LIVE NOW
Published : Dec 24, 2025, 06:53 AM ISTUpdated : Dec 24, 2025, 11:41 PM IST

Karnataka News Live: ಬೆಂಗಳೂರು - ಬೈಕ್ ಗೆ ಗುದ್ದಿ ಎರಡು ಕಿಮೀ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ!

ಸಾರಾಂಶ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದ ಸಮಾವೇಶದ ಪೂರ್ವ ಸಿದ್ಧತಾ ಸಭೆಯನ್ನು ಡಿ.24ರ ಬೆಳಗ್ಗೆ 11.30ಕ್ಕೆ ಮೈಸೂರಿನ ಹೊಟೇಲ್ ಗುರು ರೆಸಿಡೆನ್ಸಿಯಲ್ಲಿ ಅಹಿಂದ ಮೈಸೂರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ ಜನವರಿ ಮೂರನೇ ವಾರದಲ್ಲಿ ಮೈಸೂರಿನಲ್ಲಿ ಬೃಹತ್ ಅಹಿಂದ ಸಮಾವೇಶ ಆಯೋಜನೆಗಾಗಿ ಸಮಾವೇಶದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಪೂರ್ವ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದ್ದು, ಅಹಿಂದ ಮುಖಂಡರು ಪಾಲ್ಗೊಳ್ಳಲಿದ್ದಾರೆ.

Bengaluru Road Horror Drunk Car Driver Drags Bike for 2 KM on Outer Ring Road

11:41 PM (IST) Dec 24

ಬೆಂಗಳೂರು - ಬೈಕ್ ಗೆ ಗುದ್ದಿ ಎರಡು ಕಿಮೀ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ!

ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ, ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೈಕ್‌ಗೆ ಡಿಕ್ಕಿ ಹೊಡೆದು, ಸುಮಾರು 2 ಕಿಲೋಮೀಟರ್‌ ಕಾರಿನಡಿಯಲ್ಲಿ ಸಿಲುಕಿದ್ದ ಬೈಕನ್ನು ಎಳೆದೊಯ್ದಿದ್ದಾನೆ. ಸ್ಥಳೀಯರು ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದು, ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರು!

Read Full Story

11:00 PM (IST) Dec 24

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ರೈತ ಭೀಮು ಕೆಂಬಾವಿ ಅವರಿಗೆ ಸೇರಿದ ಐದು ಎಕರೆ ಕಬ್ಬಿನ ಬೆಳೆ ಹಾಗೂ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
Read Full Story

09:11 PM (IST) Dec 24

ಲಂಡನ್ ಬೀದಿಗಳಲ್ಲಿ ಗುಟ್ಕಾ ಕಲೆ; 'ಬಾಯಲ್ಲಿ ಕೇಸರಿ' ಹೇಳಿದ ಭಾರತೀಯರ ವಿಡಿಯೋ ವೈರಲ್ ಮಾಡಿ ಅವಮಾನಿಸಿದ ಪತ್ರಕರ್ತೆ!

ಲಂಡನ್‌ನ ವೆಂಬ್ಲಿಯ ಬೀದಿಗಳಲ್ಲಿ ಗುಟ್ಕಾ ಜಗಿದು ಉಗುಳಿದ ಕಲೆಗಳ ವಿಡಿಯೋ ವೈರಲ್ ಆಗಿದೆ. ಈ ಅಶುಚಿಯಿಂದ ಬೇಸತ್ತ ಸ್ಥಳೀಯ ಆಡಳಿತವು ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದು, ಈ ಘಟನೆಯಿಂದ ಭಾರತೀಯರು ತೀವ್ರ ಮುಜುಗರ ವ್ಯಕ್ತಪಡಿಸುತ್ತಿದ್ದಾರೆ.

Read Full Story

08:45 PM (IST) Dec 24

ಕರಾವಳಿ ಉತ್ಸವ - ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ವಿಶೇಷ ಚೇತನ ಮಕ್ಕಳು, ಸತೀಶ್ ಸೈಲ್ ಪುತ್ರಿಯ ಈ ಮಹತ್ಕಾರ್ಯಕ್ಕೆ ಜೈ ಎಂದ ಜನತೆ

ಉತ್ತರಕನ್ನಡದ ಕಾರವಾರದಲ್ಲಿ ಎಂಟು ವರ್ಷಗಳ ಬಳಿಕ ಕರಾವಳಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಉತ್ಸವದ ಅಂಗವಾಗಿ, ಶಾಸಕ ಸತೀಶ್ ಸೈಲ್ ಅವರ ಪುತ್ರಿಯ ಪ್ರಾಯೋಜಕತ್ವದಲ್ಲಿ ವಿಶೇಷ ಚೇತನ ಮಕ್ಕಳು ಮತ್ತು ಪೌರಕಾರ್ಮಿಕ ಮಹಿಳೆಯರಿಗೆ ಉಚಿತ ಹೆಲಿಕಾಪ್ಟರ್ ಜಾಲಿ ರೈಡ್ ಆಯೋಜಿಸಲಾಗಿತ್ತು.
Read Full Story

08:44 PM (IST) Dec 24

ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ದಾಳಿ - ಬಯಲಾಯ್ತು ಕೋಟಿ ಕೋಟಿ ಸಾಮ್ರಾಜ್ಯ!

