ಬೆಂಗಳೂರು: ಕೊಪ್ಪಳ, ಗದಗ, ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಿ.ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವರು ಮೃತಪಟ್ಟಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಗಾಳಿ-ಮಳೆಗೆ ಸಾವಿರಾರು ಅಡಕೆ ಮರಗಳು ಧರೆಗುರುಳಿವೆ. ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಆರ್.ಲೋಕೇಶ (52) ಎಂಬುವರು ತಮ್ಮ ಅಡಿಕೆ ಮನೆಗೆ ಹಾಕಿದ್ದ ಹೆಂಚುಗಳು ಹಾರಿ ಹೋಗಿದ್ದನ್ನು ನೋಡಿ, ಗಾಬರಿಗೊಂಡು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ಗದಗ ಜಿಲ್ಲೆ ಮುಂಡರಗಿಯಲ್ಲಿ ಗಾಳಿ-ಮಳೆಗೆ ಖಾಸಗಿ ಕಂಪನಿಯ ಮೊಬೈಲ್ ಟವರ್ ನ ಕಂಬ ಮುರಿದು ಬಿದ್ದಿದೆ. ರಾಯಚೂರು ಜಿಲ್ಲೆ ಹಳೆ ಕೆರೆ ಎಂಬಲ್ಲಿ ಸಿಡಿಲು ಬಡಿದು 8 ಕುರಿ ಮತ್ತು 3 ಕುರಿಮರಿಗಳು ಮೃತಪಟ್ಟಿವೆ.
10:10 PM (IST) Apr 28
ಬಿಗ್ಬಾಸ್ ಖ್ಯಾತಿಯ ರಜತ್ ಇದೀಗ ಸಾರ್ವಜನಿಕ ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟದ ವಿಡಿಯೋ ಮಾಡಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಹಾಗೂ ಪಾರಂಪರಿಕ ಕಟ್ಟಡದ ಮುಂದೆ ಫೋಟೋಶೂಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಅವರು, ಈಗ ಹೀಗೊಂದು ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದಾರೆ.
09:48 PM (IST) Apr 28
ನಾವು ಅಧಿಕಾರದಲ್ಲಿ ಇರಬೇಕಾದರೆ ಪ್ರತಿ 5 ವರ್ಷಕ್ಕೊಮ್ಮೆ ರಿನೀವಲ್ (ನವೀಕರಿಸಬೇಕು) ಮಾಡಿಕೊಳ್ಳಬೇಕು. ಆದರೆ, ಸರ್ಕಾರಿ ಅಧಿಕಾರಿಗಳು ಒಮ್ಮೆ ಸೇವೆಗೆ ಸೇರ್ಪಡೆಯಾದರೆ 30ರಿಂದ 35 ವರ್ಷ ಕೆಲಸದಿಂದ ತೆಗೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
09:34 PM (IST) Apr 28
09:05 PM (IST) Apr 28
08:46 PM (IST) Apr 28
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧವನ್ನು ತೆರವುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಬೈಕ್ ಟ್ಯಾಕ್ಸಿ ನಿಷೇಧವನ್ನು ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿತ್ತು.
07:45 PM (IST) Apr 28
06:26 PM (IST) Apr 28
06:06 PM (IST) Apr 28
ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ರೇಸ್ನಲ್ಲಿರೋದು ಡಿ.ಕೆ.ಶಿವಕುಮಾರ್ ಮಾತ್ರ. ಬೇರೆಯವರೂ ರೇಸ್ನಲ್ಲಿ ಇರಬಹುದು. ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.
05:51 PM (IST) Apr 28
ಖುರ್ಚಿಗಾಗಿ ದೆಹಲಿ ಪ್ರವಾಸದ ಬಿಸಿಯಲ್ಲಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಬಿಸಿಯನ್ನು ರಾಜ್ಯದ ಜನತೆ ಮುಟ್ಟಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.
