LIVE NOW
Published : Dec 26, 2025, 07:37 AM ISTUpdated : Dec 26, 2025, 11:27 PM IST

State News Live: ಅರಾವಳಿ ಉಳಿಸಿ - ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!

ಸಾರಾಂಶ

ಬೆಂಗಳೂರು (ಡಿ.26): ಒಂದೆಡೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಸರತ್ತು ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಶುಕ್ರ ವಾರ ಸಂಜೆ ತೆರಳಲಿದ್ದಾರೆ. ಆದರೆ ಈ ವೇಳೆ ಅವಕಾಶ ಸಿಕ್ಕರೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತ್ರ ಅವರು ಹೈಕಮಾಂಡ್ ಜತೆ ಚರ್ಚಿಸುವ' ಸಾಧ್ಯತೆ ಇದೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

11:27 PM (IST) Dec 26

ಅರಾವಳಿ ಉಳಿಸಿ - ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!

ಅರಾವಳಿ ಪರ್ವತ ಶ್ರೇಣಿಯನ್ನು ಗಣಿಗಾರಿಕೆ ಮಾಫಿಯಾದಿಂದ ರಕ್ಷಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ 'ಅರಾವಳಿ ಸತ್ಯಾಗ್ರಹ' ಎಂಬ 1,000 ಕಿ.ಮೀ. ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಈ ಹೋರಾಟದ ಮೂಲಕ, ಅಕ್ರಮ ಗಣಿಗಾರಿಕೆ  ನಿಲ್ಲಿಸುವುದು ಮತ್ತು ಅರಾವಳಿ 'ನಿರ್ಣಾಯಕ ಪರಿಸರ ವಲಯ' ಎಂದು ಘೋಷಿಸುವಂತೆ ಒತ್ತಾಯ.

Read Full Story

11:00 PM (IST) Dec 26

ಹುಂಜಾ ಕಣಿವೆ - ಇಲ್ಲಿನ ಮಹಿಳೆಯರು 65ರ ಪ್ರಾಯದಲ್ಲೂ ಮಕ್ಕಳಿಗೆ ಜನ್ಮ ನೀಡಬಲ್ಲರು! ವಯಸ್ಸನ್ನೇ ಸೋಲಿಸಿದ ಸುಂದರಿಯರ ರಹಸ್ಯವೇನು?

ಹಿಮಾಲಯದ ತಪ್ಪಲಿನಲ್ಲಿರುವ ಹುಂಜಾ ಕಣಿವೆಯ ಮಹಿಳೆಯರು 70ರ ಹರೆಯದಲ್ಲೂ ಯುವತಿಯರಂತೆ ಕಾಣುತ್ತಾರೆ. ಅವರ ಈ ವಯಸ್ಸಾಗದ ಸೌಂದರ್ಯ ಮತ್ತು 120 ವರ್ಷಗಳ ದೀರ್ಘಾಯುಷ್ಯದ ಹಿಂದೆ ಯಾವುದೇ ಕೃತಕ ವಿಧಾನಗಳಿಲ್ಲ, ಬದಲಾಗಿ ನೈಸರ್ಗಿಕ ಆಹಾರ, ಶುದ್ಧ ನೀರು ಮತ್ತು ಒತ್ತಡ ರಹಿತ ಜೀವನಶೈಲಿಯೇ ಪ್ರಮುಖ ಕಾರಣವಾಗಿದೆ.
Read Full Story

10:35 PM (IST) Dec 26

ನಿಮ್ಮ ಗ್ಯಾಸ್ ಗೀಸರ್ ಸುರಕ್ಷಿತವಾಗಿದೆಯೇ? ಈ ವಿಷಯ ತಿಳ್ಕೊಳ್ಳಿ, ದೊಡ್ಡ ಅನಾಹುತ ತಪ್ಪಿಸಿ!

ಚಳಿಗಾಲದಲ್ಲಿ ಗ್ಯಾಸ್ ಗೀಸರ್ ಬಳಕೆ ಅಪಾಯಕಾರಿ. ಮುಚ್ಚಿದ ಸ್ನಾನಗೃಹದಲ್ಲಿ ವಾತಾಯನವಿಲ್ಲದಿದ್ದರೆ, ಕಾರ್ಬನ್ ಮಾನಾಕ್ಸೈಡ್ ಅನಿಲದಿಂದ ಪ್ರಾಣಾಪಾಯ ಸಂಭವಿಸಬಹುದು. ಸುರಕ್ಷತೆಗಾಗಿ ಸರಿಯಾದ ವಾತಾಯನ, ಎಚ್ಚರಿಕೆಯ ಅಳವಡಿಕೆ ಮತ್ತು ನಿಯಮಿತ ಪರಿಶೀಲನೆ ಅತ್ಯಗತ್ಯ.
Read Full Story

10:22 PM (IST) Dec 26

ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ

ಮೈಸೂರಿನಲ್ಲಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ಇದೇ ವೇಳೆ ಮೃತ ವ್ಯಾಪಾರಿ ಸಲೀಂ ಮೇಲೆ ಅನುಮಾನಗಳು ಹೆಚ್ಚುತ್ತಿದೆ. ಇದಕ್ಕೆ ಕೆಲ ಕಾರಣಗಳು ಇವೆ.

