LIVE NOW
Published : May 25, 2026, 05:08 AM ISTUpdated : May 25, 2026, 07:44 AM IST

Karnataka News Live: ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ

ಸಾರಾಂಶ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಗೆ ಭಾನುವಾರ ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಂಪೂರ್ಣ ದೇವಳದ ಪರಿಸರ ಜಾತ್ರೆಯ ಸಂಭ್ರಮ ನೆನಪಿಸುವಂತಿತ್ತು. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರು ತುಂಬಿದ್ದರು. ಹಲವರು ವಿಶೇಷವಾಗಿ ಆಶ್ಲೇಷಾಬಲಿ, ನಾಗಪ್ರತಿಷ್ಠೆ ಹಾಗೂ ಸರ್ಪಸಂಸ್ಕಾರ ಸೇವೆ ಸಲ್ಲಿಸಿದರು.

ಕಳೆದೊಂದು ತಿಂಗಳಿನಿಂದಲೂ ಕುಕ್ಕೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಕ್ತರ ನಿಯಂತ್ರಣಕ್ಕಾಗಿ ದೇವಸ್ಥಾನದ ಸಿಬ್ಬಂದಿ ಮೆಗಾಫೋನ್ ಬಳಸುತ್ತಿದ್ದಾರೆ.ಥಬೀದಿ ಪಕ್ಕದ ಪ್ರದೇಶ ಸೇರಿದಂತೆ ಕ್ಷೇತ್ರದ ಸುತ್ತಲಿನ ಪಾರ್ಕಿಂಗ್ ಸ್ಥಳಗಳು ಸಂಪೂರ್ಣ ಭರ್ತಿಯಾಗಿದ್ದವು.

07:44 AM (IST) May 25

ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ

ಹೊಸಪೇಟೆಯ ಹಂಪಿಯ ಹಜಾರರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸುತ್ತಿರುವ ಉತ್ಖನನದಲ್ಲಿ, ಮತ್ತೆರಡು ಆಳ್ವರ್ ವಿಗ್ರಹಗಳು, ಬೃಹತ್ ಕಲ್ಲಿನ ಕಾಲುವೆ ಮತ್ತು ಪ್ರಾಣಿಗಳ ಕಲ್ಲಿನ ಚಿತ್ರಗಳು ಪತ್ತೆಯಾಗಿವೆ. ಈ ಹಿಂದೆ ಎರಡು ಆಳ್ವರ್ ವಿಗ್ರಹಗಳು ದೊರೆತಿದ್ದು, ಈ ಪ್ರದೇಶದಲ್ಲಿ ಮತ್ತಷ್ಟು ಐತಿಹಾಸಿಕ ಅವಶೇಷಗಳು ಸಿಗುವ ನಿರೀಕ್ಷೆಯಲ್ಲಿ ಉತ್ಖನನ ಮುಂದುವರೆದಿದೆ.
Read Full Story

07:22 AM (IST) May 25

ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹2.90ಪೈಸೆ ಏರಿಕೆ; 10 ದಿನದಲ್ಲಿ 8 ರೂಪಾಯಿ ಹೆಚ್ಚಳ

ಕಳೆದ ಹತ್ತು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ. ಇಂದಿನ ಭಾರಿ ಏರಿಕೆಯೊಂದಿಗೆ, ಪೆಟ್ರೋಲ್ ದರವು ₹110.99 ಮತ್ತು ಡೀಸೆಲ್ ದರವು ₹98.80 ಕ್ಕೆ ತಲುಪಿದ್ದು, ಗ್ರಾಹಕರಿಗೆ ದೊಡ್ಡ ಹೊರೆಯಾಗಿದೆ.
Read Full Story

06:31 AM (IST) May 25

ಮನೆ ಬಳಿ ಕಾರಲ್ಲಿ ಡ್ರಗ್ಸ್‌ ಸಿಕ್ಕರೆ ಮನೆ ಮಾಲೀಕ ಹೊಣೆ ಅಲ್ಲ - ಕರ್ನಾಟಕ ಹೈಕೋರ್ಟ್

ಮನೆ ಮುಂದೆ ನಿಲ್ಲಿಸಿದ್ದ ಸ್ನೇಹಿತರ ವಾಹನದಲ್ಲಿ ಮಾದಕ ವಸ್ತುಗಳು ಪತ್ತೆಯಾದ ಕಾರಣಕ್ಕೆ ಬಂಧಿತನಾಗಿದ್ದ ಮನೆ ಮಾಲೀಕನಿಗೆ ಹೈಕೋರ್ಟ್ ಜಾಮೀನು ನೀಡಿದೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಅಪರಾಧಕ್ಕೆ ಜಾಗ ನೀಡಿದ್ದಾರೆ ಎಂದು ಮಾಲೀಕನ ವಿರುದ್ಧ ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story

