Published : May 25, 2026, 05:08 AM ISTUpdated : May 25, 2026, 10:50 PM IST

Karnataka News Live: ಡೀಮ್ಡ್ ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಬದ್ಧ - ಸಚಿವ ಈಶ್ವರ್ ಖಂಡ್ರೆ ಭರವಸೆ

ಸಾರಾಂಶ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಗೆ ಭಾನುವಾರ ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಂಪೂರ್ಣ ದೇವಳದ ಪರಿಸರ ಜಾತ್ರೆಯ ಸಂಭ್ರಮ ನೆನಪಿಸುವಂತಿತ್ತು. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರು ತುಂಬಿದ್ದರು. ಹಲವರು ವಿಶೇಷವಾಗಿ ಆಶ್ಲೇಷಾಬಲಿ, ನಾಗಪ್ರತಿಷ್ಠೆ ಹಾಗೂ ಸರ್ಪಸಂಸ್ಕಾರ ಸೇವೆ ಸಲ್ಲಿಸಿದರು.

ಕಳೆದೊಂದು ತಿಂಗಳಿನಿಂದಲೂ ಕುಕ್ಕೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಕ್ತರ ನಿಯಂತ್ರಣಕ್ಕಾಗಿ ದೇವಸ್ಥಾನದ ಸಿಬ್ಬಂದಿ ಮೆಗಾಫೋನ್ ಬಳಸುತ್ತಿದ್ದಾರೆ.ಥಬೀದಿ ಪಕ್ಕದ ಪ್ರದೇಶ ಸೇರಿದಂತೆ ಕ್ಷೇತ್ರದ ಸುತ್ತಲಿನ ಪಾರ್ಕಿಂಗ್ ಸ್ಥಳಗಳು ಸಂಪೂರ್ಣ ಭರ್ತಿಯಾಗಿದ್ದವು.

10:50 PM (IST) May 25

ಡೀಮ್ಡ್ ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಬದ್ಧ - ಸಚಿವ ಈಶ್ವರ್ ಖಂಡ್ರೆ ಭರವಸೆ

ಅರಣ್ಯ ಪ್ರದೇಶವು ಮೀಸಲು ಅರಣ್ಯ, ವನ್ಯಜೀವಿ ಧಾಮಗಳು, ರಾಷ್ಟ್ರೀಯ ಉದ್ಯಾನಗಳು ಮತ್ತು ನದಿ ಮೂಲಗಳ ಮೂಲಕ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

Read Full Story

09:33 PM (IST) May 25

ರಾಜ್ಯ ಕೈಗಾರಿಕಾ ರಂಗದಲ್ಲಿ ಹೊಸ ಕ್ರಾಂತಿ - ‘ಕ್ವಿನ್ ಸಿಟಿ’ಗೆ ಎಂಟ್ರಿ ಕೊಟ್ಟ ಟೊಯೋಟಾದಿಂದ ₹1,200 ಕೋಟಿ ಬೂಸ್ಟರ್ ಡೋಸ್

ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ಕರ್ನಾಟಕ ಸರ್ಕಾರದ 'ಕ್ವಿನ್ ಸಿಟಿ' ಯೋಜನೆಯಲ್ಲಿ ₹1,200 ಕೋಟಿ ಹೂಡಿಕೆ ಮಾಡಿ 'ಬಿಜ್‌ಇಂಟೆಲ್ ಹಬ್' ಸ್ಥಾಪಿಸಲಿದೆ. ಈ ಒಪ್ಪಂದದ ಅಡಿಯಲ್ಲಿ, ಮುಂದಿನ ಐದು ವರ್ಷಗಳಲ್ಲಿ ಸುಮಾರು 200 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಯೋಜನೆಗೆ 300 ಎಕರೆ ಜಮೀನು ಹಂಚಿಕೆ ಮಾಡಲಾಗಿದೆ.
Read Full Story

08:39 PM (IST) May 25

ಅಯ್ಯೋ ದುರ್ವಿಧಿಯೇ.. ಬೇಸಿಗೆ ರಜೆಗೆ ಬಂದಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು!

ಬೇಸಿಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

Read Full Story

08:20 PM (IST) May 25

Premanand Maharaj - ನಾನಿರಲಿ, ಇಲ್ಲದಿರಲಿ... ಅಂತ ಪ್ರೇಮಾನಂದ ಮಹಾರಾಜ್ ಹೇಳಿದ್ದೇಕೆ? ಭಾವುಕ ಸಂದೇಶ ವೈರಲ್

ವೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ ಮಹಾರಾಜ್ ಅವರ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮ ಭಕ್ತರಿಗೆ ಭಾವುಕ ಮನವಿಯೊಂದನ್ನು ಮಾಡಿದ್ದಾರೆ. ಈ ವಿಡಿಯೋ ಈಗ ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿದೆ.

Read Full Story

08:11 PM (IST) May 25

ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾಲಯ ಸಂಗೀತ-ನೃತ್ಯ ಪರೀಕ್ಷೆ, ಕರಾವಳಿಯಲ್ಲಿ ದಾಖಲೆ ಮಂದಿ ಹಾಜರ್!

