LIVE NOW
Published : Feb 25, 2026, 06:43 AM ISTUpdated : Feb 25, 2026, 11:38 PM IST

Karnataka News Live: ಶಿವಮೊಗ್ಗ - ಸಂಕೇತ್ ಹತ್ಯೆ ಖಂಡಿಸಿ ಸೂಳೆಬೈಲಿನಲ್ಲಿ ಹಿಂದೂ-ಮುಸ್ಲಿಂ ಬೃಹತ್ ಮುಂಬತ್ತಿ ಮೆರವಣಿಗೆ!

ಸಾರಾಂಶ

ಯಾದಗಿರಿ: ಗುರುಮಠಕಲ್‌ನಲ್ಲಿ ಫೆ.21ರಂದು ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜ್‌ ಜಯಂತ್ಯುತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಗಾಂಧೀಜಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಗಾಂಧಿ ಭಾರತ ದೇಶಕ್ಕೆ ರಾಷ್ಟ್ರಪಿತರಲ್ಲ, ಪಾಕಿಸ್ತಾನಕ್ಕೆ ರಾಷ್ಟ್ರಪಿತ ಎಂಬುದು ಸೇರಿದಂತೆ, ಪ್ರಧಾನಿ ನೆಹರು ಹಾಗೂ ಅನ್ಯಕೋಮಿನ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕೆ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. 

ಶಾಸಕ ಯತ್ನಾಳ್‌ ಅವರ ಭಾಷಣ ವ್ಯಾಪಕ ಚರ್ಚೆಗೆ ಗ್ರಾಸವಾಗಿ, ಕೆಲವರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ತಮ್ಮ ವಿರುದ್ಧ ಈಗಾಗಲೇ 79 ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯೂ ಕೂಡ ದಾಖಲಾದರೆ ತಾವೇನು ಹೆದರುವುದಿಲ್ಲ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.

11:38 PM (IST) Feb 25

ಶಿವಮೊಗ್ಗ - ಸಂಕೇತ್ ಹತ್ಯೆ ಖಂಡಿಸಿ ಸೂಳೆಬೈಲಿನಲ್ಲಿ ಹಿಂದೂ-ಮುಸ್ಲಿಂ ಬೃಹತ್ ಮುಂಬತ್ತಿ ಮೆರವಣಿಗೆ!

ಶಿವಮೊಗ್ಗದ ಸೂಳೆಬೈಲಿನಲ್ಲಿ ಸಂಕೇತ್ ಎಂಬ ಬಾಲಕನ ಹತ್ಯೆಯನ್ನು ಖಂಡಿಸಿ ಹಿಂದೂ-ಮುಸ್ಲಿಂ ಸಮುದಾಯಗಳು ಒಟ್ಟಾಗಿ ಪ್ರತಿಭಟನೆ ನಡೆಸಿವೆ. ಬಡಾವಣೆಯಲ್ಲಿನ ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟವೇ ಈ ಕೃತ್ಯಕ್ಕೆ ಕಾರಣವೆಂದು ಆರೋಪಿಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
Read Full Story

11:03 PM (IST) Feb 25

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ - 22 ವರ್ಷದ ಯೋಧ ಕ್ಯಾಪ್ಟನ್ ಅಮನ್ ಸಿಂಗ್ ಸಾವು

ಜಮ್ಮುಕಾಶ್ಮೀರದ ಕುಪ್ವಾರಾದಲ್ಲಿ ಕರ್ತವ್ಯದಲ್ಲಿದ್ದ 22 ವರ್ಷದ ಸೇನಾ ಕ್ಯಾಪ್ಟನ್ ಅಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಪ್ರದೇಶದ ನಿವಾಸಿಯಾಗಿದ್ದ ಇವರು ಪೋಷಕರ ಏಕೈಕ ಪುತ್ರರಾಗಿದ್ದು, ಇತ್ತೀಚೆಗಷ್ಟೇ ಕ್ಯಾಪ್ಟನ್ ಆಗಿ ಬಡ್ತಿ ಪಡೆದಿದ್ದರು. ಅವರ ಹಠಾತ್ ಸಾವು ಗ್ರಾಮದಲ್ಲಿ ಶೋಕವನ್ನುಂಟುಮಾಡಿದೆ.

Read Full Story

10:52 PM (IST) Feb 25

2 KM ಪ್ರಯಾಣಕ್ಕೆ 6 ರೂಪಾಯಿ, 2.5KM ಪ್ರಯಾಣಕ್ಕೆ 12 ರೂಪಾಯಿ - BMTC ಟಿಕೆಟ್ ದರ ವ್ಯವಸ್ಥೆ ವಿರುದ್ಧ ಪ್ರಯಾಣಿಕರ ಆಕ್ರೋಶ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಹಂತ ಆಧಾರಿತ ಟಿಕೆಟ್ ದರ ಪದ್ಧತಿಯಿಂದಾಗಿ ಪ್ರಯಾಣಿಕರು ಕಡಿಮೆ ದೂರಕ್ಕೂ ಹೆಚ್ಚು ಹಣ ಪಾವತಿಸುವಂತಾಗಿದೆ. ಜಿಪಿಎಸ್ ತಂತ್ರಜ್ಞಾನ ಲಭ್ಯವಿದ್ದರೂ, ಬಿಎಂಟಿಸಿ ಹಳೆಯ ಪದ್ಧತಿಯನ್ನೇ ಮುಂದುವರಿಸಿದೆ.

