LIVE NOW
Published : Dec 25, 2025, 07:29 AM ISTUpdated : Dec 25, 2025, 11:26 PM IST

Karnataka news live: ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!

ಸಾರಾಂಶ

ರಾಜ್ಯದ ಜನತೆ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ರಜೆಗೆ ಬೆಂಗಳೂರಿನಿಂದ ಗೋಕರ್ಣಗೆ ಹೊರಟಿದ್ದ ಬಸ್ ಚಿತ್ರದುರ್ಗದ ಗೊರ್ಲತ್ತು ಬಳಿ ಭೀಕರ ಅಪಘಾತವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ 23 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Electronic City DCP Issues Strict Rules for Pubs Bars New Year Celebrations 2026

11:26 PM (IST) Dec 25

ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!

2026ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಡಿಸಿಪಿ ಎಂ. ನಾರಾಯಣ್ ನೇತೃತ್ವದಲ್ಲಿ, ನೀಲಾದ್ರಿ ನಗರದ ಮೇಲೆ ವಿಶೇಷ ನಿಗಾ ಇಡಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 'ರಾಣಿ ಚೆನ್ನಮ್ಮ' ಪಡೆಯನ್ನು ನಿಯೋಜಿಸಲಾಗಿದೆ. 

Read Full Story

11:00 PM (IST) Dec 25

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!

ಸೂರತ್‌ನ ಉದ್ಯಮಿಯೊಬ್ಬ ಮಗನ ಹುಟ್ಟುಹಬ್ಬ ಆಚರಿಸಲು ಬ್ಯುಸಿ ರಸ್ತೆಯನ್ನೇ ತಡೆದಿದ್ದಾನೆ. ಪಟಾಕಿ ಸಿಡಿಸಿ, ಪ್ರಯಾಣಿಕರಿಗೆ ಬೆದರಿಕೆ ಹಾಕಿ ನಡೆಸಿದ ಸಂಭ್ರಮಾಚರಣೆಯ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ತಾನೊಬ್ಬ ಸೆಲೆಬ್ರಿಟಿ ಎಂದು ಆತ ವಾದಿಸಿದ್ದ.
Read Full Story

10:59 PM (IST) Dec 25

ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು, ರಾಜ್ಯ ಸೇರದಂತೆ ದೇಶದಲ್ಲಿ ಇಂದು ಸರಣಿ ಅಪಘಾತಗಳು ನಡೆದಿದೆ. ಚಿತ್ರದುರ್ಗದ ಬಸ್ ದುರಂತ ಬಳಿಕ ಇದೀಗ ಲಾರಿ ಬೈಕ್ ಅಪಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

 

Read Full Story

10:32 PM (IST) Dec 25

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ, ಬಲೂನ್ ಮಾರುತ್ತಿದ್ದ 40 ವರ್ಷದ ವ್ಯಕ್ತಿ ಸ್ಥಳದಲ್ಲ ಮೃತಪಟ್ಟಿದ್ದಾರೆ, ಬೆಂಗಳೂರಿನ ಲಕ್ಷ್ಮಿ, ರಾಣೆಬನ್ನೂರು ಮೂಲದ ಕೊಟ್ರೇಶ್ ಸೇರಿ ಹಲವು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ.

Read Full Story

10:23 PM (IST) Dec 25

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ - ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಕ್ರಿಸ್‌ಮಸ್ ದಿನದಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಬೈಕ್ ಎತ್ತಿನ ಬಂಡಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಸವಾರರಾದ ಶಿವಕುಮಾರ್ ಮತ್ತು ರವಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Full Story

09:44 PM (IST) Dec 25

ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ

ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ, ಅರಮನೆಯ ಜಯಮಾರ್ತಂಡ ದ್ವಾರ ಬಳಿ ಘಟನೆ ನಡೆದಿದೆ. ಗಾಯಾಳುಗಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಆರೋಗ್ಯ ಗಂಭೀರವಾಗಿದೆ.

Read Full Story

09:09 PM (IST) Dec 25

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ, ಕಾರಣ ಬಿಚ್ಚಿದ್ದ ದೆಹಲಿ ಯುವತಿ

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ, ಕಾರಣ ಬಿಚ್ಚಿದ್ದ ದೆಹಲಿ ಯುವತಿ, ದೆಹಲಿಗಿಂತ ಬೆಂಗಳೂರು ರಾಷ್ಟ್ರ ರಾಜಧಾನಿಯಾಗಲು ಹೆಚ್ಚು ಅರ್ಹ ಎಂದಿದ್ದಾರೆ. ತಲೆತಗ್ಗಿಸುವುದಕ್ಕಿಂತ ಬೆಂಗಳೂರು ರಾಜಧಾನಿಯಾಗಲಿ ಎಂದಿದ್ದಾರೆ.