05:44 PM (IST) Apr 28
05:17 PM (IST) Apr 28
04:35 PM (IST) Apr 28
ಸಚಿವ ಸಂಪುಟ ಪುನರ್ ರಚನೆ ಅಗತ್ಯವಿದ್ದು, ಇತರರಿಗೆ ಕೂಡ ಅವಕಾಶ ಸಿಗಬೇಕು. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
04:33 PM (IST) Apr 28
04:21 PM (IST) Apr 28
ಎಂಜಿನಿಯರ್ಗಳು ಈ ಸಮಾಜಕ್ಕೆ, ದೇಶಕ್ಕೆ ಕೊಟ್ಟ ಕೊಡುಗೆಯನ್ನು ಮರೆಯುವಂತಿಲ್ಲ. ಅಭಿವೃದ್ಧಿ, ನಗರದ ಸೌಂದರ್ಯತೆಗೆ ಎಂಜಿನಿಯರ್ಗಳ ಕೊಡುಗೆ ಅನನ್ಯವಾದುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
03:57 PM (IST) Apr 28
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಸ್ಥಳೀಯರು ಕೂಡಲೇ ಮಗುವನ್ನು ರಕ್ಷಿಸಿದರೂ, ಪತಿ ಪತ್ನಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
03:17 PM (IST) Apr 28
03:07 PM (IST) Apr 28
ತಂಪು ಪಾನೀಯ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದ್ದು ಚಾಲಕ ಸಹಾಯಕ್ಕಾಗಿ ಬೇಡಿದರೂ, ಜನ ಆತನನ್ನು ನಿರ್ಲ್ಷಕ್ಷಿಸಿ ತಮ್ಮ ವಾಹನಗಳಲ್ಲಿ ಬಂದು ರಸ್ತೆಗೆ ಬಿದ್ದ ಜ್ಯೂಸ್ ಬಾಟಲ್ಗಳನ್ನು ಹೊತ್ತೊಯ್ದಿದ್ದು ಜನರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
02:51 PM (IST) Apr 28
02:40 PM (IST) Apr 28
01:38 PM (IST) Apr 28
ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅನುತ್ತೀರ್ಣರಾಗಲು ಪಠ್ಯಪುಸ್ತಕದಲ್ಲಿನ ಅಧಿಕ ವ್ಯಾಕರಣದ ಹೊರೆ ಮತ್ತು ಹಳಗನ್ನಡ, ನಡುಗನ್ನಡ ಪಾಠಗಳ ಕಠಿಣತೆಯೇ ಪ್ರಮುಖ ಕಾರಣವೆಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
01:28 PM (IST) Apr 28
01:03 PM (IST) Apr 28
12:46 PM (IST) Apr 28
ಮಾಜಿ ಸಚಿವ ಕೆ.ಎನ್. ರಾಜಣ್ಣ ರಾಜ್ಯ ರಾಜಕಾರಣದ ಗೊಂದಲಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದು, ಹೈಕಮಾಂಡ್ ಮಧ್ಯಪ್ರವೇಶಿಸಿ ಗೊಂದಲ ನಿವಾರಿಸಬೇಕೆಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದು, ಪದತ್ಯಾಗಕ್ಕೂ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.
12:31 PM (IST) Apr 28
ಧಾರವಾಡದಲ್ಲಿ ಗಾಂಜಾ ಸೇವನೆಯ ಸುಳ್ಳು ಆರೋಪದ ಮೇಲೆ ಪೊಲೀಸರಿಂದ ವಶಕ್ಕೆ ಪಡೆಯಲ್ಪಟ್ಟಿದ್ದ ಆದಿತ್ಯ ಮ್ಯಾಗೇರಿ ಎಂಬ ವಿದ್ಯಾರ್ಥಿ, ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗಿದ್ದಾನೆ. ಇದರ ಜೊತೆಗೆ ಕೇಸ್ನಿಂದ ಬಿಡುಗಡೆ ಮಾಡಲು ಪೊಲೀಸರು ಸಾವಿರಾರು ರೂ ಲಂಚ ಕೇಳಿದ ಆರೋಪ ಕೇಳಿ ಬಂದಿದೆ.
12:20 PM (IST) Apr 28
11:54 AM (IST) Apr 28
11:46 AM (IST) Apr 28
'ಟಾಕ್ಸಿಕ್ ಗೆ ಆ್ಯಕ್ಷನ್ ಕಟ್ ಹೇಳಿರೋದು ಮಹಿಳಾ ನಿರ್ದೇಶಕಿ. ರಾಷ್ಟ್ರಪ್ರಶಸ್ತಿ ವಿಜೇತೆ ಗೀತು ಮೋಹನ್ ದಾಸ್. ಮಹಿಳಾ ನಿರ್ದೇಶಕಿಯೊಬ್ಬರು 'ಟಾಕ್ಸಿಕ್' ರೀತಿಯ ಆಕ್ಷನ್ ಚಿತ್ರವನ್ನು ನಿರ್ದೇಶನ ಮಾಡುವುದು ಅಪರೂಪ ಎಂದಿರೋ ಯಶ್ ಇದು ದೊಡ್ಡ ಪ್ರಮಾಣದ ಆಕ್ಷನ್ ಸಿನಿಮಾ.' ಎಂದಿರೋ ಯಶ್, ಇನ್ನೂ ಹೇಳಿದ್ದಾರೆ.. ಈ ಸ್ಟೋರಿ ನೋಡಿ..
