋಗಿದೆ. ಈ ಸಿನಿಮಾದ ನಿಜವಾದ ಹೀರೋ ನಿರ್ಮಾಪಕರಾದ ಕೆ. ವೆಂಕಟ್ ನಾರಾಯಣ್ ಹೀಗೆ ಹೇಳಿದ್ದು ಜೋಗಿ ಪ್ರೇಮ್.
05:10 PM (IST) Apr 24
ಯುವ ರಾಜ್ಕುಮಾರ್ ಜನ್ಮದಿನದಂದೇ ಅವರ ಪತ್ನಿ ಶ್ರೀದೇವಿ ಭೈರಪ್ಪ ಮೌನ ಮುರಿದಿದ್ದಾರೆ. ಯುವ ಜೊತೆಗಿನ ಆಪ್ತ ಕ್ಷಣಗಳ ಫೋಟೋ ಹಂಚಿಕೊಂಡು ಅವರಿಗೆ ಟಾಂಗ್ ಕೊಡುವಂತೆ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ..
05:02 PM (IST) Apr 24
04:49 PM (IST) Apr 24
ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ವಿಕಾಸ ಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
04:17 PM (IST) Apr 24
ಅಣ್ಣಾವ್ರು ಡಾ.ರಾಜ್ಕುಮಾರ್ ಅವರ 97ನೇ ಹುಟ್ಟುಹಬ್ಬ ಇಂದು. (ಏಪ್ರಿಲ್ 24) ಈ ಸಂದರ್ಭದಲ್ಲಿ ಅವರ ವ್ಯಕ್ತಿತ್ವ, ಸಿನಿಮಾಗಳಿಂದ ಈ ಪೀಳಿಗೆಯ ಚಿತ್ರರಂಗ ಏನೇನು ಕಲಿಯಬಹುದು ಎಂಬುದನ್ನು ನೋಡೋಣ.
03:20 PM (IST) Apr 24
02:41 PM (IST) Apr 24
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ, ಬೇಸಿಗೆ ರಜೆ ಕಳೆಯಲು ಚಿಕ್ಕಮ್ಮನ ಮನೆಗೆ ಹೋಗಿದ್ದ 9 ವರ್ಷದ ಬಾಲಕಿ ಪ್ರಣಮ್ಯ, ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾಳೆ. ರೂಮಿನ ಬಾಗಿಲು ಹಾಕಿಕೊಂಡು ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.
01:38 PM (IST) Apr 24
01:31 PM (IST) Apr 24
ಹುಬ್ಬಳ್ಳಿಯಲ್ಲಿ, ಪ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಗೇಮ್ ಆಡೋಕೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯು ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಚಟದ ಅಪಾಯವನ್ನು ಸೂಚಿಸುತ್ತಿದೆ.
01:05 PM (IST) Apr 24
ಬಿಸಿಲ ನಾಡು ಬಳ್ಳಾರಿಯಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಗುತ್ತಿಗೆದಾರನೊಬ್ಬ 234 ಮರಗಳನ್ನು ಕಡಿಯಲು ಮುಂದಾಗಿದ್ದಾನೆ. ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದರೂ ಮರಗಳ ಕಡಿದಿದ್ದು ತಡೆಯಲು ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
12:51 PM (IST) Apr 24
ಮೋಹನ್ಲಾಲ್ ಅವರು ಮಲಯಾಳಂನ ಮತ್ತೊಬ್ಬ ದಿಗ್ಗಜ ನಟ ಮಮ್ಮುಟ್ಟಿ ಅವರೊಂದಿಗೆ ನಟಿಸಿರುವ 'ಪೆಟ್ರಿಯಾಟ್' ಸಿನಿಮಾ ಮೇ 1ರಂದು ತೆರೆಗೆ ಬರಲು ಸಜ್ಜಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಇಡೀ ಭಾರತೀಯ ಚಿತ್ರರಂಗವೇ ಕಾಯುತ್ತಿರುವ 'ದೃಶ್ಯಂ- 3' ಸಿನಿಮಾದ ಅಪ್ಡೇಟ್ ಸಿಕ್ಕಿದ್ದು, ಮೇ 21ರಂದು ಈ ಬಹುನಿರೀಕ್ಷಿತ ಚಿತ್ರ ಬಿಡುಗಡೆ ಆಗುವ ಸಾಧ್ಯತೆಯಿದೆ.
