ಬೆಂಗಳೂರು (ಜ.28): ಗಾಂಧೀಜಿ ಹೆಸರಿನ 'ಮನರೇಗಾ' ಯೋಜನೆ ಕೈಬಿಟ್ಟು ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ 'ಜಿ ರಾಮ್ ಜಿ' ಕಾಯ್ದೆ ವಿರುದ್ದ ಬೃಹತ್ ಪ್ರತಿಭಟನೆ, ಲೋಕಭವನ ಚಲೋ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. 'ಮನರೇಗಾ' ಮರು ಜಾರಿಯಾಗುವವರೆಗೆ ಹಂತ ಹಂತವಾಗಿ ಹೋರಾಟ ತೀವ್ರ ಗೊಳಿಸಲಾಗುವುದು. ಕರಾಳ ಕೃಷಿ ಕಾಯ್ದೆ ವಿರುದ್ಧ ನಡೆದ ರೈತ ಚಳವಳಿ ಮಾದರಿಗೆ ಈ ಹೋರಾಟ ಕೊಂಡೊಯ್ಯುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
11:18 PM (IST) Jan 28
ಬಾಗಲಕೋಟೆ ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳು ಬಿಸಿಯೂಟದ ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ದೃಶ್ಯ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿ
11:04 PM (IST) Jan 28
ಬ್ರಹ್ಮಗಂಟು ಧಾರಾವಾಹಿಯ ದೀಪಾ ಪಾತ್ರಧಾರಿ ದಿಯಾ ಪಾಲಕ್ಕಲ್ ಅವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯವೇ ಶ್ರೇಷ್ಠ ಎಂಬ ಸಂದೇಶ ಸಾರುವ ಈ ಪಾತ್ರಕ್ಕಾಗಿ ಅವರು ಗಂಟೆಗಟ್ಟಲೆ ಮೇಕಪ್ ಮಾಡಿಕೊಳ್ಳುತ್ತಾರೆ.
10:46 PM (IST) Jan 28
ಹಾವೇರಿಯ ರಟ್ಟಿಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ, ಮೃತ ಪತ್ನಿಯ ಮರಣ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ ಪತಿಗೆ, ಅವರ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಿದ ಘಟನೆ ನಡೆದಿದೆ. ಐದು ವರ್ಷಗಳ ಹಿಂದಿನ ಎಡವಟ್ಟಿನಿಂದ ಜೀವಂತ ಇರುವ ತೋಪನಗೌಡ ಎಂಬುವವರ ರೇಷನ್ ಕಾರ್ಡ್ ರದ್ದಾಗಿ ತೊಂದರೆ ಅನುಭವಿಸುತ್ತಿದ್ದಾರೆ.
10:15 PM (IST) Jan 28
ಪಕ್ಕಾ ಪ್ಲಾನ್ ಮಾಡಿ ಬೆಂಗಳೂರಿನ ಮನೆಯಿಂದ 18 ಕೋಟಿ ರೂ ಚಿನ್ನಾಭರಣ ಕಳವು, ಮನೆಕೆಲಸ ಮಾಡುತ್ತಿದ್ದ ನೇಪಾಳಿ ದಂಪತಿಗಳ ಕೃತ್ಯಕ್ಕೆ ಮನೆ ಮಂದಿ ಕಂಗಾಲಾಗಿದ್ದಾರೆ. ಇದು ಪಕ್ಕಾ ಪ್ಲಾನ್ ಮಾಡಿದ ಕೃತ್ಯ, ನಿಮ್ಮ ಮನೆಯಲ್ಲಿ ಮನೆಗೆಲದವರಿದ್ದರೆ ಈ ವಿಚಾರದಲ್ಲಿ ಗಮನಹರಿಸಿ.
09:50 PM (IST) Jan 28
ದಾಂಡೇಲಿಯಲ್ಲಿ ಗೂಡ್ಸ್ ರೈಲು ರೈಲ್ವೆ ಗೇಟ್ ಬಳಿ ಎರಡೂವರೆ ಗಂಟೆ ನಿಂತಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಸಂಕಷ್ಟಕ್ಕೀಡಾದರು. ಇನ್ನೊಂದೆಡೆ, ಬೆಂಗಳೂರಿನಲ್ಲಿ ರೈಲ್ವೆ ಹಳಿ ಮೇಲೆ ಚಾಲಕನ ಅಜಾಗರೂಕತೆಯಿಂದ ರಿವರ್ಸ್ ತೆಗೆದುಕೊಂಡ ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ ಹೊಡೆದು ಜಖಂಗೊಂಡಿದೆ.
