ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಚಾಮರಾಜಪೇಟೆ ಕ್ಷೇತ್ರದಲ್ಲಿ ಮುಂದಿನ ಉಪಮುಖ್ಯಮಂತ್ರಿ ಜಮೀರ್ ಅಹಮದ್ ಖಾನ್ ಎಂಬ ಪೋಸ್ಟರ್ಗಳು ರಾರಾಜಿಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿವೆ. ಹೊಸ ವರ್ಷದ ಶುಭಾಶಯ ತಿಳಿಸುವ ಪೋಸ್ಟರ್ಗಳಲ್ಲಿ ಜಮೀರ್ ಅಹ್ಮದ್ ಅವರನ್ನು ಅಪ್ ಕಮಿಂಗ್ ಡಿಸಿಎಂ (ಮುಂದಿನ ಉಪಮುಖ್ಯಮಂತ್ರಿ) ಎಂದು ಬಿಂಬಿಸಲಾಗಿದೆ. ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಣೆಯೂ ಹೊತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಚರ್ಚೆ ಬೆನ್ನಲ್ಲೇ ಅಪ್ಕಮಿಂಗ್ ಡಿಸಿಎಂ ಪೋಸ್ಟರ್ ಹಲವು ರೀತಿಯ ಚರ್ಚೆಯನ್ನು ಹುಟ್ಟು ಹಾಕಿದೆ.
ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಹಲವು ದಿನಗಳಿಂದ ಕಾದಾಟ ನಡೆಯುತ್ತಿದೆ ಎಂದು ಸುದ್ದಿಯಾಗುತ್ತಿರುವ ಬೆನ್ನಲ್ಲಿಯೇ ಸಚಿವ ಕೆ.ಎಚ್.ಮುನಿಯಪ್ಪ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ಜೈಕಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮಾಜಿ ಶಾಸಕ ಗಂಗಹನುಮಯ್ಯ ಮನೆಗೆ ಕೆ.ಎಚ್. ಮುನಿಯಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಕೆ.ಎಚ್ ಮುನಿಯಪ್ಪ ಸಾಹೇಬರಿಗೆ ಜೈ ಎಂದು ಅಭಿಮಾನಿಗಳು ಘೋಷಣೆ ಕೂಗಿದರು.
12:19 PM (IST) Dec 27
12:00 PM (IST) Dec 27
11:37 AM (IST) Dec 27
ನಟ ಧ್ರುವ ಸರ್ಜಾ ಅಭಿನಯದ ಚಿತ್ರ 'ಕೆಡಿ'. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ಇತ್ತೀಚೆಗೆ ಚಿತ್ರತಂಡ ಅಧಿಕೃತ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿತು.
11:33 AM (IST) Dec 27
ಉದ್ಯಮ ಸ್ಥಾಪನೆಗೆಂದು ಕೆಐಎಡಿಬಿಯಿಂದ ಪಡೆದಿದ್ದ 53.5 ಎಕರೆ ಭೂಮಿಯನ್ನು ಇನ್ಫೋಸಿಸ್, ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ ಮಾರಾಟ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ₹250 ಕೋಟಿ ಮೌಲ್ಯದ ಒಪ್ಪಂದವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
11:24 AM (IST) Dec 27
ಬೆಂಗಳೂರಿನ ಗಾನವಿ ನಿಧನದ ನಂತರ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯಿಸಿದ್ದಾರೆ. ಅಳಿಯನ ಸಾವಿಗೆ ತಪ್ಪಿತಸ್ಥ ಭಾವನೆಯೇ ಕಾರಣ ಎಂದಿರುವ ಅವರು, ಸೂರಜ್ ತಾಯಿಯ ಧನದಾಹವೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿದ್ದಾರೆ.
