LIVE NOW
Published : Feb 24, 2026, 06:37 AM ISTUpdated : Feb 24, 2026, 09:16 AM IST

Karnataka News Live: ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು - ಘಟನೆ ವಿವರ ಬಿಚ್ಚಿಟ್ಟ ಮುನ್ನಾ

ಸಾರಾಂಶ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಬೈಲೂರಿನಲ್ಲಿ ಹಿಂದೂಗಳ ಐದಾರು ಮನೆಗಳ ಮೇಲೆ ಅಪ್ರಾಪ್ತ ಅನ್ಯಧರ್ಮೀಯ ಯುವಕರು ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಆ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ರಾತ್ರಿ 10 ಗಂಟೆ ನಂತರ 3 ಬೈಕ್‌ನಲ್ಲಿ ಬಂದ 6 ಜನ ಅನ್ಯ ಧರ್ಮೀಯ ಅಪ್ರಾಪ್ತರು ಬೈಲೂರಿನ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಬೈಲೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಇಬ್ಬರು ಅಪ್ರಾಪ್ತರನ್ನು ಹಿಡಿದು ಮುರ್ಡೇಶ್ವರ ಪೊಲೀಸರಿಗೆ ಒಪ್ಪಿಸಿದರು. 

ಉಳಿದ ನಾಲ್ವರು ಅಲ್ಲಿಂದ ಪರಾರಿಯಾಗಿದ್ದರು. ಬಳಿಕ ಪೊಲೀಸರು ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸಹ ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಮರುಡೇಶ್ವರ, ಬೈಲೂರು ತೆಂಗಾರು ಪ್ರದೇಶದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

09:16 AM (IST) Feb 24

ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು - ಘಟನೆ ವಿವರ ಬಿಚ್ಚಿಟ್ಟ ಮುನ್ನಾ

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನನ್ನು ಸ್ಪೆಷಲ್ ಕ್ಲಾಸ್ ಬಳಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿದ್ದ ಅಪ್ರಾಪ್ತ ಬಾಲಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.
Read Full Story

09:07 AM (IST) Feb 24

ಬೆಂಗಳೂರಿಗರೆ ಎಚ್ಚರ - ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!

ಬೆಂಗಳೂರು ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ತರಕಾರಿಗಳಲ್ಲಿ ಅಪಾಯಕಾರಿ ಭಾರಿ ಲೋಹವಾಗಿರುವ ಸೀಸದ ಅಂಶ ಮತ್ತು ಕ್ರಿಮಿನಾಶಕಗಳ ಅವಶೇಷಗಳು ಕಂಡು ಬಂದಿದ್ದು, ಇವುಗಳನ್ನು ಸೇವಿಸಿದರೆ ಕಿಡ್ನಿ ಹಾಗೂ ಮಿದುಳು ಕಾಯಿಲೆ ಬರಲಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Read Full Story

08:55 AM (IST) Feb 24

ರಕ್ಷಿತ್‌ ಶೆಟ್ಟಿ ಜೊತೆಗೆ 13 ವರ್ಷ; ಮದುವೆಯಾಗ್ತಿರೋ ವಿಜಯ್‌ ದೇವರಕೊಂಡ, ರಶ್ಮಿಕಾ ಮಂದಣ್ಣ Age Gap ಎಷ್ಟು?

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಇಬ್ಬರೂ ಅಧಿಕೃತವಾಗಿ ಒಂದಾಗುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ಮತ್ತು ರಶ್ಮಿಕಾ ವಯಸ್ಸಿನ ಅಂತರದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಹಾಗಾದ್ರೆ ಈ ಜೋಡಿಯ ವಯಸ್ಸಿನ ವ್ಯತ್ಯಾಸ ಎಷ್ಟು?

 

Read Full Story

08:31 AM (IST) Feb 24

ಆ ರೀತಿ ಮಾತ್ರ ತೋರಿಸ್ಬೇಡಿ, ಸಿಡಿದೆದ್ದ Amruthadhaare Serial ವೀಕ್ಷಕರು! ವಿಜ್ಞಾನ ಏನು ಹೇಳುತ್ತೆ?

Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಹಾಗೂ ಸುನಿಗೆ ಮದುವೆ ಮಾಡಲು ಮನೆಯಲ್ಲಿ ತಯಾರಿ ನಡೆಯುತ್ತಿದೆ. ಸುನಿಗಿಂತ ಮಲ್ಲಿ ಐದು ವರ್ಷ ದೊಡ್ಡವಳು. ಇದು ಭೂಮಿಕಾಗೆ ಇಷ್ಟ ಆಗ್ತಿಲ್ಲ. ಆದರೆ ಗೌತಮ್‌ ಮಾತ್ರ ತೊಂದರೆ ಇಲ್ಲ ಎಂದು ಹೇಳುತ್ತಿದ್ದಾನೆ.

 

Read Full Story

08:22 AM (IST) Feb 24

Shivamogga - ಬೆಳಗ್ಗೆ ದೇವರಿಗೆ ಕೈ ಮುಗಿದು ಹೋದವನು ಹಿಂತಿರುಗಲಿಲ್ಲ - ಸಂಕೇತ್ ಪೋಷಕರ ಕಣ್ಣೀರು

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಅವನ ಜೊತೆಯಲ್ಲಿದ್ದವರೇ ಹಲ್ಲೆ ಮಾಡಿದ್ದಾರೆ ಎಂದು ಮೃತನ ಅಜ್ಜ ಹನುಮಂತಪ್ಪ ಆರೋಪಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.

Read Full Story

07:53 AM (IST) Feb 24

ಬೆಂಗಳೂರಿನ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ - ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬೆಂಗಳೂರಿನ 142 ಕೆರೆಗಳ ನೀರು ಅತ್ಯಂತ ಕಲುಷಿತಗೊಂಡಿದ್ದು, ಸಂಸ್ಕರಿಸಿದರೂ ಕುಡಿಯಲು ಯೋಗ್ಯವಲ್ಲ. ಬಹುತೇಕ ಕೆರೆಗಳ ನೀರು 'ಡಿ' ಮತ್ತು 'ಇ' ವರ್ಗದಲ್ಲಿದ್ದು, ಕೈಗಾರಿಕಾ ಬಳಕೆಗೆ ಮಾತ್ರ ಸೀಮಿತವಾಗಿದೆ ಮತ್ತು ಕೆಲವು ಕೆರೆಗಳು ಜಲಚರಗಳಿಗೂ ಯೋಗ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

Read Full Story

07:36 AM (IST) Feb 24

ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ

ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. 

Read Full Story

07:27 AM (IST) Feb 24

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯನ್ನ ಕೊಂದ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳು

ಶಿವಮೊಗ್ಗದ ಸೂಳೆಬೈಲಿನಲ್ಲಿ, ಸಹಪಾಠಿ ಗಿರೀಶ್‌ನ ಸಹಾಯಕ್ಕೆ ಹೋದ 15 ವರ್ಷದ ಸಂಕೇತ್‌ನನ್ನು ಮೂವರು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಕೊಂದಿದ್ದಾರೆ. ಈ ಘಟನೆಯು ಕೋಮುಘರ್ಷಣೆಯ ಆತಂಕವನ್ನು ಸೃಷ್ಟಿಸಿದ್ದು, ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
Read Full Story

More Trending News