ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದ ಸಮಾವೇಶದ ಪೂರ್ವ ಸಿದ್ಧತಾ ಸಭೆಯನ್ನು ಡಿ.24ರ ಬೆಳಗ್ಗೆ 11.30ಕ್ಕೆ ಮೈಸೂರಿನ ಹೊಟೇಲ್ ಗುರು ರೆಸಿಡೆನ್ಸಿಯಲ್ಲಿ ಅಹಿಂದ ಮೈಸೂರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ ಜನವರಿ ಮೂರನೇ ವಾರದಲ್ಲಿ ಮೈಸೂರಿನಲ್ಲಿ ಬೃಹತ್ ಅಹಿಂದ ಸಮಾವೇಶ ಆಯೋಜನೆಗಾಗಿ ಸಮಾವೇಶದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಪೂರ್ವ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದ್ದು, ಅಹಿಂದ ಮುಖಂಡರು ಪಾಲ್ಗೊಳ್ಳಲಿದ್ದಾರೆ.

11:41 PM (IST) Dec 24
ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ, ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದು, ಸುಮಾರು 2 ಕಿಲೋಮೀಟರ್ ಕಾರಿನಡಿಯಲ್ಲಿ ಸಿಲುಕಿದ್ದ ಬೈಕನ್ನು ಎಳೆದೊಯ್ದಿದ್ದಾನೆ. ಸ್ಥಳೀಯರು ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದು, ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರು!
11:00 PM (IST) Dec 24
09:11 PM (IST) Dec 24
ಲಂಡನ್ನ ವೆಂಬ್ಲಿಯ ಬೀದಿಗಳಲ್ಲಿ ಗುಟ್ಕಾ ಜಗಿದು ಉಗುಳಿದ ಕಲೆಗಳ ವಿಡಿಯೋ ವೈರಲ್ ಆಗಿದೆ. ಈ ಅಶುಚಿಯಿಂದ ಬೇಸತ್ತ ಸ್ಥಳೀಯ ಆಡಳಿತವು ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದು, ಈ ಘಟನೆಯಿಂದ ಭಾರತೀಯರು ತೀವ್ರ ಮುಜುಗರ ವ್ಯಕ್ತಪಡಿಸುತ್ತಿದ್ದಾರೆ.
08:45 PM (IST) Dec 24
08:44 PM (IST) Dec 24
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು ಮತ್ತು ಕೊಡಗಿನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ಐಷಾರಾಮಿ ರೆಸಾರ್ಟ್ಗಳು ಪತ್ತೆಯಾಗಿವೆ.
08:15 PM (IST) Dec 24
ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ, ಇಶಾನ್ ಕಿಶನ್ ಅವರ ಶತಕದ ನೆರವಿನಿಂದ ಜಾರ್ಖಂಡ್ 412 ರನ್ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಉತ್ತರವಾಗಿ, ದೇವದತ್ ಪಡಿಕ್ಕಲ್ ಅವರ ಅಬ್ಬರದ 147 ರನ್ಗಳ ನೆರವಿನಿಂದ ಕರ್ನಾಟಕ ತಂಡವು ಐತಿಹಾಸಿಕವಾಗಿ ಈ ಗುರಿಯನ್ನು ಬೆನ್ನಟ್ಟಿ, 5 ವಿಕೆಟ್ಗಳ ಜಯ ಸಾಧಿಸಿತು.
08:13 PM (IST) Dec 24
ಕಾಂತಾರ ಯಶಸ್ಸಿನ ಬಳಿಕ ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ರಾಜ್ಯದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ದರ್ಶನ ಪಡೆದರು.
07:35 PM (IST) Dec 24
ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ನಡುವೆಯೇ, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್, ‘ಅವರಿಗೆ ಯಾವಾಗಲೂ ಶುಭ ಹಾರೈಸುತ್ತೇನೆ’ ಎಂದು ಉತ್ತರಿಸಿದ್ದಾರೆ.
07:30 PM (IST) Dec 24
07:10 PM (IST) Dec 24
ಅಮೆರಿಕ ಮೂಲದ ಸ್ಯಾನ್ಸನ್ ಗ್ರೂಪ್ ಸೆಮಿಕಂಡಕ್ಟರ್ ಕಂಪನಿಗೆ ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.
