LIVE NOW
Published : Mar 25, 2026, 06:23 AM ISTUpdated : Mar 25, 2026, 12:00 PM IST

Karnataka News Live: ವಿಧಾನಸಭೆ - 'ನಮ್ಮ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ, ವಿಪಕ್ಷ ಪ್ರಶ್ನೆಗಳಿಗೆ ಸಿಎಂ ಉತ್ತರ

ಸಾರಾಂಶ

ಇತ್ತೀಚೆಗೆ ವಿಧಾನ ಸಭೆಯಲ್ಲಿ ಅಧಿಕಾರಿಗಳು ಶಾಸಕರ ಪ್ರಶ್ನೆಗೆ ಉತ್ತರ ನೀಡದೆ ಬಾಕಿ ಉಳಿಸಿಕೊಂಡಿದ್ದಕ್ಕೆ ಸ್ಪೀಕ‌ರ್ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತ ಪಡಿಸಿ, ಸಭಾತ್ಯಾಗ ಮಾಡಿದ್ದರು. ಇದೇ ವಿಚಾರ ವಿಧಾನ ಪರಿಷತ್‌ನಲ್ಲೂ ಪುನರಾವರ್ತನೆ ಆಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ. ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಬುಧವಾರದೊಳಗೆ ಉತ್ತರ ನೀಡದಿದ್ದರೆ ಅಂಥ ಅಧಿಕಾರಿ ಗಳ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳ ಲಾಗುವುದು. ಈ ಸಂಬಂಧ ತಾವು ಕೊಡುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಕಟುವಾಗಿ ಹೇಳಿದ್ದಾರೆ.

ಪ್ರಶೋತ್ತರ ಕಲಾಪದ ನಂತರ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಬೋಜೇಗೌಡ ಅವರು ಸದಸ್ಯರು ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡುತ್ತಿಲ್ಲ. ನಿತ್ಯ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದೆ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಸದನವನ್ನು ಅಧಿಕಾರಿಗಳು ಹಗುರವಾಗಿ ತೆಗೆದು ಕೊಂಡಿದ್ದಾರೆ. ಅಧಿವೇಶನ ಮುಗಿಯುತ್ತಾ ಬರುತ್ತಿದ್ದರೂ ಉತ್ತರ ನೀಡಲು 10-15 ದಿನ ಕಾಲಾವಕಾಶ ಕೇಳುತ್ತಿದ್ದಾರೆ. ಎಂದರು.

ಸದಸ್ಯರ ಸ್ವರ ಮಾತಿಗೆ ಸ್ಪಂದಿಸಿದ ಸಭಾಪತಿ ಹೊರಟ್ಟಿ ಅವರು, ಕಲಾಪ ಮುಗಿದ ನಂತರ ಸಭಾನಾಯಕ, ಪ್ರತಿಪಕ್ಷದ ನಾಯಕ, ಎರಡೂ ಕಡೆಯ ಮುಖ್ಯ ಸಚೇತಕರು ತಮ್ಮ ಕಚೇರಿಗೆ ಬಂದು ಎಲ್ಲ ವಿವರವನ್ನು ತಮಗೆ ತಿಳಿಸಬೇಕು. ಉತ್ತರ ನೀಡದ ಅಧಿಕಾರಿಗಳ ವಿರುದ್ಧ  ಕ್ರಮ ಜರುಗಿಸಲಾಗುವುದು ಎಂದರು.

12:00 PM (IST) Mar 25

ವಿಧಾನಸಭೆ - 'ನಮ್ಮ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ, ವಿಪಕ್ಷ ಪ್ರಶ್ನೆಗಳಿಗೆ ಸಿಎಂ ಉತ್ತರ

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಉತ್ತರ ನೀಡಿದರು. ವಿಪಕ್ಷಗಳ 'ಖಾಲಿ ಚೊಂಬು' ಟೀಕೆಗೆ ತಿರುಗೇಟು ನೀಡಿದ ಅವರು, ತಮ್ಮ ಬಜೆಟ್ 'ತುಂಬಿದ ಕೊಡ'ವಿದ್ದಂತೆ ಎಂದು ಸಮರ್ಥಿಸಿಕೊಂಡರು. ಈ ಬಾರಿಯ ಚರ್ಚೆಯಲ್ಲಿ ದಾಖಲೆಯ 50 ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು.
Read Full Story