 

Read Full Story

08:48 PM (IST) Dec 25

ಬೆಂಕಿ ಅವಘಡ ವೈಟಿಪಿಎಸ್‌ನ ಎರಡೂ ಘಟಕ ಬಂದ್, ಆರ್‌ಟಿಪಿಎಸ್, ಬಳ್ಳಾರಿಯ ಬಿಟಿಪಿಎಸ್‌ ಮೇಲೆ ಹೆಚ್ಚಿನ ಒತ್ತಡ!

 ವೈಟಿಪಿಎಸ್‌ ಎರಡೂ ಘಟಕಗಳು ಅಗ್ನಿ ದುರಂತ ಮತ್ತು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿವೆ. ಇದರಿಂದಾಗಿ ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್‌ ಸ್ಥಾವರದ (ಆರ್‌ಟಿಪಿಎಸ್‌) ಮೇಲೆ ಹೆಚ್ಚಿನ ಒತ್ತಡ ಬಿದ್ದಿದ್ದು, ರಾಜ್ಯದ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಹಿನ್ನಡೆಯಾಗಿದೆ.

Read Full Story

08:26 PM (IST) Dec 25

ನೋವಿನ ಕೂಗು ಕೇಳಲಿಲ್ಲ, ಕೆನಡಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ 8 ಗಂಟೆ ನರಳಾಡಿ ಹೃದಯಾಘಾತದಿಂದ ಭಾರತೀಯನ ಸಾವು!

ಕೆನಡಾದ ಎಡ್ಮಂಟನ್‌ನಲ್ಲಿ, ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದ 44 ವರ್ಷದ ಭಾರತೀಯ ಮೂಲದ ಪ್ರಶಾಂತ್ ಶ್ರೀಕುಮಾರ್ ಎಂಬುವವರು, ಆಸ್ಪತ್ರೆಯಲ್ಲಿ ಸುಮಾರು 8ಗಂಟೆಗಳ ಕಾಲ ಚಿಕಿತ್ಸೆಗಾಗಿ ಕಾದ ನಂತರ ಮೃತಪಟ್ಟಿದ್ದಾರೆ.  ನೋವಿನ ಬಗ್ಗೆ ದೂರು ನೀಡಿದರೂ, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವ ಆರೋಪವಿದೆ.

Read Full Story

08:14 PM (IST) Dec 25

ಅಧಿಕಾರ ಶಾಶ್ವತವಲ್ಲ - ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?

ಚಿಕ್ಕೋಡಿಯಲ್ಲಿ, ಸಿಎಂ ಬದಲಾವಣೆ ಚರ್ಚೆಯ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಿರುವುದರಿಂದ ತಾನು ಮಾತನಾಡುವುದಿಲ್ಲ ಎಂದರು. ಅಧಿಕಾರ ಶಾಶ್ವತವಲ್ಲ, ನಾವೆಲ್ಲರೂ ಮೊದಲು ಪಕ್ಷದ ಸಾಮಾನ್ಯ ಕಾರ್ಯಕರ್ತರು ಎಂದು ಎಂದರು.

Read Full Story

08:11 PM (IST) Dec 25

ಮುಳ್ಳಯ್ಯನಗಿರಿ ಬಳಿ ಪ್ರವಾಸಿಗರ ಜೀಪ್ ಪಲ್ಟಿ, ಪುತ್ತೂರಿನ 7 ಮಂದಿಗೆ ಗಾಯ

ಮುಳ್ಳಯ್ಯನಗಿರಿ ಬಳಿ ಪ್ರವಾಸಿಗರ ಜೀಪ್ ಪಲ್ಟಿ, ಪುತ್ತೂರಿನ 7 ಮಂದಿಗೆ ಗಾಯ, ದತ್ತಪೀಠದಿಂದ ಮರಳುವಾಗ ಈ ಘಟನೆ ನಡೆದಿದೆ. ಪುತ್ತೂರಿನಿಂದ ಜೀಪ್ ಮೂಲಕ ಆಗಮಿಸಿದ್ದ ಪ್ರವಾಸಿಗರ ಜೀಪ್ ಪಲ್ಟಿಯಾಗಿ ಅವಘಡ ನಡೆದಿದೆ.

 

Read Full Story

07:55 PM (IST) Dec 25

ಚೀನಾದ ಒಂದು ಮಗು ನೀತಿ ರೂವಾರಿ ಪೆಂಗ್ ಪೆಯುನ್ ನಿಧನ, ಆಕೆ ನರಕಕ್ಕೇ ಹೋಗಲಿ ಎಂದು ಜನರ ಹಿಡಿಶಾಪ!

