Published : Jun 25, 2026, 07:02 AM ISTUpdated : Jun 25, 2026, 11:35 PM IST

Karnataka News Live: ಬೆಂಗಳೂರು ಸುರಂಗ ಮಾರ್ಗ ಯೋಜನೆಗೆ ಅದಾನಿ ಕಂಪನಿಯಿಂದ ‘ಮಹಾ’ ಬಿಡ್!; ಮೂಲ ಅಂದಾಜು ದರಕ್ಕಿಂತ ಶೇ. 96 ರಷ್ಟು ದುಬಾರಿ!

ಸಾರಾಂಶ

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಇಂದು ನಡೆಯಲಿದೆ. ಕ್ರಸ್ಟ್‌ಗೇಟ್‌ ನಿರ್ಮಾಣದ ಹಿನ್ನೆಲೆ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ 12 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಸಿಗಲಿದೆ. ಕರ್ನಾಟಕ, ಅಂಧ್ರಪ್ರದೇಶ ಮತ್ತು ತೆಲಂಗಾಣ ಸಿಎಂ ಅವರಿಂದ ಲೋಕಾರ್ಪಣೆ ಮಾಡಲಾಗುತ್ತದೆ. 57.8 ಕೋಟಿ ವೆಚ್ಚದಲ್ಲಿ 33 ಕ್ರಸ್ಟ್‌ಗೇಟ್ ಗಳನ್ನು ಆಧುನೀಕರಿಸಲಾಗಿದೆ. ಕ್ರಸ್ಟ್‌ ಗೇಟ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ತು ಮತ್ತು ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಅವರು ಒಂದೇ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಕರ್ನಾಟಕ ರಾಜ್ಯ ರಾಜಕೀಯ ಸೇರಿದಂತೆ ಇಂದಿನ ಕ್ಷಣ ಕ್ಷಣದ ಸುದ್ದಿ ಅಪ್‌ಡೇಟ್ ಇಲ್ಲಿದೆ.

DK Shivakuamar Tunnel Road

11:35 PM (IST) Jun 25

ಬೆಂಗಳೂರು ಸುರಂಗ ಮಾರ್ಗ ಯೋಜನೆಗೆ ಅದಾನಿ ಕಂಪನಿಯಿಂದ ‘ಮಹಾ’ ಬಿಡ್!; ಮೂಲ ಅಂದಾಜು ದರಕ್ಕಿಂತ ಶೇ. 96 ರಷ್ಟು ದುಬಾರಿ!

ಬೆಂಗಳೂರಿನ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಗೆ ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿರುವ ಬಿಡ್ ಮೊತ್ತವು ಮೂಲ ಅಂದಾಜಿಗಿಂತ ಶೇ. 96ರಷ್ಟು ಹೆಚ್ಚಾಗಿದೆ ಎಂಬುದು ಬಹಿರಂಗವಾಗಿದೆ. ಈ ಭಾರೀ ವೆಚ್ಚದಿಂದಾಗಿ ಸಾರ್ವಜನಿಕರ ಮೇಲೆ 40 ವರ್ಷಗಳ ಕಾಲ ಟೋಲ್ ಹೊರೆ ಬೀಳುವ ಸಾಧ್ಯತೆಯಿದೆ.

Read Full Story

09:46 PM (IST) Jun 25

ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿಗೆ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನ!; ಪ್ರತಿಷ್ಠಿತ ಸಂಸ್ಥೆಗೆ ಒಲಿದ ದೊಡ್ಡ ಗೌರವ!

ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜಿಗೆ ಕೇಂದ್ರ ಶಿಕ್ಷಣ ಸಚಿವಾಲಯವು 'ಡೀಮ್ಡ್ ವಿಶ್ವವಿದ್ಯಾಲಯ' ಸ್ಥಾನಮಾನವನ್ನು ನೀಡಿದೆ. ಯುಜಿಸಿ ಶಿಫಾರಸಿನ ಮೇರೆಗೆ ಈ ಮಾನ್ಯತೆ ದೊರೆತಿದ್ದು, 'ವಿಕಸಿತ್ ಭಾರತ್ 2047' ಗುರಿಯೊಂದಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದಾಗಿ ಸಂಸ್ಥೆ ಘೋಷಿಸಿದೆ.
Read Full Story

08:06 PM (IST) Jun 25

Vaishak Death- Krishi Thapanda - ವೈಶಾಕ್ ಸಾವಿನ ಹಿನ್ನೆಲೆಯಲ್ಲಿ ಸುದ್ದಿಯಾಗಿರೋ ನಟಿ ಕೃಷಿ ತಾಪಂಡ ನಟಿಸಿದ ಸಿನಿಮಾಗಳು ಇವು!