11:36 AM (IST) Apr 28
11:32 AM (IST) Apr 28
ಒಡಿಶಾದಲ್ಲಿ, ಮೃತ ಸೋದರಿಯ ಖಾತೆಯಿಂದ ಹಣ ಪಡೆಯಲು ವಿಫಲನಾದ ವ್ಯಕ್ತಿಯೊಬ್ಬ, ಆಕೆ ಮೃತಪಟ್ಟಿದ್ದಾಳೆಂದು ಸಾಬೀತುಪಡಿಸಲು ಆಕೆಯ ಅಸ್ಥಿಪಂಜರವನ್ನೇ ಬ್ಯಾಂಕ್ಗೆ ತಂದಂತಹ ಆಘಾತಕಾರಿ ಘಟನೆ ನಡೆದಿದೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ ಸಹಾಯದ ಭರವಸೆ ನೀಡಿದ್ದಾರೆ.
11:01 AM (IST) Apr 28
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸರ್ಕಾರವೇ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ನಿಯಂತ್ರಿಸಲಿದ್ದು, ಟ್ಯಾಬ್ ಮೂಲಕ ರೋಗಿಯ ಸ್ಥಿತಿಗತಿ ವೀಕ್ಷಿಸುವ ನೂತನ ವ್ಯವಸ್ಥೆ ಜಾರಿಯಾಗಲಿದೆ ಎಂದರು.
09:50 AM (IST) Apr 28
09:50 AM (IST) Apr 28
09:44 AM (IST) Apr 28
ಭಾರತವನ್ನು ನರಕವೆಂದು ಕರೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 'ಹುಚ್ಚ' ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿರುವುದು ಪ್ರಶ್ನಿಸಿರುವ ಅವರು, ಮೋದಿ ಹಾಗೂ ಬಿಜೆಪಿಯ ಚುನಾವಣಾ ತಂತ್ರ ಮತ್ತು ಮಹಿಳಾ ಮೀಸಲಾತಿ ನಿಲುವಿನ ಬಗ್ಗೆಯೂ ವಾಗ್ದಾಳಿ
08:51 AM (IST) Apr 28
ಯಾದಗಿರಿ ಜಿಲ್ಲೆಯಲ್ಲಿ ನೋಂದಣಿಯಾದ 30,000ಕ್ಕೂ ಹೆಚ್ಚು ಗರ್ಭಿಣಿಯರಲ್ಲಿ 3,000ಕ್ಕೂ ಅಧಿಕ ಮಂದಿಯ ಹೆರಿಗೆಯ ಮಾಹಿತಿ ಲಭ್ಯವಿಲ್ಲದಿರುವುದು ಸಾವಿರಾರು ಭ್ರೂಣಹತ್ಯೆಗಳ ಅನುಮಾನಕ್ಕೆ ಕಾರಣವಾಗಿದೆ. ಕನ್ನಡಪ್ರಭ ವರದಿಯ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯಮಟ್ಟದ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.
08:37 AM (IST) Apr 28
ಬೇಸಿಗೆಯಲ್ಲಿ ಬತ್ತಿಹೋಗುವ ಕರಾವಳಿಯ ಕೆರೆ ಮತ್ತು ಬಾವಿಗಳಿಗೆ ಅಡ್ಡ ಬೋರ್ ಕೊರೆಯುವ ಮೂಲಕ ಮತ್ತೆ ಜೀವ ನೀಡಲಾಗುತ್ತಿದೆ. ಭೂಮಿಯೊಳಗೆ ಅಡ್ಡಲಾಗಿ ಕೊರೆದು ನೀರಿನ ಸೆಲೆಯನ್ನು ಪತ್ತೆಹಚ್ಚುವ ಈ ಯಶಸ್ವಿ ತಂತ್ರವು, ವರ್ಷಪೂರ್ತಿ ನೀರು ಹರಿಯುವಂತೆ ಮಾಡಿ ನೀರಿನ ಅಭಾವವನ್ನು ನೀಗಿಸುತ್ತಿದೆ.
08:04 AM (IST) Apr 28
ಜಾರ್ಖಂಡ್ ಮೂಲದ ಪೂಜಾ ದತ್ತಾ ಎಂಬ ಯುವತಿಯ ಮೃತದೇಹವು ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದು ಕೊ*ಲೆಯೋ ಅಥವಾ ಆತ್ಮ*ಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
07:35 AM (IST) Apr 28
ಹುಬ್ಬಳ್ಳಿಯಲ್ಲಿ ಉದ್ದೇಶಿಸಿರುವ ಅಹಿಂದ ಸಮಾವೇಶವು ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಬಣಗಳನ್ನು ಸೃಷ್ಟಿಸಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಬಣವು ಪಕ್ಷಕ್ಕೆ ಲಾಭವೆಂದು ಸಮಾವೇಶಕ್ಕೆ ಒತ್ತಾಯಿಸಿದರೆ, ಮತ್ತೊಂದು ಬಣ ಪಕ್ಷಕ್ಕೆ ಹಾನಿಕರ ಎಂದು ವಿರೋಧ. ಈ ಗೊಂದಲ ಇದೀಗ ಹೈಕಮಾಂಡ್ ಅಂಗಳ ತಲುಪಿದೆ.