ಕಲಬುರಗಿ ಜಿಲ್ಲೆ ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ (51) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಹಾಂತೇಶ ಅವರ ಸೋದರರಾದ ಶಂಕರ ಬೀಳಗಿ (55) ಹಾಗೂ ಈರಣ್ಣ ಬೀಳಗಿ (53) ಕೂಡಾ ಸಾವನ್ನಪ್ಪಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿದ್ದಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಾಂತೇಶ ಬೀಳಗಿ ಅವರು ತಮ್ಮ ಸಹೋದ ರರು ಹಾಗೂ ಬಂಧುಗಳ ಜೊತೆಗೆ ಇನ್ನೋವಾ ಕಾರಿನಲ್ಲಿ ರಾಮದುರ್ಗದಿಂದ ಕಲಬುರಗಿಗೆ ಬರುತ್ತಿದ್ದರು. ಚಾಲಕ ಸೇರಿ ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ರಾಮದುರ್ಗ ದಿಂದ ವಿಜಯಪುರ ಮಾರ್ಗವಾಗಿ ಕಲಬು ರಗಿಗೆ ತೆರಳುತ್ತಿದ್ದವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಇವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ದುರಂತಕ್ಕೀಡಾಗಿದೆ. ಏಕಾಏಕಿ ರಸ್ತೆಯಲ್ಲಿ ಕಾರಿಗೆ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
11:34 PM (IST) Nov 26
Karnataka CM power sharing dispute: ಮುಖ್ಯಮಂತ್ರಿ ಅಧಿಕಾರ ಹಂಚಿಕೆ ವಿವಾದದಲ್ಲಿ ಡಿಕೆ ಶಿವಕುಮಾರ್ ಪರ ಆದಿಚುಂಚನಗಿರಿ ಶ್ರೀಗಳು ಬ್ಯಾಟಿಂಗ್ ಮಾಡಿದ್ದಕ್ಕೆ ಕಾಗಿನೆಲೆ ಶಾಖಾ ಮಠದ ಸಿದ್ದರಾಮನಂದ ಮಹಾಪುರಿ ಸ್ವಾಮೀಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
11:00 PM (IST) Nov 26
08:46 PM (IST) Nov 26
08:18 PM (IST) Nov 26
08:04 PM (IST) Nov 26
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಅಮ್ಮನ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಸಮುದಾಯದ ಹಿರಿಯರ ಸೂಚನೆಯಂತೆ ಕೊನೆಗೆ ಅಗ್ನಿಸ್ಪರ್ಶದ ಮೂಲಕ ರಾಮದುರ್ಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
07:56 PM (IST) Nov 26
ಬರೋಬ್ಬರಿ 12 ಸಾವಿರ ವರ್ಷಗಳ ನಂತರ ದಕ್ಷಿಣ ಆಫ್ರಿಕಾದ ಇಥಿಯೋಪಿಯಾದಲ್ಲಿ 'ಹೇಲಿ ಗುಬ್ಬಿ' ಹೆಸರಿನ ಜ್ವಾಲಾಮುಖಿ ಸ್ಫೋಟಿಸಿದೆ. ಹೀಗಾಗಿ ದೆಹಲಿಯಿಂದ ಹೊರಡಬೇಕಿದ್ದ ಏಳು ಅಂತರರಾಷ್ಟ್ರೀಯ ವಿಮಾನಗಳ ರದ್ದುಗೊಳಿಸಬೇಕಾಯಿತು. ಹಾಗಾದರೆ ಜ್ವಾಲಾಮುಖಿ ಸ್ಫೋಟಕ್ಕೂ ವಿಮಾನ ಹಾರಾಟ ಸ್ಥಗಿತಕ್ಕೂ ಏನ್ ಸಂಬಂಧ.
07:42 PM (IST) Nov 26
Karnataka Congress power sharing row: ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಬೇಕೆಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ.