ಚೀನಾದ ವಿವಾದಿತ 'ಒಂದು ಮಗು ನೀತಿ'ಯ ರೂವಾರಿಯಾಗಿದ್ದ ಪೆಂಗ್ ಪೆಯುನ್ (95) ನಿಧನರಾಗಿದ್ದಾರೆ. ಅವರ ಸಾವಿಗೆ ಸರ್ಕಾರ ಸಂತಾಪ ಸೂಚಿಸಿದರೂ, ಈ ನೀತಿಯಿಂದಾದ ಬಲವಂತದ ಗರ್ಭಪಾತ ಮತ್ತು ಇಂದಿನ ಜನಸಂಖ್ಯಾ ಬಿಕ್ಕಟ್ಟಿನಿಂದಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Read Full Story

07:47 PM (IST) Dec 25

ಚಿಕ್ಕಮಗಳೂರು - ಸ್ವಂತ ಕಾರಿಗೆ 'ಪೊಲೀಸ್' ಬೋರ್ಡ್ ಹಾಕಿ ಪ್ರವಾಸ; ಐಡಿ ಕಾರ್ಡ್ ತೋರಿಸಿದ್ರೂ ಪೊಲೀಸಪ್ಪಗೆ ದಂಡ ಹಾಕಿದ ಲೇಡಿ ಸಿಂಗಂ!

ಸ್ವಂತ ಕಾರಿಗೆ 'ಪೊಲೀಸ್' ಬೋರ್ಡ್ ಹಾಕಿಕೊಂಡು ಪ್ರವಾಸ ಹೊರಟಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಚಿಕ್ಕಮಗಳೂರಿನ ಬಣಕಲ್ ಪಿಎಸೈ ರೇಣುಕಾ ದಂಡ ವಿಧಿಸಿದ್ದಾರೆ. ಸಹೋದ್ಯೋಗಿ ಎಂಬ ಮುಲಾಜಿಲ್ಲದೆ ದಂಡ ವಿಧಿಸಿ, ಬೋರ್ಡ್ ತೆರವುಗೊಳಿಸಿದ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Read Full Story

07:18 PM (IST) Dec 25

ಹೊಸ ವರ್ಷಾಚರಣೆ ಸಮೀಪ ಹಿನ್ನೆಲೆ, ಬೆಂಗಳೂರಲ್ಲಿ ಕಟ್ಟುನಿಟ್ಟಿನ ನಿಗಾ, ಹಿರಿಯ ಪೊಲೀಸ್ ಅಧಿಕಾರಿಗಳ ಬೈಕ್ ರೈಡ್!

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಕೋರಮಂಗಲದಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು,ತಾತ್ಕಾಲಿಕ ಕಂಟ್ರೋಲ್ ರೂಂ ಮತ್ತು ಸಿಸಿಟಿವಿ ನಿಗಾದ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

Read Full Story

06:31 PM (IST) Dec 25

Bhatkal - ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದಿದ್ದ ಗುರು ಸುಧೀಂದ್ರ ಕಾಲೇಜಿನ ಹುಡುಗಿ, ರಸ್ತೆಯಲ್ಲೇ ಸುಟ್ಟುಹೋದ ರಶ್ಮಿ!

ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್‌ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ, ಗೆಳತಿಯರೊಂದಿಗೆ ಗೋಕರ್ಣಕ್ಕೆ ಪ್ರವಾಸ ಹೊರಟಿದ್ದರು. ಆದರೆ, ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ. 

Read Full Story

05:49 PM (IST) Dec 25

Rapido Bike ಬುಕ್ ಮಾಡುವ ಮುನ್ನ ಎಚ್ಚರ! ರೈಡರ್ ಎಡವಟ್ಟಿಗೆ ಹಿಂಬದಿ ಕುಳಿತ ಗ್ರಾಹಕನ ಮಂಡಿ ಚಿಪ್ಪು ಪುಡಿ ಪುಡಿ!

ಬೆಂಗಳೂರಿನಲ್ಲಿ ರಾಪಿಡೋ ಬೈಕ್ ಬುಕ್ ಮಾಡಿದ ಪ್ರಯಾಣಿಕರೊಬ್ಬರು, ಸವಾರನ ಬೇಜವಾಬ್ದಾರಿತನದಿಂದ ಅಪಘಾತಕ್ಕೀಡಾಗಿದ್ದಾರೆ. ರಾಂಗ್ ರೂಟ್‌ನಲ್ಲಿ ಚಲಿಸಿದ ಪರಿಣಾಮ ಎದುರಿನಿಂದ ಬಂದ ಬುಲೆಟ್‌ಗೆ ಡಿಕ್ಕಿಯಾಗಿ, ಪ್ರಯಾಣಿಕನ ಮಂಡಿ ಚಿಪ್ಪು ಪುಡಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read Full Story

05:29 PM (IST) Dec 25

ದೊಡ್ಮನೆ ಮೂಲ ನಿಯಮ ಉಲ್ಲಂಘಿಸಿದ ಕ್ಯಾಪ್ಟನ್‌ ಕಾವ್ಯಾ ಕುಟುಂಬ, ಎಚ್ಚರಿಕೆ ನೀಡಿ ಹೊರಕಳಿಸಿದ್ರಾ ಬಿಗ್‌ಬಾಸ್‌ ?