ಡಾ. ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾಲಯವು ಕರಾವಳಿ ಜಿಲ್ಲೆಗಳಲ್ಲಿ ನಡೆಸಿದ ಸಂಗೀತ ಮತ್ತು ನೃತ್ಯ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಒಟ್ಟು 3,398 ವಿದ್ಯಾರ್ಥಿಗಳು ಹಾಜರಾಗಿದ್ದು, ಇದು ಕಳೆದ ಬಾರಿಗಿಂತ ದ್ವಿಗುಣವಾಗಿದೆ.
Read Full Story

08:04 PM (IST) May 25

Shocking- Bigg Boss - ಅಯ್ಯೋ, ಬಿಗ್ ಬಾಸ್ ಸ್ಪರ್ಧಿ ಕಾವ್ಯಾ ಶೈವಗೆ ವೇದಿಕೆ ಮೇಲೆಯೇ ಭಾರೀ ಅವಮಾನ; ಅದ್ಯಾಕೆ ಹಾಗೆಲ್ಲಾ ಮಾಡಿದ್ದು?

ಒಬ್ಬ ಸೆಲೆಬ್ರಿಟಿ, ಅದೂ ಒಬ್ಬ ಹೆಣ್ಣುಮಗಳು ಎನ್ನುವ ಕನಿಷ್ಠ ಪ್ರಜ್ಞೆಯೂ ಇಲ್ಲದೆ ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದು ನೋಡಿ ಅಲ್ಲಿದ್ದವರು ಬೆಚ್ಚಿಬಿದ್ದರು. ಸಾವಿರಾರು ಜನರ ಮುಂದೆ ಈ ರೀತಿ ಮಾಡಿದ್ದಕ್ಕೆ ಕಾವ್ಯಾ ಕಣ್ಣೀರು ಹಾಕಿದರು..!

Read Full Story

07:53 PM (IST) May 25

ಈ ಜಿಲ್ಲೆಯಲ್ಲಿ ಈ ವರ್ಷ 80ಕ್ಕೂ ಅಧಿಕ ಸರ್ಕಾರಿ ಶಾಲೆ ಬಂದ್‌? ಕಾರಣವೇನು?

ಜಿಲ್ಲೆಯಲ್ಲಿ ಎಷ್ಟು ಶಾಲೆಗಳನ್ನು ಕೆಪಿಎಸ್‌ ಶಾಲೆಗಳಾಗಿ ಪರಿವರ್ತನೆ ಮಾಡಬಹುದು. ಸಮೀಪದ ಎಷ್ಟು ಶಾಲೆಗಳನ್ನು ಕೆಪಿಎಸ್‌ ಶಾಲೆಗಳಿಗೆ ವಿಲೀನಗೊಳಿಸಬಹುದು ಎಂಬ ಬಗ್ಗೆ ಈಗಾಗಲೇ ನೀಲ ನಕ್ಷೆ ಸಿದ್ಧಪಡಿಸಿ ಕೊಳ್ಳಲಾಗಿದೆ.

Read Full Story

07:33 PM (IST) May 25

ಕೆಆರ್‌ಎಸ್ ಟ್ರಯಲ್ ಬ್ಲಾಸ್ಟ್ ನಡೆಯದಿದ್ದರೂ 1.11 ಕೋಟಿ ರೂ. ಬಿಲ್, ಹಗರಣ ನಡೆದ ಬಗ್ಗೆ ದೊಡ್ಡ ಅನುಮಾನ!

ವರದಿ:ಮಂಡ್ಯ ಮಂಜುನಾಥ

ಕೃಷ್ಣರಾಜಸಾಗರ ಜಲಾಶಯದ ಬಳಿ ಪರೀಕ್ಷಾರ್ಥ ಸ್ಫೋಟ ನಡೆಸದೆಯೇ,ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು 1.11ಕೋಟಿ ರೂ  ಖರ್ಚು ಮಾಡಿರುವುದು ಆಡಿಟ್ ವರದಿಯಿಂದ ಬಹಿರಂಗವಾಗಿದೆ. ಮೂರು ಬಾರಿ ಸ್ಫೋಟಕ್ಕೆ ಯತ್ನ ವಿಫಲವಾದರೂ ಇಷ್ಟು ದೊಡ್ಡ ಮೊತ್ತದ ಖರ್ಚು,ತೆರಿಗೆ ವಂಚನೆ ಅನುಮಾನಗಳಿಗೆ ಕಾರಣ.

Read Full Story

06:50 PM (IST) May 25

ಕಿಚ್ಚ ಸುದೀಪ್ ಅವರನ್ನು ಬೆಳೆಸಿದಂತೆ ನನ್ನನ್ನೂ ಬೆಳೆಸಿ - ಸಂಚಿತ್ ಸಂಜೀವ್ ಮನವಿ ಮಾಡಿದ್ದೇನು?

ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅಭಿನಯದ ಕನ್ನಡ ಚಲನಚಿತ್ರ "ಮ್ಯಾಂಗೋ ಪಚ್ಚ" ಇದೇ ಜೂನ್ 5ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ಹಿನ್ನೆಲೆ ಚಿತ್ರದ ನಾಯಕ ಸಂಚಿತ್ ಸಂಜೀವ್.. 

Read Full Story

06:34 PM (IST) May 25

ಮಾಸಾಶನ ನೀಡಲೂ ಸರ್ಕಾರದ ಬಳಿ ಹಣ ಇಲ್ವಾ? - ಸಂಕಷ್ಟದಲ್ಲಿ ವೃದ್ಧರು, ಅಂಗವಿಕಲರ ಜೀವನ!

