Published : Nov 24, 2025, 06:44 AM ISTUpdated : Nov 24, 2025, 11:00 PM IST

Karnataka News Live: ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಗರ ಮೂಲ ಗುಣ - ಇತಿಹಾಸಕಾರ ಧರ್ಮೇಂದ್ರ ಕುಮಾರ್‌

ಸಾರಾಂಶ

ಬೆಂಗಳೂರು: ಡಿಸಿಎಂ ಡಿಕೆಶಿಗೆ ಟಾಂಗ್‌ ನೀಡಿದ ಜಾರಕಿಹೊಳಿ, ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ದುಡಿದಿದ್ದಾರೆ. ರಾಜ್ಯದ ಜನ ಮತ ಹಾಕಿದ್ದರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ನಮಗೆ ಇತಿ ಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ತಪ್ಪು. ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾನು ಒಪ್ಪುವುದಿಲ್ಲ. ಸ್ವಾಭಾವಿಕವಾಗಿ ಎಲ್ಲರೂ ಹಕ್ಕು ಮಂಡಿಸುತ್ತಾರೆ. ಎಲ್ಲರಿಗೂ ಅಧಿಕಾರ ಸಿಗಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದರಲ್ಲಿ ತಪ್ಪಿಲ್ಲ ಎಂದು ಸತೀಶ್ ಜಾರಕಿಹೊಳಿ  ಹೇಳಿದರು.

 

11:00 PM (IST) Nov 24

ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಗರ ಮೂಲ ಗುಣ - ಇತಿಹಾಸಕಾರ ಧರ್ಮೇಂದ್ರ ಕುಮಾರ್‌

ಬೆಂಗಳೂರಿನ ಪೂರ್ವ ಹೈಲ್ಯಾಂಡ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಮಯ ಭಾಷೆ ಕನ್ನಡವಾಗಲಿ" ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ವಿಶೇಷತೆಯೆಂದರೆ, ಸಾವಿರಕ್ಕೂ ಹೆಚ್ಚು ಕನ್ನಡೇತರ ನಿವಾಸಿಗಳು ಒಟ್ಟಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದು.

Read Full Story

10:28 PM (IST) Nov 24

ತಡ ರಾತ್ರಿ ಕೆಸಿ ವೇಣುಗೋಪಾಲ್ ಭೇಟಿಗೆ ಮುಂದಾದ ಡಿಕೆಶಿ, ಕುತೂಹಲ ಮೂಡಿಸಿದ ಕ್ಷಿಪ್ರ ನಡೆ

ತಡ ರಾತ್ರಿ ಕೆಸಿ ವೇಣುಗೋಪಾಲ್ ಭೇಟಿಗೆ ಮುಂದಾದ ಡಿಕೆಶಿ, ಕುತೂಹಲ ಮೂಡಿಸಿದ ಕ್ಷಿಪ್ರ ನಡೆ , ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೆಸಿ ವೇಣುಗೋಪಾಲ್ ಭೇಟಿಯಾಗಿ ಅಧಿಕಾರ ಹಸ್ತಾಂತರ ಕುರಿತು ಮಾತುಕತೆ ನಡೆಸಲ ಮುಂದಾಗಿದ್ದಾರೆ.

Read Full Story

09:12 PM (IST) Nov 24

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ , ಮಾಜಿ ಕ್ರಿಕೇಟರ್ ವೆಂಕಟೇಶ್ ಪ್ರಸಾದ್ ಬಣ ಹಾಗೂ ಬ್ರಿಜೇಶ್ ಬಣದ ನಡುವೆ ತೀವ್ರ ಪೈಪೋಟಿ ಎರ್ಪಟ್ಟಿತ್ತು. ಆದರೆ ಭಾರಿ ಟ್ವಿಸ್ಟ್ ಮೂಲಕ ಎಲ್ಲವೂ ಬದಲಾಗಿದೆ.

Read Full Story

08:42 PM (IST) Nov 24

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್, ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಆಮಿಷ ಒಡ್ಡಿ, ಜೀವ ಬೆದರಿಕೆ ಹಾಕಿ ತನ್ನ ಕಾರ್ಯ ಸಾಧಿಸುತ್ತಿದ್ದ.

 

Read Full Story

06:39 PM (IST) Nov 24

ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಜಾಮೀನು ಮಂಜೂರು

ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಜಾಮೀನು ಮಂಜೂರು , ಮಂಗಳೂರಿನ ಜಿಲ್ಲಾ ನ್ಯಾಯಾಲಯ ಈ ಆದೇಶ ನೀಡಿದೆ. ಆಗಸ್ಟ್ 23ರಿಂದ ಬಂಧನದಲ್ಲಿದ್ದ ಚಿನ್ನಯ್ಯ ಬೇಲ್ ನೀಡಲಾಗಿದೆ.