ಬಿಗ್‌ಬಾಸ್‌ ಫ್ಯಾಮಿಲಿ ವೀಕ್‌ನಲ್ಲಿ ಕಾವ್ಯಾ ಅವರ ಕುಟುಂಬ ಮನೆಗೆ ಆಗಮಿಸಿದೆ. ಆದರೆ, ಅವರ ಸಹೋದರ ಕಾರ್ತಿಕ್‌ ನಾಮಿನೇಷನ್‌ ಬಗ್ಗೆ ಚರ್ಚಿಸಿ ಬಿಗ್‌ಬಾಸ್‌ನ ಮೂಲ ನಿಯಮವನ್ನು ಉಲ್ಲಂಘಿಸಿದ್ದರಿಂದ, ಬಿಗ್‌ಬಾಸ್‌ ತಕ್ಷಣವೇ ಅವರನ್ನು ಮನೆಯಿಂದ ಹೊರಹೋಗುವಂತೆ ಆದೇಶಿಸಿದ್ದಾರೆ.
Read Full Story

05:12 PM (IST) Dec 25

ಕೆಲಸ ಮಾಡದಿದ್ರೆ ಜನರಿಂದ ಚಪ್ಪಲಿ ಹೊಡೆಸ್ತೇನೆ; ಮಾಗಡಿ ತಹಸೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಹಿಗ್ಗಾಮುಗ್ಗ ತರಾಟೆ!

ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದ ತಹಶಿಲ್ದಾರ್ ಶರತ್ ಕುಮಾರ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿ ಏಟು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದರು.

Read Full Story

05:11 PM (IST) Dec 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್ ಕೇಸ್, ಅಶ್ಲೀಲ ಮೇಸಜ್‌ ಖಾತೆಗೆ ಬಿಸಿ ಮುಟ್ಟಿಸಲು ಮಂದಾದ ಸಿಸಿಬಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್ ಕೇಸ್, ಅಶ್ಲೀಲ ಮೇಸಜ್‌ ಖಾತೆಗೆ ಬಿಸಿ ಮುಟ್ಟಿಸಲು ಮಂದಾದ ಸಿಸಿಬಿ, ಮೂರು ತಂಡಗಳಾಗಿ ತನಿಖೆ ನಡೆಸಲಾಗುತ್ತಿದೆ. ಮೆಟಾ ಸಂಪರ್ಕಿಸಿ ಖಾತೆಗಳ ಸಂಪೂರ್ಣ ಮಾಹಿತಿ ಕೇಳಿರುವ ಪೊಲೀಸರು ಮಹತ್ವದ ಕಾರ್ಯಾಚರಣೆ ಆರಂಭಿಸಿದ್ದಾರೆ.

Read Full Story

04:35 PM (IST) Dec 25

ಚಿತ್ರದುರ್ಗ ದುರಂತ - ಮದುವೆ ಫಿಕ್ಸ್ ಆಗಿದ್ದ ಜೀವದ ಗೆಳತಿಯರಿಬ್ಬರ ಕೊನೆಯ ಪ್ರಯಾಣ! ಓದಿದ್ದೂ ಜೊತೆಯಲ್ಲೇ ಜೀವ ಹೋಗಿದ್ದೂ ಒಟ್ಟಿಗೆ!

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ, ಮದುವೆಗೆ ಸಿದ್ಧರಾಗಿದ್ದ ಹಾಸನ ಮೂಲದ ಇಬ್ಬರು ಆಪ್ತ ಗೆಳತಿಯರಾದ ನವ್ಯ ಮತ್ತು ಮಾನಸ ಒಟ್ಟಿಗೆ ಪ್ರಾಣ ಕಳೆದುಕೊಂಡಿದ್ದು, ಅವರ ಕುಟುಂಬಗಳ ಕನಸುಗಳು ನುಚ್ಚುನೂರಾಗಿವೆ.
Read Full Story

04:26 PM (IST) Dec 25

ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ

ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ, ಬಡವರು, ಮಧ್ಯಮವರ್ಗ ಸೇರಿದಂತೆ ತಮ್ಮ ಆದಾಯಕ್ಕಿಂತ ಹೆಚ್ಚು ಮದುವೆಗೆ ಖರ್ಚು ಮಾಡುತ್ತಾರೆ. ಆದರೆ 2025ರಲ್ಲಿ ಈ ಖರ್ಚು ದುಪ್ಪಟ್ಟಾಗಿದೆ.