Read Full Story

10:28 PM (IST) Feb 25

ಬೆಂಗಳೂರಲ್ಲಿ ಕಲರ್ಸ್ ಮೊಬೈಲ್ ಅಂಗಡಿ ಮಾಲೀಕನಿಗೆ ಕಲರ್ ಕಲರ್ ಕಾಗೆ ಹಾರಿಸಿದ ಖತರ್ನಾಕ್ ಖದೀಮ!

ಬೆಂಗಳೂರಿನ ರಾಜಾಜಿನಗರದಲ್ಲಿ, ಮೊಬೈಲ್ ಖರೀದಿಸುವ ನೆಪದಲ್ಲಿ ಬಂದ ವಂಚಕನೊಬ್ಬ, 76 ಸಾವಿರ ರೂಪಾಯಿ ಮೌಲ್ಯದ ಮೊಬೈಲ್‌ಗಳಿಗೆ ನಕಲಿ ಪೇಮೆಂಟ್ ಸ್ಕ್ರೀನ್‌ಶಾಟ್ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿದ್ದಾನೆ. ಹಣ ಜಮೆಯಾಗದಿರುವುದನ್ನು ಅರಿತ ಮಾಲೀಕರು ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full Story

10:23 PM (IST) Feb 25

18 ವರ್ಷ ಕಿರಿಯ ಮಹಿಳೆಯ ಜೊತೆ ನಿವೃತ್ತ ಹೈಕೋರ್ಟ್‌ ಉದ್ಯೋಗಿಯ ಅಫೇರ್‌, ಕೊಲೆ ಮಾಡಿ ರೈಲ್ವೆ ಟ್ರ್ಯಾಕ್‌ಗೆ ಎಸೆದ!

Retired HC Employee Arrested for Murdering Partner in Kochi ಕೊಚ್ಚಿಯ ರೈಲ್ವೆ ಹಳಿಯಲ್ಲಿ ಸುಧಾ ಬೇಬಿ ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಇದೊಂದು ಕೊಲೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃಟ್ಟು ಹೈಕೋರ್ಟ್ ಉದ್ಯೋಗಿ ಶಾಜಿ ಕೆ.ವಿ.ಯನ್ನು ಬಂಧಿಸಲಾಗಿದೆ.

Read Full Story

09:59 PM (IST) Feb 25

ಬಾಗಲಕೋಟೆ - ನಾಳೆ ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ, ಶಿವಾಜಿ ಮೆರವಣಿಗೆಗೆ ಕಲ್ಲೆಸೆದ ಕಿಡಿಗೇಡಿಗಳ ಕಿವಿ ಹಿಂಡಲು ಸಜ್ಜಾದ ಖಾಕಿ ಪಡೆ

ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ನಡೆದ ಕಲ್ಲೆಸೆತದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಸಾವಿರಾರು ಪೊಲೀಸರು ನಗರದಾದ್ಯಂತ ಪಥಸಂಚಲನ ನಡೆಸಿದರು.

Read Full Story

09:49 PM (IST) Feb 25

ದಾಖಲೆ ಮಾಡಿದ ಉತ್ತರ ಕನ್ನಡದ ಅಪರೂಪದ ರಾಜಕಾರಣಿ, ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್‌ ಹೆಗಡೆ!

ಉತ್ತರ ಕನ್ನಡ ಮೂಲದ ರಾಜಕಾರಣಿ ಶಶಿಭೂಷಣ್‌ ಹೆಗಡೆ ಅವರು ಕ್ರೀಡಾ ಲೋಕದಲ್ಲಿ ಅಪರೂಪದ ದಾಖಲೆ ಮಾಡಿದ್ದಾರೆ. ಈ ಬಗ್ಗೆ ಲೇಖಕ, ಡಾ ಅಜಿತ್‌ ಹರೀಶಿ ಅವರು ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಬಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

Read Full Story

09:22 PM (IST) Feb 25

ಪರದೆಯ ಮೇಲೆ ಮುದ್ದಾದ ಸಂಸಾರ, ಜೀವನದಲ್ಲಿ ಮದುವೆಗೂ ಮುನ್ನವೇ ಸಹಜೀವನ - ಲಿವ್‌ ಇನ್‌ನಲ್ಲಿದ್ದ ಸೆಲೆಬ್ರಿಟಿಗಳು

ಸೆಲೆಬ್ರಿಟಿಗಳ ವಿವಾವ ಸಿಕ್ಕಾಪಟ್ಟೆ ಸೌಂಡ್‌ ಮಾಡುವುದು. ಅದರಲ್ಲಿಯೂ ಕೆಲ ಸೆಲೆಬ್ರಿಟಿಗಳು ಒಂದು, ಎರಡು, ಮೂರು ಮದುವೆ ಆಗುತ್ತಾರೆ. ಇನ್ನೂ ಕೆಲವರು ಡಿವೋರ್ಸ್‌ ತಗೊಂಡು, ಸಿಂಗಲ್‌ ಆಗಿಯೇ ಉಳಿದವರು ಕೂಡ ಇದ್ದಾರೆ. ಇನ್ನೂ ಕೆಲವರು ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದಾರೆ. 

