ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

11:30 PM (IST) May 26
ತ್ಯಾಜ್ಯ ನೀರನ್ನು ಸಂಸ್ಕರಿಸದೆ ನದಿಗೆ ಬಿಡುವ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಸ್ಥಳೀಯ ಆಡಳಿತಗಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.
11:12 PM (IST) May 26
ಕರ್ನಾಟಕ ಕಾಂಗ್ರೆಸ್ನಲ್ಲಿನ ಅಧಿಕಾರ ಹಂಚಿಕೆ ಸೂತ್ರದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೈಕಮಾಂಡ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆದೊಯ್ಯುವ ಯೋಜನೆ ರೂಪಿಸಿದ್ದು, ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವ ರೇಸ್ನಲ್ಲಿದ್ದಾರೆ.
10:17 PM (IST) May 26
ರಾಜಧಾನಿ ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗ (EVD) ಶಂಕಿತ ಪ್ರಕರಣ ಪತ್ತೆಯಾಗಿರುವ ಮಾಹಿತಿ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಭಾರತಕ್ಕೆ ಆಗಮಿಸಿದ್ದ 28 ವರ್ಷದ ವಿದೇಶಿ ಮಹಿಳೆಯಲ್ಲಿ..
09:54 PM (IST) May 26
ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
09:24 PM (IST) May 26
ರಾಜ್ಯದಲ್ಲಿ ಶಾಲಾ ಶಿಕ್ಷಣ ಅದೋಗತಿಗೆ ತಲುಪಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಮನವಿ ಮಾಡಿದರು.
08:50 PM (IST) May 26
ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಬೆಳೆಸಿಕೊಳ್ಳಬೇಕು. ವೈದ್ಯರು ತಮ್ಮ ಬಳಿಗೆ ಬರುವ ರೋಗಿಗಳನ್ನು ತಾಳ್ಮೆಯಿಂದ ಪರೀಕ್ಷೆ ಮಾಡಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.
08:11 PM (IST) May 26
ಗಾಯಕ, ಸಂಗೀತ ನಿರ್ದೇಶಕ ಹಾಗೂ ಇದೀಗ ನಾಯಕನಟನಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ಅಭಿನಯದ ಚೊಚ್ಚಲ ಸಿನಿಮಾ ‘ಲೋ ನವೀನ’ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದ್ದು, ಇದೀಗ ದೊಡ್ಮನೆ ಕುಟುಂಬದಿಂದಲೂ ವಿಶೇಷ ಪ್ರಶಂಸೆ ಸಿಕ್ಕಿದೆ.
07:50 PM (IST) May 26
ಕರ್ನಾಟಕದಲ್ಲಿ ದ್ವೇಷ ಭಾಷಣ ಮತ್ತು ಅಪರಾಧಗಳನ್ನು ತಡೆಯಲು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ವಿಧೇಯಕ'ವನ್ನು ಕೇಂದ್ರ ಗೃಹ ಸಚಿವಾಲಯ ತಿರಸ್ಕರಿಸಿದೆ.
07:27 PM (IST) May 26
ಹೊಸ ಹೇರ್ಸ್ಟೈಲ್ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಮನಗೆದ್ದಿರುವ ಕಿರುತೆರೆಯ ಜನಪ್ರಿಯ ನಟಿ ಮೌನಾ ಗುಡ್ಡೆಮನೆ ಅವರ ಈ ಲುಕ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
07:11 PM (IST) May 26
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ರಾಜ್ಯಸಭೆ ಸ್ಥಾನದ ಆಫರ್ ನೀಡಿದೆ ಎನ್ನಲಾಗಿದೆ. ಈ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ತಕ್ಷಣವೇ ಒಪ್ಪಿಕೊಂಡಿಲ್ಲ.
06:52 PM (IST) May 26
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಮೆಟ್ರೋ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ, ನೇರಳೆ ಮಾರ್ಗದ ವೈಟ್ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವಿನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಜೆ ಪೀಕ್ ಅವರ್ನಲ್ಲಿ ಘಟನೆ ನಡೆದಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.
06:50 PM (IST) May 26
ನಟಿ ಹಾಗೂ ಮಾಜಿ ಬಿಗ್ಬಾಸ್ ಸ್ಪರ್ಧಿ ಕೃಷಿ ತಾಪಂಡ ತಮ್ಮ ವೈಯಕ್ತಿಕ ಜೀವನದ ವಿಚಾರಗಳಿಂದ ಹಲವು ಬಾರಿ ಸುದ್ದಿಯಾಗಿದ್ದರು. ಇದೀಗ ಖಾಸಗಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ, ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
06:32 PM (IST) May 26
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಉನ್ನತ ಮಟ್ಟದ ಸಭೆಯ ಬಳಿಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಎಲ್ಲಾ ವದಂತಿಗಳನ್ನು ಅವರು ತಳ್ಳಿಹಾಕಿದ್ದಾರೆ.