Read Full Story

04:07 PM (IST) Dec 25

Chitradurga - ಮಗಳೆಂಬ ಮಮತೆಯ ಒಡಲನ್ನೇ ಸುಟ್ಟು ಕರಕಲು ಮಾಡಿದ ಬಸ್ ದುರಂತ!

Chitradurga Bus Fire: 5 Women Killed, DNA Tests to Identify Victims ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐವರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿದ್ದ 33 ಪ್ರಯಾಣಿಕರ ಪೈಕಿ ಐವರು ಮೃತಪಟ್ಟಿದ್ದು, ಮದುವೆ ನಿಶ್ಚಯವಾಗಿದ್ದ ಯುವತಿಯರ ಸಾವಾಗಿದೆ.

Read Full Story

04:01 PM (IST) Dec 25

ಹನಿಮೂನ್ ಅರ್ಧಕ್ಕೆ ಬಿಟ್ಟು ಬಂದು ಗಂಡನ ಮನೆಯಲ್ಲಿ ಆತ್ಮ*ಹತ್ಯೆಗೆ ಯತ್ನಿಸಿದ ನವವಧು ಗಾನವಿ!

ಮದುವೆಯಾದ ಒಂದೂವರೆ ತಿಂಗಳಲ್ಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ನವವಿವಾಹಿತೆ ಗಾನವಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ವೈದ್ಯರು 'ಬ್ರೈನ್ ಡೆಡ್' ಎಂದು ತಿಳಿಸಿದ್ದಾರೆ.

Read Full Story

03:33 PM (IST) Dec 25

ಅದನ್ನು ಕಾಣೋ ಹಾಗೆ ಬಟ್ಟೆ ಹಾಕಬೇಡಿ... ಹುಡುಗಿಯರ ಡ್ರೆಸ್ ಬಗ್ಗೆ ಶಿವಾಜಿ ಶಾಕಿಂಗ್ ಕಾಮೆಂಟ್!

'ದಂಡೋರಾ' ಚಿತ್ರದ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ನಟ ಶಿವಾಜಿ ಮಾಡಿದ ಕಾಮೆಂಟ್‌ಗಳು ಈಗ ಅಂತರ್ಜಾಲದಲ್ಲಿ ವೈರಲ್ ಆಗಿವೆ. ಅದರಲ್ಲೂ ಹುಡುಗಿಯರ ಡ್ರೆಸ್ ಬಗ್ಗೆ ಅವರು ಮಾಡಿದ ಕಾಮೆಂಟ್‌ಗೆ ಹಲವರು ಗರಂ ಆಗಿದ್ದಾರೆ.

Read Full Story

03:26 PM (IST) Dec 25

ಚಿತ್ರದುರ್ಗ ಬಸ್‌ ದುರಂತದಲ್ಲಿ 6 ಮಂದಿ ಸಜೀವ ದಹನ, ಎಸ್‌ಪಿ ಸ್ಪಷ್ಟನೆ, ಇಬ್ಬರು ಗೆಳತಿಯರ ಮೃತದೇಹ ಗುರುತಿಸಲು ಚೈನ್ ಅಡ್ಡಿ!

ಚಿತ್ರದುರ್ಗದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಸಂಭವಿಸಿ, ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. 

Read Full Story

03:02 PM (IST) Dec 25

54 ವರ್ಷದ ಬ್ಯಾಚುಲರ್ ನಟಿ - 30ರ ಯುವ ನಟನ ಜೊತೆ ರೊಮ್ಯಾನ್ಸ್, ತೆಲುಗು ಸ್ಟಾರ್ ಜೊತೆ ಅಫೇರ್?

ಟಾಲಿವುಡ್, ಬಾಲಿವುಡ್ ಎರಡನ್ನೂ ಆಳಿದ ಸುಂದರಿ, 54 ವರ್ಷವಾದರೂ ಬ್ಯಾಚುಲರ್ ಜೀವನ ನಡೆಸುತ್ತಿರುವ ಸ್ಟಾರ್ ನಟಿ. ತನಗಿಂತ 24 ವರ್ಷ ಚಿಕ್ಕ ನಟನ ಜೊತೆ ರೊಮ್ಯಾನ್ಸ್ ಮಾಡಿದ ಈ ನಟಿ ಯಾರು ಗೊತ್ತಾ?

