LIVE NOW
Published : Dec 27, 2025, 06:51 AM ISTUpdated : Dec 27, 2025, 11:12 PM IST

Karnataka News Live: MNREGA Row - ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ - ಶಿವರಾಜ್ ಸಿಂಗ್ ಚೌಹಾಣ್ ಕಿಡಿ

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಚಾಮರಾಜಪೇಟೆ ಕ್ಷೇತ್ರದಲ್ಲಿ ಮುಂದಿನ ಉಪಮುಖ್ಯಮಂತ್ರಿ ಜಮೀರ್‌ ಅಹಮದ್‌ ಖಾನ್‌ ಎಂಬ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿವೆ. ಹೊಸ ವರ್ಷದ ಶುಭಾಶಯ ತಿಳಿಸುವ ಪೋಸ್ಟರ್‌ಗಳಲ್ಲಿ ಜಮೀರ್ ಅಹ್ಮದ್ ಅವರನ್ನು ಅಪ್‌ ಕಮಿಂಗ್‌ ಡಿಸಿಎಂ (ಮುಂದಿನ ಉಪಮುಖ್ಯಮಂತ್ರಿ) ಎಂದು ಬಿಂಬಿಸಲಾಗಿದೆ. ಜಮೀರ್ ಅಹ್ಮದ್ ಖಾನ್‌ ಅವರು ವಸತಿ ಸಚಿವರಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಣೆಯೂ ಹೊತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಚರ್ಚೆ ಬೆನ್ನಲ್ಲೇ ಅಪ್‌ಕಮಿಂಗ್‌ ಡಿಸಿಎಂ ಪೋಸ್ಟರ್‌ ಹಲವು ರೀತಿಯ ಚರ್ಚೆಯನ್ನು ಹುಟ್ಟು ಹಾಕಿದೆ.

ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕಾದಾಟ ನಡೆಯುತ್ತಿದೆ ಎಂದು ಸುದ್ದಿಯಾಗುತ್ತಿರುವ ಬೆನ್ನಲ್ಲಿಯೇ ಸಚಿವ ಕೆ.ಎಚ್.ಮುನಿಯಪ್ಪ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ಜೈಕಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮಾಜಿ ಶಾಸಕ ಗಂಗಹನುಮಯ್ಯ ಮನೆಗೆ ಕೆ‌‌.ಎಚ್. ಮುನಿಯಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಕೆ.ಎಚ್ ಮುನಿಯಪ್ಪ ಸಾಹೇಬರಿಗೆ ಜೈ ಎಂದು ಅಭಿಮಾನಿಗಳು ಘೋಷಣೆ ಕೂಗಿದರು. 

11:12 PM (IST) Dec 27

MNREGA Row - ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ - ಶಿವರಾಜ್ ಸಿಂಗ್ ಚೌಹಾಣ್ ಕಿಡಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ನರೇಗಾ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ ಮತ್ತು ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿ ಪಾರದರ್ಶಕತೆ ತರಲಾಗಿದೆ ಎಂದರು.

Read Full Story

10:47 PM (IST) Dec 27

ಡೇಂಜರ್ ಡಿಸೆಂಬರ್ - ಧಾರವಾಡದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು, ಇಬ್ಬರು ಪ್ರಾಣಾಪಾಯದಿಂದ ಪಾರು!

Dharwad Car Catches Fire: ಧಾರವಾಡ ನಗರದಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತಕ್ಷಣವೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read Full Story

10:29 PM (IST) Dec 27

ಗುಂಡ್ಲುಪೇಟೆಯಲ್ಲಿ ಹನುಮ ಭಕ್ತರ ಆಕ್ರೋಶ; ಡಿಜೆ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಭಾರಿ ಪ್ರತಿಭಟನೆ!

ಗುಂಡ್ಲುಪೇಟೆಯಲ್ಲಿ ಹನುಮ ಜಯಂತಿ ಮೆರವಣಿಗೆಯ ನಂತರ, ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿ ಬಳಸಿದ್ದಕ್ಕೆ ಪೊಲೀಸರು ಡಿಜೆ ವಾಹನವನ್ನು ವಶಕ್ಕೆ ಪಡೆದರು. ಆಕ್ರೋಶಗೊಂಡ ಹನುಮ ಭಕ್ತರಿಂದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ. ಒತ್ತಡಕ್ಕೆ ಮಣಿದ ಪೊಲೀಸರು, ಒಂದೂವರೆ ಗಂಟೆ ಬಳಿಕ ವಾಹನ ಬಿಡುಗಡೆ ಮಾಡಿದರು.