05:58 PM (IST) Dec 24
ಬಿಜೆಪಿ ಶಾಸಕ ಶರಣು ಸಲಗರ್, ರಾಜ್ಯದ ಅಬಕಾರಿ ನೀತಿಯನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯರನ್ನು 'ರಾಕ್ಷಸ' ಎಂದು ಕರೆದಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗಾಗಿ ಮದ್ಯ ಮಾರಾಟ ಹೆಚ್ಚಿಸುತ್ತಿರುವುದರಿಂದ ಉತ್ತರ ಕರ್ನಾಟಕದ ಹಳ್ಳಿಗಳು 'ವಿಧವಾ ಗ್ರಾಮ'ಗಳಾಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
05:25 PM (IST) Dec 24
ತಮಿಳುನಾಡಿನ ದೇವಸ್ಥಾನ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ಬಳ್ಳಾರಿಯ ಒಂದೇ ಕುಟುಂಬದ ಕಾರು, ಸಿರುಗುಪ್ಪ ಬಳಿ ಕಿರುಸೇತುವೆಗೆ ಢಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
05:25 PM (IST) Dec 24
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
05:08 PM (IST) Dec 24
ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿ ಪರವಾಗಿ ನಿಂತಿದ್ದು, ಕಾನೂನು ಹೋರಾಟದ ಬಗ್ಗೆ ಸ್ಪಷ್ಟನೆ. ಜೊತೆಗೆ, 275 ಕೋಟಿ ರೂ. ವೆಚ್ಚದ ಬೆಳಗಾವಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ಬಗ್ಗೆ ಮಹತ್ವದದ ಮಾಹಿತಿ ನೀಡಿದ್ದಾರೆ.
04:43 PM (IST) Dec 24
ತಮ್ಮ ಮೀನಿನ ಅಡುಗೆಗಳಿಂದಲೇ ಪ್ರಸಿದ್ಧರಾದ ಬಿಗ್ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿ, ತಮ್ಮ ಬಹುದೊಡ್ಡ ಆಸೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಗ್ಬಾಸ್, ರಕ್ಷಿತಾ ಅವರ ಈ ಕನಸನ್ನು ನನಸು ಮಾಡಿದೆ. ಏನದು ಕನಸು? ರಕ್ಷಿತಾ ಶೆಟ್ಟಿಗೆ ಲಾಟರಿ ಹೊಡೆದದ್ದೇಕೆ?
04:39 PM (IST) Dec 24
04:35 PM (IST) Dec 24
03:42 PM (IST) Dec 24
03:29 PM (IST) Dec 24
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಡಿಸೆಂಬರ್ 31ರ ರಾತ್ರಿಯಿಂದ ಜನವರಿ 1ರ ಬೆಳಗಿನ ಜಾವದವರೆಗೆ ಬಿಎಂಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸಲಿದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಿಂದ ನಗರದ ಪ್ರಮುಖ ಭಾಗಗಳಿಗೆ ಸುಮಾರು 70 ವಿಶೇಷ ಬಸ್ಗಳು ಸಂಚರಿಸಲಿದೆ.
02:46 PM (IST) Dec 24
02:42 PM (IST) Dec 24
02:19 PM (IST) Dec 24
ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ, ತಮ್ಮ ನಿರ್ಮಾಣದ 'ಕೋಣ' ಚಿತ್ರದ ಪೈರಸಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟಾರ್ ನಟರ ಅಭಿಮಾನಿಗಳ ಯುದ್ಧ ಮತ್ತು ಪ್ರಪೋಗಂಡಾದಿಂದ ಚಿತ್ರರಂಗಕ್ಕಾಗುತ್ತಿರುವ ನಷ್ಟದ ಬಗ್ಗೆ ಮಾತನಾಡಿದ್ದಾರೆ
01:36 PM (IST) Dec 24
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಸರ್ಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ವೀರಪ್ಪನ್ಗಿಂತಲೂ ಹೆಚ್ಚು ಆನೆಗಳು (206) ಸಾವನ್ನಪ್ಪಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆನೆಗಳ ಸಾವಿಗೆ ಜಂಗಲ್ ಸಫಾರಿ ನಿಷೇಧಿಸುವುದು ಸರಿಯಲ್ಲ ಎಂದರು.
01:30 PM (IST) Dec 24
ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ತಮಿಳುನಾಡು ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರ ತಡೆಯೊಡ್ಡಿದೆ. ಬೆಂಗಳೂರು ವಿಮಾನ ನಿಲ್ದಾಣದೊಂದಿಗಿನ ಒಪ್ಪಂದದ ಪ್ರಕಾರ, 2033ರವರೆಗೆ 150 ಕಿ.ಮೀ. ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ನಿಯಮವೇ ಮುಖ್ಯ ಕಾರಣವಾಗಿದೆ.