Read Full Story

10:05 PM (IST) Dec 26

Karna Serial - ಎಲ್ಲ ಖುಷಿಯಿಂದ ಇರ್ಬೇಕಿದ್ರೆ, ಈ ಥರ ಮಾಡಿದ್ರೆ ಚೆನ್ನಾಗಿರಲ್ಲ - ಡೈರೆಕ್ಟರ್‌ಗೆ ವಾರ್ನಿಂಗ್

Karna Kannada Serial Today Episode: ಕರ್ಣ ಧಾರಾವಾಹಿಯಲ್ಲಿ ತೇಜಸ್‌ ಮರಳಿ ಬಂದಾಗಿದೆ, ನಿತ್ಯಾ ಹಾಗೂ ತೇಜಸ್‌ ಮದುವೆ ಮಾಡಿಸಬೇಕು ಎಂದು ಕರ್ಣ ರೆಡಿಯಾಗಿದ್ದಾನೆ. ಅಷ್ಟರೊಳಗಡೆ ನಿತ್ಯಾ ಮಗುವಿಗೆ ತೊಂದರೆ ಆಗುವ ಸಂದರ್ಭ ಬಂದಿದೆ. ಹಾಗಾದರೆ ಮುಂದೆ ಏನಾಗಲಿದೆ?

 

Read Full Story

09:40 PM (IST) Dec 26

ಲಕ್ನೋ - ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹೂಕುಂಡಗಳ ಲೂಟಿ; ವಿಡಿಯೋ ವೈರಲ್

ಪ್ರಧಾನಿ ಮೋದಿ ಲಕ್ನೋ ಭೇಟಿಯ ನಂತರ, ಕಾರ್ಯಕ್ರಮದ ವೇದಿಕೆಯನ್ನು ಅಲಂಕರಿಸಲು ತಂದಿದ್ದ ಹೂವಿನ ಕುಂಡಗಳನ್ನು ಸ್ಥಳೀಯರು ಕದ್ದೊಯ್ದಿದ್ದಾರೆ. ಸ್ಕೂಟರ್ ಮತ್ತು ಬೈಕ್‌ಗಳಲ್ಲಿ ಬಂದು ಜನರು ಹೂವಿನ ಗಿಡಗಳನ್ನು ಕೊಂಡೊಯ್ಯುತ್ತಿರುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.  

Read Full Story

09:29 PM (IST) Dec 26

Amruthadhaare Serial - ಶಾಶ್ವತವಾಗಿ ಭೂಮಿ-ಗೌತಮ್‌ನನ್ನು ದೂರ ಮಾಡಿದ್ನಾ JD ಅಲ್ಲ ಕೇಡಿ ಜಯದೇವ್!

ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ ಈಗ ಮತ್ತೊಮ್ಮೆ ತನ್ನ ಕೇಡಿ ಬುದ್ಧಿ ಪ್ರದರ್ಶನ ಮಾಡಿದ್ದಾನೆ. ಅಜ್ಜಿ ಅವಳ ಆಸ್ತಿಯನ್ನು ಗೌತಮ್‌ಗೆ ಬರೆದಮೇಲೆ ಅವನಿಗೆ ಆಕಾಶ್‌ ಎಂಬ ಅಸ್ತ್ರ ಸಿಕ್ಕಿದೆ. ಮೋಸದಿಂದ ಅವನು ಆಕಾಶ್‌ನನ್ನು ಮನೆಗೆ ಕರೆದುಕೊಂಡು ಬಂದು, ಇನ್ನಷ್ಟು ಆಸ್ತಿ ಕಬಳಿಸುವ ಪ್ಲ್ಯಾನ್‌ ಮಾಡಿದ್ದಾನೆ.

 

Read Full Story

09:23 PM (IST) Dec 26

ಹಾವೇರಿ - ಅಕ್ಕಿ ಕಳ್ಳರ ಪಾಲಾಗುತ್ತಿದೆ ಬಡವರ 'ಅನ್ನಭಾಗ್ಯ'; ಸಿಎಂ ಸಿದ್ದರಾಮಯ್ಯ ಅವರೇ ಇಲ್ನೋಡಿ!

ಹಾವೇರಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ದಂಧೆ ಬಯಲಾಗಿದ್ದು, ಕುಖ್ಯಾತ ಅಕ್ಕಿ ಕಳ್ಳ ಸಚಿನ್ ಕಬ್ಬೂರ್‌ನಿಂದ 63 ಟನ್ ಅಕ್ಕಿ ಮತ್ತು 50 ಕ್ವಿಂಟಾಲ್ ಗೋಧಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈತನ ಮೇಲೆ ಹಲವು ಪ್ರಕರಣಗಳಿದ್ದರೂ ಕ್ರಮವಿಲ್ಲ!