Read Full Story

10:06 PM (IST) Dec 27

ಕಾರವಾರ - ಕರಾವಳಿ ಉತ್ಸವದಲ್ಲಿ ಶ್ವಾನಗಳ ದರ್ಬಾರ್ - 25 ತಳಿ ನಾಯಿಗಳಿಂದ ಅದ್ಭುತ ಸಾಹಸ ಪ್ರದರ್ಶನ!

ಕಾರವಾರದ ಕರಾವಳಿ ಉತ್ಸವದ ಅಂಗವಾಗಿ ನಡೆದ ಆಕರ್ಷಕ ಶ್ವೇತ-ವರ್ಣರಂಜಿತ ಶ್ವಾನ ಪ್ರದರ್ಶನದ ಫೋಟೋ ಗ್ಯಾಲರಿ ವರದಿ ಇಲ್ಲಿದೆ.

Read Full Story

09:06 PM (IST) Dec 27

ಬಂಡೀಪುರ - ಹುಲಿ ಪಂಜದ ಒಂದೇ ಏಟಿಗೆ ಉಸಿರು ನಿಲ್ಲಿಸಿದ ವಾಚರ್!

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕ ಸಣ್ಣ ಹೈದ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಇವರ ಮೇಲೆ ಹುಲಿ ಏಕಾಏಕಿ ದಾಳಿ ಮಾಡಿ ಕೊಂದಿದೆ. ಅರಣ್ಯ ಇಲಾಖೆ ಮೃತರ ಕುಟುಂಬಕ್ಕೆ ಪರಿಹಾರ ಮತ್ತು ಉದ್ಯೋಗದ ಭರವಸೆ.

Read Full Story

09:02 PM (IST) Dec 27

ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ

ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಆದರೆ ಮಗಳ ಹತ್ಯೆಗೆ ಕಾರಣ ಇದಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Read Full Story

08:45 PM (IST) Dec 27

ಸಮಾಜದಲ್ಲಿ ಸಾಮರಸ್ಯ ಸಾಧಿಸಲು ಆಧ್ಯಾತ್ಮಿಕತೆ ಬಹಳ ಸಹಕಾರಿ - ಭಟ್ಟಾರಕ ಶ್ರೀ

ಕುಂದಗೋಳ ತಾಲೂಕಿನ ಹರಲಾಪೂರದಲ್ಲಿ ಮುನಿಶ್ರೀ ಸುಧರ್ಮಸಾಗರರ 33ನೇ ಪುಣ್ಯತಿಥಿ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಜರುಗಿತು. ಸೋಂದಾ ಜೈನ ಮಠದ ಶ್ರೀಗಳು ಅಹಿಂಸೆ, ಸಂಯಮ ಮತ್ತು ತಪದಿಂದ ಆಧ್ಯಾತ್ಮಿಕ ಉನ್ನತಿ ಸಾಧ್ಯ ಎಂದು ಸಂದೇಶ ನೀಡಿದರು.
Read Full Story

08:26 PM (IST) Dec 27

Hero Super Splendor XTEC - ಒಂದೇ ಒಂದು ಫುಲ್ ಟ್ಯಾಂಕ್‌ಗೆ 700 ಕಿ.ಮೀ ಓಡುತ್ತೆ! ಬೆಲೆ ಕಡಿಮೆ, ಮೈಲೇಜ್ ಸಿಕ್ಕಾಪಟ್ಟೆ!

ಹೀರೋ ಮೋಟೋಕಾರ್ಪ್ ಹೊಸ ಸೂಪರ್ ಸ್ಪ್ಲೆಂಡರ್ XTEC ಬೈಕನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಬಜೆಟ್ ಸ್ನೇಹಿ ಬೆಲೆ, 68 kmpl ವರೆಗಿನ ಅತ್ಯುತ್ತಮ ಮೈಲೇಜ್  ಬ್ಲೂಟೂತ್ ಕನೆಕ್ಟಿವಿಟಿಯಂತಹ ಸ್ಮಾರ್ಟ್ ಫೀಚರ್ಸ್ ಹೊಂದಿದೆ. 124.7cc ಎಂಜಿನ್ ಹೊಂದಿರುವ ಇದು, ಹೋಂಡಾ ಶೈನ್, ಬಜಾಜ್ ಪ್ಲಾಟಿನಾ ಬೈಕ್‌ಗಳಿಗೆ ಪೈಪೋಟಿ