12:19 PM (IST) Apr 24
ಸ್ನೇಹಿತರ ಜೊತೆ ಟ್ರಿಪ್ ಹೋಗಿ ವಾಪಸ್ ಆಗ್ತಿದ್ದ ವೇಳೆ ಟ್ರೈನ್ ನಿಂದ ಬಿದ್ದು ಯುವಕ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾ. ಸಾಸಲಮರಿ ಬ್ರಿಡ್ಜ್ ಬಳಿ ನಡೆದಿದೆ. 18 ವರ್ಷದ ಸುಮಂತ್ ಕುಮಾರ್ ಮೃತಪಟ್ಟ ಯುವಕ.
11:35 AM (IST) Apr 24
10:58 AM (IST) Apr 24
10:53 AM (IST) Apr 24
ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚಿನ ಸಚಿವರ ಸಭೆಯನ್ನು 'ಜನರಲ್ ಚೆಕಪ್' ಎಂದು ಬಣ್ಣಿಸಿದ್ದು, ಇದೊಂದು ಸರ್ಜರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಂಪುಟ ಪುನರ್ ರಚನೆ, ಅಹಿಂದ ಒಗ್ಗೂಡಿಸುವಿಕೆ ಹಾಗೂ ಒಳ ಮೀಸಲಾತಿ ಬಗ್ಗೆ ಏನು ಹೇಳಿದರು?
10:11 AM (IST) Apr 24
ಭಾರತದ ಇಂಧನ ಭದ್ರತೆಯ ಕನಸಾದ ಕಲ್ಪಕಂ ರಿಯಾಕ್ಟರ್ ಯೋಜನೆಗೆ ಅಡ್ಡಿಯಾದ ವಿದೇಶಿ ಷಡ್ಯಂತ್ರ ಮತ್ತು 'ಆರ್ಥಿಕ ಉಗ್ರವಾದ'ದ ಕರಾಳ ಸತ್ಯವನ್ನು ತಿಳಿಯಿರಿ. ಈ ಸವಾಲುಗಳನ್ನು ಭಾರತ ಮೆಟ್ಟಿನಿಂತದ್ದು ಹೇಗೆ? ಪೂರ್ತಿ ಓದಿ.
10:07 AM (IST) Apr 24
10:02 AM (IST) Apr 24
09:36 AM (IST) Apr 24
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠವು ಏಪ್ರಿಲ್ 27 ರಂದು 2008 ರಿಂದ 2025 ರವರೆಗಿನ ಎಲ್ಲಾ ಲೆಕ್ಕಪತ್ರಗಳನ್ನು ಬಹಿರಂಗಪಡಿಸುವುದಾಗಿ ಘೋಷಿಸಿದೆ. ಉಚ್ಚಾಟಿತ ವಚನಾನಂದ ಸ್ವಾಮೀಜಿ ಮತ್ತು ಲೆಕ್ಕ ಕೇಳಿದವರು ಹಾಜರಿರಬೇಕೆಂದು ತಿಳಿಸಿರುವ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ.
09:27 AM (IST) Apr 24
08:52 AM (IST) Apr 24
ಗಿರಿನಗರ ಇಂಡಿಯನ್ ಬ್ಯಾಂಕ್ನಲ್ಲಿ ಸುಮಾರು ನಾಲ್ಕು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ತನಿಖೆ ವಿಳಂಬವಾಗಿದ್ದಕ್ಕೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್, ಗ್ರಾಹಕರ ಚಿನ್ನವನ್ನು ಕದ್ದು ಆನ್ಲೈನ್ ಬೆಟ್ಟಿಂಗ್ಗೆ ಬಳಸಿದ್ದ ಭೂಪ.
08:12 AM (IST) Apr 24
ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.85ರಷ್ಟು ದಾಖಲೆಯ ಮತದಾನವಾಗಿದೆ. ಆಡಳಿತಾರೂಢ ಡಿಎಂಕೆ, ಎಐಎಡಿಎಂಕೆ-ಬಿಜೆಪಿ ಮತ್ತು ನಟ ವಿಜಯ್ ಅವರ ಟಿವಿಕೆ ನಡುವಿನ ತ್ರಿಕೋನ ಸ್ಪರ್ಧೆಯ ಫಲಿತಾಂಶವು ಇವಿಎಂನಲ್ಲಿ ಭದ್ರವಾಗಿದೆ.
07:53 AM (IST) Apr 24
07:33 AM (IST) Apr 24
07:00 AM (IST) Apr 24