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು ಮತ್ತು ಕೊಡಗಿನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ಐಷಾರಾಮಿ ರೆಸಾರ್ಟ್‌ಗಳು ಪತ್ತೆಯಾಗಿವೆ.

Read Full Story

08:15 PM (IST) Dec 24

ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ, ಇಶಾನ್ ಕಿಶನ್ ಅವರ ಶತಕದ ನೆರವಿನಿಂದ ಜಾರ್ಖಂಡ್ 412 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಉತ್ತರವಾಗಿ, ದೇವದತ್ ಪಡಿಕ್ಕಲ್ ಅವರ ಅಬ್ಬರದ 147 ರನ್‌ಗಳ ನೆರವಿನಿಂದ ಕರ್ನಾಟಕ ತಂಡವು ಐತಿಹಾಸಿಕವಾಗಿ ಈ ಗುರಿಯನ್ನು ಬೆನ್ನಟ್ಟಿ, 5 ವಿಕೆಟ್‌ಗಳ ಜಯ ಸಾಧಿಸಿತು.

Read Full Story

08:13 PM (IST) Dec 24

ಹನುಮನ ಜನ್ಮಸ್ಥಳ ಅಂಜನಾದ್ರಿಗೆ ರಿಷಬ್ ಶೆಟ್ಟಿ ಭೇಟಿ; 575 ಮೆಟ್ಟಿಲೇರಿ ಮಾರುತಿಯ ದರ್ಶನ ಪಡೆದ ದಂಪತಿ!

ಕಾಂತಾರ ಯಶಸ್ಸಿನ ಬಳಿಕ ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ರಾಜ್ಯದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ದರ್ಶನ ಪಡೆದರು.

 

Read Full Story

07:35 PM (IST) Dec 24

ದಶಕಗಳ ಬಳಿಕ ಗೆಳೆಯ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್!

ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ನಡುವೆಯೇ, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್, ‘ಅವರಿಗೆ ಯಾವಾಗಲೂ ಶುಭ ಹಾರೈಸುತ್ತೇನೆ’ ಎಂದು ಉತ್ತರಿಸಿದ್ದಾರೆ.

Read Full Story

07:30 PM (IST) Dec 24

ಭಟ್ಕಳ ಸಿಪಿಐ, ಹೆಡ್ ಕಾನ್ಸ್ಟೆಬಲ್ ಅಮಾನತು - Drink and Drive, ಹಣ ವಸೂಲಿ ಪ್ರಕರಣಕ್ಕೆ ಎಸ್‌ಪಿ ಕಠಿಣ ಕ್ರಮ!

ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್, ಹಣ ವಸೂಲಿ, ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಎಸ್‌ಪಿ ಈ ಕ್ರಮ ಕೈಗೊಂಡಿದ್ದಾರೆ.
Read Full Story

07:10 PM (IST) Dec 24

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಕಂಪನಿಗೆ 100 ಎಕರೆ ಜಾಗ; ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ ಪತ್ರ

ಅಮೆರಿಕ ಮೂಲದ ಸ್ಯಾನ್ಸನ್ ಗ್ರೂಪ್ ಸೆಮಿಕಂಡಕ್ಟರ್ ಕಂಪನಿಗೆ ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

Read Full Story

05:58 PM (IST) Dec 24

ಮದ್ಯ ನಿಷೇಧಿಸದಿದ್ದರೆ ಸಿಎಂ ಸಿದ್ದರಾಮಯ್ಯ ನನ್ನ ಪಾಲಿಗೆ ರಾಕ್ಷಸ - ಶಾಸಕ ಶರಣು ಸಲಗರ್!

ಬಿಜೆಪಿ ಶಾಸಕ ಶರಣು ಸಲಗರ್, ರಾಜ್ಯದ ಅಬಕಾರಿ ನೀತಿಯನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯರನ್ನು 'ರಾಕ್ಷಸ' ಎಂದು ಕರೆದಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗಾಗಿ ಮದ್ಯ ಮಾರಾಟ ಹೆಚ್ಚಿಸುತ್ತಿರುವುದರಿಂದ ಉತ್ತರ ಕರ್ನಾಟಕದ ಹಳ್ಳಿಗಳು 'ವಿಧವಾ ಗ್ರಾಮ'ಗಳಾಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ. 

