ಬೆಂಗಳೂರು: ಪಂಚ ರಾಜ್ಯ ಹಾಗೂ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗಳ ಫಲಿತಾಂಶ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳವಣಿಗೆಯ ನಿರೀಕ್ಷೆ ಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಉಭಯ ಬಣಗಳಲ್ಲಿ ಮುಗುಂ ಆಗಿ ಚಟುವಟಿಕೆ ಆರಂಭಗೊಂಡಿದೆ. ಮುಖ್ಯವಾಗಿ ಬುಧವಾರ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಗೆ ಭೇಟಿ ನೀಡಿದ್ದಾರೆ. 'ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಅವರು ಯಾರು ಎಂದು ಹೇಳುವುದಿಲ್ಲ. ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಕುರಿತು ವರಿಷ್ಠರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಬೇಕಾಗಿದೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳ ಎದುರು ಮಾತನಾಡುವುದಿಲ್ಲ ಎಂದರು.
ಮತ್ತೊಂದೆಡೆ ಈ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಸಂಜೆ ನಡೆದ ಸಚಿವರ ಸಭೆಯಲ್ಲಿ ಅಷ್ಟೇನೂ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಿಲ್ಲ. ಅದು ಸರ್ಜರಿ ಅಲ್ಲ ಜನರಲ್ ಚೆಕಪ್ ಅಷ್ಟೇ ಎಂದರು.
10:11 AM (IST) Apr 24
ಭಾರತದ ಇಂಧನ ಭದ್ರತೆಯ ಕನಸಾದ ಕಲ್ಪಕಂ ರಿಯಾಕ್ಟರ್ ಯೋಜನೆಗೆ ಅಡ್ಡಿಯಾದ ವಿದೇಶಿ ಷಡ್ಯಂತ್ರ ಮತ್ತು 'ಆರ್ಥಿಕ ಉಗ್ರವಾದ'ದ ಕರಾಳ ಸತ್ಯವನ್ನು ತಿಳಿಯಿರಿ. ಈ ಸವಾಲುಗಳನ್ನು ಭಾರತ ಮೆಟ್ಟಿನಿಂತದ್ದು ಹೇಗೆ? ಪೂರ್ತಿ ಓದಿ.
10:07 AM (IST) Apr 24
10:02 AM (IST) Apr 24
09:36 AM (IST) Apr 24
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠವು ಏಪ್ರಿಲ್ 27 ರಂದು 2008 ರಿಂದ 2025 ರವರೆಗಿನ ಎಲ್ಲಾ ಲೆಕ್ಕಪತ್ರಗಳನ್ನು ಬಹಿರಂಗಪಡಿಸುವುದಾಗಿ ಘೋಷಿಸಿದೆ. ಉಚ್ಚಾಟಿತ ವಚನಾನಂದ ಸ್ವಾಮೀಜಿ ಮತ್ತು ಲೆಕ್ಕ ಕೇಳಿದವರು ಹಾಜರಿರಬೇಕೆಂದು ತಿಳಿಸಿರುವ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ.
09:27 AM (IST) Apr 24
08:52 AM (IST) Apr 24
ಗಿರಿನಗರ ಇಂಡಿಯನ್ ಬ್ಯಾಂಕ್ನಲ್ಲಿ ಸುಮಾರು ನಾಲ್ಕು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ತನಿಖೆ ವಿಳಂಬವಾಗಿದ್ದಕ್ಕೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್, ಗ್ರಾಹಕರ ಚಿನ್ನವನ್ನು ಕದ್ದು ಆನ್ಲೈನ್ ಬೆಟ್ಟಿಂಗ್ಗೆ ಬಳಸಿದ್ದ ಭೂಪ.
08:12 AM (IST) Apr 24
ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.85ರಷ್ಟು ದಾಖಲೆಯ ಮತದಾನವಾಗಿದೆ. ಆಡಳಿತಾರೂಢ ಡಿಎಂಕೆ, ಎಐಎಡಿಎಂಕೆ-ಬಿಜೆಪಿ ಮತ್ತು ನಟ ವಿಜಯ್ ಅವರ ಟಿವಿಕೆ ನಡುವಿನ ತ್ರಿಕೋನ ಸ್ಪರ್ಧೆಯ ಫಲಿತಾಂಶವು ಇವಿಎಂನಲ್ಲಿ ಭದ್ರವಾಗಿದೆ.
07:53 AM (IST) Apr 24
07:33 AM (IST) Apr 24
07:00 AM (IST) Apr 24