ಕಳೆದ ಎರಡು ಮೂರು ತಿಂಗಳಿಂದ ವೃದ್ದರು, ವಿಧವೆಯರು ಹಾಗೂ ಅಂಗವಿಕಲರಿಗೆ ಸರ್ಕಾರದಿಂದ ಮಾಸಾಶನ ಬಿಡುಗಡೆ ಆಗಿಲ್ಲ. ಈ ಹಿನ್ನಲೆ ಮಾಸಾಶನಕ್ಕಾಗಿ ದಿನನಿತ್ಯ ಕೂಡ ಪೋಸ್ಟ್ ಆಫೀಸ್, ಬ್ಯಾಂಕ್ ಗಳಿಗೆ ವೃದ್ದರು ಅಲೆದಾಡುವಂತಾಗಿದೆ.

Read Full Story

06:10 PM (IST) May 25

ಮೈಸೂರಿನಿಂದ ಐತಿಹಾಸಿಕ ರೈಲು ಪಯಣ - ಒಡಿಶಾಗೆ ದೇಶೀಯ ಖನಿಜ ರವಾನೆಯ ಮೊದಲ ರೈಲು ಯಶಸ್ವಿ ಪ್ರಾಯೋಗಿಕ ಚಾಲನೆ!

ಮೈಸೂರಿನ ಕಡಕೋಳ ಕೈಗಾರಿಕಾ ವಲಯದಿಂದ ಒಡಿಶಾಗೆ ಮೊದಲ ಬಾರಿಗೆ ಸರಕು ರೈಲಿನ ಮೂಲಕ 2,200 ಮೆಟ್ರಿಕ್ ಟನ್ 'ಡ್ಯೂನೈಟ್' ಖನಿಜವನ್ನು ಯಶಸ್ವಿಯಾಗಿ ಸಾಗಿಸಲಾಗಿದೆ. ಈ 1,750 ಕಿ.ಮೀ. ದೂರದ ಪ್ರಾಯೋಗಿಕ ಸಾಗಣೆಯು ಮೈಸೂರಿನ ಗಣಿಗಾರಿಕೆ ಮತ್ತು ಲಾಜಿಸ್ಟಿಕ್ಸ್ ವಲಯದಲ್ಲಿ ಹೊಸ ಮೈಲಿಗಲ್ಲಾಗಿದ್ದು, ಪರಿಸರಸ್ನೇಹಿ ಸಾರಿಗೆಗೆ ದಾರಿ ಮಾಡಿಕೊಟ್ಟಿದೆ.
Read Full Story

06:03 PM (IST) May 25

BREAKING - ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಮುಂದಿನ 3 ಗಂಟೆ 'ಯಲ್ಲೋ ಅಲರ್ಟ್'; ಹಾಸನಕ್ಕೆ ಆರೆಂಜ್ ಅಲರ್ಟ್

ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಹಾಸನಕ್ಕೆ 'ಆರೆಂಜ್ ಅಲರ್ಟ್' ಮತ್ತು ಇತರೆ 6 ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.
Read Full Story

05:27 PM (IST) May 25

ಭಟ್ಕಳದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಳಿನಡ ಹೆಕ್ಕುವ ಹವ್ಯಾಸ, ಇದರ ಖಾದ್ಯ ಸಖತ್‌ ಫೇಮಸ್‌!

ಭಟ್ಕಳದ ವೆಂಕಟಾಪುರ ನದಿಯಲ್ಲಿ 'ಕಳಿನಡ' ಚಿಪ್ಪು ಸಂಗ್ರಹಿಸಲು ಹೋದ ಒಂದೇ ಗ್ರಾಮದ 11 ಮಂದಿ, ನೀರಿನ ಮಟ್ಟ ದಿಢೀರ್ ಏರಿಕೆಯಾದ ಕಾರಣ ಮುಳುಗಿ ಸಾವನ್ನಪ್ಪಿದ್ದಾರೆ. ನಾಲಿಗೆಯ ರುಚಿಯ ಹವ್ಯಾಸವೇ ಈ ಮಹಾ ದುರಂತಕ್ಕೆ ಕಾರಣವಾಗಿ, ಇಡೀ ಜಿಲ್ಲೆಯನ್ನೇ ಶೋಕದಲ್ಲಿ ಮುಳುಗಿಸಿದೆ.
Read Full Story

05:24 PM (IST) May 25

ರಕ್ಷಿಸಬೇಕಾದ ಎಪಿಎಂಸಿಗಳಲ್ಲಿಯೇ ರೈತರಿಗೆ ಅನ್ಯಾಯ - ಸಿ.ಟಿ.ರವಿ ಎಚ್ಚರಿಕೆ

ರೈತರನ್ನು ರಕ್ಷಿಸಬೇಕಾದ ಎಪಿಎಂಸಿಯಲ್ಲೇ ರೈತರಿಗೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶಿಸಬೇಕು ಇಲ್ಲವಾದರೆ, ಹೋರಾಟ ಅನಿವಾರ್ಯವಾಗಲಿದೆ ಎಂದು ಸಿ.ಟಿ.ರವಿ ಎಚ್ಚರಿಸಿದ್ದಾರೆ.

Read Full Story

05:14 PM (IST) May 25

ಗದಗದಲ್ಲಿ ಇಂಧನಕ್ಕೆ ಹಾಹಾಕಾರ, ಬಂಕ್‌ಗಳೇ ಖಾಲಿ, ರೈತರು ಮತ್ತು ಸವಾರರ ಕಿಲೋಮೀಟರ್ ಉದ್ದದ ಕ್ಯೂ!