Read Full Story

07:54 PM (IST) Dec 27

ತುಮಕೂರು-ಬೆಂ.ದಕ್ಷಿಣ ಜಿಲ್ಲೆಗೆ ರೈಲ್ವೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಬದ್ಧ, ವಿ.ಸೋಮಣ್ಣ ಸ್ಪಷ್ಟನೆ

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 21 ಕೋಟಿ ವೆಚ್ಚದ ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ,

Read Full Story

07:29 PM (IST) Dec 27

'ವೃಷಭ' ಸಿನಿಮಾ ರಿಲೀಸ್;‌ ಕಣ್ಣು ಕಳೆದುಕೊಳ್ಳೋ ಸ್ಥಿತಿ ಬಂದಿದ್ರೂ, ಬೆಲೆ ಇಲ್ಲ ಎಂದ Bigg Boss ರಘು

Bigg Boss Raghu News: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಘು ಅವರು ವೈಲ್ಡ್‌ಕಾರ್ಡ್‌ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ, ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ರಘು ಅವರು ಫಿನಾಲೆಗೆ ಹೋಗುತ್ತಾರಾ? ಇಲ್ಲವಾ ಎಂದು ಕಾದು ನೋಡಬೇಕಿದೆ.

 

Read Full Story

07:18 PM (IST) Dec 27

New Year 2026 ಮದ್ಯಪ್ರಿಯರೇ ಡೋಂಟ್ ವರಿ, ಡಿ.31ಕ್ಕೆ ನೀವು ಹಲ್ಲು ಉಜ್ಜೋ ಮುಂಚೆಯೇ ಓಪನ್ ಇರುತ್ತೆ ಬಾರ್!

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಿದ್ದಾರೆ. ಈ ನಿಯಮವು CL-5 ಲೈಸೆನ್ಸ್ ಹೊಂದಿರುವ ಖಾಸಗಿ ಪಾರ್ಟಿಗಳಿಗೂ ಅನ್ವಯವಾಗಲಿದೆ.

Read Full Story

06:54 PM (IST) Dec 27

BBK 12 ಫಿನಾಲೆಗೆ ಕೆಲವೇ ದಿನಗಳು ಬಾಕಿ; ವೀಕ್ಷಕರ ಇಚ್ಛೆಯಂತೆ ಟಾಪ್‌ 3 ರಲ್ಲಿ ಗೆಲ್ಲೋರು ಯಾರು?

BBK 12: ಇನ್ನು 20 ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಗ್ರ್ಯಾಂಡ್‌ ಫಿನಾಲೆ ನಡೆಯಲಿದೆ. ಈ ಬಾರಿ ಯಾರು ಬಿಗ್‌ ಬಾಸ್‌ ಶೋ ಗೆಲ್ಲುತ್ತಾರೆ ಎಂದು ಚರ್ಚೆ ಶುರುವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿಗೆ ಮತ ಹಾಕ್ತೀವಿ ಎಂದು ಹೇಳುವವರ ಸಂಖ್ಯೆ ಜಾಸ್ತಿ ಇದೆ.

 

Read Full Story

06:46 PM (IST) Dec 27

ಹುಬ್ಬಳ್ಳಿ - ವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರಿಡಲು ಆಗ್ರಹ; ಜೋಶಿ ಕಚೇರಿ ಮುಂದೆ ಪೂಜಾ ಗಾಂಧಿ, ಕೋನರೆಡ್ಡಿ ಪ್ರತಿಭಟನೆ!

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಕನ್ನಡಿಗ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಟಿ ಪೂಜಾ ಗಾಂಧಿ ಹಾಗೂ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಗೆ ಮುತ್ತಿಗೆ ಹಾಕಿದರು.

Read Full Story

06:31 PM (IST) Dec 27

ವಿಜಯಪುರದಲ್ಲಿ ವಿಕೃತ ಘಟನೆ, ಹಾಲು ತರಲು ಹೋದ ಮಹಿಳೆಯ ಕಿವಿ ಕತ್ತರಿಸಿ ಚಿನ್ನ ಕದ್ದ ಕಳ್ಳರು!