07:21 PM (IST) Nov 26
07:06 PM (IST) Nov 26
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು,. ವಾರ್ಡನ್ ಅಮಾನತು ಆರೋಪಿ ಬಂಧನ
06:36 PM (IST) Nov 26
ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ಗೆ ₹10 ಲಕ್ಷ ಬಹುಮಾನ ನೀಡುವುದಾಗಿ ವರ್ತೂರ್ ಸಂತೋಷ್ ಘೋಷಿಸಿದ್ದಾರೆ. ಆದರೆ, ತಮ್ಮ ಹಳ್ಳಿಕಾರ್ ಎತ್ತುಗಳನ್ನು ಬಿಗ್ ಬಾಸ್ ಮನೆಯೊಳಗೆ ಪ್ರದರ್ಶಿಸಲು ಅವಕಾಶ ನೀಡಿದರೆ ಮಾತ್ರ ಈ ಬಹುಮಾನ ನೀಡುವುದಾಗಿ ಅವರು ಷರತ್ತು ವಿಧಿಸಿದ್ದಾರೆ.
06:30 PM (IST) Nov 26
ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಚರ್ಚೆಗಳು ತೀವ್ರಗೊಂಡಿವೆ. 2.5 ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದದ ಊಹಾಪೋಹಗಳ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.
06:21 PM (IST) Nov 26
06:11 PM (IST) Nov 26
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಡಿಯಾಲಾ ಜೈಲಿನಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿವೆ. ಯಾವುದೇ ಅಧಿಕೃತ ದೃಢೀಕರಣವಿಲ್ಲದಿದ್ದರೂ, ಕುಟುಂಬಸ್ಥರಿಗೆ, ಪಕ್ಷದ ನಾಯಕರಿಗೆ ಭೇಟಿಗೆ ಅನುಮತಿ ನೀಡದಿರುವುದು ಅನುಮಾನಕ್ಕೆ ಕಾರಣ
05:54 PM (IST) Nov 26
05:50 PM (IST) Nov 26
ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣದ ನಿರಪರಾಧಿ ತೀರ್ಪು 'ನಮ್ಮ ವ್ಯವಸ್ಥೆಯ ಸೋಲು' ಎಂದು ಮೈಸೂರಿನ ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಟ್ಯಾನ್ಲಿ ಹೇಳಿದ್ದಾರೆ. ತನಿಖಾ ಹಂತದಲ್ಲಿನ ಲೋಪಗಳೇ ಇದಕ್ಕೆ ಕಾರಣ ಎಂದಿದ್ದಾರೆ. ಮಕ್ಕಳ ಪರ ಕಾನೂನು ಹೋರಾಟ ಮುಂದುವರಿಸುವುದಾಗಿ ಸಂಸ್ಥೆ ಸ್ಪಷ್ಟಪಡಿಸಿದೆ.
05:48 PM (IST) Nov 26
'ಅಮೃತವರ್ಷಿಣಿ' ಖ್ಯಾತಿಯ ನಟಿ ರಜಿನಿ, ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಸೋತ ಪತಿ ಅರುಣ್ ವೆಂಕಟೇಶ್ ಕುರಿತು ಭಾವುಕ ವಿಡಿಯೋ ಹಂಚಿಕೊಂಡಿದ್ದಾರೆ. ಸ್ಪರ್ಧಿಗಳು ಪಡುವ ಕಷ್ಟ ಮತ್ತು ಸೋಲಿನ ನಿರಾಸೆಯನ್ನು ವಿವರಿಸಿದ ಅವರು, ಸೋಲನ್ನು ನಗುತ್ತಾ ಸ್ವಾಗತಿಸಿದರೆ ಗೆಲುವು ನಮ್ಮದಾಗುತ್ತದೆ ಎಂದಿದ್ದಾರೆ.
05:35 PM (IST) Nov 26
Yelburga former MLA Death: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ (79) ಅವರು ಅನಾರೋಗ್ಯದಿಂದಾಗಿ ತುಮಕೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1999 ರಿಂದ 2004 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದ ಅವರ ಅಂತ್ಯಕ್ರಿಯೆಯು ಸ್ವಗ್ರಾಮ ಹುಣಿಸ್ಯಾಳದಲ್ಲಿ ನಡೆಯಲಿದೆ.