Read Full Story

08:43 PM (IST) Dec 26

ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!

ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಗುಲಿ ಗಾಯವಾಗಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.

Read Full Story

08:38 PM (IST) Dec 26

ಕಾರವಾರ - ಡಿ.28 ರಂದು ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಸಬ್‌ಮರೀನ್‌ನಲ್ಲಿ ಪ್ರಯಾಣ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 28 ರಂದು ಕಾರವಾರದ ಸೀಬರ್ಡ್ ನೌಕಾನೆಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಐಎನ್ಎಸ್ ವಿಕ್ರಾಂತ್ ಯುದ್ಧನೌಕೆ ಹಾಗೂ ಸಬ್‌ಮರೀನ್ ವೀಕ್ಷಿಸಲಿದ್ದು, ಭದ್ರತಾ ದೃಷ್ಟಿಯಿಂದ ಕಾರವಾರ-ಅಂಕೋಲಾ ವ್ಯಾಪ್ತಿಯಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Read Full Story

07:45 PM (IST) Dec 26

ತಿರುಪತಿಗೆ ತಿರುಮಲನಿಗೆ ಮುಡಿ ಕೊಟ್ಟ ಕೆಎಸ್‌ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ತಿರುಪತಿಗೆ ತಿರುಮಲನಿಗೆ ಮುಡಿ ಕೊಟ್ಟ ಕೆಎಸ್‌ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಭಾರಿ ಬದಲಾವಣೆ ಭರವಸೆಯೊಂದಿಗೆ ಅಧಿಕಾರಕ್ಕೇರಿದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಇದೀಗ ಐಪಿಎಲ್ ಮರಳಿ ತರಲು ಪ್ರಯತ್ನದಲ್ಲಿ ಆರಂಭಿಕ ಯಶಸ್ಸು ಕಂಡಿದ್ದಾರೆ.

 

Read Full Story

07:34 PM (IST) Dec 26

ರೋಡಲ್ಲಿ ಹೋಗುತ್ತಿದ್ದ 7 ವರ್ಷದ ಬಾಲಕಿಗೆ ಗುದ್ದಿದ ಕಾರು, 10 ಅಡಿ ದೂರಕ್ಕೆ ಹಾರಿಬಿದ್ದ ಮಗು!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ರಸ್ತೆ ದಾಟುತ್ತಿದ್ದ ಏಳು ವರ್ಷದ ಬಾಲಕಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read Full Story

07:28 PM (IST) Dec 26

Breaking - ಬಿಕ್ಲು ಶಿವ ಕೊಲೆ ಕೇಸ್ ಬೈರತಿಗೆ ರಿಲೀಫ್, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ರೌಡಿ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್‌.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ ನಂತರ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
Read Full Story

07:14 PM (IST) Dec 26

Bigg Boss - ಶಾಲೆಗೆ ಹೋಗಿದ್ದ ಸ್ಪಂದನಾ ರಾತ್ರಿ 10 ಗಂಟೆಯಾದ್ರೂ ಪತ್ತೆಯಿಲ್ಲ! ಆ ಕರಾಳ ದಿನ ನೆನೆದ ಅಪ್ಪ

ಬಿಗ್‌ಬಾಸ್ ಮನೆಗೆ ಸ್ಪಂದನಾ ಅವರ ಪಾಲಕರು ಆಗಮಿಸಿದ್ದಾರೆ. ಈ ವೇಳೆ, ಸ್ಪಂದನಾ ಅವರ ತಂದೆ ಮಗಳ ಶಾಲಾ ದಿನಗಳ ಆಘಾತಕಾರಿ ಘಟನೆಯೊಂದನ್ನು ಹಂಚಿಕೊಂಡಿದ್ದು, ರಾತ್ರಿ 10 ಗಂಟೆಯಾದರೂ ಶಾಲೆಯಿಂದ ಮನೆಗೆ ಬಾರದಿದ್ದ ಕ್ಷಣವನ್ನು ವಿವರಿಸಿದ್ದಾರೆ.
Read Full Story

07:02 PM (IST) Dec 26

ಫೇಕ್ ನ್ಯೂಸ್ ಹರಡಿದರೇ ಐಟಿ ಸಚಿವ ಪ್ರಿಯಾಂಕ್ ಖರ್ಗೆ? - ಬಿಜೆಪಿ ಕಿಡಿ, ಬೇಷರತ್ ಕ್ಷಮೆಗೆ ಆಗ್ರಹ

ಐಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಧಾನಿ ಮೋದಿಯವರನ್ನು ಟೀಕಿಸಲು ಎಐ-ಸೃಷ್ಟಿತ ನಕಲಿ ಚಿತ್ರವನ್ನು ಬಳಸಿದ್ದಾರೆಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ನಡೆ 'ದ್ವೇಷ ಭಾಷಣ ತಡೆ ಬಿಲ್'ನ ಉಲ್ಲಂಘನೆಯಾಗಿದ್ದು, ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

Read Full Story

06:42 PM (IST) Dec 26

ಉಡುಪಿ ಕೃಷ್ಣನಿಗೆ 'ಪಾರ್ಥಸಾರಥಿ' ಸುವರ್ಣ ರಥ ಸಮರ್ಪಣೆ; ಮಳೆಗಾಲದಲ್ಲೂ ನಡೆಯಲಿದೆ ರಥೋತ್ಸವ!