Read Full Story

05:25 PM (IST) Dec 24

ಬಳ್ಳಾರಿ - ಮನೆಯಿಂದ 10 ಕಿಲೋಮೀಟರ್‌ ದೂರ ಇರುವಾಗ ಅಪಘಾತ, ಒಂದೇ ಕುಟುಂಬದ ಮೂವರ ಸಾವು!

ತಮಿಳುನಾಡಿನ ದೇವಸ್ಥಾನ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ಬಳ್ಳಾರಿಯ ಒಂದೇ ಕುಟುಂಬದ ಕಾರು, ಸಿರುಗುಪ್ಪ ಬಳಿ ಕಿರುಸೇತುವೆಗೆ ಢಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

Read Full Story

05:25 PM (IST) Dec 24

ದರ್ಶನ್ ಬಳಿಕ ಅಭಿಮಾನಿಗಳ ಅಶ್ಲೀಲ ಕಾಮೆಂಟ್‌ಗೆ ವಿಜಯಲಕ್ಷ್ಮಿ ಕೆಂಡಾಮಂಡಲ; 150 ಫೊಟೋ ಸಮೇತ ದೂರು!

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full Story

05:08 PM (IST) Dec 24

ಮಹಾರಾಷ್ಟ್ರ ಸಂಸದ ಲೋಕಸಭಾ ಸ್ಪೀಕರ್‌ಗೆ ದೂರು - ಬೆಳಗಾವಿ ಡಿಸಿ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿ ಪರವಾಗಿ ನಿಂತಿದ್ದು, ಕಾನೂನು ಹೋರಾಟದ ಬಗ್ಗೆ ಸ್ಪಷ್ಟನೆ. ಜೊತೆಗೆ, 275 ಕೋಟಿ ರೂ. ವೆಚ್ಚದ ಬೆಳಗಾವಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ಬಗ್ಗೆ ಮಹತ್ವದದ ಮಾಹಿತಿ ನೀಡಿದ್ದಾರೆ.

Read Full Story

04:43 PM (IST) Dec 24

ದೊಡ್ಮನೆಯಲ್ಲಿ ಭರ್ಜರಿ ಲಾಟರಿ ಹೊಡೆದ ರಕ್ಷಿತಾ ಶೆಟ್ಟಿ - ಬಹುದೊಡ್ಡ ಕನಸು ನನಸು ಮಾಡಿದ Bigg Boss!

ತಮ್ಮ ಮೀನಿನ ಅಡುಗೆಗಳಿಂದಲೇ ಪ್ರಸಿದ್ಧರಾದ ಬಿಗ್​ಬಾಸ್​ ಸ್ಪರ್ಧಿ ರಕ್ಷಿತಾ ಶೆಟ್ಟಿ,  ತಮ್ಮ ಬಹುದೊಡ್ಡ ಆಸೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಗ್‌ಬಾಸ್, ರಕ್ಷಿತಾ ಅವರ ಈ ಕನಸನ್ನು ನನಸು ಮಾಡಿದೆ. ಏನದು ಕನಸು? ರಕ್ಷಿತಾ ಶೆಟ್ಟಿಗೆ ಲಾಟರಿ ಹೊಡೆದದ್ದೇಕೆ?

Read Full Story

04:39 PM (IST) Dec 24

ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್ ಚಾಲಕ; ಚಿಕಿತ್ಸೆ ಸಿಗದೆ ವೃದ್ಧ ಸಾವು, ಆಕ್ರೋಶಗೊಂಡ ಕುಟುಂಬಸ್ಥರಿಂದ ಕಲ್ಲೆಸೆತ!

ದಾವಣಗೆರೆಯ ಸಾಸ್ವೆಹಳ್ಳಿಯಲ್ಲಿ, ಆ್ಯಂಬುಲೆನ್ಸ್ ಚಾಲಕ ಸಕಾಲಕ್ಕೆ ಬಾರದ ಕಾರಣ ಅಸ್ವಸ್ಥ ವೃದ್ಧರೊಬ್ಬರು ಆಸ್ಪತ್ರೆ ಮುಂದೆಯೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆ್ಯಂಬುಲೆನ್ಸ್ ಮೇಲೆ ಕಲ್ಲೆಸೆದು ಪ್ರತಿಭಟಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
Read Full Story

04:35 PM (IST) Dec 24

ಅಪ್ಪನೇ ಅಮ್ನನನ್ನು ಕೊಂದಿದ್ದಾರೆ; ಡಿವೋರ್ಸ್ ನೋಟಿಸ್ ನೀಡಿದ್ದಕ್ಕೆ ಪತ್ನಿಯನ್ನೇ ಮರ್ಡರ್ ಮಾಡಿದ ಪತಿರಾಯ!

ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಪತ್ನಿ ಭುವನೇಶ್ವರಿಯನ್ನು ಪತಿ ಬಾಲ ಮುರುಗನ್ ಗುಂಡಿಕ್ಕಿ ಕೊಂದಿದ್ದಾನೆ. ಈ ಪ್ರಕರಣದಲ್ಲಿ, ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಅಕ್ರಮವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಮಾಗಡಿ ರಸ್ತೆ ಪೊಲೀಸರು ಅದರ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.
Read Full Story

03:42 PM (IST) Dec 24

Amruthadhaare - ಭೂಮಿಕಾ ಸತ್ಯ ಬಾಯ್ಬಿಟ್ಟ ಹೊತ್ತಲ್ಲೇ ಅನಾಹುತ - ಜೈದೇವನ ಕೈಗೆ ಸಿಕ್ಕೇಬಿಟ್ಟಿತು ಆ ಫೋಟೋ!

ಅಜ್ಜಿ ಮತ್ತು ಭಾಗ್ಯಮ್ಮನ ಯೋಜನೆಯಿಂದ ಗೌತಮ್ ಮತ್ತು ಭೂಮಿಕಾ ಒಂದಾಗುವ ಕಾಲ ಬಂದಿದೆ. ಭೂಮಿಕಾ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದರೆ, ಇತ್ತ ಜೈದೇವನಿಗೆ ಆಕಾಶ್ ಗೌತಮ್ ಮಗ ಎಂಬ ಸತ್ಯ ಫೋಟೋ ಮೂಲಕ ತಿಳಿದುಬಂದಿದೆ. ಅತ್ತ ಅಜ್ಜಿಯ ಆಸ್ತಿ ಕಬಳಿಸುವ ಜೈದೇವನ ಸಂಚು ಕೂಡ ವಿಫಲವಾಗಿದೆ.
Read Full Story

03:29 PM (IST) Dec 24

ಹೊಸ ವರ್ಷದ ರಾತ್ರಿ ಬೆಂಗಳೂರಲ್ಲಿ ಪ್ರಯಾಣಕ್ಕೆ ವಿಶೇಷ ಬಸ್‌ ವ್ಯವಸ್ಥೆ! ಎಲ್ಲಿಂದ? ಎಲ್ಲಿಗೆ?

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಡಿಸೆಂಬರ್ 31ರ ರಾತ್ರಿಯಿಂದ ಜನವರಿ 1ರ ಬೆಳಗಿನ ಜಾವದವರೆಗೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಿಂದ ನಗರದ ಪ್ರಮುಖ ಭಾಗಗಳಿಗೆ ಸುಮಾರು 70 ವಿಶೇಷ ಬಸ್‌ಗಳು ಸಂಚರಿಸಲಿದೆ.

Read Full Story

02:46 PM (IST) Dec 24

Bigg Boss ಮನೆಗೆ 'ಗಿಲ್ಲಿ ಅತ್ತೆ' ಆಗಮನ! ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ- ಗಿಲ್ಲಿಗೆ ಬುದ್ಧಿ ಮಾತು

ಬಿಗ್​ಬಾಸ್​ ಮನೆಯಲ್ಲಿ ಕುಟುಂಬಸ್ಥರ ಆಗಮನದ ವಾರದಲ್ಲಿ, ಅಶ್ವಿನಿ ಗೌಡ ಅವರ ತಾಯಿ ಆಗಮಿಸಿದ್ದಾರೆ. ಮಗಳನ್ನು ಕಂಡು ಭಾವುಕರಾದ ತಾಯಿ, ಗಿಲ್ಲಿ ನಟನ ಜೊತೆ ಮನಸ್ತಾಪ ಬೇಡವೆಂದು ಕಿವಿಮಾತು ಹೇಳಿದರು. ಆಗ ಗಿಲ್ಲಿ ನಟ, ಅಶ್ವಿನಿ ತಾಯಿಯನ್ನು 'ಅತ್ತೆ' ಎಂದು ಕರೆದು ಮನೆಯಲ್ಲಿ ನಗುವಿನ ಅಲೆ ಎಬ್ಬಿಸಿದರು.
Read Full Story

02:42 PM (IST) Dec 24

ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಕೃಷ್ಣಮೂರ್ತಿ; ಹೋಟೆಲ್ ಮಾಲೀಕನಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಟ್ರ್ಯಾಪ್!

