ಕಾರವಾರ: ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಬೈಲೂರಿನಲ್ಲಿ ಹಿಂದೂಗಳ ಐದಾರು ಮನೆಗಳ ಮೇಲೆ ಅಪ್ರಾಪ್ತ ಅನ್ಯಧರ್ಮೀಯ ಯುವಕರು ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಆ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ರಾತ್ರಿ 10 ಗಂಟೆ ನಂತರ 3 ಬೈಕ್ನಲ್ಲಿ ಬಂದ 6 ಜನ ಅನ್ಯ ಧರ್ಮೀಯ ಅಪ್ರಾಪ್ತರು ಬೈಲೂರಿನ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಬೈಲೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಇಬ್ಬರು ಅಪ್ರಾಪ್ತರನ್ನು ಹಿಡಿದು ಮುರ್ಡೇಶ್ವರ ಪೊಲೀಸರಿಗೆ ಒಪ್ಪಿಸಿದರು.
ಉಳಿದ ನಾಲ್ವರು ಅಲ್ಲಿಂದ ಪರಾರಿಯಾಗಿದ್ದರು. ಬಳಿಕ ಪೊಲೀಸರು ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸಹ ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಮರುಡೇಶ್ವರ, ಬೈಲೂರು ತೆಂಗಾರು ಪ್ರದೇಶದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
11:58 PM (IST) Feb 24
11:21 PM (IST) Feb 24
11:04 PM (IST) Feb 24
10:28 PM (IST) Feb 24
ಮಂತ್ರಾಲಯದ ಗುರು ವೈಭವೋತ್ಸವದಲ್ಲಿ ಭಾಗವಹಿಸಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ, ರಾಯರ ದರ್ಶನ ಪಡೆದರು. ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ಭ್ರಷ್ಟ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.
09:47 PM (IST) Feb 24
Rishab Shetty Visits Mantralayam ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯುತ್ತಿರುವ ಗುರು ವೈಭವೋತ್ಸವದ ಸಂಭ್ರಮಕ್ಕೆ ಸ್ಯಾಂಡಲ್ವುಡ್ ಸ್ಟಾರ್ ರಿಷಭ್ ಶೆಟ್ಟಿ ಭೇಟಿ ನೀಡಿದ್ದು, ಈ ಸುಂದರ ಕ್ಷಣಗಳ ಫೋಟೋ ಗ್ಯಾಲರಿ ಮತ್ತು ವರದಿ ಇಲ್ಲಿದೆ ನೋಡಿ!
08:57 PM (IST) Feb 24
ಟೆಕ್ ದೈತ್ಯ ಆಪಲ್ ಸಂಸ್ಥೆಯು ಬೆಂಗಳೂರಿನ 'ಎಂಬಸಿ ಜೆನಿತ್' ಕಚೇರಿ ಸಂಕೀರ್ಣದಲ್ಲಿ ಹೆಚ್ಚುವರಿಯಾಗಿ 1.21 ಲಕ್ಷ ಚದರ ಅಡಿ ಜಾಗವನ್ನು ಬಾಡಿಗೆಗೆ ಪಡೆದುಕೊಂಡಿದೆ. ಈ 10 ವರ್ಷಗಳ ಬೃಹತ್ ಒಪ್ಪಂದದ ಅಡಿಯಲ್ಲಿ ಆಪಲ್ ಒಟ್ಟು 1,333 ಕೋಟಿ ರೂಪಾಯಿ ಬಾಡಿಗೆ ಪಾವತಿಸಲಿದೆ.