05:10 PM (IST) Nov 26
ತುಂಡುಡುಗೆಯಿಂದಲೇ ಖ್ಯಾತರಾದ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಇದೀಗ 'ಮೆನ್ ಆರ್ ಫ್ರಮ್ ಮಾರ್ಸ್, ವಿಮೆನ್ ಆರ್ ಫ್ರಮ್ ವೀನಸ್' ಎಂಬ ಪುಸ್ತಕದೊಂದಿಗೆ ಕಾಣಿಸಿಕೊಂಡಿದ್ದಾರೆ. ಸಂಬಂಧಗಳ ಕುರಿತಾದ ಈ ಪುಸ್ತಕವನ್ನು ಅವರು ಯಾಕೆ ಹಿಡಿದಿದ್ದಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.
05:08 PM (IST) Nov 26
ಮಾಜಿ ಸಚಿವ ಕೆಎನ್ ರಾಜಣ್ಣ, ಮುಖ್ಯಮಂತ್ರಿ ಹುದ್ದೆಯ ಚರ್ಚೆಗೆ ಹೊಸ ತಿರುವು ನೀಡಿದ್ದಾರೆ. ಡಿಕೆ ಶಿವಕುಮಾರ್ಗಿಂತ ಮೊದಲು ಜಿ ಪರಮೇಶ್ವರ್ಗೆ ಸಿಎಂ ಸ್ಥಾನ ನೀಡಬೇಕು, ಅವರ 'ಹಳೇ ಕೂಲಿ' ಮೊದಲು ಕ್ಲಿಯರ್ ಆಗಲಿ ಎಂದು ಹೇಳುವ ಮೂಲಕ ಕಾಂಗ್ರೆಸ್ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
04:17 PM (IST) Nov 26
ಕಾರು ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಜೀವನವು ನೋವಿನಿಂದ ಪ್ರೇರಿತವಾಗಿತ್ತು. ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ತಾಯಿಯ ಪಿಂಚಣಿ ನೋವಿನಿಂದ ಪ್ರೇರಿತರಾಗಿ 'ಪಿಂಚಣಿ ಅದಾಲತ್' ಜಾರಿಗೆ ತಂದಿದ್ದರು. ರಾಮದುರ್ಗದಲ್ಲಿ ಅವರ ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.
04:06 PM (IST) Nov 26
‘ಅಮೃತಧಾರೆ’ಯ ಮಲ್ಲಿ ಹಾಗೂ ‘ಭಾರ್ಗವಿ ಎಲ್ಎಲ್ಬಿ’ಯ ಭಾರ್ಗವಿಯಾಗಿ ಜನಪ್ರಿಯರಾಗಿರುವ ನಟಿ ರಾಧಾ ಭಗವತಿ, ಕಿರುತೆರೆ ಮಾತ್ರವಲ್ಲದೆ ಬೆಳ್ಳಿಪರದೆಗೂ ಕಾಲಿಟ್ಟಿದ್ದಾರೆ. ನಟನೆ, ಮಾಡೆಲಿಂಗ್ ಜೊತೆಗೆ ಹಿನ್ನೆಲೆ ಗಾಯಕಿ ಹಾಗೂ ಡಬ್ಬಿಂಗ್ ಕಲಾವಿದೆಯಾಗಿಯೂ ಗುರುತಿಸಿಕೊಂಡಿರುವ ಇವರು ಕಲಾವಿದರ ಕುಟುಂಬದಿಂದ ಬಂದವರು
03:19 PM (IST) Nov 26
1940 Women Gym Video: ಸಾಮಾನ್ಯ ಜನರಿಂದ ಸೆಲೆಬ್ರಿಟಿಗಳವರೆಗೆ ಅನೇಕರು ಜಿಮ್ ಮೊರೆ ಹೋಗೊದುಂಟು. ಸಾಮಾನ್ಯ ಜನರು ಫಿಟ್ನೆಸ್ ಕಡೆಗೆ ಗಮನ ಕೊಡುತ್ತಾರೆ. ಆದರೆ 1940 ರಲ್ಲಿ ಜಿಮ್ ಇರಲಿಲ್ಲ. "ಸ್ಲೆಂಡರೈಸಿಂಗ್ ಸಲೂನ್ಗಳು" (Slenderizing Salons) ಇದ್ದವು.
