ರಾಜ್ಯದ ಜನತೆ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ರಜೆಗೆ ಬೆಂಗಳೂರಿನಿಂದ ಗೋಕರ್ಣಗೆ ಹೊರಟಿದ್ದ ಬಸ್ ಚಿತ್ರದುರ್ಗದ ಗೊರ್ಲತ್ತು ಬಳಿ ಭೀಕರ ಅಪಘಾತವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ 23 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

11:26 PM (IST) Dec 25
2026ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಡಿಸಿಪಿ ಎಂ. ನಾರಾಯಣ್ ನೇತೃತ್ವದಲ್ಲಿ, ನೀಲಾದ್ರಿ ನಗರದ ಮೇಲೆ ವಿಶೇಷ ನಿಗಾ ಇಡಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 'ರಾಣಿ ಚೆನ್ನಮ್ಮ' ಪಡೆಯನ್ನು ನಿಯೋಜಿಸಲಾಗಿದೆ.
11:00 PM (IST) Dec 25
10:59 PM (IST) Dec 25
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು, ರಾಜ್ಯ ಸೇರದಂತೆ ದೇಶದಲ್ಲಿ ಇಂದು ಸರಣಿ ಅಪಘಾತಗಳು ನಡೆದಿದೆ. ಚಿತ್ರದುರ್ಗದ ಬಸ್ ದುರಂತ ಬಳಿಕ ಇದೀಗ ಲಾರಿ ಬೈಕ್ ಅಪಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
10:32 PM (IST) Dec 25
ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ, ಬಲೂನ್ ಮಾರುತ್ತಿದ್ದ 40 ವರ್ಷದ ವ್ಯಕ್ತಿ ಸ್ಥಳದಲ್ಲ ಮೃತಪಟ್ಟಿದ್ದಾರೆ, ಬೆಂಗಳೂರಿನ ಲಕ್ಷ್ಮಿ, ರಾಣೆಬನ್ನೂರು ಮೂಲದ ಕೊಟ್ರೇಶ್ ಸೇರಿ ಹಲವು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ.
10:23 PM (IST) Dec 25
09:44 PM (IST) Dec 25
ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ, ಅರಮನೆಯ ಜಯಮಾರ್ತಂಡ ದ್ವಾರ ಬಳಿ ಘಟನೆ ನಡೆದಿದೆ. ಗಾಯಾಳುಗಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಆರೋಗ್ಯ ಗಂಭೀರವಾಗಿದೆ.
09:09 PM (IST) Dec 25
ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ, ಕಾರಣ ಬಿಚ್ಚಿದ್ದ ದೆಹಲಿ ಯುವತಿ, ದೆಹಲಿಗಿಂತ ಬೆಂಗಳೂರು ರಾಷ್ಟ್ರ ರಾಜಧಾನಿಯಾಗಲು ಹೆಚ್ಚು ಅರ್ಹ ಎಂದಿದ್ದಾರೆ. ತಲೆತಗ್ಗಿಸುವುದಕ್ಕಿಂತ ಬೆಂಗಳೂರು ರಾಜಧಾನಿಯಾಗಲಿ ಎಂದಿದ್ದಾರೆ.
08:48 PM (IST) Dec 25
ವೈಟಿಪಿಎಸ್ ಎರಡೂ ಘಟಕಗಳು ಅಗ್ನಿ ದುರಂತ ಮತ್ತು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿವೆ. ಇದರಿಂದಾಗಿ ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್ಟಿಪಿಎಸ್) ಮೇಲೆ ಹೆಚ್ಚಿನ ಒತ್ತಡ ಬಿದ್ದಿದ್ದು, ರಾಜ್ಯದ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಹಿನ್ನಡೆಯಾಗಿದೆ.
08:26 PM (IST) Dec 25
ಕೆನಡಾದ ಎಡ್ಮಂಟನ್ನಲ್ಲಿ, ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದ 44 ವರ್ಷದ ಭಾರತೀಯ ಮೂಲದ ಪ್ರಶಾಂತ್ ಶ್ರೀಕುಮಾರ್ ಎಂಬುವವರು, ಆಸ್ಪತ್ರೆಯಲ್ಲಿ ಸುಮಾರು 8ಗಂಟೆಗಳ ಕಾಲ ಚಿಕಿತ್ಸೆಗಾಗಿ ಕಾದ ನಂತರ ಮೃತಪಟ್ಟಿದ್ದಾರೆ. ನೋವಿನ ಬಗ್ಗೆ ದೂರು ನೀಡಿದರೂ, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವ ಆರೋಪವಿದೆ.