Read Full Story

09:22 PM (IST) Feb 25

ಬೆಂಗಳೂರಿಗರಿಗೆ ಸಿಹಿ ಸುದ್ದಿ - ಶೀಘ್ರವೇ 'ಗುಲಾಬಿ ಮೆಟ್ರೋ' ಸಂಚಾರ ಮುಕ್ತ; BMRCL ಎಂಡಿ ಜೆ. ರವಿಶಂಕರ್ ಪರಿಶೀಲನೆ

ಬೆಂಗಳೂರಿನ 'ನಮ್ಮ ಮೆಟ್ರೋ' ಗುಲಾಬಿ ಮಾರ್ಗವು ಅಂತಿಮ ಹಂತ ತಲುಪಿದ್ದು, 2026ರ ವೇಳೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗುವ ನಿರೀಕ್ಷೆಯಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದ ಕಾಮಗಾರಿಯನ್ನು BMRCL ಎಂಡಿ ರವಿಶಂಕರ್ ಪರಿಶೀಲಿಸಿದರು.

Read Full Story

09:16 PM (IST) Feb 25

ಸಿಎಂ, ಸಚಿವಸ್ಥಾನ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತ - ಸಂಸದ ಯದುವೀರ್ ಒಡೆಯರ್

ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಸರ್ಕಾರದ ಆಂತರಿಕ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಡಗಿನ ಕರ್ತೋಜಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

Read Full Story

08:42 PM (IST) Feb 25

ಪ್ರೀತಿಯಲ್ಲಿ ಮೋಸ ಹೋದೆ; ರಾಜಾರೋಷವಾಗಿ ಬ್ರೇಕಪ್‌ ಹೇಳಿಕೊಂಡಿದ್ದ ಕನ್ನಡ ಕಿರುತೆರೆ ನಟಿಯರಿವರು!

Sandalwood Actress Love Marriage News: ಕನ್ನಡದ ಕೆಲ ನಟಿಯರು ಬ್ರೇಕಪ್‌ ಮಾಡಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ಪ್ರೀತಿ ಅನುಭವ ಆಗಿರುತ್ತದೆ, ಹಾಗೆಯೇ ಬ್ರೇಕಪ್‌ ಕೂಡ ಆಗಿದೆ ಎಂದು ನಟಿಯರು ಮಾಧ್ಯಮದ ಮುಂದೆ ಕೂಡ ಹೇಳಿದ್ದುಂಟು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

Read Full Story

08:33 PM (IST) Feb 25

ಕೊನೆಗೂ ಬೀದಿಗೆ ಬಿದ್ದ ಅಂಬಾನಿ, 3800 ಕೋಟಿ ರೂಪಾಯಿ ಮೌಲ್ಯದ Abode ಮನೆ ಸೀಜ್‌ ಮಾಡಿದ ED!

ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಮುಂಬೈನ 'ಅಬೋಡ್' ನಿವಾಸವನ್ನು ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ.

Read Full Story

08:15 PM (IST) Feb 25

ವಿದ್ಯಾರ್ಥಿಗಳ ಬೇಸಿಗೆ ರಜಾ ಮಜಾ ಕಟ್‌ ಮಾಡದಂತೆ ಕರ್ನಾಟಕದ ಶಾಲೆಗಳಿಗೆ CBSE ಖಡಕ್‌ ಸೂಚನೆ!

ಬೆಂಗಳೂರಿನ ಸಿಬಿಎಸ್‌ಇ ಶಾಲೆಗಳು ಏಪ್ರಿಲ್ 1 ರ ಮೊದಲು 10 ಮತ್ತು 12 ನೇ ತರಗತಿಗಳನ್ನು ಪ್ರಾರಂಭಿಸಬಾರದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಿಸಿದೆ. ವಿದ್ಯಾರ್ಥಿಗಳ ಆತಂಕ ಮತ್ತು ಬಳಲಿಕೆಯನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.

Read Full Story

08:14 PM (IST) Feb 25

Urdu Invitation Row - ನಾವು ಯಾರನ್ನೂ ಓಲೈಕೆ ಮಾಡೋಲ್ಲ, ಪ್ರತಿಭಟನೆ ಮಾಡೋದು ವಿಪಕ್ಶಗಳ ಚಾಳಿ ಎಂದ ಸಿಎಂ

ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆ ಬಳಸಿದ್ದಕ್ಕೆ ವಿಪಕ್ಷಗಳು ಮತ್ತು ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಆರೋಪಗಳನ್ನು ತಳ್ಳಿಹಾಕಿದ್ದು, ತಾವು ಯಾರನ್ನೂ ಓಲೈಕೆ ಮಾಡುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Read Full Story

07:52 PM (IST) Feb 25

Bhagyalakshmi - ಕೊನೆಗೂ ಹೀಗೆ ಆಗೋಯ್ತಾ? ಆದಿ ಬಿಟ್ಟು ತಾಂಡವ್​ ಜೊತೆಗೇ ಬಂದುಬಿಟ್ಟಳಾ ಭಾಗ್ಯ?

ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ತಾಂಡವ್ ಬದಲಾದವನಂತೆ ಮರಳಿ ಬಂದಿದ್ದು, ಭಾಗ್ಯಳನ್ನು ಕ್ಷಮಿಸುವಂತೆ ಕೇಳುತ್ತಿದ್ದಾನೆ. ಭಾಗ್ಯ ಆಕಸ್ಮಿಕವಾಗಿ ತಾಂಡವ್‌ಗೆ ಸಹಾಯ ಮಾಡಿದ್ದು ಆದಿಗೆ ಆಘಾತ ನೀಡಿದೆ. ಇವರಿಬ್ಬರು ಒಂದಾಗುತ್ತಾರೆ ಎಂಬ ಗುಂಡಣ್ಣನ ಪೋಸ್ಟ್ ಅಭಿಮಾನಿಗಳಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.
Read Full Story

07:35 PM (IST) Feb 25

Kunigal hotel fire - ಹೆದ್ದಾರಿ ಬದಿಯ ಹೋಟೆಲ್‌ಗೆ ಬೆಂಕಿ, ನೋಡನೋಡುತ್ತಿದ್ದಂತೆ ಇಡೀ ಕಟ್ಟಡವೇ ಸುಟ್ಟು ಕರಕಲು!

ತುಮಕೂರು ಜಿಲ್ಲೆಯ ಕುಣಿಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿರುವ 'ತಾಜ್ ದರ್ಬಾರ್' ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವೆಂದು ಶಂಕಿಸಲಾಗಿದೆ.

Read Full Story

07:34 PM (IST) Feb 25

ಇಂದು ಮಧ್ಯರಾತ್ರಿಯಿಂದಲೇ ಮದ್ಯ ಮಾರಾಟ ನಿಷೇಧ; ಜಿಲ್ಲಾಧಿಕಾರಿ ಆದೇಶ, ಪೊಲೀಸರಿಂದ ಹೈ-ಅಲರ್ಟ್!

ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲೆಸೆತವನ್ನು ಖಂಡಿಸಿ, ಹಿಂದೂ ಸಂಘಟನೆಗಳು ಫೆಬ್ರವರಿ 26ರಂದು ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ, ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Read Full Story

07:33 PM (IST) Feb 25

ಪಂಚಗಂಗಾ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುವ ಕರಾವಳಿಗರಿಗೆ ಗುಡ್‌ನ್ಯೂಸ್‌ ನೀಡಿದ ರೈಲ್ವೇಸ್‌!

ಬೆಂಗಳೂರು-ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಳವಡಿಸಲಾದ ಐದು ಹೆಚ್ಚುವರಿ ಬೋಗಿಗಳ ಸೇವೆಯನ್ನು ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ಮೇ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಬದಲಾವಣೆಯಿಂದಾಗಿ ರೈಲು ಒಟ್ಟು 19 ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

Read Full Story

07:22 PM (IST) Feb 25

ಗಿಫ್ಟ್ ಡೀಡ್ ಮಾಡಿದ್ದ ಅತ್ತೆಯನ್ನೇ ಅಳಿಯ ಮನೆಯಿಂದ ಹೊರಹಾಕಿದ, ಗೃಹ ಬಂಧನದಲ್ಲಿದ್ದ ವಯೋವೃದ್ಧೆಗೆ ಆಸರೆ ಅಡಿಯಲ್ಲಿ ಸಿಕ್ಕಿದ ನ್ಯಾಯ

ರಾಮನಗರ ಪೊಲೀಸ್ ಇಲಾಖೆಯ 'ಆಸರೆ' ಯೋಜನೆಯು ನಿರ್ಲಕ್ಷ್ಯ ಮತ್ತು ದೌರ್ಜನ್ಯಕ್ಕೊಳಗಾದ ಹಿರಿಯ ನಾಗರಿಕರು ಮತ್ತು ಒಂಟಿ ಮಹಿಳೆಯರಿಗೆ ಆಸರೆಯಾಗಿದೆ. ಗೃಹಬಂಧನದಲ್ಲಿದ್ದ ತಾಯಿ ಹಾಗೂ ಅಳಿಯನಿಂದ ಮನೆಯಿಂದ ಹೊರಹಾಕಲ್ಪಟ್ಟ ಅತ್ತೆಯಂತಹ ಪ್ರಕರಣಗಳಲ್ಲಿ ಈ ಯೋಜನೆ ನ್ಯಾಯ ಒದಗಿಸಿದೆ. 

Read Full Story

06:48 PM (IST) Feb 25

ಕರಾವಳಿಯ ಬದಲಾಗುತ್ತಿರುವ ಚಿತ್ರಣ - ಬೆಂಗಳೂರು ಬಿಟ್ಟು ಬ್ಯಾಕ್ ಟು ಊರು, ಐಟಿ ಹಬ್‌ ಆಗಿ ಬದಲಾಗ್ತಿರುವ ಮಂಗಳೂರು!