ಗದಗ ಜಿಲ್ಲೆಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ತೀವ್ರಗೊಂಡಿದ್ದು, ಪ್ರಮುಖ ಬಂಕ್‌ಗಳು 'ನೋ ಸ್ಟಾಕ್' ಬೋರ್ಡ್ ಹಾಕಿವೆ. ಮುಂಗಾರು ಹಂಗಾಮಿನ ಹೊತ್ತಲ್ಲಿ ಡೀಸೆಲ್‌ಗಾಗಿ ರೈತರು ಪರದಾಡುತ್ತಿದ್ದು, ಹುಬ್ಬಳ್ಳಿ ಡಿಪೋದಿಂದ ಸರಬರಾಜು ಸ್ಥಗಿತಗೊಂಡಿರುವುದೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗಿದೆ. ಈ ಸಮಸ್ಯೆಯು ನಗರದಿಂದ ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
Read Full Story

05:08 PM (IST) May 25

ವೈಭವ್ ಸೂರ್ಯವಂಶಿ ಗುರಿ ಕೇಳಿ ಬೆಚ್ಚಿಬಿದ್ದ ಪೀಟರ್ಸನ್; ಒಂದು ಚಾನ್ಸ್ ಸಿಕ್ಕರೆ ಟಿ-20ಯಲ್ಲಿ 200 ರನ್ ಹೊಡಿತೇನೆ!

ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ, ಟಿ20 ಪಂದ್ಯವೊಂದರಲ್ಲಿ 200 ರನ್ ಗಳಿಸುವ ಮೂಲಕ ಕ್ರಿಸ್ ಗೇಲ್ ಅವರ 175 ರನ್‌ಗಳ ದಾಖಲೆಯನ್ನು ಮುರಿಯುವ ಮಹತ್ವಾಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಕೆವಿನ್ ಪೀಟರ್ಸನ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಮತ್ತಷ್ಟು ಗುರಿ ರಿವೀಲ್ ಮಾಡಿದ್ದಾರೆ.

Read Full Story

05:05 PM (IST) May 25

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ - ಮೂರಿನ ಕಟ್ಟೆ ವಿವಾದ ತೀವ್ರ, ಮೂರು ದಿನ ನಿಷೇಧಾಜ್ಞೆ, ಮುಂದೇನು?

ಜಿಲ್ಲೆಯ ಭಟ್ಕಳ ಮತ್ತೆ ಹಿಂದು ಮುಸ್ಲಿಂ‌ ಗದ್ದಲ ಗಲಾಟೆಗೆ ಸಾಕ್ಷಿ ಆಗಿದೆ. ಹಿಂದು ಧಾರ್ಮಿಕತೆಯ ಸಂಕೇತವಾದ ಮೂರಿನ ಕಟ್ಟೆ ಮರು ನಿರ್ಮಾಣ ಹಾಗೂ ಮುಸ್ಲಿಮರಿಂದ ಮೂರಿನ ಕಟ್ಟೆ ಧ್ವಂಸ ವಿಚಾರ ಈಗ ತಾರಕಕ್ಕೇರಿದೆ.

Read Full Story

04:42 PM (IST) May 25

ಬೆಂಗಳೂರಿಗರಲ್ಲಿ ಹೆಚ್ಚುತ್ತಿದೆ ಪ್ರೋಟೀನ್ ಕ್ರೇಜ್‌! ಕೇವಲ 'ಪ್ರೋಟೀನ್ ಬಾರ್'ಗಾಗಿಯೇ ₹2 ಲಕ್ಷ ಖರ್ಚು ಮಾಡಿದ ಗ್ರಾಹಕ!

ಇನ್‌ಸ್ಟಾಮಾರ್ಟ್‌ ವರದಿ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಪ್ರೋಟೀನ್ ಉತ್ಪನ್ನಗಳ ಬೇಡಿಕೆ ಶೇ. 150ರಷ್ಟು ಹೆಚ್ಚಾಗಿದೆ. ಬೆಂಗಳೂರು ಮುಂಚೂಣಿಯಲ್ಲಿದ್ದರೂ, ಟಯರ್-2 ನಗರಗಳಲ್ಲಿ ಈ ಬೆಳವಣಿಗೆ ಇನ್ನೂ ವೇಗವಾಗಿದ್ದು, ಗ್ರಾಹಕರು ಲಕ್ಷಾಂತರ ರೂಪಾಯಿಗಳನ್ನು ಪ್ರೋಟೀನ್‌ಗಾಗಿ ಖರ್ಚು ಮಾಡುತ್ತಿದ್ದಾರೆ.
Read Full Story

04:36 PM (IST) May 25

ಬೆಂಗಳೂರಿಗೆ ಆಲಿಕಲ್ಲು ಸಹಿತ ಮಳೆ ಮುನ್ಸೂಚನೆ; ಸಂಜೆ ವೇಳೆ ಬೇಗನೆ ಮನೆ ಸೇರಿಕೊಳ್ಳಿ ಎಂದ ಹವಾಮಾನ ಇಲಾಖೆ!

ನೈಋತ್ಯ ಮುಂಗಾರು ಕರ್ನಾಟಕದತ್ತ ವೇಗವಾಗಿ ಮುನ್ನುಗ್ಗುತ್ತಿದ್ದು, ರಾಜ್ಯಾದ್ಯಂತ ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 27ರಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read Full Story

04:20 PM (IST) May 25

60 ವರ್ಷದ ಇತಿಹಾಸ.. ಓಬೇರಾಯನ ಕಾಲದ ಪ್ರವಾಸಿಮಂದಿರ ಅಧೋಗತಿ - ಸಾರ್ವಜನಿಕರ ಆಕ್ರೋಶ

ನಗರದ ಮಧ್ಯಭಾಗದಲ್ಲಿರುವ ಓಬೇರಾಯನ ಕಾಲದ ಹಳೆ ಪ್ರವಾಸಿ ಮಂದಿರ ಅಧೋಗತಿಯತ್ತ ಸಾಗಿದೆ. ಸುಮಾರು 60 ವರ್ಷಗಳ ಹಳೆಯ ಪ್ರವಾಸಿ ಮಂದಿರಕ್ಕೆ ಮುಕ್ತಿ ಇಲ್ಲದಂತಾಗಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ..