ವೈಶಾಖ್ ಸಾವಿನ ಸುದ್ದಿಯಲ್ಲಿ ನಂಟು ಹೊಂದಿರುವ ಕೃಷಿ ತಾಪಂಡ ಕನ್ನಡದ ಯಾವ ಸಿನಿಮಾದಲ್ಲಿ ನಟಿಸಿದ್ದರು ಎಂದು ಕೇಳುವವರ ಸಂಖ್ಯೆ ದೊಡ್ಡದಿದೆ. ಅವರಿಗೂ ಸೇರಿದಂತೆ ನಟಿ ಕೃಷಿ ತಾಪಂಡ ವೃತ್ತಿಜೀವನದ ಆರಂಭ, ನಟಿಸಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ, ನೋಡಿ..

Read Full Story

06:33 PM (IST) Jun 25

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ!; ನಟಿ ರನ್ಯಾ ರಾವ್ ಕುರಿತ ಯತ್ನಾಳ್ ಅಶ್ಲೀಲ ಹೇಳಿಕೆಗೆ ಹೈಕೋರ್ಟ್ ತೀವ್ರ ತರಾಟೆ!

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕ್ಷಮೆಯಿಂದ ತಪ್ಪನ್ನು ಅಳಿಸಲಾಗದು ಕೋರ್ಟ್‌ ಹೇಳಿದೆ.

Read Full Story

06:14 PM (IST) Jun 25

Viashak Death - ವೈಶಾಖ್ ಪತ್ನಿ ಬಿಚ್ಚಿಟ್ಟ ಸ್ಫೋಟಕ ಸತ್ಯಗಳು- ಮಾತು ಬಿಟ್ಟಿದ್ದರು; ಮೆಸೇಜ್ ಮಾಡುತ್ತಿದ್ದರು; ನಿನ್ನೆ ಲಾಸ್ಟ್ ಮೆಸೇಜ್ ಇದು..!

ಸದ್ಯಕ್ಕೆ ಪೊಲೀಸರು ಮೇಘಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಈ 'ತ್ರಿಕೋನ ಪ್ರೇಮ ಕಥೆ' ಅಥವಾ 'ಕೌಟುಂಬಿಕ ಕಲಹ' ವೈಶಾಕ್ ಅವರನ್ನು ಸಾವಿನ ದವಡೆಗೆ ತಳ್ಳಿತೇ ಎಂಬ ಆಯಾಮದಲ್ಲಿ ತನಿಖೆ ಮುಂದುವರಿಸಿದ್ದಾರೆ. ಮದುವೆಯಾದ 14 ವರ್ಷದ ನಂತರ ವೈಶಾಖ್ ತೆಗೆದುಕೊಂಡ ಈ ನಿರ್ಧಾರ ಇಡೀ ಕುಟುಂಬವನ್ನು ಅನಾಥವಾಗಿಸಿದೆ.

Read Full Story

05:47 PM (IST) Jun 25

ವೈಶಾಕ್ ಅಂತಿಮ ದರ್ಶನಕ್ಕೆ ಸ್ಮಶಾನಕ್ಕೆ ಓಡೋಡಿ ಬಂದ ನಟಿ ಕೃಷಿ ತಾಪಾಂಡ, ಮೃತದೇಹ ನೋಡಲು ಅವಕಾಶ ನೀಡದ ಕುಟುಂಬಸ್ಥರು