Read Full Story

06:39 PM (IST) Nov 24

Bigg Boss ಅಶ್ವಿನಿ ಗೌಡ ಹುಟ್ಟುಹಬ್ಬಕ್ಕೆ ಧ್ರುವಂತ್​ ಕೇಕ್​ ಆಂಜನೇಯ? ಜಾತಲಾಣದಲ್ಲಿ ವಿಡಿಯೋ ಸಕತ್​ ವೈರಲ್

ನಟಿ ಅಶ್ವಿನಿ ಗೌಡ ಅವರ 41ನೇ ಹುಟ್ಟುಹಬ್ಬವನ್ನು ಬಿಗ್​ಬಾಸ್​ ಮನೆಯಲ್ಲಿ ಆಚರಿಸಲಾಗಿದೆ. ಈ ವೇಳೆ ಕೈಯಿಂದ ಮುಟ್ಟದೇ ಕೇಕ್​ ತಿನ್ನುವ ಚಾಲೆಂಜ್​ನಲ್ಲಿ, ಧ್ರುವಂತ್​ ಅವರು ಕೇಕ್ ತಿಂದ ರೀತಿ ನೋಡಿ ನೆಟ್ಟಿಗರು ಅವರನ್ನು 'ಕೇಕ್​ ಆಂಜನೇಯ' ಎಂದು ಕರೆಯುತ್ತಿದ್ದಾರೆ.
Read Full Story

06:18 PM (IST) Nov 24

ಮದ್ವೆಯಾಗ್ತಿದ್ದಂತೆಯೇ ನಟಿ ರಜಿನಿಗೆ ಹುಚ್ಚುನಾಯಿ ಕಚ್ಚಿತಂತೆ! ಹೀಗೆ ಮಾಡೋದಾ ಗಂಡ?

'ಅಮೃತವರ್ಷಿಣಿ' ಖ್ಯಾತಿಯ ನಟಿ ರಜಿನಿ, ತಮ್ಮ ಜಿಮ್ ಟ್ರೈನರ್ ಹಾಗೂ ವಿಡಿಯೋ ಪಾರ್ಟ್‌ನರ್ ಆಗಿದ್ದ ಅರುಣ್ ವೆಂಕಟೇಶ್ ಅವರನ್ನು ವಿವಾಹವಾಗಿದ್ದಾರೆ. ಏಳು ವರ್ಷಗಳ ಸ್ನೇಹದ ನಂತರ, ಕೇವಲ ಸ್ನೇಹಿತರು ಎಂದು ಹೇಳಿಕೊಳ್ಳುತ್ತಿದ್ದ ಈ ಜೋಡಿ ದಿಢೀರ್ ಮದುವೆಯಾಗಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.
Read Full Story

05:37 PM (IST) Nov 24

Bhagyalakshmi ಸೀರಿಯಲ್​ ಮುಗಿದೇ ಹೋಯ್ತಾ? ಏನಿದು ಇಷ್ಟು ಖುಷಿ- ಇಲ್ಲೇ ಇರೋದು ಟ್ವಿಸ್ಟ್​!

ಟಿಆರ್‌ಪಿಗಾಗಿ ಭಾಗ್ಯಲಕ್ಷ್ಮಿ ಸೀರಿಯಲ್ ಕಥೆಯನ್ನು ಎಳೆಯಲಾಗುತ್ತಿದ್ದು, ಆದಿ ಪಾತ್ರದ ಎಂಟ್ರಿಯಿಂದ ಹೊಸ ತಿರುವು ಪಡೆದಿದೆ. ಇತ್ತೀಚೆಗೆ ಭಾಗ್ಯ, ಆದಿ, ತಾಂಡವ್, ಶ್ರೇಷ್ಠಾ ಒಟ್ಟಿಗೆ ಕಾಣಿಸಿಕೊಂಡ ವೈರಲ್ ವಿಡಿಯೋ ಕೇವಲ ರೀಲ್ಸ್ ಆಗಿದ್ದು, ಸೀರಿಯಲ್ ಮುಗಿದಿಲ್ಲ ಎಂಬುದನ್ನು ಈ ಲೇಖನ ವಿವರಿಸುತ್ತದೆ.
Read Full Story

05:15 PM (IST) Nov 24

Bigg Bossನಲ್ಲಿ ಡಾಗ್​ ಸತೀಶ್​ ಚಡ್ಡಿಯ ಬಿಸಿಬಿಸಿ ಚರ್ಚೆ - ಚಡ್ಡಿ ಕಳ್ಳರನ್ನು ಕಂಡುಹಿಡಿದ್ರಾ ಕಿಚ್ಚ ಸುದೀಪ್? ​