08:43 PM (IST) Feb 24
08:34 PM (IST) Feb 24
ಡಾನ್ಸ್ ಕರ್ನಾಟಕ ಡಾನ್ಸ್ ವೇದಿಕೆಯಲ್ಲಿ ಗದಗಿನ 7 ವರ್ಷದ ಪ್ರೀತಮ್, ಕವಿರತ್ನ ಕಾಳಿದಾಸನ ಪಾತ್ರದಲ್ಲಿ ಮಿಂಚಿದ್ದಾನೆ. ಡಾ.ರಾಜ್ಕುಮಾರ್ ಅವರ ಪಡಿಯಚ್ಚಿನಂತಿದ್ದ ಈ ಬಾಲಕನ ಅಭಿನಯಕ್ಕೆ ನಟ ಶಿವರಾಜ್ಕುಮಾರ್ ಭಾವುಕರಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
07:24 PM (IST) Feb 24
ಬೆಂಗಳೂರಿನಲ್ಲಿರುವ ಭಾರತೀಯ ರೈಲ್ವೆ ವಿಪತ್ತು ನಿರ್ವಹಣಾ ಸಂಸ್ಥೆಯು, ತಾಂಜೇನಿಯಾದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೆ ರೈಲ್ವೆ ಅಪಘಾತದ ತುರ್ತು ಪರಿಸ್ಥಿತಿ ನಿರ್ವಹಣೆ ಕುರಿತು ಎರಡು ವಾರಗಳ ತರಬೇತಿ ನೀಡುತ್ತಿದೆ. ಈ ಶಿಬಿರದಲ್ಲಿ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ.
07:09 PM (IST) Feb 24
ಗುಲಬರ್ಗಾ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ, ರೈತನ ಮಗಳು ಚೆನ್ನಮ್ಮ ಕನ್ನಡದಲ್ಲಿ 11 ಚಿನ್ನದ ಪದಕಗಳನ್ನು ಮತ್ತು ಕೂಲಿಕಾರನ ಮಗ ರಾಹುಲ್ ಪ್ರಾಣಿಶಾಸ್ತ್ರದಲ್ಲಿ 9 ಚಿನ್ನದ ಪದಕಗಳನ್ನು ಗೆದ್ದು ಸಾಧನೆ ಮೆರೆದಿದ್ದಾರೆ. ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
07:07 PM (IST) Feb 24
ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಕಾರಣ, ನ್ಯಾಯಾಲಯದ ಆದೇಶದ ಮೇರೆಗೆ ರೈತರು ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೆ ಕನಸ್ಟ್ರಕ್ಷನ್ ವಿಭಾಗದ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. 2017ರಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡಲು ಕೋರ್ಟ್ ಆದೇಶಿಸಿದ್ದರೂ ರೈಲ್ವೆ ಇಲಾಖೆ ಪಾಲಿಸಿರಲಿಲ್ಲ.
06:50 PM (IST) Feb 24
ಗೊಂಡಾ–ಗೋರಖ್ಪುರ ವಿಭಾಗದಲ್ಲಿ ನಡೆಯುತ್ತಿರುವ ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ, ಯಶವಂತಪುರ–ಗೋರಖ್ಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (12592) ರೈಲಿನ ಮಾರ್ಗವನ್ನು ಮಾರ್ಚ್ 2 ಮತ್ತು 9 ರಂದು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ.
06:33 PM (IST) Feb 24
ಬಾಗಲಕೋಟೆ ಜಿಲ್ಲೆಯ ತಮದಡ್ಡಿ ಗ್ರಾಮದಲ್ಲಿ ದಲಿತರ ಮೇಲೆ ಹೇರಲಾಗಿದ್ದ ಸಾಮಾಜಿಕ ಬಹಿಷ್ಕಾರದ ಆರೋಪವು ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಜಮಖಂಡಿ ಎಸಿ ಶ್ವೇತಾ ಬಿಡಿಕರ್ ಮತ್ತು ಪೊಲೀಸರ ಸಮ್ಮುಖದಲ್ಲಿ ನಡೆದ ಸಭೆಯ ನಂತರ, ದಲಿತರಿಗೆ ಊರಿನಲ್ಲೇ ಕ್ಷೌರ ಮಾಡುವ ಮೂಲಕ ವಿವಾದ ಬಗೆಹರಿಸಲಾಯಿತು.