ನಟಿ ಕೃಷಿ ತಾಪಾಂಡ ಅವರ ಆಪ್ತ ಸ್ನೇಹಿತ ವೈಶಾಕ್ ಉಪಾಧ್ಯಾಯ (45) ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ಮೇಘಾ ನೀಡಿದ ದೂರಿನಲ್ಲಿ ನಟಿಯ ಹೆಸರನ್ನು ಉಲ್ಲೇಖಿಸಿದ್ದು, ಅಂತ್ಯಕ್ರಿಯೆ ವೇಳೆ ನಟಿಗೆ ಅಂತಿಮ ದರ್ಶನ ಪಡೆಯಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

Read Full Story

05:33 PM (IST) Jun 25

ಕುಡ್ಲಕ್ಕೆ ಬಂದ ಕಿಂಗ್ ಖಾನ್.. ಮಂಗಳೂರಿನಲ್ಲಿ 'ಬಾದ್‌ಶಾ' ಶಾರುಖ್ ಹವಾ; ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡು!

ಮಂಗಳೂರಿನಲ್ಲಿ ಶಾರುಖ್ ಹವಾ ಜೋರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಿಂಗ್ ಖಾನ್ ಅವರ ಫೋಟೋಗಳು ಮತ್ತು ವಿಡಿಯೋಗಳು ಸಖತ್ ವೈರಲ್ ಆಗುತ್ತಿವೆ. ಕರಾವಳಿ ಜನತೆಗೆ ಇದೊಂದು ಮರೆಯಲಾಗದ 'ಮೆಗಾ' ಸಂಜೆಯಾಗಲಿದೆ ಎನ್ನಲಾಗುತ್ತಿದೆ!

Read Full Story

05:27 PM (IST) Jun 25

ಹೊಸ ತಲೆಮಾರಿನ ಉದ್ಯಮಗಳ 'ರಾಜಧಾನಿ' ನಮ್ಮ ಬೆಂಗಳೂರು!; ದೇಶದ ಟಾಪ್ 7 ಅತೀ ಕಿರಿಯ High-Value ಕಂಪನಿಗಳಿಗೆ ಸಿಲಿಕಾನ್ ಸಿಟಿ ಮನೆ!

'2025ರ ಬರ್ಗುಂಡಿ ಪ್ರೈವೇಟ್ ಹುರುನ್ ಇಂಡಿಯಾ 500' ಪಟ್ಟಿಯ ಪ್ರಕಾರ, ಬೆಂಗಳೂರು ಭಾರತದ ಅತ್ಯಂತ ಕಿರಿಯ ಮತ್ತು ಮೌಲ್ಯಯುತ ನವೋದ್ಯಮಗಳ ಕೇಂದ್ರವಾಗಿ ಹೊರಹೊಮ್ಮಿದೆ. ಸರ್ವಂ ಎಐ ಮತ್ತು ಜೆಪ್ಟೋ ಸೇರಿದಂತೆ 7 ಯುವ ಕಂಪನಿಗಳು ಇಲ್ಲಿ ನೆಲೆಸಿದೆ.

Read Full Story

04:27 PM (IST) Jun 25

Bengaluru ಟೋಲ್ ಮುಕ್ತ ಹೆದ್ದಾರಿ - 631ಕೋಟಿ ವೆಚ್ಚ, 100ಮೀ ಅಗಲ, 10ಲೇನ್‌ಗಳ SM Krishna Road ಜೂ.27ಕ್ಕೆ ಲೋಕಾರ್ಪಣೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ  ನಿರ್ಮಿಸಿರುವ 'ಮೇಜರ್‌ ಆರ್ಟೀರಿಯಲ್‌ ರಸ್ತೆ' ಜೂನ್ 27ರಂದು ಲೋಕಾರ್ಪಣೆಗೊಳ್ಳಲಿದೆ. 'ಎಸ್‌.ಎಂ.ಕೃಷ್ಣ ರಸ್ತೆ' ಎಂದು ನಾಮಕರಣಗೊಂಡಿರುವ ಈ ಟೋಲ್-ಮುಕ್ತ ಹೆದ್ದಾರಿಯು, ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆಯನ್ನು ಸಂಪರ್ಕಿಸಿ, ಸಂಚಾರ ದಟ್ಟಣೆ ಕಡಿಮೆಗೊಳಿಸುತ್ತದೆ