ವಿಜಯಪುರದಲ್ಲಿ ಹಾಲು ತರಲು ಹೋದ ಕಲಾವತಿ ಗಾಯ್ಕವಾಡ್ ಎಂಬ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಪರಿಚಿತರಂತೆ ನಟಿಸಿ, ಆಕೆಯ ಕಿವಿ ಕತ್ತರಿಸಿ ಮಾಂಗಲ್ಯ ಸರ ಹಾಗೂ ಕಿವಿಯೋಲೆ ದೋಚಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

06:16 PM (IST) Dec 27

ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಹನಿಟ್ರ್ಯಾಪ್‌ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಮೂಲದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕ, ಆಕೆಯ ಬ್ಲ್ಯಾಕ್‌ಮೇಲ್‌ಗೆ ಹೆದರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
Read Full Story

05:39 PM (IST) Dec 27

ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಆಟೋ ಓಡಿಸ್ತಿದ್ದಾರಾ ಬಾಂಗ್ಲಾದವ್ರು? ತಮ್ಮವರಿಗೆ ವಿಡಿಯೋ ಮೂಲಕ ಕರೆದ ಯುವಕರು!

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ಆಟೋ ಚಲಾಯಿಸುತ್ತಿರುವ ಬಾಂಗ್ಲಾದೇಶಿಗರೆಂದು ಹೇಳಿಕೊಳ್ಳುವ ಮೂವರ ವಿಡಿಯೋ ವೈರಲ್ ಆಗಿದೆ. ಉತ್ತಮ ಆದಾಯಕ್ಕಾಗಿ ಬೆಂಗಳೂರಿಗೆ ಬರುವಂತೆ ತಮ್ಮ ಜನರನ್ನು ಆಹ್ವಾನಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮತ್ತು ಭದ್ರತೆಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read Full Story

05:31 PM (IST) Dec 27

ರಾಯಚೂರು - ಬಸ್ ಇಲ್ಲದೆ ರಾತ್ರಿವರೆಗೆ ಪರದಾಡಿದ ಶಾಲಾ ಮಕ್ಕಳು; ಅಧಿಕಾರಿಗಳಿಗೆ ಬೆವರಿಳಿಸಿದ ಶಾಸಕಿ ಕರೆಮ್ಮ ನಾಯಕ್!

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ, ಸರಿಯಾದ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಶಾಲಾ ವಿದ್ಯಾರ್ಥಿಗಳು ರಾತ್ರಿಯಿಡೀ ಬಸ್ ನಿಲ್ದಾಣದಲ್ಲಿ ಪರದಾಡಿದರು. ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕಿ ಕರೆಮ್ಮ ನಾಯಕ್, ಸ್ಥಳಕ್ಕೆ ಭೇಟಿ ನೀಡಿ ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

Read Full Story

05:05 PM (IST) Dec 27

ಮರಾಠಾ ಮಹಾಮೇಳಾವ್‌ನಲ್ಲಿ ಸಚಿವ ಸಂತೋಷ್ ಲಾಡ್ ಭಾಗಿ! ಗಡಿಭಾಗದ ಸಮಸ್ಯೆ ಬಗ್ಗೆ ಮಹತ್ವದ ಹೇಳಿಕೆ!

Santosh Lad attended the Maratha Mahamelav event: ಚಿಕ್ಕೋಡಿಯಲ್ಲಿ ನಡೆದ ಮರಾಠಾ ಮಹಾಮೇಳಾವ್‌ನಲ್ಲಿ ಭಾಗವಹಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಗಡಿಭಾಗದ ಜನರ ವಲಸೆ ತಡೆಯಲು ಇಂಡಸ್ಟ್ರಿಯಲ್ ಮತ್ತು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಿಸುವ ಭರವಸೆ ನೀಡಿದರು.

Read Full Story

04:29 PM (IST) Dec 27

ಬಂಡೀಪುರದಲ್ಲಿ ಪಾದಯಾತ್ರೆ ತಡೆ - ಅಯ್ಯಪ್ಪ ಮಾಲಾಧಾರಿಗಳು ಅರಣ್ಯ ಸಿಬ್ಬಂದಿ ನಡುವೆ ವಾಗ್ವಾದ!

ಶಬರಿಮಲೆಗೆ ಪಾದಯಾತ್ರೆ ಹೊರಟಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ವನ್ಯಜೀವಿ ಸುರಕ್ಷತಾ ನಿಯಮಗಳ ಕಾರಣ ನೀಡಿ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದರಿಂದ, ಭಕ್ತರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ.

Read Full Story

04:10 PM (IST) Dec 27

BBK 12 - ಗಿಲ್ಲಿ ನಟನ ವಿರುದ್ಧ ತಿರುಗಿ ಬೀಳೋಕೆ ಎಲ್ಲ ಸ್ಪರ್ಧಿಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ! ಇದು ಸ್ವಯಂ ಅಪರಾಧ!

