LIVE NOW
Published : Apr 27, 2026, 05:10 AM ISTUpdated : Apr 27, 2026, 08:10 AM IST

Karnataka News Live: SSLCಯಲ್ಲಿ ಜಸ್ಟ್‌ ಪಾಸ್‌, ಫೇಲ್‌ ಆದವರಿಗೆ ಉಂಟು ವಿವಿಧ ಕೋರ್ಸ್; ಧೃತಿಗೆಡುವ ಅಗತ್ಯವೇ ಇಲ್ಲ

ಸಾರಾಂಶ

ಹುಬ್ಬಳ್ಳಿ : ಕಳೆದ ವಾರವಷ್ಟೇ ಮೂರು ಗಂಟೆಗೂ ಅಧಿಕ ಕಾಲ ಆಗಸದಲ್ಲಿ ಸುತ್ತಾಡಿ ಆತಂಕ ಸೃಷ್ಟಿಸಿದ್ದ ಫ್ಲೈ-91 ವಿಮಾನ ಹುಬ್ಬಳ್ಳಿಯಲ್ಲಿ ಶನಿವಾರ ಮತ್ತೆ ಲ್ಯಾಂಡಿಂಗ್‌ ಸಮಸ್ಯೆ ಕಂಡುಬಂತು. 35 ನಿಮಿಷಕ್ಕೂ ಹೆಚ್ಚು ಅವಧಿ ಆಕಾಶದಲ್ಲೇ ಸುತ್ತಿ ಬಳಿಕ ಸುರಕ್ಷಿತವಾಗಿ ಕೆಳಕ್ಕಿಳಿಯಿತು.

10 ದಿನದಲ್ಲಿ ಇದು ಮೂರನೇಯ ಬಾರಿ ಈ ರೀತಿ ಆಗುತ್ತಿರುವುದು. ಫ್ಲೈ-91 ವಿಮಾನ ಸೇವೆ ಹಾಗೂ ಸೌಲಭ್ಯ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಈ ರೀತಿಯ ಘಟನೆಗಳು ಸಂಶಯವನ್ನು ಹುಟ್ಟು ಹಾಕುತ್ತಿವೆ.

ಐಸಿ 3401 ಫ್ಲೈಟ್‌ ಶನಿವಾರ ಮಧ್ಯಾಹ್ನ 3.13ಕ್ಕೆ ಹೈದರಾಬಾದ್‌ನಿಂದ ಹೊರಟಿತ್ತು. ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್‌ ಆಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯ ಉಂಟಾಗಿ ಬೆಳಗಾವಿ ಸೇರಿದಂತೆ ವಿವಿಧೆಡೆ ಆಗಸದಲ್ಲೇ ಸುತ್ತಾಡಿ, ಬಳಿಕ 5.09ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್‌ ಆಯಿತು.

ಈ ಬಗ್ಗೆ ಕೇಳಿದಾಗ ಫ್ಲೈ-91 ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕಪಲೇಶ ಅವರು, ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ 35 ನಿಮಿಷ ತಡವಾಯಿತು ಎಂದು ಹೇಳಿದರು. ಪದೇ ಪದೇ ಫ್ಲೈ-91ಗೆ ಲ್ಯಾಂಡಿಂಗ್‌ ಸಮಸ್ಯೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಕೆಲ ಪ್ರಯಾಣಿಕರು ವಿಮಾನದ ಸುರಕ್ಷತೆ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

08:10 AM (IST) Apr 27

SSLCಯಲ್ಲಿ ಜಸ್ಟ್‌ ಪಾಸ್‌, ಫೇಲ್‌ ಆದವರಿಗೆ ಉಂಟು ವಿವಿಧ ಕೋರ್ಸ್; ಧೃತಿಗೆಡುವ ಅಗತ್ಯವೇ ಇಲ್ಲ

SSLC ಫಲಿತಾಂಶದಲ್ಲಿ ಕಡಿಮೆ ಅಂಕ ಪಡೆದ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡುವ ಅಗತ್ಯವಿಲ್ಲ. ಅವರಿಗಾಗಿ ಐಟಿಐ ಸೇರಿದಂತೆ ಹಲವಾರು ತರಬೇತಿ ಸಂಸ್ಥೆಗಳು ಉದ್ಯೋಗಾವಕಾಶದ ಬಾಗಿಲು ತೆರೆದಿವೆ. ಈ ಕೋರ್ಸ್‌ಗಳನ್ನು ಪೂರ್ಣಗೊಳಿಸಿ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉತ್ತಮ ಭವಿಷ್ಯರೂಪಿಸಿಕೊಳ್ಳಬಹುದು.