ಕೋಮು ರಾಜಕೀಯದಿಂದ ಕಂಗೆಟ್ಟಿದ್ದ ಮಂಗಳೂರು-ಉಡುಪಿ ವಲಯವು ಈಗ 'ಭಾರತದ ಸಿಲಿಕಾನ್ ಬೀಚ್' ಆಗಿ ರೂಪುಗೊಳ್ಳುತ್ತಿದೆ. ಸರ್ಕಾರದ 'ಬಿಯಾಂಡ್ ಬೆಂಗಳೂರು' ಯೋಜನೆ, ವರ್ಕ್ ಫ್ರಮ್ ಹೋಮ್ ಪರಿಣಾಮ ಮತ್ತು ಸ್ಥಳೀಯ ಉದ್ಯಮಶೀಲತೆಯಿಂದಾಗಿ ಐಟಿ ಆದಾಯ ಮತ್ತು ಉದ್ಯೋಗಾವಕಾಶಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.

Read Full Story

06:43 PM (IST) Feb 25

Mallikarjuna Mutya - ಅಪ್ರಾಪ್ತ ಬಾಲಕಿಯ ಅಪ್ಪಿಕೊಂಡು ಮುದ್ದಾಟ, ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಮೇಲೆ ಬಿತ್ತು ಕೇಸ್‌!

ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಅವರು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
Read Full Story

06:16 PM (IST) Feb 25

ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ - ರೂಪೇಶ್‌ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮಕ್ಕೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ವಿವಿಧ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

Read Full Story

05:51 PM (IST) Feb 25

ಜನಪ್ರಿಯ ಡಿಜಿಟಲ್‌ ಗೋಲ್ಡ್‌ ಸೇವಿಂಗ್ಸ್‌ ಸ್ಟಾರ್ಟ್‌ಅಪ್‌ Jar ಮೇಲೆ ಕರ್ನಾಟಕ ಸಿಐಡಿ ಅಧಿಕಾರಿಗಳ ದಾಳಿ!

ಬೆಂಗಳೂರಿನ ಜನಪ್ರಿಯ ಡಿಜಿಟಲ್ ಚಿನ್ನದ ಹೂಡಿಕೆ ವೇದಿಕೆ 'ಜಾರ್' ಕಚೇರಿಯ ಮೇಲೆ ಸಿಐಡಿ ದಾಳಿ ನಡೆಸಿದೆ. ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ (BUDS) ಉಲ್ಲಂಘನೆಯ ಆರೋಪದ ಮೇಲೆ ಈ ತನಿಖೆ ನಡೆಯುತ್ತಿದೆ.

Read Full Story

05:42 PM (IST) Feb 25

ಐಷಾರಾಮಿ ಹೋಟೆಲ್‌ಗಿಂತಲೂ ಚಂದ ಈ ರೈಲ್ವೆ ಸ್ಟೇಷನ್ ವಾಸ್ತವ್ಯ! ನೀಲಗಿರಿ ತಪ್ಪಲಿನಲ್ಲಿ 'ರಾಜಮನೆತನದ' ಅನುಭವ!

ಯುನೆಸ್ಕೋ ಪಾರಂಪರಿಕ ತಾಣವಾದ ನೀಲಗಿರಿ ಮೌಂಟೇನ್ ರೈಲ್ವೆಯ ಭಾಗವಾಗಿರುವ ಕೂನೂರು ರೈಲ್ವೆ ನಿಲ್ದಾಣ ಈಗ ಪ್ರವಾಸಿಗರಿಗೆ ವಿಶೇಷ ವಾಸ್ತವ್ಯದ ಅನುಭವ ನೀಡುತ್ತಿದೆ. ಇಲ್ಲಿನ ಬ್ರಿಟಿಷ್ ಕಾಲದ ರಿಟೈರಿಂಗ್ ರೂಮ್‌ಗಳನ್ನು ನವೀಕರಿಸಿ, ಪ್ರಕೃತಿಯ ಮಡಿಲಲ್ಲಿ ಕಡಿಮೆ ದರದಲ್ಲಿ ಉಳಿದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

Read Full Story

05:16 PM (IST) Feb 25

ಮೈಸೂರು ರಸ್ತೆ ಟ್ರಾಫಿಕ್‌ಗೆ ಬ್ರೇಕ್, ನೈಸ್ ರಸ್ತೆ ಸಂಪರ್ಕಿಸುವ ರಸ್ತೆ ಶೀಘ್ರ ಓಪನ್, ಮಾಹಿತಿ ಕೊಟ್ಟ ಅಶೋಕ್ ಖೇಣಿ

ಬೆಂಗಳೂರಿನ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿ ಬಳಿಯ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ಲಿಂಕ್ ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿದೆ. ಈ ರಸ್ತೆ ಸಂಚಾರಕ್ಕೆ ಮುಕ್ತವಾದರೆ, ಮೈಸೂರು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.