09:47 PM (IST) Jan 28
ಬಿಗ್ಬಾಸ್ ಖ್ಯಾತಿಯ ಡಾಗ್ ಸತೀಶ್, ತಮ್ಮನ್ನು ಯೌವನದಲ್ಲಿ ಆಮೀರ್ ಖಾನ್ ಎಂದು ಕರೆಯುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ಸದ್ಯ ಅವರ ಹಳೆಯ ಸಿನಿಮಾದ ತುಣುಕೊಂದು ವೈರಲ್ ಆಗಿದ್ದು, 'ಕನ್ನಡದ ಆಮೀರ್ ಖಾನ್' ಫೋಟೋ ನೋಡಿ ಎಂದು ಟ್ರೋಲ್ ಮಾಡ್ತಿದ್ದಾರೆ ನೆಟ್ಟಿಗರು!
09:44 PM (IST) Jan 28
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಬಳಿ ಕೂಲಿ ಕೆಲಸ ಮುಗಿಸಿ ಮರಳುತ್ತಿದ್ದ ಕಾರ್ಮಿಕರಿದ್ದ ಬೊಲೆರೊ ಜೀಪ್, ನಿಂತಿದ್ದ ಬೋರ್ವೆಲ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ.
09:35 PM (IST) Jan 28
09:25 PM (IST) Jan 28
ಚಲನಚಿತ್ರ ಮತ್ತು ಸೀರಿಯಲ್ಗಳಲ್ಲಿ ನಟರು ನಟಿಯರನ್ನು ಸುಲಭವಾಗಿ ಎತ್ತುವ ದೃಶ್ಯಗಳ ಹಿಂದಿನ ಸತ್ಯವೇ ಬೇರೆ. ಇದು ನಟರ ನಿಜವಾದ ಬಲವಲ್ಲ, ಬದಲಿಗೆ ಗ್ರೀನ್ ಸ್ಕ್ರೀನ್ ತಂತ್ರಜ್ಞಾನ ಮತ್ತು ಶೂಟಿಂಗ್ ಸೆಟ್ನಲ್ಲಿ ಬಳಸುವ ಟೇಬಲ್ಗಳಂತಹ ಆಧಾರಗಳ ಸಹಾಯದಿಂದ ಚಿತ್ರೀಕರಿಸಲಾಗುತ್ತದೆ.
09:17 PM (IST) Jan 28
09:04 PM (IST) Jan 28
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ, ಚನ್ನಪಟ್ಟಣ-ರಾಮನಗರ ನಡುವೆ 8 ಎಕರೆ ಜಾಗದಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣವಾಗಲಿದೆ. ಎಕ್ಸ್ಪ್ರೆಸ್ ವೇಯಿಂದಾಗಿ ಕುಸಿದಿರುವ ಸ್ಥಳೀಯ ಬೊಂಬೆ ಉದ್ಯಮಕ್ಕೆ ಉತ್ತೇಜನ ನೀಡುವುದು, ಕಲೆಗಾರರಿಗೆ, ಪ್ರವಾಸಿಗರನ್ನು ಆಕರ್ಷಿಸುವುದು ಇದರ ಮುಖ್ಯ ಉದ್ದೇಶ.
08:16 PM (IST) Jan 28
ರ್ಯಾಂಗ್ಸನ್ಸ್ ಏರೋಸ್ಪೇಸ್ ಮತ್ತು ಎಕ್ಸೈಡ್ ಎನರ್ಜಿ ಕಂಪನಿಗಳು ಜಿಟಿಟಿಸಿಯಲ್ಲಿ ತರಬೇತಿ ಪಡೆದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಒಪ್ಪಂದ ಮಾಡಿಕೊಂಡಿವೆ. ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ರಾಜಾಜಿನಗರ ಕ್ಯಾಂಪಸ್ನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು
08:04 PM (IST) Jan 28
ಮಹಾಭಾರತದಲ್ಲಿ ತ್ಯಾಗಮಯಿ ಹಾಗೂ ಕರುಣಾಮಯಿಯಾಗಿದ್ದ ಕರ್ಣನಂತೆ ಇದ್ದ ಕಿರಣ್ ರಾಜ್, ಕರ್ಣ ಧಾರಾವಾಹಿಯಲ್ಲಿ ಇದ್ದಕ್ಕಿದ್ದಂತೆಯೇ ಬದಲಾಗಿ ಹೋಗಿದ್ದಾನೆ. ಅವರ ಅಪ್ಪನ ಕಂತ್ರಿ ಬುದ್ದಿ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ತಮ್ಮ ಅತ್ತೆಯ ಮುಖವಾಡ ಬಯಲಾದಂತೆ ಅನಿಸುತ್ತಿದೆ. ಏನದು ಹೊಸ ಅಪ್ಡೇಟ್ಸ್.
