ಮೈಸೂರು: ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದೆ. ಇದು ಹೇಗೆ ಸಾಧ್ಯವಾಯಿತು? ಎಂದು ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್.ವಿಶ್ವನಾಥ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ನಾನು ಕೂಡ ಶಿಕ್ಷಣ ಸಚಿವನಾಗಿದ್ದವನು. ಇಂಟರ್ನಲ್ ಮಾರ್ಕ್ಸ್ 20ಕ್ಕೆ 20 ಕೊಡುತ್ತಾರೆ. ಇನ್ನು ಉಳಿದ 80 ಮಾರ್ಕ್ಸ್ನಲ್ಲಿ 13 ನಂಬರ್ ತೆಗೆದರೆ ಪಾಸ್. ಈ ರೀತಿಯಾದರೆ ಶಿಕ್ಷಣ ವ್ಯವಸ್ಥೆ ಎಲ್ಲಿಗೆ ಹೋಗಬೇಕು? ಪಾಸಾದ ವಿದ್ಯಾರ್ಥಿಗಳು ಮುಂದೆ ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದರು.

08:14 AM (IST) Apr 26
SSLC ಪರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡದಲ್ಲಿ ಅನುತ್ತೀರ್ಣರಾಗಲು ಹಳೆಯ ಬೋಧನಾ ವಿಧಾನ ಮತ್ತು ಕ್ಲಿಷ್ಟಕರ ಪಠ್ಯಕ್ರಮವೇ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾಷಾ ಬೋಧನೆಯನ್ನು ಸರಳೀಕರಿಸಿ, ವ್ಯಾಕರಣ ಮತ್ತು ವಾಕ್ಯ ರಚನೆಗೆ ಒತ್ತು ನೀಡಬೇಕೆಂದು ಅವರು ಸಲಹೆ ನೀಡಿದ್ದಾರೆ.
07:43 AM (IST) Apr 26
ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಧಾರವಾಡದ ಹೈದರ್ಶಾವಲಿ ದರ್ಗಾ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮಫೀರ್ ಖಾದ್ರಿ ತಿಳಿಸಿದ್ದಾರೆ. ಹಜರತ್ ಸಯ್ಯದ್ ಶಾ ದರ್ಗಾ ಆವರಣದಲ್ಲಿ ನಡೆದ ಭೂಮಿಪೂಜೆ ಸಮಾರಂಭ ನಡೆಯಿತು.
07:00 AM (IST) Apr 26
ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದಕ್ಕೆ ಹರಿಹರ ಶಾಸಕ ಬಿ.ಪಿ.ಹರೀಶ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಂದ ತಮ್ಮ ಸಿಎಂ ಆಗುವ ಕನಸು ಭಗ್ನಗೊಂಡಿದ್ದರಿಂದ ಖರ್ಗೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹರೀಶ ಆರೋಪಿಸಿದ್ದಾರೆ.
06:51 AM (IST) Apr 26
06:43 AM (IST) Apr 26
06:10 AM (IST) Apr 26
ಬೆಂಗಳೂರಿನ ಬಿಇಎಂಎಲ್ ಘಟಕದಲ್ಲಿ ದೇಶದ ಮೊದಲ ಬಿ28 ಬುಲೆಟ್ ರೈಲು ಬೋಗಿಗಳ ವಿನ್ಯಾಸ ಕಾರ್ಯ ಆರಂಭವಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಘಟಕವನ್ನು ಉದ್ಘಾಟಿಸಿದ್ದು, 2027ರ ಅಂತ್ಯಕ್ಕೆ ರೈಲು ಸಂಪೂರ್ಣ ಸಿದ್ಧಗೊಳ್ಳಲಿದೆ ಎಂದು ತಿಳಿಸಿದ್ದಾರೆ.
06:02 AM (IST) Apr 26
ಬೆಳಗಾವಿಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆಯಂದು ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಪಶು ಸಂಗೋಪನೆ ಸಚಿವರು 2 ಜಿಲ್ಲೆಗಳ ರೈತರಿಗೆ ಶೇ.25ರ ಸಬ್ಸಿಡಿಯೊಂದಿಗೆ 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದರು.
05:54 AM (IST) Apr 26
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್, ತಾನು ಕೃತ್ಯ ಎಸಗಿದ್ದಾಗಿ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಏಪ್ರಿಲ್ 27 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟವಾಗಲಿದೆ.
05:45 AM (IST) Apr 26
ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದ ಸೋಂಕಿನಿಂದ ಪ್ರಜ್ಞಾಹೀನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಶ್ವಾಸಕೋಶ ಕಸಿಗೆ ಸೂಚಿಸಿದ್ದಾರೆ.
05:36 AM (IST) Apr 26
05:28 AM (IST) Apr 26
ಹಾವೇರಿ ಜಿಲ್ಲೆಯಲ್ಲಿ ಬೇಸಿಗೆಯಿಂದ ಬತ್ತುತ್ತಿರುವ ವರದಾ ನದಿಯಲ್ಲಿ, ಶಿವಮೊಗ್ಗ ಮೂಲದ ಇರ್ಲರ್ ಸಮುದಾಯದ ಕುಟುಂಬಗಳು ಚಿನ್ನದ ಕಣಗಳಿಗಾಗಿ ಹುಡುಕಾಟ ನಡೆಸುತ್ತಿವೆ. ಸಾಂಪ್ರದಾಯಿಕ ವಿಧಾನಗಳನ್ನು ಬಳಸಿ ನದಿಯ ಮರಳನ್ನು ಜಾಲಾಡಿ, ದಿನವಿಡೀ ಶ್ರಮವಹಿಸಿ ಬಂಗಾರವನ್ನು ಶೋಧಿಸುವುದು ಇವರ ಕಾಯಕವಾಗಿದೆ
05:19 AM (IST) Apr 26
ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮವಾಗಿ ಜಲಮೂಲಗಳು ಬತ್ತುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಈ ಸಮಸ್ಯೆ ನಿಭಾಯಿಸಲು ಸರ್ಕಾರ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ಗಳನ್ನು ರಚಿಸಿದೆ.