11:31 AM (IST) Mar 25

ಮಡಿಕೇರಿ ಸಮೀಪ ಕಾಫಿತೋಟದಲ್ಲಿ ಹುಲಿ ಓಡಾಟ - ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

tiger in coffee plantation kodagu: ಮಡಿಕೇರಿ ಸಮೀಪದ ಇಬ್ಬನಿವಳವಾಡಿ ಗ್ರಾಮದ ಕಾಫಿತೋಟವೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಸಿಸಿ ಕ್ಯಾಮರಾದಲ್ಲಿ ಇದರ ದೃಶ್ಯ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯ ಗ್ರಾಮಸ್ಥರು ಮತ್ತು ಕಾರ್ಮಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ.

Read Full Story

11:27 AM (IST) Mar 25

BWSSB ಬೆಂಗಳೂರಿಗರೇ ಎಚ್ಚರ - ಜಲಮಂಡಳಿ ಸದ್ದಿಲ್ಲದೆ ನೀರಿನ ದರ ಏರಿಕೆ, ವಾರ್ಷಿಕ 12% ದರ ಹೆಚ್ಚಳ!

ಬೆಂಗಳೂರು ಜಲಮಂಡಳಿಯು (BWSSB) ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರಿಗೆ ಮಾಹಿತಿ ನೀಡದೆ ಪ್ರತಿ ಮೂರು ತಿಂಗಳಿಗೊಮ್ಮೆ ನೀರಿನ ದರವನ್ನು ಹೆಚ್ಚಿಸುತ್ತಿದೆ. ಈ ವಾರ್ಷಿಕ 12% ರಷ್ಟು ದರ ಏರಿಕೆಯ ಕ್ರಮವನ್ನು ಬಿಜೆಪಿ ಖಂಡಿಸಿದ್ದು, ಈ ಕುರಿತು ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.
Read Full Story

11:22 AM (IST) Mar 25

ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ

ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ ನಡೆದಿದೆ. ಗಣಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದೆ. ಕ್ರೀಡಾಂಗಣ, ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೂಜೆ ಮಾಡಲಾಗಿದೆ.

 

Read Full Story

11:08 AM (IST) Mar 25

ಬಂಗಾರಿ ನಿನ್ಗೆ ಪಾಪಣ್ಣ ಅಲ್ಲ ಪಾಪು ನಾನು, ಮಹಿಳಾ ರೌಡಿ ಶೀಟರ್ ಜೊತೆ ಇನ್ಸ್‌ಪೆಕ್ಟರ್ ಕಾಮಪುರಾಣ

ಬಂಗಾರಿ ನಿನ್ಗೆ ಪಾಪಣ್ಣ ಅಲ್ಲ ಪಾಪು ನಾನು, ಮಹಿಳಾ ರೌಡಿ ಶೀಟರ್ ಜೊತೆ ಇನ್ಸ್‌ಪೆಕ್ಟರ್ ಕಾಮಪುರಾಣ ಬಹಿರಂಗವಾಗಿದೆ. ಆಡಿಯೋ, ವ್ಯಾಟ್ಸಾಪ್ ಮೆಸೇಜ್‌ಗಳು ಇನ್ಸ್‌ಪೆಕ್ಟರ್ ಪಾಪಣ್ಣನ ಕತೆ ಹೇಳುತ್ತಿದೆ.

Read Full Story

10:50 AM (IST) Mar 25

ಬೆಂಗಳೂರಿನ ಭವಿಷ್ಯ ಬರೆಯಲಿದೆಯೇ ₹20,000 ಕೋಟಿ ಬಜೆಟ್, ಮಾ 27, 28 ಎರಡು ದಿನ ಜಿಬಿಎ ಬಜೆಟ್‌ ಮಂಡನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ, ನಗರದ ಐದು ಹೊಸ ನಗರ ಪಾಲಿಕೆಗಳು ಮಾರ್ಚ್ 27 ಮತ್ತು 28 ರಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿವೆ. ಒಟ್ಟು ₹20,000 ಕೋಟಿಗೂ ಅಧಿಕ ಗಾತ್ರದ ಈ ಬಜೆಟ್‌ನಲ್ಲಿ ಮೂಲಸೌಕರ್ಯ, ಸಾರ್ವಜನಿಕ ಸೇವೆಗಳ ಸುಧಾರಣೆ ಮತ್ತು ಮುನ್ಸಿಪಲ್ ಬಾಂಡ್‌ಗಳಂತಹ ಹೊಸ ಆದಾಯ ಮೂಲಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.
Read Full Story

