LIVE NOW
Published : Dec 25, 2025, 07:29 AM ISTUpdated : Dec 25, 2025, 12:51 PM IST

Karnataka news live: ಆಧುನಿಕ ಭಾರತದ ಶಿಲ್ಪಿ, ಯುಗಪುರುಷ ಅಟಲ್ ಬಿಹಾರಿ ವಾಜಪೇಯಿ - ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಸಾರಾಂಶ

ರಾಜ್ಯದ ಜನತೆ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ರಜೆಗೆ ಬೆಂಗಳೂರಿನಿಂದ ಗೋಕರ್ಣಗೆ ಹೊರಟಿದ್ದ ಬಸ್ ಚಿತ್ರದುರ್ಗದ ಗೊರ್ಲತ್ತು ಬಳಿ ಭೀಕರ ಅಪಘಾತವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ 23 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vishweshwar Hegde Kageri

12:51 PM (IST) Dec 25

ಆಧುನಿಕ ಭಾರತದ ಶಿಲ್ಪಿ, ಯುಗಪುರುಷ ಅಟಲ್ ಬಿಹಾರಿ ವಾಜಪೇಯಿ - ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಅಟಲ್ ಜಿ ಕೇವಲ ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿರಲಿಲ್ಲ, ಬದಲಿಗೆ ಒಬ್ಬ ಸಂವೇದನಾಶೀಲ ಕವಿ ಮತ್ತು ಅಪ್ರತಿಮ ವಾಗ್ಮಿಯಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು.

Read Full Story

12:37 PM (IST) Dec 25

Bigg Bossನಲ್ಲಿ ಮಾರ್ಕ್​ ಚಿತ್ರದ ಹವಾ - 'ಸೈಕೋ ಸೈತಾನ್​' ಹಾಡಿಗೆ ಸ್ಪರ್ಧಿಗಳ ಭರ್ಜರಿ ಸ್ಟೆಪ್- ಕಿಚ್ಚ ಫಿದಾ

ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ಸುದೀಪ್ ಅಮಾನತುಗೊಂಡ ಪೊಲೀಸ್ ಅಧಿಕಾರಿಯ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Read Full Story

12:27 PM (IST) Dec 25

ಚಿತ್ರದುರ್ಗ ಬಸ್ ದುರಂತ - ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದ ನಂತರ, ಹಾಸನದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ನವ್ಯ ಮತ್ತು ಮಾನಸ ಕಣ್ಮರೆಯಾಗಿದ್ದಾರೆ. ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದ್ದ ನವ್ಯ ಸೇರಿದಂತೆ ಮಕ್ಕಳಿಗೆ ಪೋಷಕರು ಆಸ್ಪತ್ರೆಗಳಲ್ಲಿ ಕಣ್ಣೀರಿನೊಂದಿಗೆ ಹುಡುಕಾಟ ನಡೆಸುತ್ತಿದ್ದಾರೆ.

Read Full Story

12:24 PM (IST) Dec 25

ಅತ್ಯುತ್ತಮ ಆಡಳಿತಕ್ಕೂ, ಜವಾಬ್ದಾರಿಯುತ ವಿಪಕ್ಷಕ್ಕೂ ಮಾದರಿ ಅಟಲ್ ಬಿಹಾರಿ ವಾಜಪೇಯಿ - ಆರ್.ಅಶೋಕ್‌

ರಾಹುಲ್‌ ಗಾಂಧಿಯವರ ನೇತೃತ್ವದ ವಿಪಕ್ಷ ಲೋಕಸಭೆಯಲ್ಲಿ ಏನು ಮಾಡುತ್ತಿದೆ ಎಂಬುದನ್ನು ಗಮನಿಸಿದರೆ, ಇವರಿಗೆಲ್ಲ ವಾಜಪೇಯಿಯವರಿಂದಲೇ ಪಾಠ ಹೇಳಿಸಿಕೊಳ್ಳುವ ಅಗತ್ಯವಿದೆ ಎಂದು ಅನ್ನಿಸದೇ ಇರುವುದಿಲ್ಲ.