08:01 PM (IST) Jan 28
'ನಾ ನಿನ್ನ ಬಿಡಲಾರೆ' ಸೀರಿಯಲ್ನಲ್ಲಿ ಎತ್ತರದ ಕಟ್ಟಡದಿಂದ ಬಿದ್ದ ಮಾಯಾ ಪಾತ್ರಕ್ಕೆ ಏನೂ ಆಗುವುದಿಲ್ಲ. ಅಷ್ಟೇ ಅಲ್ಲದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಾಗ ಫುಲ್ ಮೇಕಪ್ನಲ್ಲಿ ಕಾಣಿಸಿಕೊಂಡು ನೆಟ್ಟಿಗರಿಂದ ಸಖತ್ ಟ್ರೋಲ್ ಆಗುತ್ತಿದ್ದಾಳೆ.
07:57 PM (IST) Jan 28
07:42 PM (IST) Jan 28
ನಾಳೆ ಸಾರಿಗೆ ನೌಕರರ ಹೋರಾಟ ಹಮ್ಮಿಕೊಂಡಿದ್ದ ಮುಖಂಡ ಮುಖಂಡ ಅನಂತ್ ಸುಬ್ಬರಾವ್ ನಿಧನ, ಕಾರ್ಮಿಕ ಹೋರಾಟಗಾರನಾಗಿ ಗುರುತಿಸಿಕೊಂಡಿದ್ದ ಅನಂತ್ ಸುಬ್ಬರಾವ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
07:33 PM (IST) Jan 28
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಸಿಂಗಾಪುರ ಸರ್ಕಾರದ ಮಾನ್ಯತೆ ಪಡೆದು ವಿಶ್ವದ ಶ್ರೇಷ್ಠ ವೈದ್ಯಕೀಯ ಕಾಲೇಜುಗಳ ಪಟ್ಟಿಗೆ ಸೇರ್ಪಡೆಯಾಗಿದೆ. ಸಿಂಗಾಪುರ ಮೆಡಿಕಲ್ ಕೌನ್ಸಿಲ್ನ ಕಟ್ಟುನಿಟ್ಟಿನ ಮೌಲ್ಯಮಾಪನದ ನಂತರ, ಹೊಸದಾಗಿ ಮಾನ್ಯತೆ ಪಡೆದ ಭಾರತದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.
07:23 PM (IST) Jan 28
ಜಿ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಧಾರವಾಹಿಗಳಲ್ಲಿ ಒಂದಾಗಿರುವ ಕರ್ಣ ಸೀರಿಯಲ್ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿರುವ ಕರ್ಣ ಉರೂಪ್ ಕಿರಣ್ ರಾಜ್ ಅವರಿಗೆ ಲೇಡಿಸ್ ಫ್ಯಾನ್ಸ್ ತುಂಬಾನೆ ಇದ್ದಾರೆ ಎನ್ನುವುದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇದೀಗ ಸಂದರ್ಶನವೊಂದರಲ್ಲಿ ಈ ಕುರಿತಂತೆ ಮಾತಾಡಿದ್ದಾರೆ.
07:13 PM (IST) Jan 28
ಧಾರವಾಡದ ಶಿರಡಿ ನಗರದಲ್ಲಿ ಹುಚ್ಚು ನಾಯಿಯೊಂದು ದಾಳಿ ಮಾಡಿ 9 ಜನರನ್ನು ಗಾಯಗೊಳಿಸಿದೆ. ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೋಪಗೊಂಡ ಸ್ಥಳೀಯ ನಿವಾಸಿಗಳು, ಅಂತಿಮವಾಗಿ ನಾಯಿ ಹಿಡಿದು ಹೊಡೆದು ಕೊಂದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
07:04 PM (IST) Jan 28
ರಾಜ್ಯ ಸರ್ಕಾರವು 25 ಶಾಸಕರ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರಾವಧಿಯನ್ನು ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಶಾಸಕರು ಮುಂದಿನ ಎರಡು ವರ್ಷಗಳ ಕಾಲ ಅಥವಾ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಈ ಆದೇಶವು ಜ.26, 2026 ರಿಂದ ಪೂರ್ವಾನ್ವಯ.