08:14 PM (IST) Dec 25
ಚಿಕ್ಕೋಡಿಯಲ್ಲಿ, ಸಿಎಂ ಬದಲಾವಣೆ ಚರ್ಚೆಯ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಿರುವುದರಿಂದ ತಾನು ಮಾತನಾಡುವುದಿಲ್ಲ ಎಂದರು. ಅಧಿಕಾರ ಶಾಶ್ವತವಲ್ಲ, ನಾವೆಲ್ಲರೂ ಮೊದಲು ಪಕ್ಷದ ಸಾಮಾನ್ಯ ಕಾರ್ಯಕರ್ತರು ಎಂದು ಎಂದರು.
08:11 PM (IST) Dec 25
ಮುಳ್ಳಯ್ಯನಗಿರಿ ಬಳಿ ಪ್ರವಾಸಿಗರ ಜೀಪ್ ಪಲ್ಟಿ, ಪುತ್ತೂರಿನ 7 ಮಂದಿಗೆ ಗಾಯ, ದತ್ತಪೀಠದಿಂದ ಮರಳುವಾಗ ಈ ಘಟನೆ ನಡೆದಿದೆ. ಪುತ್ತೂರಿನಿಂದ ಜೀಪ್ ಮೂಲಕ ಆಗಮಿಸಿದ್ದ ಪ್ರವಾಸಿಗರ ಜೀಪ್ ಪಲ್ಟಿಯಾಗಿ ಅವಘಡ ನಡೆದಿದೆ.
07:55 PM (IST) Dec 25
ಚೀನಾದ ವಿವಾದಿತ 'ಒಂದು ಮಗು ನೀತಿ'ಯ ರೂವಾರಿಯಾಗಿದ್ದ ಪೆಂಗ್ ಪೆಯುನ್ (95) ನಿಧನರಾಗಿದ್ದಾರೆ. ಅವರ ಸಾವಿಗೆ ಸರ್ಕಾರ ಸಂತಾಪ ಸೂಚಿಸಿದರೂ, ಈ ನೀತಿಯಿಂದಾದ ಬಲವಂತದ ಗರ್ಭಪಾತ ಮತ್ತು ಇಂದಿನ ಜನಸಂಖ್ಯಾ ಬಿಕ್ಕಟ್ಟಿನಿಂದಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
07:47 PM (IST) Dec 25
ಸ್ವಂತ ಕಾರಿಗೆ 'ಪೊಲೀಸ್' ಬೋರ್ಡ್ ಹಾಕಿಕೊಂಡು ಪ್ರವಾಸ ಹೊರಟಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಚಿಕ್ಕಮಗಳೂರಿನ ಬಣಕಲ್ ಪಿಎಸೈ ರೇಣುಕಾ ದಂಡ ವಿಧಿಸಿದ್ದಾರೆ. ಸಹೋದ್ಯೋಗಿ ಎಂಬ ಮುಲಾಜಿಲ್ಲದೆ ದಂಡ ವಿಧಿಸಿ, ಬೋರ್ಡ್ ತೆರವುಗೊಳಿಸಿದ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
07:18 PM (IST) Dec 25
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಕೋರಮಂಗಲದಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು,ತಾತ್ಕಾಲಿಕ ಕಂಟ್ರೋಲ್ ರೂಂ ಮತ್ತು ಸಿಸಿಟಿವಿ ನಿಗಾದ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.
06:31 PM (IST) Dec 25
ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ, ಗೆಳತಿಯರೊಂದಿಗೆ ಗೋಕರ್ಣಕ್ಕೆ ಪ್ರವಾಸ ಹೊರಟಿದ್ದರು. ಆದರೆ, ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ.
05:49 PM (IST) Dec 25
ಬೆಂಗಳೂರಿನಲ್ಲಿ ರಾಪಿಡೋ ಬೈಕ್ ಬುಕ್ ಮಾಡಿದ ಪ್ರಯಾಣಿಕರೊಬ್ಬರು, ಸವಾರನ ಬೇಜವಾಬ್ದಾರಿತನದಿಂದ ಅಪಘಾತಕ್ಕೀಡಾಗಿದ್ದಾರೆ. ರಾಂಗ್ ರೂಟ್ನಲ್ಲಿ ಚಲಿಸಿದ ಪರಿಣಾಮ ಎದುರಿನಿಂದ ಬಂದ ಬುಲೆಟ್ಗೆ ಡಿಕ್ಕಿಯಾಗಿ, ಪ್ರಯಾಣಿಕನ ಮಂಡಿ ಚಿಪ್ಪು ಪುಡಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
05:29 PM (IST) Dec 25
05:12 PM (IST) Dec 25
ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದ ತಹಶಿಲ್ದಾರ್ ಶರತ್ ಕುಮಾರ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿ ಏಟು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದರು.