ಬೆಂಗಳೂರಿನ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ, ಹೋಟೆಲ್ ಮಾಲೀಕರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾಸಿಕ 'ಮಾಮೂಲಿ'ಗೆ ಬೇಡಿಕೆಯಿಟ್ಟಿದ್ದ ಇವರು, ₹30,000 ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ತನಿಖೆ ಮುಂದುವರೆದಿದೆ.
Read Full Story

02:19 PM (IST) Dec 24

Fans War - FIR​ ಆಗಿದೆ- ಕೇರ್​ಫುಲ್​ ಆಗಿರಿ - ಲೈವ್​ನಲ್ಲಿ ಬಂದ ನಟಿ ತನಿಷಾ ಕುಪ್ಪಂಡ ವಾರ್ನ್​ ಮಾಡಿದ್ದೇನು?

ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ, ತಮ್ಮ ನಿರ್ಮಾಣದ 'ಕೋಣ' ಚಿತ್ರದ ಪೈರಸಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟಾರ್ ನಟರ ಅಭಿಮಾನಿಗಳ ಯುದ್ಧ ಮತ್ತು ಪ್ರಪೋಗಂಡಾದಿಂದ ಚಿತ್ರರಂಗಕ್ಕಾಗುತ್ತಿರುವ ನಷ್ಟದ ಬಗ್ಗೆ ಮಾತನಾಡಿದ್ದಾರೆ

Read Full Story

01:36 PM (IST) Dec 24

ವೀರಪ್ಪನ್‌ಗಿಂತ, ಸಿದ್ದರಾಮಯ್ಯ ಕಾಲದಲ್ಲೇ ಆನೆ ಸಾವು ಜಾಸ್ತಿ.! ಅಂಕಿ-ಅಂಶ ಬಚ್ಚಿಟ್ಟ ಆರ್. ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಸರ್ಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ವೀರಪ್ಪನ್‌ಗಿಂತಲೂ ಹೆಚ್ಚು ಆನೆಗಳು (206) ಸಾವನ್ನಪ್ಪಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆನೆಗಳ ಸಾವಿಗೆ ಜಂಗಲ್ ಸಫಾರಿ ನಿಷೇಧಿಸುವುದು ಸರಿಯಲ್ಲ ಎಂದರು.

Read Full Story

01:30 PM (IST) Dec 24

ಹೊಸೂರು ವಿಮಾನ ನಿಲ್ದಾಣ ನಿರ್ಮಾಣದ ತಮಿಳುನಾಡು ಆಸೆಗೆ ಬ್ರೇಕ್‌, ಕೇಂದ್ರದ ಉಡಾನ್‌ ಪಟ್ಟಿಯಿಂದ ಹೊರಕ್ಕೆ! ಕಾರಣ ಬೆಂಗಳೂರು ವಿಮಾನ ನಿಲ್ದಾಣ!

ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ತಮಿಳುನಾಡು ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರ ತಡೆಯೊಡ್ಡಿದೆ. ಬೆಂಗಳೂರು ವಿಮಾನ ನಿಲ್ದಾಣದೊಂದಿಗಿನ ಒಪ್ಪಂದದ ಪ್ರಕಾರ, 2033ರವರೆಗೆ 150 ಕಿ.ಮೀ. ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ನಿಯಮವೇ ಮುಖ್ಯ ಕಾರಣವಾಗಿದೆ.

Read Full Story

12:52 PM (IST) Dec 24

ದರ್ಶನ್ ಕಷ್ಟಕಾಲದಲ್ಲಿ ಜೊತೆಗೆ ನಿಂತಿದ್ರು ಸುದೀಪ್ - ಆಸ್ಪತ್ರೆ ಸೇರಿದ್ದ ದಾಸ.. ಧೈರ್ಯ ತುಂಬಿದ್ದ ಕಿಚ್ಚ!

ಕಿಚ್ಚ ಸುದೀಪ್ ಯುದ್ಧದ ಮಾತು.. ದರ್ಶನ್-ಸುದೀಪ್ ಸ್ನೇಹಿತರಾಗಿದ್ದ ವೇಳೆ ವಿಜಯಲಕ್ಷ್ಮೀ ನಡುವೆನೂ ಒಳ್ಳೆ ಸ್ನೇಹ ಸಲುಗೆ ಇತ್ತು. ಅದ್ರಲ್ಲೂ ಒಂದೊಮ್ಮೆ ದರ್ಶನ್ ಕಷ್ಟದಲ್ಲಿದ್ದ ವೇಳೆ, ಕಿಚ್ಚ ವಿಜಯಲಕ್ಷ್ಮೀ ಜೊತೆ ನಿಂತುಕೊಂಡಿದ್ರು.