ಬಿಗ್​ಬಾಸ್​ನಿಂದ ಹೊರಬಂದ ಡಾಗ್ ಸತೀಶ್, ಸ್ಪರ್ಧಿ ಸ್ಪಂದನಾ ತನ್ನ ದುಬಾರಿ ಶರ್ಟ್ ಹಾಳು ಮಾಡಿದ್ದಾರೆ ಮತ್ತು ತನ್ನ ಚಡ್ಡಿಗಳು ಕಳೆದುಹೋಗಿವೆ ಎಂದು ಆರೋಪಿಸಿದ್ದರು. ಈ ವಿಷಯವನ್ನು ನಿರೂಪಕ ಸುದೀಪ್ ಅವರು ವಾರದ ಕಂತಿನಲ್ಲಿ , ಮನೆಯ ಸದಸ್ಯರನ್ನು ಪ್ರಶ್ನಿಸಿದಾಗ ತಮಾಷೆಯ ಸನ್ನಿವೇಶ ಸೃಷ್ಟಿಯಾಯಿತು.

Read Full Story

04:03 PM (IST) Nov 24

ಅರುಣಾಚಲ ಚೀನಾ ಭಾಗ, ಪಾಸ್‌ಪೋರ್ಟ್ ಅಮಾನ್ಯ ಎಂದು ಭಾರತೀಯಳಿಗೆ ಪ್ರಯಾಣ ನಿರಾಕರಿಸಿದ ಚೀನಾ

ಅರುಣಾಚಲ ಚೀನಾ ಭಾಗ, ಪಾಸ್‌ಪೋರ್ಟ್ ಅಮಾನ್ಯ ಎಂದು ಭಾರತೀಯಳಿಗೆ ಪ್ರಯಾಣ ನಿರಾಕರಿಸಿದ ಚೀನಾ , ಗಡಿಯಲ್ಲಿ ಕಿರಿಕ್ ಮಾಡುವ ಜೊತೆಗೆ ಇದೀಗ ಚೀನಾ ಭಾರತೀಯರಿಗೆ ಕಿರುಕುಳ ನೀಡಲು ಆರಂಭಿಸಿದೆ.

Read Full Story

03:23 PM (IST) Nov 24

ಕೆನರಾ ಬ್ಯಾಂಕ್‌ನಿಂದ ಉಚಿತ ಕಂಪ್ಯೂಟರ ತರಬೇತಿ - ಅರ್ಹತೆ, ವಯೋಮಿತಿ ಮಾಹಿತಿ ಇಲ್ಲಿದೆ

Canara Bank Free computer education training: ಕೆನರಾ ಬ್ಯಾಂಕ್ ಸಂಸ್ಥೆಯು ಬೆಂಗಳೂರಿನಲ್ಲಿ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿಯನ್ನು ಆಯೋಜಿಸಿದೆ. 

Read Full Story

03:07 PM (IST) Nov 24

Bigg Boss Kannada ನಾಮಿನೇಷನ್‌ನಲ್ಲಿ ಹೊಸ ತಿರುವು; ಹೊಸ ಅಧ್ಯಾಯದಲ್ಲಿ ಒಂದ್ಕಡೆ ಗಿಲ್ಲಿ, ಮತ್ತೊಂದ್ಕಡೆ?

ಬಿಗ್‌ಬಾಸ್ ಮನೆಯಲ್ಲಿನ ನಾಮಿನೇಷನ್ ಪ್ರಕ್ರಿಯೆಯಲ್ಲಿ ಹೊಸ ತಿರುವು ಉಂಟಾಗಿದೆ. ತಮ್ಮ ವೃತ್ತಿಯ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಜಾನ್ವಿ ಮತ್ತು ರಕ್ಷಿತಾ ಶೆಟ್ಟಿ ಇಬ್ಬರೂ ಗಿಲ್ಲಿ ನಟನನ್ನು ನಾಮಿನೇಟ್ ಮಾಡಿದ್ದಾರೆ. ಈ ಘಟನೆಯು ಮನೆಯೊಳಗೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.
Read Full Story

02:59 PM (IST) Nov 24

ಯಕ್ಷಗಾನ ವಿವಾದ - ಬಿಳಿಮಲೆ ಹೇಳಿಕೆಗೆ ಪೇಜಾವರ ಶ್ರೀಗಳು ತಿರುಗೇಟು!

ಯಕ್ಷಗಾನ ಕಲಾವಿದರ ಸಲಿಂಗಕಾಮದ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಉಡುಪಿಯ ಪೇಜಾವರ ಶ್ರೀಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ಕಲಾವಿದರು ಮಹಾನ್ ಕಲಾತಪಸ್ವಿಗಳು ಮತ್ತು ಸಮಾಜ ಅವರನ್ನು ಗೌರವಿಸುತ್ತದೆ ಎಂದರು.

