LIVE NOW
Published : Jun 24, 2026, 07:01 AM ISTUpdated : Jun 24, 2026, 10:46 AM IST

Karnataka News Live: CPI ದ್ವೇಷಕ್ಕೆ 40-50 ಜನರ ವಿರುದ್ದ ಸುಳ್ಳು ರೇ*ಪ್ ಕೇಸ್..! ಪೊಲೀಸ್ ಅಧಿಕಾರಿಯ ಮೇಲೆ ಗಂಭೀರ ಆರೋಪ

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮುಂಗಾರು ಕೊರತೆ ಹಿನ್ನೆಲೆಯಲ್ಲೇ ಕಾವೇರಿ ಜಲ ಸಂಘರ್ಷ ಆರಂಭವಾಗುವ ಆತಂಕ ಎದುರಾಗಿದೆ.

ದೆಹಲಿಯಲ್ಲಿ ಮಂಗಳವಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ)ದ ಸಭೆ ನಡೆಯಲಿದ್ದು, ಸಿಡಬ್ಲ್ಯುಎಂಎ ಮುಖ್ಯಸ್ಥ ಎಸ್‌.ಕೆ.ಹಲ್ದಾರ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆಯುವ ಸಭೆಯಲ್ಲಿ ಕಾವೇರಿ ಜಲನಿಗಮದ ಎಂಡಿ ಭಾಗಿಯಾಗಲಿದ್ದಾರೆ. ಮುಂಗಾರು ಮುನ್ಸೂಚನೆ, ಮಳೆಯ ಪ್ರಮಾಣ, ಕರ್ನಾಟಕ ಮತ್ತು ತಮಿಳುನಾಡಿನ ಡ್ಯಾಂಗಳಲ್ಲಿ ಪ್ರಸ್ತುತ ಇರುವ ನೀರಿನ ಪ್ರಮಾಣ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಆದರೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಸಭೆಯಲ್ಲಿ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ತಮಿಳುನಾಡು ಮತ್ತೆ ಕಾವೇರಿ ನದಿ ನೀರಿಗೆ ಬೇಡಿಕೆ ಇಡುವ ಸಾಧ್ಯತೆಯಿದೆ. ಜೂನ್‌ ತಿಂಗಳಲ್ಲಿ ಒಟ್ಟಾರೆ 9.19 ಟಿಎಂಸಿಯಷ್ಟು ನೀರನ್ನು ತಮಿಳುನಾಡಿಗೆ ಕರ್ನಾಟಕ ಬಿಡುಗಡೆ ಮಾಡಬೇಕಿದ್ದು, ಜೂನ್‌ 18ರ ತನಕ 2 ಟಿಎಂಸಿ ನೀರು ಬಿಡುಗಡೆಯಾಗಿದೆ.

10:46 AM (IST) Jun 24

CPI ದ್ವೇಷಕ್ಕೆ 40-50 ಜನರ ವಿರುದ್ದ ಸುಳ್ಳು ರೇ*ಪ್ ಕೇಸ್..! ಪೊಲೀಸ್ ಅಧಿಕಾರಿಯ ಮೇಲೆ ಗಂಭೀರ ಆರೋಪ

ಚನ್ನಗಿರಿ ವೃತ್ತ ನಿರೀಕ್ಷಕ ರವೀಶ್ ವೈಯಕ್ತಿಕ ದ್ವೇಷದಿಂದ ಸುಮಾರು 50 ಜನರ ಮೇಲೆ ಸುಳ್ಳು ಅ*ತ್ಯಾ*ಚಾ*ರ ಮತ್ತು ಪ್ರಾಣ ಬೆದರಿಕೆ ಕೇಸ್ ದಾಖಲಿಸಿದ್ದಾರೆ ಎಂದು ಹೊನ್ನೆಮರದಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ನಮ್ಮೆಲ್ಲರನ್ನೂ ಸಾಮೂಹಿಕವಾಗಿ ಎನ್‌ಕೌಂಟರ್‌ ಮಾಡಿ ಅಥವಾ ಇಚ್ಛಾಮರಣಕ್ಕೆ ಅನುಮತಿ ನೀಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Read Full Story

10:36 AM (IST) Jun 24

ಪ್ರತಿದಿನ 1.20 ಲಕ್ಷ ಲೀಟರ್ ಹಾಲು ಸಂಗ್ರಹ; ತಿಂಗಳಿಗೆ 13.50 ಕೋಟಿ ರೂಪಾಯಿ ಬಟವಾಡೆ

ತಾಲೂಕಿನಲ್ಲಿ ಪ್ರತಿದಿನ 1.20 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಪಟ್ಟಣದ ಸಮೀಪ ನೂತನವಾಗಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಅವರು ಹಾಲು ಉತ್ಪಾದಕರಿಗೆ ವಿಮೆ, ಆರ್ಥಿಕ ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಘೋಷಿಸಿದರು.

Read Full Story

10:25 AM (IST) Jun 24

ವಿದ್ಯಾರ್ಥಿನಿ ನೀಟ್‌ ತಪ್ಪಲು ಟ್ರಾಫಿಕ್‌ ಕಾರಣವಲ್ಲ; ಬಿಜೆಪಿ ಆರೋಪಕ್ಕೆ ಸಿಸಿಟಿವಿ ಸಾಕ್ಶ್ಯ ನೀಡಿದ ಪ್ರಿಯಾಂಕ್ ಖರ್ಗೆ!

ಕಾಂಗ್ರೆಸ್ ಸಮಾವೇಶದಿಂದ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ವಿದ್ಯಾರ್ಥಿಯೇ ಮನೆಯಿಂದ ತಡವಾಗಿ ಬದರೆ ಇದರಲ್ಲಿ ಸರ್ಕಾರದ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

Read Full Story

10:23 AM (IST) Jun 24

ನಿವೇದಿತಾ ಜೊತೆ ನವಿಲು ಗರಿ ಡ್ಯಾನ್ಸ್ ವಿವಾದ - ಡ್ಯಾನ್ಸರ್ ಕಿಶನ್ ಮೊದಲ ಪ್ರತಿಕ್ರಿಯೆ

ನವಿಲು ಗರಿ ಇದ್ದ ಉಡುಪು ಧರಿಸಿ ರೀಲ್ಸ್ ಮಾಡಿದ್ದಕ್ಕಾಗಿ ನಟ ಕಿಶನ್ ಮತ್ತು ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲಾಗಿದೆ. ಈ ಬಗ್ಗೆ ನಟ ಕಿಶನ್ ಕ್ಷಮೆಯಾಚಿಸಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುವುದಾಗಿ ತಿಳಿಸಿದೆ.
Read Full Story

10:16 AM (IST) Jun 24

ಪ್ರತಿಷ್ಠಿತ ಪವನ್ ಹನ್ಸ್ ಲಿಮಿಟೆಡ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ - 22 ಹುದ್ದೆಗಳಿಗೆ ನೇಮಕಾತಿ, 1ಲಕ್ಷಕ್ಕೂ ಅಧಿಕ ವೇತನ!

ಭಾರತ ಸರ್ಕಾರದ ಪವನ್ ಹನ್ಸ್ ಲಿಮಿಟೆಡ್, ಜೂನಿಯರ್ ಎಂಜಿನಿಯರ್ ಮತ್ತು ಅಸಿಸ್ಟೆಂಟ್ ಸೇರಿದಂತೆ 22 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯೊಂದಿಗೆ ಜುಲೈ 10, 2026 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಕೇಂದ್ರ ಸರ್ಕಾರಿ ಉದ್ಯೋಗಾವಕಾಶವನ್ನು ಪಡೆಯಬಹುದು.
Read Full Story

09:05 AM (IST) Jun 24

ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ - ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೀಠ ಸ್ಥಾಪನೆಯಾಗುವವರೆಗೂ ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರು ಹೈಕೋರ್ಟ್‌ನ ಪ್ರಧಾನ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವಂತೆಯೂ ಅವರು ಕೋರಿದ್ದಾರೆ.
Read Full Story

08:58 AM (IST) Jun 24

ED Raid - ಸಚಿವ ಜಾರಕಿಹೊಳಿ ಬಾಮೈದ ಮಂಜುನಾಥ್‌ಗೆ ಇಡಿ ಶಾಕ್ - ಏಕಕಾಲದಲ್ಲಿ 6 ಕಡೆ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

Read Full Story

08:49 AM (IST) Jun 24

Liquor Mafia - ಗೋವಾ ಮದ್ಯ ಸಾಗಾಟಕ್ಕೆ ಖತರ್ನಾಕ್ ಪ್ಲಾನ್! ಮೇಲೆ ಗೊಬ್ಬರ ಒಳಗೆ ಕೋಟಿ ಮೌಲ್ಯದ ಲಿಕ್ಕರ್

ಗೋವಾದಿಂದ ಮಹಾರಾಷ್ಟ್ರಕ್ಕೆ ಮದ್ಯ ಸಾಗಿಸಲು ಖದೀಮರು ಹಾಕಿದ್ದ ಖತರ್ನಾಕ್ ಪ್ಲಾನ್ ಕೇಳಿದ್ರೆ ನೀವು ಶಾಕ್ ಆಗ್ತೀರಿ. ಹತ್ತಾರು ಡ್ರೈವರ್ಸ್, ಪ್ರತ್ಯೇಕ ಜಿಪಿಎಸ್ ಲೊಕೇಶನ್, ಮೇಲೆ ಎರೆಹುಳ ಗೊಬ್ಬರದ ಮುಸುಕು! ಕರ್ನಾಟಕದ ಮೂರು ಜಿಲ್ಲೆಗಳ ಪೊಲೀಸರ ಕಣ್ಣಿಗೆ ಮಣ್ಣೆರಚಿದ್ದ ಅಂತರರಾಜ್ಯ ಖದೀಮರ ಜಾಲ!