Read Full Story

04:47 PM (IST) Feb 25

ಸಿಜೆ ರಾಯ್ ಹಾದಿಯಲ್ಲಿ ಮತ್ತೊಂದು ಬಲಿ - ಇಡಿ ದಾಳಿ ಭೀತಿಯಿಂದ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್ ಆತ್ಮ*ಹತ್ಯೆ!

ಇಡಿ ವಿಚಾರಣೆಗೆ ಹಾಜರಾಗಬೇಕಿದ್ದ ದಿನವೇ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ತಮ್ಮ ಕೋರಮಂಗಲ ನಿವಾಸದಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಇಡಿ ದಾಳಿಯ ನಂತರ ಅವರು ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. 

Read Full Story

04:29 PM (IST) Feb 25

ವರನಟ ಡಾ. ರಾಜ್ ಅಪಹರಣ ಪ್ರಕರಣ, ಬರೋಬ್ಬರಿ 25 ವರ್ಷಗಳ 9 ಆರೋಪಿಗಳನ್ನು ಆರೋಪಮುಕ್ತಗೊಳಿಸಿದ ಮದ್ರಾಸ್ ಹೈಕೋರ್ಟ್!

ವರನಟ ಡಾ.ರಾಜ್ ಕುಮಾರ್‌ರನ್ನು ವೀರಪ್ಪನ್ ಅಪಹರಿಸಿದ ಪ್ರಕರಣದಲ್ಲಿ, 25 ವರ್ಷಗಳ ಬಳಿಕ ಮದ್ರಾಸ್ ಹೈಕೋರ್ಟ್ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದ ಹೈಕೋರ್ಟ್, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಆರೋಪಮುಕ್ತಗೊಳಿಸಿದೆ.
Read Full Story

04:26 PM (IST) Feb 25

ಸೇಬು ಹಣ್ಣು ತಿನ್ನೋದೊಂದೇ ಅಲ್ಲ, ಬಲು ಅಪರೂಪದ ಅಡುಗೆ ಹೇಳಿಕೊಟ್ಟ 'ಬೆಳದಿಂಗಳ ಬಾಲೆ' Suman Nagarkar

ಬೆಳದಿಂಗಳ ಬಾಲೆ ಸುಮನ್‌ ನಗರ್ಕರ್‌ ಅವರು ಸದ್ಯ ವಿದೇಶದಲ್ಲಿದ್ದಾರೆ. ಫಿಟ್‌ನೆಸ್‌ ಎಂದು ಸದಾ ಆಕ್ಟಿವ್‌ ಆಗಿರುವ ಅವರು ಸೇಬು ಹಣ್ಣಿನಿಂದ ಮಾಡುವ ಗೊಜ್ಜು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗಾದರೆ ಹೇಗೆ ಮಾಡುವುದು ನೋಡಿ…

 

Read Full Story

04:23 PM (IST) Feb 25

Viral Video - ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕನಿಂದ ಕರ್ನಾಟಕ ಪ್ಲೇಯರ್‌ಗೆ ಡಿಚ್ಚಿ!

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡದ ಪರಾಸ್ ಡೋಗ್ರಾ ಕರ್ನಾಟಕದ ಫೀಲ್ಡರ್‌ಗೆ ತಲೆಯಿಂದ ಗುದ್ದಿ ವಿವಾದ ಸೃಷ್ಟಿಸಿದ್ದಾರೆ. ಈ ಘಟನೆಯಿಂದ ಕೆರಳಿದ ಕೆ.ಎಲ್. ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಡೋಗ್ರಾ ವಿರುದ್ಧ ವಾಗ್ದಾಳಿ ನಡೆಸಿದರು. 

Read Full Story

03:58 PM (IST) Feb 25

ಮಹಿಳೆ ಜೊತೆ ಫ್ಲರ್ಟ್‌ ಮಾಡಿದ ಸಾನಿಯಾ ಮಿರ್ಜಾ ಮಾಜಿ ಪತಿ; 3ನೇ ಮದುವೆ ಮುರಿದಿದ್ರೆ ಸಾಕು ಎಂದ ನೆಟ್ಟಿಗರು

ಸಾನಿಯಾ ಮಿರ್ಜಾ ಮಾಜಿ ಪತಿ ಶೋಯೆಬ್‌ ಮಲಿಕ್‌ ಅವರು ಫೆಬ್ರವರಿ 26ರಂದು ಪಾಕಿಸ್ತಾನಿ ನಟಿಯ ಜೊತೆ 4ನೇ ಮದುವೆ ಆಗಲಿದ್ದಾರೆ ಎನ್ನಲಾಗಿತ್ತು.  ಆ ಬಳಿಕ ಆ ನಟಿ ಬೇರೆ ಹುಡುಗನ ಜೊತೆ ಮದುವೆ ಆದರು. ಈಗ ಮಹಿಳೆ ಜೊತೆ ಫ್ಲರ್ಟ್‌ ಮಾಡಿರೋ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

 

Read Full Story

03:48 PM (IST) Feb 25

ಬೆಂಗಳೂರಿನ ಜಲಸಂಕಟ - ನಗರದ ಪ್ರಮುಖ ಪ್ರದೇಶಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್!