06:13 PM (IST) Feb 24
ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ ನೀಡುವ ಯೋಜನೆಗೆ ಹಣಕಾಸು ಇಲಾಖೆ ಇನ್ನೂ ಸಮ್ಮತಿಸಿಲ್ಲ. ಆದರೂ, ಶಿಕ್ಷಣ ಇಲಾಖೆಯು ಬಜೆಟ್ನಲ್ಲಿ ಈ ಯೋಜನೆ ಘೋಷಣೆಗಾಗಿ CM ಮನವೊಲಿಸಲು ಪ್ರಯತ್ನಿಸುತ್ತಿದ್ದು, ಇಲಾಖೆಯಲ್ಲಿನ ಹಣ ಸೋರಿಕೆ ತಡೆದು ಅನುದಾನ ಒದಗಿಸುವ ಪ್ರಸ್ತಾವನೆ ಇಟ್ಟಿದೆ.
05:53 PM (IST) Feb 24
Bangalore pothole accident ಆನೇಕಲ್ನ ಚಂದಾಪುರದಲ್ಲಿ, ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ರಸ್ತೆಗುಂಡಿಯಿಂದಾಗಿ ಸ್ಕೂಟರ್ ಸಮೇತ ಬಿದ್ದಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿಂಬದಿಯ ವಾಹನ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ.
05:45 PM (IST) Feb 24
ಮಾಜಿ ಅಂಪೈರ್ ಸ್ಟೀವ್ ಬಕ್ನರ್, 2003-04ರ ಗಬ್ಬಾ ಟೆಸ್ಟ್ನಲ್ಲಿ ಸಚಿನ್ ತೆಂಡೂಲ್ಕರ್ಗೆ ತಾವು ನೀಡಿದ್ದ LBW ತೀರ್ಪು ತಪ್ಪಾಗಿತ್ತು ಎಂದು ಎರಡು ದಶಕಗಳ ನಂತರ ಒಪ್ಪಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ನೀಡಿದ ಆ ತೀರ್ಪಿನ ಬಗ್ಗೆ ತಮಗೆ ಈಗಲೂ ಪಶ್ಚಾತ್ತಾಪವಿದೆ ಎಂದರು.
05:33 PM (IST) Feb 24
ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು, ಮೇ-ಜೂನ್ ಅಂತ್ಯದೊಳಗೆ ಮೂರು ಹೊಸ ರೈಲುಗಳು ಸೇರ್ಪಡೆಯಾಗಲಿವೆ. ಟಿಟಾಗರ್ ಕಂಪನಿಯಿಂದ ನಿರ್ಮಿತವಾದ ಈ ರೈಲುಗಳು, ಪರೀಕ್ಷಾರ್ಥ ಓಡಾಟದ ನಂತರ ಸೇವೆಗೆ ಲಭ್ಯವಾಗಲಿದೆ.
05:17 PM (IST) Feb 24
ಮೆಕ್ಸಿಕೋದ ಕುಖ್ಯಾತ ಡ್ರಗ್ ಲಾರ್ಡ್ ಎಲ್ ಮೆಂಚೋನನ್ನು ಸಶಸ್ತ್ರ ಪಡೆಗಳು ಹತ್ಯೆ ಮಾಡಿವೆ. ಆತನ ಗೆಳತಿಯೊಬ್ಬಳು ನೀಡಿದ ಸುಳಿವಿನ ಆಧಾರದ ಮೇಲೆ ಯುಎಸ್ ಮತ್ತು ಮೆಕ್ಸಿಕನ್ ಗುಪ್ತಚರ ಇಲಾಖೆಗಳು ಆತನನ್ನು ಪತ್ತೆಹಚ್ಚಿ, ವಿಶೇಷ ಕಾರ್ಯಾಚರಣೆಯ ಮೂಲಕ ಅಂತ್ಯಗೊಳಿಸಿದವು ಎಂದು ತಿಳಿದು ಬಂದಿದೆ.