Read Full Story

03:10 PM (IST) Jun 25

TB Dam inauguration - 'ನನಗೆ ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತಾಡ್ತಿದ್ದೆ..' ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರ ಸಿಎಂ

ತುಂಗಭದ್ರಾ ಜಲಾಶಯದ 33 ಹೊಸ ಕ್ರೆಸ್ಟ್ ಗೇಟ್‌ಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳು ಭಾಗವಹಿಸಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಕನ್ನಡದಲ್ಲಿ ಭಾಷಣ ಆರಂಭಿಸಿ ಎಲ್ಲರ ಗಮನ ಸೆಳೆದರು.
Read Full Story

02:08 PM (IST) Jun 25

ತವರಿನಿಂದ ಪತ್ನಿಯನ್ನು ಕರೆದೊಯ್ದ ಅಳಿಯನ ವಿರುದ್ಧವೇ ಕಿಡ್ನಾಪ್ ಕೇಸ್‌! ವಿಚಿತ್ರ ಪ್ರಕರಣಕ್ಕೆ ಹೈಕೋರ್ಟ್ ತಡೆ

ಮಗಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಕ್ಕೆ ಅಳಿಯನ ವಿರುದ್ಧ ಅತ್ತೆ ದಾಖಲಿಸಿದ್ದ ಅಪಹರಣ ಮತ್ತು ಅತಿಕ್ರಮ ಪ್ರವೇಶ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪತಿ-ಪತ್ನಿ ಒಟ್ಟಿಗೆ ವಾಸಿಸುತ್ತಿರುವುದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಗೆ ತಡೆ ನೀಡಿ, ದೂರುದಾರ ಅತ್ತೆಗೆ ನೋಟಿಸ್ ಜಾರಿ ಮಾಡಿದೆ.
Read Full Story

01:20 PM (IST) Jun 25

ಕರ್ನಾಟಕ ಮಾವು ಬೆಳೆಗಾರರಿಗೆ ಸಹಾಯಧನ ಘೋಷಿಸಿದ ಕೇಂದ್ರ, ಜೋಶಿ ಮನವಿಗೆ ಸ್ಪಂದಿಸಿದ ಕೃಷಿ ಸಚಿವ

ಮಾವಿನ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ. ಸಚಿವ ಪ್ರಹ್ಲಾದ್ ಜೋಶಿ ಮಾಡಿದ್ದ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು ಪ್ರತಿ ಕ್ವಿಂಟಾಲ್‌ಗೆ 1,750 ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

 

Read Full Story

01:19 PM (IST) Jun 25

ಸಾವಿಗೂ ಮುನ್ನ ಗೆಳತಿಗೆ ವೈಶಾಕ್ ಉಪಾಧ್ಯಾಯ ಕೊನೆ ಮೆಸೇಜ್ ಏನಾಗಿತ್ತು? ಕುಕ್ಕೆ ಸುಬ್ರಮಣ್ಯಕ್ಕೆ ಹೋಗೋಣ ಎಂದಿದ್ದ ನಟಿ ಕೃಷಿ ತಾಪಂಡ

ಉದ್ಯಮಿ ವೈಶಾಕ್ ಉಪಾಧ್ಯಾಯ, ನಟಿ ಕೃಷಿ ತಾಪಂಡ ಅವರ ಆರ್.ಆರ್. ನಗರದ ಫ್ಲಾಟ್‌ನಲ್ಲಿ ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ 'ಬದುಕಲು ಇಷ್ಟವಿಲ್ಲ' ಎಂದು ವೈಶಾಕ್ ಕೃಷಿಗೆ ಸಂದೇಶ ಕಳುಹಿಸಿದ್ದು, ಕೌಟುಂಬಿಕ ಕಲಹ ಮತ್ತು ಹಿಂದಿನ ಕ್ರಿಮಿನಲ್ ಪ್ರಕರಣದಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬುದು ತಿಳಿದುಬಂದಿದೆ. ಈ ಘಟನೆ ನಡೆದಾಗ ಕೃಷಿ ಅವರು ಕ್ಷೇಮವನದಲ್ಲಿದ್ದರು.

