LIVE NOW
Published : Jan 24, 2026, 04:51 AM ISTUpdated : Jan 24, 2026, 09:23 AM IST

Karnataka News Live: ರಾಜ್ಯದ ಸರ್ಕಾರಿ ಶಾಲೆಯ 785 SSLC ಟಾಪರ್‌ಗಳಿಗೆ ಸರ್ಕಾರದಿಂದ ಸಿಹಿಯಾದ ಅಚ್ಚರಿಯ ಘೋಷಣೆ!

ಸಾರಾಂಶ

ಹಾಸನ: ರಾಜಕೀಯ ಏಳುಬೀಳುಗಳ ನಡುವೆ ಮಂಕಾಗಿರುವ ಜೆಡಿಎಸ್‌ ಪುಟಿದೇಳಲು ರಣತಂತ್ರ ರೂಪಿಸುತ್ತಿದ್ದು, ಇದಕ್ಕಾಗಿ ತನ್ನ ತವರು ನೆಲದಿಂದಲೇ ಪ್ರಯತ್ನ ಶುರು ಮಾಡಿದೆ. ಇದರ ಮೊದಲ ಹಂತವಾಗಿ ಹಾಸನದಲ್ಲಿ ಶನಿವಾರ ಜೆಡಿಎಸ್‌ ಜನತಾ ಸಮಾವೇಶ ಹಮ್ಮಿಕೊಂಡಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎಂಎಲ್‌ಸಿ ಸೂರಜ್ ರೇವಣ್ಣ ಭಾಗವಹಿಸಲಿದ್ದಾರೆ

 

09:23 AM (IST) Jan 24

ರಾಜ್ಯದ ಸರ್ಕಾರಿ ಶಾಲೆಯ 785 SSLC ಟಾಪರ್‌ಗಳಿಗೆ ಸರ್ಕಾರದಿಂದ ಸಿಹಿಯಾದ ಅಚ್ಚರಿಯ ಘೋಷಣೆ!

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ತಲಾ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬದಲು ತಲಾ ₹50 ಸಾವಿರ ನಗದು ಪುರಸ್ಕಾರ ನೀಡಲು ಸರ್ಕಾರ ನಿರ್ಧರಿಸಿದೆ

Read Full Story

09:08 AM (IST) Jan 24

Alamatti - ದುರಂತದಿಂದಾಗಿ 9 ವರ್ಷಗಳಿಂದ ಬಂದಾಗಿದ್ದಆಲಮಟ್ಟಿಯ ಬೋಟಿಂಗ್‌ಗೆ ಚಾಲನೆ

2016ರಲ್ಲಿ ನಡೆದ ದುರಂತದಿಂದಾಗಿ ಸ್ಥಗಿತಗೊಂಡಿದ್ದ ಈ ಪ್ರವಾಸಿ ಆಕರ್ಷಣೆಯು, ಇದೀಗ ಪೆಡೆಲ್ ಬೋಟ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ದೋಣಿಗಳೊಂದಿಗೆ ಮತ್ತು ಕಡ್ಡಾಯ ಲೈಫ್ ಜಾಕೆಟ್ ಸುರಕ್ಷತಾ ಕ್ರಮಗಳೊಂದಿಗೆ ಮರುಕಳಿಸುತ್ತಿದೆ.

Read Full Story

08:59 AM (IST) Jan 24

Bike Taxi - ಇನ್ಮುಂದೆ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಅಧಿಕೃತ - ಹೈಕೋರ್ಟ್‌ನಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ಬಳಸಲು ಅನುಮತಿ ನೀಡಿದೆ. ಓಲಾ, ಉಬರ್‌ನಂತಹ ಅಗ್ರಿಗೇಟರ್ ಸಂಸ್ಥೆಗಳ ಮೇಲ್ಮನವಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.

Read Full Story

08:33 AM (IST) Jan 24

KMF ಗ್ರಾಹಕರಿಗೆ ಗುಡ್‌ ನ್ಯೂಸ್ - ಈಗ ಕೇವಲ 10 ರುಪಾಯಿಗೆ ನಂದಿನಿ ಹಸು ಹಾಲು ಲಭ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿಯ ಹಲವು ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಇವುಗಳಲ್ಲಿ ಹೆಚ್ಚು ಪ್ರೊಟೀನ್‌ಯುಕ್ತ ಹಾಲು (ಎನ್‌-ಪ್ರೊಮಿಲ್ಕ್), ಮೀಡಿಯಂ ಫ್ಯಾಟ್‌ ಪನೀರ್, ಹೈ ಅರೋಮಾ ತುಪ್ಪ ಮತ್ತು ಪ್ರೊಬಯೋಟಿಕ್‌ ಮೊಸರು ಸೇರಿವೆ.  