Read Full Story

03:05 PM (IST) May 25

ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ನವೀಕರಣ - ಕರ್ನಾಟಕದಿಂದ 2026-27ರ ಮೂರು ಪ್ರವಾಸ IRCTCಯಿಂದ ಭರ್ಜರಿ ಆಫರ್!

IRCTC ತನ್ನ ಪ್ರಸಿದ್ಧ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್ ಚಾರಿಯಟ್’ ಅನ್ನು 2026-27ರ ಋತುವಿಗಾಗಿ ಸಂಪೂರ್ಣವಾಗಿ ನವೀಕರಿಸಿ ಮರುಚಾಲನೆ ಮಾಡುತ್ತಿದೆ. ಈ ರೈಲು ಆಧುನಿಕ ಸೌಕರ್ಯಗಳೊಂದಿಗೆ ದಕ್ಷಿಣ ಭಾರತದ ಪ್ರಮುಖ ತಾಣಗಳನ್ನು ಒಳಗೊಂಡ 3 ವಿಶೇಷ ಪ್ರವಾಸ ಯೋಜನೆಗಳನ್ನು ನೀಡುತ್ತಿದೆ.

Read Full Story

01:39 PM (IST) May 25

ಹೊಸಕೋಟೆಯಿಂದ ಮಲ್ಲಸಂದ್ರ-ತಿರುಮಲಶೆಟ್ಟಿಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಬಸ್‌ಗೆ ಮನವಿ

ಹೊಸಕೋಟೆಯಿಂದ ಮಲ್ಲಸಂದ್ರ-ತಿರುಮಲಶೆಟ್ಟಿಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಸಂಚರಿಸುತ್ತಿದ್ದ ಎರಡು ಬಿಎಂಟಿಸಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿರುವುದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ, ಬಸ್ ಸಂಚಾರವನ್ನು ಪುನರಾರಂಭಿಸುವಂತೆ ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಶಶಿಕುಮಾರ್ ಅವರು ಬಿಎಂಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
Read Full Story

01:28 PM (IST) May 25

ಮಂತ್ರಾಲಯಕ್ಕೆ ಹೋಗೋ ಭಕ್ತರ ಗಮನಕ್ಕೆ, ಕರ್ನಾಟಕದ ಛತ್ರದಲ್ಲಿ ಬತ್ತಿದ ಬೋರ್‌ವೆಲ್, ನೀರಿನ ಅಭಾವಕ್ಕೆ ವಸತಿಗೃಹ ಬಂದ್!

ಮಂತ್ರಾಲಯದಲ್ಲಿ ಕರ್ನಾಟಕದ ಭಕ್ತರಿಗಾಗಿ ನಿರ್ಮಿಸಲಾದ ಕರ್ನಾಟಕ ಛತ್ರವು ತೀವ್ರ ನೀರಿನ ಅಭಾವದಿಂದಾಗಿ ಮುಚ್ಚಲ್ಪಟ್ಟಿದೆ. ಬೋರ್‌ವೆಲ್‌ಗಳ ವೈಫಲ್ಯ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 50 ಕೋಣೆಗಳ ವಸತಿ ಗೃಹಕ್ಕೆ ಬೀಗ ಹಾಕಲಾಗಿದ್ದು, ರಾಯರ ದರ್ಶನಕ್ಕೆ ಬರುವ ಭಕ್ತರು ವಸತಿ ಸೌಕರ್ಯವಿಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
Read Full Story

01:03 PM (IST) May 25

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರೋ ತಾರಾ ಜೋಡಿ - ವಾರ್ಷಿಕೋತ್ಸವದ ಸಂಭ್ರಮ- ಕ್ಯೂಟ್​ ಫೋಟೋಸ್​

'ಶ್ರೀರಸ್ತು ಶುಭಮಸ್ತು' ಖ್ಯಾತಿಯ ಲಾವಣ್ಯ ಭಾರದ್ವಾಜ್ ಮತ್ತು 'ಅಮೃತಧಾರೆ' ಖ್ಯಾತಿಯ ಶಶಿ ಹೆಗ್ಡೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವದಂದು ಸುದ್ದಿಯನ್ನು ಹಂಚಿಕೊಂಡಿದ್ದು, 'ರಾಜಾ ರಾಣಿ' ಧಾರಾವಾಹಿಯಲ್ಲಿ ಅಣ್ಣ-ತಂಗಿಯಾಗಿ ನಟಿಸಿದ್ದ  ಪ್ರೇಮಕಥೆ ಕುತೂಹಲಕಾರಿಯಾಗಿದೆ.