Read Full Story

02:39 PM (IST) Nov 24

ಡಿಕೆಶಿ ಭವಿಷ್ಯ ಅಂದೇ ಸದನದಲ್ಲಿ ನುಡಿದಿದ್ರಾ ಯಡಿಯೂರಪ್ಪ? ಹಲ್​ಚಲ್ ಸೃಷ್ಟಿಸ್ತಿರೋ ಈ ವಿಡಿಯೋದಲ್ಲಿ ಏನಿದೆ?

ಎರಡೂವರೆ ವರ್ಷಗಳ ಬಳಿಕ ಸಿಎಂ ಸ್ಥಾನ ಬಿಟ್ಟುಕೊಡುವ ಒಪ್ಪಂದದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಜಟಾಪಟಿ ನಡೆಯುತ್ತಿದೆ. ಈ ರಾಜಕೀಯ ಬಿಕ್ಕಟ್ಟಿನ ನಡುವೆಯೇ, ಡಿ.ಕೆ.ಶಿವಕುಮಾರ್   ಭವಿಷ್ಯದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ  ಆಡಿದ್ದ ಮಾತು  ವೈರಲ್ ಆಗುತ್ತಿವೆ.

Read Full Story

02:30 PM (IST) Nov 24

ಯಾರು ಸಿಎಂ ಆಗಬೇಕು ಎಂಬ ಪ್ರಶ್ನೆಗೆ 'ನಾನೇ ಮುಂದಿನ ಮುಖ್ಯಮಂತ್ರಿ' ಎಂದ ಜಾರಕಿಹೊಳಿ!

Karnataka CM: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು 2028ಕ್ಕೆ ತಾವೇ ಮುಖ್ಯಮಂತ್ರಿಯಾಗಬೇಕೆಂಬ ಆಕಾಂಕ್ಷೆಯನ್ನು ಬೆಳಗಾವಿಯಲ್ಲಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಹಿರಿತನವನ್ನು ಉಲ್ಲೇಖಿಸಿ, ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದಿದ್ದರೂ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದರು.

Read Full Story

01:47 PM (IST) Nov 24

'ನಾನೇ 5 ವರ್ಷ ಸಿಎಂ' ಎನ್ನುವ ದೈನೇಸಿ ಸ್ಥಿತಿ ಸಿದ್ದರಾಮಯ್ಯರಿಗೆ ಬರಬಾರದಿತ್ತು - ಬೊಮ್ಮಾಯಿ ಟಾಂಗ್

ಮಾಜಿ ಮುಖ್ಯಮಂತ್ರಿ  ಬೊಮ್ಮಾಯಿ ಅವರು, ಸಿದ್ದರಾಮಯ್ಯ 'ನಾನೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿಕೊಳ್ಳುವ ಸ್ಥಿತಿಯನ್ನು ಲೇವಡಿ ಮಾಡಿದ್ದಾರೆ. ಅವರಲ್ಲಿ 'ರೆಬಿಲಿಯನ್' ಮತ್ತು 'ಕಾಂಪ್ರಮೈಸ್' ಎಂಬ ಹೋರಾಟ ನಡೆಯುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಅವರ ಅಧಿಕಾರದ ಭವಿಷ್ಯ ಗೊತ್ತಾಗಲಿದೆ ಎಂದರು.

Read Full Story

01:18 PM (IST) Nov 24

2026ರಲ್ಲಿ ಟೂರ್​ ಪ್ಲ್ಯಾನ್​ ಮಾಡ್ತಿದ್ದೀರಾ? ರಜೆಗಳ ಫುಲ್​ ಡಿಟೇಲ್ಸ್​ ನಿಮಗಾಗಿ- ತಿಂಗಳು ಆಯ್ಕೆ ಮಾಡಿ, ಪ್ಲ್ಯಾನ್​ ಮಾಡಿ

2026ರ ಕ್ಯಾಲೆಂಡರ್ ಇಲ್ಲಿದೆ, ಇದು ಉದ್ಯೋಗಸ್ಥರಿಗೆ ರಜೆಗಳನ್ನು ಯೋಜಿಸಲು ಸಹಾಯ ಮಾಡುತ್ತದೆ. ಶನಿವಾರ-ಭಾನುವಾರದ ಜೊತೆಗೆ ಒಂದೆರಡು ದಿನ ರಜೆ ತೆಗೆದುಕೊಂಡು ಹೇಗೆ ದೀರ್ಘ ಪ್ರವಾಸ ಅಥವಾ ಹತ್ತಿರದ ಟ್ರಿಪ್‌ಗಳನ್ನು ಯೋಜಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Read Full Story

01:18 PM (IST) Nov 24

ಬೆಂಗಳೂರು - ಸ್ನೇಹಿತನಿಂದ ಕೊಲೆಯಾದ ಯುವತಿ; ಆಂಧ್ರದಿಂದ ಬಿಬಿಎಂ ಓದಲು ಬಂದಿದ್ದ ದೇವಿಶ್ರೀ ದುರಂತ ಸಾವು!