Read Full Story

07:59 AM (IST) Apr 27

ಉನ್ನತ ಶಿಕ್ಷಣಕ್ಕಾಗಿ ಗಜೇಂದ್ರಗಡ, ರೋಣ ತಾಲೂಕಿನ ವಿದ್ಯಾರ್ಥಿಗಳ ಪರದಾಟ; ಪೋಷಕರಿಗೆ ಆರ್ಥಿಕ ಹೊರೆ

ಗಜೇಂದ್ರಗಡ ತಾಲೂಕಿನ ವಿದ್ಯಾರ್ಥಿಗಳು SSLCಯಲ್ಲಿ ಉತ್ತಮ ಅಂಕ ಗಳಿಸುತ್ತಿದ್ದರೂ, ಉನ್ನತ ವ್ಯಾಸಂಗಕ್ಕೆ ಸ್ಥಳೀಯವಾಗಿ ಉತ್ತಮ ಕಾಲೇಜುಗಳಿಲ್ಲ. ಈ ಕಾರಣದಿಂದ ಪ್ರವೀಣಕುಮಾರ ಸೊಬಗಿನರಂತಹ ಪ್ರತಿಭೆಗಳು ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಇದು ಪಾಲಕರಿಗೆ ಆರ್ಥಿಕ ಹೊರೆಯಾಗಿದೆ.

Read Full Story

07:14 AM (IST) Apr 27

ಲಾಡ್ಜ್ ಮೇಲೆ ದಾಳಿ - ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ, ಮಹಿಳೆಯ ರಕ್ಷಣೆ

ಬೆಳಗಾವಿಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ, ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಲಾಡ್ಜ್ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

06:50 AM (IST) Apr 27

ರಿಪೋರ್ಟರ್ಸ್ ಡೈರಿ - ನಮ್ ಮಮ್ಮಿ ಸೋನಿಯಾ, ನಮ್ ಡ್ಯಾಡಿ ರಾಜೀವ್

ಡಿಜಿಪಿ ಕಚೇರಿಗೆ ಸಲ್ಲಿಕೆಯಾದ ವಿಚಿತ್ರ ದೂರುಗಳು, ಧೂಳು ಮುಚ್ಚಲು ಟ್ಯಾಂಕರ್ ಮಳೆ ಸುರಿಸಿದ ಪ್ರಸಂಗ, ಗ್ಯಾಸ್ ಸಮಸ್ಯೆಯಿಂದ ಅರ್ಧ ಇಡ್ಲಿ ನೀಡಿದ ಹೋಟೆಲ್ ಕಥೆ ಹಾಗೂ ಎಣ್ಣೆ ಏಟಿನಲ್ಲಿ ಮಾಜಿ ಸಚಿವರಿಗೆ ಬರುವ ಕರೆಗಳ ಕುರಿತಾದ ಸ್ವಾರಸ್ಯಕರ ಘಟನಾವಳಿಗಳ ಸಂಗ್ರಹವಿದು.
Read Full Story

06:40 AM (IST) Apr 27

ಡಾ.ರಾಜ್‌ಕುಮಾರ್ ಇದ್ದಿದ್ರೆ ಸರ್ಕಾರಿ ಭೂಮಿ ಬೇಡ ಅಂತಿದ್ರು - ನಟ ಚೇತನ್‌ ಕುಮಾರ್ ಅಹಿಂಸಾ

ಡಾ.ರಾಜ್‌ಕುಮಾರ್ ಸ್ಮಾರಕಕ್ಕೆ ಸರ್ಕಾರಿ ಭೂಮಿ ನೀಡಿದ್ದನ್ನು ಪ್ರಶ್ನಿಸಿ ನಟ ಚೇತನ್ ವಿವಾದ ಸೃಷ್ಟಿಸಿದ್ದಾರೆ. ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದರೂ, ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಸಮರ್ಥಿಸಿಕೊಂಡು ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
Read Full Story

06:31 AM (IST) Apr 27

ರಾಜಕೀಯಕ್ಕಲ್ಲ, ಜನಜಾಗೃತಿಗಾಗಿ ಅಹಿಂದ ಸಂಘಟನೆ - ಸಚಿವ ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿಯಲ್ಲಿ ನಡೆದ ಅಹಿಂದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ಅಹಿಂದ ಸಂಘಟನೆಯು ರಾಜಕೀಯ ಲಾಭಕ್ಕಾಗಿ ಅಲ್ಲ, ಜನಜಾಗೃತಿಗಾಗಿ ಎಂದರು. ಇದು ಅಹಿಂದ ವರ್ಗದ ಎರಡನೇ ಹಂತದ ಹೋರಾಟವಾಗಿದ್ದು, ತಮ್ಮದೇ ಸರ್ಕಾರದಲ್ಲಿರುವ ಕೆಲವರು ಭರವಸೆ ಈಡೇರಿಸಲು ಬಿಡುತ್ತಿಲ್ಲ ಎಂದು ಹೇಳಿದರು.

