LIVE NOW
Published : Feb 25, 2026, 06:43 AM ISTUpdated : Feb 25, 2026, 09:35 AM IST

Karnataka News Live: ಪೋಕ್ಸೋ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಗಾಯಕ ಮ್ಯೂಸಿಕ್ ಮೈಲಾರಿಗೆ ಷರತ್ತುಬದ್ಧ ಜಾಮೀನು

ಸಾರಾಂಶ

ಯಾದಗಿರಿ: ಗುರುಮಠಕಲ್‌ನಲ್ಲಿ ಫೆ.21ರಂದು ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜ್‌ ಜಯಂತ್ಯುತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಗಾಂಧೀಜಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಗಾಂಧಿ ಭಾರತ ದೇಶಕ್ಕೆ ರಾಷ್ಟ್ರಪಿತರಲ್ಲ, ಪಾಕಿಸ್ತಾನಕ್ಕೆ ರಾಷ್ಟ್ರಪಿತ ಎಂಬುದು ಸೇರಿದಂತೆ, ಪ್ರಧಾನಿ ನೆಹರು ಹಾಗೂ ಅನ್ಯಕೋಮಿನ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕೆ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. 

ಶಾಸಕ ಯತ್ನಾಳ್‌ ಅವರ ಭಾಷಣ ವ್ಯಾಪಕ ಚರ್ಚೆಗೆ ಗ್ರಾಸವಾಗಿ, ಕೆಲವರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ತಮ್ಮ ವಿರುದ್ಧ ಈಗಾಗಲೇ 79 ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯೂ ಕೂಡ ದಾಖಲಾದರೆ ತಾವೇನು ಹೆದರುವುದಿಲ್ಲ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.

09:35 AM (IST) Feb 25

ಪೋಕ್ಸೋ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಗಾಯಕ ಮ್ಯೂಸಿಕ್ ಮೈಲಾರಿಗೆ ಷರತ್ತುಬದ್ಧ ಜಾಮೀನು

ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅಲಿಯಾಸ್ ಮೈಲಾರಪ್ಪ ಮಡಿವಾಳಗೆ ಬಾಗಲಕೋಟೆ ಜಿಲ್ಲಾ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಾರ್ಜ್‌ಶೀಟ್ ಸಲ್ಲಿಕೆಯ ನಂತರ, 1 ಲಕ್ಷ ಶ್ಯೂರಿಟಿ ಬಾಂಡ್ ಪಡೆದು ನ್ಯಾಯಾಲಯ ಈ ಆದೇಶ ನೀಡಿದೆ.
Read Full Story

09:06 AM (IST) Feb 25

ಲಾಡ್-ಜಕ್ಕಪ್ಪನವರ ಜಟಾಪಟಿ - 120 ಎಕರೆ ಭೂಮಿ ಹುಡುಕಾಟದಲ್ಲಿ ಹೈರಾಣದ್ರು ಅಧಿಕಾರಿಗಳು

ಸಚಿವ ಸಂತೋಷ್ ಲಾಡ್ ಮತ್ತು ಎಂಎಲ್‌ಸಿ ಜಕ್ಕಪ್ಪನವರ ನಡುವೆ ತೀವ್ರ ವಾಕ್ಸಮರ ನಡೆದಿದೆ. ಜ್ಯೋತಿಪ್ರಕಾಶ ಮಿರ್ಜಿ ಅವರಿಗೆ 120 ಎಕರೆ ಭೂಮಿ ಸಾಗುವಳಿ ಪತ್ರ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಯಾವುದೇ ನಿರ್ದಿಷ್ಟ ಮಾಹಿತಿ ಇಲ್ಲದೆ ಭೂಮಿಯನ್ನು ಹುಡುಕಲು ಹೈರಾಣಾಗಿದ್ದಾರೆ.

Read Full Story

08:49 AM (IST) Feb 25

ತರಕಾರಿಯಲ್ಲಿನ ಅಪಾಯಕಾರಿ ಅಂಶ ದೇಹಕ್ಕೆ ಸೇರದಿರಲು ಈ ಕ್ರಮ ಅನುಸರಿಸಿ ಸೇವಿಸಿ

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ತರಕಾರಿ, ಸೊಪ್ಪುಗಳಲ್ಲಿ ಸೀಸದ ಅಂಶಗಳು ಸೇರಿದಂತೆ ಭಾರಿ ಲೋಹದ ಅಂಶಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಈ ಸಮಸ್ಯೆಗೆ ಮೂಲದಲ್ಲೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ.