Read Full Story

01:02 PM (IST) May 25

Bengaluru - ಯುವತಿ ವಿಚಾರವಾಗಿ ಮಹಮ್ಮದ್ ರಫೀಕ್ ಕಿಡ್ನಾಪ್; ಬಟ್ಟೆ ಬಿಚ್ಚಿಸಿ ಹಲ್ಲೆ

ಬೆಂಗಳೂರಿನ ಬಾಗಲೂರಿನಲ್ಲಿ ಯುವತಿ ವಿಚಾರವಾಗಿ ಯುವಕನೊಬ್ಬನನ್ನು ಅಪಹರಿಸಿ ಹಲ್ಲೆ ನಡೆಸಲಾಗಿದೆ. ಹಳೆ ಪ್ರೇಮಿಯ ಸಂಪರ್ಕಕ್ಕೆ ಬಂದಿದ್ದಕ್ಕೆ ಹೊಸ ಪ್ರಿಯಕರ ತನ್ನ ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದು, ಪೊಲೀಸರು ಐವರನ್ನು ಬಂಧಿಸಿದ್ದಾರೆ.
Read Full Story

12:15 PM (IST) May 25

ಎಲ್ಲರಂತಲ್ಲ ನನ್ನ... ಎಂದು ಹಿಂದೆ ಹೋದವಳಿಗೆ ಬೆತ್ತಲು ಮಾಡಿದ! ಹಿಂದೂ ಸಂಘಟನೆಗೆ ಸಿಕ್ಕಿಬಿದ್ದ ಹುಬ್ಬಳ್ಳಿಯವ

ಹುಬ್ಬಳ್ಳಿಯಲ್ಲಿ 'ಲವ್ ಜಿಹಾದ್' ಪ್ರಕರಣಗಳು ಹೆಚ್ಚುತ್ತಿದ್ದು, ಐಷಾರಾಮಿ ಜೀವನದ ಆಮಿಷವೊಡ್ಡಿ ಹಿಂದೂ ಯುವತಿಯರನ್ನು ಬಲೆಗೆ ಬೀಳಿಸಲಾಗುತ್ತಿದೆ. ಮಾದಕ ದ್ರವ್ಯ ನೀಡಿ, ಅಶ್ಲೀಲ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುವ ಜಾಲದ ಬಗ್ಗೆ ಈ ಲೇಖನ ಎಚ್ಚರಿಸುತ್ತದೆ. ಇತ್ತೀಚೆಗೆ ನಡೆದ ಸಾಜಿದ್ ಉಣಕಲ್ ಪ್ರಕರಣವೂ ಸೇರಿದಂತೆ, ಇಂತಹ ಘಟನೆಗಳ ಬಗ್ಗೆ ಪೊಲೀಸರು ಮತ್ತು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡುತ್ತಿವೆ.
Read Full Story

11:40 AM (IST) May 25

Haveri - ಅಕ್ರಮ ಸಂಬಂಧ ಶಂಕೆ; ಅಕ್ಕನ ಕತ್ತು ಸೀಳಿದ ತಮ್ಮ! ಅಂಗನವಾಡಿಯಲ್ಲಿ ಭೀಕರ ಕೊಲೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ, ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಿಂದ ಸ್ವಂತ ತಮ್ಮನೇ ತನ್ನ ಅಕ್ಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯ ಮೇಲೆ ಮಚ್ಚಿನಿಂದ ದಾಳಿ ಮಾಡಿ, ಆಕೆ ಕೆಲಸ ಮಾಡುತ್ತಿದ್ದ ಕೇಂದ್ರದಲ್ಲಿಯೇ ಹತ್ಯೆಗೈದಿದ್ದಾನೆ.
Read Full Story

11:12 AM (IST) May 25

Amruthadhaare ಸೆಟ್​ನಲ್ಲಿ ಮಗ ಗೌತಮ್​ ಜೊತೆ ಲೇಡಿ ವಿಲನ್​ ಶಕುಂತಲಾ ಹೇಗೆ ಇರ್ತಾರೆ ನೋಡಿ

'ಅಮೃತಧಾರೆ' ಧಾರಾವಾಹಿಯಲ್ಲಿ ಖಳನಾಯಕಿ ತಾಯಿ ಶಕುಂತಲಾ ಮತ್ತು ಮಗ ಗೌತಮ್ ಪಾತ್ರಗಳು ಜನಪ್ರಿಯವಾಗಿವೆ. ಆದರೆ ಈ ಪಾತ್ರಗಳನ್ನು ನಿರ್ವಹಿಸುತ್ತಿರುವ ವನಿತಾ ವಾಸು ಮತ್ತು ರಾಜೇಶ್ ನಟರಂಗ ಅವರು ನಿಜ ಜೀವನದಲ್ಲಿ ಉತ್ತಮ ಸ್ನೇಹಿತರಾಗಿದ್ದು, ಈ ಕುರಿತು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Read Full Story

10:44 AM (IST) May 25

Bigg Boss ಜಾಹ್ನವಿ ಈಗ ರಾಜಕಾರಣಿ - ಜೆಡಿಎಸ್​ ಸೇರುತ್ತಲೇ ವಧು ಲುಕ್​ನಲ್ಲಿ ಮಿಂಚಿಂಗ್​- ವಿಡಿಯೋ ವೈರಲ್​

ಬಿಗ್ ಬಾಸ್ ಖ್ಯಾತಿಯ ನಟಿ ಮತ್ತು ನಿರೂಪಕಿ ಜಾಹ್ನವಿ ಇದೀಗ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಅವರು ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈ ಬೆಳವಣಿಗೆಯ ಜೊತೆಗೆ ಅವರ ವಿಡಿಯೋ ವೈರಲ್ ಆಗ್ತಿದೆ.