Read Full Story

12:17 PM (IST) Dec 25

ಅಟಲ್‌ಜೀ ಹಾಕಿದ ಬುನಾದಿಯ ಮೇಲೆ ನಿಂತ ವಿಕಸಿತ ಭಾರತ - ಬಿ.ವೈ.ವಿಜಯೇಂದ್ರ

ಡಿ.25 ವಾಜಪೇಯಿ ಅವರ ಜನ್ಮದಿನ. ದೇಶದ ಅಭಿವೃದ್ಧಿ ರಥಕ್ಕೆ ರಾಜಪಥ ನಿರ್ಮಿಸಿ, ಭವ್ಯ ಭಾರತದ ಬೆಳವಣಿಗೆಗೆ ಭರವಸೆಯ ಬೆಳಕಾಗಿ ನಿಂತವರು ಅಟಲ್‌ಜೀ. ದೇಶ ಕಂಡ ಪ್ರಧಾನಿಗಳ ಪಟ್ಟಿಯಲ್ಲಿ ಅಟಲ್‌ಜೀ ಅವರಿಗೆ ವಿಶೇಷ ಸ್ಥಾನಮಾನ.

Read Full Story

11:55 AM (IST) Dec 25

ಚಿತ್ರದುರ್ಗ ಬಸ್ ದುರಂತ; ಬೆಂಕಿಯಿಂದ 45 ಶಾಲಾ ಮಕ್ಕಳನ್ನು ರಕ್ಷಿಸಿ ರಾಜ್ಯದ ಹೀರೋ ಆದ ಸಚಿನ್!

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಗ್ನಿ ದುರಂತದಲ್ಲಿ, ಚಾಲಕ ಸಚಿನ್ ತನ್ನ ಪ್ರಾಣದ ಹಂಗು ತೊರೆದು 45 ಶಾಲಾ ಮಕ್ಕಳನ್ನು ರಕ್ಷಿಸಿದ್ದಾರೆ. ತಲೆಗೆ ಗಾಯವಾದರೂ ಲೆಕ್ಕಿಸದೆ, ಹೊತ್ತಿ ಉರಿಯುತ್ತಿದ್ದ ಇನ್ನೊಂದು ಬಸ್‌ನಲ್ಲಿದ್ದ ಹಲವು ಪ್ರಯಾಣಿಕರನ್ನು ಸಹ ಅವರು ಸಾವಿನ ದವಡೆಯಿಂದ ಪಾರುಮಾಡಿದ್ದಾರೆ.

Read Full Story

11:52 AM (IST) Dec 25

ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ

ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಸಾವಿನಿಂದ ಪಾರಾದ ಗಾಯಾಳು ಕಿರಣ್ ಪಾಲ್ ತಮ್ಮ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ. ನಿದ್ದೆಯಲ್ಲಿದ್ದಾಗ ಅಪಘಾತ ಸಂಭವಿಸಿದ್ದು, ಹೊಗೆ ಮತ್ತು ಬೆಂಕಿಯ ನಡುವೆ ಒಡೆದ ಕಿಟಕಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾಗಿ ಅವರು ವಿವರಿಸಿದ್ದಾರೆ. 

Read Full Story

11:50 AM (IST) Dec 25

ದ್ವೇಷ ಭಾಷಣ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅತಿದೊಡ್ಡ ಬೆದರಿಕೆ - ಪಿ.ರಾಜೀವ್ ಲೇಖನ

ಸೆಕ್ಷನ್‌ 4ರಲ್ಲಿ ಎಕ್ಸಿಕ್ಯುಟಿವ್‌ ಮ್ಯಾಜಿಸ್ಟ್ರೇಟ್‌ ಅಥವಾ ಡಿವೈಎಸ್ಪಿ ರ್‍ಯಾಂಕ್‌ ಮೇಲ್ಪಟ್ಟ ಅಧಿಕಾರಿಗೆ ನಂಬಲು ಕಾರಣವಿದ್ದರೆ ಎಂದು ಬರೆಯುತ್ತಾರೆ. ಆದರೆ, ಇದು ಸಾಬೀತು ಆಗಬೇಕಿಲ್ಲ. ಕೇವಲ ಆ ಅಧಿಕಾರಿಗೆ ನಂಬಲು ಕಾರಣವಿದ್ದರೆ ಸಾಕು.