06:44 PM (IST) Jan 28
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಲೋಕಾಯುಕ್ತ ಪೊಲೀಸರ 'ಬಿ' ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಸ್ನೇಹಮಯಿ ಕೃಷ್ಣ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
06:44 PM (IST) Jan 28
ಬೀದರ್ ತಾಲೂಕಿನ ಮಲ್ಕಾಪುರ ಗ್ರಾಮ ಸಭೆಯಲ್ಲಿ ಆಶ್ರಯ ಯೋಜನೆಯ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರ್ಹರನ್ನು ಕೈಬಿಟ್ಟು ಅನರ್ಹರಿಗೆ ನಿವೇಶನ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಭೆಯು ರಣರಂಗವಾಯ್ತು.
06:42 PM (IST) Jan 28
ದೆಹಲಿ ಪೊಲೀಸರು ಮತ್ತು ಎನ್ಸಿಬಿ ಅಧಿಕಾರಿಗಳು ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಕೆಮಿಕಲ್ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಮಾದಕ ದ್ರವ್ಯ ತಯಾರಿಕೆಯ ಶಂಕೆಯ ಮೇಲೆ ಈ ಕಾರ್ಯಾಚರಣೆ ನಡೆದಿದ್ದು, ಲ್ಯಾಬ್ನಲ್ಲಿದ್ದ ರಾಸಾಯನಿಕ ವಸ್ತುಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
05:59 PM (IST) Jan 28
05:41 PM (IST) Jan 28
ಶಿಯೋಮಿ ಭಾರತದಲ್ಲಿ ರೆಡ್ಮಿ ನೋಟ್ 15 ಪ್ರೊ ಮತ್ತು ಪ್ರೊ ಪ್ಲಸ್ ಸ್ಮಾರ್ಟ್ಫೋನ್ಗಳನ್ನು ಜನವರಿ 29 ರಂದು ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಲೇಖನವು ಬಿಡುಗಡೆಗೂ ಮುನ್ನ ಸೋರಿಕೆಯಾದ ಈ ಫೋನ್ಗಳ ನಿರೀಕ್ಷಿತ ಬೆಲೆ, 200MP ಕ್ಯಾಮೆರಾ, ಪ್ರೊಸೆಸರ್ ಮತ್ತು ಬ್ಯಾಟರಿ ಸಾಮರ್ಥ್ಯ ಇಲ್ಲಿ ವಿವರಿಸಲಾಗಿದೆ.
05:34 PM (IST) Jan 28
ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಸಿಡಿಎ ಮಾಜಿ ಅಧ್ಯಕ್ಷ ಆನಂದ್, ವಿಧವೆ ಮಹಿಳೆಯೊಂದಿಗೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದಾರೆಂದು ಆರೋಪಿಸಿ ಗ್ರಾಮಸ್ಥರ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ. ಈ ಘಟನೆ ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಹೋಂ ಸ್ಟೇನಲ್ಲಿ ನಡೆದಿದೆ.
05:29 PM (IST) Jan 28
BJP Ajit Pawar news: ಈ ಅಪಘಾತದ ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಹಾಗೆಯೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಲ್ಕರಿಂದ ಐದು ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳೂ ತಿಳಿಸಿದ್ದಾರೆ.
05:21 PM (IST) Jan 28
05:17 PM (IST) Jan 28
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ಹೆಚ್.ಡಿ.ಕೆ ತಮಗೆ ಟಿಕೆಟ್ ನೀಡಿ ಮೋಸ ಮಾಡಿದರು ಎಂದು ಆರೋಪಿಸಿದ್ದಾರೆ. ಅಲ್ಲದೆ, ದಿವಂಗತ ನಟ ಅಂಬರೀಶ್ ಸೇರಿದಂತೆ ಹಲವು ರಾಜಕೀಯ ನಾಯಕರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿರುವುದು ಚರ್ಚೆಗೆ ಕಾರಣವಾಗಿದೆ.