12:52 PM (IST) Dec 24
ಕಿಚ್ಚ ಸುದೀಪ್ ಯುದ್ಧದ ಮಾತು.. ದರ್ಶನ್-ಸುದೀಪ್ ಸ್ನೇಹಿತರಾಗಿದ್ದ ವೇಳೆ ವಿಜಯಲಕ್ಷ್ಮೀ ನಡುವೆನೂ ಒಳ್ಳೆ ಸ್ನೇಹ ಸಲುಗೆ ಇತ್ತು. ಅದ್ರಲ್ಲೂ ಒಂದೊಮ್ಮೆ ದರ್ಶನ್ ಕಷ್ಟದಲ್ಲಿದ್ದ ವೇಳೆ, ಕಿಚ್ಚ ವಿಜಯಲಕ್ಷ್ಮೀ ಜೊತೆ ನಿಂತುಕೊಂಡಿದ್ರು.
12:36 PM (IST) Dec 24
ಹೊಸ ವರ್ಷದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
12:31 PM (IST) Dec 24
ಶಬರಿಮಲೆ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮಾಲೀಕ ಗೋವರ್ಧನ್ ಅವರನ್ನು ಬಂಧಿಸಲಾಗಿದೆ. ಕೇರಳದ ವಿಶೇಷ ತನಿಖಾ ತಂಡವು ಬಳ್ಳಾರಿಗೆ ಆಗಮಿಸಿ, ಗೋವರ್ಧನ್ ಅವರ ಅಂಗಡಿಯಲ್ಲಿ ಶೋಧ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ.
12:28 PM (IST) Dec 24
ನಮ್ಮ ಸಿನಿಮಾ ಟೀಮ್ನಲ್ಲಿ 11 ಮಂದಿ ಇದ್ದಾರೆ, ನಮ್ಮ ಎದುರಾಳಿಗಳು 33 ಮಂದಿ ಇದ್ದಾರೆ. ಆದರೂ ಪೈರಸಿ ವಿರುದ್ಧ ನಮ್ಮ ತೀವ್ರ ಹೋರಾಟ ನಡೆಸಿಯೇ ಸಿದ್ಧ. ಶೇ.80ರಷ್ಟಾದರೂ ಪೈರಸಿ ತಡೆಯುತ್ತೇವೆ ಎಂಬ ಮಾತನ್ನೂ ಸುದೀಪ್ ಹೇಳಿದರು.
12:26 PM (IST) Dec 24
12:18 PM (IST) Dec 24
ರಾಜ್ಯ ಸಾರಿಗೆ ನಿಗಮಗಳ 'ಅಂತರ ನಿಗಮ ವರ್ಗಾವಣೆ'ಗೆ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ. ಜನವರಿ 1 ರಿಂದ 31ರ ವರೆಗೆ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ. ಇದು ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ಎನ್ಡಬ್ಲ್ಯೂಕೆಆರ್ಟಿಸಿ ನೌಕರರ ದಶಕದ ಬೇಡಿಕೆಯನ್ನು ಈಡೇರಿಸಿದೆ.
12:06 PM (IST) Dec 24
12:03 PM (IST) Dec 24
ಬಿಗ್ಬಾಸ್ ಖ್ಯಾತಿಯ ಡಾಗ್ ಸತೀಶ್ ತಮ್ಮ ಮಗ ಕಾಲೇಜಿನಲ್ಲಿ ಫೇಲ್ ಆದ ಕಾರಣಕ್ಕೆ ಅದ್ಧೂರಿ ಪಾರ್ಟಿ ಆಯೋಜಿಸಿದ್ದಾರೆ. ಈ ಪಾರ್ಟಿಯಲ್ಲಿ ಸೆಲೆಬ್ರಿಟಿಗಳು ಭಾಗವಹಿಸಿದ್ದು, ಇದೇ ವೇಳೆ ಸತೀಶ್ ಅವರು ಬಿಗ್ಬಾಸ್ ಮನೆಗೆ ಮತ್ತೆ ಪ್ರವೇಶಿಸುವ ಬಗ್ಗೆ ಸುಳಿವು ನೀಡಿದ್ದಾರೆ.
