ಚಿಕ್ಕಮಗಳೂರು: ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ನಗರ ಜಾಮಿಯಾ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಕೇಸ್ ದಾಖಲಿಸಿದ್ದಾರೆ. ಕಳೆದ ಗುರುವಾರ ಯೂತ್ ಫಾರ್ ನೇಷನ್ ಸಂಘಟನೆ ವತಿಯಿಂದ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆ ಖಂಡಿಸಿ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಿ.ಟಿ.ರವಿ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

11:28 PM (IST) Jul 26
10 ವರ್ಷ ಸೇವೆ ಸಲ್ಲಿಸಿದ ಪೊಲೀಸ್ ಪೇದೆಗಳಿಗೆ ಅನ್ಯಾಯ ಆಗಿದೆ ಎಂದು ಅನಾಮಧೇಯ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪೊಲೀಸರ ಹೆಸರಿನಲ್ಲಿ ಹರಿದಾಡುತ್ತಿರುವ ಪತ್ರದಲ್ಲಿ ಏನಿದೆ? ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಕ್ರೈಂ ರಿಪೋರ್ಟ್ ಚೇತನ್ ವರದಿ ಇಲ್ಲಿದೆ.
11:28 PM (IST) Jul 26
ಕೇವಲ ಐದಾರು ಪ್ಯಾನ್ ಇಂಡಿಯಾ ಚಿತ್ರಗಳಿಂದಲೇ ಕನ್ನಡ ಚಿತ್ರರಂಗವೊಂದೇ ರೂ. 350 ರಿಂದ 400 ಕೋಟಿ ಕಳೆದುಕೊಂಡಿದೆ. ಹೀಗೆ ಕಳೆದುಕೊಂಡ ಸಿನಿಮಾಗಳಲ್ಲಿ ನನ್ನದೂ ಇದೆ ಎಂದರು ನಿರ್ಮಾಪಕ ಉದಯ್ ಕೆ. ಮೆಹ್ತಾ.
09:58 PM (IST) Jul 26
15 ವರ್ಷದ ಭಾರತೀಯ ಕ್ರಿಕೆಟಿಗ ವೈಭವ್ ಸೂರ್ಯವಂಶಿ, ಅಂತರರಾಷ್ಟ್ರೀಯ T20I ಕ್ರಿಕೆಟ್ನಲ್ಲಿ ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ. ಹರಾರೆಯಲ್ಲಿ ನಡೆದ ಸರಣಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅವರು ಐತಿಹಾಸಿಕ ರೆಕಾರ್ಡ್ಗೆ ಸಾಕ್ಷಿಯಾಗಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
09:44 PM (IST) Jul 26
ಸ್ಯಾನ್ ಡಿಯಾಗೋ ಕಾಮಿಕ್-ಕಾನ್ನಲ್ಲಿ ನಿತೇಶ್ ತಿವಾರಿ ಅವರ 'ರಾಮಾಯಣ' ಚಿತ್ರದ ಬಗ್ಗೆ ಮಾತನಾಡಿದ ಯಶ್, ರಾವಣನ ಪಾತ್ರಕ್ಕಾಗಿ ಸೆಟ್ನಲ್ಲಿ ತಾನು ವಾತಾವರಣವನ್ನೇ ಹಾಳು ಮಾಡುತ್ತಿದ್ದೆ ಎಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಇದರ ಹಿಂದಿನ ಸೀಕ್ರೆಟ್ ಏನು? ಇಲ್ಲಿದೆ ಮಾಹಿತಿ.
