ಬೆಂಗಳೂರು: ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಜಾರಿ ನಿರ್ದೇಶನಾಲಯ(ಇ.ಡಿ.)ವು ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಹಾಗೂ ಸಹ ಆರೋಪಿಗಳಾದ ತರುಣ್ ಕೊಂಡೂರು ಮತ್ತು ಸಾಹಿಲ್ ಸಕಾರಿಯಾ ಜೈನ್ ವಿರುದ್ಧ ನಗರದ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ.
01:16 PM (IST) Feb 26
ಶಿಲ್ಪಾ ಶೆಟ್ಟಿಯ ಮುಂಬೈನ ಅಮ್ಮಾ ಕೈ ರೆಸ್ಟೋರೆಂಟ್ನಲ್ಲಿ ಫುಡ್ ಸೇರಿ ಎಲ್ಲವೂ ಕನ್ನಡ ಮಯ, ಕರ್ನಾಟಕದ ಪ್ರಸಿದ್ಧ ಬೆಣ್ಣೆ ದೋಸೆ, ಮಸಾಲೆ ದೋಸೆ, ಕರಾವಳಿಯ ವಿಷೇಷ ಖಾದ್ಯಗಳು ಅದೆ ಕನ್ನಡ ಹೆಸರಿನಲ್ಲೇ ಇದೆ. ಜೊತೆಗೆ ಕರ್ನಾಟಕ ಭೂಪಟವೂ ಇದೆ.
12:37 PM (IST) Feb 26
ತುರುವೇಕೆರೆ ತಾಲ್ಲೂಕಿನಲ್ಲಿ, ಡಿಪ್ಲೊಮಾ ವಿದ್ಯಾರ್ಥಿ ಧನುಷ್ ನೀರಿನ ಕಟ್ಟೆಗೆ ಹಾರಿ ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ, ಆತ ಯುವತಿಯೊಬ್ಬಳ ಫೋಟೋದೊಂದಿಗೆ ಮೊಬೈಲ್ನಲ್ಲಿ "ಈ ಪ್ರಪಂಚನೇ ಬಿಟ್ಟು ಹೋಗ್ತಿದಿನಿ" ಎಂದು ವಿದಾಯದ ಸಂದೇಶವನ್ನು ಪೋಸ್ಟ್ ಮಾಡಿದ್ದ.
12:35 PM (IST) Feb 26
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವ್ಯವಸ್ಥಿತ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ ನೋಡಿ.
12:08 PM (IST) Feb 26
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮಂಡ್ಯ, ಕೊಡಗು ಹಾಗೂ ಹಾವೇರಿ ಜಿಲ್ಲೆಯ ವಿವಿಧೆಡೆ ಮಳೆ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ 7.6 ಮಿ.ಮೀ. ಮಳೆ ಆಗಿದೆ.
12:07 PM (IST) Feb 26
ಬಿಗ್ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರು 'ದೊಡ್ಮನೆ ಹಬ್ಬ' ಕಾರ್ಯಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ಆ್ಯಂಕರ್ ತಮಗೆ ಮಾತನಾಡಲು ಅವಕಾಶ ನೀಡದೆ, ಗಿಲ್ಲಿ ಮತ್ತು ಕಾವ್ಯಾ ಅವರಿಗೆ ಮಾತ್ರ ಮಣೆ ಹಾಕಿದ್ದಾರೆ ಎಂದು ರಕ್ಷಿತಾ ನೇರ ಆರೋಪ ಮಾಡಿದ್ದಾರೆ.
12:04 PM (IST) Feb 26
2025-26ರ ರಣಜಿ ಟ್ರೋಫಿ ಫೈನಲ್ನಲ್ಲಿ, ಜಮ್ಮು ಮತ್ತು ಕಾಶ್ಮೀರ ತಂಡವು ಮೊದಲ ಇನ್ನಿಂಗ್ಸ್ನಲ್ಲಿ 584 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದಕ್ಕೆ ಪ್ರತಿಯಾಗಿ, ಪ್ರಸಿದ್ದ್ ಕೃಷ್ಣ ಅವರ ಐದು ವಿಕೆಟ್ಗಳ ಸಾಧನೆಯ ನಂತರ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿದೆ.
11:57 AM (IST) Feb 26
2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
11:57 AM (IST) Feb 26
11:37 AM (IST) Feb 26
11:30 AM (IST) Feb 26
ಮಕ್ಕಳ ಆರೈಕೆ ರಜೆ (ಸಿಸಿಎಲ್) ಮಗುವಿನ ಹಕ್ಕಾಗಿದ್ದು, ಸಿಸಿಎಲ್ ಕೋರಿಕೆ ಬಂದಾಗ ನಿರಾಕರಿಸದೆ ಆದ್ಯತೆ ಮೇರೆಗೆ ರಜೆ ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
11:23 AM (IST) Feb 26
ಅಹಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದ ಪಂದ್ಯದಲ್ಲಿಂದು ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ಟೀಂ ಇಂಡಿಯಾ ಕಣ್ಣಿಟ್ಟಿದೆ. ಈ ಮ್ಯಾಚ್ ಹರಿಣಗಳು ಗೆಲ್ಲಲಿ ಎಂದು ಭಾರತ ಪ್ರಾರ್ಥಿಸುತ್ತಿದೆ.