Read Full Story

11:48 AM (IST) Dec 25

'ಆತ ಊಟಿಗೆ ಕರೆದುಕೊಂಡು ಹೋಗಿ..' - ಅಪ್ರಾಪ್ತೆ ಮೇಲೆ ಆರ್‌ಸಿಬಿ ಆಟಗಾರ ಲೈಂಗಿಕ ದೌರ್ಜನ್ಯ, ಬೇಲ್ ಕ್ಯಾನ್ಸಲ್! ಶುರುವಾಯ್ತು ಬಂಧನ ಭೀತಿ

ಜೈಪುರ: ಬಹುನಿರೀಕ್ಷಿತ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಹರಾಜು ಕೂಡಾ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಿರುವಾಗಲೇ ಅರ್‌ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ಆರ್‌ಸಿಬಿ ಸ್ಟಾರ್ ಆಟಗಾರ ಬಂಧನ ಭೀತಿಗೆ ಒಳಗಾಗಿದ್ದಾರೆ.

 

Read Full Story

11:43 AM (IST) Dec 25

ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ತಡೆಯಲು ದ್ವೇಷ ಭಾಷಣ ಕಾಯ್ದೆ ಅಗತ್ಯ - ರಮೇಶ್ ಬಾಬು ಲೇಖನ

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ನಿಯಂತ್ರಣವಿಲ್ಲದೆ ವ್ಯಕ್ತಿಗತ ನಿಂದನೆ, ಚಾರಿತ್ರ್ಯಹರಣ, ತೇಜೋವಧೆ, ಪ್ರಚೋದನೆ, ಕೊಲೆಗಳಿಗೆ ಪ್ರಚೋದನೆ, ಹಿಂಸೆಗಳಿಗೆ ಪ್ರಚೋದನೆ, ಶಾಂತಿಗೆ ದಕ್ಕೆ ಪ್ರಕರಣಗಳನ್ನು ನಿರಂತರವಾಗಿ ಕಾಣುತ್ತಿದ್ದೇವೆ.

Read Full Story

11:40 AM (IST) Dec 25

ಚಿತ್ರದುರ್ಗ ಬಸ್‌ ದುರಂತ - ಭಟ್ಕಳ ಮೂಲದ ರಶ್ಮಿ ಮಹಾಲೆ ಸೇಫ್‌, ಕುಟುಂಬ ನಿರಾಳ

ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದರು. ಇದೇ ಬಸ್‌ನಲ್ಲಿದ್ದ ಭಟ್ಕಳ ಮೂಲದ ರಶ್ಮಿ ಮಹಾಲೆ ನಾಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ರಶ್ಮಿ ಸುರಕ್ಷಿತವಾಗಿರುವುದಾಗಿ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
Read Full Story

11:27 AM (IST) Dec 25

ಚಿತ್ರದುರ್ಗ ಬಸ್ ಅಗ್ನಿ ದುರಂತ - ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಚಿತ್ರದುರ್ಗದ ಬಳಿ ಭೀಕರ ಬಸ್ ಅಗ್ನಿ ದುರಂತ. ಸಿಎಂ ಸಿದ್ದರಾಮಯ್ಯ ₹5 ಲಕ್ಷ ಪರಿಹಾರ ಘೋಷಿಸಿದ್ದು, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಸಂಪೂರ್ಣ ವಿವರ ತಿಳಿಯಲು ಕ್ಲಿಕ್ ಮಾಡಿ.

Read Full Story

11:18 AM (IST) Dec 25

ಶತ್ರುಗಳನ್ನು ಕ್ಷಮಿಸುವುದಕ್ಕೇ ಹುಟ್ಟಿದ ಯೇಸು.. ಒಳ್ಳೆಯದಕ್ಕೆ ಸಿಕ್ಕಿದ್ದು ಶಿಕ್ಷೆ ಮಾತ್ರ!