Read Full Story

12:38 PM (IST) Jun 25

ವೈಶಾಕ್‌ಗೆ ಮದುವೆ ಆಗಿ 14 ವರ್ಷದ ಮಗನಿದ್ದ; ಆದ್ರೂ ನಟಿ ಕೃಷಿ ತಾಪಾಂಡ ಮನೆಗೆ ಬರುತ್ತಿದ್ದನೇಕೆ? ಬಿಗ್‌ ಟ್ವಿಸ್ಟ್‌ ಕೊಟ್ಟ ಆ ಒಂದು ಸುಳಿವು!

ವೈಶಾಕ್ ಒಬ್ಬ ಯಶಸ್ವಿ ಉದ್ಯಮಿ. ಕಾರು, ಆಟೋಮೊಬೈಲ್ ಮತ್ತು ಗ್ಯಾರೇಜ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಅವರಿಗೆ ಮದುವೆಯಾಗಿ 15 ವರ್ಷಗಳಾಗಿತ್ತು. ಅಷ್ಟೇ ಅಲ್ಲದೆ, 14 ವರ್ಷದ ಒಬ್ಬ ಮಗನೂ ಇದ್ದಾನೆ. ಎಲ್ಲವೂ ಸರಿಯಾಗಿಯೇ ಇತ್ತು ಎನ್ನುವಾಗಲೇ ಹೀಗೇಕೆ ಆಯ್ತು?

Read Full Story

12:32 PM (IST) Jun 25

'ಅವನಿಗೆ ಗೋ ಬ್ಯಾಕ್ ಅಂತಿದ್ದೆ..' ಬಸವ ತಾಲಿಬಾನ್‌ಗಳೆಂಬ ಹೇಳಿಕೆಗೆ ಕನ್ಹೇರಿ ಸ್ವಾಮೀಜಿ ವಿರುದ್ಧ ಬಾಣೂರು ಚನ್ನಪ್ಪ ಕಿಡಿ!

ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕನ್ನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಚಿಕ್ಕಮಗಳೂರಿನಲ್ಲಿ ನಿವೃತ್ತ ಉಪನ್ಯಾಸಕ ಬಾಣೂರು ಚನ್ನಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

Read Full Story

12:30 PM (IST) Jun 25

ಮನೆಯಲ್ಲಿ ಕೃಷಿ ತಾಪಂಡ ಇರದ ವೇಳೆ ಬಂದ ಗೆಳೆಯ ಸಾವು, ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ನಟಿ ಹೋಗಿದ್ದೆಲ್ಲಿಗೆ?

ಉದ್ಯಮಿ ವೈಶಾಕ್, ನಟಿ ಕೃಷಿ ತಾಪಂಡ ಅವರ ಆರ್.ಆರ್. ನಗರದ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಮತ್ತು 7 ಕೋಟಿ ರೂಪಾಯಿ ಬೆದರಿಕೆ ಪ್ರಕರಣದಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಅವರು, ಸಾವಿಗೂ ಮುನ್ನ ನಟಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Read Full Story

12:11 PM (IST) Jun 25

ಮುಸ್ಲಿಮರ ಓಲೈಕೆಗೆ ಕಾಂಗ್ರೆಸ್‌ನಿಂದ RSS ಟಾರ್ಗೆಟ್‌ - ಶಾಸಕ ಆರಗ ಜ್ಞಾನೇಂದ್ರ

ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು, ಮುಸ್ಲಿಂ ವೋಟಿಗಾಗಿ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಅನ್ನು ಟೀಕಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ದೇಶಭಕ್ತರನ್ನು ನಿರ್ಮಿಸುವ ಸಂಘಟನೆ ಎಂದ ಅವರು, ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆಯೂ ಪ್ರಸ್ತಾಪಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಖಚಿತ ಎಂದು ಹೇಳಿದ್ದಾರೆ.
Read Full Story

11:59 AM (IST) Jun 25

ಕೃಷಿ ತಾಪಂಡ ಬದುಕಿನಲ್ಲಿ ಏನಾಗುತ್ತಿದೆ? ಬದುಕಲು ಬಿಡಿ ಎಂದು ಕಣ್ಣೀರಿಟ್ಟಿದ್ದ ನಟಿಗೆ ಗೆಳೆಯನ ಸಾವಿನ ಶಾಕ್