ಫೆಬ್ರವರಿ 26 ರಂದು ಬೆಂಗಳೂರಿನ ಹಲವು ಬಡಾವಣೆಗಳಲ್ಲಿ 24 ಗಂಟೆಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿ 5ನೇ ಹಂತದ ಕಾಮಗಾರಿಯಿಂದಾಗಿ ಈ ಸ್ಥಗಿತ ಅನಿವಾರ್ಯವಾಗಿದ್ದು, ಇದೇ ದಿನ ಜಲಮಂಡಳಿಯು ಸಾರ್ವಜನಿಕರ ಕುಂದುಕೊರತೆಗಳಿಗಾಗಿ 'ನೀರಿನ ಅದಾಲತ್' ಆಯೋಜಿಸಿದೆ.
Read Full Story

03:41 PM (IST) Feb 25

ಮನಿ ಪ್ಲಾಂಟ್ ನಿಂದ ದುಡ್ಡು ಬರುತ್ತೋ ಬಿಡುತ್ತೋ ಬಿಟ್ಟಾಕಿ, ಮಲಗುವ ಕೋಣೆಯಲ್ಲಿ 5 ಅಡಿ ದೂರದಲ್ಲಿಟ್ರೆ ಮಾತ್ರ....!

ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಸಕಾರಾತ್ಮಕ ಶಕ್ತಿ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ. ಈ ಸಸ್ಯವನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು, ಹಾಸಿಗೆಯಿಂದ ದೂರವಿಡುವುದು ಮತ್ತು ಒಣಗದಂತೆ ನೋಡಿಕೊಳ್ಳುವುದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.
Read Full Story

02:15 PM (IST) Feb 25

ಜೈಲಿಗೆ ಬಂದ ಆರೋಗ್ಯ ಸಚಿವ! ಕೇಸ್​ನಲ್ಲಿ ಫಿಕ್ಸ್​- ಭ್ರಷ್ಟ ರಾಜಕಾರಣಿಗಳ ಬಟಾ ಬಯಲು ಮಾಡ್ತಿದ್ಯಾ Karna Serial?

ಜೀ ಕನ್ನಡದ 'ಕರ್ಣ' ಧಾರಾವಾಹಿಯ ಕೆಲವ ದೃಶ್ಯಗಳು ಸದ್ದು ಮಾಡುತ್ತಿದೆ. ಅವಧಿ ಮೀರಿದ ಮಾತ್ರೆಗಳ ಪ್ರಕರಣದಲ್ಲಿ ಜೈಲು ಸೇರಿರುವ ಕರ್ಣನ ವಿರುದ್ಧ ಆರೋಗ್ಯ ಸಚಿವರೇ ಪಿತೂರಿ ನಡೆಸಿ, ಆತನನ್ನು ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Read Full Story

01:59 PM (IST) Feb 25

ನಲ್ಲಿಮೂಳೆ ಸ್ಟಾರ್​​​​​ ವಿರುದ್ದ ತಿರುಗಿಬಿದ್ದ ರಘು? ಗಿಲ್ಲಿಯನ್ನ ಫ್ರೆಂಡ್ಸ್​ ಗ್ರೂಪ್​​​ ನಿಂದ ಹೊರಗಿಟ್ಟ ರಘು..!

ಬಿಗ್‌ ಬಾಸ್​ ಸೀಸನ್​​ 12ರ ವಿನ್ನರ್​ ಗಿಲ್ಲಿ, ದೊಡ್ಮನೆಯಲ್ಲಿ ಸಂಪಾದಿಸಿದ್ದ ಸ್ನೇಹವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಆಪ್ತ ಸ್ನೇಹಿತನಾಗಿದ್ದ ರಘು, ಇದೀಗ ಇನ್‌ಸ್ಟಾಗ್ರಾಂನಲ್ಲಿ ಗಿಲ್ಲಿಯನ್ನು ಅನ್‌ಫಾಲೋ ಮಾಡುವ ಮೂಲಕ ತಮ್ಮ ಸ್ನೇಹದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ.
Read Full Story

01:54 PM (IST) Feb 25

Rashmika Mandanna, Vijay Deverakonda ವಿವಾಹವಾಗುತ್ತಿರುವ ಲಕ್ಸುರಿ ರೆಸಾರ್ಟ್‌ ಬಾಡಿಗೆ ಎಷ್ಟು ? ಗೆಸ್ಟ್‌ಗಳ್ಯಾರು?

ರಶ್ಮಿಕಾ ಮಂದಣ್ಣ - ವಿಜಯ ದೇವರಕೊಂಡ ವಿವಾಹ ನಾಳೆ (ಫೆ.26) ವಿಧ್ಯುಕ್ತವಾಗಿ ರಾಜಸ್ಥಾನದ ಉದಯಪುರದ ಅರಾವಳಿ ಬೆಟ್ಟದ ತಪ್ಪಲಿನಲ್ಲಿರುವ ಐಟಿಸಿ ಮೆಮೆಂಟೋ ಲಕ್ಸುರಿ ರೆಸಾರ್ಟ್‌ನಲ್ಲಿ ನಡೆಯಲಿದೆ. ಈ ರೆಸಾರ್ಟ್ ಅನ್ನು ಸಂಪೂರ್ಣವಾಗಿ ಬುಕ್ ಮಾಡಲಾಗಿದ್ದು, ಒಂದು ದಿನಕ್ಕೆ ಸುಮಾರು ರೂ.2 ಕೋಟಿ ಬಾಡಿಗೆ ಇರಲಿದೆ.

