ಬೆಳಗಾವಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈಗಾಗಲೇ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ತೈಲ ಪೂರೈಕೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಸುಳ್ಳು ಹಬ್ಬಿದ್ದರಿಂದ ಸೋಮವಾರ ಬೆಳಗಾವಿ ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಜನರು ಸಾಲುಗಟ್ಟಿ ತೈಲ್ ಸಂಗ್ರಹಿಸಿದ್ದಾರೆ. ಸುಳ್ಳುಸುದ್ದಿಯಿಂದ ಆತಂಕಗೊಂಡ ಜನರು ಮನೆಯಲ್ಲಿ ನೀರು ಸಂಗ್ರಹಿಸುವ ಕ್ಯಾನ್ ಸಮೇತ ಆಗಮಿಸಿ ಸಾಲುಗಟ್ಟಿ ನಿಂತು ಹರಸಾಹಸಪಟ್ಟು ಪೆಟ್ರೋಲ್, ಡಿಸೇಲ್ ಅನ್ನು ತುಂಬಿಸಿಕೊಂಡಿದ್ದಾರೆ.
ಈ ವೇಳೆ ಬಂಕ್ ಮಾಲೀಕರು, ಪೆಟ್ರೋಲ್ ಮತ್ತು ಡಿಸೇಲ್ಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರೂ ಯಾರು ಕೂಡ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ವಿವಿಧ ಸಾಧನಗಳನ್ನು ತೆಗೆದುಕೊಂಡು ಬಂದು ತೈಲ ಸಂಗ್ರಹಕ್ಕೆ ಮುಂದಾಗಿದ್ದಾರೆ.
07:33 AM (IST) Mar 24
07:05 AM (IST) Mar 24
06:42 AM (IST) Mar 24
06:35 AM (IST) Mar 24
06:19 AM (IST) Mar 24
06:14 AM (IST) Mar 24
ಬಾಗಲಕೋಟೆ ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನದಂದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆಗಳನ್ನು ನಡೆಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿ, ತಮ್ಮ ಶಕ್ತಿಯನ್ನು ಪ್ರದರ್ಶಿಸಿದವು.
05:54 AM (IST) Mar 24
05:40 AM (IST) Mar 24
2025-26ನೇ ಆರ್ಥಿಕ ವರ್ಷದಲ್ಲಿ, ಸರ್ಕಾರದ ಬೆಲೆ ಏರಿಕೆಯ ಹೊರತಾಗಿಯೂ ಗದಗ ಜಿಲ್ಲೆಯಲ್ಲಿ ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹವಾಗಿದೆ. ಲಿಕ್ಕರ್ ಮಾರಾಟದ ಪ್ರಮಾಣ ಸ್ವಲ್ಪ ಕುಸಿದರೂ ಆದಾಯದಲ್ಲಿ ₹35 ಕೋಟಿ ಹೆಚ್ಚಳವಾಗಿದ್ದರೆ, ಬಿಯರ್ ಮಾರಾಟ ಮತ್ತು ಆದಾಯ ಎರಡರಲ್ಲೂ ಕುಸಿತ ಕಂಡುಬಂದಿದೆ.
05:27 AM (IST) Mar 24
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ರಂಗೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್ನ ಪ್ರಮುಖ ಅಭ್ಯರ್ಥಿಗಳು ತಮ್ಮ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.