Bigg Boss Kannada Season 12 Episode Update: ತಂಡವನ್ನು ಮುನ್ನಡೆಸಬೇಕಾದ ನಾಯಕನೇ ಸೋಮಾರಿಯಾದರೆ, ಆ ಸೈನ್ಯ ಸುಮ್ಮನಿರುತ್ತದೆಯೇ? ಈಗ ಬಿಗ್ ಬಾಸ್ ಕನ್ನಡ ಸೀಸನ್‌ 12 ಮನೆಯಲ್ಲಿ 'ಕೆಲಸ'ದ ಯುದ್ಧ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

 

Read Full Story

03:48 PM (IST) Dec 27

ವಿಜಯಲಕ್ಷ್ಮಿ ದರ್ಶನ್ ದೂರು ವಿಚಾರ, ಜಗಳಕ್ಕೆ ಅಲ್ಲ, ಎಂಟರ್ಟೈನಮೆಂಟ್‌ಗಾಗಿ ನಾನು ಸಿನೆಮಾಗೆ ಬಂದವನು - ಕಿಚ್ಚ ಸ್ಪಷ್ಟನೆ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ದೂರು ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಅನಾವಶ್ಯಕ ವಿವಾದಗಳಲ್ಲಿ ತಮಗೆ ಆಸಕ್ತಿ ಇಲ್ಲ, ಸಮಸ್ಯೆಗಳಿದ್ದರೆ ನೇರವಾಗಿ ಮಾತನಾಡುವಂತೆ ಮತ್ತು ಚಿತ್ರರಂಗದಲ್ಲಿ ಸೌಹಾರ್ದತೆ ಕಾಪಾಡುವಂತೆ ಕರೆ ನೀಡಿದ್ದಾರೆ.

Read Full Story

03:11 PM (IST) Dec 27

ಸಪ್ತ ಸಾಗರದಾಚೆ ನಂತರ ಹೇಮಂತ್‌ ರಾವ್‌ ಹೊಸ ಸಿನಿಮಾ, ಕನ್ನಡಕ್ಕೆ ಮತ್ತೆ ಬಂದ ಆಳ್ವಾಸ್‌ ಕಾಲೇಜಿನ ಹೀರೋಯಿನ್‌!

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ನಿರ್ದೇಶಕ ಹೇಮಂತ್ ಎಂ. ರಾವ್ ತಮ್ಮ ಹೊಸ ಸಿನಿಮಾ '666 ಆಪರೇಷನ್ ಡ್ರೀಮ್ ಥಿಯೇಟರ್' ಘೋಷಿಸಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಧನಂಜಯ ನಟಿಸಲಿರುವ ಈ ಚಿತ್ರದ ಮೂಲಕ ನಟಿ ಪ್ರಿಯಾಂಕಾ ಮೋಹನ್ ಕನ್ನಡಕ್ಕೆ ಮರಳುತ್ತಿದ್ದಾರೆ. 

Read Full Story

02:47 PM (IST) Dec 27

ಬೆಂಗಳೂರು - O+ ಬದಲು A+ ರಕ್ತ ನೀಡಿದ ಸರ್ಕಾರಿ ಆಸ್ಪತ್ರೆ, ಜಿಮ್ ಟ್ರೈನರ್ ಸ್ಥಿತಿ ಚಿಂತಾಜನಕ!

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತಹೀನತೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ O+ ಬದಲು A+ ರಕ್ತ ನೀಡಿ ವೈದ್ಯಕೀಯ ನಿರ್ಲಕ್ಷ್ಯ ಎಸಗಲಾಗಿದೆ. ಈ ಎಡವಟ್ಟಿನಿಂದ ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. 

Read Full Story

02:42 PM (IST) Dec 27

BBK 12 - ಗಿಲ್ಲಿ ಮಾತು ಕೇಳಿ ಮನೆಯೊಳಗೆ ಬರಲ್ಲ ಎಂದ ಪ್ರೇಮ್; ಶನಿವಾರದ ಸಂಚಿಕೆಯಲ್ಲಿಯೇ ಸ್ಪರ್ಧಿಗಳಿಗೆ ಶಾಕ್