11:07 AM (IST) Feb 26
ಹಾಸನದಲ್ಲಿ, ಜೀತ ಪದ್ಧತಿಯಡಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳುತ್ತಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮಕ್ಕೆ ದೂರು ನೀಡಿದ ನಂತರ ಈ ಕಾರ್ಯಾಚರಣೆ ನಡೆದಿದೆ.
10:37 AM (IST) Feb 26
ವಿಶ್ವವಿಖ್ಯಾತ 'ಲೂಯಿ ವಿಟಾನ್' ಬ್ರ್ಯಾಂಡ್ನ ಲಾಂಛನಕ್ಕೂ ಮತ್ತು ಕರ್ನಾಟಕದ ಬೇಲೂರಿನ 12ನೇ ಶತಮಾನದ ಹೊಯ್ಸಳ ಶಿಲ್ಪಕಲೆಗೂ ಇರುವ ಅಚ್ಚರಿಯ ಸಾಮ್ಯತೆ ಜಾಗತಿಕ ಚರ್ಚೆಗೆ ಕಾರಣವಾಗಿದೆ. ಆಸ್ಟ್ರೇಲಿಯಾದ ಇನ್ಫ್ಲುಯೆನ್ಸರ್ ಒಬ್ಬರು ಹಂಚಿಕೊಂಡ ವಿಡಿಯೋ ಈ ಚರ್ಚೆಗೆ ನಾಂದಿ ಹಾಡಿದೆ.
10:15 AM (IST) Feb 26
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಮಾರಾಟದ ಸುಳ್ಳು ಪೋಸ್ಟ್ಗಳು ಹರಿದಾಡುತ್ತಿವೆ. ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಗುರಿಯಾಗಿಸಿಕೊಂಡು ಹಣ ದೋಚುವ ಈ ಜಾಲದ ಬಗ್ಗೆ ಎಚ್ಚರದಿಂದಿರಲು ಈ ಲೇಖನವು ಎಚ್ಚರಿಸುತ್ತದೆ.
09:57 AM (IST) Feb 26
ನೆಲಮಂಗಲ ತಾಲೂಕಿನಲ್ಲಿ ಅರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹಗೊಳಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದು ಅದರಂತೆ ಸೋಲೂರು ಹೋಬಳಿಯ ರದ್ದುಗೊಳಿಸುವ ಪಟ್ಟಿಯಲ್ಲಿರುವ ಸುಮಾರು 470ಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ಪರಿಶೀಲಿಸಿ ಕ್ರಮ ವಹಿಸಬೇಕೆಂದು ಶಾಸಕ ಶ್ರೀನಿವಾಸ್ ಅಧಿಕಾರಿಗಳಿಗೆ ತಾಕೀತು
09:30 AM (IST) Feb 26
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನ ಜಮ್ಮು-ಕಾಶ್ಮೀರ ತಂಡ 6 ವಿಕೆಟ್ಗೆ 527 ರನ್ ಗಳಿಸಿ ಬೃಹತ್ ಮೊತ್ತ ಪೇರಿಸಿದೆ. ಶುಭಂ ಪುಂಡೀರ್ ಶತಕ ಹಾಗೂ ಇತರ ಬ್ಯಾಟರ್ಗಳ ಅರ್ಧಶತಕದ ನೆರವಿನಿಂದ ತಂಡ ಬಲಿಷ್ಠ ಸ್ಥಿತಿಯಲ್ಲಿದೆ.
09:17 AM (IST) Feb 26
ಯಾದಗಿರಿಯ ಶಹಪುರ ತಾಲೂಕಿನ ಖ್ಯಾತ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆದ ನಂತರ, ಅವರ ವಿರುದ್ಧ 75(2) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
09:16 AM (IST) Feb 26
08:58 AM (IST) Feb 26
ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ ₹50 ಆರ್ಥಿಕ ನೆರವಿನ ಮೊತ್ತ ಒಟ್ಟು ₹300 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ
08:16 AM (IST) Feb 26
ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು, ಬೆಂಗಳೂರಿನ ಉತ್ತರಹಳ್ಳಿ ಮತ್ತು ಹೆಮ್ಮಿಗೆಪುರ ವಾರ್ಡ್ಗಳಲ್ಲಿ ನಕಲಿ ಇ-ಪಿಐಡಿ ಮತ್ತು ಇ-ಖಾತಾ ಸೃಷ್ಟಿಸಿರುವ ಹಗರಣವನ್ನು ಬಯಲಿಗೆಳೆದಿದ್ದಾರೆ.
07:50 AM (IST) Feb 26
ಬೆಂಗಳೂರಿಗೆ ಶೇ.90ರಷ್ಟು ತರಕಾರಿ ಪೂರೈಸುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತರಕಾರಿಗಳಲ್ಲಿ ಅಪಾಯಕಾರಿ ಸೀಸ ಮತ್ತು ಕ್ರಿಮಿನಾಶಕ ಅಂಶಗಳು ಪತ್ತೆಯಾಗಿವೆ. ನಗರಕ್ಕೆ ನಿತ್ಯ 700 ಟನ್ಗೂ ಅಧಿಕ ತರಕಾರಿ ಸರಬರಾಜಾಗುತ್ತಿದೆ.