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ಜೀವನದ 50ನೇ ವರ್ಷದ ಸಾರ್ಥಕ ಕ್ಷಣದ ನೆನಪಿಗಾಗಿ ಉಡುಪಿ ಶ್ರೀಕೃಷ್ಣನಿಗೆ 'ಪಾರ್ಥಸಾರಥಿ ಸುವರ್ಣ ರಥ' ಸಮರ್ಪಣೆಯಾಗುತ್ತಿದೆ. ಅಷ್ಟಮಠಗಳಿಗೆ ಸರಿಸಮನಾಗಿ ಎಂಟನೇ ರಥವಾಗಿ ಸೇರ್ಪಡೆಯಾಗುತ್ತಿರುವ ಈ ರಥವನ್ನು ಮಳೆಗಾಲದಲ್ಲೂ ಎಳೆಯಬಹುದಾಗಿದೆ.

Read Full Story

06:26 PM (IST) Dec 26

ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸ್ಫೋಟ ಮೃತರ ಸಂಖ್ಯೆ 2ಕ್ಕೆ ಏರಿಕೆ; ಗಾಯಾಳು ಮಂಜುಳಾ ಕೊನೆಯುಸಿರು!

ಮೈಸೂರು ಅರಮನೆ ಮುಂಭಾಗ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ ಎರಡಕ್ಕೇರಿದೆ. ಗಂಭೀರವಾಗಿ ಗಾಯಗೊಂಡಿದ್ದ ನಂಜನಗೂಡು ಮೂಲದ ಮಂಜುಳಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ದುರಂತದ ಕುರಿತು ಪೊಲೀಸರು ನಿರ್ಲಕ್ಷ್ಯತನದ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Full Story

06:10 PM (IST) Dec 26

ಹಂಪಿ - ಗುಡ್ಡ ಹತ್ತಲು ಹೋಗಿ ಕಾಲು ಜಾರಿ ಬಿದ್ದ ಫ್ರಾನ್ಸ್ ಪ್ರಜೆ; ಎರಡು ದಿನಗಳ ಕಾಲ ನರಳಾಡಿದ್ದ ಪ್ರವಾಸಿಗನ ರಕ್ಷಣೆ!

ವಿಶ್ವವಿಖ್ಯಾತ ಹಂಪಿಯಲ್ಲಿ, ಫ್ರಾನ್ಸ್ ಮೂಲದ ಪ್ರವಾಸಿಗರೊಬ್ಬರು ಗುಡ್ಡ ಹತ್ತುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡರು. ಸುಮಾರು ಎರಡು ದಿನಗಳ ಕಾಲ ನೋವಿನಿಂದ ನರಳಿದ ನಂತರ, ಸ್ಥಳೀಯ ರೈತರು ಮತ್ತು ಅಧಿಕಾರಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Read Full Story

06:04 PM (IST) Dec 26

ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಅಗ್ನಿ ಅವಘಡ - ಹೆರಿಗೆ & ಮಕ್ಕಳ ಘಟಕ ಚೆಲುವಾಂಬದಲ್ಲಿ 20 ಹಾಸಿಗೆ ಭಸ್ಮ!

ಮೈಸೂರಿನ ಕೆ.ಆರ್. ಆಸ್ಪತ್ರೆಯ ಚೆಲುವಾಂಬ ವಾರ್ಡ್ ಬಳಿ ನವೀಕರಣ ಕಾಮಗಾರಿಯ ವೇಳೆ ವೆಲ್ಡಿಂಗ್ ಕಿಡಿಯಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಹಳೆಯ ಹಾಸಿಗೆಗಳು ಸುಟ್ಟುಹೋಗಿದ್ದು, ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Read Full Story

06:01 PM (IST) Dec 26

ಗಿಲ್ಲಿ ನಟನನ್ನು ಉಳಿಸೋಕೆ Bigg Boss ಪ್ಲ್ಯಾನ್‌ ಮಾಡಿದ್ದಾರೆ - ಲೈಟ್‌ ಆಫ್‌ ಆದ್ಮೇಲೆ ಸೂರಜ್‌, ರಕ್ಷಿತಾ ಗುಸು ಗುಸು

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟನಿಗೆ ಎಲ್ಲರೂ ಪ್ರತಿಸ್ಪರ್ಧಿಗಳೇ. ಆಟದ ವಿಚಾರಕ್ಕೋ ಇನ್ಯಾವುದೋ ವಿಚಾರಕ್ಕೋ ಗಿಲ್ಲಿ ಕೂಡ ಅನೇಕರ ಜೊತೆ ಜಗಳ ಆಡಿದ್ದುಂಟು, ವಾದ-ವಿವಾದದಲ್ಲಿ ಭಾಗಿ ಆಗಿದ್ದುಂಟು. ಆದರೆ ಆ ಸ್ಪರ್ಧಿಗಳ ಮನೆಯವರು ಗಿಲ್ಲಿ ಪರವಾಗಿರೋದು ವಿಶೇಷವಾಗಿದೆ.