05:11 PM (IST) Dec 25
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್ ಕೇಸ್, ಅಶ್ಲೀಲ ಮೇಸಜ್ ಖಾತೆಗೆ ಬಿಸಿ ಮುಟ್ಟಿಸಲು ಮಂದಾದ ಸಿಸಿಬಿ, ಮೂರು ತಂಡಗಳಾಗಿ ತನಿಖೆ ನಡೆಸಲಾಗುತ್ತಿದೆ. ಮೆಟಾ ಸಂಪರ್ಕಿಸಿ ಖಾತೆಗಳ ಸಂಪೂರ್ಣ ಮಾಹಿತಿ ಕೇಳಿರುವ ಪೊಲೀಸರು ಮಹತ್ವದ ಕಾರ್ಯಾಚರಣೆ ಆರಂಭಿಸಿದ್ದಾರೆ.
04:35 PM (IST) Dec 25
04:26 PM (IST) Dec 25
ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ, ಬಡವರು, ಮಧ್ಯಮವರ್ಗ ಸೇರಿದಂತೆ ತಮ್ಮ ಆದಾಯಕ್ಕಿಂತ ಹೆಚ್ಚು ಮದುವೆಗೆ ಖರ್ಚು ಮಾಡುತ್ತಾರೆ. ಆದರೆ 2025ರಲ್ಲಿ ಈ ಖರ್ಚು ದುಪ್ಪಟ್ಟಾಗಿದೆ.
04:07 PM (IST) Dec 25
Chitradurga Bus Fire: 5 Women Killed, DNA Tests to Identify Victims ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐವರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಸ್ನಲ್ಲಿದ್ದ 33 ಪ್ರಯಾಣಿಕರ ಪೈಕಿ ಐವರು ಮೃತಪಟ್ಟಿದ್ದು, ಮದುವೆ ನಿಶ್ಚಯವಾಗಿದ್ದ ಯುವತಿಯರ ಸಾವಾಗಿದೆ.
04:01 PM (IST) Dec 25
ಮದುವೆಯಾದ ಒಂದೂವರೆ ತಿಂಗಳಲ್ಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ನವವಿವಾಹಿತೆ ಗಾನವಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ವೈದ್ಯರು 'ಬ್ರೈನ್ ಡೆಡ್' ಎಂದು ತಿಳಿಸಿದ್ದಾರೆ.
03:33 PM (IST) Dec 25
'ದಂಡೋರಾ' ಚಿತ್ರದ ಪ್ರೀ-ರಿಲೀಸ್ ಇವೆಂಟ್ನಲ್ಲಿ ನಟ ಶಿವಾಜಿ ಮಾಡಿದ ಕಾಮೆಂಟ್ಗಳು ಈಗ ಅಂತರ್ಜಾಲದಲ್ಲಿ ವೈರಲ್ ಆಗಿವೆ. ಅದರಲ್ಲೂ ಹುಡುಗಿಯರ ಡ್ರೆಸ್ ಬಗ್ಗೆ ಅವರು ಮಾಡಿದ ಕಾಮೆಂಟ್ಗೆ ಹಲವರು ಗರಂ ಆಗಿದ್ದಾರೆ.
03:26 PM (IST) Dec 25
ಚಿತ್ರದುರ್ಗದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಸಂಭವಿಸಿ, ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
03:02 PM (IST) Dec 25
ಟಾಲಿವುಡ್, ಬಾಲಿವುಡ್ ಎರಡನ್ನೂ ಆಳಿದ ಸುಂದರಿ, 54 ವರ್ಷವಾದರೂ ಬ್ಯಾಚುಲರ್ ಜೀವನ ನಡೆಸುತ್ತಿರುವ ಸ್ಟಾರ್ ನಟಿ. ತನಗಿಂತ 24 ವರ್ಷ ಚಿಕ್ಕ ನಟನ ಜೊತೆ ರೊಮ್ಯಾನ್ಸ್ ಮಾಡಿದ ಈ ನಟಿ ಯಾರು ಗೊತ್ತಾ?