Read Full Story

02:39 PM (IST) Dec 25

ಸುದೀಪ್‌ ಪುತ್ರಿ ಸಾನ್ವಿ ಸ್ಯಾಂಡಲ್​ವುಡ್​ಗೆ ಎಂಟ್ರಿ? ಮಗಳ ಬಗ್ಗೆ ಬಿಗ್​ ಅಪ್​ಡೇಟ್​ ಕೊಟ್ಟ ಕಿಚ್ಚ ಹೇಳಿದ್ದೇನು?

ಕಂಠಸಿರಿಯಿಂದ ಈಗಾಗಲೇ ಮೋಡಿ ಮಾಡಿರುವ ಕಿಚ್ಚ ಸುದೀಪ್ ಪುತ್ರಿ ಸಾನ್ವಿ, ನಟನೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಮಗಳ ಸಿನಿಮಾ ಎಂಟ್ರಿ ಬಗ್ಗೆ ಮಾತನಾಡಿದ ಸುದೀಪ್, ಆಕೆಗೆ ನಟನೆಯಲ್ಲಿ ಸಂಪೂರ್ಣ ಆಸಕ್ತಿಯಿದೆ ಎಂದಿದ್ದು, ಮಗಳ ಎಂಟ್ರಿ ಬಗ್ಗೆ ಹೇಳಿದ್ದೇನು? 

Read Full Story

02:39 PM (IST) Dec 25

ರಜನಿಕಾಂತ್‌ರ Jailer 2 ಸಿನಿಮಾಗೆ ಬಾಲಿವುಡ್‌ನ ದೊಡ್ಡ ಸ್ಟಾರ್ ಎಂಟ್ರಿ? ಈ ದಿನ ಸಿನಿಮಾ ರಿಲೀಸ್!

ಸೌತ್ ಮತ್ತು ಬಾಲಿವುಡ್ ಸಿನಿಮಾದಲ್ಲಿ ದೊಡ್ಡ ಧಮಾಕಾ ನಡೆಯಲಿದೆ. ಹೌದು, ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ 'ಜೈಲರ್ 2'ಗೆ ಶಾರುಖ್ ಖಾನ್ ಎಂಟ್ರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

Read Full Story

02:26 PM (IST) Dec 25

ವರ್ಷಾಂತ್ಯ, ಹೊಸವರ್ಷದ ಸಂಭ್ರಮ ಹಾಳು ಮಾಡುವ ಘೋರ ದುರಂತಗಳು, ಡಿಸೆಂಬರ್‌-ಜನವರಿಯಲ್ಲೇ ಅಪಘಾತ ಆಗೋದ್ಯಾಕೆ?

ಕರ್ನಾಟಕದಲ್ಲಿ ಚಳಿಗಾಲದ ತಿಂಗಳುಗಳಲ್ಲಿ, ವಿಶೇಷವಾಗಿ NH-48 ಮತ್ತು NH-75 ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ದಟ್ಟ ಮಂಜು, ಚಾಲಕರ ಆಯಾಸ ಮತ್ತು ಅತಿವೇಗವು ಈ ದುರಂತಗಳಿಗೆ ಪ್ರಮುಖ ಕಾರಣಗಳಾಗಿದೆ.

Read Full Story

02:14 PM (IST) Dec 25

ಸಂಘ ಸಂಸ್ಕಾರದಿಂದಲೇ ರಾಜಕಾರಣವನ್ನು ಸಂಸ್ಕರಿಸಿದ ಅಟಲ್ ಜೀ - ಕಿರಣಕುಮಾರ ವಿವೇಕವಂಶಿ ಲೇಖನ!

ಸ್ವಯಂಸೇವಕ ಸಂಸ್ಕಾರವೇ ರಾಜಕಾರಣಕ್ಕೆ ದಾರಿ ತೋರಿತು: 1951 ರಲ್ಲಿ, ವಾಜಪೇಯಿ ನೇತೃತ್ವದಲ್ಲಿ ಭಾರತೀಯ ಜನ ಸಂಘವನ್ನು ಸೇರಿ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ವಹಿಸಿಕೊಂಡರು.

Read Full Story

01:47 PM (IST) Dec 25

ಕ್ವಾಲಿಟಿಗೆ ನೋ ಕಾಂಪ್ರಮೈಸ್.. 45 ಚಿತ್ರದ ಪೇಯ್ಡ್‌ ಪ್ರೀಮಿಯರ್‌ ಶೋಗಳಿಗೆ ಭಾರಿ ಮೆಚ್ಚುಗೆ

ಶಿವರಾಜ್‌ಕುಮಾರ್‌, ಉಪೇಂದ್ರ ಮತ್ತು ರಾಜ್‌ ಬಿ. ಶೆಟ್ಟಿ ನಟಿಸಿರುವ ‘45’ ಚಿತ್ರದ ಪೇಯ್ಡ್‌ ಪ್ರೀಮಿಯರ್‌ ಶೋಗಳಿಗೆ ಭಾರಿ ಮೆಚ್ಚುಗೆ ದೊರೆತಿದೆ. ಬೆಂಗಳೂರಿನಲ್ಲಿಯೇ 50ಕ್ಕೂ ಹೆಚ್ಚು ಪ್ರದರ್ಶನಗಳು ಹೌಸ್‌ಫುಲ್‌ ಆಗಿವೆ.

