LIVE NOW
Published : May 26, 2026, 07:20 AM ISTUpdated : May 26, 2026, 10:33 AM IST

ಮನೆಯೊಳಗೆ ನಡೆದಿದ್ದೇನು? ಸೊಸೆ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ 75 ವರ್ಷದ ಮುದುಕ ಮಾವನಿಗೆ ಜಾಮೀನು!

ಸಾರಾಂಶ

ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Karnataka High Court

10:33 AM (IST) May 26

ಮನೆಯೊಳಗೆ ನಡೆದಿದ್ದೇನು? ಸೊಸೆ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ 75 ವರ್ಷದ ಮುದುಕ ಮಾವನಿಗೆ ಜಾಮೀನು!

ಸೊಸೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ 75 ವರ್ಷದ ಮಾವನಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಸಂತ್ರಸ್ತ ಸೊಸೆಯೇ ಪ್ರಮಾಣ ಪತ್ರ ಸಲ್ಲಿಸಿದ್ದರಿಂದ ನ್ಯಾಯಾಲಯ ಈ ಆದೇಶ ಮಾಡಿದೆ.
Read Full Story

10:27 AM (IST) May 26

ಕರ್ನಾಟಕದಲ್ಲಿ ಹೋಟೆಲ್ ತಿಂಡಿ ದರ ಶೇ.60ರಷ್ಟು ಏರಿಕೆ ಸಾಧ್ಯತೆ! ಮಸಾಲೆ ದೋಸೆಗೆ ದುಪ್ಪಟ್ಟು, ಕಾರಣ ಗ್ಯಾಸ್ ಅಲ್ಲ!

ರಾಜ್ಯ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಿರುವುದರಿಂದ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರ ಶೇ.60ರಷ್ಟು ಹೆಚ್ಚಳವಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಇದರಿಂದ ಮಸಾಲೆ ದೋಸೆ ದರ 150 ರೂ.ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು  ಸಂಘ ಹೇಳಿದೆ.

Read Full Story

10:04 AM (IST) May 26

Ballari shock - ಬಕ್ರೀದ್‌ಗಾಗಿ ಗೋವುಗಳ ಕೂಡಿಹಾಕಿದ ಆರೋಪ - ಬಳ್ಳಾರಿ ಹಳೇ ಬೈಪಾಸ್‌ನಲ್ಲಿ ಪೊಲೀಸರ ದಾಳಿ; 50ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಬಳ್ಳಾರಿಯ ಕೊಟ್ಟಿಗೆಯೊಂದರಲ್ಲಿ 50ಕ್ಕೂ ಹೆಚ್ಚು ಗೋವುಗಳನ್ನು ಕೂಡಿಹಾಕಿದ್ದನ್ನು ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ಪತ್ತೆಹಚ್ಚಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕಸಾಯಿಖಾನೆಗೆ ಸಾಗಿಸಲು ಇವುಗಳನ್ನು ಸಂಗ್ರಹಿಸಿಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

Read Full Story

07:22 AM (IST) May 26

ಗೃಹಲಕ್ಷ್ಮಿ-ಗೃಹಜ್ಯೋತಿ ದುರ್ಬಳಕೆಯಿಂದ ಸರ್ಕಾರಕ್ಕೆ 100 ಕೋಟಿ ನಷ್ಟ, ಇನ್ಮುಂದೆ ಎಲ್ಲರಿಗೂ ಸಿಗಲ್ಲ ಗ್ಯಾರಂಟಿ! ಸರ್ಕಾರದ ಮಾಸ್ಟರ್ ಪ್ಲಾನ್ ಏನು?

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಲ್ಲಿನ ದುರ್ಬಳಕೆ ಮತ್ತು ಹಣ ಸೋರಿಕೆ ತಡೆಯಲು ಸರ್ಕಾರ ಮುಂದಾಗಿದೆ. ಮೃತಪಟ್ಟವರು ಮತ್ತು ಅನರ್ಹರ ಹೆಸರಿನಲ್ಲಿ ಹಣ ದುರ್ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಿ, ಹೊಸದಾಗಿ ಅರ್ಜಿ ಪಡೆಯಲು ಸರ್ಕಾರ ಚಿಂತನೆ.

Read Full Story

More Trending News