09:07 PM (IST) Jul 26
ಕೇವಲ ಪುಸ್ತಕ ಮಾತ್ರವಲ್ಲದೆ, ಈ ಆತ್ಮಕಥೆಯನ್ನೇ ಆಧರಿಸಿ ಒಂದು ಭರ್ಜರಿ ಬಯೋಪಿಕ್ ಸಿನಿಮಾ ಮಾಡುವ ಬಗ್ಗೆ ರಜನಿಕಾಂತ್ ತಮ್ಮ ಆಪ್ತ ವಲಯದಲ್ಲಿ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅವರ ಪುತ್ರಿ ಸೌಂದರ್ಯ ರಜನಿಕಾಂತ್ ಕೂಡ ಈ ಬಗ್ಗೆ ಸುಳಿವು ನೀಡಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
08:31 PM (IST) Jul 26
ಬಹುಭಾಷಾ ನಟ ರಾವ್ ರಮೇಶ್ ಅವರು ನಟ ಪುನೀತ್ ರಾಜ್ಕುಮಾರ್ ಅವರೊಂದಿಗಿನ ತಮ್ಮ ಅಪರೂಪದ ಭೇಟಿಯೊಂದನ್ನು ನೆನೆದು ಭಾವುಕರಾಗಿದ್ದಾರೆ. ಸರಳತೆ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ಎಲ್ಲರ ಮನಗೆದ್ದಿದ್ದ ಅಪ್ಪು.
08:00 PM (IST) Jul 26
ರಾಯಚೂರಿನಲ್ಲಿ ರೈಲ್ವೇ ಟ್ರಾಕ್ ಕಾಮಗಾರಿಗಾಗಿ ಗುಂಡಿ ಅಗೆಯಲಾಗಿತ್ತು. ಹಾಗೇ ಬಿಟ್ಟು ನಿರ್ಲಕ್ಷ್ಯ ಮಾಡಿದ ಪರಿಮಾಮ 8 ವರ್ಷದ ಬಾಲಕ ಈ ಗುಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಗನ ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ.
07:45 PM (IST) Jul 26
ಶಾಸಕ ವಿನಯ್ ಕುಲಕರ್ಣಿ ಅವರ ಅನರ್ಹತೆಯಿಂದಾಗಿ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ಏರಿದೆ. ಕಾಂಗ್ರೆಸ್ನಲ್ಲಿ ಕುಲಕರ್ಣಿ ಕುಟುಂಬಕ್ಕೆ ಟಿಕೆಟ್ ನೀಡಬೇಕೇ ಅಥವಾ ಪರ್ಯಾಯ ನಾಯಕತ್ವಕ್ಕೆ ಮಣೆ ಹಾಕಬೇಕೇ ಎಂಬ ಚರ್ಚೆ ನಡೆದರೆ, ಬಿಜೆಪಿಯಲ್ಲಿ ಆಕಾಂಕ್ಷಿಗಳ ನಡುವಿನ ಬಣ ರಾಜಕೀಯವೇ ದೊಡ್ಡ ಸವಾಲಾಗಿದೆ.
07:40 PM (IST) Jul 26
07:34 PM (IST) Jul 26
ಬಹಳಷ್ಟು ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ನಟಿ ಆಗಿರುವ ರಚಿತಾ ರಾಮ್, ಸತೀಶ್ ನೀನಾಸಂ ಜೋಡಿಯಾಗಿ ನಟಿಸಿರುವ 'ಅಯೋಗ್ಯ 2' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿ ಇದ್ದಾರೆ. 7 ಆಗಸ್ಟ್ 2026ರಂದು ಅಯೋಗ್ಯ 2 ಸಿನಿಮಾ ಬಿಡುಗಡೆ ಆಗಲಿದೆ. ರಚಿತಾ ಸ್ಟಾರ್ ನಟಿ ಆಗಿರುವ ಹಿಂದಿನ ರಹಸ್ಯ ಇಲ್ಲಿದೆ ನೋಡಿ..