Read Full Story

08:19 AM (IST) Jan 24

ತುಂಗಭದ್ರಾ ಜಲಾಶಯ ಗೇಟ್ ಅಳವಡಿಕೆ - ₹10 ಕೋಟಿ ಅನುದಾನ ವಾಪಸ್ ಪಡೆದ ರಾಜ್ಯ ಸರ್ಕಾರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳನ್ನು ಬದಲಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರ ನೀಡಿದ್ದ ₹10 ಕೋಟಿ ಅನುದಾನವನ್ನು ಹಿಂಪಡೆದಿದೆ. ಅನುದಾನದ ಗೊಂದಲದ ನಡುವೆಯೂ, ಮೇ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Read Full Story

08:06 AM (IST) Jan 24

ಗುಲಾಬಿ ಮಾರ್ಗದಲ್ಲಿ ಪ್ರಯೋಗಾರ್ಥ ಸಂಚಾರ; ಇಲ್ಲಿನ ನಿಲ್ದಾಣಗಳು ಯಾವುವು? ಯಾವಾಗ ಕಾರ್ಯಾರಂಭ?

ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದಲ್ಲಿ ಪ್ರೊಟೊಟೈಪ್‌ ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ವಿವಿಧ ಪರೀಕ್ಷೆಗಳ ನಂತರ, ಮೇ ತಿಂಗಳಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಗುರಿ ಹೊಂದಲಾಗಿದ್ದು, ಈ ಮಾರ್ಗವು ಒಟ್ಟು 17 ನಿಲ್ದಾಣಗಳನ್ನು ಒಳಗೊಂಡಿದೆ.
Read Full Story

08:04 AM (IST) Jan 24

ಸಂಪಾದಕೀಯ - ನೇಮಕಾತಿಗೆ ವಯೋಮಿತಿ ಸಡಿಲಿಕೆ ಅತ್ಯಂತ ಸಕಾಲಿಕ

ನೇಮಕಾತಿ ವಿಳಂಬದಿಂದ ವಯೋಮಿತಿ ಮೀರುವ ಆತಂಕದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ.  ಪ್ರವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ಸಿವಿಲ್‌ ಹುದ್ದೆಗಳ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಕಾಲ ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಇದು ಲಕ್ಷಾಂತರ ಆಕಾಂಕ್ಷಿಗಳಿಗೆ ವರದಾನವಾಗಿದೆ.

Read Full Story

07:29 AM (IST) Jan 24

ಬ್ರೂಣಲಿಂಗ ಪತ್ತೆಕೋರರ ಮಾಹಿತಿ ಕೊಟ್ರೆ ₹1 ಲಕ್ಷ ಬಹುಮಾನ! ಮಹತ್ವದ ಘೋಷಣೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿನ ಲಿಂಗಾನುಪಾತದ ಅಸಮತೋಲನವನ್ನು ಸರಿಪಡಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದರು. 

Read Full Story

06:51 AM (IST) Jan 24

ಬೆಳ್ಳಂಬೆಳಗ್ಗೆ 510 ಶಾಲಾ ವಾಹನ ತಪಾಸಣೆ - 26 ಪಾನಮತ್ತ ಚಾಲಕರ ವಿರುದ್ಧ ಕೇಸ್‌!

ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಪಾನಮತ್ತರಾಗಿದ್ದ 26 ಖಾಸಗಿ ಶಾಲಾ ವಾಹನ ಚಾಲಕರು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ 5,458 ಪ್ರಕರಣಗಳನ್ನು ದಾಖಲಿಸಿ, ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.
Read Full Story

06:49 AM (IST) Jan 24

ಕಾಂಗ್ರೆಸ್ ಸದಸ್ಯರಿಗೆ ಸಾಮಾನ್ಯ ಜ್ಞಾನ ಇಲ್ಲವೇ? ಎನ್.ರವಿಕುಮಾರ್ ಪ್ರಶ್ನೆ

ರಾಜ್ಯಪಾಲರಿಗೆ ಧಿಕ್ಕಾರ ಕೂಗಿ ಅವಮಾನಿಸಿದ ನಾಲ್ವರು ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಲು ಆಗ್ರಹಿಸಿದ್ದಾರೆ. ಅಲ್ಲದೆ, ಅಬಕಾರಿ ಇಲಾಖೆಯಲ್ಲಿನ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆರ್‌.ಬಿ.ತಿಮ್ಮಾಪುರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Read Full Story