04:54 PM (IST) Feb 24
ಕರ್ಣ ಸೀರಿಯಲ್ ಖ್ಯಾತಿಯ ನಟ ಕಿರಣ್ ರಾಜ್, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ 'Passport and Pan with Kiran Raj' ಎಂಬ ಹೊಸ ಕಾರ್ಯಕ್ರಮ ಆರಂಭಿಸಿದ್ದಾರೆ. ಇದಕ್ಕಾಗಿ ಅಭಿಮಾನಿಗಳಿಂದ ಸುಲಭವಾದ ಅಡುಗೆ ರೆಸಿಪಿಗಳನ್ನು ಕೇಳಿದ್ದು, ಅತಿ ಹೆಚ್ಚು ಲೈಕ್ಸ್ ಪಡೆದ ರೆಸಿಪಿಗೆ ಸರ್ಪ್ರೈಸ್ ನೀಡಲಿದ್ದಾರೆ.
04:42 PM (IST) Feb 24
ಧಾರವಾಡದಲ್ಲಿ ಪ್ರತಿಭಟಿಸುತ್ತಿರುವ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ನೇಮಕಾತಿ ವಿಳಂಬದಿಂದ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗಾಗಿ, ಮುಂಬರುವ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯನ್ನು 5 ವರ್ಷಗಳವರೆಗೆ ಸಡಿಲಿಸುವುದಾಗಿ ಘೋಷಿಸಿದ್ದಾರೆ.
04:39 PM (IST) Feb 24
illicit relationship: ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಪ್ರಜ್ಞೆ ತಪ್ಪಿ ಬಿದ್ದಿರೋ ಗಂಡನಿಗೆ ಕೆಲವರು ಎಚ್ಚರ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಈ ವಿಡಿಯೋ ಹಿಂದೆ ಒಂದು ಕಥೆ ಕೂಡ ಇದೆ, ಹಾಗಾದರೆ ಏನದು?
04:30 PM (IST) Feb 24
ಯಶ್ ಅಭಿನಯದ 'ಟಾಕ್ಸಿಕ್' ಚಿತ್ರಕ್ಕಾಗಿ ತಮ್ಮ ಬಹುಕಾಲದ ಗಡ್ಡಕ್ಕೆ ವಿದಾಯ ಹೇಳಿದ್ದಾರೆ. ವೈರಲ್ ಆಗಿರುವ ಮೇಕಿಂಗ್ ವಿಡಿಯೋದಲ್ಲಿ ಅವರ ಹೊಸ ಲುಕ್ ಅನಾವರಣಗೊಂಡಿದ್ದು, ಇದು ಚಿತ್ರದಲ್ಲಿ ಅವರ ದ್ವಿಪಾತ್ರದ ಬಗ್ಗೆ ಕುತೂಹಲ ಮೂಡಿಸಿದೆ.
04:25 PM (IST) Feb 24
ತುಮಕೂರಿನ ಗೋಣಿತುಮಕೂರಿನಲ್ಲಿ ದೇವಾಲಯ ಪ್ರವೇಶಿಸಿದ ದಲಿತ ನವದಂಪತಿಗಳ ವಿರುದ್ಧ ಜಾತಿ ನಿಂದನೆ ಆರೋಪ ಕೇಳಿಬಂದಿತ್ತು. ಈ ಘಟನೆಯಿಂದ ಉಂಟಾದ ಉದ್ವಿಗ್ನತೆಯನ್ನು ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯ ಮೂಲಕ ಬಗೆಹರಿಸಲಾಯಿತು.
04:20 PM (IST) Feb 24
ನಟಿ ರಶ್ಮಿಕಾ ಮಂದಣ್ಣ ಇಂದು ಪ್ಯಾನ್ ಇಂಡಿಯಾ ನಟಿ. ಭಾರೀ ಡಿಮ್ಯಾಂಡ್ನಲ್ಲಿರುವ ಅವರು ಮದುವೆ ಆಗುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಮದುವೆ ಆಗುತ್ತಿದ್ದಾರೆ.