 

Read Full Story

05:40 PM (IST) Dec 26

ಡೇಂಜರ್ ಡಿಸೆಂಬರ್ - ಅಡಿಕೆ ತೋಟದಲ್ಲಿ ವಿದ್ಯುತ್ ಶಾಕ್, ಕೂಲಿ ಕಾರ್ಮಿಕ ಬಲಿ! ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದೌಡು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಅಡಿಕೆ ಕೊಯ್ಯಲು ಬಳಸುತ್ತಿದ್ದ ದೋಟಿ ವಿದ್ಯುತ್ ತಂತಿಗೆ ತಗುಲಿದ್ದೇ ದುರಂತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

05:36 PM (IST) Dec 26

ಸಾಕ್ಷರತೆಯಲ್ಲಿ ನಂ - 1 ರಾಜ್ಯವಾದ್ರೂ, ರಾಹುಕಾಲಕ್ಕೆ ಹೆದರಿಕೆ; ಕಚೇರಿಯೊಳಗೆ ಹೋಗಲು ಹಿಂಜರಿದ ಅಧ್ಯಕ್ಷೆ!

ಪುರಸಭೆಯ ನೂತನ ಅಧ್ಯಕ್ಷೆ 'ರಾಹುಕಾಲ'ದ ಕಾರಣ ನೀಡಿ ಅಧಿಕಾರ ಸ್ವೀಕರಿಸಲು ವಿಳಂಬ ಮಾಡಿದರು. ಈ ಘಟನೆಯಿಂದಾಗಿ ಅಧಿಕಾರಿಗಳು ಮತ್ತು ಕಾರ್ಯಕರ್ತರು ಸುಮಾರು 45 ನಿಮಿಷ ಕಾಯಬೇಕಾಯಿತು, ಇದು ಸಾರ್ವಜನಿಕ ಸೇವೆಯಲ್ಲಿ ವೈಜ್ಞಾನಿಕ ಮನೋಭಾವದ ಚರ್ಚೆಯನ್ನು ಹುಟ್ಟುಹಾಕಿದೆ.

Read Full Story

05:23 PM (IST) Dec 26

Naa Ninna Bidalaare ಅಪ್ಪ-ಮಗಳ ಕ್ಯೂಟ್​ ಡಾನ್ಸ್​ ಭಾವುಕರಾಗಿ ಕಣ್ತುಂಬಿಸಿಕೊಂಡ ಅಭಿಮಾನಿಗಳು!

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಅಪ್ಪ ಶರತ್ ಮತ್ತು ಮಗಳು ಹಿತಾ ನಡುವಿನ ಬಾಂಧವ್ಯವು ವೀಕ್ಷಕರ ಮನಗೆದ್ದಿದೆ. ತಾಯಿಯ ಸಾವಿಗೆ ಅಪ್ಪನೇ ಕಾರಣವೆಂದು ಮಗಳು ನಂಬಿದ್ದು, ಇವರಿಬ್ಬರನ್ನು ಒಂದು ಮಾಡಲು ದುರ್ಗಾ ಪ್ರಯತ್ನಿಸುತ್ತಿದ್ದಾಳೆ. 

Read Full Story

05:09 PM (IST) Dec 26

ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ರಾಮನಗರ ಮತ್ತು ಬಿಡದಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಸಂಕಲ್ಪ ವ್ಯಕ್ತಪಡಿಸಿದ್ದಾರೆ. ಹೆಜ್ಜಾಲ-ಸತ್ಯಮಂಗಲ ಹೊಸ ರೈಲ್ವೆ ಯೋಜನೆಗೆ ಭೂಮಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಅವರು, ಕೇಂದ್ರದ ಬಳಿ ಹಣದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
Read Full Story

04:44 PM (IST) Dec 26

Bigg Boss ಇತಿಹಾಸದಲ್ಲೇ ಫಸ್ಟ್‌ ಟೈಮ್;‌ ಮನೆಯವ್ರ ಎಡವಟ್ಟಿನಿಂದ ಕಾವ್ಯ ಶೈವ ಬೆಲೆ ತೆರಬೇಕಾಗತ್ತಾ?