11:52 AM (IST) Dec 24
ಡಾ। ಆರ್.ಅಹ್ಮದ್ ಅವರ ದಂತ ವೈದ್ಯಕೀಯ ಕ್ಷೇತ್ರದಲ್ಲಿನ ಅಮೋಘ ಸೇವೆಗಾಗಿ 1947ರಲ್ಲಿ ಅಂತಾರಾಷ್ಟ್ರೀಯ ದಂತ ಕಾಲೇಜಿನಿಂದ ಫೆಲೋಶಿಪ್ ನೀಡಲಾಯಿತು ಮತ್ತು ರಾಯಲ್ ಕಾಲೇಜ್ ಆಫ್ ಸರ್ಜನ್ ಇಂಗ್ಲೆಂಡ್ ಇದರ ಫೆಲೋಶಿಪ್ ಕೂಡಾ ನೀಡಲಾಯಿತು.
11:28 AM (IST) Dec 24
ಬೆಂಗಳೂರಿನ ಬಸವೇಶ್ವರ ನಗರದಲ್ಲಿ, ತನ್ನ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದಕ್ಕೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
11:16 AM (IST) Dec 24
ರೈಲು, ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತು ಬಂದಿದ್ದರೆ, ಅದನ್ನು ಹುಡುಕಿ ಕಾಪಿಟ್ಟು ಪ್ರಯಾಣಿಕರಿಗೆ ಕೊಡುವ ರೈಲ್ವೆ ಭದ್ರತಾ ಪಡೆಯು 'ಆಪರೇಷನ್ ಅಮಾನತ್' ನಡಿ ಈ ವರ್ಷ 2.25 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದೆ.
11:06 AM (IST) Dec 24
ಬೆಂಗಳೂರಿಗೆ 2ನೇ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕನಕಪುರ ರಸ್ತೆಯಿಂದ ಮೈಸೂರು ರಸ್ತೆ ನಡುವಿನ ಚೂಡಹಳ್ಳಿ, ಕನಕಪುರ ರಸ್ತೆಯ ಸೋಮನಹಳ್ಳಿ ಮತ್ತು ನೆಲಮಂಗಲ ಬಳಿಯಲ್ಲಿ ಜಾಗಗಳನ್ನು ಗುರುತಿಸಲಾಗಿತ್ತು.
10:53 AM (IST) Dec 24
ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರದೇಶಾಭಿವೃದ್ಧಿ ಮಂಡಳಿ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಈ ಭಾಗಕ್ಕೆ ವಿವಿಧ ಇಲಾಖೆಗಳು ನೂರಾರು, ಸಾವಿರಾರು ಕೋಟ್ಯಂತರ ರುಪಾಯಿ ಹಣ ಬಿಡುಗಡೆ ಮಾಡುತ್ತವೆ.
10:52 AM (IST) Dec 24
ಬೆಂಗಳೂರಿನ ಜ್ಞಾನಜ್ಯೋತಿನಗರದಲ್ಲಿ, ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಯನ್ನು ಪ್ರೀತಿಸುವಂತೆ ಪೀಡಿಸಿ, ನಡುರಸ್ತೆಯಲ್ಲಿ ಆಕೆಯ ಬಟ್ಟೆ ಎಳೆದು ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ.
10:44 AM (IST) Dec 24
ಪೈರಸಿ ದೊಡ್ಡ ಪಿಡುಗು. ಅದನ್ನು ಎಷ್ಟೇ ನಿಲ್ಲಿಸಲು ಪ್ರಯತ್ನಿಸಿದರೂ ಮತ್ತೆ ಹುಟ್ಟಿಕೊಳ್ಳುತ್ತಿದೆ. ಹಾಗಂತ, ಪೈರಸಿಯನ್ನು ಯುದ್ಧ ಮಾಡಿ ನಿಲ್ಲಿಸಲಾಗದು ಎಂದು ಚಲನಚಿತ್ರ ನಟ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ತಿಳಿಸಿದರು.
10:31 AM (IST) Dec 24
ಜನವರಿ ತಿಂಗಳಲ್ಲಿ ಮತ್ತೆ ನಾಲ್ಕು ದಿನ ಶೂಟಿಂಗ್ನಲ್ಲಿ ಪಾಲ್ಗೊಳ್ಳುತ್ತೇನೆ. ಇದು ಯೂನಿವರ್ಸಲ್ ಕಂಟೆಂಟ್ ಸಿನಿಮಾ. ನಿರ್ದೇಶಕ ನೆಲ್ಸನ್ ಅವರು ರಜನಿಕಾಂತ್ ಅವರನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಶಿವಣ್ಣ ಹೇಳಿದರು.