Read Full Story

12:36 PM (IST) Dec 24

ಹೊಸ ವರ್ಷದಲ್ಲಿ ಸಂಪುಟ ವಿಸ್ತರಣೆ ಖಚಿತ; ನಾನೂ ಸಚಿವ ಸ್ಥಾನದ ಆಕಾಂಕ್ಷಿ-ಶಾಸಕ ಡಾ. ಅಜಯ್ ಸಿಂಗ್

ಹೊಸ ವರ್ಷದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

12:31 PM (IST) Dec 24

ಬಳ್ಳಾರಿ ಜ್ಯುವೆಲ್ಲರಿಯಲ್ಲಿ ಮತ್ತೆ ಕೇರಳ ಎಸ್‌ಐಟಿ ಶೋಧ, ಶಬರಿಮಲೆಯ ಇನ್ನೂ ಕೆಲ ದೇಗುಲದಲ್ಲಿ ಚಿನ್ನಕ್ಕೆ ಕನ್ನ ಶಂಕೆ!

ಶಬರಿಮಲೆ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮಾಲೀಕ ಗೋವರ್ಧನ್ ಅವರನ್ನು ಬಂಧಿಸಲಾಗಿದೆ. ಕೇರಳದ ವಿಶೇಷ ತನಿಖಾ ತಂಡವು ಬಳ್ಳಾರಿಗೆ ಆಗಮಿಸಿ, ಗೋವರ್ಧನ್ ಅವರ ಅಂಗಡಿಯಲ್ಲಿ ಶೋಧ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ.

Read Full Story

12:28 PM (IST) Dec 24

ಪೈರಸಿ ವಿರುದ್ಧವೇ ನನ್ನ ಯುದ್ಧ ಎಂದ ಸುದೀಪ್ - ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ

ನಮ್ಮ ಸಿನಿಮಾ ಟೀಮ್‌ನಲ್ಲಿ 11 ಮಂದಿ ಇದ್ದಾರೆ, ನಮ್ಮ ಎದುರಾಳಿಗಳು 33 ಮಂದಿ ಇದ್ದಾರೆ. ಆದರೂ ಪೈರಸಿ ವಿರುದ್ಧ ನಮ್ಮ ತೀವ್ರ ಹೋರಾಟ ನಡೆಸಿಯೇ ಸಿದ್ಧ. ಶೇ.80ರಷ್ಟಾದರೂ ಪೈರಸಿ ತಡೆಯುತ್ತೇವೆ ಎಂಬ ಮಾತನ್ನೂ ಸುದೀಪ್‌ ಹೇಳಿದರು.

Read Full Story

12:26 PM (IST) Dec 24

BBK 12 - ಸೊಸೆ ಬದಲಾಗಿ ತಮ್ಮನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನುಷ್ ತಾಯಿ ಹೇಳಿದ್ದೇನು?

ಬಿಗ್‌ಬಾಸ್ ಮನೆಗೆ ಆಗಮಿಸಿದ ಧನುಷ್ ತಾಯಿ ಮತ್ತು ಪತ್ನಿಯ ನಡುವೆ, ಧನುಷ್ ತನ್ನ ತಾಯಿಯನ್ನು ಆಯ್ಕೆ ಮಾಡಿಕೊಂಡರು. ನಂತರ, ಧನುಷ್ ತಾಯಿ ತಮ್ಮ ಮಗನಿಗೆ ಕೇವಲ 9 ತಿಂಗಳ ಮಗುವಾಗಿದ್ದಾಗಲೇ ಅವರ ಅಣ್ಣನ ಮಗಳೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದ ಅಚ್ಚರಿಯ ವಿಷಯವನ್ನು ಬಹಿರಂಗಪಡಿಸಿದರು.
Read Full Story

12:18 PM (IST) Dec 24

ಸಾರಿಗೆ ನೌಕರರಿಗೆ ಹೊಸ ವರ್ಷದ ಬಂಪರ್ ಗಿಫ್ಟ್ - ಅಂತರ ನಿಗಮ ವರ್ಗಾವಣೆಗೆ ಜ.1 ರಿಂದ ಅರ್ಜಿ ಸಲ್ಲಿಕೆ ಆರಂಭ!

ರಾಜ್ಯ ಸಾರಿಗೆ ನಿಗಮಗಳ 'ಅಂತರ ನಿಗಮ ವರ್ಗಾವಣೆ'ಗೆ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ. ಜನವರಿ 1 ರಿಂದ 31ರ ವರೆಗೆ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ. ಇದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರ ದಶಕದ ಬೇಡಿಕೆಯನ್ನು ಈಡೇರಿಸಿದೆ.