Read Full Story

01:33 PM (IST) Dec 25

ಚಿತ್ರದುರ್ಗ ಬಸ್‌ ದುರಂತ - ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್

ಗೋಕರ್ಣ ಪ್ರವಾಸಕ್ಕೆ ಹೊರಟಿದ್ದ ಬೆಂಗಳೂರಿನ ಐಟಿ ಉದ್ಯೋಗಿಗಳ ತಂಡ ಚಿತ್ರದುರ್ಗದ ಬಳಿ ಭೀಕರ ಬಸ್ ಅಪಘಾತಕ್ಕೆ ಸಿಲುಕಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 27 ವರ್ಷದ ಬಿಂದು ಮತ್ತು ಅವರ 3ವರ್ಷದ ಮಗಳು ಗ್ರೀಯಾ ನಾಪತ್ತೆಯಾಗಿದ್ದಾರೆ. ಕುಟುಂಬಸ್ಥರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Read Full Story

01:30 PM (IST) Dec 25

ಗದಗ ಪೌಲ್ಟ್ರಿಫಾರ್ಮ್‌ ದುರ್ವಾಸನೆ - ನೂರಾರು ಕೋಳಿ, ಸಾವಿರಾರು ಮೊಟ್ಟೆ ಹೊತ್ತಯ್ದ ಗ್ರಾಮಸ್ಥರು!

ಗದಗ ಜಿಲ್ಲೆಯ ಉಣಚಗೇರಿ ಗ್ರಾಮದಲ್ಲಿ, 15 ವರ್ಷಗಳಿಂದ ದುರ್ವಾಸನೆ ಬೀರುತ್ತಿದ್ದ ಕೋಳಿ ಫಾರ್ಮ್‌ನಿಂದ ಬೇಸತ್ತ ಗ್ರಾಮಸ್ಥರು ಪೊಲೀಸರ ಸಮ್ಮುಖದಲ್ಲೇ ಫಾರ್ಮ್‌ಗೆ ನುಗ್ಗಿ ಸಾವಿರಾರು ಕೋಳಿ ಮತ್ತು ಮೊಟ್ಟೆಗಳನ್ನು ಲೂಟಿ ಮಾಡಿದ್ದಾರೆ.

Read Full Story

01:18 PM (IST) Dec 25

ಕೋಟಿ ಜನರ ಹೃದಯ ಮೀಟಿದ ಮಾನವ - ನಾನು ರಾಜಕೀಯಕ್ಕೆ ಬಂದಿದ್ದು ದೊಡ್ಡ ತಪ್ಪು ಎಂದಿದ್ದ ವಾಜಪೇಯಿ

ಪ್ರತಿಪಕ್ಷದ ನಾಯಕರಾಗಿದ್ದಾಗ ವಾಜಪೇಯಿ ಒಮ್ಮೆ ಹುಬ್ಬಳ್ಳಿಗೆ ಬಂದಿದ್ದರು. ಸಂಜೆ ಬೃಹತ್ ಸಾರ್ವಜನಿಕ ಸಭೆ. ಅವರ ಹಿಂದಿ ಭಾಷಣದ ಅನುವಾದವನ್ನು ಆಗ ಮಾಡಿದವರು ''ವಿಕ್ರಮ'' ವಾರಪತ್ರಿಕೆಯ ಸಂಪಾದಕರಾಗಿದ್ದ ಬೆ.ಸು.ನಾ ಮಲ್ಯ ಅವರು.

Read Full Story

01:01 PM (IST) Dec 25

Amruthadhaare ರೋಚಕ ಟ್ವಿಸ್ಟ್​ - ಜೈದೇವನಿಂದ ಆಕಾಶ್​ ಕಿಡ್ನಾಪ್​- ಮುಂದಾದದ್ದು ಭಯಾನಕ!