BBM Student Devi Shree Murdered: ಬೆಂಗಳೂರಿನ ತಮ್ಮೇನಹಳ್ಳಿಯಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿ ದೇವಿಶ್ರೀಯನ್ನು ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read Full Story

12:57 PM (IST) Nov 24

Belagavi - ದುಖಃದಿಂದ ಸುದ್ದಿಗೋಷ್ಠಿ ಮಾಡ್ತಿದ್ದೇನೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ವಾಲ್ಮೀಕಿ ಸಮಾಜವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದ ಹುಕ್ಕೇರಿ ತಹಶೀಲ್ದಾರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೌನ ವಹಿಸಿರುವ ಸತೀಶ್ ಜಾರಕಿಹೊಳಿ ಕಾರ್ಯವೈಖರಿಯನ್ನು ಪ್ರಶ್ನಿಸಿ, ತಹಶೀಲ್ದಾರ್ ಬಂಧನಕ್ಕೆ ಆಗ್ರಹಿಸಿದ್ದಾರೆ.

Read Full Story

12:50 PM (IST) Nov 24

ತುಮಕೂರು - ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ, ಬೈಕ್ ಸಮೇತ ಶವವಾಗಿ ಪತ್ತೆ!

ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮೂರು ದಿನಗಳಿಂದ ಕಾಣೆಯಾಗಿದ್ದ ಮಧು ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಅಪಾಯಕಾರಿ ತಿರುವಿನ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರು ಆಕ್ರೋಶ.

Read Full Story

12:28 PM (IST) Nov 24

ಕೊಪ್ಪಳ - ದೇವರಿಗೆ ಬಿಟ್ಟ ಗೋವಿನ ಕಾಲು ಕಡಿದ ಪಾಪಿಗಳು!

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ, ದೇವರಿಗೆ ಬಿಟ್ಟಿದ್ದ ಗೋವೊಂದರ ಕಾಲನ್ನು ಕೊಡಲಿಯಿಂದ ಕಡಿದು ಅಮಾನವೀಯವಾಗಿ ಹಿಂಸಿಸಲಾಗಿದೆ. ಗ್ರಾಮಸ್ಥರು ದೈವದ ರೂಪವೆಂದು ಪೂಜಿಸುತ್ತಿದ್ದ ಈ ಗೋವಿಗೆ ಹಿಂಸೆ ನೀಡಿದ ಜಮೀನಿನ ಮಾಲೀಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
Read Full Story

12:23 PM (IST) Nov 24

Bigg Boss ಮನೆಯಲ್ಲಿ ಮದ್ವೆ! ಲೇಡೀಸ್​ ಮೇಕಪ್​ರೂಮ್​ಗೆ ನುಗ್ಗಿ ಹೀಗೆಲ್ಲಾ ಸೀಕ್ರೇಟ್​ ರಿವೀಲ್​ ಮಾಡೋದಾ ಗಿಲ್ಲಿ ನಟ?

ಬಿಗ್​ಬಾಸ್​ ಮನೆಯಲ್ಲಿ ಗಿಲ್ಲಿ ನಟ ತಮ್ಮ ಕಾಮಿಡಿಯಿಂದಲೇ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಹುಡುಗಿಯರ ಮೇಕಪ್​ ರೂಮ್​ಗೆ ಎಂಟ್ರಿ ಕೊಟ್ಟು, ಮದುವೆಗೆ ರೆಡಿಯಾಗುವ ಬಗ್ಗೆ ಹಾಗೂ ಹುಡುಗರನ್ನು ಓರೆಗಣ್ಣಿನಿಂದ ನೋಡುವುದೇಕೆ ಎಂದು ಕಾಲೆಳೆದಿದ್ದಾರೆ.
Read Full Story

11:53 AM (IST) Nov 24

Bhagyalakshmi ಮಡಿಲಲ್ಲಿ ಮಗುವಾದ ಆದಿ - ಪ್ಲೀಸ್​ ಇವರ ಮದ್ವೆ ಮಾಡಿಸೋದು ಬೇಡ ಅಂತಿರೋದ್ಯಾಕೆ ಫ್ಯಾನ್ಸ್​?

ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ, ಆದಿ ಮತ್ತು ಸುರಭಿ ಮದುವೆ ನಿಲ್ಲುವ ಹಂತದಲ್ಲಿದೆ. ಅನಾರೋಗ್ಯಕ್ಕೀಡಾದ ಆದಿಯ ಜವಾಬ್ದಾರಿಯನ್ನು ಭಾಗ್ಯ ವಹಿಸಿಕೊಂಡಿದ್ದು, ಅವಳಲ್ಲಿ ತಾಯಿಯ ಪ್ರೀತಿಯನ್ನು ಕಂಡಿದ್ದಾನೆ. ಇವರಿಬ್ಬರ ಸ್ನೇಹ ಮದುವೆಯಾಗಬಾರದು ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯವಾಗಿದೆ.
Read Full Story

11:36 AM (IST) Nov 24

ನಾನು ಅಮಿತ್ ದತ್ತು ಪುತ್ರ, PMO ಅಧಿಕಾರಿ ಎಂದು ವೈದ್ಯನಿಗೆ 2.7 ಕೋಟಿ ವಂಚಿಸಿದವ ಅರೆಸ್ಟ್ !

ಪ್ರಧಾನಮಂತ್ರಿ ಕಚೇರಿಯ ಉನ್ನತ ಅಧಿಕಾರಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರ ಎಂದು ನಂಬಿಸಿ, ವೈದ್ಯರೊಬ್ಬರಿಗೆ 2.7 ಕೋಟಿ ರೂ ವಂಚಿಸಿದ ಸುಜಯೇಂದ್ರ ಎಂಬ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ಬಳಿ ಆಯುರ್ವೇದ ಆಸ್ಪತ್ರೆ ತೆರೆಯುವ ಆಮಿಷವೊಡ್ಡಿ ಈತ ಹಣ ಪಡೆದಿದ್ದ.

Read Full Story

10:55 AM (IST) Nov 24

ಕೋಲಾರದಲ್ಲಿ ಭೀಕರ ಅಪಘಾತ - ಬ್ರಿಡ್ಜ್‌ನಿಂದ ಕೆಳಗೆ ಬಿದ್ದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ಕೋಲಾರ ಜಿಲ್ಲೆಯ ಮಾಲೂರು ಬಳಿ ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Read Full Story

10:39 AM (IST) Nov 24

ಬೆಂಗಳೂರು ದರೋಡೆ - 7 ಕೋಟಿಯಲ್ಲಿ ಸಿಕ್ಕಿದ್ದು 6.29 ಕೋಟಿ, ಆ ಪ್ರಮುಖ ಸಾಕ್ಷ್ಯ ಎಲ್ಲಿದೆ?

ಬೆಂಗಳೂರಿನ ಎಚ್‌ಡಿಎಫ್‌ಸಿ ಬ್ಯಾಂಕ್‌ನ 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿ 6.29 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು ಪೊಲೀಸರನ್ನು ಅಭಿನಂದಿಸಿದ್ದು, ಪ್ರಕರಣದ ಪ್ರಮುಖ ಸಾಕ್ಷ್ಯವಾದ ಸಿಎಂಎಸ್ ವಾಹನದ ಡಿವಿಆರ್ ಇನ್ನೂ ಪತ್ತೆಯಾಗಿಲ್ಲ.
Read Full Story

10:34 AM (IST) Nov 24

ಕೋರ್ಟ್‌ಗೆ ಹಾಜರುಪಡಿಸದ ಆರೋಪಿಗೆ ಜಾಮೀನು ಮಂಜೂರು! ಏನಿದು ಪ್ರಕರಣ?

ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸದ ಕಾರಣ, ಆತನ ಬಂಧನ ಕಾನೂನುಬಾಹಿರವೆಂದು ಪರಿಗಣಿಸಿ  ಈ ಆದೇಶ ನೀಡಿದೆ.

Read Full Story

10:15 AM (IST) Nov 24

ಕಾಂಗ್ರೆಸ್‌ನಲ್ಲಿ ಶಾಸಕರಿಗೆ 50 ಕೋಟಿ ಆಮಿಷ, ಮಂತ್ರಿಗಿರಿಗೆ 200 ಕೋಟಿ ಫಿಕ್ಸ್ - ಬಿಜೆಪಿ ಗಂಭೀರ ಆರೋಪ

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಶಾಸಕರಿಗೆ 50 ಕೋಟಿ ರು., ಫ್ಲ್ಯಾಟ್‌ ಹಾಗೂ ಕಾರಿನ ಆಮಿಷ, ಈ ಕುರಿತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Read Full Story

09:54 AM (IST) Nov 24

'ಕಟ್ಟಿ ಹಾಕಿ ಒದಿತೀನಿ ನೋಡ್..' 2 ಕೋಟಿ ರೂ. ಅನುದಾನ ಬಂದ್ರೂ ಕಾಮಗಾರಿ ಆರಂಭಿಸದ ಅಧಿಕಾರಿಗೆ ಸಚಿವ ಬೋಸರಾಜು ವಾರ್ನ್!