Read Full Story

01:41 PM (IST) Feb 25

ಬೆಂಗಳೂರು ಟ್ರಾಫಿಕ್ ಪೊಲೀಸರಿಂದಲೇ ಕ್ಷಮೆ ಕೇಳಿಸಿದ ಮಹಿಳೆ! ಸರ್ಕಾರಿ ಡ್ಯೂಟಿ ಮಾಡಿದ್ದೇ ತಪ್ಪಾಯ್ತಾ?

ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಚೆಕ್ ವೇಳೆ ಮಹಿಳೆಯೊಬ್ಬರು ಹೈಡ್ರಾಮಾ ಸೃಷ್ಟಿಸಿ, ಪೊಲೀಸರಿಂದಲೇ 'ಸಾರಿ' ಕೇಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

 

Read Full Story

01:38 PM (IST) Feb 25

ಹಾಸನ ಪಾಲಿಕೆಯಲ್ಲಿ ಅಧಿಕಾರಿ ದುರ್ವರ್ತನೆ, ಕಮಿಷನರ್ ಸಿಸಿಟಿವಿ ಹಾಕಿಸಿದ್ದಕ್ಕೆ ಮುರಿದು ಹಾಕುವಂತೆ ನೌಕರನಿಗೆ ಅವಾಜ್!

ಹಾಸನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಪಾರದರ್ಶಕತೆಗಾಗಿ ಸಿಸಿಟಿವಿ ಅಳವಡಿಸಿದ್ದಕ್ಕೆ ಮ್ಯಾನೇಜರ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಸಿಬ್ಬಂದಿಯೊಂದಿಗೆ ದುರ್ವರ್ತನೆ ತೋರಿ, ಕ್ಯಾಮೆರಾವನ್ನು ಮುರಿಯಲು ಯತ್ನಿಸಿದ ಘಟನೆ ನಡೆದಿದೆ.  

Read Full Story

01:30 PM (IST) Feb 25

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಇದು ಪಕ್ಷದ ಕಾರ್ಯಕರ್ತರ ಬಯಕೆಯಾಗಿದ್ದು, ಅವರ ಆದೇಶವೇ ಅಂತಿಮ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Read Full Story

01:21 PM (IST) Feb 25

ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ಕೇಳ್ತಿದ್ದಂತೆ ಸಿಟ್ಟಾದ ರಿಷಬ್‌ ಶೆಟ್ಟಿ; ಕನ್ನಡದಲ್ಲಿ 11 ಜನರಿಗಷ್ಟೇ ಆಹ್ವಾನ

Rashmika Mandanna Vijay Deverakonda: ಅಂತೂ ಇಂತೂ ಕರ್ನಾಟಕದ ಸ್ಟಾರ್‌ಗಳಿಗೆ ರಶ್ಮಿಕಾ ಮಂದಣ್ಣ, ವಿಜಯ್‌ ದೇವರಕೊಂಡ ಅವರು ಮದುವೆಯ ಆಹ್ವಾನ ಪತ್ರಿಕೆ ತಲುಪಿದೆ. ಕನ್ನಡದಲ್ಲೇ ಸಿನಿಮಾ ಆರಂಭಿಸಿದ ರಶ್ಮಿಕಾ ಮಂದಣ್ಣ, ಬೇರೆ ಭಾಷೆಯಲ್ಲಿ ಹೆಸರು ಮಾಡಿದರು. ಈಗ ತೆಲುಗು ನಟನನ್ನು ಮದುವೆ ಆಗುತ್ತಿದ್ದಾರೆ.

Read Full Story

01:08 PM (IST) Feb 25

ಈ ಸಾಫ್ಟ್​ವೇರ್​ ಎಂಜಿನಿಯರ್​ಗೆ ಅತಿಮಾನುಷ ಶಕ್ತಿ ಬಂದಿದ್ಹೇಗೆ? Naa Ninna Bidalaare ಶಂಭು ವಿಡಿಯೋ ವೈರಲ್​

'ನಾ ನಿನ್ನ ಬಿಡಲಾರೆ' ಧಾರಾವಾಹಿಯ ನಿಗೂಢ ಶಂಭು ಪಾತ್ರಧಾರಿ ಸಂತೋಷ್ ಕರ್ಕಿ, ನಿಜ ಜೀವನದಲ್ಲಿ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಅವರ ಅಸಲಿ ರೂಪದಲ್ಲಿ ಅವರನ್ನು ಗುರುತಿಸುವುದು ಕಷ್ಟ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಇವರು 'ಗರುಡ ಪುರಾಣ' ಚಿತ್ರದಲ್ಲೂ ನಟಿಸಿದ್ದಾರೆ.
Read Full Story

More Trending News