ನಟಿ ಕೃಷಿ ತಾಪಂಡ ಮನೆಯಲ್ಲಿ ಲೀವ್ ಇನ್ ಗೆಳೆಯ ವೈಶಾಖ್ ದುರಂತ ಅಂತ್ಯ ಕಂಡ ಘಟನೆ ಇದೀಗ ನಟಿ ಬದುಕಿಗೆ ಮತ್ತೊಂದು ಶಾಕ್ ಕೊಟ್ಟಿದೆ. ನನ್ನನ್ನು ಬದುಕಲು ಬಿಡಿ ಎಂದು ಕಣ್ಣೀರಿಟ್ಟಿದ್ದ ನಟಿ ಬದುಕಲ್ಲಿ ಏನಾಗುತ್ತಿದೆ?

Read Full Story

11:43 AM (IST) Jun 25

ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ - ಮೂರು ರಾಜ್ಯ, ಮೂವರು ಮುಖ್ಯಮಂತ್ರಿಗಳು, ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ!

ತುಂಗಭದ್ರಾ ಜಲಾಶಯ(TB Dam)ದ 33 ಗೇಟ್‌ಗಳ ಲೋಕಾರ್ಪಣೆ(Inauguration) ಕಾರ್ಯಕ್ರಮ ಇಂದು (ಜೂ.25,ಗುರುವಾರ) ಟಿಬಿ ಡ್ಯಾಂ(TB Dam) ಹಾಗೂ ಸಾರ್ವಜನಿಕ ಸಮಾರಂಭ ಮುನಿರಾಬಾದಿನ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದ್ದು,  ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ.

 

Read Full Story

11:21 AM (IST) Jun 25

ಚಿನ್ನದ ಬೆಲೆಯಲ್ಲಿ ಇಂದು ಮತ್ತೊಮ್ಮೆ ಮಹಾ ಪತನ; 10 ಗ್ರಾಮ್ Gold Rate 2,780 ರುಪಾಯಿ ಕುಸಿತ! ಬೆಳ್ಳಿ ಇನ್ನಷ್ಟು ಅಗ್ಗ

Gold Rate Today ಆಷಾಢ ಮಾಸ ಹತ್ತಿರವಾಗುತ್ತಿರುವ ಹೊತ್ತಿನಲ್ಲೇ ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಮಹಾ ಕುಸಿತ ಮುಂದುವರೆದಿದೆ. ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಮಹಾ ಕುಸಿತವಾಗಿದೆ. ಬೆಂಗಳೂರಿನಲ್ಲಿ ಜೂನ್ 25ರಂದು ಚಿನ್ನದ ಬೆಲೆ ಎಷ್ಟಿದೆ ನೋಡೋಣ ಬನ್ನಿ.

Read Full Story

11:09 AM (IST) Jun 25

ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಸಾವಿಗೆ ಶರಣು! ಈ ಹಿಂದೆ ಉದ್ಯಮಿಗೆ ದಮ್ಕಿ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸ್ಯಾಂಡಲ್‌ವುಡ್ ನಟಿಯೊಬ್ಬರ ಆಪ್ತ ಗೆಳೆಯ ವೈಶಾಕ್, ನಟಿಯ ಅಪಾರ್ಟ್‌ಮೆಂಟ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದ ವೈಶಾಕ್ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದೆ.
Read Full Story

10:10 AM (IST) Jun 25

ಪಾಕಿಸ್ತಾನಕ್ಕೆ ನಂಬರ್ ಹೇಗೆ ಸಿಕ್ಕಿತೋ ಗೊತ್ತಿಲ್ಲ, ಏನಾಗಿದೆ ಗೊತ್ತಿಲ್ಲ, ಶಂಕಿತ ಉಗ್ರ ಸುಹೇಲ್ ಸಹೋದರ