ಈ ವಾರದ ಬಿಗ್‌ಬಾಸ್ ಸಂಚಿಕೆಯಲ್ಲಿ ನಿರ್ದೇಶಕ ಪ್ರೇಮ್ ಮತ್ತು 'ಕೆಡಿ' ಚಿತ್ರತಂಡ ಭೇಟಿ ನೀಡಿದೆ. ಈ ವೇಳೆ ಮನೆಯಲ್ಲಿ ಡಬಲ್ ಎಲಿಮಿನೇಷನ್ ಘೋಷಣೆಯಾಗಿದ್ದು, ಸ್ಪರ್ಧಿಗಳು ಆಘಾತಗೊಂಡಿದ್ದಾರೆ. ಅಂತಿಮವಾಗಿ ಸ್ಪಂದನಾ, ಧ್ರುವಂತ್, ಸೂರಜ್ ಮತ್ತು ರಾಶಿಕಾ ನಾಮಿನೇಷನ್ ತೂಗುಗತ್ತಿಯಲ್ಲಿದ್ದಾರೆ.
Read Full Story

02:32 PM (IST) Dec 27

ಮನೆ ಕೊಳ್ಳುವ ಕನಸಿದ್ಯಾ? ಬೆಂಗಳೂರಲ್ಲಿ ಆಗದಿದ್ದರೆ ಈ ಸಿಟಿಯಲ್ಲಿ ಟ್ರೈ ಮಾಡಿ

ನೈಟ್ ಫ್ರಾಂಕ್ ಇಂಡಿಯಾ ವರದಿಯ ಪ್ರಕಾರ, ಭಾರತದ ಪ್ರಮುಖ ನಗರಗಳಲ್ಲಿ ಮನೆ ಖರೀದಿ ಈಗ ಸುಲಭವಾಗಿದೆ. ಮುಂಬೈನಲ್ಲಿ ಮನೆ ಆದಾಯದ 47% ರಷ್ಟು ಮಾತ್ರ ಅಗತ್ಯವಿದ್ದು, ಅಹಮದಾಬಾದ್ ದೇಶದ ಅತ್ಯಂತ ಕೈಗೆಟುಕುವ ನಗರವಾಗಿ ಹೊರಹೊಮ್ಮಿದೆ. ಬಡ್ಡಿದರ ಕಡಿತ ಮತ್ತು ಆದಾಯದ ಬೆಳವಣಿಗೆ ಈ ಬದಲಾವಣೆಗೆ ಪ್ರಮುಖ ಕಾರಣಗಳಾಗಿವೆ.
Read Full Story

01:17 PM (IST) Dec 27

ಮಗಳು ಸಾನ್ವಿ ಬಗ್ಗೆ ಕೆಟ್ಟ ಮಾತು, ಕಿತ್ತೊಗಿರೋ ಕಾಮೆಂಟ್‌ಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ - ಕಿಚ್ಚ ಖಡಕ್ ಉತ್ತರ

ನಟ ಕಿಚ್ಚ ಸುದೀಪ್ ತಮ್ಮ ಮಗಳ ಕುರಿತ ಅಸಭ್ಯ ಕಾಮೆಂಟ್‌ಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗಳು ತನಗಿಂತಲೂ ಸ್ಟ್ರಾಂಗ್ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಸಿನಿಮಾ ಪೈರಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ತಮ್ಮ 'ಮಾರ್ಕ್' ಚಿತ್ರದ ಯಶಸ್ಸಿನ ಕುರಿತು ಮಾತನಾಡಿದ್ದಾರೆ.

Read Full Story

01:10 PM (IST) Dec 27

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ, ಎಷ್ಟು ಗಂಟೆಯಿಂದ ದರ್ಶನ ಆರಂಭ, ಇಲ್ಲಿದೆ ಡೀಟೇಲ್ಸ್‌

Vaikuntha Ekadashi 2025: Special Arrangements at TTD Temple Bengaluru ಡಿಸೆಂಬರ್‌ 30 ರಂದು ವೈಕುಂಠ ಏಕಾದಶಿ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. 

Read Full Story

12:53 PM (IST) Dec 27

BBK 12 - ಗಿಲ್ಲಿ ನಟನ ವಿಚಿತ್ರ ಆಡಳಿತದಲ್ಲಿ ಹೊಸ ನಿಯಮ? ಕ್ಯಾಪ್ಟನ್ ಆದೇಶಕ್ಕೆ ಧನುಷ್-ಸೂರಜ್‌ ಶಾಕ್!