ರಾಯಚೂರಿನ ಮರಾಟ ಗ್ರಾಮದಲ್ಲಿ ರಸ್ತೆ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಅವರು ಕೆಆರ್​ಐಡಿಎಲ್ ಅಧಿಕಾರಿಯನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು. 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದರೂ ಕೆಲಸ ಆರಂಭಿಸದ ಅಧಿಕಾರಿಗೆ ವಾರ್ನ್ ಕೊಟ್ಟ ಸಚಿವರು

Read Full Story

09:35 AM (IST) Nov 24

Bigg Boss Kannada 12 - ತಮ್ಮ ಖುಷಿಗೆ ಮೂರು ಕಾರಣಗಳನ್ನು ನೀಡಿದ ರಕ್ಷಿತಾ ಶೆಟ್ಟಿ

ಬಿಗ್‌ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ತಮ್ಮ ಸಂತೋಷಕ್ಕೆ ಮೂರು ಪ್ರಮುಖ ಕಾರಣಗಳನ್ನು ಹಂಚಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರಿಂದ ಚಪ್ಪಾಳೆ ಮತ್ತು ಮೆಚ್ಚುಗೆ, ಜನರಿಂದ ಮೊದಲು ಸೇವ್ ಆಗಿದ್ದು ಹಾಗೂ ಟಾಸ್ಕ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಅವರ ಖುಷಿಗೆ ಕಾರಣವಾಗಿದೆ.
Read Full Story

09:09 AM (IST) Nov 24

BBK 12 ನಾಮಿನೇಷನ್ - ರಣಕಹಳೆ ಮೊಳಗಿಸಿದ ಧ್ರುವಂತ್, ಬೆಕ್ಕಿನ ಹೆಜ್ಜೆ ಇಟ್ಟ ರಕ್ಷಿತಾ ಶೆಟ್ಟಿ

ಈ ವಾರದ ಬಿಗ್‌ಬಾಸ್ ನಾಮಿನೇಷನ್ ಪ್ರಕ್ರಿಯೆಯು ಸ್ಪರ್ಧಿಗಳ ಬಟ್ಟೆ ತೊಳೆಯುವ ವಿಶೇಷತೆಯೊಂದಿಗೆ ನಡೆದಿದೆ. ಧ್ರುವಂತ್ ಅವರು ಅಶ್ವಿನಿ ಮತ್ತು ಜಾನ್ವಿಯನ್ನು 'ಡಮ್ಮಿ ಕ್ಯಾಂಡಿಡೇಟ್‌' ಎಂದು ಆರೋಪಿಸಿದ್ದು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

Read Full Story

08:46 AM (IST) Nov 24

ಕೊಡಗಿನ ಫುಟ್ಬಾಲ್ ಮೈದಾನದಲ್ಲಿ ರಣರಂಗ ಎರಡು ತಂಡಗಳ ನಡುವೆ ಮಾರಾಮಾರಿ!

ಕೊಡಗಿನ ವಿರಾಜಪೇಟೆಯಲ್ಲಿ ನಡೆದ 'ಮೆಮೋರಿಯಲ್ ಫುಟ್ಬಾಲ್ ಕಪ್' ಪಂದ್ಯಾವಳಿಯಲ್ಲಿ, ಸುಂಟಿಕೊಪ್ಪ ವಿರುದ್ಧ ಸೋತ ಕಡಂಗ ತಂಡದವರು ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಡ್ರಮ್ ಎಸೆದಿದ್ದು, ಇದು ಮಾರಾಮಾರಿಗೆ ಕಾರಣವಾಯಿತು. ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

Read Full Story

08:18 AM (IST) Nov 24

Nephila giant spider - ಗದಗ ಅರಣ್ಯದಲ್ಲಿ ನೆಫಿಲಾ ಜಾತಿಯ ದೈತ್ಯ ಜೇಡ ಪತ್ತೆ!