Read Full Story

12:06 PM (IST) Dec 24

ಮಂಡ್ಯ ಅಪಘಾತ - ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ!

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಲಾರಿ ಹಳ್ಳಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Full Story

12:03 PM (IST) Dec 24

Bigg Boss ಮನೆಗೆ ಡಾಗ್​ ಸತೀಶ್​ ರೀ-ಎಂಟ್ರಿ? ಮಗ ಫೇಲ್​ ಆಗಿರೋ ಖುಷಿಗೆ ಮಾಡಿದ ಪಾರ್ಟಿಯಲ್ಲಿ ರಿವೀಲ್​!

ಬಿಗ್‌ಬಾಸ್ ಖ್ಯಾತಿಯ ಡಾಗ್ ಸತೀಶ್ ತಮ್ಮ ಮಗ ಕಾಲೇಜಿನಲ್ಲಿ ಫೇಲ್ ಆದ ಕಾರಣಕ್ಕೆ ಅದ್ಧೂರಿ ಪಾರ್ಟಿ ಆಯೋಜಿಸಿದ್ದಾರೆ. ಈ ಪಾರ್ಟಿಯಲ್ಲಿ ಸೆಲೆಬ್ರಿಟಿಗಳು ಭಾಗವಹಿಸಿದ್ದು, ಇದೇ ವೇಳೆ ಸತೀಶ್ ಅವರು ಬಿಗ್‌ಬಾಸ್ ಮನೆಗೆ ಮತ್ತೆ ಪ್ರವೇಶಿಸುವ ಬಗ್ಗೆ ಸುಳಿವು ನೀಡಿದ್ದಾರೆ.

Read Full Story

11:52 AM (IST) Dec 24

ಭಾರತೀಯ ದಂತ ವೈದ್ಯಕೀಯ ಕ್ಷೇತ್ರದ ಪಿತಾಮಹ ಡಾ.ಆರ್.ಅಹ್ಮದ್ - ಸೇವೆ, ತ್ಯಾಗ ಮತ್ತು ಮಾನವೀಯತೆಯ ಪ್ರತೀಕ

ಡಾ। ಆರ್.ಅಹ್ಮದ್ ಅವರ ದಂತ ವೈದ್ಯಕೀಯ ಕ್ಷೇತ್ರದಲ್ಲಿನ ಅಮೋಘ ಸೇವೆಗಾಗಿ 1947ರಲ್ಲಿ ಅಂತಾರಾಷ್ಟ್ರೀಯ ದಂತ ಕಾಲೇಜಿನಿಂದ ಫೆಲೋಶಿಪ್ ನೀಡಲಾಯಿತು ಮತ್ತು ರಾಯಲ್ ಕಾಲೇಜ್ ಆಫ್ ಸರ್ಜನ್ ಇಂಗ್ಲೆಂಡ್ ಇದರ ಫೆಲೋಶಿಪ್ ಕೂಡಾ ನೀಡಲಾಯಿತು.

Read Full Story

11:28 AM (IST) Dec 24

ಮದುವೆ ನಿರಾಕರಣೆ - ಯುವತಿ ತಾಯಿಯ ಜೀವಕ್ಕೆ ಕುತ್ತು ತಂದ ದುರುಳ!

ಬೆಂಗಳೂರಿನ ಬಸವೇಶ್ವರ ನಗರದಲ್ಲಿ, ತನ್ನ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದಕ್ಕೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

Read Full Story

11:16 AM (IST) Dec 24

ರೈಲಲ್ಲಿ ಬ್ಯಾಗ್‌ ಮರೆವವರ ನೆರವಿಗೆ 'ಆಪರೇಷನ್‌ ಅಮಾನತ್‌' - 2.25 ಕೋಟಿ ಮೌಲ್ಯದ ವಸ್ತುಗಳನ್ನು ರಕ್ಷಿಸಿದ ಆರ್‌ಪಿಎಫ್‌

ರೈಲು, ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್‌ ಮರೆತು ಬಂದಿದ್ದರೆ, ಅದನ್ನು ಹುಡುಕಿ ಕಾಪಿಟ್ಟು ಪ್ರಯಾಣಿಕರಿಗೆ ಕೊಡುವ ರೈಲ್ವೆ ಭದ್ರತಾ ಪಡೆಯು 'ಆಪರೇಷನ್‌ ಅಮಾನತ್‌' ನಡಿ ಈ ವರ್ಷ 2.25 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದೆ.