03:15 PM (IST) Nov 26
ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಹಸ್ಯವಾಗಿ ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಆದರೆ, ತಾವು ಸಿದ್ದರಾಮಯ್ಯನವರನ್ನು ಬಿಟ್ಟು ಬರುವುದಿಲ್ಲ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
02:51 PM (IST) Nov 26
Smriti Mandhana Palash Muchhal Wedding: ಭಾರತೀಯ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಾನ, ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆ ಮದುವೆ ಆಗಲು ರೆಡಿಯಾಗಿದ್ದರು. ಮೈದಾನದಲ್ಲಿ ಪ್ರೇಮ ನಿವೇದನೆ ಆಗಿತ್ತು, ಹಳದಿ, ಸಂಗೀತ, ಮೆಹೆಂದಿ ನಡೆದರೂ ಕೂಡ ಮದುವೆ ಮಾತ್ರ ಆಗಲಿಲ್ಲ. ಯಾರ ಕಣ್ಣು ಬಿತ್ತೋ ಏನೋ
02:30 PM (IST) Nov 26
01:14 PM (IST) Nov 26
01:08 PM (IST) Nov 26
Mahantesh Bilagi Death: ಕಲಬುರಗಿಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಅಪಘಾತವಾಗಿದ್ದು, ಕಾರ್ನಲ್ಲಿದ್ದ ನಾಲ್ವರು ನಿಧನರಾಗಿದ್ದಾರೆ. ಅವರಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಕೂಡ ಒಬ್ರು. ಇವರು ದಕ್ಷ ಅಧಿಕಾರಿಯಾಗಿದ್ದರು.
01:04 PM (IST) Nov 26
ಹೆಚ್ಚುತ್ತಿರುವ ವಿಚ್ಛೇದನ ಪ್ರಕರಣಗಳಿಂದಾಗಿ ಬೆಂಗಳೂರಿನ ಹಲಸೂರು ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಮದುವೆಗಳನ್ನು ನಿಲ್ಲಿಸಲಾಗಿದೆ. ದಂಪತಿ ನ್ಯಾಯಾಲಯಕ್ಕೆ ಹೋದಾಗ, ಮದುವೆ ಮಾಡಿಸಿದ ಅರ್ಚಕರನ್ನು ಸಾಕ್ಷಿಯಾಗಿ ಕರೆಯುತ್ತಿರುವುದರಿಂದ, ಅವರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
12:57 PM (IST) Nov 26
ಮೆಗಾಸ್ಟಾರ್ ಚಿರಂಜೀವಿ ಮತ್ತು ಸೂಪರ್ಸ್ಟಾರ್ ರಜನಿಕಾಂತ್ ಕಾಂಬಿನೇಷನ್ನಲ್ಲಿ ಸಿನಿಮಾ ಬರಬೇಕೆಂದು ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಈ ನಡುವೆ ಈ ಬ್ಲಾಕ್ಬಸ್ಟರ್ ಕಾಂಬೋದಲ್ಲಿ ಸಿನಿಮಾ ಬರಲಿದೆ ಎಂಬ ಸುದ್ದಿ ವೈರಲ್ ಆಗಿದೆ. ಇದರಲ್ಲಿ ನಿಜವೆಷ್ಟು?