10:40 AM (IST) Mar 25

ಹೊಸಪೇಟೆಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಲಕ್ಷ ಲಕ್ಷ ಪಂಗನಾಮ, ಹಣ ವಿತ್‌ಡ್ರಾ ಮಾಡಲು ಅಪರಿಚಿತರಿಗೆ ಕಾರ್ಡ್ ಕೊಡುವ ಮುನ್ನ ಎಚ್ಚರ!

ಹೊಸಪೇಟೆಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಲು ಅಪರಿಚಿತನ ಸಹಾಯ ಪಡೆದ ವ್ಯಕ್ತಿಯೊಬ್ಬರು ಮೋಸ ಹೋಗಿದ್ದಾರೆ. ಸಹಾಯ ಮಾಡುವ ನೆಪದಲ್ಲಿ ಖದೀಮನು ಎಟಿಎಂ ಕಾರ್ಡ್ ಬದಲಾಯಿಸಿ, ಬೇರೆಡೆ ಹಂತ ಹಂತವಾಗಿ 1.27 ಲಕ್ಷ ರೂಪಾಯಿ ಡ್ರಾ ಮಾಡಿ ವಂಚಿಸಿದ್ದಾನೆ. 

Read Full Story

10:26 AM (IST) Mar 25

ಬೆಂಗಳೂರಿನ ಪೋಲಿ ಪಾಪಣ್ಣ ಇನ್ಸ್‌ಪೆಕ್ಟರ್, ಮಹಿಳಾ ರೌಡಿ ಶೀಟರ್‌ನ್ನೇ ಮಂಚ ಕರೆದ ಆಡಿಯೋ ರಿಲೀಸ್

ಬೆಂಗಳೂರಿನ ಪೋಲಿ ಪಾಪಣ್ಣ ಇನ್ಸ್‌ಪೆಕ್ಟರ್, ಮಹಿಳಾ ರೌಡಿ ಶೀಟರ್‌ನ್ನೇ ಮಂಚ ಕರೆದ ಆಡಿಯೋ ರಿಲೀಸ್ ಆಗಿದೆ. ಮಹಿಳಾ ರೌಡಿ ಶೀಟರ್‌ಗೆ ಮುದ್ದು ಬಂಗಾರಿ, ಚಿನ್ನು ಎಂದು ಕರೆದು ಮನೇಲಿ ಯಾರೂ ಇಲ್ಲ ಬಾ ಎಂದು ಕರೆಯುವ ಆಡಿಯೋ ಬಿಡುಗಡೆಯಾಗಿದೆ.

Read Full Story

10:18 AM (IST) Mar 25

ಬೆಂಗಳೂರಲ್ಲಿ ಸ್ಥಗಿತಗೊಂಡ ಮನೆಮನೆ ಕಸ ಸಂಗ್ರಹಣೆ, ಸಿಬ್ಬಂದಿಗಳ ಅಸಹಕಾರ ಚಳವಳಿ ಪರಿಸ್ಥಿತಿ ಗಂಭೀರ!