07:24 PM (IST) Jul 26
Billa Ranga Baashaa: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಬಿಲ್ಲ ರಂಗ ಭಾಷಾ' ಚಿತ್ರದ ಚಿತ್ರೀಕರಣ ಮತ್ತೆ ವೇಗ ಪಡೆದುಕೊಂಡಿದೆ. ಮೊದಲ ಶೆಡ್ಯೂಲ್ ಬಳಿಕ ಕೆಲ ತಿಂಗಳ ವಿರಾಮ ತೆಗೆದುಕೊಂಡಿದ್ದ ಚಿತ್ರತಂಡ.
07:23 PM (IST) Jul 26
ಆಹಾರ ಹುಡುಕುತ್ತ ಗ್ರಾಮದ ತೋಟಗಳಿಗೆ ನುಗ್ಗಿದ ತಾಯಿ ಆನೆ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದೆ. ಇತ್ತ ತಾಯಿ ಕಳೆದುಕೊಂಡ ಮರಿ ಆನೆಯ ಮೋಕರೋಧನೆ ಹಲವರ ಕಣ್ಣಾಲಿ ತೇವಗೊಳಿಸಿದೆ. ತಾಯಿ ಆನೆಯ ಎಬ್ಬಿಸಲು ಮರಿ ಆನೆ ಇನ್ನಿಲ್ಲದ ಪ್ರಯತ್ನ ಮಾಡಿದೆ.
06:51 PM (IST) Jul 26
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಜನ ನಾಯಗನ್'.ಬಾಕ್ಸ್ ಆಫೀಸ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಜುಲೈ 23 ರಂದು ತೆರೆಕಂಡ ಈ ಚಿತ್ರವು ಎರಡನೇ ದಿನ ಗಳಿಕೆಯಲ್ಲಿ ಶೇ. 50 ರಷ್ಟು ಕುಸಿತ ಕಂಡಿತ್ತು. ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಆದರೆ ಮೂರನೇ ದಿನದಂದು (ಶನಿವಾರ) ಭಾರಿ ಚೇತರಿಕೆ ಕಂಡುಕೊಂಡಿದೆ.
06:38 PM (IST) Jul 26
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ, ಸಾಮಾಜಿಕ ಕಾರ್ಯಕರ್ತ ಕಾಂತಕುಮಾರ್ ಅವರ ದೂರಿನ ಮೇರೆಗೆ ಆಯೋಗವು ಅಂತಿಮ ಆಯ್ಕೆ ಪಟ್ಟಿಗೆ ತಡೆ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
04:36 PM (IST) Jul 26
ಜಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಔಟಾದ ಯುವ ಆಟಗಾರ ವೈಭವ್ಗೆ ಡ್ರೆಸ್ಸಿಂಗ್ ರೂಂನಲ್ಲಿ ಹಿರಿಯ ಆಟಗಾರರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಆ ಮೂವರು ವೈಭವ್ಗೆ ಕೊಟ್ಟ ವಾರ್ನಿಂಗ್ ಏನು? ಡ್ರೆಸ್ಸಿಂಗ್ ರೂಂನಲ್ಲಿ ಆಗಿಯೇ ಹೋಯ್ತಾ ಜಗಳ? ಎನ್ನುವುದನ್ನು ನೋಡೋಣ ಬನ್ನಿ!
04:09 PM (IST) Jul 26
ಸಿದ್ದರಾಮಯ್ಯ ತಾವು 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಈ ನಿರ್ಧಾರಕ್ಕೆ ಕಾರಣವನ್ನೂ ಹೇಳಿದ್ದಾರೆ. ಚುನಾವಣೆಯಿಂದ ದೂರ ಉಳಿದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾಗುತ್ತಾರಾ?