06:21 AM (IST) May 25

Shivamogga - ಮಾಲ್ಗುಡಿ ಡೇಸ್ ಖ್ಯಾತಿಯ ಅರಸಾಳು ರೈಲ್ವೆ ನಿಲ್ದಾಣದ ಕತ್ತಲೆಯ ಕಥೆ

'ಮಾಲ್ಗುಡಿ ಡೇಸ್' ಖ್ಯಾತಿಯ ಅರಸಾಳು ರೈಲ್ವೆ ನಿಲ್ದಾಣವು ಸಂಗ್ರಹಾಲಯವನ್ನು ಹೊಂದಿದ್ದರೂ, ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಶೌಚಾಲಯ, ನೀರು ಮತ್ತು ರಾತ್ರಿ ದೀಪಗಳ ಕೊರತೆಯಿಂದಾಗಿ ನೂರಾರು ಪ್ರಯಾಣಿಕರು ಮತ್ತು ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿಲ್ದಾಣದ ನಿರ್ವಹಣೆ ವಿಫಲವಾಗಿದ್ದು, ಅಧಿಕಾರಿಗಳು ಗಮನಹರಿಸಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
Read Full Story

06:11 AM (IST) May 25

ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಭೇಟಿಯ ಹಿನ್ನೆಲೆಯಲ್ಲಿ, ಎಸ್.ಐ.ಕೋಡಿಹಳ್ಳಿ ಗೇಟ್‌ನಿಂದ ಹಲ್ಲೇಗೆರೆವರೆಗೆ 7.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ 11.4 ಕೋಟಿ ರು. ಅನುದಾನವನ್ನು ಅನುಮೋದಿಸಿದೆ.

Read Full Story

05:52 AM (IST) May 25

Bhatkal - ಅನ್ಯಕೋಮಿನವರಿಂದ ಮುರಿನಕಟ್ಟೆ ಧ್ವಂಸ - ಭಟ್ಕಳ ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ತೆರವುಗೊಳಿಸಲಾಗಿದ್ದ ಭಟ್ಕಳದ ಮುರಿನಕಟ್ಟೆಯನ್ನು ಹಿಂದೂ ಸಂಘಟನೆಗಳು ಪುನರ್ ನಿರ್ಮಿಸಿದ್ದವು. ಆದರೆ, ರಾತ್ರೋರಾತ್ರಿ ಅನ್ಯಕೋಮಿನವರು ಇದನ್ನು ಕೆಡವಿ ಹಾಕಿದ್ದು, ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯು ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story

05:45 AM (IST) May 25

ನೀಟ್ ರದ್ದಾಗಿದ್ದಕ್ಕೆ ಜೀವ ಕಳಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಪಾಲಕರಿಗೆ ಸುಳ್ಳು

ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ಆಕೆ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ.

Read Full Story

05:36 AM (IST) May 25

ಜವಾಬ್ದಾರಿ ಸರ್ಕಾರವಾಗಿ ಎಸ್‌ಐಆರ್‌ ಜಾಗೃತಿ ಮೂಡಿಸುತ್ತಿದ್ದೇವೆ - ಡಿಸಿಎಂ ಡಿಕೆ ಶಿವಕುಮಾರ್

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಯಿಂದ (ಎಸ್‌ಐಆರ್‌) ಲಕ್ಷಾಂತರ ಮತಗಳು ತೆಗೆದುಹಾಕಲ್ಪಡುವ ಅಪಾಯವಿದ್ದು, ಈ ಬಗ್ಗೆ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

Read Full Story

05:24 AM (IST) May 25

Bengaluru ಟೌನ್ ಹಾಲ್‌ ಬಳಿ ಸುಳಿಯದ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು; ಖಾಕಿ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ'ಯ ಮಾನವ ಸರಪಳಿ ಪ್ರತಿಭಟನೆ ಟೌನ್ ಹಾಲ್ ಬಳಿ ವಿಫಲವಾಗಿದೆ. ಪೊಲೀಸರ ಬಿಗಿ ಭದ್ರತೆ ಮತ್ತು ಎಚ್ಚರಿಕೆಯಿಂದಾಗಿ ಯಾರೂ ಭಾಗವಹಿಸಲಿಲ್ಲ, ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Read Full Story

More Trending News