06:11 PM (IST) May 26
ಕರ್ನಾಟಕದ ಉದ್ದೇಶಿತ ಮೇಕೆದಾಟು ಯೋಜನೆಗೆ ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆಯು ಸುಪ್ರೀಂ ಕೋರ್ಟ್ ತೀರ್ಪು ಮತ್ತು ಕಾವೇರಿ ನ್ಯಾಯಾಧೀಕರಣದ ಆದೇಶದ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಆರೋಪಿಸಿದ್ದಾರೆ.
04:52 PM (IST) May 26
ಬೆಳಗಾವಿಯಲ್ಲಿನ ಬಹುಕೋಟಿ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದೆ. 45000 ಕೋಟಿ ರೂಪಾಯಿ ಹಗರಣದಲ್ಲಿ ಅರೆಸ್ಟ್ ಆಗಿರುವ ಶಿವಾನಂದ ನೀಲಣ್ಣನವರ್ ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
04:25 PM (IST) May 26
ವರದಿ: ರಾಘವೇಂದ್ರ ಹೆಬ್ಬಾರ
ಭಟ್ಕಳದ ಸಾರದಹೊಳೆ ಗ್ರಾಮದ 11 ಬಡ ಕೂಲಿ ಕಾರ್ಮಿಕರು ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದುರಂತದಿಂದ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದ್ದು, ಒಂದೇ ಕುಟುಂಬದ ಎಂಟು ಮಂದಿ ಸೇರಿದಂತೆ ಮೃತರ ಸಾಮೂಹಿಕ ಅಂತ್ಯಸಂಸ್ಕಾರ ನೆರವೇರಿತು.
03:53 PM (IST) May 26
03:39 PM (IST) May 26
03:39 PM (IST) May 26
03:09 PM (IST) May 26
02:37 PM (IST) May 26
ಬೆಂಗಳೂರಿನಲ್ಲಿ ನಂಬಿಕೆದ್ರೋಹದ ಪ್ರಕರಣ ಬೆಳಕಿಗೆ ಬಂದಿದೆ. ರಾಜರಾಜೇಶ್ವರಿನಗರದಲ್ಲಿ ವಾಸವಿರುವ ಅಂಧ ಮಹಿಳೆಯ ಮನೆಗೆ ಸ್ನೇಹಿತರಂತೆ ಮನೆಗೆ ಬರುತ್ತಿದ್ದ ದಂಪತಿಗಳು ಚಿನ್ನಾಭರಣ ದೋಚಿದ್ದಾರೆ, ವರ್ಷದ ಬಳಿಕ ಕಳ್ಳತನ ಗೊತ್ತಾಗಿ ಎಫ್ಐಆರ್ ದಾಖಲಿಸಿದಾಗ ಪೊಲೀಸರು ಖದೀಮರನ್ನ ಹೇಗೆ ಪತ್ತೆಹಚ್ಚಿದರು ಗೊತ್ತಾ?.
02:14 PM (IST) May 26
02:07 PM (IST) May 26
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಜ್ಯುವೆಲರಿ ಅಂಗಡಿಯ ಗೋಡೆ ಕೊರೆದು ನುಗ್ಗಿದ ಕಳ್ಳರ ಗ್ಯಾಂಗ್, ಬಂಗಾರವನ್ನು ಮುಟ್ಟದೆ ಕೆಜಿಗಟ್ಟಲೆ ಬೆಳ್ಳಿ ಮಾತ್ರ ದೋಚಿತ್ತು. ಈ ಪ್ರಕರಣವನ್ನು ಭೇದಿಸಿದ ಬಾಗಲಗುಂಟೆ ಪೊಲೀಸರು, ರಾಜಸ್ಥಾನದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ 36 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.
01:58 PM (IST) May 26
Kannada Star Actor Daughter: ಕನ್ನಡದ ಸ್ಟಾರ್ ನಟನ ಮಗಳೋರ್ವರು ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈಗ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಹಾಗಾದರೆ ಯಾರದು? ಅವರು ಯಾರು?
01:49 PM (IST) May 26
ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ, ಡಾ. ಮಹೇಂದ್ರ ರೆಡ್ಡಿ ತನ್ನ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ ಅರಿವಳಿಕೆ ಔಷಧಿಯ ಅಧಿಕ ಡೋಸ್ ನೀಡಿ ಕೊಲೆ ಮಾಡಿದ್ದಾನೆ. ಪರಸ್ತ್ರೀ ಸಂಬಂಧದ ಹಿನ್ನೆಲೆಯಲ್ಲಿ, ಗೂಗಲ್ನಲ್ಲಿ ಕೊಲೆಗೆ ಸಂಚು ರೂಪಿಸಿದ್ದು, ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
01:27 PM (IST) May 26
ಬೆಳಗಾವಿಯಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಅಂಗೀಕರಿಸದಿದ್ದರೆ ಕಂಡರಿಯದ ಕ್ರಾಂತಿ ಮಾಡುವುದಾಗಿ ಎಚ್ಚರಿಸಿದ್ದಾರೆ. ಮುಂದಿನ ಬಾರಿ ತಾವೇ ಮುಖ್ಯಮಂತ್ರಿಯಾಗುವುದಾಗಿಯೂ ಹೇಳಿದ್ದಾರೆ.