03:51 PM (IST) Feb 24
ಬೆಂಗಳೂರಿನಲ್ಲಿ, ಸ್ನೇಹಿತನ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರಿಗೆ ಮಾರಾಟ ಮಾಡಿ ₹7 ಕೋಟಿ ಅಕ್ರಮ ಹಣ ವರ್ಗಾವಣೆಗೆ ಸಹಕರಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಟೆಲಿಗ್ರಾಂ ಮೂಲಕ ವಂಚಕರ ಜಾಲಕ್ಕೆ ಖಾತೆಯ ವಿವರಗಳನ್ನು ನೀಡಿ ಕಮಿಷನ್ ಪಡೆದಿರುವುದು ತಿಳಿದುಬಂದಿದೆ.
03:45 PM (IST) Feb 24
ಬಿಗ್ ಬಾಸ್ ಕನ್ನಡ ಸೀಸನ್ 7 ಸ್ಪರ್ಧಿ, ನಟಿ ದೀಪಿಕಾ ದಾಸ್ ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ. 30ನೇ ವಯಸ್ಸಿಗೆ ಕಾಲಿಟ್ಟ ದೀಪಿಕಾ ದಾಸ್ಗೆ ಪತಿ ದೀಪಕ್ ಗೌಡ ಅವರು ಸರ್ಪ್ರೈಸ್ ನೀಡಿದ್ದಾರೆ. ಈ ಬಗ್ಗೆ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
03:10 PM (IST) Feb 24
ಮೊದಲೆಲ್ಲ ಮದುವೆಯಲ್ಲಿ ಶಾಸ್ತ್ರಗಳಿಗೆ ಆದ್ಯತೆ ಕೊಡಲಾಗುತ್ತಿತ್ತು. ಈಗ ಫೋಟೋಶೂಟ್, ಮೇಕಪ್ಗೆ ಗೌರವ ಜಾಸ್ತಿ. ಶಾಸ್ತ್ರಗಳಿಗಿಂತ ಹೆಚ್ಚಾಗಿ ಸಂಭ್ರಮವೇ ಜೋರಾಗಿದೆ ಎಂಬ ದೂರಿದೆ. ಈಗಿನ ಮದುವೆಯಲ್ಲಿ ಏನೇನು ದೋಷಗಳು ಆಗುತ್ತಿವೆ ಎಂದು ಓರ್ವರು ಬರೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
03:04 PM (IST) Feb 24
'ಕಾಂತಾರ ಚಾಪ್ಟರ್-1' ಚಿತ್ರದ ದೈವಪಾತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ನಟ ರಣವೀರ್ ಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.
02:55 PM (IST) Feb 24
Ranji Trophy Final: Karnataka vs J&K in Hubballi; Batters Shine ಹುಬ್ಬಳ್ಳಿಯಲ್ಲಿ ನಡೆಯಲಿರುವ ರಣಜಿ ಟ್ರೋಫಿ ಫೈನಲ್ನಲ್ಲಿ ಕರ್ನಾಟಕವು ಜಮ್ಮು ಮತ್ತು ಕಾಶ್ಮೀರವನ್ನು ಎದುರಿಸಲಿದೆ. ಪಡಿಕ್ಕಲ್, ರಾಹುಲ್ ಮತ್ತು ರವಿ ಸ್ಮರಣ್ ಅವರಂತಹ ಬಲಿಷ್ಠ ಬ್ಯಾಟ್ಸ್ಮನ್ಗಳ ಬಲ ರಾಜ್ಯ ತಂಡಕ್ಕಿದೆ.
02:53 PM (IST) Feb 24
ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?, ಉದಯಪುರದಲ್ಲಿ ಫೆ.26ರಂದು ನಡೆಯಲಿರುವ ವಿವಾಹ ಮಹೋತ್ಸವಕ್ಕೆ ಯಾರೆಲ್ಲಾ ಪಾಲ್ಗೊಳ್ಳುತ್ತಿದ್ದಾರೆ, ಯಾವ ಸೆಲೆಬ್ರೆಟಿಗೆ ಆಮಂತ್ರಣ ನೀಡಲಾಗಿದೆ.