02:38 PM (IST) Jul 26
ಕರಾವಳಿ ಸಿನಿಮಾವನ್ನು ಸದ್ಯ ಕರ್ನಾಟಕದಲ್ಲಿ ಮಾತ್ರ ರಿಲೀಸ್ ಮಾಡಲಾಗಿದೆ. ಸಿನಿಮಾ ಸಿಕ್ತಿರುವ ಪ್ರತಿಕ್ರಿಯೆ ನೋಡಿ ಪರಭಾಷೆಯಲ್ಲೂ ಬೇಡಿಕೆ ಹೆಚ್ಚಾಗಿದೆ ಎನ್ನುವ ಮಾತು ಕೇಳಿಬಂದಿದೆ. ಮುಂದಿನ ವಾರ ಪಕ್ಕದ ಮಲಯಾಳಂ, ತೆಲುಗು ಹಾಗೂ ತಮಿಳಿನಲ್ಲೂ ರಿಲೀಸ್ ಮಾಡುವ ಸಾಧ್ಯತೆ ಹೆಚ್ಚಾಗಿದೆ
01:57 PM (IST) Jul 26
ತಮಿಳುನಾಡು ಸರ್ಕಾರದ ವಿರುದ್ಧ ಖಾಲಿ ಕೊಡ ಹಿಡಿದು ಕನ್ನಡ ಪರ ಹೋರಾಟಗಾರರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿ ತಡೆಯಲು ಮುಂದಾದ ನೂರಾರು ಮಂದಿ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಅಷ್ಟಕ್ಕೂ ತಮಿಳುನಾಡು ಸರ್ಕಾರದ ವಿರುದ್ಧ ಯಾಕೆ ಪ್ರತಿಭಟನೆ ನಡೆಯಿತು ಅನ್ನೋ ವಿವರ ಇಲ್ಲಿದೆ.
12:58 PM (IST) Jul 26
ನೀಟ್ ಪೇಪರ್ ಲೀಕ್ ಪ್ರತಿಭಟನೆ ಕುರಿತು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ತಾವು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದವರ ಬಗ್ಗೆ ಮಾತನಾಡಿದ್ದಾಗಿ ಸಮರ್ಥಿಸಿಕೊಂಡಿದ್ದಾರೆ.
12:49 PM (IST) Jul 26
ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಂತೆ ಕಾಣ್ತಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಲೆದಂಡ ಆಗ್ತಿದ್ದಂತೆ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದತ್ತ ಚಿತ್ತ ಹರಿಸಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಬುಧವಾರವೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಂಡದ ಬಲ ಹೆಚ್ಚಾಗಲಿದೆ.
12:10 PM (IST) Jul 26
ಬೆಂಗಳೂರಿನಲ್ಲಿ ಪತಿಯ ಅಕ್ರಮ ಸಂಬಂಧ ಮತ್ತು ಮಾನಸಿಕ ಹಿಂಸೆಯಿಂದ ನೊಂದ 24 ವರ್ಷದ ತಾಯಿಯೊಬ್ಬಳು ತನ್ನ ಏಳು ತಿಂಗಳ ಹಸುಗೂಸನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ನೋಡುತ್ತಿದ್ದಂತೆಯೇ ವಿಡಿಯೋ ಕಾಲ್ನಲ್ಲೇ ಬದುಕು ಅಂತ್ಯ.
11:55 AM (IST) Jul 26
1999ರಲ್ಲಿ ದಳಪತಿ ವಿಜಯ್ ಮತ್ತು ಲಂಡನ್ ಮೂಲದ ಉದ್ಯಮಿಯ ಪುತ್ರಿ ಸಂಗೀತಾ ಅವರ ವಿವಾಹ ನಡೆದಿತ್ತು. ಈ ದಂಪತಿಗೆ ಜೇಸನ್ ಸಂಜಯ್ ಹಾಗೂ ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಸುಮಾರು 27 ವರ್ಷಗಳ ಕಾಲ ಅನ್ಯೋನ್ಯವಾಗಿದ್ದ ಈ ಜೋಡಿಯ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
11:41 AM (IST) Jul 26
ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳ ಸನಿಹದಲ್ಲೇ ಇರುವ ಈ ಸ್ಥಾವರವು ಐತಿಹಾಸಿಕ ಮತ್ತು ತಾಂತ್ರಿಕ ಮಹತ್ವದ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ. ನೂರು ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಈ ಮಹತ್ವದ ಸ್ಥಾವರವು ಇಂದು ಮಳೆಯಿಲ್ಲದೆ ಸ್ತಬ್ದವಾಗಿರುವುದು ಆತಂಕಕಾರಿ ಸಂಗತಿಯಾಗಿದೆ.