ಮಾನವ ಕುಲಕ್ಕೆ ಮನುಷ್ಯತ್ವದ ಪಾಠ ಹೇಳಿ ಕತ್ತಲಿಂದ ಬೆಳಕಿನತ್ತ ಅವರನ್ನು ಕರೆದೊಯ್ದು ಜಗತ್ತನ್ನೇ ಜ್ಯೋತಿಸ್ವರೂಪ ಮಾಡಿ ಆ ಬೆಳಕಿನಲ್ಲಿ ಇಡೀ ಮಾನವಕುಲವನ್ನು ಉದ್ಧರಿಸಲು ಅವತರಿಸಿದ ಮಹಾಪುರುಷರು ಜಗತ್ತಿನಲ್ಲಿ ಅನೇಕರುಂಟು.

Read Full Story

11:10 AM (IST) Dec 25

ನನ್ನ ಪತ್ನಿ ಪ್ರಿಯಾ ಆ ವಿಚಾರದಲ್ಲಿ ಪಕ್ಕಾ.. ಇದರಲ್ಲಿ ನನ್ನ ಪಾತ್ರ ಇಲ್ಲ - ಕಿಚ್ಚ ಸುದೀಪ್‌

ಮಾರ್ಕ್‌ ಸಿನಿಮಾದ ಬಜೆಟ್‌ ದೊಡ್ಡದು. ಮ್ಯಾಕ್ಸ್‌ಗಿಂತ ಮೂರು ಪಟ್ಟು ದೊಡ್ಡದು. ನನ್ನ ಸಂಭಾವನೆಯ ಸ್ವಲ್ಪ ಭಾಗವನ್ನಷ್ಟೇ ತಗೊಂಡು ಉಳಿದದ್ದನ್ನು ಈ ಸಿನಿಮಾಗೆ ಇನ್‌ವೆಸ್ಟ್ ಮಾಡಿದ್ದೇನೆ ಎಂದರು ಕಿಚ್ಚ ಸುದೀಪ್‌.

Read Full Story

10:48 AM (IST) Dec 25

ಚಿತ್ರದುರ್ಗ ದುರಂತ - ಸ್ನೇಹಿತೆಯ ಬ್ಯಾಚುಲರ್‌ ಪಾರ್ಟಿಗೆ ಹೋಗ್ತಿದ್ದ ತಾಯಿ, ಮಗು ದಾರುಣ ಸಾವು!

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವು ಮಂದಿ ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಬ್ಯಾಚುಲರ್‌ ಪಾರ್ಟಿಗೆ ಹೊರಟಿದ್ದ ತಾಯಿ, ಮಗು ಕೂಡ ಸಾವು ಕಂಡಿದ್ದಾರೆ ಎಂದು ವರದಿಯಾಗಿದೆ.

Read Full Story

10:46 AM (IST) Dec 25

ಕಲ್ಯಾಣ ಕರ್ನಾಟಕದ ಶಿಲ್ಪಿ ಜನಾನುರಾಗಿ ಧರ್ಮಸಿಂಗ್‌ಗೆ ಜನರ ಸೇವೆಯೇ ಕಾಯಕ

ಅಜಾತ ಶತ್ರು ಎಂದೇ ಹೆಸರುವಾಸಿಯಾಗಿದ್ದ, ರಾಜ್ಯ ಕಂಡ ‘ಬಡವರ’ ಮುಖ್ಯಮಂತ್ರಿ ದಿವಂಗತ ಡಾ। ಎನ್.ಧರಂಸಿಂಗ್ ಅವರು ಇಂದು ನಮ್ಮೆಲ್ಲರೊಂದಿಗೆ ಬದುಕಿದ್ದರೆ ಇಂದು ತಮ್ಮ 89ನೇ ಹುಟ್ಟುಹಬ್ಬ ಆಚರಿಸುತ್ತಿದ್ದರು.

Read Full Story

10:28 AM (IST) Dec 25

ನಾನು ತರಬೇತಿ ತೆಗೆದುಕೊಂಡು ಬರ್ತಿನಿ - ಕೆ.ಎನ್‌.ರಾಜಣ್ಣಗೆ ಡಿ.ಕೆ.ಶಿವಕುಮಾರ್ ಟಾಂಗ್‌

‘ನನಗೆ ಇನ್ನೂ ತರಬೇತಿ ಕಡಿಮೆ ಇದೆ. ತರಬೇತಿ ತೆಗೆದುಕೊಂಡು ಬರ್ತಿನಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಅವರಿಗೆ ಟಾಂಗ್‌ ನೀಡಿದ್ದಾರೆ.