06:35 AM (IST) Jan 24

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

ಬೆಂಗಳೂರು: ಹಿಂದುಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಅವರನ್ನು ಜಾಮೀನಿನ ಮೇಲೆ ರಿಲೀಸ್ ಮಾಡಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

 

Read Full Story

06:34 AM (IST) Jan 24

ಎಕ್ಸ್‌ಪೈರಿ ಮಾತ್ರೆ ಕೊಟ್ಟ ಆರೋಪ - ಮಾನಸಿಕ ಖಿನ್ನತೆಗೊಳಗಾಗಿ ಗುಂಡು ಹಾರಿಸಿಕೊಂಡು ಸಾವು

ಕಾರವಾರದ ಪಿಕಳೆ ಆಸ್ಪತ್ರೆಯ ಔಷಧ ವಿತರಕ ರಾಜೀವ ಪಿಕಳೆ, ಅವಧಿ ಮೀರಿದ ಮಾತ್ರೆ ನೀಡಿದ ವಿಡಿಯೋ ವೈರಲ್ ಆದ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಬರೆದ ಡೆತ್ ನೋಟ್ ಪತ್ತೆಯಾಗಿದೆ.
Read Full Story

06:13 AM (IST) Jan 24

ಮಹಾರಾಷ್ಟ್ರ ನೀರು ಬರುವಿಕೆಗೆ ಕಾದಿರುವ ಕೃಷ್ಣೆ!

ಹಿಪ್ಪರಗಿ ಜಲಾಶಯದ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದ್ದು, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಅಭಾವದ ಭೀತಿ ಎದುರಾಗಿದೆ.  ಜಲಾಶಯ ಬರಿದಾಗುವ ಆತಂಕವಿದ್ದು, ಎಲ್ಲಾ 22 ಗೇಟ್‌ಗಳನ್ನು ಹೊಸದಾಗಿ ಅಳವಡಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

Read Full Story

06:12 AM (IST) Jan 24

ಕೋಳಿ ಮಾಂಸ ಪ್ರಿಯರಿಗೆ ದರ ಏರಿಕೆ ಬಿಸಿ; ಕೆಜಿಗೆ 200-240 ಇದ್ದ ಬೆಲೆ ದಿಢೀರ್ ₹350 ಆಗಲು ಕಾರಣವೇನು?

ಬೆಂಗಳೂರಿನಲ್ಲಿ ಉತ್ಪಾದನೆ ಕುಸಿತ ಮತ್ತು ತಮಿಳುನಾಡಿನಲ್ಲಿನ ಪ್ರತಿಭಟನೆಯಿಂದಾಗಿ ಕೋಳಿ ಮಾಂಸದ ದರ ಕೆಜಿಗೆ ₹350 ತಲುಪಿದೆ. ಇದರೊಂದಿಗೆ ಕುರಿ, ಮೇಕೆ ಮಾಂಸದ ದರವೂ ಕೆಜಿಗೆ ₹900ಕ್ಕೆ ಏರಿಕೆಯಾಗಿದ್ದು, ಮಾಂಸ ಪ್ರಿಯರು ಹಾಗೂ ಹೋಟೆಲ್ ಗ್ರಾಹಕರಿಗೆ ಬಿಸಿ ತಟ್ಟಿದೆ.  

Read Full Story

06:02 AM (IST) Jan 24

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ರಾಜ್ಯಾದಂತ ವಿವಿಧೆಡೆ ಕಾಂಗ್ರೆಸ್‌ ಧರಣಿ

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಪೂರ್ಣವಾಗಿ ಓದದ ಕಾರಣ, ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ರಾಜ್ಯಪಾಲರು ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು  ಚಲುವರಾಯಸ್ವಾಮಿ ಆರೋಪಿಸಿದರೆ, ಕಾಂಗ್ರೆಸ್‌ನ ರಾಜಕೀಯ ನಾಟಕ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Read Full Story

05:57 AM (IST) Jan 24

ನಮ್ಮ ರಾಜ್ಯದಲ್ಲಿಂದು ಏಕಕಾಲಕ್ಕೆ 42,000 ಮನೆ ಹಸ್ತಾಂತರ ಇಂದು! ಎಲ್ಲೆಲ್ಲಿ ಎಷ್ಟೆಷ್ಟು?