Read Full Story

08:43 AM (IST) Feb 25

ದರ್ಶನ್- ರೇಣುಕಾಸ್ವಾಮಿ ಕೇಸ್ - ಪೊಲೀಸರ ವಿರುದ್ಧವೇ ಸುಳ್ಳು ಸಾಕ್ಷ್ಯ ಸೃಷ್ಟಿಸಿರುವ ಆರೋಪ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ ಆರೋಪದ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರನ್ನು ಆರೋಪಿಯನ್ನಾಗಿಸಿ ವಿಚಾರಣೆ ನಡೆಸಬೇಕೆಂದು ಆರೋಪಿ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

Read Full Story

08:35 AM (IST) Feb 25

ಈಶ್ವರ ದೇವಸ್ಥಾನದ ಗಂಟೆ-ಜಾಗಂಟೆ ಮನಸಿಗೆ ಕಿರಿ-ಕಿರಿಯಂತೆ! ಜೋರಾಗಿ ಜಾಗಂಟೆ ಹಾಕಬೇಡಿ ಎಂದು ಅನ್ಯಕೋಮಿನ ವ್ಯಕ್ತಿಯಿಂದ ಆಕ್ಷೇಪ

ಚಿಕ್ಕಮಗಳೂರಿನ ಹಳೆ ಉಪ್ಪಳ್ಳಿಯ ಈಶ್ವರ ದೇವಸ್ಥಾನದಲ್ಲಿ ಜಾಗಂಟೆ ಶಬ್ದಕ್ಕೆ ಅನ್ಯಕೋಮಿನ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಬ್ದ ಹೊರಗೆ ಕೇಳಿಸದಂತೆ ಕ್ರಮ ಕೈಗೊಳ್ಳಲು ಪೊಲೀಸರು ಅರ್ಚಕರಿಗೆ ಸೂಚಿಸಿದ್ದು, ಈ ನಡೆಗೆ ಅರ್ಚಕರು ಬೇಸರ ವ್ಯಕ್ತಪಡಿಸಿದ್ದಾರೆ.  

Read Full Story

08:18 AM (IST) Feb 25

ಒಣಬೇಸಾಯ ಜಾಗದಲ್ಲಿ ಡ್ರ್ಯಾಗನ್ ಫ್ರುಟ್ ಬೆಳೆದು ಯಶಸ್ವಿಯಾದ ಪದವೀಧರೆ; 10 ಟನ್‌ಗೂ ಅಧಿಕ ಇಳುವರಿ

ಕಿತ್ತೂರ ಗ್ರಾಮದ ಪದವೀಧರೆ ಲತಾ ಹಳ್ಳಿಕೇರಿ ಅವರು, ರಾಸಾಯನಿಕ ಬಳಸದೆ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಡ್ರ್ಯಾಗನ್ ಫ್ರುಟ್‌ ಬೆಳೆದು ಯಶಸ್ಸು ಕಂಡಿದ್ದಾರೆ. ಒಂದು ಎಕರೆ ಜಮೀನಿನಲ್ಲಿ ವರ್ಷಕ್ಕೆ 10 ಟನ್‌ಗೂ ಅಧಿಕ ಇಳುವರಿ ಪಡೆದು, ಉತ್ತಮ ಆದಾಯ ಗಳಿಸುವ ಮೂಲಕ ಇತರ ರೈತ ಮಹಿಳೆಯರಿಗೆ ಮಾದರಿಯಾಗಿದ್ದಾರೆ.
Read Full Story

08:13 AM (IST) Feb 25

ರಣಜಿ ಫೈನಲ್ - ಪುಂಡೀರ್ ಶತಕ, ಕರ್ನಾಟಕ ಎದುರು ಬೃಹತ್ ಮೊತ್ತದತ್ತ ಜಮ್ಮು- ಕಾಶ್ಮೀರ

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಫೈನಲ್‌ನ ಮೊದಲ ದಿನ ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕದ ವಿರುದ್ಧ ಮೇಲುಗೈ ಸಾಧಿಸಿದೆ. ಶುಭಂ ಸಿಂಗ್ ಪುಂಡೀರ್ ಅವರ ಅಜೇಯ ಶತಕ (117*) ಹಾಗೂ ಯಾವರ್ ಹಸನ್ (88) ಮತ್ತು ಅಬ್ದುಲ್ ಸಮದ್ (52*) ಅವರ ಅರ್ಧಶತಕಗಳ ನೆರವಿನಿಂದ 2 ವಿಕೆಟ್‌ಗೆ 284 ರನ್ ಗಳಿಸಿದೆ.  