Read Full Story

10:37 AM (IST) May 25

ಹಗರಿಬೊಮ್ಮನಹಳ್ಳಿ ಜಲಾಶಯಕ್ಕೆ ಜೀವಕಳೆ ತಂದ ಕೃತ್ತಿಕಾ ಮಳೆ; ಗರಿಗೆದರಿದ ಕೃಷಿ ಚಟುವಟಿಕೆಗಳು

ಶನಿವಾರ ರಾತ್ರಿ ಸುರಿದ ಧಾರಾಕಾರ ಕೃತ್ತಿಕಾ ಮಳೆಗೆ ಹಗರಿಬೊಮ್ಮನಹಳ್ಳಿ ಜಲಾಶಯಕ್ಕೆ ನೀರು ಹರಿದು ಬಂದಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಸಜ್ಜೆ ಮತ್ತು ಜೋಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಜಲಾಶಯದ ಗೇಟ್ ಬಳಿ ಉಳಿದಿರುವ ಮಣ್ಣು ಆತಂಕಕ್ಕೆ ಕಾರಣವಾಗಿದೆ.
Read Full Story

10:03 AM (IST) May 25

ಬೇಸಿಗೆಯಲ್ಲಿ ಮೂಲವ್ಯಾಧಿ ಸಮಸ್ಯೆ ಹೆಚ್ಚಾಗಲು ಕಾರಣವೇನು? ಈ ಬಗ್ಗೆ ತಜ್ಞರು ಏನ್ ಹೇಳಿದಾರೆ ನೋಡಿ!

ಮೂಲವ್ಯಾಧಿ ಎನ್ನುವುದು ಮುಚ್ಚಿಡುವ ವಿಷಯವಲ್ಲ. ನೋವು ಅಥವಾ ರಕ್ತಸ್ರಾವ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ನೆನಪಿಡಿ, ನಿರ್ಲಕ್ಷ್ಯ ಮಾಡಿದರೆ ಸಣ್ಣ ಸಮಸ್ಯೆ ದೊಡ್ಡ 'ಆಪರೇಷನ್' ಹಂತಕ್ಕೆ ಹೋಗಬಹುದು. ಈ ಬೇಸಿಗೆಯಲ್ಲಿ ನಿಮ್ಮ ಹೊಟ್ಟೆಯನ್ನು ತಂಪಾಗಿಡಿ, ಮೂಲವ್ಯಾಧಿಯಿಂದ ದೂರವಿರಿ!

Read Full Story

09:47 AM (IST) May 25

'ನನ್ನನ್ನು ಅವರು ಅನ್‌ಬ್ಲಾಕ್ ಮಾಡೋದೇ ಇಲ್ಲ' - ಸನ್‌ರೈಸರ್ಸ್ ಹೈದರಾಬಾದ್ ಜೊತೆಗಿನ ಸಿಟ್ಟು ಬಿಚ್ಚಿಟ್ಟ ಡೇವಿಡ್ ವಾರ್ನರ್

ಸನ್‌ರೈಸರ್ಸ್ ಹೈದರಾಬಾದ್ ತನ್ನನ್ನು ಇನ್‌ಸ್ಟಾಗ್ರಾಂನಲ್ಲಿ ಬ್ಲಾಕ್ ಮಾಡಿದೆ ಎಂದು ಮಾಜಿ ನಾಯಕ ಡೇವಿಡ್ ವಾರ್ನರ್ ಬಹಿರಂಗಪಡಿಸಿದ್ದಾರೆ. ಒಂದು ಕಾಲದಲ್ಲಿ ತಂಡವನ್ನು ಚಾಂಪಿಯನ್ ಮಾಡಿದ್ದ ವಾರ್ನರ್, 2021ರ ಸೀಸನ್‌ನಲ್ಲಿ ಮ್ಯಾನೇಜ್‌ಮೆಂಟ್ ಜೊತೆಗಿನ ಭಿನ್ನಾಭಿಪ್ರಾಯದಿಂದ ತಂಡದಿಂದ ಹೊರಬಿದ್ದಿದ್ದರು. ಈ ಘಟನೆ ಅವರ ಮತ್ತು ಫ್ರಾಂಚೈಸಿ ನಡುವಿನ ಹಳಸಿದ ಸಂಬಂಧವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
Read Full Story

08:53 AM (IST) May 25

ಮುಂದಿನ 7 ದಿನ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ; ಬೆಂಗಳೂರಿನಲ್ಲಿಯೂ ವರುಣನ ಆರ್ಭಟ

ಮುಂದಿನ 7 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಧಾರಾಕಾರ ಮಳೆಯಿಂದ ಪ್ರವಾಸಿಗರಿಗೆ ತೊಂದರೆಯಾಗಿದೆ. ರಾಜ್ಯದ ಹಲವೆಡೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

Read Full Story

08:14 AM (IST) May 25

ಭಟ್ಕಳದ ಮೂರಿನಕಟ್ಟೆ ವಿವಾದ ಹಿನ್ನೆಲೆ 3 ದಿನ ನಿಷೇಧಾಜ್ಞೆ ಜಾರಿ! ಅಷ್ಟಕ್ಕೂ ಮಧ್ಯರಾತ್ರಿ ನಡೆದಿದ್ದೇನು?