Read Full Story

06:05 AM (IST) Apr 27

ಇನ್ನೂ ಗಂಭೀರ ಸ್ಥಿತಿಯಲ್ಲೇ ಸಚಿವ ಡಿ.ಸುಧಾಕರ್‌ - ಆಸ್ಪತ್ರೆಗೆ ಡಿಕೆ ಭೇಟಿ, ವೈದ್ಯರ ಜತೆ ಚರ್ಚೆ

ಯೋಜನಾ ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರೆದಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.
Read Full Story

05:59 AM (IST) Apr 27

ಪಂಚಮಸಾಲಿ ಪೀಠದ ಸಂಘರ್ಷ - ವಚನಾನಂದಶ್ರೀಗಳ ಉಚ್ಚಾಟಿಸಿದ್ದವರೇ ಉಚ್ಚಾಟನೆ! ಟ್ರಸ್ಟಿಗಳಿಗೆ ಶಾಕ್

ಅವ್ಯವಹಾರ, ಅಧರ್ಮ, ಅಪನಂಬಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಮೂವರು ಟ್ರಸ್ಟಿಗಳನ್ನು ಟ್ರಸ್ಟ್‌ನಿಂದ ಉಚ್ಚಾಟಿಸಲಾಗಿದೆ. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘವು ಈ ಕಠಿಣ ಕ್ರಮ ಕೈಗೊಂಡಿದ್ದು, ಸಂಘವೇ ಟ್ರಸ್ಟ್‌ಗಿಂತ ಸುಪ್ರೀಂ ಎಂದು ಪ್ರತಿಪಾದಿಸಿದೆ.

Read Full Story

05:52 AM (IST) Apr 27

ಶಿವಮೊಗ್ಗ ಜಿಲ್ಲೆಯಲ್ಲಿ ಅಪರೂಪ ಮಾಹಿತಿಯುಳ್ಳ ವಿಜಯನಗರ ಕಾಲದ ನಂದಿಗಂಬ ದಾನ ಶಾಸನ ಪತ್ತೆ

ಶಿವಮೊಗ್ಗದ ಹೊಸನಗರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ವಿಜಯನಗರ ಕಾಲದ ಸಂಗಮ ವಂಶಕ್ಕೆ ಸೇರಿದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಕ್ರಿ.ಶ. 1424ರ ಈ ಶಾಸನವು, ಎರಡನೇ ದೇವರಾಯನು ಹಂಪಿಯ ವಿರೂಪಾಕ್ಷ ದೇವರಿಗೆ ಕಲ್ಲೂರು ನಾಡನ್ನು ದಾನವಾಗಿ ನೀಡಿದ ಐತಿಹಾಸಿಕ ವಿವರಗಳನ್ನು ಒಳಗೊಂಡಿದೆ.
Read Full Story

05:44 AM (IST) Apr 27

ಗೃಹಲಕ್ಷ್ಮಿ ಹಣದಿಂದ ಓದಿ ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬಾಲಕಿಗೆ ಡಿಕೆಶಿ ಮೆಚ್ಚುಗೆ

ಮಾಧುರಿ ಆರ್., 'ಗೃಹಲಕ್ಷ್ಮಿ ಯೋಜನೆ'ಯ ಹಣದಿಂದ ಟ್ಯೂಷನ್ ಪಡೆದು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಸಾಧನೆಯನ್ನು ಶ್ಲಾಘಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತರುತ್ತಿವೆ ಎಂದು ಹೇಳಿದ್ದಾರೆ.

Read Full Story

05:35 AM (IST) Apr 27

Mangaluru - ಪ್ರಯಾಣದ ವೇಳೆ ಹೆರಿಗೆ ನೋವು - ರೈಲಿನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪೊನ್ನಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಿ.ಸಿ.ರೋಡ್ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ, ವೈದ್ಯರ ಸಹಾಯದಿಂದ ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

Read Full Story

More Trending News