02:18 PM (IST) Feb 24
Krishnavamshi Kannada Serial: ಉದಯ ಟಿವಿಯಲ್ಲಿ ‘ಕೃಷ್ಣವಂಶಿ’ ಧಾರಾವಾಹಿ ಪ್ರಸಾರ ಆಗಲಿದೆ. ರೋಹನ್ ಎ ಹಾಗೂ ಶಾರದಾ ಪುಂಡಿ ಈ ಧಾರಾವಾಹಿಯಲ್ಲಿ ಲೀಡ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
02:09 PM (IST) Feb 24
ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿರುವ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಪ್ರಕರಣದಿಂದ ಉಂಟಾದ ಮುಜುಗರವನ್ನು ತಪ್ಪಿಸಿಕೊಳ್ಳಲು ಮತ್ತು ಮುಂಬರುವ ಬಜೆಟ್ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕುವುದನ್ನು ತಪ್ಪಿಸಲು ಪಕ್ಷ ಈ ಕ್ರಮಕ್ಕೆ ಮುಂದಾಗಿದೆ.
01:55 PM (IST) Feb 24
01:34 PM (IST) Feb 24
01:26 PM (IST) Feb 24
ಚನ್ನಪಟ್ಟಣ ತಾಲೂಕಿನಲ್ಲಿ ಶೇ.100ರಷ್ಟು ಎಸ್ಎಸ್ಎಲ್ಸಿ ಫಲಿತಾಂಶ ತರುವ ಗುರಿಯೊಂದಿಗೆ, ತಹಶೀಲ್ದಾರ್ ಗಿರೀಶ್ ಅವರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಪರೀಕ್ಷಾ ಒತ್ತಡ ಕಡಿಮೆ ಮಾಡಿ, ಮೊಬೈಲ್ ಬಳಕೆಯಿಂದ ದೂರವಿರಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುತ್ತಿದ್ದಾರೆ
01:25 PM (IST) Feb 24
ಎರಡು ಗ್ರಾಮಗಳಲ್ಲಿ ಒಂದು ವಿಶಿಷ್ಟ ಸಂಪ್ರದಾಯವಿದೆ. ದ್ಯಾಮವ್ವ ಮತ್ತು ದುರ್ಗವ್ವ ದೇವಿಯರ ಜಾತ್ರೆಯ ಅಂಗವಾಗಿ, ಜಾತ್ರೆಗೆ ಮುಂಚಿನ ಐದು ಮಂಗಳವಾರಗಳಂದು ಗ್ರಾಮಸ್ಥರು ಊರನ್ನೇ ಖಾಲಿ ಮಾಡುತ್ತಾರೆ. ಸೂರ್ಯಾಸ್ತದ ನಂತರವೇ ಮನೆಗೆ ಮರಳುವ ಈ ಪದ್ಧತಿಯು 300 ವರ್ಷಗಳ ಇತಿಹಾಸವನ್ನು ಹೊಂದಿದೆ.
01:07 PM (IST) Feb 24
01:04 PM (IST) Feb 24
01:00 PM (IST) Feb 24
'ಕರ್ಣ' ಸೀರಿಯಲ್ನ ಮೇಕಿಂಗ್ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ನಾಯಕ ಕಿರಣ್ ರಾಜ್ ಯಾವುದೇ ಸಹಾಯವಿಲ್ಲದೆ ನಾಯಕಿ ಭವ್ಯಾ ಗೌಡ ಅವರನ್ನು ಸಲೀಸಾಗಿ ಎತ್ತಿಕೊಳ್ಳುತ್ತಾರೆ. ಈ ದೃಶ್ಯವು ಚಿತ್ರತಂಡವನ್ನೇ ಅಚ್ಚರಿಗೊಳಿಸಿದೆ.
12:35 PM (IST) Feb 24
5 ಲಕ್ಷ ರು. ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಹಾಗೂ ಇಬ್ಬರು ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಫೆ.27ಕ್ಕೆ ಮುಂದೂಡಿದ್ದಾರೆ.