ಉತ್ತರ ಕನ್ನಡದ ಭಟ್ಕಳದಲ್ಲಿ 'ಮೂರಿನಕಟ್ಟೆ' ಶ್ರದ್ಧಾಕೇಂದ್ರದ ದ್ವಂಸ ಮತ್ತು ಪುನರ್ ನಿರ್ಮಾಣದ ವಿಚಾರವಾಗಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Read Full Story

07:44 AM (IST) May 25

ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ

ಹೊಸಪೇಟೆಯ ಹಂಪಿಯ ಹಜಾರರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸುತ್ತಿರುವ ಉತ್ಖನನದಲ್ಲಿ, ಮತ್ತೆರಡು ಆಳ್ವರ್ ವಿಗ್ರಹಗಳು, ಬೃಹತ್ ಕಲ್ಲಿನ ಕಾಲುವೆ ಮತ್ತು ಪ್ರಾಣಿಗಳ ಕಲ್ಲಿನ ಚಿತ್ರಗಳು ಪತ್ತೆಯಾಗಿವೆ. ಈ ಹಿಂದೆ ಎರಡು ಆಳ್ವರ್ ವಿಗ್ರಹಗಳು ದೊರೆತಿದ್ದು, ಈ ಪ್ರದೇಶದಲ್ಲಿ ಮತ್ತಷ್ಟು ಐತಿಹಾಸಿಕ ಅವಶೇಷಗಳು ಸಿಗುವ ನಿರೀಕ್ಷೆಯಲ್ಲಿ ಉತ್ಖನನ ಮುಂದುವರೆದಿದೆ.
Read Full Story

07:22 AM (IST) May 25

ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹2.90ಪೈಸೆ ಏರಿಕೆ; 10 ದಿನದಲ್ಲಿ 8 ರೂಪಾಯಿ ಹೆಚ್ಚಳ

ಕಳೆದ ಹತ್ತು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ. ಇಂದಿನ ಭಾರಿ ಏರಿಕೆಯೊಂದಿಗೆ, ಪೆಟ್ರೋಲ್ ದರವು ₹110.99 ಮತ್ತು ಡೀಸೆಲ್ ದರವು ₹98.80 ಕ್ಕೆ ತಲುಪಿದ್ದು, ಗ್ರಾಹಕರಿಗೆ ದೊಡ್ಡ ಹೊರೆಯಾಗಿದೆ.
Read Full Story

06:31 AM (IST) May 25

ಮನೆ ಬಳಿ ಕಾರಲ್ಲಿ ಡ್ರಗ್ಸ್‌ ಸಿಕ್ಕರೆ ಮನೆ ಮಾಲೀಕ ಹೊಣೆ ಅಲ್ಲ - ಕರ್ನಾಟಕ ಹೈಕೋರ್ಟ್

ಮನೆ ಮುಂದೆ ನಿಲ್ಲಿಸಿದ್ದ ಸ್ನೇಹಿತರ ವಾಹನದಲ್ಲಿ ಮಾದಕ ವಸ್ತುಗಳು ಪತ್ತೆಯಾದ ಕಾರಣಕ್ಕೆ ಬಂಧಿತನಾಗಿದ್ದ ಮನೆ ಮಾಲೀಕನಿಗೆ ಹೈಕೋರ್ಟ್ ಜಾಮೀನು ನೀಡಿದೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಅಪರಾಧಕ್ಕೆ ಜಾಗ ನೀಡಿದ್ದಾರೆ ಎಂದು ಮಾಲೀಕನ ವಿರುದ್ಧ ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story

06:21 AM (IST) May 25

Shivamogga - ಮಾಲ್ಗುಡಿ ಡೇಸ್ ಖ್ಯಾತಿಯ ಅರಸಾಳು ರೈಲ್ವೆ ನಿಲ್ದಾಣದ ಕತ್ತಲೆಯ ಕಥೆ

'ಮಾಲ್ಗುಡಿ ಡೇಸ್' ಖ್ಯಾತಿಯ ಅರಸಾಳು ರೈಲ್ವೆ ನಿಲ್ದಾಣವು ಸಂಗ್ರಹಾಲಯವನ್ನು ಹೊಂದಿದ್ದರೂ, ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಶೌಚಾಲಯ, ನೀರು ಮತ್ತು ರಾತ್ರಿ ದೀಪಗಳ ಕೊರತೆಯಿಂದಾಗಿ ನೂರಾರು ಪ್ರಯಾಣಿಕರು ಮತ್ತು ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿಲ್ದಾಣದ ನಿರ್ವಹಣೆ ವಿಫಲವಾಗಿದ್ದು, ಅಧಿಕಾರಿಗಳು ಗಮನಹರಿಸಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
Read Full Story

06:11 AM (IST) May 25

ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಭೇಟಿಯ ಹಿನ್ನೆಲೆಯಲ್ಲಿ, ಎಸ್.ಐ.ಕೋಡಿಹಳ್ಳಿ ಗೇಟ್‌ನಿಂದ ಹಲ್ಲೇಗೆರೆವರೆಗೆ 7.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ 11.4 ಕೋಟಿ ರು. ಅನುದಾನವನ್ನು ಅನುಮೋದಿಸಿದೆ.

Read Full Story

05:52 AM (IST) May 25

Bhatkal - ಅನ್ಯಕೋಮಿನವರಿಂದ ಮುರಿನಕಟ್ಟೆ ಧ್ವಂಸ - ಭಟ್ಕಳ ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ತೆರವುಗೊಳಿಸಲಾಗಿದ್ದ ಭಟ್ಕಳದ ಮುರಿನಕಟ್ಟೆಯನ್ನು ಹಿಂದೂ ಸಂಘಟನೆಗಳು ಪುನರ್ ನಿರ್ಮಿಸಿದ್ದವು. ಆದರೆ, ರಾತ್ರೋರಾತ್ರಿ ಅನ್ಯಕೋಮಿನವರು ಇದನ್ನು ಕೆಡವಿ ಹಾಕಿದ್ದು, ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯು ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story

More Trending News