10:47 AM (IST) Dec 27
‘ಕಾಂತಾರ 1’ ಹಿಂದಿಕ್ಕಿ 2025ರ ಅತೀ ಹೆಚ್ಚು ಗಳಿಕೆಯ ಸಿನಿಮಾ ಎಂಬ ದಾಖಲೆ ಬರೆದಿದೆ. 21ನೇ ದಿನ ಭಾರತದಲ್ಲಿ ಧುರಂಧರ್ 668.80 ಕೋಟಿ ಗಳಿಕೆ ಮಾಡಿದರೆ ವಿಶ್ವಾದ್ಯಂತದ ಗಳಿಕೆ 1006.7 ಕೋಟಿ ರು. ಆಗಿದೆ.
10:40 AM (IST) Dec 27
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಾವ್ಯ ಶೈವ ಅವರ ಮನೆಯವರು ಹೊರಗಡೆ ವಿಚಾರವನ್ನು ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಬೇಗ ಮನೆಯಿಂದ ಹೊರಗಡೆ ಕಳಿಸಲಾಗಿತ್ತು, ಆದರೆ ಹಳೇ ಸೀಸನ್ನಲ್ಲಿ ಮಾಡಿದ್ದೇನು?
10:32 AM (IST) Dec 27
ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
10:20 AM (IST) Dec 27
ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
09:54 AM (IST) Dec 27
ಯಾರ್ಡ್ ನಿರ್ವಹಣಾ ಕಾಮಗಾರಿಯಿಂದಾಗಿ ಶಿವಮೊಗ್ಗ-ಬೆಂಗಳೂರು ಮತ್ತು ಶಿವಮೊಗ್ಗ-ಚಿಕ್ಕಮಗಳೂರು ಮಾರ್ಗದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜನಶತಾಬ್ದಿ ಎಕ್ಸ್ಪ್ರೆಸ್ ಸೇರಿದಂತೆ ಹಲವು ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸಲಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.
09:09 AM (IST) Dec 27
ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ) ವಿಧೇಯಕ’ ಸದ್ಯ ಹೆಚ್ಚು ಚರ್ಚೆಗೆ ಒಳಗಾಗಿದೆ ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿದ್ದಾರೆ ಸಚಿವ ಎಚ್.ಕೆ.ಪಾಟೀಲ್.
08:39 AM (IST) Dec 27
Karna Kannada Serial Today Episode: ಕರ್ಣ ಧಾರಾವಾಹಿಯಲ್ಲಿ ಸಂಜಯ್ ಮಾಡಿದ ಕುತಂತ್ರಕ್ಕೆ ನಿತ್ಯಾ ಮಗು ಬಲಿಯಾದಂತಿದೆ. ಹೌದು, ವಾಹಿನಿಯು ಹೊಸ ಪ್ರೋಮೋವನ್ನು ರಿಲೀಸ್ ಮಾಡಿದೆ. ಹಾಗಾದರೆ ಮುಂದೆ ಏನಾಗಬಹುದು? ನಿತ್ಯಾ, ತೇಜಸ್, ನಿಧಿ ಬದುಕು ಏನಾಗಲಿದೆ?
08:37 AM (IST) Dec 27
ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮ*ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತ್ನಿಯ ಸಾವಿನ ನಂತರ ಪತಿ ಸೂರಜ್ ಕೂಡ ನಾಗಪುರದಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದು, ಅವರ ತಾಯಿ ಜಯಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
08:32 AM (IST) Dec 27
ಕಾವೇರಿ ನೀರಿನ ಪೈಪು ಒಡೆದು ಕಳೆದ ಐದಾರು ತಿಂಗಳಿಂದ ಅಮೂಲ್ಯ ಜೀವಜಲ ವ್ಯರ್ಥವಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ ದಾಸರಹಳ್ಳಿ ಕ್ಷೇತ್ರದ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
08:22 AM (IST) Dec 27
ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಾಮಾಣಿಕವಾಗಿ ಸೇವೆ ಮಾಡುತ್ತಿದ್ದು, ತಮ್ಮ ಮೇಲೆ ಸುಳ್ಳು ಹಾಗೂ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಪ್ರತಿಕ್ರಿಯಿಸಿದ್ದಾರೆ.