Read Full Story

10:13 AM (IST) Dec 25

ಚಿತ್ರದುರ್ಗ ಬಸ್ ದುರಂತ - ಮೃತರಿಗೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ; ವರದಿ ಕೇಳಿದ ರಾಮಲಿಂಗಾರೆಡ್ಡಿ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀ ಬರ್ಡ್ ಖಾಸಗಿ ಬಸ್ ಚಿತ್ರದುರ್ಗದ ಬಳಿ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 9 ಜನರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.

Read Full Story

09:45 AM (IST) Dec 25

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು - ಸಚಿವ ಆರ್‌.ಬಿ.ತಿಮ್ಮಾಪೂರ

ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು. ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಕರೆ ನೀಡಿದರು.

Read Full Story

09:31 AM (IST) Dec 25

ಸಿಎಂ ದೆಹಲಿ ಪ್ರಯಾಣದ ನಂತರ ಸಂಪುಟ ಪುನಾರಚನೆ - ಮಾಜಿ ಸಚಿವ ಕೆ.ಎನ್.ರಾಜಣ್ಣ

ಸಚಿವ ಸಂಪುಟ ಪುನಾರಚನೆಯನ್ನು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿ ಅನುಮತಿ ತಗೊಂಡು ಮಾಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Read Full Story

09:20 AM (IST) Dec 25

ಮಂಡ್ಯದಿಂದ ಬೆಂಗಳೂರಿಗೆ ಮದುವೆಯಾಗಿ ಬಂದ ಐಶ್ವರ್ಯಾ; ಗಂಡನ ಕಿರುಕುಳಕ್ಕೆ ಬೇಸತ್ತು, ತಿಂಗಳೊಳಗೆ ನವವಿವಾಹಿತೆ ಸಾವು!

ಮದುವೆಯಾಗಿ ತಿಂಗಳು ಕಳೆಯುವ ಮುನ್ನವೇ ಬೆಂಗಳೂರಿನ ಬಾಗಲಗುಂಟೆಯಲ್ಲಿ ನವವಿವಾಹಿತೆ ಐಶ್ವರ್ಯ (24) ನೇಣಿಗೆ ಶರಣಾಗಿದ್ದಾರೆ. ಗಂಡ ಮತ್ತು ಅತ್ತೆಯ ಕಿರುಕುಳವೇ ಸಾವಿಗೆ ಕಾರಣ ಎಂದು ಮೃತಳ ಪೋಷಕರು ಆರೋಪಿಸಿದ್ದು, ಇದೊಂದು ಕೊಲೆ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

09:13 AM (IST) Dec 25

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ 500 ಬೀದಿ ನಾಯಿಗಳಿಗೆ ಒಂದು ವರ್ಷ ಪ್ರತಿನಿತ್ಯ ಎರಡು ಬಾರಿ ಚಿಕನ್‌ ರೈಸ್‌ ಆಹಾರ ನೀಡುವುದು ಸೇರಿದಂತೆ ಆಶ್ರಯ ಕಲ್ಪಿಸಲು 1.83 ಕೋಟಿ ರು. ವೆಚ್ಚ ಮಾಡಲು ಮುಂದಾಗಿದೆ.

Read Full Story

08:59 AM (IST) Dec 25

ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ

ಇಲ್ಲಿನ ಯಲಹಂಕದಲ್ಲಿ ಚೀನಾದ ಹ್ಯಾಂಗ್‌ಝೌ ಮಾದರಿಯಲ್ಲಿ ಎಲಿವೆಟೆಡ್‌ ರೈಲ್ವೆ ಟರ್ಮಿನಲ್‌ ನಿರ್ಮಿಸಲು ರೈಲ್ವೆ ಮಂಡಳಿಗೆ ನೈಋತ್ಯ ರೈಲ್ವೆ ವಲಯವು ಪ್ರಸ್ತಾವನೆ ಸಲ್ಲಿಸಿದೆ. 20 ಎಕರೆ ಜಾಗದಲ್ಲಿ ಅಂದಾಜು ₹6,000 ಕೋಟಿ ವೆಚ್ಚದಲ್ಲಿ ನಿರ್ಮಿಸಲು ರೂಪುರೇಷೆ