ಬೆಂಗಳೂರಿನಲ್ಲಿ ಕಸ ಸಂಗ್ರಹಣೆ ಸಿಬ್ಬಂದಿ ಅಸಹಕಾರ ಚಳುವಳಿಗೆ ಇಳಿದಿದ್ದು, ನಗರದಾದ್ಯಂತ ಕಸದ ರಾಶಿಗಳು ನಿರ್ಮಾಣವಾಗಿವೆ. ಸಂಬಳ ಬಾಕಿ ಮತ್ತು ಅವೈಜ್ಞಾನಿಕ ಕಸ ವಿಂಗಡಣೆ ವ್ಯವಸ್ಥೆಯನ್ನು ವಿರೋಧಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
Read Full Story

09:25 AM (IST) Mar 25

ಬಿಪಿಎಲ್‌ ಕನಿಷ್ಠ ಆದಾಯ ಮಿತಿ ಏರಿಕೆ - ಮುನಿಯಪ್ಪ

ರಾಜ್ಯದಲ್ಲಿ ಬಿಪಿಎಲ್‌ ರೇಷನ್‌ ಕಾರ್ಡ್‌ ನೀಡಲು ನಿಗದಿಗೊಳಿಸಿರುವ ₹1.20 ಲಕ್ಷ ಕನಿಷ್ಠ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಸಂಬಂಧ ಶೀಘ್ರದಲ್ಲೇ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

Read Full Story

09:07 AM (IST) Mar 25

ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ, 17 ಜಿಲ್ಲೆಗಳಿಗೆ ಯೆಲ್ಲೆ ಅಲರ್ಟ್

ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

 

Read Full Story

08:16 AM (IST) Mar 25

ವಾಹನ ಮಾಲೀಕರೇ ಎಚ್ಚರ ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ, ಈ ಬಾರಿ ದಂಡ ದುಬಾರಿ

ವಾಹನ ಮಾಲೀಕರೇ ಎಚ್ಚರ ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ, ಈ ಬಾರಿ ದಂಡ ದುಬಾರಿ, ಎಲ್ಲೆಂದರಲ್ಲಿ ಪಾರ್ಕಿಂಗ್, ನೋ ಪಾರ್ಕಿಂಗ್‌ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ನಿಮ್ಮ ವಾಹನ ಟೋಯಿಂಗ್ ಮಾಡಿ ದುಬಾರಿ ದಂಡ ವಿಧಿಸಲಾಗುತ್ತದೆ.

 

Read Full Story

08:15 AM (IST) Mar 25

ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ರೈಲು, ಒಟ್ಟು 9 ಟ್ರಿಪ್‌, ಕರ್ನಾಟಕದ ಈ ಎಲ್ಲಾ ಜಿಲ್ಲೆಗಳಲ್ಲಿ ಹಾದು ಹೋಗಲಿದೆ!

ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಶ್ರೀಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು (07355/07356) ಏಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 9 ಟ್ರಿಪ್‌ಗಳನ್ನು ಮಾಡಲಿದ್ದು, ಹಾವೇರಿ, ದಾವಣಗೆರೆ, ತುಮಕೂರು, ಸೇಲಂ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲ್ಲಲಿದೆ.
Read Full Story

07:47 AM (IST) Mar 25

15 ನಿಮಿಷದಲ್ಲಿ ಆರ್‌ಸಿಬಿ ಉದ್ಘಟನಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್, ಅಭಿಮಾನಿಗಳ ಆಕ್ರೋಶ

15 ನಿಮಿಷದಲ್ಲಿ ಆರ್‌ಸಿಬಿ ಉದ್ಘಟನಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್, ಅಭಿಮಾನಿಗಳ ಆಕ್ರೋಶ ಹೊರಹಾಕಿದ್ದಾರೆ. ನೆಚ್ಚಿನ ತಂಡದ ಪಂದ್ಯ ನೋಡಲು ಕಾತರಗೊಂಡಿದ್ದ ಸಾವಿರಾರು ಅಭಿಮಾನಿಗಳಿಗೆ ಟಿಕೆಟ್ ಸಿಕ್ಕಿಲ್ಲ.

 

Read Full Story

07:25 AM (IST) Mar 25

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಇಬ್ಬರ ಮೇಲೆ ಅನುಮಾನ

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ರೆಸಾರ್ಟ್‌ನಲ್ಲಿ ಕೆಲಸಕ್ಕಿದ್ದ ಯುವತಿಗೆ ಇಬ್ಬರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದೆ.

 

Read Full Story

06:56 AM (IST) Mar 25

ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆ

ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆಯಾಗಿದೆ. ಉದ್ಯಮಿ ಬಳಿಯಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಸ್ಫೋಟಕ ವರದಿ ಇಲ್ಲಿದೆ.

Read Full Story

More Trending News