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಅರಣ್ಯದಲ್ಲಿ, ನೆಫಿಲಾ ಜಾತಿಗೆ ಸೇರಿದ 'ಜೈಂಟ್ ವುಡ್ ಸ್ಪೈಡರ್' ಎಂಬ ದೈತ್ಯ ಜೇಡ ಪತ್ತೆಯಾಗಿದೆ. ಈ ಜೇಡಗಳು ತಮ್ಮ ಬೃಹತ್ ಗಾತ್ರ ಮತ್ತು ಹಳದಿ ಬಣ್ಣದ ಬಲವಾದ ಬಲೆಗಳಿಗೆ ಹೆಸರುವಾಸಿಯಾಗಿದ್ದು, ಜೀವವaiವಿಧ್ಯ ಸಂಶೋಧಕರು ಇದನ್ನು ಪತ್ತೆಹಚ್ಚಿದ್ದಾರೆ.
Read Full Story

07:55 AM (IST) Nov 24

2 ತಿಂಗಳಲ್ಲಿ ಡಿ.ಕೆ. ಶಿವಕುಮಾರ ಸಿಎಂ - ದೇವಿ ಆರಾಧಕಿ ಭವಿಷ್ಯವಾಣಿ ವಿಡಿಯೋ ವೈರಲ್

"ಹುಲ್ಲಿಗೆಮ್ಮ ದೇವಿ ಹೇಳಿದ್ದಾಳೆ, ಡಿ.ಕೆ. ಶಿವಕುಮಾರ್, ನೀವು ಚಿಂತೆ ಮಾಡಬೇಡಿ. ಮುಖ್ಯಮಂತ್ರಿ ಆಗುತ್ತಾರೆ. ಅಲ್ಲದೇ, ಎರಡು ತಿಂಗಳ ಒಳಗಾಗಿ ಡಿ.ಕೆ. ಶಿವಕುಮಾರ ಅವರು ಸಿಎಂ ಆಗುತ್ತಾರೆ. ಅವರು ಮುಂದಿನ ಎರಡೂವರೆ ವರ್ಷಗಳ ಕಾಲ ರಾಜ್ಯವನ್ನು ಆಳುತ್ತಾರೆ " ಎಂದು ಭೈಲಮ್ಮ ಬಾಳಮಣ್ಣವರ ನುಡಿದಿದ್ದಾರೆ.

Read Full Story

07:53 AM (IST) Nov 24

BBK 12 - ಸೀರಿಯಸ್ ಟೈಮ್‌ನಲ್ಲೂ ಗಿಲ್ಲಿ ವಿಚಿತ್ರ ವರ್ತನೆ; ಇತ್ತ ರಿಷಾ ಗೌಡ ಎಲಿಮಿನೇಷನ್‌ನಲ್ಲಿತ್ತು ಅಚ್ಚರಿ

ಬಿಗ್‌ಬಾಸ್ ಮನೆಯಿಂದ ರಿಷಾ ಗೌಡ ಎಲಿಮಿನೇಟ್ ಆಗಿದ್ದು, ಈ ಗಂಭೀರ ಸಂದರ್ಭದಲ್ಲಿ ಗಿಲ್ಲಿ ನಟ ತಮಾಷೆ ಮಾಡಿ ಕಾವ್ಯಾ ಅವರ ಬೇಸರಕ್ಕೆ ಕಾರಣರಾಗಿದ್ದಾರೆ. ಅನಿರೀಕ್ಷಿತವಾಗಿ ರಿಷಾ ಅವರನ್ನು ಮುಖ್ಯ ದ್ವಾರದ ಬದಲು ಕನ್ಫೆಷನ್ ರೂಮ್ ಮೂಲಕ ಹೊರಗೆ ಕಳುಹಿಸಲಾಯಿತು.

Read Full Story

07:32 AM (IST) Nov 24

ಡಿಕೆ ಸಿಎಂ ಭವಿಷ್ಯ ಕೇಳಿದ ಬಿಜೆಪಿ - ಗಿಳಿ ಶಾಸ್ತ್ರದಲ್ಲಿ ಚೊಂಬು ಕಾರ್ಡು!

Parrot astrology for Karnataka CM :ಮಂಡ್ಯದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುமார் ಮುಂದಿನ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ತಿಳಿಯಲು ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರದ ಮೊರೆ ಹೋಗಿದ್ದಾರೆ. ಪಂಜರದಿಂದ ಹೊರಬಂದ ಗಿಳಿಯು 'ಚೊಂಬು' ಮತ್ತು 'ಚೆಂಡು ಹೂವು'  ಕಾರ್ಡ್‌ ತೋರಿಸಿದೆ.

Read Full Story

07:05 AM (IST) Nov 24

ಬಿಜೆಪಿ ಎಂದಿಗೂ ಕುಮಾರಸ್ವಾಮಿಯನ್ನ ಸಿಎಂ ಮಾಡೋಲ್ಲ - ಚಲುವರಾಯಸ್ವಾಮಿ

ಬಿಜೆಪಿ ಎಂದಿಗೂ ಎಚ್.ಡಿ.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಸಚಿವ ಎನ್.ಚಲುವರಾಯಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

Read Full Story

More Trending News