ಹುಬ್ಬಳ್ಳಿ : ಕಳೆದ ವಾರವಷ್ಟೇ ಮೂರು ಗಂಟೆಗೂ ಅಧಿಕ ಕಾಲ ಆಗಸದಲ್ಲಿ ಸುತ್ತಾಡಿ ಆತಂಕ ಸೃಷ್ಟಿಸಿದ್ದ ಫ್ಲೈ-91 ವಿಮಾನ ಹುಬ್ಬಳ್ಳಿಯಲ್ಲಿ ಶನಿವಾರ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಕಂಡುಬಂತು. 35 ನಿಮಿಷಕ್ಕೂ ಹೆಚ್ಚು ಅವಧಿ ಆಕಾಶದಲ್ಲೇ ಸುತ್ತಿ ಬಳಿಕ ಸುರಕ್ಷಿತವಾಗಿ ಕೆಳಕ್ಕಿಳಿಯಿತು.
10 ದಿನದಲ್ಲಿ ಇದು ಮೂರನೇಯ ಬಾರಿ ಈ ರೀತಿ ಆಗುತ್ತಿರುವುದು. ಫ್ಲೈ-91 ವಿಮಾನ ಸೇವೆ ಹಾಗೂ ಸೌಲಭ್ಯ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಈ ರೀತಿಯ ಘಟನೆಗಳು ಸಂಶಯವನ್ನು ಹುಟ್ಟು ಹಾಕುತ್ತಿವೆ.
ಐಸಿ 3401 ಫ್ಲೈಟ್ ಶನಿವಾರ ಮಧ್ಯಾಹ್ನ 3.13ಕ್ಕೆ ಹೈದರಾಬಾದ್ನಿಂದ ಹೊರಟಿತ್ತು. ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯ ಉಂಟಾಗಿ ಬೆಳಗಾವಿ ಸೇರಿದಂತೆ ವಿವಿಧೆಡೆ ಆಗಸದಲ್ಲೇ ಸುತ್ತಾಡಿ, ಬಳಿಕ 5.09ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಯಿತು.
ಈ ಬಗ್ಗೆ ಕೇಳಿದಾಗ ಫ್ಲೈ-91 ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕಪಲೇಶ ಅವರು, ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ 35 ನಿಮಿಷ ತಡವಾಯಿತು ಎಂದು ಹೇಳಿದರು. ಪದೇ ಪದೇ ಫ್ಲೈ-91ಗೆ ಲ್ಯಾಂಡಿಂಗ್ ಸಮಸ್ಯೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಕೆಲ ಪ್ರಯಾಣಿಕರು ವಿಮಾನದ ಸುರಕ್ಷತೆ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
08:10 AM (IST) Apr 27
SSLC ಫಲಿತಾಂಶದಲ್ಲಿ ಕಡಿಮೆ ಅಂಕ ಪಡೆದ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡುವ ಅಗತ್ಯವಿಲ್ಲ. ಅವರಿಗಾಗಿ ಐಟಿಐ ಸೇರಿದಂತೆ ಹಲವಾರು ತರಬೇತಿ ಸಂಸ್ಥೆಗಳು ಉದ್ಯೋಗಾವಕಾಶದ ಬಾಗಿಲು ತೆರೆದಿವೆ. ಈ ಕೋರ್ಸ್ಗಳನ್ನು ಪೂರ್ಣಗೊಳಿಸಿ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉತ್ತಮ ಭವಿಷ್ಯರೂಪಿಸಿಕೊಳ್ಳಬಹುದು.
07:59 AM (IST) Apr 27
ಗಜೇಂದ್ರಗಡ ತಾಲೂಕಿನ ವಿದ್ಯಾರ್ಥಿಗಳು SSLCಯಲ್ಲಿ ಉತ್ತಮ ಅಂಕ ಗಳಿಸುತ್ತಿದ್ದರೂ, ಉನ್ನತ ವ್ಯಾಸಂಗಕ್ಕೆ ಸ್ಥಳೀಯವಾಗಿ ಉತ್ತಮ ಕಾಲೇಜುಗಳಿಲ್ಲ. ಈ ಕಾರಣದಿಂದ ಪ್ರವೀಣಕುಮಾರ ಸೊಬಗಿನರಂತಹ ಪ್ರತಿಭೆಗಳು ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಇದು ಪಾಲಕರಿಗೆ ಆರ್ಥಿಕ ಹೊರೆಯಾಗಿದೆ.
07:14 AM (IST) Apr 27
06:50 AM (IST) Apr 27
06:40 AM (IST) Apr 27
06:31 AM (IST) Apr 27
ಹುಬ್ಬಳ್ಳಿಯಲ್ಲಿ ನಡೆದ ಅಹಿಂದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಅಹಿಂದ ಸಂಘಟನೆಯು ರಾಜಕೀಯ ಲಾಭಕ್ಕಾಗಿ ಅಲ್ಲ, ಜನಜಾಗೃತಿಗಾಗಿ ಎಂದರು. ಇದು ಅಹಿಂದ ವರ್ಗದ ಎರಡನೇ ಹಂತದ ಹೋರಾಟವಾಗಿದ್ದು, ತಮ್ಮದೇ ಸರ್ಕಾರದಲ್ಲಿರುವ ಕೆಲವರು ಭರವಸೆ ಈಡೇರಿಸಲು ಬಿಡುತ್ತಿಲ್ಲ ಎಂದು ಹೇಳಿದರು.
06:05 AM (IST) Apr 27
05:59 AM (IST) Apr 27
ಅವ್ಯವಹಾರ, ಅಧರ್ಮ, ಅಪನಂಬಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಮೂವರು ಟ್ರಸ್ಟಿಗಳನ್ನು ಟ್ರಸ್ಟ್ನಿಂದ ಉಚ್ಚಾಟಿಸಲಾಗಿದೆ. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘವು ಈ ಕಠಿಣ ಕ್ರಮ ಕೈಗೊಂಡಿದ್ದು, ಸಂಘವೇ ಟ್ರಸ್ಟ್ಗಿಂತ ಸುಪ್ರೀಂ ಎಂದು ಪ್ರತಿಪಾದಿಸಿದೆ.
05:52 AM (IST) Apr 27
05:44 AM (IST) Apr 27
ಮಾಧುರಿ ಆರ್., 'ಗೃಹಲಕ್ಷ್ಮಿ ಯೋಜನೆ'ಯ ಹಣದಿಂದ ಟ್ಯೂಷನ್ ಪಡೆದು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಸಾಧನೆಯನ್ನು ಶ್ಲಾಘಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತರುತ್ತಿವೆ ಎಂದು ಹೇಳಿದ್ದಾರೆ.
05:35 AM (IST) Apr 27
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪೊನ್ನಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಿ.ಸಿ.ರೋಡ್ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ, ವೈದ್ಯರ ಸಹಾಯದಿಂದ ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.