12:59 PM (IST) May 26
12:50 PM (IST) May 26
Actor Upendra: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರು ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದಾರೆ. ಇನ್ನು ಉಪೇಂದ್ರ ಮಕ್ಕಳು ಕೂಡ ಅಣ್ಣನ ಎಂಗೇಜ್ಮೆಂಟ್ನಲ್ಲಿ ಖುಷಿಯಿಂದ ಸಮಯ ಕಳೆದಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
12:33 PM (IST) May 26
Mahalakshmi Maduve Serial: ನಟಿ ಅಮೂಲ್ಯ ಗೌಡ, ಭರತ್ ಶಿವಣ್ಣ, ಶಿವಾಜಿರಾವ್ ಜಾಧವ್, ಸೀತಾ ಕೋಟೆ, ಅಮೃತಾ ರಾಮಮೂರ್ತಿ, ಪದ್ಮಿನಿ, ಹರಿಪ್ರಿಯಾ, ಮಂಜು ಪಾವಗಡ, ಮಾನಸ, ಮೇಘಶ್ರೀ, ಪ್ರತೀಕ್ಷಾ, ಸ್ನೇಹಾ ಭಟ್, ಧನುಷ್ ಗೌಡ ನಟಿಸುತ್ತಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿ ಉದಯ ವಾಹಿನಿಯಲ್ಲಿ ಪ್ರಸಾರ ಆಗಲಿದೆ.
12:18 PM (IST) May 26
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಅಮೆರಿಕ ಪ್ರವಾಸ, ಸಿಎಂ ಬದಲಾವಣೆ, ಮತ್ತು ಸಂಪುಟ ಪುನರ್ರಚನೆ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಮತ್ತೆ ಮಾತನಾಡಿದ್, ಡಾ.ಜಿ. ಪರಮೇಶ್ವರ್ ಸಿಎಂ ಆಗಬೇಕೆಂಬ ತಮ್ಮ ಅಭಿಪ್ರಾಯಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.
11:34 AM (IST) May 26
ಕೆಪಿಎಸ್ ಶಾಲೆಗಳ ಸ್ಥಾಪನೆಯಿಂದಾಗಿ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಅಪಾಯವಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ, ಶಿಕ್ಷಕರ ಕೊರತೆ, ಮತ್ತು ಅವೈಜ್ಞಾನಿಕ ಮೌಲ್ಯಮಾಪನದ ಬಗ್ಗೆಯೂ ಅವರು ತೀವ್ರ ಅಸಮಾಧಾನ
10:33 AM (IST) May 26
10:27 AM (IST) May 26
ರಾಜ್ಯ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಿರುವುದರಿಂದ ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ದರ ಶೇ.60ರಷ್ಟು ಹೆಚ್ಚಳವಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಇದರಿಂದ ಮಸಾಲೆ ದೋಸೆ ದರ 150 ರೂ.ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಂಘ ಹೇಳಿದೆ.
10:04 AM (IST) May 26
ಬಳ್ಳಾರಿಯ ಕೊಟ್ಟಿಗೆಯೊಂದರಲ್ಲಿ 50ಕ್ಕೂ ಹೆಚ್ಚು ಗೋವುಗಳನ್ನು ಕೂಡಿಹಾಕಿದ್ದನ್ನು ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ಪತ್ತೆಹಚ್ಚಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕಸಾಯಿಖಾನೆಗೆ ಸಾಗಿಸಲು ಇವುಗಳನ್ನು ಸಂಗ್ರಹಿಸಿಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
07:22 AM (IST) May 26
ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಲ್ಲಿನ ದುರ್ಬಳಕೆ ಮತ್ತು ಹಣ ಸೋರಿಕೆ ತಡೆಯಲು ಸರ್ಕಾರ ಮುಂದಾಗಿದೆ. ಮೃತಪಟ್ಟವರು ಮತ್ತು ಅನರ್ಹರ ಹೆಸರಿನಲ್ಲಿ ಹಣ ದುರ್ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಿ, ಹೊಸದಾಗಿ ಅರ್ಜಿ ಪಡೆಯಲು ಸರ್ಕಾರ ಚಿಂತನೆ.