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಪಾಲಕರ ಮೀಟಿಂಗ್ಸ್‌ನಲ್ಲಿ ಮನೆಯವರು ಚೆನ್ನಾಗಿದ್ದಾರಾ? ಎಲ್ಲವೂ ಆರಾಮಾ ಎಂದು ಕೇಳೋದುಂಟು. ಆದರೆ ಕಾವ್ಯ ಶೈವ ಮನೆಯವರು ಬಂದಾಗ, ಸೋಶಿಯಲ್‌ ಮೀಡಿಯಾ ಹ್ಯಾಂಡಲ್‌ ಮಾಡೋದು, ಯಾವ ರೀತಿ ಆಟ ಆಡೋದು ಎಂದು ಒಪನ್‌ ಆಗಿ ಚರ್ಚೆ ಮಾಡೋ ಬಗ್ಗೆ ಚರ್ಚೆಯಾಗಿದೆ.

 

Read Full Story

04:34 PM (IST) Dec 26

ಮೈಸೂರು - ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ, ಮೃತಪಟ್ಟ ಬಲೂನ್ ವ್ಯಾಪಾರಿ ಸಲೀಂ ಅವರನ್ನೇ ಪ್ರಮುಖ ಆರೋಪಿಯನ್ನಾಗಿಸಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗಾಯಗೊಂಡ ಪ್ರವಾಸಿಗರೊಬ್ಬರ ದೂರಿನ ಮೇರೆಗೆ, ನಿರ್ಲಕ್ಷ್ಯತನದ ಆರೋಪದ ಮೇಲೆ ಈ ಕ್ರಮ.

Read Full Story

04:27 PM (IST) Dec 26

ನಮ್ಮ ಮೆಟ್ರೋದಲ್ಲಿ ಯುವತಿ ಮೈ-ಕೈ ಮುಟ್ಟಿ ಕಿರುಕುಳ ಆರೋಪ - ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಪೊಲೀಸರ ಅತಿಥಿ!

ಬೆಂಗಳೂರಿನ 'ನಮ್ಮ ಮೆಟ್ರೋ' ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಯುವತಿಯ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಎನ್‌ಸಿಆರ್ ದಾಖಲಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Read Full Story

03:45 PM (IST) Dec 26

ಹನಿಮೂನ್‌ ಮೊಟಕುಗೊಳಿಸಿ ನವವಿವಾಹಿತೆ ನೇಣಿಗೆ ಶರಣು, ಪೊಲೀಸರು ಬರದಂತೆ ಗೇಟ್‌ ಗೆ ನಾಯಿ ಕಟ್ಟಿ ಲಾಕ್ ಮಾಡಿಕೊಂಡ ಆರೋಪಿಗಳು!

ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದ್ದ ಬೆಂಗಳೂರಿನ ನವವಿವಾಹಿತೆ ಗಾನವಿ, ಅರ್ಧಕ್ಕೆ ಮರಳಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸೂರಜ್ ಮತ್ತು ಆತನ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಮೃತಳ ಕುಟುಂಬಸ್ಥರು ಪತಿಯ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
Read Full Story

03:38 PM (IST) Dec 26

'ಬೆನ್ನುಮೂಳೆ ಮುರಿದಿದೆ..ಕಣ್ಣೆದುರೇ ಸ್ನೇಹಿತೆಯ ಸಾವು ಕಂಡು ಮಗಳು ಶಾಕ್‌ನಲ್ಲಿದ್ದಾಳೆ..' ಗಗನಶ್ರೀ ತಂದೆ ಸಿದ್ದರಾಜು ಮಾತು

ಚಿತ್ರದುರ್ಗ ಬಸ್ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ಬೆಂಗಳೂರಿನ ಗಗನಶ್ರೀ ಬೆನ್ನುಮೂಳೆ ಮುರಿತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದಾಗ ನಡೆದ ಈ ದುರಂತದಲ್ಲಿ ಆಕೆಯ ಸ್ನೇಹಿತೆ ರಶ್ಮಿ ಮೃತಪಟ್ಟಿದ್ದು, ಕಣ್ಣೆದುರೇ ನಡೆದ ಘಟನೆಯಿಂದ ಗಗನಶ್ರೀ ಆಘಾತಕ್ಕೊಳಗಾಗಿದ್ದಾರೆ. 

Read Full Story

03:23 PM (IST) Dec 26

ಅಂಗಾಂಗ ತೋರಿಸೋ ಬಟ್ಟೆ ಹಾಕಿದ್ರೆ ನಿಮ್ಮನ್ನು ದರಿದ್ರ ಅಂತ ಅಂದುಕೊಳ್ತಾರೆ ಹೇಳಿಕೆಗೆ ನಟ ಶಿವಾಜಿ ಕ್ಷಮೆಯಾಚನೆ

ತೆಲುಗು ನಟ ಶಿವಾಜಿ ಮಹಿಳೆಯರ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಶಿವಾಜಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಮಹಿಳಾ ಆಯೋಗ ಕೂಡ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಅವರು ಕ್ಷಮೆ ಕೇಳಿದ್ದಾರೆ.