02:39 PM (IST) Dec 25
ಕಂಠಸಿರಿಯಿಂದ ಈಗಾಗಲೇ ಮೋಡಿ ಮಾಡಿರುವ ಕಿಚ್ಚ ಸುದೀಪ್ ಪುತ್ರಿ ಸಾನ್ವಿ, ನಟನೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಮಗಳ ಸಿನಿಮಾ ಎಂಟ್ರಿ ಬಗ್ಗೆ ಮಾತನಾಡಿದ ಸುದೀಪ್, ಆಕೆಗೆ ನಟನೆಯಲ್ಲಿ ಸಂಪೂರ್ಣ ಆಸಕ್ತಿಯಿದೆ ಎಂದಿದ್ದು, ಮಗಳ ಎಂಟ್ರಿ ಬಗ್ಗೆ ಹೇಳಿದ್ದೇನು?
02:39 PM (IST) Dec 25
ಸೌತ್ ಮತ್ತು ಬಾಲಿವುಡ್ ಸಿನಿಮಾದಲ್ಲಿ ದೊಡ್ಡ ಧಮಾಕಾ ನಡೆಯಲಿದೆ. ಹೌದು, ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ 'ಜೈಲರ್ 2'ಗೆ ಶಾರುಖ್ ಖಾನ್ ಎಂಟ್ರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
02:26 PM (IST) Dec 25
ಕರ್ನಾಟಕದಲ್ಲಿ ಚಳಿಗಾಲದ ತಿಂಗಳುಗಳಲ್ಲಿ, ವಿಶೇಷವಾಗಿ NH-48 ಮತ್ತು NH-75 ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ದಟ್ಟ ಮಂಜು, ಚಾಲಕರ ಆಯಾಸ ಮತ್ತು ಅತಿವೇಗವು ಈ ದುರಂತಗಳಿಗೆ ಪ್ರಮುಖ ಕಾರಣಗಳಾಗಿದೆ.
02:14 PM (IST) Dec 25
ಸ್ವಯಂಸೇವಕ ಸಂಸ್ಕಾರವೇ ರಾಜಕಾರಣಕ್ಕೆ ದಾರಿ ತೋರಿತು: 1951 ರಲ್ಲಿ, ವಾಜಪೇಯಿ ನೇತೃತ್ವದಲ್ಲಿ ಭಾರತೀಯ ಜನ ಸಂಘವನ್ನು ಸೇರಿ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ವಹಿಸಿಕೊಂಡರು.
01:47 PM (IST) Dec 25
ಶಿವರಾಜ್ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ನಟಿಸಿರುವ ‘45’ ಚಿತ್ರದ ಪೇಯ್ಡ್ ಪ್ರೀಮಿಯರ್ ಶೋಗಳಿಗೆ ಭಾರಿ ಮೆಚ್ಚುಗೆ ದೊರೆತಿದೆ. ಬೆಂಗಳೂರಿನಲ್ಲಿಯೇ 50ಕ್ಕೂ ಹೆಚ್ಚು ಪ್ರದರ್ಶನಗಳು ಹೌಸ್ಫುಲ್ ಆಗಿವೆ.
01:33 PM (IST) Dec 25
ಗೋಕರ್ಣ ಪ್ರವಾಸಕ್ಕೆ ಹೊರಟಿದ್ದ ಬೆಂಗಳೂರಿನ ಐಟಿ ಉದ್ಯೋಗಿಗಳ ತಂಡ ಚಿತ್ರದುರ್ಗದ ಬಳಿ ಭೀಕರ ಬಸ್ ಅಪಘಾತಕ್ಕೆ ಸಿಲುಕಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 27 ವರ್ಷದ ಬಿಂದು ಮತ್ತು ಅವರ 3ವರ್ಷದ ಮಗಳು ಗ್ರೀಯಾ ನಾಪತ್ತೆಯಾಗಿದ್ದಾರೆ. ಕುಟುಂಬಸ್ಥರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
01:30 PM (IST) Dec 25
ಗದಗ ಜಿಲ್ಲೆಯ ಉಣಚಗೇರಿ ಗ್ರಾಮದಲ್ಲಿ, 15 ವರ್ಷಗಳಿಂದ ದುರ್ವಾಸನೆ ಬೀರುತ್ತಿದ್ದ ಕೋಳಿ ಫಾರ್ಮ್ನಿಂದ ಬೇಸತ್ತ ಗ್ರಾಮಸ್ಥರು ಪೊಲೀಸರ ಸಮ್ಮುಖದಲ್ಲೇ ಫಾರ್ಮ್ಗೆ ನುಗ್ಗಿ ಸಾವಿರಾರು ಕೋಳಿ ಮತ್ತು ಮೊಟ್ಟೆಗಳನ್ನು ಲೂಟಿ ಮಾಡಿದ್ದಾರೆ.