ಆಕಾಶ್, ಭೂಮಿಕಾ ಮತ್ತು ಗೌತಮ್ ಮಗ ಎಂಬ ಸತ್ಯ ತಿಳಿದ ಜೈದೇವ್ ಆತನನ್ನು ಅಪಹರಿಸಿದ್ದಾನೆ. ಮಿಂಚು ಬಿಡಿಸಿದ ಚಿತ್ರದ ಮೂಲಕ ಭೂಮಿಕಾಗೆ ಜೈದೇವನ ಕುತಂತ್ರದ ಬಗ್ಗೆ ಸುಳಿವು ಸಿಕ್ಕಿದ್ದು, ಆಸ್ತಿಗಾಗಿ ಜೈದೇವ್ ಏನು ಬೇಕಾದರೂ ಮಾಡುವ ಆತಂಕ ಎದುರಾಗಿದೆ.
Read Full Story

12:51 PM (IST) Dec 25

ಆಧುನಿಕ ಭಾರತದ ಶಿಲ್ಪಿ, ಯುಗಪುರುಷ ಅಟಲ್ ಬಿಹಾರಿ ವಾಜಪೇಯಿ - ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಅಟಲ್ ಜಿ ಕೇವಲ ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿರಲಿಲ್ಲ, ಬದಲಿಗೆ ಒಬ್ಬ ಸಂವೇದನಾಶೀಲ ಕವಿ ಮತ್ತು ಅಪ್ರತಿಮ ವಾಗ್ಮಿಯಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು.

Read Full Story

12:37 PM (IST) Dec 25

Bigg Bossನಲ್ಲಿ ಮಾರ್ಕ್​ ಚಿತ್ರದ ಹವಾ - 'ಸೈಕೋ ಸೈತಾನ್​' ಹಾಡಿಗೆ ಸ್ಪರ್ಧಿಗಳ ಭರ್ಜರಿ ಸ್ಟೆಪ್- ಕಿಚ್ಚ ಫಿದಾ

ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ಸುದೀಪ್ ಅಮಾನತುಗೊಂಡ ಪೊಲೀಸ್ ಅಧಿಕಾರಿಯ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Read Full Story

12:27 PM (IST) Dec 25

ಚಿತ್ರದುರ್ಗ ಬಸ್ ದುರಂತ - ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದ ನಂತರ, ಹಾಸನದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ನವ್ಯ ಮತ್ತು ಮಾನಸ ಕಣ್ಮರೆಯಾಗಿದ್ದಾರೆ. ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದ್ದ ನವ್ಯ ಸೇರಿದಂತೆ ಮಕ್ಕಳಿಗೆ ಪೋಷಕರು ಆಸ್ಪತ್ರೆಗಳಲ್ಲಿ ಕಣ್ಣೀರಿನೊಂದಿಗೆ ಹುಡುಕಾಟ ನಡೆಸುತ್ತಿದ್ದಾರೆ.

Read Full Story

12:24 PM (IST) Dec 25

ಅತ್ಯುತ್ತಮ ಆಡಳಿತಕ್ಕೂ, ಜವಾಬ್ದಾರಿಯುತ ವಿಪಕ್ಷಕ್ಕೂ ಮಾದರಿ ಅಟಲ್ ಬಿಹಾರಿ ವಾಜಪೇಯಿ - ಆರ್.ಅಶೋಕ್‌

ರಾಹುಲ್‌ ಗಾಂಧಿಯವರ ನೇತೃತ್ವದ ವಿಪಕ್ಷ ಲೋಕಸಭೆಯಲ್ಲಿ ಏನು ಮಾಡುತ್ತಿದೆ ಎಂಬುದನ್ನು ಗಮನಿಸಿದರೆ, ಇವರಿಗೆಲ್ಲ ವಾಜಪೇಯಿಯವರಿಂದಲೇ ಪಾಠ ಹೇಳಿಸಿಕೊಳ್ಳುವ ಅಗತ್ಯವಿದೆ ಎಂದು ಅನ್ನಿಸದೇ ಇರುವುದಿಲ್ಲ.

Read Full Story

12:17 PM (IST) Dec 25

ಅಟಲ್‌ಜೀ ಹಾಕಿದ ಬುನಾದಿಯ ಮೇಲೆ ನಿಂತ ವಿಕಸಿತ ಭಾರತ - ಬಿ.ವೈ.ವಿಜಯೇಂದ್ರ

ಡಿ.25 ವಾಜಪೇಯಿ ಅವರ ಜನ್ಮದಿನ. ದೇಶದ ಅಭಿವೃದ್ಧಿ ರಥಕ್ಕೆ ರಾಜಪಥ ನಿರ್ಮಿಸಿ, ಭವ್ಯ ಭಾರತದ ಬೆಳವಣಿಗೆಗೆ ಭರವಸೆಯ ಬೆಳಕಾಗಿ ನಿಂತವರು ಅಟಲ್‌ಜೀ. ದೇಶ ಕಂಡ ಪ್ರಧಾನಿಗಳ ಪಟ್ಟಿಯಲ್ಲಿ ಅಟಲ್‌ಜೀ ಅವರಿಗೆ ವಿಶೇಷ ಸ್ಥಾನಮಾನ.

Read Full Story

More Trending News