LIVE NOW
Published : Jul 26, 2026, 07:00 AM ISTUpdated : Jul 26, 2026, 11:01 AM IST

Karnataka News Live: ಗಲ್ಲಿಗಲ್ಲಿಯಲ್ಲಿ ರಚಿತಾ ರಾಮ್ ಸುದ್ದಿ.. 'ಲೇಡಿ ಬಾಸ್' ನೋಡಿ ಮಂಡ್ಯದ ಹಳ್ಳಿಯ ಹೆಣ್ಣುಮಕ್ಕಳು ಹೇಳಿದ್ದೇನು? ಆ ಗುಟ್ಟು ರಟ್ಟು!

ಸಾರಾಂಶ

ಚಿಕ್ಕಮಗಳೂರು: ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ನಗರ ಜಾಮಿಯಾ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಕೇಸ್‌ ದಾಖಲಿಸಿದ್ದಾರೆ. ಕಳೆದ ಗುರುವಾರ ಯೂತ್ ಫಾರ್ ನೇಷನ್ ಸಂಘಟನೆ ವತಿಯಿಂದ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆ ಖಂಡಿಸಿ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಿ.ಟಿ.ರವಿ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Rachita Ram

11:01 AM (IST) Jul 26

ಗಲ್ಲಿಗಲ್ಲಿಯಲ್ಲಿ ರಚಿತಾ ರಾಮ್ ಸುದ್ದಿ.. 'ಲೇಡಿ ಬಾಸ್' ನೋಡಿ ಮಂಡ್ಯದ ಹಳ್ಳಿಯ ಹೆಣ್ಣುಮಕ್ಕಳು ಹೇಳಿದ್ದೇನು? ಆ ಗುಟ್ಟು ರಟ್ಟು!

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಜೋಡಿಯ 'ಅಯೋಗ್ಯ' ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಈಗ ಅದರ ಮುಂದುವರಿದ ಭಾಗ 'ಅಯೋಗ್ಯ-2' ಸಿದ್ಧವಾಗಿದೆ. ಇತ್ತೀಚೆಗೆ ಮಂಡ್ಯದ ಸುತ್ತಮುತ್ತ ಈ ಚಿತ್ರದ ಹಾಡೊಂದರ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇನಾಯ್ತು ನೋಡಿ..

Read Full Story

10:22 AM (IST) Jul 26

ಮೈಸೂರಿನಲ್ಲಿ ಇದೆ ಮಹಾನ್ ಚೇತನದ ಹೆಜ್ಜೆ ಗುರುತು.. ಈ ಬಾರಿ ಮೋದಿ ಭೇಟಿ ನೀಡ್ತಿರುವ ಈ ಸ್ಥಳದ ಮಹತ್ವವೇನು?

ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನೂತನ 'ವಿವೇಕ ಸ್ಮಾರಕ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಾಣವಾಗಿದ್ದು, ಇದು ಯುವ ಸಬಲೀಕರಣ ಕೇಂದ್ರವಾಗಿಯೂ ಕಾರ್ಯನಿರ್ವಹಿಸಲಿದೆ.

Read Full Story

09:29 AM (IST) Jul 26

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ.. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ ಸಾಂಸ್ಕೃತಿಕ ನಗರಿ..!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದು, ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ಬಹುನಿರೀಕ್ಷಿತ 'ವಿವೇಕ ಸ್ಮಾರಕ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಲೇಖನವು ಅವರ ಮೈಸೂರು ಪ್ರವಾಸದ ಸಂಪೂರ್ಣ ನಿಮಿಷ-ನಿಮಿಷದ ವೇಳಾಪಟ್ಟಿಯನ್ನು ವಿವರಿಸುತ್ತದೆ.
Read Full Story

09:08 AM (IST) Jul 26

ಪತ್ರಕರ್ತರ ಸೋಗಿನಲ್ಲಿ ಸುಲಿಗೆ; ಬೆಳಗಾವಿಯಲ್ಲಿ ನಾಲ್ವರು ಯೂಟ್ಯೂಬರ್‌ಗಳು ಅರೆಸ್ಟ್!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಈ ಸಿನಿಮಾ ಮಾದರಿಯ ಸುಲಿಗೆ ನಡೆದಿದೆ. ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಯೂಟ್ಯೂಬರ್ಸ್ ಗ್ಯಾಂಗ್‌ಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

Read Full Story

08:54 AM (IST) Jul 26

2026 Commonwealth Games - ದುರಂತವನ್ನೇ ಸೋಲಿಸಿದ ಶಿಲ್ಪಾ; ಕಾಮನ್‌ವೆಲ್ತ್ ಕನಸು ನನಸು, ರಾಜ್ಯದಿಂದ ಆಯ್ಕೆಯಾದ ಏಕೈಕ ಅಥ್ಲೀಟ್

ನಾಲ್ಕನೇ ವಯಸ್ಸಿನಲ್ಲಿ ಅಪಘಾತದಲ್ಲಿ ಕಾಲು ಕಳೆದುಕೊಂಡ ಮೈಸೂರಿನ ಕೆ.ಎಸ್. ಶಿಲ್ಪಾ, ಎಲ್ಲಾ ಅಡೆತಡೆಗಳನ್ನು ಮೀರಿ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ.  ಇವರು, ಇದೀಗ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಪ್ರತಿನಿಧಿಸುತ್ತಿದ್ದಾರೆ.