Read Full Story

11:06 AM (IST) Dec 24

Bengaluru 2ನೇ ಏರ್‌ಫೋರ್ಟ್‌ಗೆ ಡಿಎಫ್‌ಆರ್‌ ಸಿದ್ಧತೆಗೆ ಟೆಂಡರ್‌ - ವನ್ಯಜೀವಿ ಪರಿಣಾಮಕ್ಕೂ ಅಧ್ಯಯನ

ಬೆಂಗಳೂರಿಗೆ 2ನೇ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕನಕಪುರ ರಸ್ತೆಯಿಂದ ಮೈಸೂರು ರಸ್ತೆ ನಡುವಿನ ಚೂಡಹಳ್ಳಿ, ಕನಕಪುರ ರಸ್ತೆಯ ಸೋಮನಹಳ್ಳಿ ಮತ್ತು ನೆಲಮಂಗಲ ಬಳಿಯಲ್ಲಿ ಜಾಗಗಳನ್ನು ಗುರುತಿಸಲಾಗಿತ್ತು.

Read Full Story

10:53 AM (IST) Dec 24

ಯಾದಗಿರಿಯಲ್ಲಿ ಅಭಿವೃದ್ಧಿ ಹೆಸರಲ್ಲಿ ಹಣ ದುರ್ಬಳಕೆ? ಸ್ಮಾರ್ಟ್‌ ಟೀವಿಗೆ ₹2 ಲಕ್ಷ, ಟಾಯ್ಲೆಟ್‌ ಕುಡ್ಡಿಗೆ ₹5 ಲಕ್ಷ!

ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರದೇಶಾಭಿವೃದ್ಧಿ ಮಂಡಳಿ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಈ ಭಾಗಕ್ಕೆ ವಿವಿಧ ಇಲಾಖೆಗಳು ನೂರಾರು, ಸಾವಿರಾರು ಕೋಟ್ಯಂತರ ರುಪಾಯಿ ಹಣ ಬಿಡುಗಡೆ ಮಾಡುತ್ತವೆ.

Read Full Story

10:52 AM (IST) Dec 24

ಬೆಂಗಳೂರೇ ಬೆಚ್ಚಿ ಬೀಳಿಸುವಂತ ದೃಶ್ಯ - ನಡುರಸ್ತೆಯಲೇ ಯುವತಿಗೆ ಲೈಂ*ಗಿಕ ದೌರ್ಜನ್ಯ

ಬೆಂಗಳೂರಿನ ಜ್ಞಾನಜ್ಯೋತಿನಗರದಲ್ಲಿ, ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಯನ್ನು ಪ್ರೀತಿಸುವಂತೆ ಪೀಡಿಸಿ, ನಡುರಸ್ತೆಯಲ್ಲಿ ಆಕೆಯ ಬಟ್ಟೆ ಎಳೆದು ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read Full Story

10:44 AM (IST) Dec 24

ಪೈರಸಿ ಯುದ್ಧದಿಂದ ನಿಲ್ಲಲ್ಲ, ಸರ್ಕಾರದ ನೆರವು ಅಗತ್ಯ - ಹಾಸ್ಯ ನಟ ಸಾಧು ಕೋಕಿಲ ಹೇಳಿದ್ದೇನು?

ಪೈರಸಿ ದೊಡ್ಡ ಪಿಡುಗು. ಅದನ್ನು ಎಷ್ಟೇ ನಿಲ್ಲಿಸಲು ಪ್ರಯತ್ನಿಸಿದರೂ ಮತ್ತೆ ಹುಟ್ಟಿಕೊಳ್ಳುತ್ತಿದೆ. ಹಾಗಂತ, ಪೈರಸಿಯನ್ನು ಯುದ್ಧ ಮಾಡಿ ನಿಲ್ಲಿಸಲಾಗದು ಎಂದು ಚಲನಚಿತ್ರ ನಟ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ತಿಳಿಸಿದರು.

Read Full Story

10:31 AM (IST) Dec 24

ರಜನಿಕಾಂತ್ ಜೈಲರ್ 2ನಲ್ಲಿ ನನ್ನ ಪಾತ್ರ ಗೆಸ್ಟ್ ರೋಲ್ ಅಲ್ಲ - ಶಿವಣ್ಣನ ಮಾತಿನ ಮರ್ಮವೇನು?

ಜನವರಿ ತಿಂಗಳಲ್ಲಿ ಮತ್ತೆ ನಾಲ್ಕು ದಿನ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತೇನೆ. ಇದು ಯೂನಿವರ್ಸಲ್‌ ಕಂಟೆಂಟ್‌ ಸಿನಿಮಾ. ನಿರ್ದೇಶಕ ನೆಲ್ಸನ್‌ ಅವರು ರಜನಿಕಾಂತ್‌ ಅವರನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಶಿವಣ್ಣ ಹೇಳಿದರು.

Read Full Story

More Trending News