01:18 PM (IST) Dec 25
ಪ್ರತಿಪಕ್ಷದ ನಾಯಕರಾಗಿದ್ದಾಗ ವಾಜಪೇಯಿ ಒಮ್ಮೆ ಹುಬ್ಬಳ್ಳಿಗೆ ಬಂದಿದ್ದರು. ಸಂಜೆ ಬೃಹತ್ ಸಾರ್ವಜನಿಕ ಸಭೆ. ಅವರ ಹಿಂದಿ ಭಾಷಣದ ಅನುವಾದವನ್ನು ಆಗ ಮಾಡಿದವರು ''ವಿಕ್ರಮ'' ವಾರಪತ್ರಿಕೆಯ ಸಂಪಾದಕರಾಗಿದ್ದ ಬೆ.ಸು.ನಾ ಮಲ್ಯ ಅವರು.
01:01 PM (IST) Dec 25
12:51 PM (IST) Dec 25
ಅಟಲ್ ಜಿ ಕೇವಲ ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿರಲಿಲ್ಲ, ಬದಲಿಗೆ ಒಬ್ಬ ಸಂವೇದನಾಶೀಲ ಕವಿ ಮತ್ತು ಅಪ್ರತಿಮ ವಾಗ್ಮಿಯಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು.
12:37 PM (IST) Dec 25
ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ಸುದೀಪ್ ಅಮಾನತುಗೊಂಡ ಪೊಲೀಸ್ ಅಧಿಕಾರಿಯ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
12:27 PM (IST) Dec 25
ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದ ನಂತರ, ಹಾಸನದ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳಾದ ನವ್ಯ ಮತ್ತು ಮಾನಸ ಕಣ್ಮರೆಯಾಗಿದ್ದಾರೆ. ಏಪ್ರಿಲ್ನಲ್ಲಿ ಮದುವೆ ನಿಗದಿಯಾಗಿದ್ದ ನವ್ಯ ಸೇರಿದಂತೆ ಮಕ್ಕಳಿಗೆ ಪೋಷಕರು ಆಸ್ಪತ್ರೆಗಳಲ್ಲಿ ಕಣ್ಣೀರಿನೊಂದಿಗೆ ಹುಡುಕಾಟ ನಡೆಸುತ್ತಿದ್ದಾರೆ.
12:24 PM (IST) Dec 25
ರಾಹುಲ್ ಗಾಂಧಿಯವರ ನೇತೃತ್ವದ ವಿಪಕ್ಷ ಲೋಕಸಭೆಯಲ್ಲಿ ಏನು ಮಾಡುತ್ತಿದೆ ಎಂಬುದನ್ನು ಗಮನಿಸಿದರೆ, ಇವರಿಗೆಲ್ಲ ವಾಜಪೇಯಿಯವರಿಂದಲೇ ಪಾಠ ಹೇಳಿಸಿಕೊಳ್ಳುವ ಅಗತ್ಯವಿದೆ ಎಂದು ಅನ್ನಿಸದೇ ಇರುವುದಿಲ್ಲ.
12:17 PM (IST) Dec 25
ಡಿ.25 ವಾಜಪೇಯಿ ಅವರ ಜನ್ಮದಿನ. ದೇಶದ ಅಭಿವೃದ್ಧಿ ರಥಕ್ಕೆ ರಾಜಪಥ ನಿರ್ಮಿಸಿ, ಭವ್ಯ ಭಾರತದ ಬೆಳವಣಿಗೆಗೆ ಭರವಸೆಯ ಬೆಳಕಾಗಿ ನಿಂತವರು ಅಟಲ್ಜೀ. ದೇಶ ಕಂಡ ಪ್ರಧಾನಿಗಳ ಪಟ್ಟಿಯಲ್ಲಿ ಅಟಲ್ಜೀ ಅವರಿಗೆ ವಿಶೇಷ ಸ್ಥಾನಮಾನ.