11:01 AM (IST) Jul 26
ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಜೋಡಿಯ 'ಅಯೋಗ್ಯ' ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಈಗ ಅದರ ಮುಂದುವರಿದ ಭಾಗ 'ಅಯೋಗ್ಯ-2' ಸಿದ್ಧವಾಗಿದೆ. ಇತ್ತೀಚೆಗೆ ಮಂಡ್ಯದ ಸುತ್ತಮುತ್ತ ಈ ಚಿತ್ರದ ಹಾಡೊಂದರ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇನಾಯ್ತು ನೋಡಿ..
10:22 AM (IST) Jul 26
ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನೂತನ 'ವಿವೇಕ ಸ್ಮಾರಕ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಾಣವಾಗಿದ್ದು, ಇದು ಯುವ ಸಬಲೀಕರಣ ಕೇಂದ್ರವಾಗಿಯೂ ಕಾರ್ಯನಿರ್ವಹಿಸಲಿದೆ.
09:29 AM (IST) Jul 26
09:08 AM (IST) Jul 26
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಈ ಸಿನಿಮಾ ಮಾದರಿಯ ಸುಲಿಗೆ ನಡೆದಿದೆ. ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಯೂಟ್ಯೂಬರ್ಸ್ ಗ್ಯಾಂಗ್ಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
08:54 AM (IST) Jul 26
ನಾಲ್ಕನೇ ವಯಸ್ಸಿನಲ್ಲಿ ಅಪಘಾತದಲ್ಲಿ ಕಾಲು ಕಳೆದುಕೊಂಡ ಮೈಸೂರಿನ ಕೆ.ಎಸ್. ಶಿಲ್ಪಾ, ಎಲ್ಲಾ ಅಡೆತಡೆಗಳನ್ನು ಮೀರಿ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಇವರು, ಇದೀಗ 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಪ್ರತಿನಿಧಿಸುತ್ತಿದ್ದಾರೆ.
08:12 AM (IST) Jul 26
07:51 AM (IST) Jul 26
07:48 AM (IST) Jul 26
ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.
07:42 AM (IST) Jul 26
ವಿಶ್ವೇಶ್ವರಯ್ಯ ಬಡಾವಣೆಯಲ್ಲಿ, ಅನುಮೋದಿತ ನಕ್ಷೆಯನ್ನು ಬದಲಿಸಿ ನಿವೇಶನ ಹರಾಜು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹರಾಜಿನಲ್ಲಿ ಮಾರಾಟವಾದ ಮೂಲೆ ನಿವೇಶನದ ಅಳತೆ ತಪ್ಪಾಗಿದ್ದು, ಇದನ್ನು ಸರಿಪಡಿಸಲು ಎಂಜಿನಿಯರ್ಗಳು ಪಕ್ಕದ ನಿವೇಶನದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಅಕ್ರಮದ ಕುರಿತು ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಡಿಎ ಆಯುಕ್ತರಿಗೆ ದೂರು ನೀಡಿದ್ದಾರೆ.
07:29 AM (IST) Jul 26
ಹೊರವರ್ತುಲ ರಸ್ತೆಯನ್ನು (ಒಆರ್ಆರ್) ₹450 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ. ಮೆಟ್ರೋ ಕಾಮಗಾರಿ ಮುಗಿದ ನಂತರ, ಜಂಕ್ಷನ್ಗಳು, ಸರ್ವಿಸ್ ರಸ್ತೆಗಳು, ಮತ್ತು ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.