 

 

Read Full Story

03:21 PM (IST) Dec 26

ಬೆಂಗಳೂರು ಏರ್‌ಪೋರ್ಟ್‌ ಪಿಕ್-ಅಪ್ ನಿಯಮ ಸಡಿಲಿಕೆ - ಫ್ರೀ ಪಾರ್ಕಿಂಗ್ 15 ನಿಮಿಷಕ್ಕೆ ವಿಸ್ತರಣೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ, ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ BIAL ಪಿಕ್-ಅಪ್ ವ್ಯವಸ್ಥೆಯನ್ನು ತಿದ್ದುಪಡಿ ಮಾಡಿದೆ. ಉಚಿತ ಪಾರ್ಕಿಂಗ್ ಅವಧಿಯನ್ನು 15 ನಿಮಿಷಗಳಿಗೆ ವಿಸ್ತರಿಸಲಾಗಿದೆ.

Read Full Story

02:48 PM (IST) Dec 26

ಸಿನಿ ಸ್ನೇಹಿತೆಯರ ಜೊತೆ ಭರ್ಜರಿಯಾಗಿ ಕ್ರಿಸ್‌ಮಸ್‌ ಆಚರಿಸಿದ ಮೇಘನಾ ರಾಜ್‌!

Meghana Raj Hosts Grand Christmas Party for Sandalwood Friends ನಟಿ ಮೇಘನಾ ರಾಜ್ ಅವರು ತಮ್ಮ ಮಗ ಮತ್ತು ಸ್ಯಾಂಡಲ್‌ವುಡ್‌ನ ಆತ್ಮೀಯ ಸ್ನೇಹಿತೆಯರಾದ ರಕ್ಷಿತಾ, ಶ್ರುತಿ, ಮಾಳವಿಕಾ ಅವಿನಾಶ್ ಅವರೊಂದಿಗೆ ಕ್ರಿಸ್‌ಮಸ್‌ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. 

Read Full Story

02:47 PM (IST) Dec 26

Bigg Boss ಮನೆಯಲ್ಲಿ ಪತ್ನಿ ನೋಡಿ ರಘು ಕಣ್ಣೀರು - ಆ ವಿಷ್ಯವನ್ನೇ ಮರೆತುಬಿಟ್ಟರು! ಬಿಗ್​ಬಾಸ್​ ಬಿಡಬೇಕಲ್ಲಾ?

ಬಿಗ್​ಬಾಸ್​ ಮನೆಯಲ್ಲಿ ಕುಟುಂಬಸ್ಥರ ಮಿಲನದ ಭಾಗವಾಗಿ ಮ್ಯೂಟಂಟ್​ ರಘು ಅವರ ಪತ್ನಿ ಗ್ರೀಷ್ಮಾ ಆಗಮಿಸಿದ್ದಾರೆ. ಪತ್ನಿಯನ್ನು ಕಂಡು ಭಾವುಕರಾದ ರಘು, ಆಕೆಯ ಹುಟ್ಟುಹಬ್ಬವನ್ನು ಮನೆಯಲ್ಲಿಯೇ ಅದ್ಧೂರಿಯಾಗಿ ಆಚರಿಸಿ ಸಂಭ್ರಮಿಸಿದರು. 

Read Full Story

01:56 PM (IST) Dec 26

ಬಟ್ಟೆ ಬಗ್ಗೆ ಮಾತಾಡೋದು ಅಸಮರ್ಥತೆ, ನಾವೇನು ಹಾಕೋಬೇಕು ಅಂತ ನೀವೇ ಹೇಳ್ತೀರಾ? ಶಿವಾಜಿ ಮೇಲೆ ಅನಸೂಯ ಮತ್ತೆ ಗರಂ

ಟಾಲಿವುಡ್ ನಟ ಶಿವಾಜಿ ಹೊತ್ತಿಸಿದ ಬೆಂಕಿ ಇನ್ನೂ ಆರೇ ಇಲ್ಲ. ಅದರಲ್ಲೂ ಅನಸೂಯಾ ಈ ವಿಷಯದಲ್ಲಿ ತುಂಬಾ ಖಾರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಇದೀಗ ಮತ್ತೊಮ್ಮೆ ಶಿವಾಜಿ ಮೇಲೆ ಗರಂ ಆಗಿದ್ದಾರೆ. ಅಷ್ಟಕ್ಕೂ ಆಕೆ ಹೇಳಿದ್ದೇನು?

Read Full Story

01:29 PM (IST) Dec 26

Karna Serial - ಸಂಜಯ್​ ಕುತಂತ್ರಕ್ಕೆ ಬಲಿಯಾಗಿ ಹೋದಳಾ ನಿತ್ಯಾ? ಅಯ್ಯೋ ಇದೇನಾಗೋಯ್ತು?