ದಾವಣೆಗೆರೆಯಲ್ಲಿ ಶಂಕಿತ ಉಗ್ರ ಸುಹೇಲ್ ಬಂಧನ ಜನರಲ್ಲಿ ಆತಂಕ ಹೆಚ್ಚಿಸಿದೆ. ದಾವಣಗೆರೆಯಲ್ಲಿ ಕುಳಿತು ಪಾಕಿಸ್ತಾನ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಆರೋಪದಡಿ ಸುಹೇಲ್ ಬಂಧನವಾಗಿದೆ. ಇದರ ಬೆನ್ನಲ್ಲೇ ಆತನ ನಂಬರ್ ಪಾಕಿಸ್ತಾನದ ಗ್ರೂಪ್‌ಗಳಲ್ಲಿ ಹೇಗೆ ಬಂತೋ ಗೊತ್ತಿಲ್ಲ ಎಂದ ಸಹೋದರ ಹೇಳಿದ್ದಾನೆ.

 

Read Full Story

08:53 AM (IST) Jun 25

ಶಿವಮೊಗ್ಗದಲ್ಲಿ ವಿಮಾನ ಪ್ರಯಾಣಿಕರ ಪರದಾಟ, ಕೊನೆ ಕ್ಷಣದಲ್ಲಿ ತಿರುಪತಿ ವಿಮಾನ ರದ್ದುಗೊಳಿಸಿದ ಏರ್‌ಲೈನ್ಸ್

ಶಿವಮೊಗ್ಗದಿಂದ ತಿರುಪತಿಗೆ ಹೊರಡಬೇಕಿದ್ದ ವಿಮಾನ ಆರಂಭದಲ್ಲಿ ವಿಳಂಬ ಎಂದು ಬಳಿಕ ರದ್ದುಗೊಳಿಸಿದ ಘಟನೆ ನಡದಿದೆ. ಪರಿಣಾಮ ತಿರುಪತಿ ದರ್ಶನ ಟಿಕೆಟ್ ಪಡೆದು ಕಾಯುತ್ತಿದ್ದ ಭಕ್ತರು ತೀವ್ರ ಪರದಾಡುವಂತಾಗಿದೆ.

Read Full Story

08:31 AM (IST) Jun 25

ಹೃದಯಾಘಾತಕ್ಕೆ ಕುಸಿದು ಬಿದ್ದು ಮೃತಪಟ್ಟ ರಾಯಚೂರಿನ 37ರ ಹರೆಯದ ಪೊಲೀಸ್ ಪೇದೆ

ಕೆಲಸದ ವೇಳೆ ತೀವ್ರ ಎದೆನೋವು ಹಾಗೂ ಎಡಗೈ ಸೆಳೆತ ಕಾಣಿಸಿಕೊಂಡ ಕಾರಣ ಸ್ಥಳೀಯ ಆಸ್ಪತ್ರೆಗೆ ಕೆರದೊಯ್ಯಲಾಗಿತ್ತು. ಇಂಜೆಕ್ಷನ್‌ಗೆ ಸಿದ್ಧತೆ ನಡೆಸುತ್ತಿದ್ದಂತೆ ಕುಳಿತಿದ್ದ ಪೊಲೀಸ್ ಪೇದೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

Read Full Story

08:19 AM (IST) Jun 25

'ಇಂದಲ್ಲ, ನಾಳೆ ನನ್ನ ಮೇಲೂ ಇ.ಡಿ, ಐಟಿ ದಾಳಿ..' ಕೇಂದ್ರದ ವಿರುದ್ಧ ಪ್ರಿಯಾಂಕ್‌ ಖರ್ಗೆ ಮತ್ತೆ ಕಿಡಿ

ಕೇಂದ್ರ ಸರ್ಕಾರ ರಾಜಕೀಯಕ್ಕಾಗಿ ಇಡಿ, ಐಟಿ ಅವರನ್ನು ತಮ್ಮ ವಿರೋಧಿಗಳ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದ್ದಾರೆ. ಆರೆಸ್ಸೆಸ್ ಪ್ರಶ್ನಿಸಿದ್ದಕ್ಕೆ ನಾಳೆ ನನ್ನ ಮೇಲೂ ಇಡಿ ದಾಳಿ ಆಗಬಹುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜಾರಕಿಹೊಳಿ ಸಂಬಂಧಿ ಮಲೆ ಇಡಿ ದಾಳಿ ಬಗ್ಗೆ ಖರ್ಗೆ ಹೇಳಿದ್ದೇನು?

