ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

10:33 AM (IST) May 26
10:27 AM (IST) May 26
ರಾಜ್ಯ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಿರುವುದರಿಂದ ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ದರ ಶೇ.60ರಷ್ಟು ಹೆಚ್ಚಳವಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಇದರಿಂದ ಮಸಾಲೆ ದೋಸೆ ದರ 150 ರೂ.ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಂಘ ಹೇಳಿದೆ.
10:04 AM (IST) May 26
ಬಳ್ಳಾರಿಯ ಕೊಟ್ಟಿಗೆಯೊಂದರಲ್ಲಿ 50ಕ್ಕೂ ಹೆಚ್ಚು ಗೋವುಗಳನ್ನು ಕೂಡಿಹಾಕಿದ್ದನ್ನು ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ಪತ್ತೆಹಚ್ಚಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕಸಾಯಿಖಾನೆಗೆ ಸಾಗಿಸಲು ಇವುಗಳನ್ನು ಸಂಗ್ರಹಿಸಿಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
07:22 AM (IST) May 26
ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಲ್ಲಿನ ದುರ್ಬಳಕೆ ಮತ್ತು ಹಣ ಸೋರಿಕೆ ತಡೆಯಲು ಸರ್ಕಾರ ಮುಂದಾಗಿದೆ. ಮೃತಪಟ್ಟವರು ಮತ್ತು ಅನರ್ಹರ ಹೆಸರಿನಲ್ಲಿ ಹಣ ದುರ್ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಿ, ಹೊಸದಾಗಿ ಅರ್ಜಿ ಪಡೆಯಲು ಸರ್ಕಾರ ಚಿಂತನೆ.