ಕರ್ಣ ಸೀರಿಯಲ್​ನಲ್ಲಿ ನಿತ್ಯಾಳ ಗರ್ಭದ ಸತ್ಯ ವಿಲನ್‌ಗಳಿಗೆ ತಿಳಿದುಹೋಗಿದೆ. ಮದುವೆ ಸಂಭ್ರಮದ ನಡುವೆಯೇ, ಅವರು ನಿತ್ಯಾಳಿಗೆ ವಿಷ ಬೆರೆಸಿದ ಜ್ಯೂಸ್ ನೀಡಿ ಕೋಣೆಯಲ್ಲಿ ಕೂಡಿಹಾಕುವ ಮೂಲಕ ಭೀಕರ ಸಂಚು ರೂಪಿಸಿದ್ದಾರೆ. ಈ ಕುತಂತ್ರದಿಂದ ನಿತ್ಯಾ ತನ್ನ ಮಗುವನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾಳೆ.
Read Full Story

01:25 PM (IST) Dec 26

ಒಂದು ಫ್ಲಾಪ್‌ನೊಂದಿಗೆ, ಪವನ್ ಕಲ್ಯಾಣ್ ಮೇಲೆ ಭರವಸೆಯಿಟ್ಟು ಈ ವರ್ಷಕ್ಕೆ ವಿದಾಯ ಹೇಳಿದ ನಟಿ ಯಾರು?

ಸರಣಿ ಸೋಲುಗಳಿಂದ ಕಂಗೆಟ್ಟಿರುವ ನಟಿ ಇತ್ತೀಚೆಗೆ ಪವನ್ ಕಲ್ಯಾಣ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ವರ್ಷ ಅರ್ಥಪೂರ್ಣವಾಗಿ ಅಂತ್ಯಗೊಂಡಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

Read Full Story

01:23 PM (IST) Dec 26

ಪಾರಿವಾಳ ಪ್ರಿಯರಿಗೆ ಶಾಕ್ - ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋದು ನಿಷೇಧ

ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ನಿಯಮವನ್ನು ಉಲ್ಲಂಘಿಸುವವರಿಗೆ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.

Read Full Story

01:17 PM (IST) Dec 26

ಕ್ರಿಸ್‌ಮಸ್ ರಜೆ ಮುಗಿಸಿ ಕೆಲಸಕ್ಕೆ ಬರುತ್ತಿದ್ದ ಟೆಕ್ಕಿ; ಕಾರು ಮರಕ್ಕೆ ಡಿಕ್ಕಿಯಾಗಿ ಅಪ್ಪ-ಮಗ ಸಾವು

ಕ್ರಿಸ್‌ಮಸ್ ಹಬ್ಬದ ರಜೆ ಮುಗಿಸಿ ಗೌರಿಬಿದನೂರಿನಿಂದ ಬೆಂಗಳೂರಿಗೆ ಮರಳುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಕುಟುಂಬದ ಕಾರು ಮಾದನಾಯಕನಹಳ್ಳಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಟೆಕ್ಕಿ ಹಾಗೂ ಅವರ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

01:16 PM (IST) Dec 26

'ಮದುವೆ ಆಗಿ ತಿಂಗ್ಳಾದ್ರೂ ಅವಳನ್ನ ಟಚ್‌ ಕೂಡ ಮಾಡಿಲ್ಲ, ಆತ ಗಂಡಸೇ ಅಲ್ಲ..' ಸೂರಜ್‌ ವಿರುದ್ಧ ಗಾನವಿ ಕುಟುಂಬಸ್ಥರ ಆರೋಪ

ಮದುವೆಯಾಗಿ ಒಂದೂವರೆ ತಿಂಗಳಲ್ಲೇ ನವವಧು ಗಾನವಿ ಆ*ತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಹಾಗೂ ಪತಿ ಸೂರಜ್ ನಪುಂಸಕ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪತಿ, ಅತ್ತೆ ಹಾಗೂ ನಾದಿನಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ, ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.

Read Full Story

01:08 PM (IST) Dec 26

Mark Movie Collection - ಕಿಚ್ಚ ಸುದೀಪ್‌ 'ಮಾರ್ಕ್' ಸಿನಿಮಾದ ಫಸ್ಟ್‌ ಡೇ ಕಲೆಕ್ಷನ್‌ ಎಷ್ಟು?

ಡಿಸೆಂಬರ್‌ 25 ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಹಬ್ಬ ಎಂದೇ ಹೇಳಬಹುದು. ಶಿವರಾಜ್‌ಕುಮಾರ್‌, ಉಪೇಂದ್ರ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಒಂದು ಕಡೆ ರಿಲೀಸ್‌ ಆದರೆ, ಇನ್ನೊಂದು ಕಡೆ ಕಿಚ್ಚ ಸುದೀಪ್‌ ನಟನೆಯ ‘ಮಾರ್ಕ್’‌ ಸಿನಿಮಾ ರಿಲೀಸ್‌ ಆಗಿದೆ. ಹಾಗಾದರೆ ಮಾರ್ಕ್ ಸಿನಿಮಾ ಕಲೆಕ್ಷನ್‌ ಎಷ್ಟು?

 

Read Full Story

More Trending News