08:11 AM (IST) Dec 27
ಈ ವಾರದ ಬಿಗ್ಬಾಸ್ ವೀಕೆಂಡ್ ಸಂಚಿಕೆಯಲ್ಲಿ ನಿರೂಪಕ ಸುದೀಪ್ ಬದಲಿಗೆ ಇಬ್ಬರು ಸ್ಟಾರ್ ಆಗಮಿಸಲಿದ್ದಾರೆ. ಹೊಸ ಕ್ಯಾಪ್ಟನ್ ಗಿಲ್ಲಿ ನಟನ ನಾಯಕತ್ವ ಮತ್ತು ಕಾವ್ಯಾ ಆಟದ ಬದಲಾವಣೆಗಳು ಸಂಚಿಕೆಯ ಕುತೂಹಲವನ್ನು ಹೆಚ್ಚಿಸಿವೆ.
08:00 AM (IST) Dec 27
Amruthadhaare Kannada Serial Today Episode: ಅಮೃತಧಾರೆ ಧಾರಾವಾಹಿಯಲ್ಲಿ ಯಾರೂ ಊಹಿಸದ ಘಟನೆ ನಡೆದು ಹೋಯ್ತು. ವಾಹಿನಿಯು ಹೊಸ ಪ್ರೋಮೋವನ್ನು ರಿಲೀಸ್ ಮಾಡಿದೆ. ಭೂಮಿ ಈ ರೀತಿ ಮಾಡ್ತಾಳೆ ಎಂದು ಅಂದುಕೊಂಡಿರಲಿಲ್ಲ. ಇದು ವೀಕ್ಷಕರಿಗಂತೂ ಸಖತ್ ಹಬ್ಬ ಎಂದು ಹೇಳಬಹುದು.
07:30 AM (IST) Dec 27
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಫಿಸಿಕಲ್ ಟಾಸ್ಕ್ ಮಾಡೋದಿಲ್ಲ ಎಂಬ ಆರೋಪ ಇತ್ತು. ಬರೀ ಮಾತು ಆಡಿಕೊಂಡು ಇಲ್ಲಿಯವರೆಗೆ ಬಂದ ಗಿಲ್ಲಿ ಮಾತ್ರ ಯಾರ ಜೊತೆಯೂ ಫಿಸಿಕಲ್ ಟಾಸ್ಕ್ ಆಡಿ ಗೆಲ್ಲಲ್ಲ ಎಂದು ಹೇಳುತ್ತಲೇ ಬಂದಿದ್ದರು.
07:20 AM (IST) Dec 27
ಬಿಗ್ಬಾಸ್ ಮನೆಯ 14ನೇ ವಾರದ ಕ್ಯಾಪ್ಟನ್ ಆಗಿ ಗಿಲ್ಲಿ ನಟ ಆಯ್ಕೆಯಾಗಿದ್ದಾರೆ. ಆದರೆ, ಕ್ಯಾಪ್ಟನ್ ಆದ ಖುಷಿಯಲ್ಲೇ ಮೈಕ್ ಸರಿಯಾಗಿ ಧರಿಸದೆ ಮೂಲ ನಿಯಮವನ್ನೇ ಉಲ್ಲಂಘಿಸಿ ಮನೆಯ ಸದಸ್ಯರಿಂದ ತಮಾಷೆಗೆ ಗುರಿಯಾಗಿದ್ದಾರೆ.
07:04 AM (IST) Dec 27
ನಗರದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ಕಲ್ಪಿಸುವ ಶೆಲ್ಟರ್ಗಳು ಜನವರಿ ಮೊದಲ ವಾರದ ವೇಳೆಗೆ ಕಾರ್ಯಾರಂಭ ಮಾಡಲಿವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.