05:02 PM (IST) Jan 28
04:57 PM (IST) Jan 28
ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ನಂತರ, ಸಮೀಪದ ಕಣವಿಹೊಸೂರಿನಲ್ಲಿರುವ ಬ್ರಿಟೀಷರ ಕಾಲದ ನಿಗೂಢ ಚಿನ್ನದ ಗಣಿಯೊಂದು ಗಮನ ಸೆಳೆದಿದೆ. ಈ ಗುಹೆಯೊಳಗೆ ಅಪಾರ ಚಿನ್ನದ ನಿಕ್ಷೇಪವಿದೆ ಎಂದು ನಂಬಲಾಗಿದ್ದರೂ, ಸ್ವತಃ ಜಿಲ್ಲಾಡಳಿತವು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ.
04:39 PM (IST) Jan 28
ಸುಮಾರು 36 ಸಾವಿರ ಕೋಟಿ ರೂಪಾಯಿ ಬಾಕಿ ಹಣ ಪಾವತಿಸದ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘವು ಬೃಹತ್ ಹೋರಾಟಕ್ಕೆ ಸಿದ್ಧವಾಗಿದೆ. ಬಜೆಟ್ ನಂತರವೂ ಸರ್ಕಾರ ಸ್ಪಂದಿಸದಿದ್ದರೆ, ರಾಜ್ಯಾದ್ಯಂತ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಸಂಘ ಎಚ್ಚರಿಕೆ ನೀಡಿದೆ.
03:55 PM (IST) Jan 28
ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ, ಮೇಲಾಧಿಕಾರಿಯ ನಿರಂತರ ಕಿರುಕುಳದಿಂದ ಬೇಸತ್ತ ಡಿ-ಗ್ರೂಪ್ ನೌಕರ ಸಿದ್ದು ರಡ್ಡೇರ್, ಕರ್ತವ್ಯದ ವೇಳೆ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
03:19 PM (IST) Jan 28
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ, ಪ್ರೀತಿಸುತ್ತಿದ್ದ ಯುವ ಜೋಡಿಯೊಂದು ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಗ್ರಾಮಸ್ಥರು ಶವಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
03:00 PM (IST) Jan 28
ಬೆಂಗಳೂರಿನ ಅಮೃತಹಳ್ಳಿ ಪೊಲೀಸರು 4 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, 10 ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಆರೋಪಿಗಳು ಥೈಲ್ಯಾಂಡ್ನಿಂದ ಡಾರ್ಕ್ ವೆಬ್ ಮೂಲಕ ಡ್ರಗ್ಸ್ ತರಿಸಿ ಮಾರಾಟ ಮಾಡುತ್ತಿದ್ದರು.
01:44 PM (IST) Jan 28
Udupi Boat Tragedy: YouTuber Madhu Gowda’s Friend Disha Passes Away ಉಡುಪಿಯ ಮಲ್ಪೆ ಸಮೀಪದ ಡೆಲ್ಟಾ ಬೀಚ್ನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ದಿಶಾ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾರೆ.
01:43 PM (IST) Jan 28
01:21 PM (IST) Jan 28
NIMHANS Treats Trading Addiction: Youth Lost ₹80 Lakh in Stocks ಯುಟ್ಯೂಬ್ ನೋಡಿ ಷೇರು ವ್ಯವಹಾರಕ್ಕೆ ಇಳಿದ ಯುವಕನೊಬ್ಬ, ಚಟಕ್ಕೆ ಬಿದ್ದು ₹80 ಲಕ್ಷ ಸಾಲ ಮಾಡಿಕೊಂಡಿದ್ದ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತನಿಗೆ ನಿಮ್ಹಾನ್ಸ್ ವೈದ್ಯರು ವಿಶೇಷ ಚಿಕಿತ್ಸೆ ನೀಡಿದ್ದಾರೆ.
01:19 PM (IST) Jan 28
01:10 PM (IST) Jan 28
ಬೆಂಗಳೂರಿನಲ್ಲಿ ವಾಸವಿದ್ದ ಅಮೆರಿಕ ಮೂಲದ ದಂಪತಿಯ ಮನೆಯಲ್ಲಿ ಮನೆಗೆಲಸದವನು ಕಳ್ಳತನ ಮಾಡಿದ್ದಾನೆ. ಈ ಪ್ರಕರಣದ ದೂರು ಅಮೆರಿಕಾ ರಾಯಭಾರ ಕಚೇರಿ ಮೂಲಕ ನೇರವಾಗಿ ಕರ್ನಾಟಕ ಡಿಜಿ-ಐಜಿಪಿಗೆ ಸಲ್ಲಿಕೆಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ 1ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.