Read Full Story

08:00 AM (IST) Feb 25

ಇಡೀ ಊರಿಗೆ ಊಟ ಹಾಕಿಸಿ ಎತ್ತಿನ ಹುಟ್ಟುಹಬ್ಬ ಆಚರಿಸಿದ ರೈತ; ಗ್ರಾಮದಲ್ಲಿ ಹಬ್ಬದ ವಾತಾವರಣ

ರೈತ ಉಮೇಶ ಶಿಂದೆ, ತಮ್ಮ 'ಚಂಡ' ಎಂಬ ಎತ್ತಿನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಊರಿಗೆ ಊಟ ಹಾಕಿಸುವ ಮೂಲಕ ಅದ್ಧೂರಿಯಾಗಿ ಆಚರಿಸಿದ್ದಾರೆ. ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ ಈ ಕಾರ್ಯಕ್ರಮದಲ್ಲಿ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

Read Full Story

07:39 AM (IST) Feb 25

Rain - ಚರಂಡಿಯಲ್ಲಿ ಕೊಚ್ಚಿ ಹೋಗ್ತಿದ್ದ ಐದು ಪುಟ್ಟ ನಾಯಿ ಮರಿಗಳನ್ನು ರಕ್ಷಿಸಿದ ಮಕ್ಕಳು

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಒಳಚರಂಡಿಯಲ್ಲಿ ಸಿಲುಕಿದ್ದ ಐದು ನವಜಾತ ನಾಯಿ ಮರಿಗಳನ್ನು ಸ್ಥಳೀಯ ಮಕ್ಕಳು ರಕ್ಷಿಸಿದ್ದಾರೆ. ತಮ್ಮ ಜೀವವನ್ನೂ ಲೆಕ್ಕಿಸದೆ ಈ ಮಕ್ಕಳು ತೋರಿದ ಕರುಣೆ ಮತ್ತು ಧೈರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read Full Story

07:30 AM (IST) Feb 25

ದಿನಪತ್ರಿಕೆಗಳನ್ನು ಹಂಚುತ್ತಿದ್ದ ಹುಡುಗ ಈಗ ಜಡ್ಜ್

ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read Full Story

07:19 AM (IST) Feb 25

ರಕ್ಷಣಾ ಉತ್ಪನ್ನ ಉತ್ಪಾದನೆಗೆ 200 ಎಕರೆ ಪಾರ್ಕ್‌ - ಸಚಿವ ಎಂ.ಬಿ.ಪಾಟೀಲ್

200 ಎಕರೆ ಪ್ರತ್ಯೇಕ ಪಾರ್ಕ್:  ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕರ್ನಾಟಕವನ್ನು ರಕ್ಷಣೆ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶದ ರಾಜಧಾನಿಯನ್ನಾಗಿಸುವ ಗುರಿ ವ್ಯಕ್ತಪಡಿಸಿದ್ದಾರೆ. 

Read Full Story

07:12 AM (IST) Feb 25

ಆಸ್ತಿ ಖಾತಾ ಬದಲು ಈಗ ಸ್ವಯಂಚಾಲಿತ!

ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ ಅಥವಾ ಆಸ್ತಿ ನೋಂದಣಿಯಾದ ಏಳು ದಿನಗಳ ನೋಟಿಸ್‌ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದರೆ ಸ್ವಯಂಚಾಲಿತವಾಗಿ ಖಾತೆ ಬದಲಾವಣೆ ಆಗುವ ಸ್ವಯಂಚಾಲಿತ ಮ್ಯುಟೇಷನ್‌ ವ್ಯವಸ್ಥೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಕಾಸಸೌಧದಲ್ಲಿ ಮಂಗಳವಾರ ಚಾಲನೆ ನೀಡಿದರು.

Read Full Story

07:04 AM (IST) Feb 25

ಆಸ್ತಿ ಖರೀದಿ ಇನ್ನಷ್ಟು ಭಾರ ಸಂಭವ - ಏಪ್ರಿಲ್‌ಗೆ ಹೊಸ ದರ ಜಾರಿ ?

ಸಾಲು-ಸಾಲು ಬೆಲೆ ಏರಿಕೆಗಳ ನಡುವೆ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಿದ್ಧತೆ ನಡೆಸಿದ್ದು, ಆಸ್ತಿ ಖರೀದಿ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಯಿದೆ.

ಸ್ಥಿರಾಸ್ತಿಗಳ ಮಾರುಕಟ್ಟೆ ದರದ ಆಧಾರದ ಮೇಲೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲು ಈಗಾಗಲೇ ಸಭೆ ನಡೆಸಲಾಗಿದೆ.

Read Full Story

More Trending News