Read Full Story

08:04 AM (IST) Jun 25

ಪಠ್ಯ ಪುಸ್ತಕಕ್ಕೆ ಕೃಷ್ಣ ಹೆಸರಿಟ್ಟಿದ್ದೇಕೆ? NCERT 6ನೇ ಕ್ಲಾಸ್‌ ಕನ್ನಡ ಪುಸ್ತಕದ ವಿರುದ್ಧ ಆಕ್ರೋಶ

NCERT 6ನೇ ತರಗತಿ ಕನ್ನಡ ಪುಸ್ತಕದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಪಠ್ಯ ಪುಸ್ತಕಕ್ಕೆ ಕೃಷ್ಣ ಎಂದು ಹೆಸರಿಟ್ಟು, ಪುರಾಣ, ಧಾರ್ಮಿಕ ಕತೆಗಳನ್ನು ಹೇಳಲಾಗುತ್ತಿದೆ ಎಂದು ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಏನಿದು ಗಲಾಟೆ?

 

Read Full Story

07:48 AM (IST) Jun 25

Priyank kharge - ಆರ್‌ಎಸ್ಎಸ್‌ ಆದಾಯದ ಕೇಳಿದ್ರೆ ಇವರಿಗೆ ಯಾಕೆ ಉರಿ - ಶೋಭಾ ಕರಂದ್ಲಾಜೆ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಎಸ್‌ಎಸ್‌ ಆದಾಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಿಜೆಪಿ ನಾಯಕರು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತನ್ನನ್ನು 'ಬಲಿತ ದಲಿತ' ಎಂದು ಕರೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸವಾಲು ಹಾಕಿದರು.

Read Full Story

07:34 AM (IST) Jun 25

ಬೆಂಗಳೂರಿಗರಿಗೆ ಗುಡ್ ನ್ಯೂಸ್ ಆಗಸ್ಟ್‌ನಲ್ಲಿ ಪಿಂಕ್ ಲೈನ್ ಮೆಟ್ರೋ ಆರಂಭ, ಟ್ರಾಫಿಕ್ ಕಿರಿಕಿರಿಗೆ ಮುಕ್ತಿ

ಬೆಂಗಳೂರಿಗರಿಗೆ ಮಹತ್ವದ ಗುಡ್ ನ್ಯೂಸ್ ಇದೆ. ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಟೆಸ್ಟಿಂಗ್ ಪೂರ್ಣಗೊಂಡಿದೆ. ಆಗಸ್ಟ್ ತಿಂಗಳಿನಿಂದ ಪಿಂಕ್ ಲೈನ್ ಮೆಟ್ರೋ ಕಾರ್ಯಾರಂಭಗೊಳ್ಳುತ್ತಿದೆ. ಎಲ್ಲಿಂದ ಎಲ್ಲಿವರೆಗೆ ಈ ಮೆಟ್ರೋ ಸೇವೆ ನೀಡಲಿದೆ?

 

Read Full Story

07:03 AM (IST) Jun 25

ತುಂಗಭದ್ರಾ ಡ್ಯಾಂ ಮೇಲೆ ಶಾಸಕರು, ಸಂಸದರಿಗೆ ಮಾತ್ರ ಅವಕಾಶ

ತುಂಗಭದ್ರಾ ಜಲಾಶದ ಕ್ರಸ್ಟ್ ಗೇಟ್ ಲೋಕಾರ್ಪಣೆ ಹಿನ್ನಲೆಯಲ್ಲಿ ಅಹ್ವಾನಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾದಿದೆ. ಉದ್ಘಾಟಕರನ್ನು ಹೊರತುಪಡಿಸಿದರೆ ಶಾಸಕರು ಹಾಗೂ ಸಂಸದರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಒಂದೇ ಸಲ ನಾಲ್ಕು ಗೇಟ್ ಗಳನ್ನ ಒಪನ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ. 1 ಎಸ್ ಪಿ , 2 ಎಎಸ್ಪಿ, 4 ಡಿವೈಎಸ್ಪಿ 14 ಇನ್ಸ್ಪೆಕ್ಟರ್ , 400 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.


More Trending News