12:55 PM (IST) Nov 26
ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆಗಿಂತ ಚರ್ಚೆಗೆ ಆದ್ಯತೆ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಶಾಸಕರಿಗೆ ಕರೆ ನೀಡಿದ್ದಾರೆ. ತಮ್ಮ ವಿರುದ್ಧದ ಅವಿಶ್ವಾಸ ಮಂಡನೆ ಪ್ರಸ್ತಾಪದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ತಮ್ಮ ಕಾರ್ಯವೈಖರಿ ಪ್ರಾಮಾಣಿಕವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
12:32 PM (IST) Nov 26
ವಾರಣಾಸಿಯಲ್ಲಿ ರುದ್ರನಾಗಿ ಮಹೇಶ್ ಬಾಬು ಮಿಂಚಲಿದ್ದಾರೆ. ಈ ಸಿನಿಮಾದಲ್ಲಿ ರಾಜಮೌಳಿ ಒಂದು ಎಮೋಷನಲ್ ಫ್ಲ್ಯಾಶ್ಬ್ಯಾಕ್ ತೋರಿಸಲಿದ್ದಾರಂತೆ. ಅದರಲ್ಲಿ ಮಹೇಶ್ ಬಾಲ್ಯದ ರುದ್ರನ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡಿದ್ದಾರೆ ಗೊತ್ತಾ?
12:31 PM (IST) Nov 26
ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ನಂದಿನಿ ತುಪ್ಪ ತಯಾರಿಕೆ ಹಗರಣದ ಪ್ರಮುಖ ಸೂತ್ರಧಾರರಾದ ಮೈಸೂರು ಮೂಲದ ದಂಪತಿಯನ್ನು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿದ್ದ ಈ ದಂಪತಿ, ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದರು.
12:31 PM (IST) Nov 26
Bigg Boss Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಒನ್ ಮ್ಯಾನ್ ಶೋ ಎನ್ನುವಂತೆ ಮಾತಿನಲ್ಲಿಯೇ ಎಲ್ಲರ ಮನಸ್ಸು ಗೆದ್ದಿರುವ ಗಿಲ್ಲಿ ನಟ ಅವರಿಗೆ ಮದುವೆ ಆಗೋದು ಕಷ್ಟ ಇದೆಯಂತೆ, ಹೀಗೆಂದು ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿಗಳು ಮಾತನಾಡಿದ್ದಾರೆ.
12:30 PM (IST) Nov 26
12:21 PM (IST) Nov 26
ಕಲಬುರಗಿಯಲ್ಲಿ ನಡೆದ ಭೀಕರ ಕಾರ್ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನರಾಗಿದ್ದಾರೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
11:59 AM (IST) Nov 26
ಒಂದು ಕಾಲದಲ್ಲಿ ಸ್ಟಾರ್ ನಿರೂಪಕಿಯಾಗಿದ್ದ ಅನಸೂಯ ಭಾರಧ್ವಜ್ ಈಗ ಸಿನಿಮಾ, ಶೋಗಳಿಲ್ಲದೆ ಖಾಲಿ ಇದ್ದಾರೆ. ಇದಕ್ಕೆ ಅವರು ತೆಗೆದುಕೊಂಡ ಒಂದೇ ಒಂದು ನಿರ್ಧಾರವೇ ಇದಕ್ಕೆ ಕಾರಣ ಎನ್ನಬಹುದು.
11:47 AM (IST) Nov 26
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ದೂರವಿದ್ದರೂ, ನಟರಾದ ರಾಜೇಶ್ ನಟರಂಗ ಮತ್ತು ಛಾಯಾ ಸಿಂಗ್ ಅವರ ರೀಲ್ಸ್ ಒಂದು ಕುತೂಹಲ ಮೂಡಿಸಿದೆ. ಈ ಲೇಖನವು ಆ ರೀಲ್ಸ್ನ ಹಿಂದಿನ ಸತ್ಯವನ್ನು ಬಹಿರಂಗಪಡಿಸುವುದೆ.
11:40 AM (IST) Nov 26
11:34 AM (IST) Nov 26
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಅಮಾನವೀಯ ಘಟನೆಯು ಸಿಬ್ಬಂದಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದು, ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.
11:20 AM (IST) Nov 26
ಎಚ್ಡಿಎಫ್ಸಿ ಬ್ಯಾಂಕ್ನ 7.11 ಕೋಟಿ ರು. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 9 ಆರೋಪಿಗಳನ್ನು ಬಂಧಿಸಿ 7.1 ಕೋಟಿ (ಶೇ.98.6 ರಷ್ಟು ) ನಗದನ್ನು ವಶಪಡಿಸಿಕೊಳ್ಳಲಾಗಿದೆ.