ಬಿಗ್‌ಬಾಸ್ ಮನೆಯ ಹೊಸ ಕ್ಯಾಪ್ಟನ್ ಆಗಿ ಗಿಲ್ಲಿ ನಟ ಆಯ್ಕೆಯಾಗಿದ್ದು, ಸ್ಪರ್ಧಿಗಳಿಗೆ ವಿಚಿತ್ರ ಕೆಲಸಗಳನ್ನು ಹಂಚಿ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದರೆ, ಕ್ಯಾಪ್ಟನ್ ಆದ ಆರಂಭದಲ್ಲೇ ಮೈಕ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡು ಬಿಗ್‌ಬಾಸ್‌ನಿಂದ ಎಚ್ಚರಿಕೆ ಪಡೆದಿದ್ದಾರೆ.
Read Full Story

12:50 PM (IST) Dec 27

ಕಲಬುರಗಿ - ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ!

ಕಲಬುರಗಿಯ ಮಹಿಳೆಗೆ ದೆವ್ವ ಹಿಡಿದಿದೆ ಎಂಬ ಮೂಢನಂಬಿಕೆಯಿಂದ, ಆಕೆಯ ಪತಿಯ ಸಂಬಂಧಿಕರು ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಈ ಘಟನೆಯಲ್ಲಿ, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Read Full Story

12:27 PM (IST) Dec 27

2025ರಲ್ಲಿ ಸಣ್ಣ ಬಜೆಟ್ ಸಿನಿಮಾಗಳಲ್ಲಿ ಹಿಟ್ ಆದ ಟಾಪ್ 5 ನಟಿಯರು.. ಈ ಮೂವರನ್ನು ಮರೆಯೋಕೆ ಆಗಲ್ಲ!

ಈ ವರ್ಷ ಸಣ್ಣ ಬಜೆಟ್ ಸಿನಿಮಾಗಳ ಮೂಲಕ ಯಶಸ್ಸು ಮತ್ತು ಕ್ರೇಜ್ ಗಳಿಸಿದ ಐವರು ನಟಿಯರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ. ಈ ಪಟ್ಟಿಯಲ್ಲಿ ಕೋರ್ಟ್, ರಾಜು ವೆಡ್ಸ್ ರಾಂಬಾಯಿ ಚಿತ್ರಗಳ ನಟಿಯರೂ ಇದ್ದಾರೆ.

Read Full Story

12:19 PM (IST) Dec 27

Bengaluru - ಹೆಂಡ್ತಿ ಮಸಾಜ್ ಕೆಲಸಕ್ಕೆ ಮಸಣ ಸೇರಿಸಿದ ಮೂರನೇ ಗಂಡ! ಡೆಡ್ಲಿ ಮರ್ಡರ್ ಗೆ ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರಿನಲ್ಲಿ, ಪತ್ನಿ ಮಸಾಜ್ ಪಾರ್ಲರ್‌ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಪತಿ ಅನುಮಾನಗೊಂಡು ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ.
Read Full Story

12:00 PM (IST) Dec 27

Bengaluru - ಮಂಗಳಮುಖಿಯರ ಹಗಲುದರೋಡೆ, ಹಣ ಕೊಡದಿದ್ರೆ ಬಟ್ಟೆ ಬಿಚ್ಚಿ ನಿಲ್ತಾರೆ!

ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆ ಸೇರಿದಂತೆ ಹಲವೆಡೆ ಕೆಲವು ಮಂಗಳಮುಖಿಯರು ಹಣಕ್ಕಾಗಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ. ಹಣ ನೀಡದಿದ್ದರೆ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

11:37 AM (IST) Dec 27

'ಕೆಡಿ' ರಿಲೀಸ್ ಡೇಟ್ ಫಿಕ್ಸ್ - ಬಹುಭಾಷೆಯಲ್ಲಿ ಈ ದಿನದಂದು ಎಂಟ್ರಿ ಕೊಡಲಿದ್ದಾರೆ ಧ್ರುವ ಸರ್ಜಾ!

ನಟ ಧ್ರುವ ಸರ್ಜಾ ಅಭಿನಯದ ಚಿತ್ರ 'ಕೆಡಿ'. ಜೋಗಿ ಪ್ರೇಮ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ಇತ್ತೀಚೆಗೆ ಚಿತ್ರತಂಡ ಅಧಿಕೃತ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿತು.

Read Full Story

11:33 AM (IST) Dec 27

Bengaluru - ಉದ್ಯಮಕ್ಕೆಂದು ಜಾಗ ಪಡೆದು 250 ಕೋಟಿಗೆ ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌!