Read Full Story

08:57 AM (IST) Dec 25

ಬೆಂಗಳೂರಿಂದ ಗೋಕರ್ಣ ಹೊರಟಿದ್ದ ಬಸ್ ಅಗ್ನಿದುರಂತ - 9 ಮಂದಿ ಸಜೀವ ದಹನ, ಕರಕಲು ಹಿಡಿದ ಮೃತರ ಪತ್ತೆಗೆ DNA ಮೊರೆ

ಚಿತ್ರದುರ್ಗದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಲಾರಿ ಚಾಲಕ ಸೇರಿದಂತೆ 9 ಮಂದಿ ಸಜೀವ ದಹನವಾಗಿದ್ದು, ಸುಟ್ಟು ಕರಕಲಾದ ಮೃತದೇಹ ಪತ್ತೆಗೆ ಪೊಲೀಸರು ಪರದಾಡುತ್ತಿದ್ದಾರೆ.

Read Full Story

07:43 AM (IST) Dec 25

ಲಾಟರಿ ಮೂಲಕ ವೀಸಾ ವಿತರಣೆಗೆ ಟ್ರಂಪ್‌ ಬ್ರೇಕ್‌

ಉದ್ಯೋಗಕ್ಕಾಗಿ ಅಮೆರಿಕಕ್ಕೆ ಬರುವವರಿಗೆ ಕೊಡಲಾಗುವ ಎಚ್‌-1ಬಿ ವೀಸಾ ಅರ್ಜಿಗಳಲ್ಲಿ 85,000 ಅರ್ಜಿಗಳನ್ನು ಆರಿಸಲು ಬಳಸಲಾಗುತ್ತಿದ್ದ ‘ರ್‍ಯಾಂಡಮ್‌ ಲಾಟರಿ ವ್ಯವಸ್ಥೆ’ಗೆ ಪೂರ್ಣವಿರಾಮ ಇಟ್ಟಿರುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಸರ್ಕಾರ ಘೋಷಿಸಿದೆ.

Read Full Story

07:43 AM (IST) Dec 25

ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ - 9 ಮಂದಿ ಸಜೀವ ದಹನ, ಪ್ರಯಾಣಿಕರ ಲಿಸ್ಟ್ ಬಿಡುಗಡೆ ಮಾಡಿದ ಪೊಲೀಸರು!

ಚಿತ್ರದುರ್ಗದಲ್ಲಿ ಬೆಂಗಳೂರು-ಗೋಕರ್ಣ ಸೀ ಬರ್ಡ್ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಈ ಭೀಕರ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯ ಸಂಪೂರ್ಣ ವಿವರ ತಿಳಿಯಿರಿ.

Read Full Story

07:32 AM (IST) Dec 25

ಚಿತ್ರದುರ್ಗ ಭೀಕರ ಬಸ್ ಅಪಘಾತ

ಘಟನೆಯ ವಿವರ: ಗುರುವಾರ ಮುಂಜಾನೆ ಈ ಭೀಕರ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್‌ಗೂ ಆವರಿಸಿದೆ.

ಸಜೀವ ದಹನ: ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಡೀಸೆಲ್ ಟ್ಯಾಂಕ್ ಬಳಿಯೇ ಲಾರಿ ಗುದ್ದಿದ್ದರಿಂದ ಬೆಂಕಿ ತೀವ್ರವಾಗಿ ಹರಡಿದ್ದು, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗಿಲ್ಲ. ಈ ಪೈಕಿ 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನವಾಗಿದ್ದಾರೆ. ಉಳಿದ 23 ಪ್ರಯಾಣಿಕರು ಕಿಟಕಿ ಹಾಗೂ ಎಮರ್ಜೆನ್ಸಿ ಡೋರ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


More Trending News