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಿಸಲಾದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಎಐಸಿಸಿ ವರಿಷ್ಠರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುವ ಈ ಬೃಹತ್ ಸಮಾರಂಭ, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.

Read Full Story

05:48 AM (IST) Jan 24

ಸಚಿವ ಬೈರತಿ ಸುರೇಶ್ ಕುರಿತು ನೀಡಿದ 'ಏಳು ತಿಂಗಳ' ಹೇಳಿಕೆ - ಸದನದಲ್ಲಿ ತೀವ್ರ ಗದ್ದಲ

ರಾಜ್ಯಪಾಲರ ಭಾಷಣದ ಚರ್ಚೆ ವೇಳೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸಚಿವ ಬೈರತಿ ಸುರೇಶ್ ಕುರಿತು ನೀಡಿದ 'ಏಳು ತಿಂಗಳ' ಹೇಳಿಕೆಯು ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಸ್ಪೀಕರ್ ಆಕ್ಷೇಪಾರ್ಹ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಿದರು.

Read Full Story

05:35 AM (IST) Jan 24

ಇರಾನ್ ಕಡೆಗೆ ಅಮೆರಿಕದ ಪಡೆ - ಯುದ್ಧನೌಕೆ ಬರ್ತಿದೆ ಎಂದು ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ

ಇರಾನ್ ಕಡೆಗೆ ದೊಡ್ಡ ಸೇನಾ ಪಡೆಗಳನ್ನು ಕಳುಹಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಕ್ಷಿಪಣಿ ವಿರೋಧಿ ವ್ಯವಸ್ಥೆಗಳನ್ನು ನಿಯೋಜಿಸಲಾಗಿದ್ದು, ಅರಬ್ಬೀ ಸಮುದ್ರದಲ್ಲಿ ಶೀಘ್ರದಲ್ಲೇ ನೌಕಾ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.
Read Full Story

05:26 AM (IST) Jan 24

Karnataka Legislative Council chaos - ಪರಿಷತ್‌ನಲ್ಲಿ ರಾಜ್ಯಪಾಲರ ಗದ್ದಲ - ಇಬ್ಬರು ಸದಸ್ಯರ ಭವಿಷ್ಯವೇನು?

ರಾಜ್ಯಪಾಲರನ್ನು ಅಡ್ಡಗಟ್ಟಿದ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಮತ್ತು ಎಸ್. ರವಿ ಅವರನ್ನು ಅಮಾನತುಗೊಳಿಸಬೇಕೆಂದು ಬಿಜೆಪಿ ಪಟ್ಟುಹಿಡಿದರೆ, ರಾಷ್ಟ್ರಗೀತೆಗೆ ರಾಜ್ಯಪಾಲರು ಅಗೌರವ ತೋರಿದ್ದಾರೆಂದು ಕಾಂಗ್ರೆಸ್ ಚರ್ಚೆಗೆ ಒತ್ತಾಯಿಸಿತು. .

Read Full Story

05:17 AM (IST) Jan 24

ಲಕ್ಕುಂಡಿಯಲ್ಲಿ ಅಗೆದಷ್ಟು ಇತಿಹಾಸ ಬಯಲು; ₹80 ಲಕ್ಷದಿಂದ ₹1 ಕೋಟಿಯವರೆಗೆ ಏರಿಕೆಯಾದ ಭೂಮಿ ಬೆಲೆ

ಲಕ್ಕುಂಡಿಯಲ್ಲಿ ಪುರಾತತ್ವ ಇಲಾಖೆ ನಡೆಸುತ್ತಿರುವ ಉತ್ಖನನದಲ್ಲಿ ಪ್ರಾಚೀನ ವಸ್ತುಗಳು ಪತ್ತೆಯಾಗುತ್ತಿವೆ. ಈ ನಿಧಿ ಶೋಧದ ಸುದ್ದಿಯಿಂದಾಗಿ ಗ್ರಾಮದ ಜಮೀನಿನ ಬೆಲೆ ಗಗನಕ್ಕೇರಿದ್ದು, ಹೂಡಿಕೆದಾರರು ಆಸಕ್ತಿ ತೋರುತ್ತಿದ್ದಾರೆ. ಪತ್ತೆಯಾದ ವಸ್ತುಗಳು ಕಲ್ಯಾಣ ಚಾಲುಕ್ಯರ ಕಾಲದ್ದೇ ಎಂಬ ಕುತೂಹಲ ಹೆಚ್ಚಾಗಿದೆ.

Read Full Story

More Trending News