Read Full Story

08:12 AM (IST) Jul 26

Indian Oilನಿಂದ 5-10 ಕೆಜಿ ಸಿಲಿಂಡರ್‌ ವಿತರಣೆ; ಬುಕ್ಕಿಂಗ್ ವಾಟ್ಸಪ್ ನಂಬರ್ ಇಲ್ಲಿದೆ

ಇಂಡಿಯನ್‌ ಆಯಿಲ್‌ 'ಎಕ್ಸಟ್ರಾ ಲೈಟ್‌ ನೌ' ಹೆಸರಿನಲ್ಲಿ 10 ಮತ್ತು 5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಎಕ್ಸ್‌ಪ್ರೆಸ್‌ ಸೇವೆಯನ್ನು ಆರಂಭಿಸಿದೆ. ಈ ಸೇವೆಯು ನಗರವಾಸಿಗಳು ಮತ್ತು ಸಣ್ಣ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ಬುಕ್ಕಿಂಗ್ ಮಾಡಿದ ನಾಲ್ಕು ಗಂಟೆಗಳೊಳಗೆ ಹಗುರವಾದ, ಪಾರದರ್ಶಕ ಸಿಲಿಂಡರ್‌ಗಳನ್ನು ವಿತರಿಸುತ್ತದೆ.
Read Full Story

07:51 AM (IST) Jul 26

Bengaluru - ರಾಮೋಹಳ್ಳಿ ಗೇಟ್‌ನಲ್ಲಿ ನಿರ್ಮಿಸಿದ ರಸ್ತೆ ಕೆಳಸೇತುವೆ ಓಡಾಟಕ್ಕೆ ಮುಕ್ತ

ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ರಾಮೋಹಳ್ಳಿ ರೈಲ್ವೆ ಗೇಟ್‌ನಲ್ಲಿ 8.84 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ರಸ್ತೆ ಕೆಳಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಯು ಲೆವೆಲ್ ಕ್ರಾಸಿಂಗ್‌ನಿಂದ ಉಂಟಾಗುತ್ತಿದ್ದ ಸಂಚಾರ ದಟ್ಟಣೆಯನ್ನು ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ. ರೈಲ್ವೆ ಇಲಾಖೆಯೇ ಸಂಪೂರ್ಣ ವೆಚ್ಚ ಭರಿಸಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿದೆ.
Read Full Story

07:48 AM (IST) Jul 26

ತೀರ್ಥಹಳ್ಳಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 60+ ಮಕ್ಕಳು ಅಸ್ವಸ್ಥ!

ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.

Read Full Story

07:42 AM (IST) Jul 26

BDA - ಸುಪ್ರೀಂ ತೀರ್ಪಿನ ವಿರುದ್ಧವಾಗಿ ಬಡಾವಣೆ ಅನುಮೋದಿತ ನಕ್ಷೆಯನ್ನೇ ಬದಲಿಸಿದ ಬಿಡಿಎ

ವಿಶ್ವೇಶ್ವರಯ್ಯ ಬಡಾವಣೆಯಲ್ಲಿ, ಅನುಮೋದಿತ ನಕ್ಷೆಯನ್ನು ಬದಲಿಸಿ ನಿವೇಶನ ಹರಾಜು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹರಾಜಿನಲ್ಲಿ ಮಾರಾಟವಾದ ಮೂಲೆ ನಿವೇಶನದ ಅಳತೆ ತಪ್ಪಾಗಿದ್ದು, ಇದನ್ನು ಸರಿಪಡಿಸಲು ಎಂಜಿನಿಯರ್‌ಗಳು ಪಕ್ಕದ ನಿವೇಶನದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಅಕ್ರಮದ ಕುರಿತು ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಡಿಎ ಆಯುಕ್ತರಿಗೆ ದೂರು ನೀಡಿದ್ದಾರೆ.

Read Full Story

07:29 AM (IST) Jul 26

ಐಟಿ ಕಂಪನಿಗಳಿರೋ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂ ಅನುದಾನ - ಸಚಿವ ಕೃಷ್ಣ ಬೈರೇಗೌಡ

ಹೊರವರ್ತುಲ ರಸ್ತೆಯನ್ನು (ಒಆರ್‌ಆರ್) ₹450 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ. ಮೆಟ್ರೋ ಕಾಮಗಾರಿ ಮುಗಿದ ನಂತರ, ಜಂಕ್ಷನ್‌ಗಳು, ಸರ್ವಿಸ್ ರಸ್ತೆಗಳು, ಮತ್ತು ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Read Full Story

More Trending News