 

Read Full Story

08:37 AM (IST) Jun 24

ಕೈಗಾ ಹೋರಾಟಕ್ಕೆ ಜಯ - 7 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಎನ್‌ಪಿಸಿ ಅಧಿಕಾರಿಗಳ ಒಪ್ಪಿಗೆ

ಕೈಗಾ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕಾಗಿ ಭೂಮಿ ನೀಡಿದ ನಿರಾಶ್ರಿತರ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ಸ್ಥಳೀಯರಿಗೆ ಉದ್ಯೋಗ, ರಸ್ತೆ ನಿರ್ಮಾಣ, ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಎನ್‌ಪಿಸಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ.
Read Full Story

08:06 AM (IST) Jun 24

ಬದುಕು ಸಿಹಿ ಮಾಡುವ ಕಹಿ ಬೇವಿನ ಹಣ್ಣು ಆಯುವ ಕಾಯಕ; ದಿನಕ್ಕೆ ಎಷ್ಟು ಸಿಗುತ್ತೆ ಹಣ?

ಬೇವಿನ ಹಣ್ಣಿನ ಸುಗ್ಗಿ ಆರಂಭವಾಗಿದ್ದು, ಗ್ರಾಮೀಣ ಭಾಗದ ಮಹಿಳೆಯರು ಇದನ್ನು ಸಂಗ್ರಹಿಸಿ ಮಾರಾಟ ಮಾಡುವ ಮೂಲಕ ಉಪ ಆದಾಯ ಗಳಿಸುತ್ತಿದ್ದಾರೆ. ಔಷಧೀಯ ಗುಣಗಳನ್ನು ಹೊಂದಿರುವ ಈ ಬೇವಿನ ಬೀಜಗಳು ಸಾವಯವ ಕೃಷಿಯಲ್ಲಿ ಕೀಟನಾಶಕವಾಗಿ ಮತ್ತು ಗೊಬ್ಬರವಾಗಿ ಬಳಕೆಯಾಗುತ್ತಿದ್ದು, ಇತ್ತೀಚೆಗೆ ಇದಕ್ಕೆ ಬೇಡಿಕೆ ಹೆಚ್ಚಾಗಿದೆ.
Read Full Story

07:52 AM (IST) Jun 24

Basavaraj Patil Marum victory - ಮಹಾರಾಷ್ಟ್ರ ವಿಧಾನಪರಿಷತ್‌ಗೆ ಕಲಬುರಗಿಯ ಕನ್ನಡಿಗ ಆಯ್ಕೆ

ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಬಸವರಾಜ ಪಾಟೀಲ ಮರುಮ್ ಅವರು ಧಾರಾಶಿವ-ಲಾತೂರ-ಬೀಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಅವರ ಸಹೋದರರಾದ ಇವರ ಗೆಲುವನ್ನು ಆಳಂದದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
Read Full Story

07:49 AM (IST) Jun 24

ಪುತ್ತೂರಿನ ಕೂಲಿ ಕಾರ್ಮಿಕ ಪುರಂದರ್‌ಗೆ ಅದೃಷ್ಟ ತಂದು ಕೊಟ್ಟ ದೇಸಿ ನಾಯಿ ‘ಚಿನ್ನು’

ಪುತ್ತೂರಿನಲ್ಲಿ ಕಾಣೆಯಾಗಿದ್ದ 'ಚಿನ್ನು' ಎಂಬ ದೇಸಿ ನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಕೂಲಿ ಕಾರ್ಮಿಕ ಪುರಂದರ ಅವರಿಗೆ, ಶ್ವಾನಪ್ರೇಮಿ ಮಾಲೀಕ ಗಣೇಶ್ ಭಟ್ ಕೇರ ಅವರು 50 ಸಾವಿರ ರೂಪಾಯಿ ಬಹುಮಾನ ನೀಡಿದ್ದಾರೆ. ಫಿಟ್ಸ್ ಸಮಸ್ಯೆಯಿಂದ ಬಳಲುತ್ತಿದ್ದ ನಾಯಿಯ ಹುಡುಕಾಟಕ್ಕಾಗಿ ಮಾಲೀಕರು ಬಹುಮಾನ ಘೋಷಿಸಿದ್ದರು.

Read Full Story

07:35 AM (IST) Jun 24

Monsoon - ಬರಿದಾಗುತ್ತಿದೆ ಕೃಷ್ಣೆಯ ಒಡಲು - ಮಹಾರಾಷ್ಟ್ರದಿಂದ ಬಿಡುಗಡೆ ಆಗಿಲ್ಲ ಯಾಕೆ ನೀರು?

ಮಹಾರಾಷ್ಟ್ರದಲ್ಲಿ ತೀವ್ರ ನೀರಿನ ಅಭಾವದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಕಷ್ಟಕರವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಆದರೆ, ಬೆಳಗಾವಿ ನಗರಕ್ಕೆ ಜುಲೈ ಅಂತ್ಯದವರೆಗೆ ಹಿಡಕಲ್ ಜಲಾಶಯದಲ್ಲಿ ಸಾಕಷ್ಟು ನೀರಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.
Read Full Story

More Trending News