ಉದ್ಯಮ ಸ್ಥಾಪನೆಗೆಂದು ಕೆಐಎಡಿಬಿಯಿಂದ ಪಡೆದಿದ್ದ 53.5 ಎಕರೆ ಭೂಮಿಯನ್ನು ಇನ್ಫೋಸಿಸ್, ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ ಮಾರಾಟ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ₹250 ಕೋಟಿ ಮೌಲ್ಯದ ಒಪ್ಪಂದವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story

11:24 AM (IST) Dec 27

ಅಳಿಯ ಸೂರಜ್ ಸಾವು - ಗಾನವಿ ತಾಯಿ ರುಕ್ಮಿಣಿ ಬಿಚ್ಚಿಟ್ಟ ಬೀಗ್ತಿ ಜಯಂತಿ ರಹಸ್ಯ!

ಬೆಂಗಳೂರಿನ ಗಾನವಿ ನಿಧನದ ನಂತರ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯಿಸಿದ್ದಾರೆ. ಅಳಿಯನ ಸಾವಿಗೆ ತಪ್ಪಿತಸ್ಥ ಭಾವನೆಯೇ ಕಾರಣ ಎಂದಿರುವ ಅವರು, ಸೂರಜ್ ತಾಯಿಯ ಧನದಾಹವೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿದ್ದಾರೆ.

Read Full Story

10:47 AM (IST) Dec 27

‘ಧುರಂಧರ್’ ವಿಶ್ವಮಟ್ಟದಲ್ಲಿ ಹೊಸ ಇತಿಹಾಸ - 285 ಕೋಟಿಗೆ ನೆಟ್‌ಫ್ಲಿಕ್ಸ್ ಒಟಿಟಿ ಡೀಲ್

‘ಕಾಂತಾರ 1’ ಹಿಂದಿಕ್ಕಿ 2025ರ ಅತೀ ಹೆಚ್ಚು ಗಳಿಕೆಯ ಸಿನಿಮಾ ಎಂಬ ದಾಖಲೆ ಬರೆದಿದೆ. 21ನೇ ದಿನ ಭಾರತದಲ್ಲಿ ಧುರಂಧರ್ 668.80 ಕೋಟಿ ಗಳಿಕೆ ಮಾಡಿದರೆ ವಿಶ್ವಾದ್ಯಂತದ ಗಳಿಕೆ 1006.7 ಕೋಟಿ ರು. ಆಗಿದೆ.

Read Full Story

10:40 AM (IST) Dec 27

ಹಳೇ ಸೀಸನ್‌ ಸ್ಪರ್ಧಿಗಳಿಗೆ ಒಂದು ನ್ಯಾಯ? ಈಗ ಇನ್ನೊಂದು ನ್ಯಾಯವೇ Bigg Boss? ವಿಡಿಯೋ ವೈರಲ್

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಕಾವ್ಯ ಶೈವ ಅವರ ಮನೆಯವರು ಹೊರಗಡೆ ವಿಚಾರವನ್ನು ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಬೇಗ ಮನೆಯಿಂದ ಹೊರಗಡೆ ಕಳಿಸಲಾಗಿತ್ತು, ಆದರೆ ಹಳೇ ಸೀಸನ್‌ನಲ್ಲಿ ಮಾಡಿದ್ದೇನು? 

Read Full Story

10:32 AM (IST) Dec 27

ಮೂರುವರೆ ದಶಕಗಳಿಂದ ಇದ್ದ ಒಳ ಮೀಸಲಾತಿಗಾಗಿ ಹೋರಾಟಕ್ಕೆ ಜಯ ಸಿಕ್ಕಿದೆ - ಸಚಿವ ಮುನಿಯಪ್ಪ

ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

Read Full Story

10:20 AM (IST) Dec 27

ಸಿಲಿಂಡರ್ ಸ್ಫೋಟದ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ - ಗೃಹ ಸಚಿವ ಪರಮೇಶ್ವರ್

ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

Read Full Story

09:54 AM (IST) Dec 27

ಶಿವಮೊಗ್ಗ-ಬೆಂಗಳೂರು & ಶಿವಮೊಗ್ಗ-ಚಿಕ್ಕಮಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಯಾರ್ಡ್ ನಿರ್ವಹಣಾ ಕಾಮಗಾರಿಯಿಂದಾಗಿ ಶಿವಮೊಗ್ಗ-ಬೆಂಗಳೂರು ಮತ್ತು ಶಿವಮೊಗ್ಗ-ಚಿಕ್ಕಮಗಳೂರು ಮಾರ್ಗದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜನಶತಾಬ್ದಿ ಎಕ್ಸ್‌ಪ್ರೆಸ್‌ ಸೇರಿದಂತೆ ಹಲವು ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸಲಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.

Read Full Story

More Trending News